AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pralhad Joshi

Pralhad Joshi

ಪ್ರಲ್ಹಾದ್ ಜೋಶಿ ಒಬ್ಬ ಖ್ಯಾತ ರಾಜಕಾರಣಿಯಾಗಿದ್ದು, 2024ರ ಜೂನ್ 10 ರಿಂದ ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ನವೀಕರಿಸಬಹುದಾದ ಇಂಧನ ಇಲಾಖೆ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. 1962 ರ ನವೆಂಬರ್ 27 ರಂದು ಜನಿಸಿದರು. 2004 ರಿಂದ ಜೋಶಿ ಸಂಸತ್ ಸದಸ್ಯರಾಗಿದ್ದಾರೆ. ಧಾರವಾಡ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. 1992 ರಿಂದ 1994 ರ ಅವಧಿಯಲ್ಲಿ ಕರ್ನಾಟಕದ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ತ್ರಿವರ್ಣ ಧ್ವಜಾರೋಹಣಕ್ಕಾಗಿ ನಡೆದ ಚಳವಳಿಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಜೋಶಿಯವರ ರಾಜಕೀಯ ಜೀವನ ಪ್ರಾರಂಭವಾಯಿತು. ನಂತರ ಅವರು ಧಾರವಾಡ ಜಿಲ್ಲೆಯ ಬಿಜೆಪಿ ಅಧ್ಯಕ್ಷರಾದರು ಮತ್ತು 2004ರಲ್ಲಿ ಲೋಕಸಭೆ ಚುನಾವಣೆಯಲ್ಲಿ ಗೆಲುವುದ ಸಾಧಿಸುವ ಮೂಲಕ ಸಂಸತ್ ಪ್ರವೇಶಿಸಿದರು. ಅಲ್ಲಿಂದ ರಾಷ್ಟ್ರ ರಾಜಕಾರಣದಲ್ಲಿ ಅವರ ಛಾಪು ಮುಂದುವರಿದಿದೆ.

ಇನ್ನೂ ಹೆಚ್ಚು ಓದಿ

One Nation, One Time: ಇನ್ನು 180 ದಿನದಲ್ಲಿ ದೇಶಾದ್ಯಂತ ‘ಭಾರತೀಯ ಪ್ರಮಾಣಿತ ಸಮಯ’ ಜಾರಿ, ISTಗೆ ಸಿದ್ಧತೆ

Indian Standard Time: ದೇಶಾದ್ಯಂತ ಏಕರೂಪ ಹಾಗೂ ನಿಖರ ಸಮಯ ಅನುಸರಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಭಾರತೀಯ ಪ್ರಮಾಣಿತ ಸಮಯಕ್ಕೆ ಸಂಬಂಧಿಸಿದ ಹೊಸ ನಿಯಮಗಳು 180 ದಿನಗಳಲ್ಲಿ ಜಾರಿಗೆ ಬರಲಿದ್ದು, NavIC ಆಧಾರಿತ ಸ್ವದೇಶಿ ಸಮಯ ಮೂಲ ಬಳಕೆಗೆ ಒತ್ತು ನೀಡಲಾಗಿದೆ.

ಎಫ್​ಐಆರ್ ಬೆನ್ನಲ್ಲೇ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಷಣದ ನಂತರ ಹಲ್ದ್ವಾನಿಯಲ್ಲಿ ನಡೆದ ಸ್ಥಳಶುದ್ಧೀಕರಣ ವಿವಾದಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪರಿಶಿಷ್ಟ ಜಾತಿಗೆ ಸೇರಿದ ಅಮಿತ್ ಕುಮಾರ್ ದೂರಿನ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ. ಇದರ ಬೆನ್ನಲ್ಲೇ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ರಾಹುಲ್ ಗಾಂಧಿ ವಿರುದ್ಧ ಕಿಡಿಕಾರಿದ್ದು, ಬಿಜೆಪಿ ಅಥವಾ ಆರ್‌ಎಸ್‌ಎಸ್‌ಗೆ ಈ ಘಟನೆಯೊಂದಿಗೆ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

