AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prime Minister Of India

Prime Minister Of India

ಭಾರತ ಪ್ರಜಾತಂತ್ರ ವ್ಯವಸ್ಥೆಯ ನಾಯಕನೆಂದರೆ ಪ್ರಧಾನಿ. ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಒಂದಕ್ಕೆ ನಾಯಕರಾಗಿರುವ ಪ್ರಧಾನಿಗೆ ಐದು ವರ್ಷ ಶಾಸನಬದ್ಧ ಅಧಿಕಾರವಿರುತ್ತದೆ. ಲೋಕಸಭೆಯಲ್ಲಿ ಬಹುಮತ ಹೊಂದಿರುವ ಪಕ್ಷ ಅಥವಾ ಒಕ್ಕೂಟದ ಸದಸ್ಯರ ನಾಯಕನೇ ಪ್ರಧಾನಿ ಆಗಲಿದ್ದು, ಭಾರತವು ಸಧ್ಯಕ್ಕೆ 14ನೇ ಪ್ರಧಾನಿಯನ್ನು ಹೊಂದಿದೆ.

ಭಾರತದಲ್ಲಿ ಒಬ್ಬ ವ್ಯಕ್ತಿ ಎಷ್ಟು ವರ್ಷ ಅಥವಾ ಎಷ್ಟು ಅವಧಿಗೆ ಪ್ರಧಾನಿ ಆಗಬಹುದು ಎನ್ನುವ ಯಾವುದೇ ಮಿತಿಯಿಲ್ಲ. ಐದು ವರ್ಷಕ್ಕೊಮ್ಮೆ ನಡೆಯುವ ಚುನಾವಣೆಯಲ್ಲಿ ಪ್ರಧಾನಿ ಆಗುವ ಪಕ್ಷ ಅಥವಾ ಒಕ್ಕೂಟ ಗೆಲುವು ಸಾಧಿಸಿದರೆ ಸಾಕಾಗುತ್ತದೆ. ಜವಾಹರ್‌ಲಾಲ್‌ ನೆಹರು ಅವರು ಭಾರತದ ಮೊದಲ ಪ್ರಧಾನಿ ಆಗಿದ್ದರು. ಬಳಿಕ ಲಾಲ್‌ಬಹದ್ದೂರ್‌ ಶಾಸ್ತ್ರೀ, ಇಂದಿರಾ ಗಾಂಧಿ ಪ್ರಧಾನಿ ಆಗಿದ್ದರು.

ಮೊರಾರ್ಜಿ ದೇಸಾಯಿ ಅವರು ದೇಶದ ಮೊದಲ ಕಾಂಗ್ರೆಸ್ಸೇತರ ಪ್ರಧಾನಿಯಾದರೇ, ಇಂದಿರಾ ಅವರು ಮೊದಲ ಮಹಿಳಾ ಪ್ರಧಾನಿ ಎನಿಸಿಕೊಂಡರು. ಬಳಿಕ ರಾಜೀವ್‌ ಗಾಂಧಿ, ವಿ.ಪಿ ಸಿಂಗ್‌, ಚಂದ್ರಶೇಖರ್‌, ಪಿ.ವಿ ನರಸಿಂಹರಾವ್‌, ಅಟಲ್‌ ಬಿಹಾರಿ ವಾಜಪೇಯಿ, ಎಚ್‌.ಡಿ ದೇವೇಗೌಡ, ಐ.ಕೆ ಗುಜ್ರಾಲ್‌, ಮನಮೋಹನ್‌ ಸಿಂಗ್‌ ಈ ಹುದ್ದೆಯನ್ನು ಏರಿದರು.

2014ರಿಂದ ನರೇಂದ್ರ ಮೋದಿಯು ಪ್ರಧಾನಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಭಾರತದ ಸಂವಿಧಾನಬದ್ಧ ಪ್ರಜಾತಂತ್ರ ವ್ಯವಸ್ಥೆಯಲ್ಲಿ ರಾಷ್ಟ್ರಪತಿಯು ಮೊದಲ ಪ್ರಜೆಯಾಗಿದ್ದರೂ, ಆಡಳಿತಾತ್ಮಕವಾಗಿ ಪ್ರಧಾನಿಯೇ ದೇಶದ ಅತ್ಯಂತ ಪ್ರಭಾವಿ ವ್ಯಕ್ತಿ.

