AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pralhad Joshi

Pralhad Joshi

ಪ್ರಲ್ಹಾದ್ ಜೋಶಿ ಒಬ್ಬ ಖ್ಯಾತ ರಾಜಕಾರಣಿಯಾಗಿದ್ದು, 2024ರ ಜೂನ್ 10 ರಿಂದ ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ನವೀಕರಿಸಬಹುದಾದ ಇಂಧನ ಇಲಾಖೆ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. 1962 ರ ನವೆಂಬರ್ 27 ರಂದು ಜನಿಸಿದರು. 2004 ರಿಂದ ಜೋಶಿ ಸಂಸತ್ ಸದಸ್ಯರಾಗಿದ್ದಾರೆ. ಧಾರವಾಡ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. 1992 ರಿಂದ 1994 ರ ಅವಧಿಯಲ್ಲಿ ಕರ್ನಾಟಕದ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ತ್ರಿವರ್ಣ ಧ್ವಜಾರೋಹಣಕ್ಕಾಗಿ ನಡೆದ ಚಳವಳಿಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಜೋಶಿಯವರ ರಾಜಕೀಯ ಜೀವನ ಪ್ರಾರಂಭವಾಯಿತು. ನಂತರ ಅವರು ಧಾರವಾಡ ಜಿಲ್ಲೆಯ ಬಿಜೆಪಿ ಅಧ್ಯಕ್ಷರಾದರು ಮತ್ತು 2004ರಲ್ಲಿ ಲೋಕಸಭೆ ಚುನಾವಣೆಯಲ್ಲಿ ಗೆಲುವುದ ಸಾಧಿಸುವ ಮೂಲಕ ಸಂಸತ್ ಪ್ರವೇಶಿಸಿದರು. ಅಲ್ಲಿಂದ ರಾಷ್ಟ್ರ ರಾಜಕಾರಣದಲ್ಲಿ ಅವರ ಛಾಪು ಮುಂದುವರಿದಿದೆ.

ಇನ್ನೂ ಹೆಚ್ಚು ಓದಿ

ಮಾವು ಬೆಲೆಯಲ್ಲಿ ಕುಸಿತ: ರಾಜ್ಯದ ರೈತರ ನೆರವಿಗೆ ಧಾವಿಸುವಂತೆ ಶಿವರಾಜ್ ಸಿಂಗ್ ಚೌಹಾಣ್​ಗೆ ಜೋಶಿ ಪತ್ರ

ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ, ಕೇಂದ್ರ ಕೃಷಿ ಸಚಿವರಿಗೆ ಪತ್ರ ಬರೆದು ತೋತಾಪುರಿ ಮಾವು ಬೆಳೆಗಾರರಿಗೆ ಪರಿಹಾರ ಕೋರಿದ್ದಾರೆ. ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ ಸೇರಿ ಹಲವು ಭಾಗಗಳಲ್ಲಿ ಮಾವಿನ ಬೆಲೆ ಕುಸಿತ ಮತ್ತು ಪ್ರತಿಕೂಲ ಹವಾಮಾನದಿಂದ ರೈತರು ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಬೆಲೆ ಕೊರತೆ ಪಾವತಿ ಯೋಜನೆ ಅಡಿಯಲ್ಲಿ ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ.

2028ರ ಎಲೆಕ್ಷನ್ ಗೆಲ್ಲಲು ಜೋಶಿಗೆ ಬಿಜೆಪಿ ಸಾರಥ್ಯ? ಇದಕ್ಕೆ ಅವರು ಹೇಳಿದ್ದೇನು?

