AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prime Minister Of India

Prime Minister Of India

ಭಾರತ ಪ್ರಜಾತಂತ್ರ ವ್ಯವಸ್ಥೆಯ ನಾಯಕನೆಂದರೆ ಪ್ರಧಾನಿ. ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಒಂದಕ್ಕೆ ನಾಯಕರಾಗಿರುವ ಪ್ರಧಾನಿಗೆ ಐದು ವರ್ಷ ಶಾಸನಬದ್ಧ ಅಧಿಕಾರವಿರುತ್ತದೆ. ಲೋಕಸಭೆಯಲ್ಲಿ ಬಹುಮತ ಹೊಂದಿರುವ ಪಕ್ಷ ಅಥವಾ ಒಕ್ಕೂಟದ ಸದಸ್ಯರ ನಾಯಕನೇ ಪ್ರಧಾನಿ ಆಗಲಿದ್ದು, ಭಾರತವು ಸಧ್ಯಕ್ಕೆ 14ನೇ ಪ್ರಧಾನಿಯನ್ನು ಹೊಂದಿದೆ.

ಭಾರತದಲ್ಲಿ ಒಬ್ಬ ವ್ಯಕ್ತಿ ಎಷ್ಟು ವರ್ಷ ಅಥವಾ ಎಷ್ಟು ಅವಧಿಗೆ ಪ್ರಧಾನಿ ಆಗಬಹುದು ಎನ್ನುವ ಯಾವುದೇ ಮಿತಿಯಿಲ್ಲ. ಐದು ವರ್ಷಕ್ಕೊಮ್ಮೆ ನಡೆಯುವ ಚುನಾವಣೆಯಲ್ಲಿ ಪ್ರಧಾನಿ ಆಗುವ ಪಕ್ಷ ಅಥವಾ ಒಕ್ಕೂಟ ಗೆಲುವು ಸಾಧಿಸಿದರೆ ಸಾಕಾಗುತ್ತದೆ. ಜವಾಹರ್‌ಲಾಲ್‌ ನೆಹರು ಅವರು ಭಾರತದ ಮೊದಲ ಪ್ರಧಾನಿ ಆಗಿದ್ದರು. ಬಳಿಕ ಲಾಲ್‌ಬಹದ್ದೂರ್‌ ಶಾಸ್ತ್ರೀ, ಇಂದಿರಾ ಗಾಂಧಿ ಪ್ರಧಾನಿ ಆಗಿದ್ದರು.

ಮೊರಾರ್ಜಿ ದೇಸಾಯಿ ಅವರು ದೇಶದ ಮೊದಲ ಕಾಂಗ್ರೆಸ್ಸೇತರ ಪ್ರಧಾನಿಯಾದರೇ, ಇಂದಿರಾ ಅವರು ಮೊದಲ ಮಹಿಳಾ ಪ್ರಧಾನಿ ಎನಿಸಿಕೊಂಡರು. ಬಳಿಕ ರಾಜೀವ್‌ ಗಾಂಧಿ, ವಿ.ಪಿ ಸಿಂಗ್‌, ಚಂದ್ರಶೇಖರ್‌, ಪಿ.ವಿ ನರಸಿಂಹರಾವ್‌, ಅಟಲ್‌ ಬಿಹಾರಿ ವಾಜಪೇಯಿ, ಎಚ್‌.ಡಿ ದೇವೇಗೌಡ, ಐ.ಕೆ ಗುಜ್ರಾಲ್‌, ಮನಮೋಹನ್‌ ಸಿಂಗ್‌ ಈ ಹುದ್ದೆಯನ್ನು ಏರಿದರು.

2014ರಿಂದ ನರೇಂದ್ರ ಮೋದಿಯು ಪ್ರಧಾನಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಭಾರತದ ಸಂವಿಧಾನಬದ್ಧ ಪ್ರಜಾತಂತ್ರ ವ್ಯವಸ್ಥೆಯಲ್ಲಿ ರಾಷ್ಟ್ರಪತಿಯು ಮೊದಲ ಪ್ರಜೆಯಾಗಿದ್ದರೂ, ಆಡಳಿತಾತ್ಮಕವಾಗಿ ಪ್ರಧಾನಿಯೇ ದೇಶದ ಅತ್ಯಂತ ಪ್ರಭಾವಿ ವ್ಯಕ್ತಿ.

