AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prime Minister Of India

Prime Minister Of India

ಭಾರತ ಪ್ರಜಾತಂತ್ರ ವ್ಯವಸ್ಥೆಯ ನಾಯಕನೆಂದರೆ ಪ್ರಧಾನಿ. ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಒಂದಕ್ಕೆ ನಾಯಕರಾಗಿರುವ ಪ್ರಧಾನಿಗೆ ಐದು ವರ್ಷ ಶಾಸನಬದ್ಧ ಅಧಿಕಾರವಿರುತ್ತದೆ. ಲೋಕಸಭೆಯಲ್ಲಿ ಬಹುಮತ ಹೊಂದಿರುವ ಪಕ್ಷ ಅಥವಾ ಒಕ್ಕೂಟದ ಸದಸ್ಯರ ನಾಯಕನೇ ಪ್ರಧಾನಿ ಆಗಲಿದ್ದು, ಭಾರತವು ಸಧ್ಯಕ್ಕೆ 14ನೇ ಪ್ರಧಾನಿಯನ್ನು ಹೊಂದಿದೆ.

ಭಾರತದಲ್ಲಿ ಒಬ್ಬ ವ್ಯಕ್ತಿ ಎಷ್ಟು ವರ್ಷ ಅಥವಾ ಎಷ್ಟು ಅವಧಿಗೆ ಪ್ರಧಾನಿ ಆಗಬಹುದು ಎನ್ನುವ ಯಾವುದೇ ಮಿತಿಯಿಲ್ಲ. ಐದು ವರ್ಷಕ್ಕೊಮ್ಮೆ ನಡೆಯುವ ಚುನಾವಣೆಯಲ್ಲಿ ಪ್ರಧಾನಿ ಆಗುವ ಪಕ್ಷ ಅಥವಾ ಒಕ್ಕೂಟ ಗೆಲುವು ಸಾಧಿಸಿದರೆ ಸಾಕಾಗುತ್ತದೆ. ಜವಾಹರ್‌ಲಾಲ್‌ ನೆಹರು ಅವರು ಭಾರತದ ಮೊದಲ ಪ್ರಧಾನಿ ಆಗಿದ್ದರು. ಬಳಿಕ ಲಾಲ್‌ಬಹದ್ದೂರ್‌ ಶಾಸ್ತ್ರೀ, ಇಂದಿರಾ ಗಾಂಧಿ ಪ್ರಧಾನಿ ಆಗಿದ್ದರು.

ಮೊರಾರ್ಜಿ ದೇಸಾಯಿ ಅವರು ದೇಶದ ಮೊದಲ ಕಾಂಗ್ರೆಸ್ಸೇತರ ಪ್ರಧಾನಿಯಾದರೇ, ಇಂದಿರಾ ಅವರು ಮೊದಲ ಮಹಿಳಾ ಪ್ರಧಾನಿ ಎನಿಸಿಕೊಂಡರು. ಬಳಿಕ ರಾಜೀವ್‌ ಗಾಂಧಿ, ವಿ.ಪಿ ಸಿಂಗ್‌, ಚಂದ್ರಶೇಖರ್‌, ಪಿ.ವಿ ನರಸಿಂಹರಾವ್‌, ಅಟಲ್‌ ಬಿಹಾರಿ ವಾಜಪೇಯಿ, ಎಚ್‌.ಡಿ ದೇವೇಗೌಡ, ಐ.ಕೆ ಗುಜ್ರಾಲ್‌, ಮನಮೋಹನ್‌ ಸಿಂಗ್‌ ಈ ಹುದ್ದೆಯನ್ನು ಏರಿದರು.

2014ರಿಂದ ನರೇಂದ್ರ ಮೋದಿಯು ಪ್ರಧಾನಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಭಾರತದ ಸಂವಿಧಾನಬದ್ಧ ಪ್ರಜಾತಂತ್ರ ವ್ಯವಸ್ಥೆಯಲ್ಲಿ ರಾಷ್ಟ್ರಪತಿಯು ಮೊದಲ ಪ್ರಜೆಯಾಗಿದ್ದರೂ, ಆಡಳಿತಾತ್ಮಕವಾಗಿ ಪ್ರಧಾನಿಯೇ ದೇಶದ ಅತ್ಯಂತ ಪ್ರಭಾವಿ ವ್ಯಕ್ತಿ.

