AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prime Minister Of India

Prime Minister Of India

ಭಾರತ ಪ್ರಜಾತಂತ್ರ ವ್ಯವಸ್ಥೆಯ ನಾಯಕನೆಂದರೆ ಪ್ರಧಾನಿ. ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಒಂದಕ್ಕೆ ನಾಯಕರಾಗಿರುವ ಪ್ರಧಾನಿಗೆ ಐದು ವರ್ಷ ಶಾಸನಬದ್ಧ ಅಧಿಕಾರವಿರುತ್ತದೆ. ಲೋಕಸಭೆಯಲ್ಲಿ ಬಹುಮತ ಹೊಂದಿರುವ ಪಕ್ಷ ಅಥವಾ ಒಕ್ಕೂಟದ ಸದಸ್ಯರ ನಾಯಕನೇ ಪ್ರಧಾನಿ ಆಗಲಿದ್ದು, ಭಾರತವು ಸಧ್ಯಕ್ಕೆ 14ನೇ ಪ್ರಧಾನಿಯನ್ನು ಹೊಂದಿದೆ.

ಭಾರತದಲ್ಲಿ ಒಬ್ಬ ವ್ಯಕ್ತಿ ಎಷ್ಟು ವರ್ಷ ಅಥವಾ ಎಷ್ಟು ಅವಧಿಗೆ ಪ್ರಧಾನಿ ಆಗಬಹುದು ಎನ್ನುವ ಯಾವುದೇ ಮಿತಿಯಿಲ್ಲ. ಐದು ವರ್ಷಕ್ಕೊಮ್ಮೆ ನಡೆಯುವ ಚುನಾವಣೆಯಲ್ಲಿ ಪ್ರಧಾನಿ ಆಗುವ ಪಕ್ಷ ಅಥವಾ ಒಕ್ಕೂಟ ಗೆಲುವು ಸಾಧಿಸಿದರೆ ಸಾಕಾಗುತ್ತದೆ. ಜವಾಹರ್‌ಲಾಲ್‌ ನೆಹರು ಅವರು ಭಾರತದ ಮೊದಲ ಪ್ರಧಾನಿ ಆಗಿದ್ದರು. ಬಳಿಕ ಲಾಲ್‌ಬಹದ್ದೂರ್‌ ಶಾಸ್ತ್ರೀ, ಇಂದಿರಾ ಗಾಂಧಿ ಪ್ರಧಾನಿ ಆಗಿದ್ದರು.

ಮೊರಾರ್ಜಿ ದೇಸಾಯಿ ಅವರು ದೇಶದ ಮೊದಲ ಕಾಂಗ್ರೆಸ್ಸೇತರ ಪ್ರಧಾನಿಯಾದರೇ, ಇಂದಿರಾ ಅವರು ಮೊದಲ ಮಹಿಳಾ ಪ್ರಧಾನಿ ಎನಿಸಿಕೊಂಡರು. ಬಳಿಕ ರಾಜೀವ್‌ ಗಾಂಧಿ, ವಿ.ಪಿ ಸಿಂಗ್‌, ಚಂದ್ರಶೇಖರ್‌, ಪಿ.ವಿ ನರಸಿಂಹರಾವ್‌, ಅಟಲ್‌ ಬಿಹಾರಿ ವಾಜಪೇಯಿ, ಎಚ್‌.ಡಿ ದೇವೇಗೌಡ, ಐ.ಕೆ ಗುಜ್ರಾಲ್‌, ಮನಮೋಹನ್‌ ಸಿಂಗ್‌ ಈ ಹುದ್ದೆಯನ್ನು ಏರಿದರು.