ಕೆಲ ತಿಂಗಳುಗಳಿಂದ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರರನ್ನು ಬದಲಾವಣೆ ಮಾಡುತ್ತಾರೆಂಬ ಚರ್ಚೆಗಳು ನಡೆಯುತ್ತಲೇ ಇವೆ. ನಿತಿನ್ ನಬಿನ್ ಅವರು ಬಿಜೆಪಿಯ ರಾಷ್ಟ್ರಾಧ್ಯಕ್ಷರಾದ ಬಳಿಕ ನಾಲ್ಕು ರಾಜ್ಯಗಳಿಗೆ ನೂತನ ಅಧ್ಯಕ್ಷರನ್ನು ನೇಮಿಸಲಾಗಿತ್ತು. ಆದರೆ, ಕರ್ನಾಟದ ವಿಚಾರದಲ್ಲಿ ತನ್ನ ಸಸ್ಪೆನ್ಸ್’ ಅನ್ನು ಮುಂದುವರಿಸಿತ್ತು. ಆದ್ರೆ, ನಿತಿನ್ ನಬಿನ್ ಅವರು ರಾಜ್ಯಕ್ಕೆ ಬಂದು ಹೋದ ಬಳಿಕ ಮತ್ತೆ ರಾಜ್ಯಾಧ್ಯಕ್ಷರ ಬದಲಾವಣೆ ನಡೆಯಲಿದೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ ಹಾಗೂ ವಿ ಸೋಮಣ್ಣ ಹೆಸರುಗಳು ಕೇಳಿರುತ್ತಿವೆ. ಇನ್ನು ಈ ಬಗ್ಗೆ ಟಿವಿ9 ಸಂದರ್ಶನದಲ್ಲಿ ಸ್ವತಃ ಪ್ರಲ್ಹಾದ್ ಜೋಶಿ ಅವರೇ ಮಾತನಾಡಿದ್ದು, ಏನೆಲ್ಲಾ ಹೇಳಿದ್ದಾರೆ ಕೇಳಿ.

ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪಶ್ಚಿಮ ಬಂಗಾಳದ ಚುನಾವಣೆ ತಯಾರಿ ಬಗ್ಗೆ ಪ್ರಲ್ಹಾದ್ ಜೋಶಿ ಮಾತು

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಅಣುಶಕ್ತಿ ಸುರಕ್ಷತೆ, ಸ್ವಚ್ಛ ಇಂಧನದ ಮಹತ್ವ ಮತ್ತು ದೇಶದ ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸುವ ಅಗತ್ಯವನ್ನು ಪ್ರತಿಪಾದಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆಲುವಿಗೆ ಚುನಾವಣಾ ಆಯೋಗದ ಶಾಂತಿಯುತ ಚುನಾವಣೆ ಮತ್ತು ಟಿಎಂಸಿ ಸರ್ಕಾರದ ಕಟ್-ಮನಿ, ಭ್ರಷ್ಟಾಚಾರವೇ ಕಾರಣ ಎಂದು ವಿಶ್ಲೇಷಿಸಿದ್ದಾರೆ. ಆ ಬಗ್ಗೆ ವಿವರವಾದ ಮಾಹಿತಿ ಇಲ್ಲಿದೆ.

ಪ್ರಧಾನಿ ಮೋದಿ ನನಗೆ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಪ್ರಧಾನಿ ನರೇಂದ್ರ ಮೋದಿ ಅವರ ಸುದೀರ್ಘಾವಧಿ ಆಡಳಿತ ಮತ್ತು ವಿಶಿಷ್ಟ ನಾಯಕತ್ವದ ಕುರಿತು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ವಿಶ್ಲೇಷಿಸಿದ್ದಾರೆ. ಚುನಾಯಿತ ಪ್ರಧಾನಿಯಾಗಿ ನೆಹರೂ ಅವರ ದಾಖಲೆಯನ್ನು ಮೋದಿ ಮುರಿದಿದ್ದಾರೆ. ದೇಶದಲ್ಲಿ ಸ್ಥಿರ ಸರಕಾರ ನೀಡಿ, ನಮ್ಮಿಂದಲೂ ಸಾಧ್ಯ ಎಂಬ ವಿಶ್ವಾಸವನ್ನು ಜನರಲ್ಲಿ ಮೂಡಿಸಿದ್ದಾರೆ. ಅಧಿಕಾರಕ್ಕಾಗಿ ಮೋದಿ ಅವರು ನಿರ್ಲಿಪ್ತರು, ರಾಷ್ಟ್ರ ಮೊದಲು ಎಂಬ ತತ್ವವನ್ನು ಅಕ್ಷರಶಃ ಪಾಲಿಸಿದ್ದಾರೆ ಎಂದು ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