ಇನ್ನೂ ಹೆಚ್ಚು ಓದಿ

ಕರ್ನಾಟಕಕ್ಕೆ ಗುಡ್ ನ್ಯೂಸ್; ಬಳ್ಳಾರಿ- ಹೊಸಪೇಟೆ ನಡುವೆ ಹೊಸ ರೈಲು ಮಾರ್ಗಕ್ಕೆ ಒಪ್ಪಿಗೆ

ಕರ್ನಾಟಕದ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಜನರಿಗೆ ಮೋದಿ ಸರ್ಕಾರ ಒಳ್ಳೆಯ ಸುದ್ದಿಯೊಂದನ್ನು ನೀಡಿದೆ. ಇಲ್ಲಿನ ಪ್ರಸಿದ್ಧ ಪ್ರವಾಸಿ ತಾಣ ಹಾಗೂ ವಿಶ್ವ ಪಾರಂಪರಿಕ ತಾಣವಾದ ಹಂಪಿಗೆ ರೈಲು ಸಂಪರ್ಕ ಕಲ್ಪಿಸಲು ಬಳ್ಳಾರಿ-ಹೊಸಪೇಟೆ 3ನೇ ಮತ್ತು 4ನೇ ರೈಲು ಮಾರ್ಗ ಯೋಜನೆಗೆ ಇಂದು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಒಟ್ಟು 3 ರೈಲು ಮಾರ್ಗಗಳಿಗೆ ಒಪ್ಪಿಗೆ ನೀಡಲಾಗಿದ್ದು, ಬಳ್ಳಾರಿ ಮಾರ್ಗವನ್ನು ಹೊರತುಪಡಿಸಿ ಕಾಸಾರ-ಮನ್ಮಾಡ್, ದೆಹಲಿ-ಅಂಬಾಲ ನಡುವಿನ 3 ಬಹು-ಟ್ರ್ಯಾಕಿಂಗ್ ರೈಲ್ವೆ ಯೋಜನೆಗಳಿಗೆ ಸಂಪುಟ ಅನುಮೋದನೆ ನೀಡಿದೆ. ಒಟ್ಟು 18,509 ಕೋಟಿ ರೂ. ಮೌಲ್ಯದ ರೈಲು ಮಾರ್ಗಗಳ ನವೀಕರಣಕ್ಕೆ ಮೋದಿ ಸರ್ಕಾರ ಮುಂದಾಗಿದೆ.

ಗುವಾಹಟಿಯಲ್ಲಿ ಬ್ರಹ್ಮಪುತ್ರ ನದಿಯ 3,030 ಕೋಟಿ ರೂ. ವೆಚ್ಚದ ಸೇತುವೆ ಉದ್ಘಾಟಿಸಿದ ಪ್ರಧಾನಿ ಮೋದಿ

ಕುಮಾರ್ ಭಾಸ್ಕರ್ ವರ್ಮಾ ಸೇತುವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಉದ್ಘಾಟಿಸಿದರು. ಸುಮಾರು 3,030 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಈ ಸೇತುವೆ ಗುವಾಹಟಿಯನ್ನು ಉತ್ತರ ಗುವಾಹಟಿಯೊಂದಿಗೆ ಸಂಪರ್ಕಿಸುತ್ತದೆ. ಇದು ಪ್ರಯಾಣದ ಸಮಯವನ್ನು 60 ನಿಮಿಷಗಳಷ್ಟು ಕಡಿಮೆ ಮಾಡುತ್ತದೆ. ಅಂದರೆ 7 ನಿಮಿಷಗಳಿಗೆ ಪ್ರಯಾಣದ ಸಮಯವನ್ನು ಇಳಿಸಿದೆ. ಈ ಸೇತುವೆಯು ಈಶಾನ್ಯ ಭಾರತದಲ್ಲಿ ಮೊದಲ ಎಕ್ಸ್‌ಟ್ರಾಡೋಸ್ಡ್ ರಚನೆಯಾಗಿದೆ.