2014ರಿಂದ ನರೇಂದ್ರ ಮೋದಿಯು ಪ್ರಧಾನಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಭಾರತದ ಸಂವಿಧಾನಬದ್ಧ ಪ್ರಜಾತಂತ್ರ ವ್ಯವಸ್ಥೆಯಲ್ಲಿ ರಾಷ್ಟ್ರಪತಿಯು ಮೊದಲ ಪ್ರಜೆಯಾಗಿದ್ದರೂ, ಆಡಳಿತಾತ್ಮಕವಾಗಿ ಪ್ರಧಾನಿಯೇ ದೇಶದ ಅತ್ಯಂತ ಪ್ರಭಾವಿ ವ್ಯಕ್ತಿ.

ಇನ್ನೂ ಹೆಚ್ಚು ಓದಿ

ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹೌರಾದಲ್ಲಿ ಬೃಹತ್ ರೋಡ್ ಶೋ ನಡೆಸಿದರು. ಅವರಿಗೆ ಅಭೂತಪೂರ್ವ ಸ್ವಾಗತ ನೀಡಲಾಯಿತು. ಪ್ರಧಾನಿ ಮೋದಿಯವರ ಮುಖವಿರುವ ಮಾಸ್ಕ್ ಧರಿಸಿದ್ದ ಜನರು ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಇದಕ್ಕೂ ಮುನ್ನ ಮಥುರಾಪುರದಲ್ಲಿ ನಡೆದ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಟಿಎಂಸಿ ಬಂಗಾಳದ ಮಹಿಳೆಯರ ಹಕ್ಕುಗಳನ್ನು ಕಸಿದುಕೊಂಡಿದೆ ಎಂದು ಆರೋಪಿಸಿದರು.

ಝಲ್ಮುರಿ ತಿಂದಿದ್ದು ನಾನು, ಖಾರವಾಗಿದ್ದು ಟಿಎಂಸಿಗೆ: ಬಂಗಾಳದಲ್ಲಿ ಪ್ರಧಾನಿ ಮೋದಿ ಲೇವಡಿ

ಪ್ರಧಾನಿ ನರೇಂದ್ರ ಮೋದಿ ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡಿದ್ದಾರೆ. ಈ ವೇಳೆ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಸರ್ಕಾರವನ್ನು ಮೋದಿ ಟೀಕಿಸಿದ್ದಾರೆ. ಕಳೆದ ಬಾರಿ ಬಂಗಾಳಕ್ಕೆ ಬಂದಾಗ ನಾನು ಝಲ್ಮುರಿ ತಿಂದಿದ್ದೆ. ಆದರೆ, ತೃಣಮೂಲ ಪಕ್ಷ ಅದರ ಖಾರ ಅನುಭವಿಸಿತು ಎಂದು ಬಂಗಾಳದಲ್ಲಿ ಮೋದಿ ವಾಗ್ದಾಳಿ ನಡೆಸಿದ್ದಾರೆ. 152 ಕ್ಷೇತ್ರಗಳಲ್ಲಿ ನಡೆಯುತ್ತಿರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತದಲ್ಲಿ ಒಟ್ಟಾರೆ ಶಾಂತಿಯುತ ಮತ್ತು ಹಿಂಸಾಚಾರ ಮುಕ್ತ ಚುನಾವಣೆಯನ್ನು ನಡೆಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಆಯೋಗಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮೋದಿಯನ್ನು ಭಯೋತ್ಪಾದಕ ಎಂದ ಮಲ್ಲಿಕಾರ್ಜುನ ಖರ್ಗೆಗೆ ಚುನಾವಣಾ ಆಯೋಗದಿಂದ ನೋಟಿಸ್

ಪ್ರಧಾನಿ ನರೇಂದ್ರ ಮೋದಿಯ ವಿರುದ್ಧ ಭಯೋತ್ಪಾದಕ ಎಂಬ ಹೇಳಿಕೆ ನೀಡಿದ್ದಕ್ಕಾಗಿ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಚುನಾವಣಾ ಆಯೋಗ ನೋಟಿಸ್ ಜಾರಿ ಮಾಡಿದೆ. ಈ ವಿಷಯವನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ಚುನಾವಣಾ ಆಯೋಗ ಹೇಳಿದೆ. . ಪ್ರಧಾನಿ ಮೋದಿ ಅವರನ್ನು ಅವಮಾನಿಸಿದ್ದಕ್ಕಾಗಿ ಹಿರಿಯ ಕಾಂಗ್ರೆಸ್ ನಾಯಕ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ದಾಖಲಿಸಿತ್ತು.

