
Pralhad Joshi
ಪ್ರಲ್ಹಾದ್ ಜೋಶಿ ಒಬ್ಬ ಖ್ಯಾತ ರಾಜಕಾರಣಿಯಾಗಿದ್ದು, 2024ರ ಜೂನ್ 10 ರಿಂದ ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ನವೀಕರಿಸಬಹುದಾದ ಇಂಧನ ಇಲಾಖೆ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. 1962 ರ ನವೆಂಬರ್ 27 ರಂದು ಜನಿಸಿದರು. 2004 ರಿಂದ ಜೋಶಿ ಸಂಸತ್ ಸದಸ್ಯರಾಗಿದ್ದಾರೆ. ಧಾರವಾಡ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. 1992 ರಿಂದ 1994 ರ ಅವಧಿಯಲ್ಲಿ ಕರ್ನಾಟಕದ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ತ್ರಿವರ್ಣ ಧ್ವಜಾರೋಹಣಕ್ಕಾಗಿ ನಡೆದ ಚಳವಳಿಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಜೋಶಿಯವರ ರಾಜಕೀಯ ಜೀವನ ಪ್ರಾರಂಭವಾಯಿತು. ನಂತರ ಅವರು ಧಾರವಾಡ ಜಿಲ್ಲೆಯ ಬಿಜೆಪಿ ಅಧ್ಯಕ್ಷರಾದರು ಮತ್ತು 2004ರಲ್ಲಿ ಲೋಕಸಭೆ ಚುನಾವಣೆಯಲ್ಲಿ ಗೆಲುವುದ ಸಾಧಿಸುವ ಮೂಲಕ ಸಂಸತ್ ಪ್ರವೇಶಿಸಿದರು. ಅಲ್ಲಿಂದ ರಾಷ್ಟ್ರ ರಾಜಕಾರಣದಲ್ಲಿ ಅವರ ಛಾಪು ಮುಂದುವರಿದಿದೆ.
2023ರ ಕರ್ನಾಟಕದ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ?; ಕಾಂಗ್ರೆಸ್ಗೆ ಪ್ರಲ್ಹಾದ್ ಜೋಶಿ ಲೇವಡಿ
ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR) ವಿರುದ್ಧ ಪ್ರತಿಪಕ್ಷಗಳ ಪ್ರತಿಭಟನೆಯ ಕುರಿತು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರತಿಕ್ರಿಯೆ ನೀಡಿದ್ದಾರೆ. ಕಾಂಗ್ರೆಸ್ ಸೋತಾಗ, ಅವರು ಚುನಾವಣಾ ಆಯೋಗವನ್ನು ಅನುಮಾನಿಸಲು ಪ್ರಾರಂಭಿಸುತ್ತಾರೆ. ಅವರು EVMಗಳನ್ನು ಪ್ರಶ್ನಿಸುತ್ತಾರೆ, ಏಕೆಂದರೆ ಅವರು ತಮ್ಮ ಬಗ್ಗೆಯೇ ಅನುಮಾನಿಸುತ್ತಾರೆ ಎಂದು ಜೋಶಿ ಹೇಳಿದ್ದಾರೆ. ಕಾಂಗ್ರೆಸ್ನವರು ಕರ್ನಾಟಕದ ಒಂದು ಕ್ಷೇತ್ರದ ಬಗ್ಗೆ ಮಾತನಾಡಿದರು. 2023ರಲ್ಲಿ ಕರ್ನಾಟಕದ ಚುನಾವಣೆಯ ಸಮಯದಲ್ಲಿ ಎಲ್ಲವೂ ಸರಿಯಾಗಿತ್ತಾ? 2024ರಲ್ಲಿ ಸಿದ್ದರಾಮಯ್ಯನವರ ಸರ್ಕಾರ ಅಧಿಕಾರದಲ್ಲಿತ್ತು. ಏನಾದರೂ ವ್ಯತ್ಯಾಸವಾಗಿದ್ದರೆ ಅವರನ್ನು ಕೇಳಿ" ಎಂದು ಹೇಳಿದ್ದಾರೆ.