ಕಾಂಗ್ರೆಸ್ ಅಸ್ಸಾಂನಲ್ಲಿ ಹಿಂಸಾಚಾರಕ್ಕೆ ಕುಮ್ಮಕ್ಕು ನೀಡಿತೇ ವಿನಃ ಅಭಿವೃದ್ಧಿಗೆ ಗಮನ ಕೊಡಲಿಲ್ಲ; ಪ್ರಧಾನಿ ಮೋದಿ ಟೀಕೆ

ಗುವಾಹಟಿಯಲ್ಲಿ ನಡೆದ ಬೃಹತ್ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್‌ನಿಂದ ದೀರ್ಘಕಾಲದಿಂದ ನಿರ್ಲಕ್ಷಿಸಲ್ಪಟ್ಟ ಈಶಾನ್ಯ ರಾಜ್ಯಗಳನ್ನು ಅಭಿವೃದ್ಧಿ ಮಾಡುವುದೇ ತಮ್ಮ ಸರ್ಕಾರದ ಪ್ರಮುಖ ಆದ್ಯತೆ ಎಂದು ಘೋಷಿಸಿದರು. ಈ ಪ್ರದೇಶವನ್ನು 'ಅಷ್ಟಲಕ್ಷ್ಮಿ ದೇವತೆ'ಗೆ ಹೋಲಿಸಿದರು. ಅಸ್ಸಾಂ ಕಳೆದ 11 ವರ್ಷಗಳಲ್ಲಿ ಅಭಿವೃದ್ಧಿ ಯೋಜನೆಗಳಿಗಾಗಿ ಕೇಂದ್ರ ಸರ್ಕಾರದಿಂದ ರೂ. 5.5 ಲಕ್ಷ ಕೋಟಿಗೂ ಹೆಚ್ಚು ಪಡೆದಿದೆ. ಕಾಂಗ್ರೆಸ್ ಆಡಳಿತದ ಅವಧಿಗಿಂತ ಇದು 5 ಪಟ್ಟು ಹೆಚ್ಚಾಗಿದೆ ಎಂದು ಹೇಳಿದ್ದಾರೆ. ಚುನಾವಣೆಗೆ ಸಜ್ಜಾಗಿರುವ ರಾಜ್ಯವಾದ ಅಸ್ಸಾಂನಲ್ಲಿ ಪ್ರಧಾನಿ ಮೋದಿ ಮಹತ್ವದ ಭಾಷಣ ಮಾಡಿದ್ದಾರೆ.

ಗುಲಾಮಗಿರಿಯನ್ನು ಮೆಟ್ಟಿ ಹೊಸ ಇತಿಹಾಸ ಸೃಷ್ಟಿಸಿದ್ದೇವೆ; ಸೇವಾ ತೀರ್ಥದಲ್ಲಿ ಪ್ರಧಾನಿ ಮೋದಿ ಮೊದಲ ಭಾಷಣ

ಪ್ರಧಾನಿ ಮೋದಿ ಇಂದು ಪ್ರಧಾನಮಂತ್ರಿಗಳ ಹೊಸ ಕಟ್ಟಡವಾದ ಸೇವಾ ತೀರ್ಥದ ಕಚೇರಿಯನ್ನು ಉದ್ಘಾಟಿಸಿದರು. ಈ ನೂತನ ಕಟ್ಟಡದಲ್ಲಿ ಮೊದಲ ಬಾರಿಗೆ ಭಾಷಣ ಮಾಡಿದ ಪ್ರಧಾನಿ ಮೋದಿ, ನಾವು ಗುಲಾಮಗಿರಿ ಮನಸ್ಥಿತಿಯನ್ನು ತೊಡೆದುಹಾಕಿದ್ದೇವೆ. ವಿಕಸಿತ ಭಾರತದ ಗುರಿಯೊಂದಿಗೆ ಹೊಸ ಇತಿಹಾಸ ನಿರ್ಮಾಣಕ್ಕೆ ಸಜ್ಜಾಗಿದ್ದೇವೆ. ಇದು 140 ಭಾರತೀಯರ ಆಕಾಂಕ್ಷೆ, ಅಭಿವೃದ್ಧಿಯನ್ನು ಕೇಂದ್ರೀಕರಿಸಿಕೊಂಡಿರುತ್ತದೆ ಎಂದು ಹೇಳಿದ್ದಾರೆ.