‘ಆಡಳಿತದಲ್ಲಿ ನೈತಿಕತೆಗೆ ಉದಾಹರಣೆಯೇ ರಾಮಕೃಷ್ಣ ಹೆಗಡೆ’; ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಬಣ್ಣನೆ

ಕರ್ನಾಟಕದ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಜನ್ಮ ಶತಾಬ್ದಿ ಸಮಾರಂಭ ಬೆಂಗಳೂರಿನಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಭಾರತದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕರ್ನಾಟಕದ ಮುಖ್ಯಮಂತ್ರಿಯಾಗಿ ಹೆಗಡೆಯವರು ಜಾರಿಗೆ ತಂದ ಜನಪರ ಯೋಜನೆಗಳು, ಮೌಲ್ಯಾಧಾರಿತ ರಾಜಕಾರಣ ಮತ್ತು ಸಾಂಸ್ಕೃತಿಕ ಕ್ಷೇತ್ರಕ್ಕೆ ನೀಡಿದ ಪ್ರೋತ್ಸಾಹವನ್ನು ಸಮಾರಂಭದಲ್ಲಿ ಉಪಸ್ಥಿತರಿದ್ದ ಗಣ್ಯರು ಸ್ಮರಿಸಿದರು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾಜಿ ಸಿಎಂ ರಾಮಕೃಷ್ಣ ಹೆಗಡೆ ತಮ್ಮ ಮೇಲೆ ಬೀರಿದ ಪರಿಣಾಮವನ್ನು ಮೆಲುಕು ಹಾಕಿದರು.

RSS ಪಥಸಂಚಲನದಲ್ಲಿ ಭಾಗಿಯಾಗಿದ್ದ ಶಿಕ್ಷಕರ ಸಸ್ಪೆಂಡ್: ರಾಜ್ಯ ಸರ್ಕಾರ ದ್ವೇಷ ಭಾವನೆಯಿಂದ ವರ್ತಿಸುತ್ತಿದೆ; ಜೋಶಿ ಕಿಡಿ

ಯಾದಗಿರಿಯಲ್ಲಿ ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗವಹಿಸಿದ್ದ ಇಬ್ಬರು ಶಿಕ್ಷಕರನ್ನು ಒಂಬತ್ತು ತಿಂಗಳ ಬಳಿಕ ಅಮಾನತುಗೊಳಿಸಲಾಗಿದೆ. ಈ ಕ್ರಮವನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಮತ್ತು ಶಾಸಕ ಮಹೇಶ್ ಟೆಂಗಿನಕಾಯಿ ತೀವ್ರವಾಗಿ ಖಂಡಿಸಿದ್ದಾರೆ. ಸರ್ಕಾರದ ಕ್ರಮ ದ್ವೇಷಪೂರಿತ ಎಂದು ಆರೋಪಿಸಿರುವ ಅವರು, ಸುಪ್ರೀಂ ಕೋರ್ಟ್ ತೀರ್ಪುಗಳನ್ನು ಉಲ್ಲೇಖಿಸಿ, ಇಂತಹ ಆದೇಶಗಳು ನ್ಯಾಯಾಲಯದಲ್ಲಿ ರದ್ದಾಗುತ್ತವೆ ಎಂದು ಎಚ್ಚರಿಸಿದ್ದಾರೆ. ಅಮಾನತು ಆದೇಶವನ್ನು ಕೂಡಲೇ ಹಿಂಪಡೆಯುವಂತೆ ಆಗ್ರಹಿಸಿದ್ದಾರೆ.