ಇನ್ನೆಷ್ಟು ದಿನ ಜನರ ದಾರಿ ತಪ್ಪಿಸುತ್ತೀರಿ? ಖರ್ಗೆ ವಿರುದ್ಧ ಪ್ರಲ್ಹಾದ್ ಜೋಶಿ ವಾಗ್ದಾಳಿ

ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನೀಡಿದ ಹೇಳಿಕೆ ತೀವ್ರ ವಿವಾದಕ್ಕೆ ಕಾರಣವಾಗಿದೆ. ಪ್ರಧಾನಿ ಮೋದಿಯೊಬ್ಬ ಭಯೋತ್ಪಾದಕ. ಅವರೊಂದಿಗೆ ಎಐಎಡಿಎಂಕೆ ಯಾಕೆ ಕೈ ಜೋಡಿಸಿದೆ ಎಂಬುದು ಅರ್ಥವಾಗುತ್ತಿಲ್ಲ ಎಂದು ತಮಿಳುನಾಡಿನ ಚೆನ್ನೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದರು. ಇದು ತೀವ್ರ ವಿವಾದ ಸೃಷ್ಟಿಸಿತ್ತು. ಈ ಹೇಳಿಕೆಯ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕೂಡ ಕಿಡಿಕಾರಿದ್ದಾರೆ. ಮಲ್ಲಿಕಾರ್ಜುನ ಖರ್ಗೆಯವರು ವಿಪಕ್ಷದ ಅಧ್ಯಕ್ಷ ಸ್ಥಾನದ ಘನತೆ ಮರೆತು ಕೀಳು ಮಟ್ಟದ ಹೇಳಿಕೆ ನೀಡುತ್ತಿದ್ದಾರೆ ಎಂದು ಪ್ರಲ್ಹಾದ್ ಜೋಶಿ ಟೀಕಿಸಿದ್ದಾರೆ.

ಗಾಂಧಿ ಕುಟುಂಬವನ್ನು ಸಂತೋಷಪಡಿಸಲು ನಿಮ್ಮ ಘನತೆ ಕಳೆದುಕೊಂಡಿರಿ; ಖರ್ಗೆಗೆ ಯಡಿಯೂರಪ್ಪ ತಿರುಗೇಟು

ಪ್ರಧಾನಿ ನರೇಂದ್ರ ಮೋದಿ ಭಯೋತ್ಪಾದಕ ಎಂಬ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗೆ ಕರ್ನಾಟಕದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ. ಎಕ್ಸ್​ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ ಯಡಿಯೂರಪ್ಪ, ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿದ ಹೇಳಿಕೆಯಿಂದ ತೀರಾ ಕೆಳಮಟ್ಟದ ಹಾಗೂ ದುರಹಂಕಾರದ ಪರಮಾವಧಿ ಮಾತ್ರವಲ್ಲ ಕೊಳಕು ಹಾಗೂ ವಿಷಕಾರಿ ಮನಸ್ಥಿತಿ ಅನಾವರಣವಾಗಿದೆ ಎಂದಿದ್ದಾರೆ.

ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದ ಮಲ್ಲಿಕಾರ್ಜುನ ಖರ್ಗೆ; ಕ್ಷಮೆಯಾಚನೆಗೆ ಬಿಜೆಪಿ ಒತ್ತಾಯ

ಪ್ರಧಾನಿ ನರೇಂದ್ರ ಮೋದಿ ಓರ್ವ ಭಯೋತ್ಪಾದಕ ಎಂದು ಹೇಳಿಕೆ ನೀಡುವ ಮೂಲಕ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ತಮಿಳುನಾಡಿನ ಚೆನ್ನೈನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ನರೇಂದ್ರ ಮೋದಿ ಓರ್ವ ಭಯೋತ್ಪಾದಕ. ವಿಧಾನಸಭಾ ಚುನಾವಣೆಯಲ್ಲಿ ಅವರೊಂದಿಗೆ ಎಐಎಡಿಎಂಕೆ ಮೈತ್ರಿ ಮಾಡಿಕೊಂಡಿದ್ದು ಏಕೆಂದು ತಿಳಿಯುತ್ತಿಲ್ಲ ಎಂದು ಟೀಕಿಸಿದ್ದಾರೆ. ಈ ಹೇಳಿಕೆಗೆ ಬಿಜೆಪಿಯಿಂದ ತೀವ್ರ ವಿರೋಧ ವ್ಯಕ್ತವಾಗಿದ್ದು, ಕೂಡಲೇ ಬಹಿರಂಗವಾಗಿ ಕ್ಷಮೆ ಯಾಚಿಸಬೇಕೆಂದು ಒತ್ತಾಯಿಸಿದೆ.

ಪ್ರಧಾನಿ ಮೋದಿಯಿಂದ ಉದ್ಘಾಟನೆಗೂ ಮೊದಲೇ ರಾಜಸ್ಥಾನದ ತೈಲ ಸಂಸ್ಕರಣಾಗಾರದಲ್ಲಿ ಬೆಂಕಿ ಅವಘಡ

ಪ್ರಧಾನಿ ನರೇಂದ್ರ ಮೋದಿ ನಾಳೆ (ಮಂಗಳವಾರ) ರಾಜಸ್ಥಾನದಲ್ಲಿ ಭಾರತದ ಪ್ರಮುಖ ಕಚ್ಚಾ ತೈಲ ಸಂಸ್ಕರಣಾಗಾರವನ್ನು ಉದ್ಘಾಟಿಸಬೇಕಾಗಿತ್ತು. ಆದರೆ, ಅದಕ್ಕೂ ಮೊದಲೇ ಆ ಸಂಸ್ಕರಣಾಗಾರದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಪಚ್‌ಪದ್ರಾ ಸಂಸ್ಕರಣಾಗಾರದಲ್ಲಿ ಕಚ್ಚಾ ತೈಲ ಬಟ್ಟಿ ಇಳಿಸುವ ಘಟಕದ (ಸಿಡಿಯು) ಒಳಗೆ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಈ ಘಟಕವನ್ನು ಉದ್ಘಾಟಿಸುವ ಒಂದು ದಿನ ಮೊದಲು ಈ ಘಟನೆ ನಡೆದಿದೆ.

PM Modi Speech Today: ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ವಿಪಕ್ಷಗಳಿಗೆ ಪ್ರಧಾನಿ ಮೋದಿ ಚಾಟಿ

ಕಾಂಗ್ರೆಸ್ ಈ ರಾಜಕೀಯವನ್ನು ಬ್ರಿಟಿಷರಿಂದ ಆನುವಂಶಿಕವಾಗಿ ಪಡೆದುಕೊಂಡಿದೆ. ಕಾಂಗ್ರೆಸ್ ಇಂದಿಗೂ ಅದೇ ಊರುಗೋಲಿನ ಮೇಲೆಯೇ ನಡೆಯುತ್ತಿದೆ. ದೇಶದಲ್ಲಿ ವಿಭಜನೆಗಳನ್ನು ಸೃಷ್ಟಿಸುವ ಭಾವನೆಗಳನ್ನು ಕಾಂಗ್ರೆಸ್ ಯಾವಾಗಲೂ ಪ್ರಚೋದಿಸುತ್ತಿದೆ. ಅದಕ್ಕಾಗಿಯೇ ಗಡಿ ನಿರ್ಣಯ ಅಥವಾ ಪುನರ್ವಿಂಗಡಣೆ ಕೆಲವು ರಾಜ್ಯಗಳಿಗೆ ಹಾನಿ ಮಾಡುತ್ತದೆ ಎಂಬ ಸುಳ್ಳನ್ನು ಹರಡಲಾಯಿತು ಎಂದು ಇಂದಿನ ಭಾಷಣದಲ್ಲಿ ಪ್ರಧಾನಿ ಮೋದಿ ಆರೋಪಿಸಿದ್ದಾರೆ. ಇಂದು ದೇಶವನ್ನು ಉದ್ದೇಶಿಸಿ ಮೋದಿ ಮಾತನಾಡಿದ್ದಾರೆ.