ಇನ್ನೂ ಹೆಚ್ಚು ಓದಿ

ಬೆಂಗಳೂರಿಂದ ಕನ್ಯಾಕುಮಾರಿಗೆ 702 ಕಿ.ಮೀ ಸೈಕಲ್ ತುಳಿದ ಶಾಸಕ ಸುರೇಶ್ ಕುಮಾರ್; ಮೋದಿಯಿಂದ ಭಾರೀ ಮೆಚ್ಚುಗೆ

51 ವರ್ಷಗಳ ನಂತರ ಮತ್ತೊಮ್ಮೆ ಕನ್ಯಾಕುಮಾರಿಯ ವಿವೇಕಾನಂದ ಶಿಲಾ ಸ್ಮಾರಕಕ್ಕೆ ತಮ್ಮ ಸ್ನೇಹಿತರ ಜೊತೆ ಸೈಕಲ್ ಸವಾರಿ ಮಾಡಿದ್ದ ಬೆಂಗಳೂರಿನ ಬಿಜೆಪಿ ಶಾಸಕ ಸುರೇಶ್ ಕುಮಾರ್ 702 ಕಿ.ಮೀ ಸೈಕಲ್​ನಲ್ಲೇ ಪ್ರಯಾಣಿಸಿದ್ದರು. ಅಷ್ಟೇ ಅಲ್ಲದೆ, 2025ರಲ್ಲಿ ಅವರು ಒಟ್ಟು 8,000 ಕಿ.ಮೀ. ಸೈಕಲ್ ಸವಾರಿ ಮಾಡಿದ್ದರು. ಅವರ ಈ ಸಾಧನೆಗೆ ಮತ್ತು ಸೈಕ್ಲಿಂಗ್ ಕುರಿತಾದ ಪ್ರೀತಿಗೆ ಪ್ರಧಾನಿ ನರೇಂದ್ರ ಮೋದಿಯವರೇ ಕರೆ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕಳೆದ ದಶಕದಲ್ಲಿ PRAGATIಯಿಂದ 85 ಲಕ್ಷ ಕೋಟಿಗೂ ಹೆಚ್ಚು ಮೌಲ್ಯದ ಯೋಜನೆಗಳು ವೇಗಗೊಂಡಿದೆ; ಪ್ರಧಾನಿ ಮೋದಿ

ನವದೆಹಲಿಯಲ್ಲಿ PRAGATIಯ 50ನೇ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ ಸಕ್ರಿಯ ಆಡಳಿತ ಮತ್ತು ಸಕಾಲಿಕ ಅನುಷ್ಠಾನಕ್ಕಾಗಿ ಇದೊಂದು ಅದ್ಭುತ ವೇದಿಕೆ ಎಂದು ಹೇಳಿದ್ದಾರೆ. ಈ ಸಭೆಯಲ್ಲಿ ಪ್ರಧಾನಿ ಮೋದಿ ರಸ್ತೆ, ರೈಲ್ವೆ, ವಿದ್ಯುತ್, ಜಲ ಸಂಪನ್ಮೂಲಗಳು ಮತ್ತು ಕಲ್ಲಿದ್ದಲು ಸೇರಿದಂತೆ ಹಲವು ಕ್ಷೇತ್ರಗಳಲ್ಲಿ 5 ನಿರ್ಣಾಯಕ ಮೂಲಸೌಕರ್ಯ ಯೋಜನೆಗಳನ್ನು ಪರಿಶೀಲಿಸಿದರು. ಈ ಯೋಜನೆಗಳು ಐದು ರಾಜ್ಯಗಳನ್ನು ವ್ಯಾಪಿಸಿವೆ ಹಾಗೂ ಇದಕ್ಕೆ ಒಟ್ಟು 40 ಸಾವಿರ ಕೋಟಿ ರೂ.ಗಳಿಗಿಂತ ಹೆಚ್ಚು ವೆಚ್ಚವಾಗಿದೆ.

