AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pralhad Joshi

Pralhad Joshi

ಪ್ರಲ್ಹಾದ್ ಜೋಶಿ ಒಬ್ಬ ಖ್ಯಾತ ರಾಜಕಾರಣಿಯಾಗಿದ್ದು, 2024ರ ಜೂನ್ 10 ರಿಂದ ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ನವೀಕರಿಸಬಹುದಾದ ಇಂಧನ ಇಲಾಖೆ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. 1962 ರ ನವೆಂಬರ್ 27 ರಂದು ಜನಿಸಿದರು. 2004 ರಿಂದ ಜೋಶಿ ಸಂಸತ್ ಸದಸ್ಯರಾಗಿದ್ದಾರೆ. ಧಾರವಾಡ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. 1992 ರಿಂದ 1994 ರ ಅವಧಿಯಲ್ಲಿ ಕರ್ನಾಟಕದ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ತ್ರಿವರ್ಣ ಧ್ವಜಾರೋಹಣಕ್ಕಾಗಿ ನಡೆದ ಚಳವಳಿಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಜೋಶಿಯವರ ರಾಜಕೀಯ ಜೀವನ ಪ್ರಾರಂಭವಾಯಿತು. ನಂತರ ಅವರು ಧಾರವಾಡ ಜಿಲ್ಲೆಯ ಬಿಜೆಪಿ ಅಧ್ಯಕ್ಷರಾದರು ಮತ್ತು 2004ರಲ್ಲಿ ಲೋಕಸಭೆ ಚುನಾವಣೆಯಲ್ಲಿ ಗೆಲುವುದ ಸಾಧಿಸುವ ಮೂಲಕ ಸಂಸತ್ ಪ್ರವೇಶಿಸಿದರು. ಅಲ್ಲಿಂದ ರಾಷ್ಟ್ರ ರಾಜಕಾರಣದಲ್ಲಿ ಅವರ ಛಾಪು ಮುಂದುವರಿದಿದೆ.

ಇನ್ನೂ ಹೆಚ್ಚು ಓದಿ

ಕಾಂಗ್ರೆಸ್ “ಬಣವಿ ಸುಟ್ಟು ಅರಳು ಮುಕ್ಕುವ” ಕೆಲಸ ಮಾಡುತ್ತಿದೆ: ಕೇಂದ್ರ ಸಚಿವ ಜೋಶಿ ಕಿಡಿ

ಸಿಲಿಂಡರ್ ಕೊರತೆ, ಸಿಲಿಂಡರ್ ದರ ಏರಿಕೆ ಕಾಂಗ್ರೆಸ್‌ಗೆ ಅಸ್ತ್ರವಾಗಿದೆ. ಕಳೆದೊಂದು ವಾರದಲ್ಲಿ ಹಲವು ಪ್ರತಿಭಟನೆ ನಡೆಸಿದ ಕಾಂಗ್ರೆಸ್, ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದೆ. ಕಾಂಗ್ರೆಸ್‌ನ ಈ ಆರೋಪಗಳಿಗೆ ಬಿಜೆಪಿ ನಾಯಕರು ಸಹ ತಿರುಗೇಟು ಕೊಟ್ಟಿದ್ದಾರೆ. ಈ ಬಗ್ಗೆ ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ, ಗ್ಯಾಸ್, ಪೆಟ್ರೋಲಿಯಂ ಉತ್ಪನ್ನ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ದೇಶದ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ನವೀಕರಿಸಬಹುದಾದ ಇಂಧನದ್ದೇ ಅಗ್ರ ಪಾಲು!

ಕೇಂದ್ರ ಸಚಿವ ಮಾಹಿತಿ ಪ್ರಲ್ಹಾದ ಜೋಶಿ ಪ್ರಕಾರ, ಭಾರತದ ಒಟ್ಟು ಸ್ಥಾಪಿತ ವಿದ್ಯುತ್ ಸಾಮರ್ಥ್ಯದಲ್ಲಿ ನವೀಕರಿಸಬಹುದಾದ ಇಂಧನ ಮೂಲಗಳು ಪಳೆಯುಳಿಕೆ ಇಂಧನವನ್ನು ಮೀರಿಸಿವೆ. ದೇಶದ ಶೇ.50.6ರಷ್ಟು ವಿದ್ಯುತ್ ಸಾಮರ್ಥ್ಯ ನವೀಕರಿಸಬಹುದಾದ ಮೂಲಗಳಿಂದ ಬಂದಿದ್ದು, ನಿರ್ದಿಷ್ಟವಾಗಿ ಸೌರಶಕ್ತಿ ಗಣನೀಯವಾಗಿ ಹೆಚ್ಚಳ ಕಂಡಿದೆ. 2026ರ ವೇಳೆಗೆ ನವೀಕರಿಸಬಹುದಾದ ಇಂಧನದ ಪಾಲು ಇನ್ನಷ್ಟು ವಿಸ್ತರಿಸುವ ಗುರಿ ಹೊಂದಿದೆ.

ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯ ಇದ್ದಾಗ ಮತ್ತೊಂದು ನಿರ್ಣಯ ಹೇಗೆ ತರುತ್ತೀರಿ? ವಿಪಕ್ಷಗಳ ವರ್ತನೆಗೆ ಪ್ರಲ್ಹಾದ್ ಜೋಷಿ ಕಿಡಿ

Union minister Pralhad Joshi on no-confidence motion against Lok Sabha Speaker Om Birla: ಲೋಕಸಭಾ ಅಧಿವೇಶನದಲ್ಲಿ ವಿಪಕ್ಷಗಳ ಸದಸ್ಯರ ವರ್ತನೆ ವಿರುದ್ಧ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಷಿ ಕಿಡಿಕಾರಿದ್ದಾರೆ. ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿಪಕ್ಷಗಳು ಅವಿಶ್ವಾಸ ನಿರ್ಣಯಕ್ಕೆ ಯೋಜಿಸಿದ್ದರು. ಕಲಾಪದ ಅಜೆಂಡಾಗಳ ಪಟ್ಟಿಯಲ್ಲೂ ಅದು ಇತ್ತು ಆದರೆ, ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ವಿಚಾರ ಚರ್ಚೆಗೆ ಬರಬೇಕೆಂದು ವಿಪಕ್ಷಗಳು ಮತ್ತೊಂದು ನಿರ್ಣಯಕ್ಕೆ ಪಟ್ಟು ಹಿಡಿದರು. ಇದರಿಂದ ಕಲಾಪ ಸ್ಥಗಿತಗೊಂಡಿತು.

ಲೆಕ್ಕರಾಮಯ್ಯ ಅಲ್ಲ ಸಾಲರಾಮಯ್ಯ: ಸಿದ್ದರಾಮಯ್ಯ ಬಜೆಟ್​​ಗೆ ಪ್ರಹ್ಲಾದ ಜೋಶಿ ವ್ಯಂಗ್ಯ

ಸಿಎಂ ಸಿದ್ದರಾಮಮಯ್ಯ 2026ನೇ ಸಾಲಿನ ಬಜೆಟ್ ಮಂಡಿಸಿದ್ದು, ಈ ಸಲ ಕೂಡ 1 ಕೋಟಿ 32 ಸಾವಿರ ರೂ. ಸಾಲ ಮಾಡಲಾಗಿದೆ. ಇದರೊಂದಿಗೆ ರಾಜ್ಯದ ಸಾಲ 8 ಕೋಟಿ 24 ಸಾವಿರಕ್ಕೆ ತಲುಪಿದೆ. ಹೀಗಾಗಿ ಇದಕ್ಕೆ ವಿಪಕ್ಷ ಬಿಜೆಪಿ ನಾಯಕರು ಸಿದ್ದರಾಮಯ್ಯರದ್ದು ಸಾಲದ ಬಜೆಟ್ ಎಂದು ಕಿಡಿಕಾರಿದ್ದಾರೆ. ಇನ್ನು ಕರ್ನಾಟಕ ಬಜೆಟ್ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವ್ಯಂಗ್ಯವಾಡಿದ್ದಾರೆ.