ಬಾಂಗ್ಲಾದೇಶದಲ್ಲಿ ಬಿಎನ್‌ಪಿಗೆ ಭರ್ಜರಿ ಜಯ; ತಾರಿಕ್ ರೆಹಮಾನ್​ಗೆ ಕರೆ ಮಾಡಿ ಅಭಿನಂದಿಸಿದ ಪ್ರಧಾನಿ ಮೋದಿ

ಬಾಂಗ್ಲಾದೇಶದ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷದ (ಬಿಎನ್‌ಪಿ) ನಾಯಕ ತಾರಿಕ್ ರೆಹಮಾನ್ ಅವರನ್ನು ಅಭಿನಂದಿಸಿದ್ದಾರೆ. ತಾರಿಕ್ ರೆಹಮಾನ್ ಇನ್ಮುಂದೆ ಬಾಂಗ್ಲಾದೇಶವನ್ನು ಆಳಲಿದ್ದಾರೆ. ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷವು ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿದ್ದು, 299 ಸ್ಥಾನಗಳಲ್ಲಿ 209 ಸ್ಥಾನಗಳನ್ನು ಗಳಿಸಿದೆ. ಅದರ ಮಿತ್ರಪಕ್ಷಗಳು ಸೇರಿ 212 ಸ್ಥಾನಗಳನ್ನು ಗಳಿಸಿವೆ. 

ಮಹಿಳೆಯರು, ರೈತರು, ಯುವಕರಿಗೆ ಗುಡ್ ನ್ಯೂಸ್; ಸೇವಾ ತೀರ್ಥ ಕಚೇರಿಯಲ್ಲಿ ಪ್ರಧಾನಿ ಮೋದಿ ಮೊದಲ ನಿರ್ಧಾರ

ಇಂದು ಉದ್ಘಾಟನೆಗೊಂಡ ಹೊಸ ಪ್ರಧಾನಿ ಕಚೇರಿಯಾದ ಸೇವಾ ತೀರ್ಥದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಮಹತ್ವದ ಮೊದಲ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ. ಈ ನಿರ್ಧಾರ ಮಹಿಳೆಯರು, ರೈತರು, ಯುವಕರ ಅಭಿವೃದ್ಧಿಯ ಮೇಲೆ ಕೇಂದ್ರೀಕೃತವಾಗಿದೆ. ಪ್ರಧಾನ ಮಂತ್ರಿಗಳ ಕಚೇರಿ (ಪಿಎಂಒ)ಯಾದ ಸೇವಾ ತೀರ್ಥ ಸಂಕೀರ್ಣಕ್ಕೆ ಸ್ಥಳಾಂತರಗೊಂಡ ಪ್ರಧಾನಿ ನರೇಂದ್ರ ಮೋದಿ ರೈತರು, ಮಹಿಳೆಯರು, ಯುವಕರು ಮತ್ತು ದುರ್ಬಲ ನಾಗರಿಕರ ಕಲ್ಯಾಣಕ್ಕೆ ಸಂಬಂಧಿಸಿದ 4 ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ. ಆ ಬಗ್ಗೆ ಮಾಹಿತಿ ಇಲ್ಲಿದೆ.

ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಪ್ರಧಾನಿ ಮೋದಿ

Seva Teerth : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು (ಫೆಬ್ರವರಿ 13) ದೆಹಲಿಯ ಪ್ರಧಾನ ಮಂತ್ರಿ ಕಚೇರಿ (ಪಿಎಂಒ)ಯ ಹೊಸ ಕಟ್ಟಡ ಸಂಕೀರ್ಣದ ಹೆಸರನ್ನು "ಸೇವಾ ತೀರ್ಥ" ಎಂದು ಅನಾವರಣಗೊಳಿಸಿದರು. ಪ್ರಧಾನಿ ಮೋದಿ ಇಂದು ಹೊಸ ಪ್ರಧಾನಿ ಕಚೇರಿಗೆ ಸ್ಥಳಾಂತರಗೊಂಡಿದ್ದಾರೆ. ಇದರರ್ಥ ಪ್ರಧಾನ ಮಂತ್ರಿ ಕಚೇರಿಯ ವಿಳಾಸ ಶಾಶ್ವತವಾಗಿ ಬದಲಾಗಿದೆ. ಪ್ರಧಾನಿ ಮೋದಿಯವರ ಕಚೇರಿಯು ಈಗ ಸೇವಾ ತೀರ್ಥದಲ್ಲಿದ್ದು, ಇತರ ಹಲವಾರು ಸಚಿವಾಲಯಗಳ ಕಚೇರಿಗಳು ಕೂಡ ಇಲ್ಲಿರುತ್ತದೆ.

