AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prime Minister Of India

Prime Minister Of India

ಭಾರತ ಪ್ರಜಾತಂತ್ರ ವ್ಯವಸ್ಥೆಯ ನಾಯಕನೆಂದರೆ ಪ್ರಧಾನಿ. ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಒಂದಕ್ಕೆ ನಾಯಕರಾಗಿರುವ ಪ್ರಧಾನಿಗೆ ಐದು ವರ್ಷ ಶಾಸನಬದ್ಧ ಅಧಿಕಾರವಿರುತ್ತದೆ. ಲೋಕಸಭೆಯಲ್ಲಿ ಬಹುಮತ ಹೊಂದಿರುವ ಪಕ್ಷ ಅಥವಾ ಒಕ್ಕೂಟದ ಸದಸ್ಯರ ನಾಯಕನೇ ಪ್ರಧಾನಿ ಆಗಲಿದ್ದು, ಭಾರತವು ಸಧ್ಯಕ್ಕೆ 14ನೇ ಪ್ರಧಾನಿಯನ್ನು ಹೊಂದಿದೆ.

ಭಾರತದಲ್ಲಿ ಒಬ್ಬ ವ್ಯಕ್ತಿ ಎಷ್ಟು ವರ್ಷ ಅಥವಾ ಎಷ್ಟು ಅವಧಿಗೆ ಪ್ರಧಾನಿ ಆಗಬಹುದು ಎನ್ನುವ ಯಾವುದೇ ಮಿತಿಯಿಲ್ಲ. ಐದು ವರ್ಷಕ್ಕೊಮ್ಮೆ ನಡೆಯುವ ಚುನಾವಣೆಯಲ್ಲಿ ಪ್ರಧಾನಿ ಆಗುವ ಪಕ್ಷ ಅಥವಾ ಒಕ್ಕೂಟ ಗೆಲುವು ಸಾಧಿಸಿದರೆ ಸಾಕಾಗುತ್ತದೆ. ಜವಾಹರ್‌ಲಾಲ್‌ ನೆಹರು ಅವರು ಭಾರತದ ಮೊದಲ ಪ್ರಧಾನಿ ಆಗಿದ್ದರು. ಬಳಿಕ ಲಾಲ್‌ಬಹದ್ದೂರ್‌ ಶಾಸ್ತ್ರೀ, ಇಂದಿರಾ ಗಾಂಧಿ ಪ್ರಧಾನಿ ಆಗಿದ್ದರು.

ಮೊರಾರ್ಜಿ ದೇಸಾಯಿ ಅವರು ದೇಶದ ಮೊದಲ ಕಾಂಗ್ರೆಸ್ಸೇತರ ಪ್ರಧಾನಿಯಾದರೇ, ಇಂದಿರಾ ಅವರು ಮೊದಲ ಮಹಿಳಾ ಪ್ರಧಾನಿ ಎನಿಸಿಕೊಂಡರು. ಬಳಿಕ ರಾಜೀವ್‌ ಗಾಂಧಿ, ವಿ.ಪಿ ಸಿಂಗ್‌, ಚಂದ್ರಶೇಖರ್‌, ಪಿ.ವಿ ನರಸಿಂಹರಾವ್‌, ಅಟಲ್‌ ಬಿಹಾರಿ ವಾಜಪೇಯಿ, ಎಚ್‌.ಡಿ ದೇವೇಗೌಡ, ಐ.ಕೆ ಗುಜ್ರಾಲ್‌, ಮನಮೋಹನ್‌ ಸಿಂಗ್‌ ಈ ಹುದ್ದೆಯನ್ನು ಏರಿದರು.

2014ರಿಂದ ನರೇಂದ್ರ ಮೋದಿಯು ಪ್ರಧಾನಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಭಾರತದ ಸಂವಿಧಾನಬದ್ಧ ಪ್ರಜಾತಂತ್ರ ವ್ಯವಸ್ಥೆಯಲ್ಲಿ ರಾಷ್ಟ್ರಪತಿಯು ಮೊದಲ ಪ್ರಜೆಯಾಗಿದ್ದರೂ, ಆಡಳಿತಾತ್ಮಕವಾಗಿ ಪ್ರಧಾನಿಯೇ ದೇಶದ ಅತ್ಯಂತ ಪ್ರಭಾವಿ ವ್ಯಕ್ತಿ.