ಡಿಕೆ, ನಾನು ಹಾಲು ಜೇನು ಇದ್ದಂತೆ ಎಂದ ಸಿದ್ದು ಹೇಳಿಕೆಗೆ ಜೋಶಿ ವ್ಯಂಗ್ಯ

ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ಫೋನ್ ಟ್ಯಾಪಿಂಗ್ ಕದನ ಶುರುವಾಗಿದೆ. ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಮೊದಲು ಫೋನ್ ಟ್ಯಾಪಿಂಗ್ ಅರೋಪ ಮಾಡಿದ್ದು, ಇದಕ್ಕೆ ಸಿಎಂ ಪ್ರತಿಕ್ರಿಯಿಸಿ ನಮ್ಮದು ಡಿಸಿಎಂ ಡಿಕೆ ಶಿವಕುಮಾರ್ ನಡುವೆ ಹಾಲು-ಜೇನಿನ ಸಂಬಂಧವಿದೆ ಎಂದು ಹೇಳುವ ಮೂಲಕ ತಿರುಗೇಟು ನೀಡಿದ್ದರು. ಇದೀಗ ಈ ಕುರಿತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, ಅವರು ನಾವು ಮಾಡ್ತಿಲ್ಲ ಎಂದು ಗೃಹ ಸಚಿವರು ನಿರಾಕರಿಸಿಲ್ಲ. ಯಾರದ್ದು ಮಾಡ್ತಿದ್ದಾರೆ ಪೋನ್ ಕದ್ದಾಲಿಕೆಯನ್ನು ವಿರೋಧ ಪಕ್ಷದವರದು ಮಾಡ್ತಿದ್ದಾರಾ? ಅಥವಾ ಡಿ ಕೆ‌ ಶಿವಕುಮಾರ್ ಅವರದು ಮಾಡ್ತಿದ್ದಾರೆ? ಈ ಬಗ್ಗೆ ಮೊದಲು ನ್ಯಾಯಾಂಗ ತನಿಖೆಯಾಗಲಿ ಎಂದಿದ್ದಾರೆ. ಅಲ್ಲದೇ ನಿಮ್ಮದು ಹಾಲು ಜೇನು ಅಲ್ಲಆಲ್ಕೋಹಾಲ್ ಜೇನು ಇರಬೇಕೆಂದು ಸಿಎಂ ಸಿದ್ದರಾಮಯ್ಯಗೆ ಟಾಂಗ್ ಕೊಟ್ಟಿದ್ದಾರೆ.

ಕನ್ನಡಿಗರಷ್ಟೇ ಅಲ್ಲ ಯಾರೂ ಆತಂಕ ಪಡಬೇಕಿಲ್ಲ, ಎಲ್ಲರನ್ನೂ ಸುರಕ್ಷಿತವಾಗಿ ಕರೆತರುತ್ತೇವೆ: ಪ್ರಲ್ಹಾದ್ ಜೋಶಿ ಅಭಯ

ಇರಾನ್-ಇಸ್ರೇಲ್ ಯುದ್ಧದಲ್ಲಿ ಸಿಲುಕಿದ ಕನ್ನಡಿಗರ ಹಾಗೂ ಎಲ್ಲ ಭಾರತೀಯರ ರಕ್ಷಣೆಗೆ ಕೇಂದ್ರ ಸರ್ಕಾರ ಸನ್ನದ್ಧವಾಗಿದೆ ಎಂದು ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ಈ ಬಗ್ಗೆ ರಾಯಭಾರಿಗಳೊಂದಿಗೆ ಮಾತುಕತೆ ನಡೆಸಿದ್ದು, ಎಲ್ಲರನ್ನು ಸುರಕ್ಷಿತವಾಗಿ ಕರೆತರಲು ಕ್ರಮ ಕೈಗೊಳ್ಳಲಾಗುತ್ತಿದೆ. ಯಾರೂ ಆತಂಕ ಪಡಬೇಕಿಲ್ಲ. ಕೇಂದ್ರ ಸರ್ಕಾರ ಜನರ ಸುರಕ್ಷತೆಗೆ ಪ್ರಥಮ ಆದ್ಯತೆ ನೀಡುತ್ತದೆ ಎಂದು ತಿಳಿಸಿದ್ದಾರೆ.

ಮುಸ್ಲಿಮರ ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಪ್ರಲ್ಹಾದ್ ಜೋಶಿ ವಾಗ್ದಾಳಿ

ಬಾಗಲಕೋಟೆಯಲ್ಲಿ ಮಸೀದಿಯೊಂದರಲ್ಲಿ 200 ಜನ ಸೇರಿದ್ದರೂ ಪೊಲೀಸರು ಕ್ರಮ ಕೈಗೊಳ್ಳದೆ, ಹಿಂದೂ ಮೆರವಣಿಗೆಗಳಿಗೆ ನಿರ್ಬಂಧ ವಿಧಿಸಿ, ಕೆಲವು ಸಮುದಾಯಕ್ಕೆ ಅನುಮತಿ ನೀಡುತ್ತಿರುವ ದ್ವಂದ್ವ ನೀತಿಯನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರಶ್ನಿಸಿದ್ದಾರೆ. ರಾಜ್ಯ ಸರ್ಕಾರ ರಾಜಕೀಯ ಒತ್ತಡಕ್ಕೆ ಮಣಿದು ಕಾರ್ಯನಿರ್ವಹಿಸುತ್ತಿದೆ ಎಂದು ದೂರಿದ್ದಾರೆ.