ಇನ್ನೂ ಹೆಚ್ಚು ಓದಿ

ಬ್ರಿಕ್ಸ್ ಶೃಂಗಸಭೆಯಲ್ಲಿ ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ

ದೆಹಲಿಯಲ್ಲಿ ಇಂದಿನಿಂದ ನಡೆಯುತ್ತಿರುವ 18ನೇ ಬ್ರಿಕ್ಸ್ (BRICS) ಶೃಂಗಸಭೆಯ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಬುಧಾಬಿಯ ಕ್ರೌನ್ ಪ್ರಿನ್ಸ್ ಶೇಖ್ ಖಾಲಿದ್ ಬಿನ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರೊಂದಿಗೆ ಮಹತ್ವದ ದ್ವಿಪಕ್ಷೀಯ ಮಾತುಕತೆ ನಡೆಸಿದರು. ಈ ಸಭೆಯಲ್ಲಿ ಉಭಯ ದೇಶಗಳ ನಡುವಿನ 'ವ್ಯಾಪಕ ಆಕಾಂಕ್ಷೆಯ ಕಾರ್ಯತಂತ್ರದ ಪಾಲುದಾರಿಕೆ'ಯನ್ನು ಮತ್ತಷ್ಟು ಬಲಪಡಿಸುವ ಕುರಿತು ಉನ್ನತ ಮಟ್ಟದ ಚರ್ಚೆಗಳು ನಡೆದವು. ಅದರಲ್ಲೂ ವಿಶೇಷವಾಗಿ ವ್ಯಾಪಾರ, ಹೂಡಿಕೆ ಮತ್ತು ಇಂಧನ ಭದ್ರತೆ ವಲಯಗಳಲ್ಲಿ ಭಾರತ ಮತ್ತು ಯುಎಇ ನಡುವಿನ ಬಾಂಧವ್ಯವನ್ನು ವೃದ್ಧಿಸುವ ನಿಟ್ಟಿನಲ್ಲಿ ಈ ಭೇಟಿ ಪ್ರಮುಖ ಮೈಲಿಗಲ್ಲಾಗಿದೆ.

ಇರಾನ್ ಬಿಕ್ಕಟ್ಟಿನ ನಡುವೆ 2 ವಾರಗಳಲ್ಲಿ 2ನೇ ಬಾರಿ ಪ್ರಧಾನಿ ಮೋದಿ-ಪೆಜೆಶ್ಕಿಯಾನ್ ದ್ವಿಪಕ್ಷೀಯ ಮಾತುಕತೆ

ಬ್ರಿಕ್ಸ್ (BRICS) ಶೃಂಗಸಭೆಯಲ್ಲಿ ಭಾಗವಹಿಸಲು ದೆಹಲಿಗೆ ಆಗಮಿಸಿದ ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಇಂದು (ಶುಕ್ರವಾರ) ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ಉನ್ನತ ಮಟ್ಟದ ದ್ವಿಪಕ್ಷೀಯ ಮಾತುಕತೆ ನಡೆಸಿದರು. ಕಳೆದ 2 ವಾರಗಳ ಅಂತರದಲ್ಲಿ ಉಭಯ ನಾಯಕರ ನಡುವೆ ನಡೆದ ಎರಡನೇ ಭೇಟಿ ಇದಾಗಿದ್ದು, ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಮಿಲಿಟರಿ ಆತಂಕ ಮತ್ತು ವ್ಯಾಪಾರ ಸಂಬಂಧಗಳನ್ನು ವೃದ್ಧಿಸುವ ಕುರಿತು ಪ್ರಮುಖ ಚರ್ಚೆಗಳು ನಡೆದವು.