- Sushma Chakre
- Updated on: Jul 25, 2025
- 4:54 pm
ರಾಣಿ ಚೆನ್ನಭೈರಾದೇವಿ ಅಂಚೆ ಚೀಟಿ ಅನಾವರಣಗೊಳಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು "ಮೆಣಸಿನ ರಾಣಿ" ಎಂದೇ ಪ್ರಸಿದ್ಧಳಾದ ರಾಣಿ ಚೆನ್ನಭೈರಾದೇವಿ ಅವರ ಸ್ಮರಣಾರ್ಥ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದ್ದಾರೆ. ಚೆನ್ನಮ್ಮನ ಧೈರ್ಯ, ಸಾಮ್ರಾಜ್ಯ ನಿರ್ವಹಣೆ ಮತ್ತು ವ್ಯಾಪಾರ ಕೌಶಲ್ಯಗಳನ್ನು ಸ್ಮರಿಸಲಾಗಿದೆ. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮತ್ತು ಡಾ. ವೀರೇಂದ್ರ ಹೆಗ್ಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
- Gangadhar Saboji
- Updated on: Jul 25, 2025
- 10:10 am
ನೇರಳೆ ಹಣ್ಣು ಮಾರುವವರಿಗೂ ಜಿಎಸ್ಟಿ ನೋಟಿಸ್; ಕರ್ನಾಟಕ ಸರ್ಕಾರದ ವಿರುದ್ಧ ಪ್ರಲ್ಹಾದ್ ಜೋಶಿ ಆರೋಪ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. 1.2 ಲಕ್ಷ ಕೋಟಿ ರೂ. ವಸೂಲಿಗೆ ಅಧಿಕಾರಿಗಳಿಗೆ ಟಾರ್ಗೆಟ್ ನೀಡಲಾಗಿದೆ ಎಂದು ಆರೋಪಿಸಿರುವ ಅವರು ನೇರಳೆ ಹಣ್ಣು ಮಾರುವವರಿಗೂ ಜಿಎಸ್ಟಿ ನೋಟಿಸ್ ನೀಡಲಾಗಿದೆ ಎಂದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅತ್ಯಂತ ಅಯೋಗ್ಯ ರೀತಿಯಲ್ಲಿ ಕರ್ನಾಟಕದಲ್ಲಿ ಸರ್ಕಾರ ನಡೆಸುತ್ತಿದ್ದಾರೆ ಎಂದು ಅವರು ಟೀಕಿಸಿದ್ದಾರೆ.
- Sushma Chakre
- Updated on: Jul 23, 2025
- 10:56 pm
ಸಣ್ಣ ವ್ಯಾಪಾರಿಗಳಿಗೆ ಟ್ಯಾಕ್ಸ್ ನೋಟಿಸ್: ಕೇಂದ್ರ ಸರ್ಕಾರದ ಯಾವುದೇ ಪಾತ್ರವಿಲ್ಲ ಎಂದ ಜೋಶಿ
ಲಕ್ಷಗಟ್ಟಲೆ ತೆರಿಗೆ ಪಾವತಿಸುವಂತೆ ನೋಟಿಸ್ ಜಾರಿಮಾಡಿದ್ದಕ್ಕೆ ಅಂಗಡಿ ಮಾಲೀಕರು ಕಂಗೆಟ್ಟುಹೋಗಿದ್ದಾರೆ. ವಾಣಿಜ್ಯ ಇಲಾಖೆ ತೆರಿಗೆ ನೋಟಿಸ್ಗೆ ವರ್ತಕರಿಗೆ ದಿಕ್ಕೇ ತೋಚದಂತಾಗಿದೆ. ಹೀಗಾಗಿ ಯುಪಿಐ ಬದಲು ಕ್ಯಾಷ್ ಪಡೆಯಲು ಸಣ್ಣ ಸಣ್ಣ ವ್ಯಾಪಾರಿಗಳು ಮುಂದಾಗಿದ್ದಾರೆ. ಇನ್ನೂ GST ಮಾಡುತ್ತಿರುವುದೆಲ್ಲಾ ಕೇಂದ್ರ ಸರ್ಕಾರ. GST, ಸೇಲ್ಸ್ ಟ್ಯಾಕ್ಸ್ ಎಲ್ಲರ ಮೇಲೆ ಹಾಕಿದ್ದಾರೆ ಎಂದು ಸಚಿವರು, ಕಾಂಗ್ರೆಸ್ ನಾಯಕರು ಆರೋಪಿಸುತ್ತಿದ್ದಾರೆ. ಇದಕ್ಕೆ ಇದೀಗ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯಿಸಿದ್ದು, ಕೇಂದ್ರದ ಮೇಲಿನ ಆರೋಪಕ್ಕೆ ಸ್ಪಷ್ಟನೆ ನೀಡಿದ್ದಾರೆ.