ಬಾಂಗ್ಲಾದೇಶದ ಮಾಜಿ ಪ್ರಧಾನಿ ಖಲೀದಾ ಜಿಯಾ ಅಂತ್ಯಕ್ರಿಯೆ; ಕುಟುಂಬಕ್ಕೆ ಪ್ರಧಾನಿ ಮೋದಿಯ ಪತ್ರ ನೀಡಿದ ಸಚಿವ ಜೈಶಂಕರ್

ಬಾಂಗ್ಲಾದೇಶದ ಮಾಜಿ ಪ್ರಧಾನಿ ಖಲೀದಾ ಜಿಯಾ ಅವರ ಅಂತ್ಯಕ್ರಿಯೆ ಇಂದು ಢಾಕಾದಲ್ಲಿ ನಡೆದಿದೆ. ಈ ವೇಳೆ ಲಕ್ಷಾಂತರ ಜನರು ಸೇರಿದ್ದರು. ಖಲೀದಾ ಅವರನ್ನು ಅವರ ಪತಿ, ಮಾಜಿ ಅಧ್ಯಕ್ಷ ಜಿಯಾವುರ್ ರೆಹಮಾನ್ ಅವರ ಸಮಾಧಿಯ ಪಕ್ಕದಲ್ಲಿ ಸಮಾಧಿ ಮಾಡಲಾಗುವುದು. ಮಾಣಿಕ್ ಮಿಯಾ ಅವೆನ್ಯೂದಲ್ಲಿ ಅಂತ್ಯಕ್ರಿಯೆ ಸಮಾರಂಭ ನಡೆದಿದೆ. ಈ ವೇಳೆ ಹಲವಾರು ವಿದೇಶಿ ಗಣ್ಯರು, ರಾಜಕೀಯ ಮುಖಂಡರು ಮತ್ತು ವಿವಿಧ ದೇಶಗಳ ಪ್ರತಿನಿಧಿಗಳು ಹಾಜರಿದ್ದರು. ಭಾರತದ ಪ್ರತಿನಿಧಿಯಾಗಿ ವಿದೇಶಾಂಗ ಸಚಿವ ಎಸ್. ಜೈಶಂಕರ್ ಪಾಲ್ಗೊಂಡಿದ್ದರು.

ಅಮಿತ್ ಶಾ, ಮೋದಿಯನ್ನು ಮಹಾಭಾರತದ ದುಶ್ಯಾಸನ, ದುರ್ಯೋಧನನಿಗೆ ಹೋಲಿಸಿದ ಸಿಎಂ ಮಮತಾ ಬ್ಯಾನರ್ಜಿ

ನಿನ್ನೆ ಕೊಲ್ಕತ್ತಾಗೆ ಭೇಟಿ ನೀಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದರು. ಬಂಗಾಳ ಭಯೋತ್ಪಾದಕರ ಕೇಂದ್ರವಾಗಿದೆ ಎಂದು ಅಮಿತ್ ಶಾ ಆರೋಪಿಸಿದ್ದರು. ಈ ಹೇಳಿಕೆಗೆ ತಿರುಗೇಟು ನೀಡಿರುವ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಪಶ್ಚಿಮ ಬಂಗಾಳದಲ್ಲಿ ಭಯೋತ್ಪಾದಕರು ಇದ್ದರೆ ನೀವೇ ಪಹಲ್ಗಾಮ್ ದಾಳಿ ನಡೆಸಿದ್ದೀರಾ? ಎಂದು ಅಮಿತ್ ಶಾ ಅವರನ್ನು ಪ್ರಶ್ನಿಸಿದ್ದಾರೆ.