ಕಾಂಗ್ರೆಸ್ ಕಚೇರಿಗಳ ನಿರ್ಮಾಣಕ್ಕೆ ಸಿಎ ನಿವೇಶನಗಳ ಹಂಚಿಕೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿ

ಸಾರ್ವಜನಿಕ ಮೂಲಸೌಕರ್ಯಗಳಿಗೆ ಮೀಸಲಾದ ಸಿಎ ನಿವೇಶನಗಳನ್ನು ಕಾಂಗ್ರೆಸ್ ಕಚೇರಿಗಳಿಗೆ ಹಂಚಿಕೆ ಮಾಡಿರುವುದು ಭ್ರಷ್ಟಾಚಾರದ ಪರಮಾವಧಿ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ರಾಜ್ಯ ಸರ್ಕಾರದ ವಿರುದ್ಧ ಕೆಂಡ ಕಾರಿದ್ದಾರೆ. ಬಡವರಿಗೆ ನಿವೇಶನ ಇಲ್ಲವೆಂದ ಸರ್ಕಾರ ತನ್ನ ಪಕ್ಷದ ಹಿತಕ್ಕಾಗಿ ಕೋಟ್ಯಾಂತರ ರೂ. ಮೌಲ್ಯದ ಸಾರ್ವಜನಿಕ ಆಸ್ತಿಯನ್ನು ಕಬಳಿಸುತ್ತಿದೆ ಎಂದು ಆರೋಪಿಸಿದ್ದು, ಹಂಚಿಕೆ ಹಿಂಪಡೆಯದಿದ್ದರೆ ಬಿಜೆಪಿ ಬೃಹತ್ ಹೋರಾಟ ನಡೆಸಲಿದೆ ಎಂದು ಎಚ್ಚರಿಸಿದ್ದಾರೆ.

ಭಾರತದಲ್ಲಿ ಹಸಿರು ಹೈಡ್ರೋಜನ್ ಬೆಲೆ ದಾಖಲೆಯ ಮಟ್ಟಕ್ಕೆ ಇಳಿಕೆ; ಮುಂಬೈನಲ್ಲಿ ಪ್ರಲ್ಹಾದ್ ಜೋಶಿ ಹೇಳಿಕೆ

ಮುಂಬೈಯಲ್ಲಿ ನಡೆದ "ಹವಾಮಾನ ಸಪ್ತಾಹ 2026" ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಭಾಗವಹಿಸಿದ್ದಾರೆ. ಮುಂಬೈ ಹವಾಮಾನ ಸಪ್ತಾಹದಲ್ಲಿ ಮಾತನಾಡಿದ ಅವರು, ದೇವೇಂದ್ರ ಫಡ್ನವಿಸ್ ಅವರ ನೇತೃತ್ವದಲ್ಲಿ ಮಹಾರಾಷ್ಟ್ರವು ಆರ್ಥಿಕ ಬೆಳವಣಿಗೆ ಮತ್ತು ಪರಿಸರ ಪ್ರಗತಿಯು ಒಟ್ಟಾಗಿ ಮುಂದುವರಿಯಬಹುದು ಎಂದು ಸಾಬೀತುಪಡಿಸುತ್ತಿದೆ. ಪ್ರಧಾನಿ ಮೋದಿಯವರ ದೂರದೃಷ್ಟಿಯ ನಾಯಕತ್ವದಲ್ಲಿ, ಭಾರತವು ಜಾಗತಿಕ ಹವಾಮಾನ ನಿರೂಪಣೆಯನ್ನು ಸುಸ್ಥಿರತೆಯಿಂದ ಬೆಳವಣಿಗೆಯ ಪ್ರಬಲ ಎಂಜಿನ್ ಆಗಿ ಬದಲಾಯಿಸಿದೆ ಎಂದಿದ್ದಾರೆ.