- Ramesh B Jawalagera
- Updated on: Jul 22, 2025
- 5:30 pm
ಕಳಪೆ ಹೆಲ್ಮೆಟ್ಗೆ ಕೇಂದ್ರ ತಡೆ: ವಾಹನ ಸವಾರರಿಗೆ BIS ಪ್ರಮಾಣೀಕರಿಸಿದ ISI ಗುರುತುಳ್ಳ ಹೆಲ್ಮೆಟ್ ಕಡ್ಡಾಯ
ಕೇಂದ್ರ ಸರ್ಕಾರವು ದ್ವಿಚಕ್ರ ವಾಹನ ಸವಾರರ ಸುರಕ್ಷತೆಯನ್ನು ಖಚಿತಪಡಿಸಲು ಕಳಪೆ ಗುಣಮಟ್ಟದ ಹೆಲ್ಮೆಟ್ಗಳ ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಿದೆ. BIS (ಭಾರತೀಯ ಮಾನದಂಡಗಳ ಬ್ಯೂರೋ) ದೆಹಲಿಯಲ್ಲಿ 2500ಕ್ಕೂ ಹೆಚ್ಚು ಕಳಪೆ ಹೆಲ್ಮೆಟ್ಗಳನ್ನು ವಶಪಡಿಸಿಕೊಂಡಿದೆ ಮತ್ತು ರಾಷ್ಟ್ರವ್ಯಾಪಿ ಜಾಗೃತಿ ಅಭಿಯಾನವನ್ನು ಆರಂಭಿಸಿದೆ. ಸವಾರರು BIS ಪ್ರಮಾಣೀಕೃತ ಹೆಲ್ಮೆಟ್ಗಳನ್ನು ಧರಿಸುವುದು ಕಡ್ಡಾಯ ಎಂದು ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.
- Gangadhar Saboji
- Updated on: Jul 6, 2025
- 8:33 am
ಪ್ರಲ್ಹಾದ್ ಜೋಶಿ ವಿರುದ್ಧ ನಿಂದನೆ, ಜೀವ ಬೆದರಿಕೆ ಆರೋಪ: ಏಮ್ಸ್ ಹೋರಾಟಗಾರರ ವಿರುದ್ಧ ಪ್ರಕರಣ ದಾಖಲು
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿ, ಜೀವ ಬೆದರಿಕೆ ಹಾಕಿದ ಆರೋಪದಲ್ಲಿ ಆರು ಮಂದಿ ಏಮ್ಸ್ ಹೋರಾಟಗಾರರ ವಿರುದ್ಧ ರಾಯಚೂರು ನಗರದ ಪಶ್ಚಿಮ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳು ಮಾಡಿದ್ದೇನು? ಬಿಜೆಪಿ ನೀಡಿದ್ದ ದೂರಿನಲ್ಲೇನಿದೆ? ಪೊಲೀಸರು ಕೈಗೊಂಡ ಕ್ರಮಗಳೇನು ಎಂಬ ವಿವರ ಇಲ್ಲಿದೆ.
- Bhemesh Poojar
- Updated on: Jun 26, 2025
- 11:11 am
ಮೀಸಲಾತಿ ಬಗ್ಗೆ ಕೇಂದ್ರ ಯಾವುದೇ ಸುತ್ತೋಲೆ ಹೊರಡಿಸಿಲ್ಲ: ಜಮೀರ್ ಹೇಳಿಕೆಗೆ ಜೋಶಿ ತಿರುಗೇಟು
ಅಲ್ಪಸಂಖ್ಯಾತರಿಗೆ 15% ಮೀಸಲಾತಿ ವಿಚಾರವಾಗಿ 2019ರಲ್ಲಿ ಕೇಂದ್ರ ಸರ್ಕಾರ ಯಾವುದೇ ಸುತ್ತೋಲೆ ಹೊರಡಿಸಿಲ್ಲ. ಒಂದು ಸುತ್ತೋಲೆ ಇದ್ದರೆ ಬಿಡುಗಡೆ ಮಾಡಲಿ ಎಂದು ರಾಜ್ಯ ಸರ್ಕಾರಕ್ಕೆ ಸಚಿವ ಪ್ರಲ್ಹಾದ್ ಜೋಶಿ ಸವಾಲು ಹಾಕಿದ್ದಾರೆ. ಆ ಮೂಲಕ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
- Sanjayya Chikkamath