ಇನ್ನೂ ಹೆಚ್ಚು ಓದಿ

ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ

ನವದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನೂತನ ಪದಾಧಿಕಾರಿಗಳನ್ನು ಭೇಟಿಯಾದರು. ಈ ವೇಳೆ ಪ್ರಧಾನಿಯವರು ನೂತನವಾಗಿ ನೇಮಕಗೊಂಡ ರಾಷ್ಟ್ರೀಯ ಪದಾಧಿಕಾರಿಗಳೊಂದಿಗೆ ಗ್ರೂಪ್ ಫೋಟೋಗೆ ಪೋಸ್ ನೀಡಿದರು. ಪಕ್ಷವು ಹೊಸ ಸಾಂಸ್ಥಿಕ ಹಾಗೂ ಯುವ ಕೇಂದ್ರಿತ ಸಂಪರ್ಕ ಅಭಿಯಾನಗಳನ್ನು ಪ್ರಾರಂಭಿಸಲು ಸಿದ್ಧತೆ ನಡೆಸುತ್ತಿರುವಾಗ ಈ ಸಭೆ ನಡೆದಿದೆ. ಕಾರ್ಯಕ್ರಮದ ಸ್ಥಳಕ್ಕೆ ಆಗಮಿಸಿದ ಪ್ರಧಾನಿಯವರನ್ನು ಬಿಜೆಪಿ ಅಧ್ಯಕ್ಷ ನಿತಿನ್ ನವೀನ್ ಅವರು ಸ್ವಾಗತಿಸಿದರು.

ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ಆನ್​ಲೈನ್ ತರಬೇತಿಯ ಜಾರಿ ಬಗ್ಗೆ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ಸಭೆ

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಉಚಿತ ಆನ್‌ಲೈನ್ ತರಬೇತಿ ಜಾರಿ ಪರಿಶೀಲಿಸಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಶಿಕ್ಷಣ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧರಾಗುತ್ತಿರುವ ಯುವಜನತೆಗೆ ಉಚಿತ ಆನ್‌ಲೈನ್ ತರಬೇತಿ ನೀಡುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಭಿಯಾನದ ಅನುಷ್ಠಾನದ ಕುರಿತು ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ಇಂದು (ಬುಧವಾರ) ಹಿರಿಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಪರಿಶೀಲನಾ ಸಭೆ ನಡೆಸಿದರು.

‘ವೈಚಾರಿಕ ನಕ್ಸಲರನ್ನು ಗುರುತಿಸಿ, ಬಹಿಷ್ಕರಿಸಬೇಕು’; ಪ್ರಧಾನಿ ಮೋದಿ ವಾಗ್ದಾಳಿ

2014ರಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಸಮಯವನ್ನು ಸ್ಮರಿಸಿದ ಪ್ರಧಾನಿ ಮೋದಿ, "ನಕ್ಸಲಿಸಂ ಈ ಭೂಮಿಯನ್ನು ರಕ್ತಸಿಕ್ತಗೊಳಿಸಿತ್ತು. ಆಗ ದೇಶವನ್ನು ನಕ್ಸಲಿಸಂನಿಂದ ಮುಕ್ತಗೊಳಿಸಲು ನಮ್ಮ ಸರ್ಕಾರ ಸಂಕಲ್ಪ ಮಾಡಿತ್ತು. ಒಮ್ಮೆ ನಕ್ಸಲೈಟ್ ಹಿಂಸಾಚಾರಕ್ಕೆ ಹೆಸರಾಗಿದ್ದ ಪ್ರದೇಶಗಳು ಈಗ ಅಭಿವೃದ್ಧಿ ಮತ್ತು ಹೆಚ್ಚಿನ ವಿಶ್ವಾಸಕ್ಕೆ ಸಾಕ್ಷಿಯಾಗುತ್ತಿವೆ. ಒಂದು ಕಾಲದಲ್ಲಿ ಎಲ್ಲಿ ನಕ್ಸಲೈಟ್ ಗುಂಡುಗಳು ಹಾರುತ್ತಿದ್ದವೋ, ಎಲ್ಲಿ ಒಮ್ಮೆ ಭೂಮಿ ರಕ್ತಸಿಕ್ತವಾಗುತ್ತಿತ್ತೋ, ಇಂದು ಅದೇ ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಅಭಿವೃದ್ಧಿ ಮತ್ತು ಶ್ರಮದ ತ್ರಿವರ್ಣ ಧ್ವಜ ಹಾರಾಡುತ್ತಿದೆ" ಎಂದು ಮೋದಿ ಹೇಳಿದರು.

