Prime Minister Of India
ಭಾರತ ಪ್ರಜಾತಂತ್ರ ವ್ಯವಸ್ಥೆಯ ನಾಯಕನೆಂದರೆ ಪ್ರಧಾನಿ. ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಒಂದಕ್ಕೆ ನಾಯಕರಾಗಿರುವ ಪ್ರಧಾನಿಗೆ ಐದು ವರ್ಷ ಶಾಸನಬದ್ಧ ಅಧಿಕಾರವಿರುತ್ತದೆ. ಲೋಕಸಭೆಯಲ್ಲಿ ಬಹುಮತ ಹೊಂದಿರುವ ಪಕ್ಷ ಅಥವಾ ಒಕ್ಕೂಟದ ಸದಸ್ಯರ ನಾಯಕನೇ ಪ್ರಧಾನಿ ಆಗಲಿದ್ದು, ಭಾರತವು ಸಧ್ಯಕ್ಕೆ 14ನೇ ಪ್ರಧಾನಿಯನ್ನು ಹೊಂದಿದೆ.
ಭಾರತದಲ್ಲಿ ಒಬ್ಬ ವ್ಯಕ್ತಿ ಎಷ್ಟು ವರ್ಷ ಅಥವಾ ಎಷ್ಟು ಅವಧಿಗೆ ಪ್ರಧಾನಿ ಆಗಬಹುದು ಎನ್ನುವ ಯಾವುದೇ ಮಿತಿಯಿಲ್ಲ. ಐದು ವರ್ಷಕ್ಕೊಮ್ಮೆ ನಡೆಯುವ ಚುನಾವಣೆಯಲ್ಲಿ ಪ್ರಧಾನಿ ಆಗುವ ಪಕ್ಷ ಅಥವಾ ಒಕ್ಕೂಟ ಗೆಲುವು ಸಾಧಿಸಿದರೆ ಸಾಕಾಗುತ್ತದೆ. ಜವಾಹರ್ಲಾಲ್ ನೆಹರು ಅವರು ಭಾರತದ ಮೊದಲ ಪ್ರಧಾನಿ ಆಗಿದ್ದರು. ಬಳಿಕ ಲಾಲ್ಬಹದ್ದೂರ್ ಶಾಸ್ತ್ರೀ, ಇಂದಿರಾ ಗಾಂಧಿ ಪ್ರಧಾನಿ ಆಗಿದ್ದರು.
ಮೊರಾರ್ಜಿ ದೇಸಾಯಿ ಅವರು ದೇಶದ ಮೊದಲ ಕಾಂಗ್ರೆಸ್ಸೇತರ ಪ್ರಧಾನಿಯಾದರೇ, ಇಂದಿರಾ ಅವರು ಮೊದಲ ಮಹಿಳಾ ಪ್ರಧಾನಿ ಎನಿಸಿಕೊಂಡರು. ಬಳಿಕ ರಾಜೀವ್ ಗಾಂಧಿ, ವಿ.ಪಿ ಸಿಂಗ್, ಚಂದ್ರಶೇಖರ್, ಪಿ.ವಿ ನರಸಿಂಹರಾವ್, ಅಟಲ್ ಬಿಹಾರಿ ವಾಜಪೇಯಿ, ಎಚ್.ಡಿ ದೇವೇಗೌಡ, ಐ.ಕೆ ಗುಜ್ರಾಲ್, ಮನಮೋಹನ್ ಸಿಂಗ್ ಈ ಹುದ್ದೆಯನ್ನು ಏರಿದರು.
2014ರಿಂದ ನರೇಂದ್ರ ಮೋದಿಯು ಪ್ರಧಾನಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಭಾರತದ ಸಂವಿಧಾನಬದ್ಧ ಪ್ರಜಾತಂತ್ರ ವ್ಯವಸ್ಥೆಯಲ್ಲಿ ರಾಷ್ಟ್ರಪತಿಯು ಮೊದಲ ಪ್ರಜೆಯಾಗಿದ್ದರೂ, ಆಡಳಿತಾತ್ಮಕವಾಗಿ ಪ್ರಧಾನಿಯೇ ದೇಶದ ಅತ್ಯಂತ ಪ್ರಭಾವಿ ವ್ಯಕ್ತಿ.