- Updated on: Jun 22, 2025
- 1:26 pm
ಕರ್ನಾಟಕದ ಧರ್ಮಾಧಾರಿತ ವಸತಿ ಮೀಸಲಾತಿ ವಿರುದ್ಧ ಕಾನೂನು ಕ್ರಮ; ಪ್ರಲ್ಹಾದ್ ಜೋಶಿ ಎಚ್ಚರಿಕೆ
ಧರ್ಮದ ಆಧಾರದ ಮೇಲೆ ಶೇ.15ರಷ್ಟು ಮೀಸಲಾತಿ ನೀಡಲು ಕರ್ನಾಟಕ ಸರ್ಕಾರವು ಇಂದು ಸಚಿವ ಸಂಪುಟ ಸಭೆಯಲ್ಲಿ ತಗೆದುಕೊಂಡ ನಿರ್ಧಾರ ಸಂವಿಧಾನದ ಸ್ಪಷ್ಟ ಉಲ್ಲಂಘನೆಯಾಗಿದೆ. ಈ ಹಿಂದೆ, ರಾಹುಲ್ ಗಾಂಧಿಯವರ ಸೂಚನೆಯ ಮೇರೆಗೆ ಸಿದ್ದರಾಮಯ್ಯ ಸರ್ಕಾರ ಶೇ. 4ರಷ್ಟು ಮೀಸಲಾತಿಯನ್ನು ಒಂದು ಸಮುದಾಯಕ್ಕೆ ನೀಡಿತ್ತು. ಈಗ ವಸತಿ ಯೋಜನೆಗಳಲ್ಲಿ ಶೇ.15ರಷ್ಟು ಮೀಸಲಾತಿ ನೀಡಲು ತೀರ್ಮಾನಿಸಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ.
- Sushma Chakre
- Updated on: Jun 19, 2025
- 7:36 pm
ಮಂತ್ರಾಲಯ: ರಾಯರ ದರ್ಶನ ಪಡೆದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ಮಂಗಳವಾರ ಬೆಳ್ಳಂಬೆಳಗ್ಗೆಯೇ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಂತ್ರಾಲಯ ಮಠಕ್ಕೆ ಭೇಟಿ ನೀಡಿ ಗುರು ರಾಯರ ದರ್ಶನ ಪಡೆದರು. ನಂತರ ಉತ್ಸವದಲ್ಲಿ ಭಾಗವಹಿಸಿ, ಮಂತ್ರಾಲಯ ಪೀಠಾಧಿಪತಿ ಸುಬುಧೇಂದ್ರ ತೀರ್ಥರ ಆಶಿರ್ವಾದ ಪಡೆದರು. ಕೇಂದ್ರ ಸಚಿವರ ಮಂತ್ರಾಲಯ ಭೇಟಿಯ ವಿಡಿಯೋ ಇಲ್ಲಿದೆ ನೋಡಿ.
- Bhemesh Poojar
- Updated on: Jun 17, 2025
- 8:58 am
ವಾಯುಶಕ್ತಿ ಉತ್ಪಾದನೆ; ಗುಜರಾತ್, ತಮಿಳುನಾಡನ್ನು ಹಿಂದಿಕ್ಕಿದ ಕರ್ನಾಟಕ ನಂ. 1; ಕೇಂದ್ರದಿಂದ ಪ್ರಶಸ್ತಿ
Karnataka's wind energy capacity: 2024-25ರಲ್ಲಿ ಕರ್ನಾಟಕದಲ್ಲಿ 1,331 ಮೆ.ವ್ಯಾ.ನಷ್ಟು ವಾಯು ವಿದ್ಯುತ್ ಉತ್ಪಾದನಾ ಸಾಮರ್ಥ್ಯ ಹೆಚ್ಚಳ ಆಗಿದೆ. ಒಂದು ವರ್ಷದಲ್ಲಿ ಅತ್ಯಧಿಕ ವಾಯು ವಿದ್ಯುತ್ ಸಾಮರ್ಥ್ಯ ಏರಿಸಿದ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ ಮೊದಲು ಬಂದಿದೆ. ತಮಿಳುನಾಡು ಮತ್ತು ಗುಜರಾತ್ ರಾಜ್ಯಗಳು 2 ಮತ್ತು 3ನೇ ಸ್ಥಾನ ಪಡೆದಿವೆ.
- Vijaya Sarathy SN
- Updated on: Jun 16, 2025
- 1:52 pm