AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prime Minister Of India

Prime Minister Of India

ಭಾರತ ಪ್ರಜಾತಂತ್ರ ವ್ಯವಸ್ಥೆಯ ನಾಯಕನೆಂದರೆ ಪ್ರಧಾನಿ. ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಒಂದಕ್ಕೆ ನಾಯಕರಾಗಿರುವ ಪ್ರಧಾನಿಗೆ ಐದು ವರ್ಷ ಶಾಸನಬದ್ಧ ಅಧಿಕಾರವಿರುತ್ತದೆ. ಲೋಕಸಭೆಯಲ್ಲಿ ಬಹುಮತ ಹೊಂದಿರುವ ಪಕ್ಷ ಅಥವಾ ಒಕ್ಕೂಟದ ಸದಸ್ಯರ ನಾಯಕನೇ ಪ್ರಧಾನಿ ಆಗಲಿದ್ದು, ಭಾರತವು ಸಧ್ಯಕ್ಕೆ 14ನೇ ಪ್ರಧಾನಿಯನ್ನು ಹೊಂದಿದೆ.

ಭಾರತದಲ್ಲಿ ಒಬ್ಬ ವ್ಯಕ್ತಿ ಎಷ್ಟು ವರ್ಷ ಅಥವಾ ಎಷ್ಟು ಅವಧಿಗೆ ಪ್ರಧಾನಿ ಆಗಬಹುದು ಎನ್ನುವ ಯಾವುದೇ ಮಿತಿಯಿಲ್ಲ. ಐದು ವರ್ಷಕ್ಕೊಮ್ಮೆ ನಡೆಯುವ ಚುನಾವಣೆಯಲ್ಲಿ ಪ್ರಧಾನಿ ಆಗುವ ಪಕ್ಷ ಅಥವಾ ಒಕ್ಕೂಟ ಗೆಲುವು ಸಾಧಿಸಿದರೆ ಸಾಕಾಗುತ್ತದೆ. ಜವಾಹರ್‌ಲಾಲ್‌ ನೆಹರು ಅವರು ಭಾರತದ ಮೊದಲ ಪ್ರಧಾನಿ ಆಗಿದ್ದರು. ಬಳಿಕ ಲಾಲ್‌ಬಹದ್ದೂರ್‌ ಶಾಸ್ತ್ರೀ, ಇಂದಿರಾ ಗಾಂಧಿ ಪ್ರಧಾನಿ ಆಗಿದ್ದರು.

ಮೊರಾರ್ಜಿ ದೇಸಾಯಿ ಅವರು ದೇಶದ ಮೊದಲ ಕಾಂಗ್ರೆಸ್ಸೇತರ ಪ್ರಧಾನಿಯಾದರೇ, ಇಂದಿರಾ ಅವರು ಮೊದಲ ಮಹಿಳಾ ಪ್ರಧಾನಿ ಎನಿಸಿಕೊಂಡರು. ಬಳಿಕ ರಾಜೀವ್‌ ಗಾಂಧಿ, ವಿ.ಪಿ ಸಿಂಗ್‌, ಚಂದ್ರಶೇಖರ್‌, ಪಿ.ವಿ ನರಸಿಂಹರಾವ್‌, ಅಟಲ್‌ ಬಿಹಾರಿ ವಾಜಪೇಯಿ, ಎಚ್‌.ಡಿ ದೇವೇಗೌಡ, ಐ.ಕೆ ಗುಜ್ರಾಲ್‌, ಮನಮೋಹನ್‌ ಸಿಂಗ್‌ ಈ ಹುದ್ದೆಯನ್ನು ಏರಿದರು.

2014ರಿಂದ ನರೇಂದ್ರ ಮೋದಿಯು ಪ್ರಧಾನಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಭಾರತದ ಸಂವಿಧಾನಬದ್ಧ ಪ್ರಜಾತಂತ್ರ ವ್ಯವಸ್ಥೆಯಲ್ಲಿ ರಾಷ್ಟ್ರಪತಿಯು ಮೊದಲ ಪ್ರಜೆಯಾಗಿದ್ದರೂ, ಆಡಳಿತಾತ್ಮಕವಾಗಿ ಪ್ರಧಾನಿಯೇ ದೇಶದ ಅತ್ಯಂತ ಪ್ರಭಾವಿ ವ್ಯಕ್ತಿ.