ಸ್ಪೀಕರ್ ಕೊಠಡಿಗೆ ನುಗ್ಗಿ ಕಾಂಗ್ರೆಸ್ ಸಂಸದರಿಂದ ಪ್ರಧಾನಿಗೆ ಬೆದರಿಕೆ; ಹೊಸ ವಿಡಿಯೋ ವೈರಲ್

ಲೋಕಸಭಾ ಅಧಿವೇಶನದ ವೇಳೆ ಫೆ. 4ರಂದು ಪ್ರಧಾನಿ ನರೇಂದ್ರ ಮೋದಿಯವರ ಭಾಷಣಕ್ಕೆ ಕಾಂಗ್ರೆಸ್ ಮಹಿಳಾ ಸಂಸದರು ಅಡ್ಡಿಪಡಿಸಿ, ಪ್ರಧಾನಿಯ ಕುರ್ಚಿಯನ್ನು ಮುತ್ತಿಗೆ ಹಾಕಿದ್ದರು ಎಂಬ ವಿಷಯ ವಿವಾದಕ್ಕೆ ಕಾರಣವಾಗಿತ್ತು. ಕಾಂಗ್ರೆಸ್ ಸಂಸದರು ಅಧಿವೇಶನದಲ್ಲಿ ಗದ್ದಲ ಎಬ್ಬಿಸಿದ ವಿಡಿಯೋವನ್ನು ಕೂಡ ಕೇಂದ್ರ ಸಚಿವ ಕಿರಣ್ ರಿಜಿಜು ಹಂಚಿಕೊಂಡಿದ್ದರು. ಇದೀಗ ಅವರು ಕಾಂಗ್ರೆಸ್ ಸಂಸದರು ಸ್ಪೀಕರ್ ಕೊಠಡಿಯೊಳಗೆ ಪ್ರಧಾನಿ ಮೋದಿಗೆ ಬೆದರಿಕೆ ಹಾಕಿದ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ.

ಭಾರತ ಮಾತೆಯನ್ನು ಮಾರಲು ನಿಮಗೆ ನಾಚಿಕೆಯಾಗುವುದಿಲ್ಲವೇ? ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಇಂದು ಲೋಕಸಭೆಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಇತ್ತೀಚೆಗೆ ಅಮೆರಿಕದೊಂದಿಗೆ ಅಂತಿಮಗೊಳಿಸಿದ ವ್ಯಾಪಾರ ಒಪ್ಪಂದದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮೇಲೆ ವಾಗ್ದಾಳಿ ಮಾಡಿದರು. ಭಾರತದ ಕೃಷಿ ಮತ್ತು ಡೈರಿ ಮಾರುಕಟ್ಟೆಗಳನ್ನು ಅಮೆರಿಕದ ಕೃಷಿ ಉತ್ಪನ್ನಗಳಿಗೆ ತೆರೆಯಲು ಒಪ್ಪುವ ಮೂಲಕ ಮೋದಿ ಸರ್ಕಾರ ಭಾರತ ಮಾತೆಯನ್ನು ಮಾರಾಟ ಮಾಡಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. 

ಫೆ. 17ರಂದು ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಭಾರತಕ್ಕೆ ಭೇಟಿ

ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಫೆಬ್ರವರಿ 17ರಿಂದ 19ರವರೆಗೆ ಭಾರತಕ್ಕೆ 3 ದಿನಗಳ ಅಧಿಕೃತ ಭೇಟಿ ನೀಡಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ಅವರು ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ. ವಿದೇಶಾಂಗ ಸಚಿವಾಲಯವು ಈ ಭೇಟಿಯ ಬಗ್ಗೆ ಮಾಹಿತಿಯನ್ನು ಒದಗಿಸಿದೆ. ಈ ಭೇಟಿಯ ಸಮಯದಲ್ಲಿ, ಅಧ್ಯಕ್ಷ ಮ್ಯಾಕ್ರನ್ ಮತ್ತು ಪ್ರಧಾನಿ ನರೇಂದ್ರ ಮೋದಿ ವ್ಯಾಪಕ ದ್ವಿಪಕ್ಷೀಯ ಮಾತುಕತೆಗಳನ್ನು ನಡೆಸಲಿದ್ದಾರೆ. ಭಾರತ ಮತ್ತು ಫ್ರಾನ್ಸ್ ನಡುವಿನ ಸಹಕಾರವನ್ನು ಮತ್ತಷ್ಟು ಬಲಪಡಿಸುವ ಬಗ್ಗೆ ಇಬ್ಬರು ನಾಯಕರು ಚರ್ಚಿಸಲಿದ್ದಾರೆ.