ಪುಟಿನ್​ಗೆ ಅಪ್ಪುಗೆಯ ಸ್ವಾಗತ ನೀಡಿದ ಪ್ರಧಾನಿ ಮೋದಿ; ತಮಿಳಿನ ತಿರುಕ್ಕುರಳ್ ಕೃತಿಯ ರಷ್ಯನ್ ಅನುವಾದ ಉಡುಗೊರೆ

ದೆಹಲಿಯಲ್ಲಿ ನಡೆದ ಭೇಟಿಯ ವೇಳೆ ಪ್ರಧಾನಿ ಮೋದಿ ಅವರು ತಮಿಳು ದಾರ್ಶನಿಕ ಸಂತ ತಿರುವಳ್ಳುವರ್ ಅವರ ವಿಶ್ವಪ್ರಸಿದ್ಧ ಕೃತಿ 'ತಿರುಕ್ಕುರಳ್'ನ ರಷ್ಯನ್ ಅನುವಾದದ ಪ್ರತಿಯನ್ನು ರಷ್ಯಾ ಅಧ್ಯಕ್ಷ ಪುಟಿನ್ ಅವರಿಗೆ ಹಸ್ತಾಂತರಿಸಿದರು. ಮಾನವೀಯ ಮೌಲ್ಯಗಳು, ರಾಜನೀತಿ ಮತ್ತು ಸತ್ಯವನ್ನು ಸಾರುವ ಭಾರತದ ಪ್ರಾಚೀನ ತಮಿಳು ಸಾಹಿತ್ಯದ ಶ್ರೇಷ್ಠ ಕೊಡುಗೆಯಾದ 'ತಿರುಕ್ಕುರಳ್' ಅನ್ನು ಪುಟಿನ್ ಅವರಿಗೆ ಉಡುಗೊರೆಯಾಗಿ ನೀಡುವ ಮೂಲಕ ಪ್ರಧಾನಿ ಮೋದಿ ಭಾರತೀಯ ಸಾಂಸ್ಕೃತಿಕ ಪರಂಪರೆಯನ್ನು ಜಾಗತಿಕ ವೇದಿಕೆಯಲ್ಲಿ ಪ್ರದರ್ಶಿಸಿದರು. ಈ ನಡೆಗೆ ತಮಿಳುನಾಡು ಸೇರಿದಂತೆ ಇಡೀ ದೇಶಾದ್ಯಂತ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.

‘ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ’; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ

ಭಾರತದ ಅಧ್ಯಕ್ಷತೆಯಲ್ಲಿ ನಡೆಯಲಿರುವ ಬ್ರಿಕ್ಸ್ ಶೃಂಗಸಭೆಯಲ್ಲಿ ಜಗತ್ತಿನಾದ್ಯಂತದ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ. ಅಂತಾರಾಷ್ಟ್ರೀಯ ರಾಜಕೀಯ, ಆರ್ಥಿಕತೆ, ವ್ಯಾಪಾರ, ಹೂಡಿಕೆ, ತಂತ್ರಜ್ಞಾನ, ಇಂಧನ ಭದ್ರತೆ, ಆಹಾರ ಭದ್ರತೆ ಮತ್ತು ಇನ್ನೂ ಹೆಚ್ಚಿನ ವಿಷಯಗಳ ಕುರಿತು ನಾಯಕರು ಚರ್ಚೆ ನಡೆಸುವ ನಿರೀಕ್ಷೆಯಿದೆ. ಜಗತ್ತಿನಾದ್ಯಂತ ಬದಲಾಗುತ್ತಿರುವ ರಾಜಕೀಯ ಮತ್ತು ಆರ್ಥಿಕ ಪರಿಸ್ಥಿತಿಗಳ ಸಂದರ್ಭದಲ್ಲಿ ಈ ಸಭೆಯು ಅತ್ಯಂತ ಮಹತ್ವದ್ದಾಗಿದೆ.

ಬ್ರಿಕ್ಸ್ ಶೃಂಗಸಭೆಗೆ ದೆಹಲಿ ಸಜ್ಜು; ಕ್ಸಿ ಜಿನ್‌ಪಿಂಗ್, ಪುಟಿನ್‌ಗೆ ಹೇಗಿರಲಿದೆ ಹೋಟೆಲ್ ವ್ಯವಸ್ಥೆ?