ಪುಟಿನ್ ನಿವಾಸದ ಮೇಲಿನ ಉಕ್ರೇನ್ ದಾಳಿಗೆ ಪ್ರಧಾನಿ ಮೋದಿ ಖಂಡನೆ

ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ನಿವಾಸದ ಮೇಲೆ ಉಕ್ರೇನ್ ದಾಳಿ ನಡೆಸಿದೆ ಎಂಬ ವರದಿಗಳ ಬಗ್ಗೆ ಇಂದು ಭಾರತದ ಪ್ರಧಾನಿ ನರೇಂದ್ರ ಮೋದಿ ಕಳವಳ ವ್ಯಕ್ತಪಡಿಸಿದ್ದಾರೆ. ಪುಟಿನ್ ನಿವಾಸದ ಮೇಲೆ ಉಕ್ರೇನ್ ದಾಳಿ ನಡೆಸಿದ ಎಂಬ ವರದಿಗಳಿಗೆ ಪ್ರತಿಕ್ರಿಯಿಸಿದ ಮೋದಿ, ಎರಡೂ ದೇಶಗಳ ನಡುವೆ ಉದ್ವಿಗ್ನತೆಯನ್ನು ಮತ್ತಷ್ಟು ಹೆಚ್ಚಿಸಬಹುದಾದ ಈ ಬೆಳವಣಿಗೆಗಳ ಬಗ್ಗೆ ತೀವ್ರ ಕಳವಳಗೊಂಡಿರುವುದಾಗಿ ಹೇಳಿದ್ದಾರೆ.

ಮನ್ ಕಿ ಬಾತ್; ಮನಬಂದಂತೆ ಆ್ಯಂಟಿಬಯೋಟಿಕ್ ಸೇವಿಸುವವರಿಗೆ ಪ್ರಧಾನಿ ಮೋದಿ ಎಚ್ಚರಿಕೆ

Mann Ki Baat: ಅನೇಕ ಜನರು ತಮಗೇನಾದರೂ ಆರೋಗ್ಯ ಹದಗೆಟ್ಟರೆ ತಾವೇ ಮೆಡಿಕಲ್ ಶಾಪ್​ಗೆ ಹೋಗಿ ಮಾತ್ರೆ ಸೇವಿಸುವ ಅಭ್ಯಾಸ ರೂಢಿಸಿಕೊಂಡಿರುತ್ತಾರೆ. ಇದಕ್ಕೆಲ್ಲ ವೈದ್ಯರ ಬಳಿ ಯಾಕೆ ಹೋಗಬೇಕು ಎಂಬ ಉಡಾಫೆ ಅವರದು. ಆದರೆ, ಇಂತಹ ಉಡಾಫೆ ಮಾಡುವವರಿಗೆ ಇಂದಿನ ಮನ್ ಕಿ ಬಾತ್​​ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಿವಿಮಾತೊಂದನ್ನು ನೀಡಿದ್ದಾರೆ. ಇದರ ಜೊತೆಗೆ ಎಚ್ಚರಿಕೆಯನ್ನೂ ನೀಡಿದ್ದಾರೆ.

ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ವಿಮಾನ ನಿಲ್ದಾಣ ಟರ್ಮಿನಲ್ ಉದ್ಘಾಟನೆ

ಸುಮಾರು 4,000 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಹೊಸದಾಗಿ ಉದ್ಘಾಟನೆಗೊಂಡ ಟರ್ಮಿನಲ್ ಭಾರತದ ಮೊದಲ ಪ್ರಕೃತಿ ಪ್ರೇರಿತ ವಿಮಾನ ನಿಲ್ದಾಣದ ಟರ್ಮಿನಲ್ ಆಗಿದೆ. ಅಸ್ಸಾಂ ಪ್ರದೇಶದ ನೈಸರ್ಗಿಕ ಭೂದೃಶ್ಯವನ್ನು ಪ್ರತಿಬಿಂಬಿಸುವಂತೆ ವಿನ್ಯಾಸಗೊಳಿಸಲಾದ ಈ ಟರ್ಮಿನಲ್ ಪ್ರಯಾಣಿಕರ ನಿರ್ವಹಣಾ ಸಾಮರ್ಥ್ಯವನ್ನು ಗಣನೀಯವಾಗಿ ಹೆಚ್ಚಿಸುತ್ತದೆ ಮತ್ತು ಸಂಪರ್ಕವನ್ನು ಸುಧಾರಿಸುತ್ತದೆ. ಹಾಗೇ, ಅಸ್ಸಾಂ ಮತ್ತು ನೆರೆಯ ರಾಜ್ಯಗಳಲ್ಲಿ ಪ್ರವಾಸೋದ್ಯಮ, ವ್ಯಾಪಾರ ಮತ್ತು ಆರ್ಥಿಕ ಚಟುವಟಿಕೆಯನ್ನು ಹೆಚ್ಚಿಸುತ್ತದೆ ಎಂದು ನಿರೀಕ್ಷಿಸಲಾಗಿದೆ.