PM Modi Speech: ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ಕೋಚಿಂಗ್ ಕ್ಲಾಸ್; ಪ್ರಧಾನಿ ಮೋದಿ ಮಾಡಿದ ಪ್ರಮುಖ ಘೋಷಣೆಗಳಿವು

ದೆಹಲಿಯ ಕೆಂಪುಕೋಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ನರೇಂದ್ರ ಮೋದಿ ಅನೇಕ ಪ್ರಮುಖ ಘೋಷಣೆಗಳನ್ನು ಮಾಡಿದ್ದಾರೆ. ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ಯುವಜನರಿಗೆ ಉಚಿತ ಆನ್‌ಲೈನ್ ಕೋಚಿಂಗ್ (ತರಬೇತಿ) ನೀಡುವುದಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಇದು ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮೇಲಿನ ಆರ್ಥಿಕ ಹೊರೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದು ಅವರು ಹೇಳಿದ್ದಾರೆ.

Saptadhara: ಸಪ್ತಧಾರಾ; ಸ್ವಾತಂತ್ರ್ಯ ದಿನಾಚರಣೆ ಭಾಷಣದಲ್ಲಿ ಪ್ರಧಾನಿ ಮೋದಿ ಘೋಷಿಸಿದ ‘ವಿಕಸಿತ ಭಾರತ’ದ 7 ಸುಧಾರಣೆಗಳಿವು

80ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ, ಭಾರತದ ಮುಂದಿನ ಹಂತದ ಪ್ರಗತಿಯನ್ನು ಮುನ್ನಡೆಸಲಿರುವ 7 ಪ್ರಮುಖ ಶಕ್ತಿಗಳನ್ನೊಳಗೊಂಡ 'ಸಪ್ತಧಾರಾ' ಸುಧಾರಣೆಗಳನ್ನು ಘೋಷಿಸಿದ್ದಾರೆ. ಅಭಿವೃದ್ಧಿ ಹೊಂದಿದ ಮತ್ತು ಸ್ವಾವಲಂಬಿ ಭಾರತದ ಕನಸನ್ನು ಸಾಕಾರಗೊಳಿಸಲು ಕೊಡುಗೆ ನೀಡುವಂತೆ ದೇಶದ ಪ್ರಜೆಗಳಿಗೆ ಕರೆ ನೀಡಿದ ಪ್ರಧಾನಿ ಮೋದಿ, 2047ರ ವೇಳೆಗೆ 'ವಿಕಸಿತ ಭಾರತ' ಸಾಧಿಸುವ ಗುರಿಯಲ್ಲಿ ಈ 7 ಸ್ತಂಭಗಳು ಅತ್ಯಂತ ನಿರ್ಣಾಯಕ ಪಾತ್ರ ವಹಿಸಲಿವೆ ಎಂದು ಹೇಳಿದರು.