ಇನ್ನೂ ಹೆಚ್ಚು ಓದಿ

ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ವಿಧಾನಸಭೆ ಚುನಾವಣೆಗೂ ಮುನ್ನ ಪುದುಚೇರಿಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ನಡೆಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಇಂದು ಪುದುಚೇರಿಯಲ್ಲಿ ರೋಡ್ ಶೋ ನಡೆಸಿದರು. ಏಪ್ರಿಲ್ 9ರಂದು ನಡೆಯಲಿರುವ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಎಐಎನ್‌ಆರ್‌ಸಿ-ಬಿಜೆಪಿ ಮೈತ್ರಿಕೂಟವನ್ನು ಬೆಂಬಲಿಸುವಂತೆ ಮತದಾರರಿಗೆ ಮನವಿ ಮಾಡಿದರು. ಈ ಕಾರ್ಯಕ್ರಮವು ಸುಮಾರು 1 ಗಂಟೆ ಕಾಲ ನಡೆಯಿತು, ಏಕೆಂದರೆ ಮಾರ್ಗದುದ್ದಕ್ಕೂ ದೊಡ್ಡ ಜನಸಮೂಹ ಸೇರಿತ್ತು. ಅಖಿಲ ಭಾರತ ಎನ್‌ಆರ್ ಕಾಂಗ್ರೆಸ್ ಸಂಸ್ಥಾಪಕ ಮುಖ್ಯಮಂತ್ರಿ ಎನ್ ರಂಗಸಾಮಿ ಮತ್ತು ಬಿಜೆಪಿ ನಾಯಕ ಮತ್ತು ಗೃಹ ಸಚಿವ ಎ. ನಮಶ್ಶಿವಾಯಂ ಅವರೊಂದಿಗೆ ಸೇರಿಕೊಂಡರು.

ಪ್ರಧಾನಿ ಮೋದಿಗಾಗಿ ಹಾಡು ಹಾಡಿದ ಅಸ್ಸಾಂ ಚಹಾ ತೋಟದ ಕಾರ್ಮಿಕರು

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಚಹಾ ತೋಟಕ್ಕೆ ಭೇಟಿ ನೀಡಿ ಮಹಿಳಾ ಕಾರ್ಮಿಕರೊಂದಿಗೆ ಸಂವಾದ ನಡೆಸಿದರು. ಪ್ರಧಾನ ಮಂತ್ರಿ ಮೋದಿ ಅವರು ದಿಬ್ರುಗಢಕ್ಕೆ ಭೇಟಿ ನೀಡಿದರು. ಅಲ್ಲಿ ಅವರು ಚಹಾ ತೋಟಗಳಲ್ಲಿ ಕೆಲಸ ಮಾಡುವ ಮಹಿಳೆಯರನ್ನು ಭೇಟಿ ಮಾಡಿ ಸಂವಾದ ನಡೆಸಿದರು. ಮಹಿಳೆಯರು ಜಗತ್ ಜನನಿ ಮಾತೆಗೆ ಗೌರವ ಸಲ್ಲಿಸುವ ಹಾಡನ್ನು ಹಾಡಿದರು. ಮೋದಿ ಅವರು ಚಹಾ "ಅಸ್ಸಾಂನ ಆತ್ಮ" ಎಂದು ಪ್ರತಿಪಾದಿಸಿದರು ಮತ್ತು ಅವರು ಎಲೆಗಳನ್ನು ಕಿತ್ತು ಸಾಂಪ್ರದಾಯಿಕ ಬುಟ್ಟಿಯಲ್ಲಿ ಹಾಕಿದ ಎಸ್ಟೇಟ್‌ಗೆ ಭೇಟಿ ನೀಡುವುದನ್ನು "ಸ್ಮರಣೀಯ ಅನುಭವ" ಎಂದು ಬಣ್ಣಿಸಿದರು.