ಮುಂದಿನ 25 ವರ್ಷಕ್ಕೆ ಭಾರತದ ಬೆಳವಣಿಗೆಗೆ ಬುನಾದಿ ಹಾಕಿದೆ ಈ ಬಜೆಟ್: ಸಚಿವ ಪ್ರಲ್ಹಾದ್ ಜೋಶಿ

Union Budget 2026-27 reflects India's continued economic progress, says Pralhad Joshi: ಪ್ರಧಾನಿ ನರೇಂದ್ರ ಮೋದಿ ಅವರ 20247ರ ವಿಕಸಿತ ಭಾರತ ನಿರ್ಮಾಣದ ಗುರಿಯನ್ನು ಈಡೇರಿಸುವ ನಿಟ್ಟಿನಲ್ಲಿ 2026-27ರ ಬಜೆಟ್ ಅನ್ನು ರೂಪಿಸಲಾಗಿದೆ. ಸರ್ಕಾರದ ನೀತಿಗಳ ಮುಂದುವರಿಕೆಯನ್ನು ಬಜೆಟ್​ನಲ್ಲಿ ಕಾಣಬಹುದು ಎಂದು ಕೇಂದ್ರ ನವೀಕರಣ ಇಂಧನ ಸಚಿವ ಪ್ರಲ್ಹಾದ್ ಜೋಶಿ ಹೈದರಾಬಾದ್​ನಲ್ಲಿ ಶುಕ್ರವಾರ (ಫೆ. 6) ಅಭಿಪ್ರಾಯಪಟ್ಟಿದ್ದಾರೆ.

ಮಧ್ಯ, ಉತ್ತರ ಕರ್ನಾಟಕ ಜಿಲ್ಲೆಯ ಜನತೆಗೆ ಮತ್ತೊಂದು ಗುಡ್​​​ನ್ಯೂಸ್ ಕೊಟ್ಟ ಕೇಂದ್ರ

ಮೊನ್ನೆ ಅಷ್ಟೇ ಕೇಂದ್ರ ಬಜೆಟ್ ನಲ್ಲಿ ದೇಶದಲ್ಲಿ ಒಟ್ಟು ಏಳು ಹೈ ಸ್ಪೀಡ್ ರೈಲು ಕಾರಿಡಾರ್ ಘೋಷಣೆಯಾಗಿದೆ. ಇದರ ಬೆನ್ನಲ್ಲೇ ಇದೀಗ ಮತ್ತೆ ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಮತ್ತೊಂದು ಹೈ ಸ್ಪೀಡ್ ರೈಲು ಕಾರಿಡಾರ್ ಕೊಡುಗೆಯ ಶುಭ ಸೂಚನೆ ಸಿಕ್ಕಿದೆ. ಈ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮಾಹಿತಿ ಹಂಚಿಕೊಂಡಿದ್ದಾರೆ. ಹಾಗಾದ್ರೆ, ಹೈ ಸ್ಪೀಡ್ ರೈಲು ಕಾರಿಡಾರ್ ಯಾವುದು? ಎಲ್ಲಿಂದ ಎಲ್ಲಿಗೆ? ಎನ್ನುವ ವಿವರ ಈ ಕೆಳಗಿನಂತಿದೆ.

Hubli: ಪದ್ಮಶ್ರೀ ಪುರಸ್ಕೃತ ಪ್ರಭಾಕರ್ ಕೋರೆಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸನ್ಮಾನ

ಪದ್ಮಶ್ರೀ ಪುರಸ್ಕೃತ ಪ್ರಭಾಕರ್ ಕೋರೆ ಅವರನ್ನು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹುಬ್ಬಳ್ಳಿಯಲ್ಲಿ ಸನ್ಮಾನಿಸಿದರು. ಕೆಎಲ್‌ಇ ಶಿಕ್ಷಣ ಸಂಸ್ಥೆಗಳ ಮೂಲಕ ಸಾಹಿತ್ಯ, ಶಿಕ್ಷಣ ಮತ್ತು ವೈದ್ಯಕೀಯ ಕ್ಷೇತ್ರದಲ್ಲಿ ಕೋರೆ ಅವರ ಅಪ್ರತಿಮ ಸೇವೆ ಗುರುತಿಸಿ ಈ ಗೌರವ ನೀಡಲಾಗಿದೆ ಎಂದ ಸಚಿವರು, ಗ್ರಾಮಗಳಲ್ಲಿ ಉಚಿತ ಆರೋಗ್ಯ ಶಿಬಿರ ಆಯೋಜಿಸಿ ಸಮಾಜಮುಖಿ ಕೆಲಸ ಮಾಡಿರುವ ಕೋರೆ ಅವರ ಕೊಡುಗೆಯನ್ನು ಈ ವೇಳೆ ಶ್ಲಾಘಿಸಿದ್ದಾರೆ.

ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?