PM Modi Speech Today: ವಿಪಕ್ಷಗಳು ಮಹಿಳೆಯರ ಹಕ್ಕು ಕಸಿದುಕೊಂಡು ಸಂಭ್ರಮಿಸಿದ್ದು ವಿಪರ್ಯಾಸ; ಪ್ರಧಾನಿ ಮೋದಿ ವಾಗ್ದಾಳಿ

ಮಹಿಳಾ ಕೋಟಾ ಮಸೂದೆಯನ್ನು ವಿರೋಧಿಸಿದ್ದಕ್ಕಾಗಿ ವಿರೋಧ ಪಕ್ಷಗಳು ಖಂಡಿತ ಶಿಕ್ಷೆ ಅನುಭವಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಇಂದು ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಿದ್ದಾರೆ. ನಿನ್ನೆ ಸಂಸತ್​ನಲ್ಲಿ ಮಹಿಳಾ ಮೀಸಲಾತಿಗೆ ಬಹುಮತ ಸಿಗದ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳ ವಿರುದ್ಧ ಪ್ರಧಾನಿ ಮೋದಿ ಕಿಡಿಕಾರಿದ್ದಾರೆ. ಮಹಿಳೆಯರ ಪ್ರಗತಿಗಾಗಿ ನಮ್ಮ ಕೈಲಾದಷ್ಟು ಪ್ರಯತ್ನಿಸಿದರೂ ವಿಪಕ್ಷಗಳಿಂದ ಅದು ಸಫಲವಾಗಲಿಲ್ಲ. ನಮ್ಮನ್ನು ಕ್ಷಮಿಸಿ ಬಿಡಿ ಎಂದು ಮೋದಿ ಹೇಳಿದ್ದಾರೆ.

PM Modi Speech Today Live: ಪ್ರಧಾನಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಭಾಷಣ ನೇರಪ್ರಸಾರ

ಪ್ರಧಾನಿ ನರೇಂದ್ರ ಮೋದಿ ಭಾರತದ ಜನರನ್ನು ಉದ್ದೇಶಿಸಿ ಇದೀಗ ಭಾಷಣ ಆರಂಭಿಸಿದ್ದಾರೆ. ಪ್ರಧಾನಿ ಏನು ಮಾತನಾಡುತ್ತಾರೆ ಎಂಬ ಬಗ್ಗೆ ಇನ್ನೂ ಯಾವುದೇ ದೃಢೀಕರಣವಿಲ್ಲ. ಇಂದು ಪ್ರಧಾನಿ ಏನು ಮಾತನಾಡುತ್ತಾರೆ ಎಂಬ ಕುತೂಹಲ ಹಾಗೆಯೇ ಉಳಿದಿದೆ. 2014ರಲ್ಲಿ ಪ್ರಧಾನಿಯಾಗಿ ಅಧಿಕಾರಕ್ಕೆ ಬಂದಾಗಿನಿಂದ ಇದುವರೆಗೂ ನರೇಂದ್ರ ಮೋದಿ ಒಟ್ಟು 17 ಬಾರಿ ಈ ರೀತಿ ಭಾರತ ದೇಶವನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಕೊನೆಯ ಬಾರಿ 2025ರ ಸೆಪ್ಟೆಂಬರ್ ತಿಂಗಳಲ್ಲಿ ಜಿಎಸ್​ಟಿ 2.0 ಸುಧಾರಣೆಯ ಬಗ್ಗೆ ಪ್ರಧಾನಿ ಮೋದಿ ಭಾಷಣ ಮಾಡಿದ್ದರು.