ನವದೆಹಲಿಯಲ್ಲಿ ಸೆಪ್ಟೆಂಬರ್ 12ರಿಂದ ಬ್ರಿಕ್ಸ್ ಶೃಂಗಸಭೆ ನಡೆಯಲಿದೆ. ಈ ಶೃಂಗಸಭೆಯಲ್ಲಿ ರಷ್ಯಾ, ಚೀನಾ ಸೇರಿದಂತೆ ಅನೇಕ ರಾಷ್ಟ್ರಗಳ ನಾಯಕರು ಆಗಮಿಸಲಿದ್ದಾರೆ. ಶೃಂಗಸಭೆಗೆ ಇನ್ನೆರಡೇ ದಿನ ಬಾಕಿ ಇರುವುದರಿಂದ ಸಿದ್ಧತೆಗಳು ಕೂಡ ಜೋರಾಗಿಯೇ ನಡೆದಿದೆ. ಬ್ರಿಕ್ಸ್ ಶಂಗಸಭೆಗೂ ಮುನ್ನ ಪ್ರಧಾನಿ ಮೋದಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಲಿದ್ದಾರೆ. ಈ ಶೃಂಗಸಭೆಗಾಗಿ ದೆಹಲಿಯ ಐಷಾರಾಮಿ ಹೋಟೆಲ್​ಗಳಲ್ಲಿ ವಿವಿಧ ದೇಶಗಳ ಅಧ್ಯಕ್ಷರು, ಪ್ರಧಾನಿಗಳಿಗಾಗಿ ವಿಶೇಷ ವ್ಯವಸ್ಥೆ ಕಲ್ಪಿಸಲಾಗಿದೆ. ಬ್ರಿಕ್ಸ್​ ಶೃಂಗಸಭೆಗೆ ಸುಮಾರು 30,000 ಸೆಕ್ಯುರಿಟಿ ಸಿಬ್ಬಂದಿಯನ್ನು ಕೂಡ ನಿಯೋಜಿಸಲಾಗಿದೆ!

ಬ್ರಿಕ್ಸ್‌ ಶೃಂಗಸಭೆಗೂ ಮುನ್ನ ಪ್ರಧಾನಿ ಮೋದಿ-ಪುಟಿನ್ ದ್ವಿಪಕ್ಷೀಯ ಮಾತುಕತೆ; ರಷ್ಯಾ ಮಾಹಿತಿ

ನವದೆಹಲಿಯಲ್ಲಿ ನಡೆಯಲಿರುವ 18ನೇ ಬ್ರಿಕ್ಸ್‌ (BRICS) ಶೃಂಗಸಭೆಗೂ ಮುನ್ನ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಸೆಪ್ಟೆಂಬರ್ 11ರಂದು ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ ಎಂದು ಕ್ರೆಮ್ಲಿನ್ ವಕ್ತಾರ ಡಿಮಿಟ್ರಿ ಪೆಸ್ಕೋವ್ ತಿಳಿಸಿದ್ದಾರೆ. ಮಾಸ್ಕೋದಿಂದ ವರ್ಚುವಲ್ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಪೆಸ್ಕೋವ್, "ರಷ್ಯಾದ ಅಧ್ಯಕ್ಷ ಪುಟಿನ್ ಅವರ ಭಾರತ ಭೇಟಿಯ ವೇಳೆ ಪ್ರಧಾನಿ ಮೋದಿಯವರೊಂದಿಗೆ ಮತ್ತೊಂದು ದ್ವಿಪಕ್ಷೀಯ ಸಭೆ ನಿಗದಿಯಾಗಿದೆ. ಶುಕ್ರವಾರ ನಡೆಯಲಿರುವ ಈ ಸಭೆಯಲ್ಲಿ ದ್ವಿಪಕ್ಷೀಯ ಸಂಬಂಧಗಳು ಹಾಗೂ ಪ್ರಮುಖ ವಿಷಯಗಳ ಕುರಿತು ನಾಯಕರು ಚರ್ಚಿಸಲಿದ್ದಾರೆ" ಎಂದಿದ್ದಾರೆ.