ಪರಮಾಣು ಶಕ್ತಿಯಲ್ಲೂ ಭಾರತ ಸ್ವಾವಲಂಬಿಯಾಗಲಿದೆ; ಪ್ರಧಾನಿ ಮೋದಿ ಭರವಸೆ

"ಇಂಧನ ಭದ್ರತೆಯನ್ನು ಖಚಿತಪಡಿಸಿಕೊಳ್ಳುವ ಪ್ರಮುಖ ಮಾರ್ಗವೆಂದರೆ ಅಣುಶಕ್ತಿ. 2047ರ ವೇಳೆಗೆ ನಾವು 100 ಗಿಗಾವ್ಯಾಟ್ ಅಣುಶಕ್ತಿ ಉತ್ಪಾದನಾ ಸಾಮರ್ಥ್ಯವನ್ನು ಹೊಂದಲಿದ್ದೇವೆ. ಈ ಗುರಿಯತ್ತ ನಾವು ಕಾರ್ಯನಿರ್ವಹಿಸುತ್ತಿದ್ದೇವೆ. ಇದೇ ದಶಕದಲ್ಲಿ, ನಾವು 5 ಹೊಸ ಅಣು ರಿಯಾಕ್ಟರ್‌ಗಳ ಕಾರ್ಯಾಚರಣೆಯನ್ನು ಪ್ರಾರಂಭಿಸಲಿದ್ದೇವೆ. ಅವುಗಳನ್ನು ಕಾರ್ಯಗತಗೊಳಿಸಲು ನಾವು ಗುರಿಯನ್ನು ನಿಗದಿಪಡಿಸಿದ್ದೇವೆ" ಎಂದು ಅವರು ಹೇಳಿದರು.

PM Modi Speech: ‘ಭಾರತ ಬೇರೆ ದೇಶಗಳ ಮೇಲೆ ಅವಲಂಬಿತವಾಗಬಾರದು’; ಕೆಂಪುಕೋಟೆಯಲ್ಲಿ ಮೋದಿಯಿಂದ ಆತ್ಮನಿರ್ಭರದ ಘೋಷಣೆ

80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೆಂಪು ಕೋಟೆಯಿಂದ ತಮ್ಮ ಸಾಂಪ್ರದಾಯಿಕ ಭಾಷಣವನ್ನು ಪ್ರಾರಂಭಿಸಿದ್ದಾರೆ. ಅವರು ದೇಶವಾಸಿಗಳಿಗೆ ಶುಭಾಶಯ ಕೋರಿದರು ಮತ್ತು ಸ್ವಾತಂತ್ರ್ಯ ಹೋರಾಟಗಾರರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ದೆಹಲಿಯಲ್ಲಿ ನಡೆಯುತ್ತಿರುವ ಸ್ವಾತಂತ್ರ್ಯ ದಿನಾಚರಣೆಯು ಸಾಂಪ್ರದಾಯಿಕ ಆಚರಣೆಗಳು ಮತ್ತು ಪಥಸಂಚಲನವನ್ನು (ಪರೇಡ್) ಒಳಗೊಂಡಿದ್ದು, ಈ ವರ್ಷದ ಕಾರ್ಯಕ್ರಮವು 'ವಂದೇ ಮಾತರಂ' ಗೀತೆಯ 150 ವರ್ಷಗಳ ಸಂಭ್ರಮವನ್ನು ವಿಶೇಷವಾಗಿ ಎತ್ತಿಹಿಡಿಯುತ್ತಿದೆ. ಇದೇ ಮೊದಲ ಬಾರಿಗೆ, ಕೆಂಪು ಕೋಟೆಯಲ್ಲಿ ರಾಷ್ಟ್ರಗೀತೆಗಿಂತ ಮೊದಲು 'ವಂದೇ ಮಾತರಂ' ಗೀತೆಯನ್ನು ಹಾಡಲಾಯಿತು. ಪ್ರಧಾನಿ ಮೋದಿಯ ಭಾಷಣದ ಪ್ರಮುಖಾಂಶಗಳು ಇಲ್ಲಿವೆ.