ಇರಾನ್ ಯುದ್ಧದ ನಡುವೆ ಸೌದಿ ಕ್ರೌನ್ ಪ್ರಿನ್ಸ್ ಜೊತೆ ಪ್ರಧಾನಿ ಮೋದಿ ಮಾತುಕತೆ

ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ನಡುವೆ ಪ್ರಧಾನಿ ನರೇಂದ್ರ ಮೋದಿ ಸೌದಿ ಅರೇಬಿಯಾದ ಕ್ರೌನ್ ಪ್ರಿನ್ಸ್ ಮತ್ತು ಪ್ರಧಾನಿ ಮೊಹಮ್ಮದ್ ಬಿನ್ ಸಲ್ಮಾನ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ್ದಾರೆ. ಇರಾನ್ ನಡೆಸಿದ ಯುದ್ಧ ಮತ್ತು ಅದರ ಪರಿಣಾಮಗಳು, ಹಾರ್ಮುಜ್ ಜಲಸಂಧಿಯಲ್ಲಿ ಸಂಚಾರದ ಸ್ವಾತಂತ್ರ್ಯದ ಬಗ್ಗೆ ಇಬ್ಬರೂ ನಾಯಕರು ಮಾತನಾಡಿದ್ದಾರೆ. ಹಾಗೇ ಹಡಗು ಮಾರ್ಗಗಳನ್ನು ಸುರಕ್ಷಿತಗೊಳಿಸುವ ಅಗತ್ಯವನ್ನು ಅವರಿಬ್ಬರೂ ಒತ್ತಿ ಹೇಳಿದ್ದಾರೆ. ವಿಶ್ವದ ಅತ್ಯಂತ ನಿರ್ಣಾಯಕ ತೈಲ ಸಾಗಣೆಯ ಚಾಕ್‌ಪಾಯಿಂಟ್‌ಗಳಲ್ಲಿ ಒಂದಾದ ಹಾರ್ಮುಜ್ ಜಲಸಂಧಿಯು ಯುದ್ಧದಿಂದಾಗಿ ಪ್ರಮುಖ ಅಡಚಣೆಗಳನ್ನು ಕಂಡಿರುವುದರಿಂದ ಇದು ಇತರೆ ದೇಶಗಳ ಮೇಲೂ ಪರಿಣಾಮ ಬೀರಿದೆ.

ಇರಾನ್ ಯುದ್ಧದ ಬಗ್ಗೆ ಟ್ರಂಪ್-ಮೋದಿ ಮಾತನಾಡುವಾಗ ಎಲಾನ್ ಮಸ್ಕ್ ಇರಲಿಲ್ಲ; ಭಾರತ ಸ್ಪಷ್ಟನೆ

ಮಧ್ಯ ಪ್ರಾಚ್ಯ ಯುದ್ಧದ ಹಿನ್ನೆಲೆಯಲ್ಲಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಧಾನಿ ನರೇಂದ್ರ ಮೋದಿಯವರ ಜೊತೆ ಫೋನ್​ನಲ್ಲಿ ಮಾತುಕತೆ ನಡೆಸಿದ್ದರು. ಈ ವೇಳೆ ಎಲಾನ್ ಮಸ್ಕ್ ಕೂಡ ಫೋನ್ ಮಾತುಕತೆಯಲ್ಲಿ ಭಾಗಿಯಾಗಿದ್ದರು ಎಂದು ಕೆಲವು ಅಮೆರಿಕನ್ ಮಾಧ್ಯಮಗಳು ವರದಿ ಮಾಡಿದ್ದವು. ಆ ವರದಿಯನ್ನು ಭಾರತ ತಳ್ಳಿಹಾಕಿದೆ. ಪ್ರಧಾನಿ ಮೋದಿ ಮತ್ತು ಟ್ರಂಪ್ ನಡುವೆ ಮಾತ್ರ ಫೋನ್ ಮಾತುಕತೆ ನಡೆದಿತ್ತು ಎಂದು ಭಾರತ ಸ್ಪಷ್ಟಪಡಿಸಿದೆ.

ಪಶ್ಚಿಮ ಏಷ್ಯಾ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯಗಳ ಸಿದ್ಧತೆ ಪರಿಶೀಲಿಸಲು ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿ ಸಭೆ

ಪಶ್ಚಿಮ ಏಷ್ಯಾ ಯುದ್ಧದ ಹಿನ್ನೆಲೆಯಲ್ಲಿ ವಿವಿಧ ರಾಜ್ಯಗಳ ಸಿದ್ಧತೆಯನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಇಂದು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿದ್ದಾರೆ. ಇರಾನ್-ಇಸ್ರೇಲ್, ಅಮೆರಿಕದ ನಡುವೆ ನಡೆಯುತ್ತಿರುವ ಯುದ್ಧ ನಾಲ್ಕನೇ ವಾರಕ್ಕೆ ಕಾಲಿಟ್ಟಿದೆ. ಅದರ ಪರಿಣಾಮ ಭಾರತದಲ್ಲೂ ಆಗಿರುವುದರಿಂದ ಈ ಬಗ್ಗೆ ಪ್ರಧಾನಿ ಮೋದಿ ರಾಜ್ಯಗಳ ಸಿಎಂಗಳ ಜೊತೆ ಚರ್ಚಿಸಿದ್ದಾರೆ. ಈ ಸಭೆಯ ವಿವರಗಳು ಇನ್ನೂ ಲಭಿಸಿಲ್ಲ.

ಕೆಲಸ ಮಾಡಿ ಮುಗಿಸುವ ಇಬ್ಬರು ವ್ಯಕ್ತಿಗಳೆಂದರೆ ನಾನು ಮತ್ತು ಮೋದಿ; ಟ್ರಂಪ್ ಅಚ್ಚರಿಯ ಮೆಚ್ಚುಗೆ

ಪಶ್ಚಿಮ ಏಷ್ಯಾದ ಉದ್ವಿಗ್ನತೆಯ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಇದ್ದಕ್ಕಿದ್ದಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. 'ಪ್ರಧಾನಿ ಮೋದಿ ಮತ್ತು ನಾನು ಹಿಡಿದ ಕೆಲಸಗಳನ್ನು ಮಾಡುವ ಇಬ್ಬರು ವ್ಯಕ್ತಿಗಳು' ಎಂದು ಟ್ರಂಪ್ ಹೇಳಿದ್ದಾರೆ. ಭಾರತ-ಅಮೆರಿಕದ ಸಂಬಂಧಗಳ ಭವಿಷ್ಯದ ಬಗ್ಗೆ ಬಲವಾದ ಆಶಾವಾದವನ್ನು ವ್ಯಕ್ತಪಡಿಸಿರುವ ಟ್ರಂಪ್ ಭಾರತದೊಂದಿಗಿನ ನಮ್ಮ ಸಂಬಂಧ ಇನ್ನಷ್ಟು ಗಟ್ಟಿಯಾಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪಾಕಿಸ್ತಾನದಂತೆ ಭಾರತ ದಲ್ಲಾಳಿ ರಾಷ್ಟ್ರವಲ್ಲ; ಇರಾನ್ ಯುದ್ಧದ ಮಧ್ಯಸ್ಥಿಕೆ ಕುರಿತು ಸಚಿವ ಜೈಶಂಕರ್ ವ್ಯಂಗ್ಯ

ಇರಾನ್ ಹಾಗೂ ಅಮೆರಿಕ-ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧವನ್ನು ಅಂತ್ಯಗೊಳಿಸಲು ಅನೇಕ ದೇಶಗಳು ಮಧ್ಯಸ್ಥಿಕೆ ವಹಿಸಲು ಮುಂದಾಗಿವೆ. ಅದರಲ್ಲಿ ಪಾಕಿಸ್ತಾನ ಕೂಡ ಒಂದು ಎಂಬ ವದಂತಿಗಳು ಹರಿದಾಡುತ್ತಿವೆ. ಇಂದು ದೆಹಲಿಯಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ ವಿಪಕ್ಷಗಳಿಂದ ಈ ಬಗ್ಗೆ ಪ್ರಸ್ತಾಪ ಬಂದಿತು. ಗಲ್ಫ್ ಪ್ರದೇಶದಲ್ಲಿ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಲು ಭಾರತ ಏಕೆ ಮಧ್ಯಸ್ಥಿಕೆ ವಹಿಸುತ್ತಿಲ್ಲ ಎಂಬ ಕುರಿತು ವಿವರಿಸಿದ ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ ಭಾರತವು ಪಾಕ್‌ನಂತೆ "ದಲ್ಲಾಳಿ" (ಬ್ರೋಕರ್) ಅಲ್ಲ ಎಂದು ಉತ್ತರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್; ಇರಾನ್ ಮೇಲಿನ ಯುದ್ಧ, ಹಾರ್ಮುಜ್ ಜಲಸಂಧಿಯ ಬಗ್ಗೆ ಚರ್ಚೆ