ಮಹಿಳಾ ಮೀಸಲಾತಿ ಮಸೂದೆಗೆ ಸೋಲು; ಇಂದು ರಾತ್ರಿ 8.30ಕ್ಕೆ ದೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ಲೋಕಸಭೆಯಲ್ಲಿ ಪ್ರತಿಪಕ್ಷಗಳಿಂದ ಮಹಿಳಾ ಮೀಸಲಾತಿ ಮಸೂದೆಗೆ ಬಹುಮತ ಸಿಗದ ಕಾರಣ ಈ ಮಸೂದೆಗೆ ಸೋಲು ಉಂಟಾಗಿದೆ. ಇದರ ಬೆನ್ನಲ್ಲೇ ಇಂದು ರಾತ್ರಿ 8.30ಕ್ಕೆ ಪ್ರಧಾನಿ ನರೇಂದ್ರ ಮೋದಿ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಪ್ರತಿಪಕ್ಷಗಳ ಒಗ್ಗಟ್ಟಿನ ಪ್ರದರ್ಶನದ ನಂತರ ಮಹಿಳಾ ಮೀಸಲಾತಿ ಮಸೂದೆಯು ಲೋಕಸಭೆ ಪರೀಕ್ಷೆಯಲ್ಲಿ ಪಾಸ್ ಆಗಲು ವಿಫಲವಾದ ಒಂದು ದಿನದ ನಂತರ ಪ್ರಧಾನಿ ಮೋದಿ ಇಂದು ಮಾತನಾಡಲಿದ್ದಾರೆ. ಇದಕ್ಕೂ ಮೊದಲು ಇಂದು ಪ್ರಧಾನಮಂತ್ರಿ ಮೋದಿ ಸಂಪುಟ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಇದರಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ವಿರೋಧಿಸಿದ್ದಕ್ಕಾಗಿ ವಿರೋಧ ಪಕ್ಷವನ್ನು ಟೀಕಿಸಿದ್ದರು.

ಮಹಿಳಾ ಮೀಸಲಾತಿಗೆ ವಿರೋಧಿಸಿದ್ದಕ್ಕೆ ವಿಪಕ್ಷ ಬೆಲೆ ತೆರಬೇಕಾಗುತ್ತದೆ; ಪಿಎಂ ಮೋದಿ ವಾಗ್ದಾಳಿ

ಲೋಕಸಭೆಯಲ್ಲಿ ಕ್ಷೇತ್ರ ಪುನರ್ ವಿಂಗಡಣೆ ಮಸೂದೆಯನ್ನು ಬೆಂಬಲಿಸದ ವಿರೋಧ ಪಕ್ಷದ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದಾರೆ. ಮಹಿಳಾ ಮೀಸಲಾತಿ ಮಸೂದೆಯನ್ನು ವಿರೋಧಿಸಿದ್ದರಿಂದ ವಿರೋಧ ಪಕ್ಷದವರು ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಸಂಪುಟ ಸಭೆಯಲ್ಲಿ ಪ್ರಧಾನಿ ಮೋದಿ ಹೇಳಿದ್ದಾರೆ. ಮಹಿಳಾ ಕೋಟಾ ಮಸೂದೆ ಲೋಕಸಭೆಯಲ್ಲಿ ವಿಫಲವಾದ ನಂತರ ವಿರೋಧ ಪಕ್ಷದವರನ್ನು ತರಾಟೆಗೆ ತೆಗೆದುಕೊಂಡ ಪ್ರಧಾನಿ ಮೋದಿ ವಿಪಕ್ಷಗಳ ನಿರ್ಧಾರವನ್ನು 'ಗಂಭೀರವಾದ ತಪ್ಪು' ಎಂದು ಕರೆದಿದ್ದಾರೆ.