80ನೇ ಸ್ವಾತಂತ್ರ್ಯ ದಿನಾಚರಣೆ; ರಾಜ್‌ಘಾಟ್‌ನಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಸಮಾಧಿಗೆ ಪ್ರಧಾನಿ ಮೋದಿ ಪುಷ್ಪ ನಮನ

ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ದೇಶಕ್ಕೆ ದಾರಿ ತೋರಿದ ಮಹಾತ್ಮ ಗಾಂಧೀಜಿಯವರ ತ್ಯಾಗವನ್ನು ಸ್ಮರಿಸುವುದು ಸ್ವಾತಂತ್ರ್ಯ ದಿನದ ಆಚರಣೆಯ ಮೊದಲ ಮತ್ತು ಪ್ರಮುಖ ಭಾಗವಾಗಿದೆ. ರಾಜ್‌ಘಾಟ್‌ನಲ್ಲಿ ನಮನ ಸಲ್ಲಿಸಿದ ನಂತರ, ಪ್ರಧಾನಿಯವರು ಚಾರಿತ್ರಿಕ ಕೆಂಪು ಕೋಟೆಗೆ ಆಗಮಿಸಿ, ರಾಷ್ಟ್ರಧ್ವಜಾರೋಹಣ ನೆರವೇರಿಸಿ ದೇಶವನ್ನು ಉದ್ದೇಶಿಸಿ ಭಾಷಣ ಮಾಡುತ್ತಾರೆ.

ಗಾಂಧಿ ಸರ್​​ನೇಮ್ ಹೆಸರಿಟ್ಟುಕೊಂಡು ಇಷ್ಟು ಕೀಳು ಹೇಳಿಕೆ ನೀಡೋದಾ?; ರಾಹುಲ್ ವಿರುದ್ಧ ರಾಜನಾಥ್ ಸಿಂಗ್ ವಾಗ್ದಾಳಿ

ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಭಾರತದ ವಿದೇಶಾಂಗ ನೀತಿಯ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೀಡಿರುವ ಹೇಳಿಕೆಗಳನ್ನು "ತುಚ್ಛ ಹಾಗೂ ಖಂಡನೀಯ" ಎಂದು ಕರೆದಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಈ ಹೇಳಿಕೆಗಳು ಲೋಕಸಭೆಯ ವಿರೋಧ ಪಕ್ಷದ ನಾಯಕನ ಸ್ಥಾನದ ಘನತೆಯನ್ನು ತಗ್ಗಿಸಿವೆ ಎಂದು ಶುಕ್ರವಾರ ತೀವ್ರವಾಗಿ ಖಂಡಿಸಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ. ತಮ್ಮ ಸುದೀರ್ಘ ರಾಜಕೀಯ ಜೀವನದಲ್ಲಿ ವಿರೋಧ ಪಕ್ಷದ ನಾಯಕನೊಬ್ಬನಿಂದ ಇಂತಹ ಅಸಭ್ಯ ಮತ್ತು ಊಹಿಸಲೂ ಸಾಧ್ಯವಾಗದ ನಡವಳಿಕೆಯನ್ನು ಎಂದಿಗೂ ನೋಡಿರಲಿಲ್ಲ ಎಂದು ರಾಜನಾಥ್ ಸಿಂಗ್ ಹೇಳಿದರು.

“ಇಟಲಿಯೊಂದಿಗೆ ಬಲವಾದ ಸಂಬಂಧವಿದೆ”; ಮೆಲೋನಿ ಕುರಿತ ಕಾಂಗ್ರೆಸ್​​ ಟೀಕೆಗೆ ಕೇಂದ್ರ ಸರ್ಕಾರ ತಿರುಗೇಟು

ಇತ್ತೀಚಿನ ವರ್ಷಗಳಲ್ಲಿ ಎರಡು ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧಗಳು ಮತ್ತಷ್ಟು ಗಟ್ಟಿಗೊಂಡಿವೆ ಮತ್ತು ವಿಸ್ತರಿಸಿವೆ ಎಂದು ಹೇಳುವ ಮೂಲಕ ಭಾರತ ಮತ್ತು ಇಟಲಿ ನಡುವಿನ ಬಾಂಧವ್ಯವನ್ನು ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಸಮರ್ಥಿಸಿಕೊಂಡಿದೆ. ನರೇಂದ್ರ ಮೋದಿ ಸರ್ಕಾರದ ವಿದೇಶಾಂಗ ನೀತಿ ಹಾಗೂ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರೊಂದಿಗಿನ ಸಂಬಂಧವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಕ್ಕೆ ಪ್ರತಿಕ್ರಿಯೆಯಾಗಿ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಈ ಹೇಳಿಕೆ ನೀಡಿದ್ದಾರೆ.