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ದೇಶದಲ್ಲಿ ಇಂಧನದ ಬಿಕ್ಕಟ್ಟನ್ನು ನಿಯಂತ್ರಿಸಲು ಪ್ರಧಾನಿ ಮೋದಿ ತಮ್ಮ ಬೆಂಗಾವಲು ಪಡೆಯ ಗಾತ್ರವನ್ನು ಗಣನೀಯವಾಗಿ ಕಡಿಮೆ ಮಾಡಿದ್ದಾರೆ. ಎಸ್ಪಿಜಿ ಶಿಷ್ಟಾಚಾರದ ಪ್ರಕಾರ ಅಗತ್ಯ ಭದ್ರತಾ ಘಟಕಗಳನ್ನು ನಿರ್ವಹಿಸುವ ವಾಹನಗಳನ್ನು ಕಡಿತಗೊಳಿಸಲಾಗಿದೆ. ಸರ್ಕಾರದೊಳಗೆ ಕಠಿಣ ಕ್ರಮಗಳ ಅನುಷ್ಠಾನವನ್ನು ಸೂಚಿಸುವ ಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ತಮ್ಮ ಬೆಂಗಾವಲು ಪಡೆಯ ಗಾತ್ರವನ್ನು ಗಣನೀಯವಾಗಿ ಕಡಿಮೆ ಮಾಡಿದ್ದಾರೆ. ಪ್ರಧಾನಿ ಮೋದಿಯ ವಾಹನದ ಹಿಂದೆ ಕೇವಲ 2 ಬೆಂಗಾವಲು ಪಡೆ ಹೋಗುತ್ತಿರುವ ವಿಡಿಯೋ ಇಲ್ಲಿದೆ.
- Sushma Chakre
- Updated on: May 13, 2026
- 4:50 pm
ರೈತರಿಗೆ ಒಳ್ಳೆ ಸುದ್ದಿ; 14 ಖಾರಿಫ್ ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸಲು ಮೋದಿ ಸಂಪುಟ ಒಪ್ಪಿಗೆ
2026-27ರ ಋತುವಿನ 14 ಖಾರಿಫ್ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗಳನ್ನು (MSP) ಹೆಚ್ಚಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯ ನಂತರ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್, ಬೆಳೆಗಾರರಿಗೆ ತಮ್ಮ ಉತ್ಪನ್ನಗಳಿಗೆ ಲಾಭದಾಯಕ ಬೆಲೆಗಳನ್ನು ಖಚಿತಪಡಿಸಿಕೊಳ್ಳಲು ಸರ್ಕಾರ ಖಾರಿಫ್ ಬೆಳೆಗಳ ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚಿಸಿದೆ ಎಂದು ಹೇಳಿದ್ದಾರೆ.
- Sushma Chakre
- Updated on: May 13, 2026
- 4:23 pm
ಸಚಿವರ ಪ್ರಯಾಣ, ಔತಣಕೂಟದ ಮೇಲೆ ನಿರ್ಬಂಧ; ತನ್ನ ಸರ್ಕಾರದಿಂದಲೇ ಬದಲಾವಣೆ ಆರಂಭಿಸಲು ಮೋದಿ ಪ್ಲಾನ್
ಪ್ರಧಾನಿ ನರೇಂದ್ರ ಮೋದಿ ಈಗಾಗಲೇ ಎರಡೆರಡು ಬಾರಿ ಇಂಧನ ಮಿತ ಬಳಕೆಯ ಬಗ್ಗೆ ದೇಶದ ನಾಗರಿಕರಲ್ಲಿ ಮನವಿ ಮಾಡಿದ್ದಾರೆ. ವರ್ಕ್ ಫ್ರಂ ಹೋಂ, ಆನ್ಲೈನ್ ಕ್ಲಾಸ್, ಎಲೆಕ್ಟ್ರಿಕ್ ವಾಹನಗಳ ಬಳಕೆಯಂತಹ ಜೀವನಶೈಲಿಯ ಬದಲಾವಣೆಯ ಮೂಲಕ ದೇಶದ ಇಂಧನ ಬಿಕ್ಕಟ್ಟನ್ನು ಬಗೆಹರಿಸಬಹುದು ಎಂದು ಮೋದಿ ಕರೆನೀಡಿದ್ದಾರೆ. ಇದೀಗ ತಮ್ಮದೇ ಕೇಂದ್ರ ಸರ್ಕಾರದೊಳಗೆ ಕೆಲವು ಬದಲಾವಣೆಗಳನ್ನು ತರುವ ಮೂಲಕ ದೇಶದ ಜನರಿಗೆ ಮಾದರಿಯಾಗಲು ಪ್ರಧಾನಿ ನರೇಂದ್ರ ಮೋದಿ ಪ್ಲಾನ್ ಮಾಡಿದ್ದಾರೆ ಎನ್ನಲಾಗಿದೆ.
- Sushma Chakre
- Updated on: May 12, 2026
- 7:40 pm
ವರ್ಕ್ ಫ್ರಂ ಹೋಂ, ಆನ್ಲೈನ್ ಕ್ಲಾಸ್, ಚಿನ್ನ ಬೇಡ, ಇಂಧನದ ಮಿತ ಬಳಕೆ; ಮತ್ತೊಮ್ಮೆ ಪ್ರಧಾನಿ ಮೋದಿ ಮನವಿ
ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಮತ್ತೊಮ್ಮೆ ದೇಶದ ಜನರು ತಮ್ಮ ಸರ್ಕಾರಕ್ಕೆ ಸಹಕಾರ ನೀಡಬೇಕೆಂದು ಮನವಿ ಮಾಡಿದ್ದಾರೆ. 'ಪರಿಸ್ಥಿತಿ ಸಾಮಾನ್ಯ ಸ್ಥಿತಿಗೆ ಬರುವವರೆಗೆ ದೇಶದ ಜನರು ವರ್ಕ್ ಫ್ರಂ ಹೋಂ ಮಾಡಿ, ಇಂಧನವನ್ನು ಉಳಿಸಿ, ಚಿನ್ನ ಖರೀದಿಸಬೇಡಿ, ಆನ್ಲೈನ್ ಕ್ಲಾಸ್ ಅಳವಡಿಸಿಕೊಳ್ಳಿ, ಆನ್ಲೈನ್ನಲ್ಲೇ ಮೀಟಿಂಗ್ ಮಾಡಿ' ಎಂದು ಪ್ರಧಾನಿ ಮೋದಿ ಮತ್ತೆ ಕರೆ ನೀಡಿದ್ದಾರೆ.
- Sushma Chakre
- Updated on: May 11, 2026
- 10:09 pm
ಹೈದರಾಬಾದ್ಗೆ ನಾಳೆ ಪ್ರಧಾನಿ ಮೋದಿ ಭೇಟಿ; 9,400 ಕೋಟಿ ಮೌಲ್ಯದ ಯೋಜನೆಗಳಿಗೆ ಚಾಲನೆ
ಮೂರನೇ ಅವಧಿಗೆ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಪ್ರಧಾನಿ ನರೇಂದ್ರ ಮೋದಿ ಮೇ 10ರಂದು ತೆಲಂಗಾಣಕ್ಕೆ ಮೊದಲ ಬಾರಿ ಭೇಟಿ ನೀಡಲಿದ್ದಾರೆ. ಹೈದರಾಬಾದ್ಗೆ ತೆರಳಲಿರುವ ಪ್ರಧಾನ ಮಂತ್ರಿ ಮೋದಿ ಒಟ್ಟಾರೆಯಾಗಿ ಸುಮಾರು 7,823 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ಶಿಲಾನ್ಯಾಸ ಮಾಡಲಿದ್ದಾರೆ. ಹೈದರಾಬಾದ್-ನಾಗ್ಪುರ ಕೈಗಾರಿಕಾ ಕಾರಿಡಾರ್ ಅಡಿಯಲ್ಲಿ ಜಹೀರಾಬಾದ್ನಲ್ಲಿ 2,360 ಕೋಟಿ ರೂ. ವೆಚ್ಚದ, 3,245 ಎಕರೆ ವಿಸ್ತೀರ್ಣದ ಸಮಗ್ರ ಕೈಗಾರಿಕಾ ಸ್ಮಾರ್ಟ್ ಸಿಟಿಗೆ ಅವರು ಶಿಲಾನ್ಯಾಸ ಮಾಡಲಿದ್ದಾರೆ.
- Sushma Chakre
- Updated on: May 9, 2026
- 3:51 pm
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಈ ಹಿಂದೆ ಚುನಾವಣಾ ಪ್ರಚಾರದ ವೇಳೆ ಬಂಗಾಳಕ್ಕೆ ಬಂದಿದ್ದ ಪ್ರಧಾನಿ ಮೋದಿ ಮುಂದಿನ ಬಾರಿ ಬಿಜೆಪಿ ಸರ್ಕಾರದ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕೆ ಬರುತ್ತೇನೆ ಎಂದು ಭವಿಷ್ಯ ನುಡಿದಿದ್ದರು. ಅದರಂತೆ ಬಂಗಾಳದಲ್ಲಿ ಮೊದಲ ಬಿಜೆಪಿ ಸರ್ಕಾರ ರಚನೆಯಾಗಿದೆ. ಹೀಗಾಗಿ, ಇಂದು ಬಿಜೆಪಿ ಸರ್ಕಾರದ ಪ್ರಮಾಣವಚನ ಸ್ವೀಕಾರ ಸಮಾರಂಭದ ವೇದಿಕೆಯಲ್ಲಿ ಪ್ರಧಾನಿ ಮೋದಿ ಅಲ್ಲಿ ಸೇರಿದ್ದ ಪಶ್ಚಿಮ ಬಂಗಾಳದ ಮತದಾರರ ಮುಂದೆ ಶಿರ ಬಾಗಿ ನಮಸ್ಕಾರ ಮಾಡಿದ್ದಾರೆ. ಈ ಮೂಲಕ ತಮ್ಮ ಕೃತಜ್ಞತೆಯನ್ನು ಸಲ್ಲಿಸಿದ್ದಾರೆ.
- Sushma Chakre
- Updated on: May 9, 2026
- 1:12 pm
ಬಂಗಾಳದಲ್ಲಿ ಬಿಜೆಪಿ ಐತಿಹಾಸಿಕ ಗೆಲುವಿಗೆ ಮೋದಿಗೆ ಟ್ರಂಪ್ ಅಭಿನಂದನೆ
ಪಶ್ಚಿಮ ಬಂಗಾಳದ ಚುನಾವಣೆಯಲ್ಲಿ ಬಿಜೆಪಿಯ ಗೆಲುವಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಭಿನಂದಿಸಿದ್ದಾರೆ. ಈ ಗೆಲುವನ್ನು 'ಐತಿಹಾಸಿಕ ಮತ್ತು ನಿರ್ಣಾಯಕ' ಎಂದು ಕರೆದಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಸ್ಪಷ್ಟ ಬಹುಮತ ಪಡೆದಿರುವ ಬಿಜೆಪಿ ಮೊದಲ ಬಾರಿ ಸರ್ಕಾರ ರಚಿಸಲು ಸಜ್ಜಾಗಿದೆ. ಈ ಗೆಲುವಿಗೆ ಪ್ರಧಾನಿ ನರೇಂದ್ರ ಮೋದಿಗೆ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ.
- Sushma Chakre
- Updated on: May 5, 2026
- 10:56 pm
ಮೇ 10ಕ್ಕೆ ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ಗೆ ಪ್ರಧಾನಿ ಮೋದಿ ಭೇಟಿ, ಹಲವು ಯೋಜನೆಗಳಿಗೆ ಚಾಲನೆ
ಬೆಂಗಳೂರಿನ ಬಳಿ ಇರುವ ಆರ್ಟ್ ಆಫ್ ಲಿವಿಂಗ್ ಅಂತಾರಾಷ್ಟ್ರೀಯ ಕೇಂದ್ರಕ್ಕೆ ಮೇ 10ರಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ಈ ಕೇಂದ್ರದ 25ನೇ ವಾರ್ಷಿಕೋತ್ಸವ ಮತ್ತು ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರ 70ನೇ ಜನ್ಮದಿನದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಇಲ್ಲಿಗೆ ಭೇಟಿ ನೀಡಲಿದ್ದು, ಈ ವೇಳೆ ಹಲವು ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಪ್ರಪಂಚದಾದ್ಯಂತ ಲಕ್ಷಾಂತರ ಜನರ ಜೀವನವನ್ನು ಬೆಳಗಿಸಿದ ಈ ಸಂಸ್ಥೆ ಈಗ ಅಪರೂಪದ ಮೈಲಿಗಲ್ಲನ್ನು ತಲುಪಿದೆ.
- Sushma Chakre
- Updated on: May 6, 2026
- 9:00 am
PM Modi Speech: ಗಂಗೋತ್ರಿಯಿಂದ ಗಂಗಾಸಾಗರದವರೆಗೆ ಕಮಲ ಅರಳಿದೆ; ಬಂಗಾಳದ ಗೆಲುವು ಐತಿಹಾಸಿಕವೆಂದ ಪ್ರಧಾನಿ ಮೋದಿ
ಪ್ರಧಾನಿ ಮೋದಿ ಭಾಷಣ: ಪಶ್ಚಿಮ ಬಂಗಾಳ, ಪುದುಚೇರಿ ಮತ್ತು ಅಸ್ಸಾಂನಲ್ಲಿ ಬಿಜೆಪಿ ಭಾರೀ ಗೆಲುವು ಸಾಧಿಸಿದೆ. ಐದು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಮೂರು ರಾಜ್ಯಗಳಲ್ಲಿ ಗೆಲುವು ಕಂಡಿರುವ ಬಿಜೆಪಿ ವಿಜಯೋತ್ಸವದ ಸಂಭ್ರಮದಲ್ಲಿದೆ. ಈ ವೇಳೆ ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಕಾರ್ಯಕರ್ತರು ಮತ್ತು ಬಿಜೆಪಿಯ ಗೆಲುವಿಗೆ ಕಾರಣರಾದ ಮತದಾರರನ್ನು ಉದ್ದೇಶಿಸಿ ಭಾಷಣ ಮಾಡಿದ್ದಾರೆ. ಪಶ್ಚಿಮ ಬಂಗಾಳದ ಗೆಲುವು ಐತಿಹಾಸಿಕ ಗೆಲುವು ಎಂದು ಪ್ರಧಾನಿ ಮೋದಿ ಬಣ್ಣಿಸಿದ್ದಾರೆ.
- Sushma Chakre
- Updated on: May 4, 2026
- 8:00 pm
ವಾರಾಣಸಿಯಲ್ಲಿ ತಮಗಾಗಿ ಕಾದಿದ್ದ ಮಕ್ಕಳಿಗೆ ಮುದ್ದುಗರೆದ ಮೋದಿ ತಾತ
ಪ್ರಧಾನಿ ಮೋದಿಗಾಗಿ ಅಪ್ಪ-ಅಮ್ಮನ ಜೊತೆ ಸಾಕಷ್ಟು ಹೊತ್ತಿನಿಂದ ಕಾಯುತ್ತಿದ್ದ ಮಕ್ಕಳು ಮೋದಿಯನ್ನು ಕಂಡ ಕೂಡಲೆ ಕೈ ಬೀಸತೊಡಗಿದರು. ಇದನ್ನು ನೋಡಿದ ಮೋದಿ ಆ ಮಕ್ಕಳನ್ನು ತನ್ನತ್ತ ಕರೆದು ಮಾತನಾಡಿಸಿದ್ದಾರೆ. ಈ ಹೃದಯಸ್ಪರ್ಶಿ ದೃಶ್ಯಗಳು ವೈರಲ್ ಆಗಿವೆ. ಕಾಶಿ ವಿಶ್ವನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ನಂತರ ಪ್ರಧಾನಿ ಮೋದಿ ಅವರು ಹೊರಡುವ ಹೊತ್ತಿಗೆ ಈ ಹೃದಯಸ್ಪರ್ಶಿ ಕ್ಷಣ ಅನಾವರಣಗೊಂಡಿತು. ದೂರದಿಂದಲೇ ಚಿಕ್ಕ ಮಕ್ಕಳು ತಮ್ಮತ್ತ ಉತ್ಸಾಹದಿಂದ ಕೈ ಬೀಸುತ್ತಿರುವುದನ್ನು ನೋಡಿದ ಮೋದಿ ಹಾಗೇ ಮುಂದೆ ಹಾದುಹೋಗಲಿಲ್ಲ,. ಅಲ್ಲೇ ನಿಂತು ಆ ಮಕ್ಕಳನ್ನು ಹತ್ತಿರ ಕರೆದು ಮಾತನಾಡಿಸಿದರು.
- Sushma Chakre
- Updated on: Apr 29, 2026
- 4:42 pm
ಕಾಶಿ-ಪುಣೆ ಅಮೃತ್ ಭಾರತ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
ಪ್ರಧಾನಿ ನರೇಂದ್ರ ಮೋದಿ ಅವರು 2 ಹೊಸ ಅಮೃತ್ ಭಾರತ್ ಎಕ್ಸ್ಪ್ರೆಸ್ ರೈಲುಗಳಿಗೆ ಹಸಿರು ನಿಶಾನೆ ತೋರಿದರು. ಬನಾರಸ್ ನಿಂದ ಪುಣೆ (ಹಡಪ್ಸರ್) ಮತ್ತು ಅಯೋಧ್ಯೆಯಿಂದ ಮುಂಬೈ (ಲೋಕಮಾನ್ಯ ತಿಲಕ್ ಟರ್ಮಿನಸ್) ರೈಲಿಗೆ ಚಾಲನೆ ನೀಡಲಾಗಿದೆ. ಅಯೋಧ್ಯಾ-ಮುಂಬೈ ಸೇವೆಯು ಶ್ರೀ ರಾಮ ಮಂದಿರಕ್ಕೆ ಸಂಪರ್ಕವನ್ನು ಹೆಚ್ಚಿಸುತ್ತದೆ, ಪ್ರಮುಖ ಧಾರ್ಮಿಕ ಸ್ಥಳಗಳ ನಡುವಿನ ಸಂಪರ್ಕವನ್ನು ಬಲಪಡಿಸುತ್ತದೆ.
- Sushma Chakre
- Updated on: Apr 28, 2026
- 10:05 pm
ಮೊದಲ ಹಂತದ ಚುನಾವಣೆ ಬಂಗಾಳದಲ್ಲಿ ಜಂಗಲ್ ರಾಜ್ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಪ್ರಧಾನಿ ನರೇಂದ್ರ ಮೋದಿ ಪಶ್ಚಿಮ ಬಂಗಾಳದ ಮೊದಲ ಹಂತದ ಮತದಾನವನ್ನು ಟಿಎಂಸಿಯ 'ಜಂಗಲ್ ರಾಜ್'ನ 'ಅಂತ್ಯದ ಆರಂಭ' ಎಂದು ಕರೆದಿದ್ದಾರೆ. ಇಂದು ಬಂಗಾಳದಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಅವರು ಮಾತನಾಡಿದ್ದಾರೆ. ಟಿಎಂಸಿ ಮಹಿಳೆಯರು ಬೆಳೆಯುವುದನ್ನು ಬಯಸುವುದಿಲ್ಲ. ಆದರೆ, ಮಹಿಳೆಯರ ಸುರಕ್ಷತೆಯೇ ಬಿಜೆಪಿಯ ಆದ್ಯತೆ ಎಂದು ಹೇಳಿದ್ದಾರೆ.
- Sushma Chakre
- Updated on: Apr 24, 2026
- 4:02 pm