ಕರ್ನಾಟಕಕ್ಕೆ ಅಗತ್ಯಕ್ಕಿಂತ ಹೆಚ್ಚಿನ ರಸಗೊಬ್ಬರ ಪೂರೈಕೆ: ಅಭಾವ ಆರೋಪಕ್ಕೆ ಕೇಂದ್ರ ಸಚಿವ ಪ್ರಹ್ಲಾದ್​​ ಜೋಶಿ ಸ್ಪಷ್ಟನೆ

ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ಮುಂಗಾರು ಹಂಗಾಮಿಗೆ ಅಗತ್ಯಕ್ಕಿಂತ ಹೆಚ್ಚಿನ ರಸಗೊಬ್ಬರ ಪೂರೈಸಿದೆ. ಆದರೆ ರಾಜ್ಯ ಸರ್ಕಾರದ ವಿತರಣಾ ವೈಫಲ್ಯದಿಂದ ರೈತರು ಪರದಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದ್ದಾರೆ. ರಾಜ್ಯದ ಹಲವೆಡೆ ರಸಗೊಬ್ಬರಕ್ಕಾಗಿ ರೈತರ ಪರದಾಟ ವಿಚಾರ ಸಂಬಂಧ ಸ್ಪಷ್ಟನೆ ನೀಡಿರುವ ಅವರು, 2026ರ ಜನವರಿ ಮತ್ತು ಮಾರ್ಚ್ ನಡುವಿನ ಅವಧಿಯಲ್ಲೇ, ರಾಜ್ಯವು ಅಂದಾಜು ಅಗತ್ಯತೆಗಿಂತ ಹೆಚ್ಚುವರಿಯಾಗಿ ಪೂರೈಕೆಯಾಗಿದೆ ಎಂದಿದ್ದಾರೆ.

ವೀರೇಂದ್ರ ಪಾಟೀಲರಿಗೆ ಅಪ್ಪ,ಸಿದ್ದರಾಮಯ್ಯಗೆ ಮಗ ಅಪಮಾನ:ಇದ್ದೊಬ್ಬ ಒಬಿಸಿ ಸಿಎಂ ಕೆಳಗಿಸಿದ ಕೈ ಎಂದ ಜೋಶಿ

2930 ದಿನ. ಎರಡು ಅವಧಿ. 8 ವರ್ಷ 8 ದಿನ ಆಡಳಿತ ನಡೆಸಿದ ಸಿದ್ದರಾಮಯ್ಯ ಇಂದು (ಮೇ 28) ನಾಡಿನ ದೊರೆಯ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಲೋಕಭವನಕ್ಕೆ ತೆರಳಿ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ್ದು, ಸಿದ್ದರಾಮಯ್ಯ ರಾಜೀನಾಮೆ ಕೇವಲ ಅಭಿಮಾನಿಗಳಿಗಷ್ಟೇ ಅಲ್ಲ, ಸಂಪುಟ ಸಹದ್ಯೋಗಿಗಳಿಗೂ ಆಘಾತ ತಂದಿದೆ. ಅಲ್ಲದೇ ವಿರೋಧ ಪಕ್ಷದ ನಾಯಕರು ಸಹ ಸಿದ್ದರಾಮಯ್ಯನವರನ್ನ ಕೆಳಗಿಳಿಸಿದ್ದಕ್ಕೆ ಬೇಸರ, ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅದರಂತೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮೋದಿ, ಬಿಜೆಪಿ, ಆರ್​ಎಸ್​ಎಸ್ ದೇಶದ್ರೋಹಿಗಳು ಎಂದ ರಾಹುಲ್​​ಗೆ ಜೋಶಿ ತಿರುಗೇಟು