ಮುಂಬೈನ ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ನಕಲಿ ಐಡಿ, ಗನ್ ಹೊಂದಿದ್ದ ಇಬ್ಬರು ಶಂಕಿತರ ಬಂಧನ

ಪ್ರಧಾನಮಂತ್ರಿ ನರೇಂದ್ರ ಮೋದಿ ಮುಂಬೈಗೆ ಭೇಟಿ ನೀಡಿದ್ದಾರೆ. ಬೃಹತ್ 'ಗ್ಲೋಬಲ್ ಫಿನ್ ಟೆಕ್ ಫೆಸ್ಟ್ (ಜಿಎಫ್​ಎಫ್​)' ಉದ್ಘಾಟಿಸಬೇಕಿದ್ದ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನ ನೀತಾ ಮುಖೇಶ್ ಅಂಬಾನಿ ಕಲ್ಚರಲ್ ಸೆಂಟರ್ ಆವರಣದಲ್ಲಿ ಭಾರಿ ಭದ್ರತಾ ಲೋಪದ ಯತ್ನವೊಂದು ಬೆಳಕಿಗೆ ಬಂದಿದೆ. ಪ್ರಧಾನಮಂತ್ರಿ ಕಾರ್ಯಾಲಯದ ನಕಲಿ ಗುರುತಿನ ಚೀಟಿ ಬಳಸಿ, ಗನ್ ಹಿಡಿದು ಆವರಣಕ್ಕೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ ಇಬ್ಬರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

ಮೊದಲ ಬಾರಿ ಪ್ರಧಾನಿ ಮೋದಿಯ ಕಾರ್ಯಕ್ರಮಕ್ಕೆ ಆನ್​​ಲೈನ್ ಬುಕಿಂಗ್; ಒಂದೇ ಗಂಟೆಯಲ್ಲಿ ಎಲ್ಲ ಸೀಟ್ ಭರ್ತಿ

ಪ್ರಧಾನಮಂತ್ರಿ ನರೇಂದ್ರ ಮೋದಿ ನಾಳೆ (ಮಂಗಳವಾರ) ಗುಜರಾತ್ ಪ್ರವಾಸ ಕೈಗೊಳ್ಳಲಿದ್ದು, ವಡೋದರಾದಲ್ಲಿ 35,000 ಕೋಟಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ವಡೋದರಾದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಭಾಗವಹಿಸಲು ವಡೋದರಾ ಮಹಾನಗರ ಪಾಲಿಕೆಯು 'ಬುಕ್‌ಮೈಶೋ' ಡಿಜಿಟಲ್ ಪ್ಲಾಟ್‌ಫಾರ್ಮ್ ಮೂಲಕ ದೇಶದಲ್ಲೇ ಮೊದಲ ಬಾರಿಗೆ ಉಚಿತ ನೋಂದಣಿಗೆ ಅವಕಾಶ ಕಲ್ಪಿಸಿತ್ತು. ಅಚ್ಚರಿಯ ರೀತಿಯಲ್ಲಿ ನೋಂದಣಿ ಆರಂಭವಾದ ಒಂದೇ ಗಂಟೆಯಲ್ಲಿ ಎಲ್ಲಾ ಆಸನಗಳು ಭರ್ತಿಯಾಗಿದೆ. ಸಭೆಗೆ ಆಗಮಿಸುವ ಸಾರ್ವಜನಿಕರು ಕ್ಯೂಆರ್ ಕೋಡ್ ಹೊಂದಿರುವ 'ಎಂ-ಟಿಕೆಟ್' ಮೂಲಕ ಪ್ರವೇಶ ಪಡೆಯಲಿದ್ದು, ಸಂಪೂರ್ಣ ಜನಸಂದಣಿ ನಿರ್ವಹಣೆಯನ್ನು ಡಿಜಿಟಲ್ ಮಯಗೊಳಿಸಲಾಗಿದೆ.

