Prime Minister Of India
ಭಾರತ ಪ್ರಜಾತಂತ್ರ ವ್ಯವಸ್ಥೆಯ ನಾಯಕನೆಂದರೆ ಪ್ರಧಾನಿ. ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಒಂದಕ್ಕೆ ನಾಯಕರಾಗಿರುವ ಪ್ರಧಾನಿಗೆ ಐದು ವರ್ಷ ಶಾಸನಬದ್ಧ ಅಧಿಕಾರವಿರುತ್ತದೆ. ಲೋಕಸಭೆಯಲ್ಲಿ ಬಹುಮತ ಹೊಂದಿರುವ ಪಕ್ಷ ಅಥವಾ ಒಕ್ಕೂಟದ ಸದಸ್ಯರ ನಾಯಕನೇ ಪ್ರಧಾನಿ ಆಗಲಿದ್ದು, ಭಾರತವು ಸಧ್ಯಕ್ಕೆ 14ನೇ ಪ್ರಧಾನಿಯನ್ನು ಹೊಂದಿದೆ.
ಭಾರತದಲ್ಲಿ ಒಬ್ಬ ವ್ಯಕ್ತಿ ಎಷ್ಟು ವರ್ಷ ಅಥವಾ ಎಷ್ಟು ಅವಧಿಗೆ ಪ್ರಧಾನಿ ಆಗಬಹುದು ಎನ್ನುವ ಯಾವುದೇ ಮಿತಿಯಿಲ್ಲ. ಐದು ವರ್ಷಕ್ಕೊಮ್ಮೆ ನಡೆಯುವ ಚುನಾವಣೆಯಲ್ಲಿ ಪ್ರಧಾನಿ ಆಗುವ ಪಕ್ಷ ಅಥವಾ ಒಕ್ಕೂಟ ಗೆಲುವು ಸಾಧಿಸಿದರೆ ಸಾಕಾಗುತ್ತದೆ. ಜವಾಹರ್ಲಾಲ್ ನೆಹರು ಅವರು ಭಾರತದ ಮೊದಲ ಪ್ರಧಾನಿ ಆಗಿದ್ದರು. ಬಳಿಕ ಲಾಲ್ಬಹದ್ದೂರ್ ಶಾಸ್ತ್ರೀ, ಇಂದಿರಾ ಗಾಂಧಿ ಪ್ರಧಾನಿ ಆಗಿದ್ದರು.
ಮೊರಾರ್ಜಿ ದೇಸಾಯಿ ಅವರು ದೇಶದ ಮೊದಲ ಕಾಂಗ್ರೆಸ್ಸೇತರ ಪ್ರಧಾನಿಯಾದರೇ, ಇಂದಿರಾ ಅವರು ಮೊದಲ ಮಹಿಳಾ ಪ್ರಧಾನಿ ಎನಿಸಿಕೊಂಡರು. ಬಳಿಕ ರಾಜೀವ್ ಗಾಂಧಿ, ವಿ.ಪಿ ಸಿಂಗ್, ಚಂದ್ರಶೇಖರ್, ಪಿ.ವಿ ನರಸಿಂಹರಾವ್, ಅಟಲ್ ಬಿಹಾರಿ ವಾಜಪೇಯಿ, ಎಚ್.ಡಿ ದೇವೇಗೌಡ, ಐ.ಕೆ ಗುಜ್ರಾಲ್, ಮನಮೋಹನ್ ಸಿಂಗ್ ಈ ಹುದ್ದೆಯನ್ನು ಏರಿದರು.
2014ರಿಂದ ನರೇಂದ್ರ ಮೋದಿಯು ಪ್ರಧಾನಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಭಾರತದ ಸಂವಿಧಾನಬದ್ಧ ಪ್ರಜಾತಂತ್ರ ವ್ಯವಸ್ಥೆಯಲ್ಲಿ ರಾಷ್ಟ್ರಪತಿಯು ಮೊದಲ ಪ್ರಜೆಯಾಗಿದ್ದರೂ, ಆಡಳಿತಾತ್ಮಕವಾಗಿ ಪ್ರಧಾನಿಯೇ ದೇಶದ ಅತ್ಯಂತ ಪ್ರಭಾವಿ ವ್ಯಕ್ತಿ.