ಮಮತಾ ಬ್ಯಾನರ್ಜಿ ಸರ್ಕಾರ ನುಸುಳುಕೋರರನ್ನು ರಕ್ಷಿಸಲು ಎಸ್‌ಐಆರ್ ಅನ್ನು ವಿರೋಧಿಸುತ್ತಿದೆ; ಪ್ರಧಾನಿ ಮೋದಿ ಆರೋಪ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸರ್ಕಾರದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. 2026ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಅವಕಾಶ ನೀಡುವಂತೆ ಅವರು ಬಂಗಾಳದ ಜನರಿಗೆ ಮನವಿ ಮಾಡಿದ್ದಾರೆ. ದಟ್ಟವಾದ ಮಂಜಿನಿಂದಾಗಿ ತಾಹೆರ್‌ಪುರ ರ‍್ಯಾಲಿಯ ಸ್ಥಳವನ್ನು ತಲುಪಲು ವಿಫಲವಾದ ಕಾರಣದಿಂದಾಗಿ ಪಶ್ಚಿಮ ಬಂಗಾಳದ ನಾಡಿಯಾದಲ್ಲಿ ವರ್ಚುವಲ್ ಆಗಿ ನಡೆದ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡುತ್ತಾ ಪ್ರಧಾನಿ ಮೋದಿ ಈ ಹೇಳಿಕೆಗಳನ್ನು ನೀಡಿದ್ದಾರೆ. ಇಂದು ಮಧ್ಯಾಹ್ನ ಅವರು ರ‍್ಯಾಲಿಯ ಸ್ಥಳಕ್ಕೆ ತಲುಪಬೇಕಿತ್ತು. ಆದರೆ ಕೆಟ್ಟ ಹವಾಮಾನದಿಂದಾಗಿ ಅವರ ಹೆಲಿಕಾಪ್ಟರ್ ತಾಹೆರ್‌ಪುರ ಹೆಲಿಪ್ಯಾಡ್ ಮೇಲೆ ಸ್ವಲ್ಪ ಹೊತ್ತು ಹಾರಾಡುತ್ತಾ ಕೊಲ್ಕತ್ತಾ ವಿಮಾನ ನಿಲ್ದಾಣಕ್ಕೆ ಹಿಂತಿರುಗಬೇಕಾಯಿತು.

ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಈಶಾನ್ಯ ರಾಜ್ಯಗಳ ಅತಿದೊಡ್ಡ ವಿಮಾನ ನಿಲ್ದಾಣ

ಗುವಾಹಟಿಯಲ್ಲಿ ನಾಳೆ ಈಶಾನ್ಯ ರಾಜ್ಯದ ಅತಿ ದೊಡ್ಡ ಹಾಗೂ ನೈಸರ್ಗಿಕ ಥೀಮ್​​ನ ವಿಮಾನ ನಿಲ್ದಾಣದ ಟರ್ಮಿನಲ್ ಉದ್ಘಾಟನೆಯಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಈ ಟರ್ಮಿನಲ್ ಅನ್ನು ಉದ್ಘಾಟಿಸಲಿದ್ದಾರೆ. ಇದು ಅಸ್ತಿತ್ವದಲ್ಲಿರುವ ಟರ್ಮಿನಲ್‌ಗಿಂತ 7 ಪಟ್ಟು ದೊಡ್ಡದಾಗಿದೆ. "ನಾನು ನಾಳೆ ಅಸ್ಸಾಂನ ಗುವಾಹಟಿಯನ್ನು ತಲುಪುತ್ತೇನೆ. ಅಲ್ಲಿ ಲೋಕಪ್ರಿಯ ಗೋಪಿನಾಥ್ ಬಾರ್ಡೋಲೋಯ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡವನ್ನು ಉದ್ಘಾಟಿಸಲಾಗುವುದು. 

ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಪಕ್ಷಗಳ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ

ಸಂಸತ್ತಿನ ಚಳಿಗಾಲದ ಅಧಿವೇಶನದ ಮುಕ್ತಾಯವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಸಂಸತ್ತಿನ ಭವನದ ತಮ್ಮ ಕೊಠಡಿಯಲ್ಲಿ ಲೋಕಸಭೆಯ ಪಕ್ಷಗಳ ನಾಯಕರು ಮತ್ತು ಸಂಸತ್ ಸದಸ್ಯರೊಂದಿಗೆ ಸಭೆ ನಡೆಸಿದರು. ಪ್ರಧಾನಿ ನರೇಂದ್ರ ಮೋದಿ, ಪ್ರಿಯಾಂಕಾ ಗಾಂಧಿ, ರಾಜನಾಥ್ ಸಿಂಗ್ ಸೇರಿದಂತೆ ಎಲ್ಲ ನಾಯಕರು ಹಾಗೂ ಸಂಸದರು ಈ ಸಭೆಯಲ್ಲಿ ಹಾಜರಿದ್ದರು.

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ

ಓಮನ್ ಸುಲ್ತಾನ್ ಹೈತಮ್ ಬಿನ್ ತಾರಿಕ್ ಅವರ ಸಹೋದರ ಮತ್ತು ಸುಲ್ತಾನರ ರಕ್ಷಣಾ ವ್ಯವಹಾರಗಳ ಉಪ ಪ್ರಧಾನ ಮಂತ್ರಿ ಸಯ್ಯದ್ ಶಿಹಾಬ್ ಬಿನ್ ತಾರಿಕ್ ಅಲ್ ಸೈದ್ ಅವರು ವಿಮಾನ ನಿಲ್ದಾಣದಲ್ಲಿ ಪ್ರಧಾನಿ ಮೋದಿ ಅವರಿಗೆ ವಿದಾಯ ಹೇಳಿದರು. ಎರಡೂ ದೇಶಗಳ ನಡುವಿನ ಐತಿಹಾಸಿಕ ಸಂಬಂಧ ಮತ್ತು ಅವರ ಆತ್ಮೀಯ ಸೌಹಾರ್ದತೆಯನ್ನು ಎತ್ತಿ ತೋರಿಸುತ್ತಾ, ಇಬ್ಬರೂ ನಾಯಕರು ಕೈಕುಲುಕಿ ಪರಸ್ಪರ ಅಪ್ಪಿಕೊಂಡರು. ಓಮನ್ ಉಪ ಪ್ರಧಾನಿ ಕೂಡ ಪ್ರಧಾನಿ ಮೋದಿ ಅವರಿಗೆ ವಿದಾಯ ಹೇಳುವಾಗ ಸಾಂಪ್ರದಾಯಿಕ ಭಾರತೀಯ ಶೈಲಿಯಲ್ಲಿ ಕೈ ಮುಗಿದು ನಮಸ್ಕರಿಸಿ ಬೀಳ್ಕೊಟ್ಟಿದ್ದು ವಿಶೇಷವಾಗಿತ್ತು.

ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ

ಪ್ರಧಾನಿ ಮೋದಿ ಓಮನ್​ನಲ್ಲಿ ಅನಿವಾಸಿ ಭಾರತೀಯರ ಜೊತೆ ಸಂವಾದ ನಡೆಸಿದರು. ಈ ವೇಳೆ ಅವರು ಮುಂದಿನ ಪೀಳಿಗೆಗೆ ಸ್ಫೂರ್ತಿ ನೀಡಿದರು ಮತ್ತು ಓಮನ್‌ನ ಮಸ್ಕತ್‌ನಲ್ಲಿ ನಡೆದ ಸಮುದಾಯ ಕಾರ್ಯಕ್ರಮದಲ್ಲಿ ಭಾರತೀಯ ವಲಸಿಗರ ಕೊಡುಗೆಗಳನ್ನು ಗೌರವಿಸಿದರು. "ಭಾರತ್ ಮಾತಾ ಕಿ ಜೈ", "ವಂದೇ ಮಾತರಂ" ಮತ್ತು "ಮೋದಿ," ಎಂಬ ಘೋಷಣೆಗಳೊಂದಿಗೆ ಉತ್ಸಾಹದಿಂದ ಸ್ವಾಗತಿಸಲಾಯಿತು.