ಪ್ರಧಾನಿ ಮೋದಿ, ಅಮಿತ್ ಶಾ, ಬಿಜೆಪಿ, ಆರ್‌ಎಸ್‌ಎಸ್‌ ದೇಶದ್ರೋಹಿಗಳಾಗಿದ್ದು, ರಾಷ್ಟ್ರದ ಹಿತಾಸಕ್ತಿಗಳಿಗೆ ವಿರುದ್ಧವಾಗಿ ಕೆಲಸ ಮಾಡುತ್ತಿದ್ದಾರೆ. ಬಿಜೆಪಿ-ಆರ್‌ಎಸ್‌ಎಸ್ ಸಂವಿಧಾನದ ಮೇಲೆ ದಾಳಿ ಮಾಡಿದೆ ಎಂದು ವಿಪಕ್ಷ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದು, ಇದಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪ್ರಕ್ರಿಯಿಸಿದ್ದು, ಈ ಹಿಂದೆ ಕಾಂಗ್ರೆಸ್​ ಮಾಡಿದ ಎಡವಟ್ಟುಗಳನ್ನ ನೆನಪಿಸಿ ತಿರುಗೇಟು ನೀಡಿದ್ದಾರೆ.

ತೈಲ ಬೆಲೆ ಹೆಚ್ಚಳ ಭಾರತದಲ್ಲೇ ಕನಿಷ್ಠ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸ್ಪಷ್ಟನೆ

ಜಾಗತಿಕ ಬಿಕ್ಕಟ್ಟಿನ ನಡುವೆಯೂ ಭಾರತದಲ್ಲಿ ಇಂಧನ ದರ ಏರಿಕೆ (+3.2%) ವಿಶ್ವದಲ್ಲೇ ಅತ್ಯಂತ ಕನಿಷ್ಠವಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಮರ್ಥಿಸಿಕೊಂಡಿದ್ದಾರೆ. ಅಮೆರಿಕ, ಯುಕೆಗಿಂತ ಭಾರತದಲ್ಲಿ ಕಡಿಮೆ ದರ ಹೆಚ್ಚಳವಾಗಿದ್ದು, ಯಾವುದೇ ಜಾಗತಿಕ ಒತ್ತಡವಿಲ್ಲದಿದ್ದ ಸಂದರ್ಭದಲ್ಲೂ ಈ ಹಿಂದೆ ಕರ್ನಾಟಕದಲ್ಲಿ ಇಂಧನ ತೆರಿಗೆ ಹೆಚ್ಚಿಸಿದ್ದರ ಬಗ್ಗೆ ಗಮನ ಸೆಳೆದಿದ್ದಾರೆ.

ನಿಮಗೆ ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಸರ್ಕಾರದ ವಿರುದ್ಧ ಪ್ರಲ್ಹಾದ್​ ಜೋಶಿ ಕಿಡಿ

ಕರ್ನಾಟಕ ಕಾಂಗ್ರೆಸ್ ಸರ್ಕಾರದ ತುಷ್ಟೀಕರಣ ರಾಜಕಾರಣ ಶಿಕ್ಷಣ ಕ್ಷೇತ್ರಕ್ಕೆ ಕಾಲಿಟ್ಟಿದೆ. ಸುಪ್ರೀಂ ಕೋರ್ಟ್‌ನಲ್ಲಿ ಹಿಜಾಬ್ ಪ್ರಕರಣ ಬಾಕಿ ಇರುವಾಗಲೇ ನಿಷೇಧ ವಾಪಸ್ ಪಡೆದಿರುವುದು ನ್ಯಾಯಾಂಗಕ್ಕೆ ಅವಮಾನ. ಸಮವಸ್ತ್ರ ಸಂಹಿತೆಯ ಉದ್ದೇಶ ಸಮಾನತೆ ಕಾಪಾಡುವುದು, ಆದರೆ ಸರ್ಕಾರ ಧರ್ಮದ ಆಧಾರದ ಮೇಲೆ ತಾರತಮ್ಯ ಎಸಗುತ್ತಿದೆ. ಈ ವಿಭಜಕ ನೀತಿಯಿಂದ ಶೈಕ್ಷಣಿಕ ವಾತಾವರಣ ಹಾಳಾಗುತ್ತಿದ್ದು, ಶಾಲಾ ಶಿಸ್ತಿಗೆ ಧಕ್ಕೆ ತರುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್​​ ಜೋಶಿ ವಾಗ್ದಾಳಿ ಮಾಡಿದ್ದಾರೆ.