ಇನ್ನೂ ಹೆಚ್ಚು ಓದಿPM Modi Speech in Mysuru: ಮೈಸೂರಿನ ಪ್ರತಿ ಮೂಲೆಯಲ್ಲೂ ಭಾರತದ ಪರಂಪರೆ ಹಾಸುಹೊಕ್ಕಿದೆ; ಪ್ರಧಾನಿ ಮೋದಿ ಬಣ್ಣನೆ
ಮೈಸೂರಿನಲ್ಲಿ ವಿವೇಕ ಸ್ಮಾರಕ ಉದ್ಘಾಟನೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದ್ದಾರೆ. ಮೈಸೂರಿನ ರಾಮಕೃಷ್ಣ ಆಶ್ರಮದ ಸೇವೆ ಅಪಾರ. ಮೈಸೂರಿನ ವಿವೇಕ ಸ್ಮಾರಕ ಯುವಕರಿಗೆ ಪ್ರೇರಣೆ ನೀಡಲಿದೆ.ಮೈಸೂರು ಭಾರತದ ಅತಿ ಸ್ವಚ್ಛ ನಗರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಭಾರತದ ಅರ್ಥ ವ್ಯವಸ್ಥೆ ಅತ್ಯಂತ ವೇಗವಾಗಿ ಬೆಳೆಯುತ್ತಿದೆ. ಭಾರತದ ಯುವಕರ ಸಾಮರ್ಥ್ಯದಿಂದ ಅರ್ಥ ವ್ಯವಸ್ಥೆ ಬೆಳೆಯುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
- Sushma Chakre
- Updated on: Aug 1, 2026
- 6:42 pm
ಮೈಸೂರಿನಲ್ಲಿ ವಿವೇಕ ಸ್ಮಾರಕ ಉದ್ಘಾಟಿಸಿ, ಗಿಡ ನೆಟ್ಟ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೂಡ ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ - ವಿವೇಕ ಸ್ಮಾರಕದ ಆವರಣದಲ್ಲಿ ಸಸಿಯನ್ನು ನೆಟ್ಟರು. ಮೈಸೂರಿನ ರಾಮಕೃಷ್ಣ ಆಶ್ರಮದಲ್ಲಿ 1892ರಲ್ಲಿ ಸ್ವಾಮಿ ವಿವೇಕಾನಂದರು ಉಳಿದುಕೊಂಡಿದ್ದರು. ಈ ವಿಶೇಷ ಘಟನೆಯ ನೆನಪಿಗಾಗಿ ಇಲ್ಲಿ ವಿವೇಕ ಸ್ಮಾರಕ ನಿರ್ಮಾಣ ಮಾಡಲಾಗಿದೆ. ಮೈಸೂರಿನ ಶ್ರೀ ರಾಮಕೃಷ್ಣ ಆಶ್ರಮದಲ್ಲಿ ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ - ವಿವೇಕ ಸ್ಮಾರಕವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದಾರೆ.
- Sushma Chakre
- Updated on: Aug 1, 2026
- 5:11 pm
PM Narendra Modi Mysuru Visit Live: ಮೈಸೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ, ವಿವೇಕಾನಂದ ಯುವ ಕೇಂದ್ರ ಲೋಕಾರ್ಪಣೆ
ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ಉದ್ಘಾಟನೆ ಲೈವ್: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ್ದಾರೆ. ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಧಾನಿಯವರು, ಐತಿಹಾಸಿಕ 'ವಿವೇಕ ಸ್ಮಾರಕ' (ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ) ಲೋಕಾರ್ಪಣೆ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಓವಲ್ ಮೈದಾನ ಹೆಲಿಪ್ಯಾಡ್ ಮೂಲಕ ಕಾರ್ಯಕ್ರಮದ ಸ್ಥಳಕ್ಕೆ ತೆರಳಲಿದ್ದು, ಈ ಕುರಿತು ಲೈವ್ ವೀಡಿಯೋ ಲಭ್ಯವಿದೆ. ಇದು ಮೈಸೂರಿಗೆ ಮಹತ್ವದ ಭೇಟಿಯಾಗಿದೆ.