’ವೈಚಾರಿಕ ನಕ್ಸಲಿಸಂ ಎಂಬ ಹೋಮಿಯೋಪತಿ ಮಾತ್ರೆ ನೀಡಿದ್ದೆ’; ಪ್ರಧಾನಿ ಮೋದಿ ವಾಗ್ದಾಳಿ

ಸ್ವಾತಂತ್ರ್ಯ ದಿನೋತ್ಸವದ ಭಾಷಣದಲ್ಲಿ ತಾವು ಬಳಸಿದ್ದ ಪದವನ್ನು ಸ್ಮರಿಸಿದ ಪ್ರಧಾನಿ ಮೋದಿ, "ಸ್ವಾತಂತ್ರ್ಯ ದಿನಾಚರಣೆಯಂದು ನಾನು ‘ದಿಮಾಗಿ ನಕ್ಸಲ್’ ಎಂಬ ಪದವನ್ನು ಬಳಸಿದೆ. ಈ ದಿಮಾಗಿ ನಕ್ಸಲರು ದೇಶವಿರೋಧಿ ಅಜೆಂಡಾಗಳಿಗೆ ವೇದಿಕೆ ಕಲ್ಪಿಸುತ್ತಿದ್ದಾರೆ. ಇದೇ ವೇಳೆ ಹೋಮಿಯೋಪತಿ ಔಷಧದ ಉದಾಹರಣೆ ನೀಡಿದ ಪ್ರಧಾನಿ, ಹೋಮಿಯೋಪತಿ ಮಾತ್ರೆ ನೀಡಿದಾಗ ರೋಗದ ಲಕ್ಷಣಗಳು ಆರಂಭದಲ್ಲಿ ಹೊರಬಂದು ಸ್ಪಷ್ಟವಾಗಿ ಕಾಣಿಸಿಕೊಳ್ಳುತ್ತವೆ. ಅದೇ ರೀತಿ ಸ್ವಾತಂತ್ರ್ಯ ದಿನೋತ್ಸವದ ಭಾಷಣದಲ್ಲಿ ನಾನು ‘ದಿಮಾಗಿ ನಕ್ಸಲ್’ ಪದವನ್ನು ಬಳಸಿದ ತಕ್ಷಣ, ನಾನು ಯಾರನ್ನು ಉದ್ದೇಶಿಸಿ ಹೇಳಿದ್ದೆನೋ ಅವರೆಲ್ಲರೂ ಸ್ವತಃ ಬಹಿರಂಗವಾಗಿ ಹೊರಬಂದರು" ಎಂದು ಹೇಳಿದ್ದಾರೆ.

‘ಧುರಂಧರ್ ಅಲ್ಲದಿದ್ದರೂ ಧೂಳೆಬ್ಬಿಸಿದ್ದೀರಿ’; ಎಸ್‌ಆರ್‌ಸಿಸಿ ಶತಮಾನೋತ್ಸವದಲ್ಲಿ ಜೆನ್​-ಜಿ ಪದ ಬಳಸಿ ಹೊಗಳಿದ ಪ್ರಧಾನಿ ಮೋದಿ

ದೆಹಲಿಯ ಶ್ರೀ ರಾಮ್ ಕಾಲೇಜ್ ಆಫ್ ಕಾಮರ್ಸ್ ಸಂಸ್ಥೆಯ ಶತಮಾನೋತ್ಸವ ಆಚರಣೆಯ ಭಾಷಣದ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 'ಧುರಂಧರ್' ಪದವನ್ನು ಪ್ರಸ್ತಾಪಿಸುತ್ತಾ ಕಾಲೇಜಿನ ಹಳೆಯ ವಿದ್ಯಾರ್ಥಿಗಳನ್ನು ಮುಕ್ತಕಂಠದಿಂದ ಶ್ಲಾಘಿಸಿದರು. ಇದೇ ವೇಳೆ ಅವರು ಈ ಕಾಲೇಜಿನ ಹಳೆಯ ವಿದ್ಯಾರ್ಥಿಯಾದ ದಿವಂಗತ ಕೇಂದ್ರ ಸಚಿವ ಅರುಣ್ ಜೇಟ್ಲಿ, ಅರ್ಥಶಾಸ್ತ್ರಜ್ಞ ಸಂಜೀವ್ ಸನ್ಯಾಲ್ ಮುಂತಾದ ಸಾಧಕರನ್ನು ನೆನಪಿಸಿಕೊಂಡರು. ಭಾಷಣದಲ್ಲಿ ಜೆನ್​-ಜಿ ಪದಗಳನ್ನು ಬಳಸುತ್ತಾ ನಗೆ ಚಟಾಕಿ ಹಾರಿಸಿದ ಪ್ರಧಾನಿ ಮೋದಿಯವರಿಗೆ ಭಾರೀ ಕರತಾಡನ ದೊರಕಿತು.

ದೆಹಲಿ ಶ್ರೀರಾಮ್ ಕಾಲೇಜಿನ ಶತಮಾನೋತ್ಸವದಲ್ಲಿ ಪ್ರಧಾನಿ ಮೋದಿ ಭಾಗಿ; ವಿಶೇಷ ನಾಣ್ಯ ಬಿಡುಗಡೆ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ದೆಹಲಿ ವಿಶ್ವವಿದ್ಯಾಲಯದ ಪ್ರತಿಷ್ಠಿತ 'ಶ್ರೀ ರಾಮ್ ಕಾಲೇಜ್ ಆಫ್ ಕಾಮರ್ಸ್' ಸಂಸ್ಥೆಯ ನೂರನೇ ವರ್ಷದ ಆಚರಣೆಯಲ್ಲಿ ಭಾಗವಹಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಭಾಷಣ ಮಾಡಿದರು. ಶತಾಬ್ದಿ ಸಮಾರಂಭದ ವೇದಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕಾಲೇಜಿನ ಆಡಳಿತ ಮಂಡಳಿ, ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಅತ್ಯಂತ ಗೌರವಪೂರ್ವಕವಾಗಿ ಸನ್ಮಾನಿಸಿ, ಗೌರವಿಸಿದರು.

ದೆಹಲಿ ಮೆಟ್ರೋದಲ್ಲಿ ಪ್ರಯಾಣಿಸಿದ ಪ್ರಧಾನಿ ಮೋದಿ; ರೈಲಿನೊಳಗೆ ಮಕ್ಕಳ ಜೊತೆ ಸಂವಾದ

ಮೆಟ್ರೋ ರೈಲಿನಲ್ಲಿ ತಮ್ಮ ಜೊತೆ ಪ್ರಯಾಣಿಸುತ್ತಿದ್ದ ಯುವಜನತೆ ಮತ್ತು ಕಾಲೇಜು ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ಮೋದಿ ಸುದೀರ್ಘವಾಗಿ ಹರಟಿದರು. ಅವರ ಶಿಕ್ಷಣ, ಭವಿಷ್ಯದ ಕನಸುಗಳು ಹಾಗೂ ತಂತ್ರಜ್ಞಾನದ ಬಳಕೆಯ ಕುರಿತು ಪ್ರಧಾನಿ ಮುಕ್ತವಾಗಿ ಚರ್ಚಿಸಿದರು. ಬಿಗಿ ಭದ್ರತೆಯ ನಡುವೆಯೂ ಪ್ರಧಾನಿ ಮೋದಿ ಸ್ವತಃ ತಮ್ಮ ಮೆಟ್ರೋ ಕಾರ್ಡ್ ಬಳಸಿ ಸ್ಮಾರ್ಟ್ ಗೇಟ್ ಮೂಲಕ ಪ್ರವೇಶಿಸಿ, ಜನಸಾಮಾನ್ಯರಂತೆ ಮೆಟ್ರೋ ಸೀಟ್​​ನಲ್ಲಿ ಕುಳಿತು ಪ್ರಯಾಣ ಮಾಡಿದ್ದು ಎಲ್ಲರ ಗಮನ ಸೆಳೆಯಿತು.

ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