ಪಶ್ಚಿಮ ಏಷ್ಯಾ ಯುದ್ಧ ಆರಂಭವಾದ ಬಳಿಕ ಮೊದಲ ಬಾರಿ ಭಾರತಕ್ಕೆ ಇರಾನ್ ಅಧ್ಯಕ್ಷ ಭೇಟಿ

ಮುಂದಿನ ತಿಂಗಳು ನವದೆಹಲಿಯಲ್ಲಿ ನಡೆಯಲಿರುವ 'ಬ್ರಿಕ್ಸ್ ಶೃಂಗಸಭೆ'ಯಲ್ಲಿ (BRICS Summit) ಪಾಲ್ಗೊಳ್ಳಲು ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯನ್ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ ತಿಂಗಳಿನಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ನಡೆಯಲಿರುವ ಬ್ರಿಕ್ಸ್ ಶೃಂಗಸಭೆಯಲ್ಲಿ ಪೆಜೆಶ್ಕಿಯನ್ ಭಾಗವಹಿಸಲಿದ್ದಾರೆ ಎಂದು ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ. ಭಾರತದ ಅಧ್ಯಕ್ಷತೆಯಲ್ಲಿ 18ನೇ ಬ್ರಿಕ್ಸ್ ಶೃಂಗಸಭೆಯನ್ನು ಆಯೋಜಿಸಿರುವುದರಿಂದ ಇರಾನ್ ಅಧ್ಯಕ್ಷರ ಈ ಭೇಟಿ ಪ್ರಮುಖ ಪ್ರಾಮುಖ್ಯತೆಯನ್ನು ಪಡೆದುಕೊಂಡಿದೆ.

ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ದೆಹಲಿ ವಿಮಾನ ನಿಲ್ದಾಣ, ಹೈಕೋರ್ಟ್, ಕೆಂಪುಕೋಟೆಗೆ ಬಾಂಬ್ ಬೆದರಿಕೆ!

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮಕ್ಕೆ ರಾಷ್ಟ್ರ ರಾಜಧಾನಿ ದೆಹಲಿ ಸಜ್ಜಾಗುತ್ತಿರುವ ಬೆನ್ನಲ್ಲೇ ಇಂದು (ಶುಕ್ರವಾರ) ದೆಹಲಿ ವಿಮಾನ ನಿಲ್ದಾಣ, ದೆಹಲಿ ಹೈಕೋರ್ಟ್ ಮತ್ತು ಕೆಂಪುಕೋಟೆ ಸೇರಿದಂತೆ ಹಲವು ಪ್ರಮುಖ ಸ್ಥಳಗಳಿಗೆ ಬಾಂಬ್ ಬೆದರಿಕೆಯ ಇಮೇಲ್ ಹಾಗೂ ಕರೆಗಳು ಬಂದಿದ್ದು, ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಆಗಸ್ಟ್ 15ರಂದು ಭಾರಿ ಸ್ಫೋಟ ನಡೆಸುವುದಾಗಿ ಮತ್ತು ದೆಹಲಿಯ ಹಲವು ಸ್ಥಳಗಳನ್ನು ಗುರಿಯಾಗಿಸುವುದಾಗಿ ಬೆದರಿಕೆಯ ಇಮೇಲ್‌ನಲ್ಲಿ ಎಚ್ಚರಿಸಲಾಗಿದೆ. ಅಧಿಕಾರಿಗಳು ತಕ್ಷಣವೇ ಕಾರ್ಯಪ್ರವೃತ್ತರಾಗಿ ಎಲ್ಲಾ ಸ್ಥಳಗಳಲ್ಲಿ ತೀವ್ರ ಶೋಧ ಕಾರ್ಯಾಚರಣೆ ನಡೆಸಿದ್ದು, ಇದುವರೆಗೆ ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ.

ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!