ಭಯದಿಂದ ಪ್ರಧಾನಿ ಮೋದಿ ಸದನಕ್ಕೆ ಗೈರು; ಕಾಂಗ್ರೆಸ್ ಮಹಿಳಾ ಸಂಸದರಿಂದ ಲೋಕಸಭಾ ಸ್ಪೀಕರ್‌ಗೆ ಪತ್ರ

ಪ್ರಧಾನಿ ನರೇಂದ್ರ ಮೋದಿ ಅವರು ಭಯದಿಂದಾಗಿ ಸಂಸತ್ ಅಧಿವೇಶನದ ಕಲಾಪಕ್ಕೆ ಗೈರುಹಾಜರಾಗಿದ್ದಾರೆ ಎಂದು ಕಾಂಗ್ರೆಸ್ ಮಹಿಳಾ ಸಂಸದರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದಿದ್ದಾರೆ. ಕಾಂಗ್ರೆಸ್ ಮಹಿಳಾ ಸಂಸತ್ ಸದಸ್ಯರ ಗುಂಪೊಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದಿದ್ದು, ತಮ್ಮ ಪ್ರತಿಭಟನೆಯು ಪ್ರಧಾನಿ ನರೇಂದ್ರ ಮೋದಿಗೆ ಬೆದರಿಕೆಯನ್ನುಂಟುಮಾಡಿದೆ ಎಂಬ ಆರೋಪಗಳನ್ನು ತಿರಸ್ಕರಿಸಿದೆ. ರಾಷ್ಟ್ರಪತಿಗಳ ಭಾಷಣಕ್ಕೆ ಧನ್ಯವಾದ ನಿರ್ಣಯದ ಮೇಲಿನ ಚರ್ಚೆಯ ಸಮಯದಲ್ಲಿ ಮೋದಿ ಸದನಕ್ಕೆ ಗೈರುಹಾಜರಾಗಿರುವುದು ಭಯದಿಂದಲೇ ಹೊರತು ನಮ್ಮ ಒತ್ತಡದಿಂದಲ್ಲ ಎಂದು ಪ್ರತಿಪಾದಿಸಿದೆ.

ಮಲೇಷ್ಯಾದ 800 ಕಲಾವಿದರಿಂದ ಪ್ರಧಾನಿ ಮೋದಿಗೆ ಶಾಸ್ತ್ರೀಯ ನೃತ್ಯದ ಸ್ವಾಗತ; ವಿಡಿಯೋ ವೈರಲ್

ಪ್ರಧಾನಿ ಮೋದಿ ಅವರನ್ನು ಮಲೇಷ್ಯಾದಲ್ಲಿ ಸ್ವಾಗತಿಸಲು ಭಾರತೀಯ ನೃತ್ಯವನ್ನು ಪ್ರದರ್ಶಿಸಲಾಯಿತು. ನೇತಾಜಿ ಸುಭಾಷ್ ಚಂದ್ರ ಬೋಸ್ ಭಾರತೀಯ ಸಾಂಸ್ಕೃತಿಕ ಕೇಂದ್ರ (NSCBICC) ಕೌಲಾಲಂಪುರ್‌ನಲ್ಲಿ ಭಾರತೀಯ ಸಂಸ್ಕೃತಿಯ ಅದ್ಭುತ ಪ್ರದರ್ಶನವನ್ನು ಆಯೋಜಿಸಿ ಗಮನ ಸೆಳೆಯಿತು. ಭಾರತೀಯ ಸಮುದಾಯ ಮಲೇಷ್ಯಾದ ಸಾಂಸ್ಕೃತಿಕ ಸಮಿತಿಯ ಬ್ಯಾನರ್ ಅಡಿಯಲ್ಲಿ ಸುಮಾರು 800 ನರ್ತಕರು ಒಂದೇ ಬಾರಿಗೆ ನಿರಂತರ 5 ನಿಮಿಷಗಳ ಕಾಲ ನೃತ್ಯ ಪ್ರದರ್ಶಿಸಿದರು. ಇದು ವಿವಿಧ ರೀತಿಯ ಭಾರತೀಯ ಶಾಸ್ತ್ರೀಯ ಮತ್ತು ಜಾನಪದ ನೃತ್ಯ ಪ್ರಕಾರಗಳನ್ನು ಪ್ರದರ್ಶಿಸಲಾಯಿತು.