ಶಿಕ್ಷಣ ವ್ಯವಸ್ಥೆಯ ಬಲವರ್ಧನೆಗೆ ಸಚಿವ ಜೋಶಿ ಕಸರತ್ತು: ಹಿರಿಯ ಅಧಿಕಾರಿಗಳ ಜತೆ ಸರಣಿ ಸಭೆ

ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ಅವರು ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸಲು ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಉನ್ನತ ಶಿಕ್ಷಣ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿ, ಶೈಕ್ಷಣಿಕ ಉಪಕ್ರಮಗಳ ಅನುಷ್ಠಾನವನ್ನು ಪರಿಶೀಲಿಸಿದರು. ಪ್ರತಿ ಹಂತದಲ್ಲೂ ಶಿಕ್ಷಣ ಸುಧಾರಣೆ, ಯೋಜನೆಗಳ ಸಮಯೋಚಿತ ಅನುಷ್ಠಾನ ಮತ್ತು ಪರಿಣಾಮಕಾರಿ ಮೇಲ್ವಿಚಾರಣೆಗೆ ಅವರು ಆದ್ಯತೆ ನೀಡುತ್ತಿದ್ದಾರೆ.

ಈರುಳ್ಳಿ ಬೆಲೆ ನಿಯಂತ್ರಣಕ್ಕೆ ಮುಂದಾದ ಕೇಂದ್ರ, 5 ಪ್ರಮುಖ ನಗರಗಳಿಗೆ 800 ಮೆಟ್ರಿಕ್ ಟನ್ ಈರುಳ್ಳಿ ರವಾನೆ

ಈರುಳ್ಳಿ ಬೆಲೆ ದಿಢೀರ್ ಏರಿಕೆ ಕಂಡಿದ್ದು, ಸಾಮಾನ್ಯ ಜನರ ಜೇಬಿಗೆ ಕತ್ತರಿ ಬಿದ್ದಿದೆ. ಕೆ.ಜಿ. ಈರುಳ್ಳಿ ಬೆಲೆ ಪ್ರಸ್ತುತ 60ರಿಂದ 75ಕ್ಕೆ ತಲುಪಿದೆ. ಇದೇ ಪರಿಸ್ಥಿತಿ ಮುಂದುವರಿದರೆ ಕೆಲವೇ ದಿನಗಳಲ್ಲಿ ಈರುಳ್ಳಿ ದರ 100ರ ಗಡಿ ದಾಟುವ ಸಾಧ್ಯತೆಯಿದೆ ಎಂದು ಮಾರುಕಟ್ಟೆ ತಜ್ಞರು ಹೇಳುತ್ತಿದ್ದಾರೆ. ಇದರ ಬೆನ್ನಲ್ಲೇ ಎಚ್ಚೆತ್ತ ಕೇಂದ್ರ ಸರ್ಕಾರ ಈರುಳ್ಳಿ ಬೆಲೆ ಏರಿಕೆಗೆ ಬ್ರೇಕ್ ಹಾಕಲು ಮುಂದಾಗಿದೆ.

ಶಿಕ್ಷಣ ಸಚಿವಾಲಯದ ಅಧಿಕಾರಿಗಳೊಂದಿಗೆ ಸಿಬಿಎಸ್​ಇ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಭೆ

ಕೇಂದ್ರ ಶಿಕ್ಷಣ ಸಚಿವರಾದ ಪ್ರಲ್ಹಾದ್ ಜೋಶಿ ಇಂದು (ಸೋಮವಾರ) ಸಿಬಿಎಸ್‌ಇಗೆ ಸಂಬಂಧಿಸಿದ ವಿಷಯಗಳನ್ನು ಚರ್ಚಿಸಲು ಶಿಕ್ಷಣ ಸಚಿವಾಲಯದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಈ ಸಭೆಯಲ್ಲಿ ಸಿಬಿಎಸ್‌ಇಯ ಶೈಕ್ಷಣಿಕ, ಪರೀಕ್ಷಾ ಮತ್ತು ಆಡಳಿತಾತ್ಮಕ ಪ್ರಕ್ರಿಯೆಗಳನ್ನು ಬಲಪಡಿಸುವ ಪ್ರಮುಖ ಆದ್ಯತೆಗಳನ್ನು ಪರಿಶೀಲಿಸಲಾಯಿತು. ಹೆಚ್ಚಿನ ದಕ್ಷತೆ, ಪಾರದರ್ಶಕತೆ ಹಾಗೂ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಸುಧಾರಿತ ಬೆಂಬಲ ನೀಡುವುದರ ಮೇಲೆ ಈ ಸಭೆಯಲ್ಲಿ ಗಮನ ಹರಿಸಲಾಯಿತು.

ಹುಬ್ಬಳ್ಳಿ, ಉತ್ತರ ಕರ್ನಾಟಕ ಜನತೆಗೆ ಸಿಹಿ ಸುದ್ದಿ: ಪ್ರತಿನಿತ್ಯ ವಿಮಾನ ಸೇವೆ, ಇಲ್ಲಿದೆ ವೇಳಾಪಟ್ಟಿ

ಹುಬ್ಬಳ್ಳಿ-ಧಾರವಾಡ ಹಾಗೂ ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ ಸಿಕ್ಕಿದೆ. ಪ್ರಯಾಣಿಕರ ಅನುಕೂಲ ಹಾಗೂ ಜನರ ಬೇಡಿಕೆಯನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಈಡೇರಿಸಿದ್ದಾರೆ. ದೆಹಲಿ- ಹುಬ್ಬಳ್ಳಿ ಹಾಗೂ ದೆಹಲಿ-ಬೆಳಗಾವಿ ನಡುವೆ ದೈನಂದಿನ ವಿಮಾನ (ಪ್ರತಿ ದಿನ) ಸೇವೆ ಆರಂಭವಾಗಲಿದೆ. ಹಾಗಾದ್ರೆ, ಯಾವಾಗಿನಿಂದ ವಿಮಾನ ಸಂಚಾರ ಆರಂಭ ಎನ್ನುವ ವೇಳಾಪಟ್ಟಿ ಈ ಕೆಳಗಿನಂತಿದೆ.

ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ಆನ್​ಲೈನ್ ತರಬೇತಿಯ ಜಾರಿ ಬಗ್ಗೆ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ಸಭೆ

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಉಚಿತ ಆನ್‌ಲೈನ್ ತರಬೇತಿ ಜಾರಿ ಪರಿಶೀಲಿಸಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಶಿಕ್ಷಣ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧರಾಗುತ್ತಿರುವ ಯುವಜನತೆಗೆ ಉಚಿತ ಆನ್‌ಲೈನ್ ತರಬೇತಿ ನೀಡುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಭಿಯಾನದ ಅನುಷ್ಠಾನದ ಕುರಿತು ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ಇಂದು (ಬುಧವಾರ) ಹಿರಿಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಪರಿಶೀಲನಾ ಸಭೆ ನಡೆಸಿದರು.

NTAಗೆ ಮೇಜರ್ ಸರ್ಜರಿ: 600 ತಜ್ಞರ ವಜಾ, ನಾಲ್ಕು ಹಂತದಲ್ಲಿ ಪ್ರಶ್ನೆಪತ್ರಿಕೆ ತಪಾಸಣೆ ವ್ಯವಸ್ಥೆಗೆ ಜೋಶಿ ಆದೇಶ

NTA reforms: ಎನ್​​ಟಿಎ ಪರೀಕ್ಷೆಯಲ್ಲಿ ಆಮೂಲಾಗ್ರವಾಗಿ ಬದಲಾವಣೆಗೆ ಮುಂದಾಗಿರುವ ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್​ ಜೋಶಿ, ಸಂಸ್ಥೆಯಲ್ಲಿ ಮೇಜರ್​​ ಸರ್ಜರಿ ಮಾಡಿದ್ದಾರೆ. ಪರೀಕ್ಷಾ ತಂಡದ ಪುನರ್ ರಚನೆ, 600 ತಜ್ಞರನ್ನು ವಜಾ, ಹೊಸ ಅಧಿಕಾರಿಗಳ ನೇಮಕ ಮತ್ತು ನಾಲ್ಕು ಹಂತದ ಪ್ರಶ್ನೆಪತ್ರಿಕೆ ತಪಾಸಣೆ ವ್ಯವಸ್ಥೆ ಸೂಚನೆ ನೀಡಿದ್ದಾರೆ.

ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿಯಿಂದ ಪರೀಕ್ಷಾ ಸಂಸ್ಥೆಗೆ ಶಸ್ತ್ರಚಿಕಿತ್ಸೆ; ಪರೀಕ್ಷಾ ವ್ಯವಸ್ಥೆಯಲ್ಲಿ ಅಮೂಲಾಗ್ರ ಬದಲಾವಣೆಗೆ ಆದೇಶ

Education Minister Pralhad Joshi orders for overhaul of examination system: ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆಗೆ ಕಾರಣವಾದ ಪರೀಕ್ಷಾ ಅಕ್ರಮಗಳನ್ನು ತಡೆಯಲು ಸರ್ಕಾರ ಗಂಭೀರ ಪ್ರಯತ್ನಗಳನ್ನು ನಡೆಸುತ್ತಿದೆ. ನೂತನ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಎನ್​ಟಿಎ ಹಾಗೂ ಪರೀಕ್ಷಾ ವ್ಯವಸ್ಥೆಯಲ್ಲಿ ಅಮೂಲಾಗ್ರ ಬದಲಾವಣೆ ತರಹೊರಟಿದ್ದಾರೆ.

‘ಉಚಿತ ಎಲೆಕ್ಟ್ರಿಕ್ ಸ್ಟೌ’ ಸುಳ್ಳು ಸಂದೇಶ: ಸಚಿವ ಪ್ರಲ್ಹಾದ್ ಜೋಶಿ ಎಚ್ಚರಿಕೆ

ಕೇಂದ್ರದಿಂದ ‘ಉಚಿತ ಎಲೆಕ್ಟ್ರಿಕ್ ಸ್ಟೌ’ ವಿತರಣೆ ಎಂಬುದು ನಕಲಿ ಸಂದೇಶ ಎಂದು ಸಚಿವ ಪ್ರಲ್ಹಾದ್ ಜೋಶಿ ಸ್ಪಷ್ಟಪಡಿಸಿದ್ದು, MNRE ಹೆಸರಿನಲ್ಲಿ ಹರಡುತ್ತಿರುವ ಈ ಸುಳ್ಳು ಸುದ್ದಿಯ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ಸಾರ್ವಜನಿಕರು ಇಂತಹ ವಂಚನೆಗೆ ಒಳಗಾಗಬಾರದು. ಯಾವುದೇ ಅನುಮಾನಾಸ್ಪದ ಲಿಂಕ್‌ಗಳನ್ನು ಕ್ಲಿಕ್ ಮಾಡಬೇಡಿ, ಅಧಿಕೃತ ಮಾಹಿತಿಗಳಿಗೆ ಮಾತ್ರ ಒತ್ತು ನೀಡಿ ಮತ್ತು ನಿಮ್ಮ ವೈಯಕ್ತಿಕ ಮಾಹಿತಿಯನ್ನು ಹಂಚಿಕೊಳ್ಳಬೇಡಿ ಎಂದು ಸೂಚಿಸಿದ್ದಾರೆ.

ದಾವಣಗೆರೆ ಬಂದ್: ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ, ಬಸ್ ಸಂಚಾರಕ್ಕೆ ತಡೆ
ದಾವಣಗೆರೆ ಬಂದ್: ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ, ಬಸ್ ಸಂಚಾರಕ್ಕೆ ತಡೆ
ಸಿಐಡಿ ಮುಂದೆ ತಪ್ಪೊಪ್ಪಿಕೊಂಡ 6 ಅಭ್ಯರ್ಥಿಗಳು!
ಸಿಐಡಿ ಮುಂದೆ ತಪ್ಪೊಪ್ಪಿಕೊಂಡ 6 ಅಭ್ಯರ್ಥಿಗಳು!
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