- Akshay Pallamajalu
- Updated on: Aug 1, 2026
- 3:45 pm
2014ರಲ್ಲಿ 74 ವಿಮಾನ ನಿಲ್ದಾಣಗಳು, 2026ರಲ್ಲಿ 166ಕ್ಕೆ ಏರಿಕೆ; ವಿಮಾನಯಾನ ಕ್ಷೇತ್ರದ ಪ್ರಗತಿ ಒತ್ತಿಹೇಳಿದ ಪ್ರಧಾನಿ ಮೋದಿ
ವಿಮಾನ ನಿಲ್ದಾಣದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ, ದೇಶದ ವಿಮಾನಯಾನ ಕ್ಷೇತ್ರವು ಅಸಾಮಾನ್ಯ ಪ್ರಗತಿಯನ್ನು ಸಾಧಿಸಿದೆ ಎಂದು ಹೇಳಿದರು. "ಕಳೆದ 12 ವರ್ಷಗಳಲ್ಲಿ ದೇಶದ ವಿಮಾನಯಾನ ಕ್ಷೇತ್ರವು ಅಸಾಧಾರಣ ಪ್ರಗತಿಯನ್ನು ಸಾಧಿಸಿದೆ. 2014ರವರೆಗೆ ದೇಶದಲ್ಲಿ ಕೇವಲ 74 ವಿಮಾನ ನಿಲ್ದಾಣಗಳು ಮಾತ್ರ ಕಾರ್ಯನಿರ್ವಹಿಸುತ್ತಿದ್ದವು. ಇಂದು ಆ ಸಂಖ್ಯೆ 166 ತಲುಪಿದೆ. ಒಂದು ಕಾಲದಲ್ಲಿ ವಿಮಾನ ಪ್ರಯಾಣವು ದೊಡ್ಡ ನಗರಗಳಿಗೆ ಮಾತ್ರ ಸೀಮಿತವಾಗಿತ್ತು. ಆದರೆ, ಎನ್ಡಿಎ ಸರ್ಕಾರದ ಅಡಿಯಲ್ಲಿ ಈಗ ಸಣ್ಣ ಪಟ್ಟಣಗಳ ಸಾಮಾನ್ಯ ಜನರು ಕೂಡ ವಿಮಾನದಲ್ಲಿ ಪ್ರಯಾಣಿಸಲು ಸಾಧ್ಯವಾಗುತ್ತಿದೆ" ಎಂದು ಅವರು ಹೇಳಿದ್ದಾರೆ.
- Sushma Chakre
- Updated on: Aug 1, 2026
- 3:04 pm
ಪ್ರಧಾನಿ ಮೋದಿ ಪೋಸ್ಟ್ಗೆ ನಿರ್ಬಂಧ; ಅಲ್ಗಾರಿದಮ್ ತಾರತಮ್ಯದ ಬಗ್ಗೆ ಮೆಟಾ ತಂಡಕ್ಕೆ ಸರ್ಕಾರದಿಂದ ಸಮನ್ಸ್
ಪ್ರಧಾನಿ ನರೇಂದ್ರ ಮೋದಿ ಅವರ ಫೇಸ್ಬುಕ್ ಪೋಸ್ಟ್ ಅನ್ನು ನಿರ್ಬಂಧಿಸಿದ್ದ ಮೆಟಾ (Meta) ಸಂಸ್ಥೆಯ ಜಾಗತಿಕ ತಂಡಕ್ಕೆ ಭಾರತ ಸರ್ಕಾರ ಸಮನ್ಸ್ ನೀಡಿದೆ. ಮುಂದಿನ ವಾರ ದೆಹಲಿಗೆ ಆಗಮಿಸಲಿರುವ ಮೆಟಾ ತಂಡವನ್ನು ಅಲ್ಗಾರಿದಮ್ಗಳ ತಾರತಮ್ಯ ಹಾಗೂ ಸಾರ್ವಜನಿಕ ಸುವ್ಯವಸ್ಥೆಯಲ್ಲಿ ಅವರ ಪಾತ್ರದ ಕುರಿತು ವಿಚಾರಣೆ ನಡೆಸಲಾಗುವುದು. ಮೆಟಾ ತಾಂತ್ರಿಕ ದೋಷದ ಕಾರಣ ನೀಡಿ ಭಾರತ ಸರ್ಕಾರಕ್ಕೆ ಕ್ಷಮಾಪಣೆ ಕೋರಿತ್ತು. ಆದರೆ, ಇದನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ ಸಮನ್ಸ್ ನೀಡಿದೆ. ಸಂಸದೀಯ ಸಮಿತಿಯ ಮುಂದೆಯೂ ಮೆಟಾ ಪ್ರತಿನಿಧಿಗಳು ಹಾಜರಾಗಲಿದ್ದಾರೆ.