ಆಡಳಿತ ವೈಫಲ್ಯ: ಪ್ರಧಾನಿ ಮೋದಿಯ ಟೀಕಿಸಿದ ಸಿಎಂ ಸಿದ್ದರಾಮಯ್ಯಗೆ ಅಂಕಿಅಂಶ ಸಮೇತ ತಿರುಗೇಟು ಕೊಟ್ಟ ಪ್ರಲ್ಹಾದ್ ಜೋಶಿ

ಪ್ರಧಾನಿ ಮೋದಿ ಅವರ ಬೆಂಗಳೂರು ಭಾಷಣವನ್ನು ಟೀಕಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಠಿಣ ಶಬ್ದಗಳಲ್ಲಿ ತಿರುಗೇಟು ನೀಡಿದ್ದಾರೆ. ಕರ್ನಾಟಕವನ್ನು ಸಾಲದ ಕೂಪಕ್ಕೆ ತಳ್ಳಿರುವ ಕಾಂಗ್ರೆಸ್ ಸರ್ಕಾರ, ಬೆಲೆ ಏರಿಕೆಯ ಮೂಲಕ ಜನರಿಗೆ ದ್ರೋಹ ಮಾಡುತ್ತಿದೆ ಎಂದು ಜೋಶಿ ಆರೋಪಿಸಿದ್ದಾರೆ.

ಬಿಎಸ್​​​ವೈ ಅಭಿಮಾನೋತ್ಸವ: ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತೆ; ಪ್ರಲ್ಹಾದ್​ ಜೋಶಿ

ಚಿತ್ರದುರ್ಗದಲ್ಲಿ ಇಂದು ನಡೆದ ಮಾಜಿ ಸಿಎಂ ಬಿಎಸ್​​ ಯಡಿಯೂರಪ್ಪ ಅಭಿಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ, 21 ರಾಜ್ಯದಲ್ಲಿ ಬಿಜೆಪಿ ಆಡಳಿತಕ್ಕೆ ಬಂದಿದೆ. ಮೊದಲು ಕರ್ನಾಟಕದಲ್ಲೂ ಬಿಜೆಪಿ ಆಡಳಿತ ಇತ್ತು. ಮುಂದೆ ಮತ್ತೆ ಬಿಜೆಪಿ ಆಡಳಿತಕ್ಕೆ ಬರಲಿದೆ ಎಂದು ಹೇಳಿದ್ದಾರೆ.

ಇನ್ನೆಷ್ಟು ದಿನ ಜನರ ದಾರಿ ತಪ್ಪಿಸುತ್ತೀರಿ? ಖರ್ಗೆ ವಿರುದ್ಧ ಪ್ರಲ್ಹಾದ್ ಜೋಶಿ ವಾಗ್ದಾಳಿ

ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನೀಡಿದ ಹೇಳಿಕೆ ತೀವ್ರ ವಿವಾದಕ್ಕೆ ಕಾರಣವಾಗಿದೆ. ಪ್ರಧಾನಿ ಮೋದಿಯೊಬ್ಬ ಭಯೋತ್ಪಾದಕ. ಅವರೊಂದಿಗೆ ಎಐಎಡಿಎಂಕೆ ಯಾಕೆ ಕೈ ಜೋಡಿಸಿದೆ ಎಂಬುದು ಅರ್ಥವಾಗುತ್ತಿಲ್ಲ ಎಂದು ತಮಿಳುನಾಡಿನ ಚೆನ್ನೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದರು. ಇದು ತೀವ್ರ ವಿವಾದ ಸೃಷ್ಟಿಸಿತ್ತು. ಈ ಹೇಳಿಕೆಯ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕೂಡ ಕಿಡಿಕಾರಿದ್ದಾರೆ. ಮಲ್ಲಿಕಾರ್ಜುನ ಖರ್ಗೆಯವರು ವಿಪಕ್ಷದ ಅಧ್ಯಕ್ಷ ಸ್ಥಾನದ ಘನತೆ ಮರೆತು ಕೀಳು ಮಟ್ಟದ ಹೇಳಿಕೆ ನೀಡುತ್ತಿದ್ದಾರೆ ಎಂದು ಪ್ರಲ್ಹಾದ್ ಜೋಶಿ ಟೀಕಿಸಿದ್ದಾರೆ.

ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು