Sign In

By signing in or creating an account, you agree with Associated Broadcasting Company's Terms & Conditions and Privacy Policy.

Prime Minister Of India

Prime Minister Of India

ಭಾರತ ಪ್ರಜಾತಂತ್ರ ವ್ಯವಸ್ಥೆಯ ನಾಯಕನೆಂದರೆ ಪ್ರಧಾನಿ. ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಒಂದಕ್ಕೆ ನಾಯಕರಾಗಿರುವ ಪ್ರಧಾನಿಗೆ ಐದು ವರ್ಷ ಶಾಸನಬದ್ಧ ಅಧಿಕಾರವಿರುತ್ತದೆ. ಲೋಕಸಭೆಯಲ್ಲಿ ಬಹುಮತ ಹೊಂದಿರುವ ಪಕ್ಷ ಅಥವಾ ಒಕ್ಕೂಟದ ಸದಸ್ಯರ ನಾಯಕನೇ ಪ್ರಧಾನಿ ಆಗಲಿದ್ದು, ಭಾರತವು ಸಧ್ಯಕ್ಕೆ 14ನೇ ಪ್ರಧಾನಿಯನ್ನು ಹೊಂದಿದೆ.

ಭಾರತದಲ್ಲಿ ಒಬ್ಬ ವ್ಯಕ್ತಿ ಎಷ್ಟು ವರ್ಷ ಅಥವಾ ಎಷ್ಟು ಅವಧಿಗೆ ಪ್ರಧಾನಿ ಆಗಬಹುದು ಎನ್ನುವ ಯಾವುದೇ ಮಿತಿಯಿಲ್ಲ. ಐದು ವರ್ಷಕ್ಕೊಮ್ಮೆ ನಡೆಯುವ ಚುನಾವಣೆಯಲ್ಲಿ ಪ್ರಧಾನಿ ಆಗುವ ಪಕ್ಷ ಅಥವಾ ಒಕ್ಕೂಟ ಗೆಲುವು ಸಾಧಿಸಿದರೆ ಸಾಕಾಗುತ್ತದೆ. ಜವಾಹರ್‌ಲಾಲ್‌ ನೆಹರು ಅವರು ಭಾರತದ ಮೊದಲ ಪ್ರಧಾನಿ ಆಗಿದ್ದರು. ಬಳಿಕ ಲಾಲ್‌ಬಹದ್ದೂರ್‌ ಶಾಸ್ತ್ರೀ, ಇಂದಿರಾ ಗಾಂಧಿ ಪ್ರಧಾನಿ ಆಗಿದ್ದರು.

ಮೊರಾರ್ಜಿ ದೇಸಾಯಿ ಅವರು ದೇಶದ ಮೊದಲ ಕಾಂಗ್ರೆಸ್ಸೇತರ ಪ್ರಧಾನಿಯಾದರೇ, ಇಂದಿರಾ ಅವರು ಮೊದಲ ಮಹಿಳಾ ಪ್ರಧಾನಿ ಎನಿಸಿಕೊಂಡರು. ಬಳಿಕ ರಾಜೀವ್‌ ಗಾಂಧಿ, ವಿ.ಪಿ ಸಿಂಗ್‌, ಚಂದ್ರಶೇಖರ್‌, ಪಿ.ವಿ ನರಸಿಂಹರಾವ್‌, ಅಟಲ್‌ ಬಿಹಾರಿ ವಾಜಪೇಯಿ, ಎಚ್‌.ಡಿ ದೇವೇಗೌಡ, ಐ.ಕೆ ಗುಜ್ರಾಲ್‌, ಮನಮೋಹನ್‌ ಸಿಂಗ್‌ ಈ ಹುದ್ದೆಯನ್ನು ಏರಿದರು.

2014ರಿಂದ ನರೇಂದ್ರ ಮೋದಿಯು ಪ್ರಧಾನಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಭಾರತದ ಸಂವಿಧಾನಬದ್ಧ ಪ್ರಜಾತಂತ್ರ ವ್ಯವಸ್ಥೆಯಲ್ಲಿ ರಾಷ್ಟ್ರಪತಿಯು ಮೊದಲ ಪ್ರಜೆಯಾಗಿದ್ದರೂ, ಆಡಳಿತಾತ್ಮಕವಾಗಿ ಪ್ರಧಾನಿಯೇ ದೇಶದ ಅತ್ಯಂತ ಪ್ರಭಾವಿ ವ್ಯಕ್ತಿ.

ಇನ್ನೂ ಹೆಚ್ಚು ಓದಿ

ಉಕ್ರೇನ್​ನಿಂದ ಇಟಲಿವರೆಗೆ 2024ರಲ್ಲಿ ಪ್ರಧಾನಿ ಮೋದಿ ಭೇಟಿಯಾದ ಪ್ರಮುಖ ವ್ಯಕ್ತಿಗಳು

ಪ್ರಧಾನಿ ನರೇಂದ್ರ ಮೋದಿ 2024ರಲ್ಲಿ ಉಕ್ರೇನ್​ನಿಂದ ಹಿಡಿದು ಇಟಲಿಯವರೆಗೂ ಭೇಟಿ ನೀಡಿದ್ದಾರೆ. 2024ರಲ್ಲಿ ಪ್ರಧಾನಿ ಮೋದಿಯ ಪಯಣ ಹೇಗಿತ್ತು ಎಂಬುದರ ಕುರಿತು ಫೋಟೊ ಸಮೇತ ಇಲ್ಲಿ ವಿವರಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ವೆಬ್‌ಸೈಟ್ narendramodi.in ನಲ್ಲಿ 2024 ರ ಐಕಾನಿಕ್ ಫೋಟೋಗಳ ಸಂಗ್ರಹವನ್ನು ಹಂಚಿಕೊಂಡಿದ್ದಾರೆ.

2024ರಲ್ಲಿ ಹೇಗಿತ್ತು ಪ್ರಧಾನಿ ಮೋದಿ ಹಾದಿ, ಪಯಣ: ಇಲ್ಲಿದೆ ಇಣುಕುನೋಟ

ರಾಮ ಮಂದಿರ ಉದ್ಘಾಟನೆಯಿಂದ ಹಿಡಿದು ಉಕ್ರೇನ್ ಭೇಟಿಯವರೆಗೂ 2024ರಲ್ಲಿ ಪ್ರಧಾನಿ ಮೋದಿಯ ಪಯಣ ಹೇಗಿತ್ತು ಎಂಬುದರ ಕುರಿತು ಫೋಟೊ ಸಮೇತ ಇಲ್ಲಿ ವಿವರಿಸಲಾಗಿದೆ. ಪ್ರಕೃತಿ ವಿಕೋಪಗಳಾದ ಸಂದರ್ಭದಲ್ಲಿ ಆ ಪ್ರದೇಶಗಳಿಗೆ ಭೇಟಿ ನೀಡಿದ್ದು, ಚುನಾವಣೆ, ರಾಮ ಮಂದಿರ ಉದ್ಘಾಟನೆ, ಗುರುದ್ವಾರ ಭೇಟಿ, ಜಿ20 ಶೃಂಗಸಭೆ ಸೇರಿದಂತೆ ಹತ್ತು ಹಲವು ವಿಚಾರಗಳ ಬಗ್ಗೆ ಮಾಹಿತಿ ಇಲ್ಲಿದೆ.

ತಂದೆ-ತಾಯಿಯೊಂದಿಗೆ ಪ್ರಧಾನಿ ಮೋದಿಯವರನ್ನು ಭೇಟಿಯಾದ ಚೆಸ್ ಚಾಂಪಿಯನ್‌ ಗುಕೇಶ್

Guhesh Meets Modi: ಭಾರತದ 18 ವರ್ಷದ ಗ್ರ್ಯಾಂಡ್‌ಮಾಸ್ಟರ್ ಡಿ. ಗುಕೇಶ್ ಅವರು ಸಿಂಗಾಪುರದಲ್ಲಿ ನಡೆದ 2024ರ ವಿಶ್ವ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ ಗೆಲುವು ಸಾಧಿಸಿದ ನಂತರ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾದರು. ಪ್ರಧಾನಿ ಮೋದಿ ಅವರು ಗುಕೇಶ್ ಅವರ ಸಾಧನೆಗೆ ಅಭಿನಂದನೆ ಸಲ್ಲಿಸಿ, ಅವರ ನಿರ್ಣಯ ಮತ್ತು ಸಮರ್ಪಣೆಯನ್ನು ಪ್ರಶಂಸಿಸಿದರು. ಗುಕೇಶ್ ಅವರು ಪ್ರಧಾನಿ ಮೋದಿಯವರಿಗೆ ಚೆಸ್ ಬೋರ್ಡ್ ಅನ್ನು ಉಡುಗೊರೆಯಾಗಿ ನೀಡಿದರು.

ಮ್ಯಾಥ್ಸ್​ ಒಲಂಪಿಯಾಡ್​ನಲ್ಲಿ ಪದಕ ಗೆದ್ದ ವಿದ್ಯಾರ್ಥಿಗಳಿಗೆ ಪ್ರಧಾನಿ ಮೋದಿ ಅಭಿನಂದನೆ

ಇಂಟರ್ನ್ಯಾಷನಲ್ ಮ್ಯಾಥಮೆಟಿಕಲ್ ಒಲಿಂಪಿಯಾಡ್ (IMO) ಅಥವಾ ಮ್ಯಾಥ್ಸ್ ಒಲಿಂಪಿಯಾಡ್ ಎಂಬುದು ಹೈಸ್ಕೂಲ್ ವಿದ್ಯಾರ್ಥಿಗಳಿಗೆ ವಿಶ್ವ ಚಾಂಪಿಯನ್‌ಶಿಪ್ ಗಣಿತ ಸ್ಪರ್ಧೆಯಾಗಿದೆ. 1959 ರಲ್ಲಿ ರೊಮೇನಿಯಾದಲ್ಲಿ ಶುರುವಾದ ಈ ಸ್ಪರ್ಧೆಯನ್ನು ವಾರ್ಷಿಕವಾಗಿ ಬೇರೆ ದೇಶದಲ್ಲಿ ನಡೆಸಲಾಗುತ್ತದೆ. ಅದರಂತೆ ಈ ಬಾರಿ ಯುಕೆಯಲ್ಲಿ ನಡೆದ ಸ್ಪರ್ಧೆಯಲ್ಲಿ 108 ದೇಶಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಧನ್​​ತೇರಸ್​​, ದೀಪಾವಳಿ ಹಬ್ಬಕ್ಕೆ ಸ್ಥಳೀಯ ಉತ್ಪನ್ನಗಳನ್ನು ಪ್ರೋತ್ಸಾಹಿಸಲು ಕರೆ ನೀಡಿದ ಮೋದಿ

ಸ್ಥಳೀಯವಾಗಿ ತಯಾರಿಸಿದ ಉತ್ಪನ್ನಗಳನ್ನು ಖರೀದಿಸಿ ಮತ್ತು ನಂತರ ಉತ್ಪನ್ನ ಅಥವಾ ತಯಾರಕರೊಂದಿಗೆ ಸೆಲ್ಫಿಯನ್ನು NaMo ಅಪ್ಲಿಕೇಶನ್‌ನಲ್ಲಿ ಪೋಸ್ಟ್ ಮಾಡಿ. ನಿಮ್ಮ ಥ್ರೆಡ್‌ಗೆ ಸೇರಲು ಮತ್ತು ಸಕಾರಾತ್ಮಕ ಮನೋಭಾವವನ್ನು ಹರಡಲು ನಿಮ್ಮ ಸ್ನೇಹಿತರು ಮತ್ತು ಕುಟುಂಬವನ್ನು ಆಹ್ವಾನಿಸಿ" ಎಂದು ಪ್ರಧಾನಿ ಮೋದಿ ಹೇಳಿದರು.

ಮಗು ಮನಸ್ಸಿನ ಪ್ರಧಾನಿ, ಮೋದಿ ಮೋಡಿಗೆ ಪುಟ್ಟ ಮಗು ಪಿಧಾ! ಇಲ್ಲಿದೆ ವಿಡಿಯೋ

ಪ್ರಧಾನಿ ಮೋದಿ ಅವರು ಒಂದು ಚಿಕ್ಕ ಮಗುವಿನ ಜೊತೆಯಲ್ಲಿ ಆಟವಾಡುತ್ತಿರುವ ವಿಡಿಯೋ ಬಾರಿ ವೈರಲ್ ಆಗಿರುವುದನ್ನು ನೀವು ನೋಡಿರಬಹುದು. ಇದು ಮೋದಿ ಅಭಿಮಾನಿಗಳಿಗೆ ದುಪ್ಪಟ್ಟು ಸಂತಸ ತಂದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆ "ಮೋದಿಯವರ ಹಾವ -ಭಾವ ನೋಡಿದವರು ಅವರನ್ನು ದ್ವೇಷಿಸಲು ಸಾಧ್ಯವಿಲ್ಲ" ಎಂಬ ಟ್ಯಾಗ್ ಲೈನ್ ಮೂಲಕ ಎಲ್ಲರ ಸ್ಟೇಟಸ್ ಕೂಡ ಆಗಿದೆ. ಜೊತೆಗೆ ಫೇಸ್ಬುಕ್, ಟ್ವಿಟ್ಟರ್​​ಗಳಲ್ಲಿ ಬಾರಿ ಹವಾ ಎಬ್ಬಿಸಿದೆ.

ಬಿಆರ್​ಎಸ್​​​ ಡಿಎನ್ಎಯಲ್ಲೇ ಸ್ವಜನಪಕ್ಷಪಾತ, ಭ್ರಷ್ಟಾಚಾರವಿದೆ: ತೆಲಂಗಾಣದಲ್ಲಿ ಪ್ರಧಾನಿ ಮೋದಿ ವಾಗ್ದಾಳಿ

ಬಿಆರ್​ಎಸ್, ಕಾಂಗ್ರೆಸ್ ರಕ್ಷಣೆಯಲ್ಲಿ ಭ್ರಷ್ಟಾಚಾರ ಅರಳುತ್ತದೆ. ಕಾಂಗ್ರೆಸ್ ಮತ್ತು ಬಿಆರ್‌ಎಸ್ ಎಂದಿಗೂ ಅದನ್ನು ಬಿಡುವುದಿಲ್ಲ. ಹಿಂದುಳಿದ ವರ್ಗದ ವ್ಯಕ್ತಿ ಮುಖ್ಯಮಂತ್ರಿಯಾಗಲಿ ಎಂದು ಪ್ರಧಾನಿ ಮೋದಿ ಹೇಳಿದರು.

Vocal For Local: ‘ಅನುಪಮಾ’ ದೀಪಾವಳಿಯ ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ; ವಿಶೇಷವೇನು?

‘ಅನುಪಮಾ' ಅವರ ವಿಡಿಯೋವನ್ನು ಪ್ರಧಾನಿ ನರೇಂದ್ರ ಮೋದಿ ಹಂಚಿಕೊಂಡಿದ್ದಾರೆ. ಇದರಲ್ಲಿ ನೀವು ಕೇಂದ್ರ ಸರ್ಕಾರದ ‘ವೋಕಲ್ ಫಾರ್ ಲೋಕಲ್', ‘ಮೇಕ್ ಇನ್ ಇಂಡಿಯಾ', ‘ಡಿಜಿಟಲ್ ಇಂಡಿಯಾ' ಮತ್ತು ‘ಆತ್ಮನಿರ್ಭರ್ ಭಾರತ್'ಗಳ ಒಂದು ನೋಟವನ್ನು ಪಡೆಯುತ್ತೀರಿ.

Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ
ಲಿಂಗಾಯತ ಸಚಿವರು ಜಾತಿ ಗಣತಿ ಬಗ್ಗೆ ಸಮುದಾಯದವರೊಂದಿಗೆ ಚರ್ಚಿಸಿಲ್ಲ: ಶಾಸಕ
ಲಿಂಗಾಯತ ಸಚಿವರು ಜಾತಿ ಗಣತಿ ಬಗ್ಗೆ ಸಮುದಾಯದವರೊಂದಿಗೆ ಚರ್ಚಿಸಿಲ್ಲ: ಶಾಸಕ
ರಾಜ್ಯ ನಾಯಕರೆಲ್ಲ ಬೆಳಗಾವಿಯಲ್ಲಿದ್ದರೂ ರಮೇಶ್ ಜಾರಕಿಹೊಳಿ ನಾಪತ್ತೆ!
ರಾಜ್ಯ ನಾಯಕರೆಲ್ಲ ಬೆಳಗಾವಿಯಲ್ಲಿದ್ದರೂ ರಮೇಶ್ ಜಾರಕಿಹೊಳಿ ನಾಪತ್ತೆ!
ತಂದೆ-ತಾಯಿ ಆಸೆಯಂತೆ ಹುಟ್ಟೂರಲ್ಲಿ ದೇವಸ್ಥಾನ ಜೀರ್ಣೋದ್ಧಾರ ಮಾಡಿದ ಪ್ರಭುದೇವ
ತಂದೆ-ತಾಯಿ ಆಸೆಯಂತೆ ಹುಟ್ಟೂರಲ್ಲಿ ದೇವಸ್ಥಾನ ಜೀರ್ಣೋದ್ಧಾರ ಮಾಡಿದ ಪ್ರಭುದೇವ
ಜಿಲ್ಲೆಯ ಮುಖಂಡರನ್ನು ಮನೆಗೆ ಕರೆಸಿ ಮಾತಾಡಿದ ಮಾಜಿ ಸಚಿವ ಪಟ್ಟಣಶೆಟ್ಟಿ
ಜಿಲ್ಲೆಯ ಮುಖಂಡರನ್ನು ಮನೆಗೆ ಕರೆಸಿ ಮಾತಾಡಿದ ಮಾಜಿ ಸಚಿವ ಪಟ್ಟಣಶೆಟ್ಟಿ
ಸೊಂಟದ ಕೆಳಗಿನ ಮಾತು; ಮನೆಯಲ್ಲಿ ಸ್ಟ್ಯಾಂಡಪ್ ಕಾಮಿಡಿಯನ್ಸ್​ಗೆ ಸಖತ್ ತೊಂದರೆ
ಸೊಂಟದ ಕೆಳಗಿನ ಮಾತು; ಮನೆಯಲ್ಲಿ ಸ್ಟ್ಯಾಂಡಪ್ ಕಾಮಿಡಿಯನ್ಸ್​ಗೆ ಸಖತ್ ತೊಂದರೆ
ಘಟನೆ ನಡೆದ 2 ತಾಸು ಬಳಿಕ ಬಿಎಂಅರ್​​ಸಿಎಲ್​ನವರು ಬಂದರು: ಪ್ರತ್ಯಕ್ಷದರ್ಶಿ
ಘಟನೆ ನಡೆದ 2 ತಾಸು ಬಳಿಕ ಬಿಎಂಅರ್​​ಸಿಎಲ್​ನವರು ಬಂದರು: ಪ್ರತ್ಯಕ್ಷದರ್ಶಿ
Video:ಅಕ್ರಮವಾಗಿ ನಿರ್ಮಿಸಿದ್ದ ದರ್ಗಾ ನೆಲಸಮ, ಪೊಲೀಸರ ಮೇಲೆ ಕಲ್ಲು ತೂರಾಟ
Video:ಅಕ್ರಮವಾಗಿ ನಿರ್ಮಿಸಿದ್ದ ದರ್ಗಾ ನೆಲಸಮ, ಪೊಲೀಸರ ಮೇಲೆ ಕಲ್ಲು ತೂರಾಟ