- Sushma Chakre
- Updated on: Jul 31, 2026
- 8:14 pm
ಚುನಾವಣಾ ಆಯುಕ್ತರ ನೇಮಕಾತಿಗೆ ಸುಪ್ರೀಂ ಕೋರ್ಟ್ನಲ್ಲಿ ಕೇಂದ್ರ ಸರ್ಕಾರ ಸಮರ್ಥನೆ
ಚುನಾವಣಾ ಆಯುಕ್ತರ ಆಯ್ಕೆ ಸಮಿತಿಯಿಂದ ಭಾರತದ ಮುಖ್ಯ ನ್ಯಾಯಮೂರ್ತಿಗಳನ್ನು ಹೊರಗಿಟ್ಟಿರುವುದನ್ನು ಪ್ರಶ್ನಿಸಿದ ಸುಪ್ರೀಂ ಕೋರ್ಟ್ಗೆ ಕೇಂದ್ರ ಸರ್ಕಾರ ಖಾರವಾಗಿ ಉತ್ತರಿಸಿದೆ. ಲೋಕಪಾಲ್ ಹಾಗೂ ಸಿಬಿಐ ನಿರ್ದೇಶಕರ ಆಯ್ಕೆ ಸಮಿತಿಗಳಲ್ಲಿ ಸಿಜೆಐ ಭಾಗವಾಗಿದ್ದಾರೆ. ಹಾಗಿರುವಾಗ, ಪ್ರಜಾಪ್ರಭುತ್ವದ ಅತ್ಯಂತ ಪ್ರಮುಖ ಹುದ್ದೆಗಳಾದ ಚುನಾವಣಾ ಆಯುಕ್ತರ ಆಯ್ಕೆ ಪ್ರಕ್ರಿಯೆಯಿಂದ ಸಿಜೆಐ ಅವರನ್ನು ಹೊರಗಿಡಲು ಸಂಸತ್ತು ಕಾನೂನು ರೂಪಿಸುವಾಗ ನಿರ್ಧರಿಸಿದ್ದೇಕೆ ಎಂದು ಸುಪ್ರೀಂ ಕೋರ್ಟ್ ಸವಾಲೆಸೆಯಿತು.
- Sushma Chakre
- Updated on: Jul 31, 2026
- 4:33 pm
ಆಂಧ್ರಪ್ರದೇಶಕ್ಕೆ ನಾಳೆ ಪ್ರಧಾನಿ ಮೋದಿ ಭೇಟಿ; 5,000 ಕೋಟಿ ವೆಚ್ಚದ ಭೋಗಾಪುರಂ ವಿಮಾನ ನಿಲ್ದಾಣ ಉದ್ಘಾಟನೆ
ನಾಳೆ (ಆಗಸ್ಟ್ 1) ಆಂಧ್ರಪ್ರದೇಶದ ವಿಜಯನಗರ ಜಿಲ್ಲೆಯ ಭೋಗಾಪುರಂನಲ್ಲಿ ನಿರ್ಮಿಸಲಾಗಿರುವ ‘ಅಲ್ಲುರಿ ಸೀತಾರಾಮ ರಾಜು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ಸುಮಾರು 5,000 ಕೋಟಿ ರೂ. ವೆಚ್ಚದಲ್ಲಿ ಇದನ್ನು ನಿರ್ಮಿಸಲಾಗಿದೆ. ಆಂಧ್ರ ಪ್ರದೇಶದ ವಿಶಾಖಪಟ್ಟಣವನ್ನು ಜಾಗತಿಕ ಮಟ್ಟದ ನಗರಗಳ ಸಾಲಿನಲ್ಲಿ ನಿಲ್ಲಿಸುವ ಉದ್ದೇಶದಿಂದ ಅಂತಾರಾಷ್ಟ್ರೀಯ ಗುಣಮಟ್ಟದಲ್ಲಿ ಇದನ್ನು ಅಭಿವೃದ್ಧಿಪಡಿಸಲಾಗಿದೆ. ಆಂಧ್ರಪ್ರದೇಶದಲ್ಲಿ ಇನ್ನೂ ಹಲವು ಅಭಿವೃದ್ಧಿ ಯೋಜನೆಗಳನ್ನು ಮೋದಿ ಉದ್ಘಾಟಿಸಲಿದ್ದಾರೆ.
- Sushma Chakre
- Updated on: Jul 31, 2026
- 3:25 pm
PM Modi Video: ಮತ್ತೆ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಆದ ಪ್ರಧಾನಿ ಮೋದಿ; ಮಾತು ಕೊಟ್ಟಂತೆ ನಡೆದಿದ್ದೇವೆಂದು ಸೆಲ್ಫೀ ವಿಡಿಯೋ
ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ರಾತ್ರಿ ಸೆಲ್ಫಿ ವಿಡಿಯೋ ಮಾಡುವ ಮೂಲಕ ದೇಶದ ಜನರಿಗೆ ಸಂದೇಶ ರವಾನಿಸಿದ್ದಾರೆ. ಲೋಕಸಭೆ ಮತ್ತು ರಾಜ್ಯಸಭಾ ಅಧಿವೇಶನದಲ್ಲಿ ‘ಪರೀಕ್ಷಾ ಅಕ್ರಮ ತಡೆ ತಿದ್ದುಪಡಿ ವಿಧೇಯಕ’ ಅಂಗೀಕಾರಗೊಂಡಿರುವುದನ್ನು ಪ್ರಧಾನಿ ನರೇಂದ್ರ ಮೋದಿ ಸ್ವಾಗತಿಸಿದ್ದು, ಭಾರತದ ಪರೀಕ್ಷಾ ವ್ಯವಸ್ಥೆಯನ್ನು ಮತ್ತಷ್ಟು ದೃಢಗೊಳಿಸುವುದಾಗಿ ಭರವಸೆ ನೀಡಿದ್ದಾರೆ. ಅಲ್ಲದೆ, ದೇಶದಲ್ಲಿ ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆ ಗ್ಯಾಂಗ್ಗಳ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಲು ತಮ್ಮ ಸರ್ಕಾರ ಬದ್ಧವಾಗಿದೆ ಎಂದು ಪುನರುಚ್ಚರಿಸಿದ್ದಾರೆ.
- Sushma Chakre
- Updated on: Jul 30, 2026
- 11:45 pm
ಪಶ್ಚಿಮ ಏಷ್ಯಾ ಬಿಕ್ಕಟ್ಟು; ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಸಿಸಿಎಸ್ ಸಭೆ, ಇಂಧನ ಕ್ಷೇತ್ರದಲ್ಲಿ ಆತ್ಮನಿರ್ಭರತೆಗೆ ಒತ್ತು
ಪಶ್ಚಿಮ ಏಷ್ಯಾದಲ್ಲಿ ಕಳೆದ 4 ತಿಂಗಳಿಗೂ ಹೆಚ್ಚು ಕಾಲದಿಂದ ನಡೆಯುತ್ತಿರುವ ಸಂಘರ್ಷದ ಹಿನ್ನೆಲೆಯಲ್ಲಿ ಭಾರತದ ಮೇಲಾಗುವ ಪರಿಣಾಮಗಳ ಕುರಿತು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಇಂದು ಭದ್ರತಾ ಸಂಪುಟ ಸಮಿತಿಯ (CCS) ಸಭೆಯ ಅಧ್ಯಕ್ಷತೆ ವಹಿಸಿದರು. ಈ ವೇಳೆ ದೇಶದ ಇಂಧನ ಕ್ಷೇತ್ರವನ್ನು ಆತ್ಮನಿರ್ಭರಗೊಳಿಸುವ (ಸ್ವಾವಲಂಬಿ) ಅಗತ್ಯವನ್ನು ಅವರು ಒತ್ತಿ ಹೇಳಿದರು. ಪಶ್ಚಿಮ ಏಷ್ಯಾ ಸಂಘರ್ಷಕ್ಕೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ಮೋದಿಯವರ ಅಧ್ಯಕ್ಷತೆಯಲ್ಲಿ ನಡೆದ 4ನೇ ಸಿಸಿಎಸ್ ಸಭೆ ಇದಾಗಿದೆ.
- Sushma Chakre
- Updated on: Jul 30, 2026
- 8:40 pm
‘ಮೋದಿ ಕ್ಲಾಕ್ಡ್ ಇಟ್’; ಸಂಸತ್ನಲ್ಲಿ ಜೆನ್ ಜಿ ಶೈಲಿಯಲ್ಲಿ ಮಾತನಾಡಿದ ಬಿಜೆಪಿ ಸಂಸದೆ ಬಾನ್ಸುರಿ ಸ್ವರಾಜ್
ಲೋಕಸಭೆಯಲ್ಲಿ ‘ಸಾರ್ವಜನಿಕ ಪರೀಕ್ಷೆಗಳ ಅಕ್ರಮ ತಡೆ ತಿದ್ದುಪಡಿ ವಿಧೇಯಕ’ವನ್ನು ಪ್ರಬಲವಾಗಿ ಸಮರ್ಥಿಸಿಕೊಂಡ ಬಿಜೆಪಿ ಸಂಸದೆ ಬಾನ್ಸುರಿ ಸ್ವರಾಜ್, "ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಕಠಿಣ ಕಾನೂನಿನ ಅಗತ್ಯವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸಕಾಲದಲ್ಲಿ ಗುರುತಿಸಿ, ಶಾಸನಾತ್ಮಕ ಪರಿಹಾರವನ್ನು ಒದಗಿಸಿದ್ದಾರೆ. ಈ ವಿಧೇಯಕವು ವ್ಯವಸ್ಥೆಯಲ್ಲಿದ್ದ ಸುದೀರ್ಘ ಕೊರತೆಯನ್ನು ನಿವಾರಿಸುತ್ತದೆ ಮತ್ತು ಸಾರ್ವಜನಿಕ ಪರೀಕ್ಷೆಗಳಲ್ಲಿನ ಅಕ್ರಮಗಳ ವಿರುದ್ಧ ರಕ್ಷಣಾತ್ಮಕ ಕವಚವನ್ನು ಬಲಪಡಿಸುತ್ತದೆ" ಎಂದು ಹೇಳಿದ್ದಾರೆ.
- Sushma Chakre
- Updated on: Jul 28, 2026
- 9:46 pm
ಪ್ರಧಾನ್ ಅವರನ್ನು ತೆಗೆದುಹಾಕಿ ಪ್ರಧಾನ ಮಂತ್ರಿಯನ್ನು ಉಳಿಸಿಕೊಂಡಿರಿ; ಸಂಸತ್ನಲ್ಲಿ ಅಖಿಲೇಶ್ ಯಾದವ್ ವ್ಯಂಗ್ಯ
ಸಮಾಜವಾದಿ ಪಾರ್ಟಿ (SP) ಅಧ್ಯಕ್ಷ ಅಖಿಲೇಶ್ ಯಾದವ್ ಇಂದು ಸಂಸತ್ತಿನಲ್ಲಿ, ಪ್ರಧಾನ ಮಂತ್ರಿಯವರನ್ನು ಉಳಿಸಲು ಸರ್ಕಾರವು ಧರ್ಮೇಂದ್ರ ಪ್ರಧಾನ್ ಅವರನ್ನು ತೆಗೆದುಹಾಕಿದೆ ಎಂದು ಹೇಳಿದರು. "ಪ್ರಧಾನ್ ಅವರನ್ನು ತೆಗೆದುಹಾಕುವ ಮೂಲಕ ತಮ್ಮ ಪ್ರಧಾನ ಮಂತ್ರಿಯನ್ನು ಉಳಿಸಿಕೊಂಡೆವು ಎಂದು ಸರ್ಕಾರ ನಿಟ್ಟುಸಿರು ಬಿಟ್ಟಿರಬಹುದು" ಎಂದು ಅವರು ತಿಳಿಸಿದರು. "ಯುವಜನತೆ ಇಟ್ಟಿರುವ ಎಲ್ಲಾ ಬೇಡಿಕೆಗಳನ್ನು ಸರ್ಕಾರ ಸ್ವೀಕರಿಸುತ್ತದೆ ಎಂದು ನಾನು ಭಾವಿಸುತ್ತೇನೆ" ಎಂದೂ ಅವರು ಹೇಳಿದರು.
- Sushma Chakre
- Updated on: Jul 28, 2026
- 4:10 pm
ನಮೋ ಕ್ರೇಜ್; ಇನ್ಸ್ಟಾಗ್ರಾಮ್ನಲ್ಲಿ ಪ್ರಧಾನಿ ಮೋದಿಗೆ ರಾತ್ರೋರಾತ್ರಿ 1.1 ಮಿಲಿಯನ್ ಫಾಲೋವರ್ಸ್ ಹೆಚ್ಚಳ, 303 ಮಿಲಿಯನ್ ವ್ಯೂಸ್!
ಭಾರತದ ಪ್ರಧಾನಿ ನರೇಂದ್ರ ಮೋದಿ ಕ್ರೇಜ್ ಮತ್ತೊಮ್ಮೆ ಸಾಮಾಜಿಕ ಮಾಧ್ಯಮ ಜಗತ್ತಿನಲ್ಲಿ ಪ್ರಮುಖ ಆಕರ್ಷಣೆಯಾಗಿದೆ. ಇನ್ಸ್ಟಾಗ್ರಾಮ್ನಲ್ಲಿ ಅವರ ಅನುಯಾಯಿಗಳ ಸಂಖ್ಯೆ ಕೆಲವೇ ನಿಮಿಷಗಳಲ್ಲಿ ಗಗನಕ್ಕೇರಿದೆ. ಕೇವಲ 12 ಗಂಟೆಗಳಲ್ಲಿ ಮೋದಿ ಅವರ ಇನ್ಸ್ಟಾಗ್ರಾಂ ಖಾತೆಗೆ 1.1 ಮಿಲಿಯನ್ ಅನುಯಾಯಿಗಳು ಹೆಚ್ಚಾಗಿದ್ದಾರೆ. ಗುರುವಾರ ಮಧ್ಯರಾತ್ರಿ ಪ್ರಧಾನಿ ಮೋದಿ ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯ ಕುರಿತು ಪ್ರಮುಖ ಘೋಷಣೆ ಮಾಡಿದ್ದರು. ಅವರ ಈ ಸೆಲ್ಫೀ ವಿಡಿಯೋ ಬಳಿಕ ಫಾಲೋವರ್ಗಳ ಸಂಖ್ಯೆ ಭಾರೀ ಹೆಚ್ಚಾಗಿದೆ.
- Sushma Chakre
- Updated on: Jul 25, 2026
- 9:31 am