ಇರಾನ್​ ಜೊತೆಗಿನ ಸಂಘರ್ಷವನ್ನು ಕೊನೆಗೊಳಿಸಲು ಮನಸು ಮಾಡಿರುವ ಅಮೆರಿಕ ಅಧ್ಯಕ್ಷ ಟ್ರಂಪ್ ಈ ನಿಟ್ಟಿನಲ್ಲಿ ನಿನ್ನೆಯಿಂದ ಪೋಸ್ಟ್​ಗಳನ್ನು ಮಾಡುತ್ತಿದ್ದಾರೆ. ಆದರೆ, ಇರಾನ್ ಮಾತ್ರ ಈ ಹೇಳಿಕೆಯನ್ನು ನಿರಾಕರಿಸಿದೆ. ಇದರ ನಡುವೆ ಇಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ಡೊನಾಲ್ಡ್ ಟ್ರಂಪ್ ಕರೆ ಮಾಡಿದ್ದಾರೆ. ಈ ವೇಳೆ ಪ್ರಧಾನಿ ಮೋದಿ ಹಾರ್ಮುಜ್ ಜಲಸಂಧಿಯು ಸಂಚಾರಕ್ಕೆ ಮುಕ್ತವಾಗಿರುವುದು ಅತ್ಯಗತ್ಯ ಎಂದು ಹೇಳಿದ್ದಾರೆ. ಇಬ್ಬರೂ ನಾಯಕರು ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಕುರಿತು ಚರ್ಚೆ ನಡೆಸಿದ್ದಾರೆ.

PM Modi in WITT Summit 2026: ಯುದ್ಧದ ಸಮಯದಲ್ಲೂ ಭಾರತದ ಆರ್ಥಿಕ ಸ್ಥಿರತೆ ಕಂಡು ಜಗತ್ತು ಬೆರಗಾಗಿದೆ; ಟಿವಿ9 ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಬಣ್ಣನೆ

TV9 ನೆಟ್‌ವರ್ಕ್‌ ಆಯೋಜಿಸಿರುವ'ವಾಟ್ ಇಂಡಿಯಾ ಥಿಂಕ್ಸ್ ಟುಡೇ (WITT) ಶೃಂಗಸಭೆ 2026' ದೆಹಲಿಯಲ್ಲಿ ನಡೆಯುತ್ತಿದೆ. ಇಂದು ಮತ್ತು ನಾಳೆ ನಡೆಯಲಿರುವ ಈ ಶೃಂಗಸಭೆಯಲ್ಲಿ ಇಂದು ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರಮುಖ ಭಾಷಣ ಮಾಡಿದ್ದಾರೆ. ಈ ಶೃಂಗಸಭೆಯಲ್ಲಿ ಜಾಗತಿಕ ಸಂಘರ್ಷಗಳ ಕುರಿತು ಭಾರತದ ಕಾರ್ಯತಂತ್ರವನ್ನು ಪ್ರಧಾನಿ ನರೇಂದ್ರ ಮೋದಿ ವಿವರಿಸಿದರು. ಇಂದು ಜಗತ್ತು ಎದುರಿಸುತ್ತಿರುವ ಗಂಭೀರ ಪರಿಸ್ಥಿತಿಗಳು ತೀವ್ರ ಕಳವಳಕಾರಿ ಎಂದು ಅವರು ಹೇಳಿದರು.

WITT Summit 2026: ಪ್ರಧಾನಿ ನರೇಂದ್ರ ಮೋದಿಗೆ ಮೈ ಹೋಮ್ ಗ್ರೂಪ್ ಚೇರ್ಮನ್ ರಾಮೇಶ್ವರ ರಾವ್ ಸನ್ಮಾನ

ಇಂದು ಇಂಡಿಯಾ ವಾಟ್ ಇಂಡಿಯಾ ಥಿಂಕ್ಸ್ ಟುಡೇ ಶೃಂಗಸಭೆ ಕಾರ್ಯಕ್ರಮಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಯವರಿಗೆ ಮೈ ಹೋಮ್ ಗ್ರೂಪ್ಸ್ ಚೇರ್ಮನ್ ರಾಮೇಶ್ವರ ರಾವ್ ಜೂಪಲ್ಲಿ ಶಾಲು ಹೊದಿಸಿ ಸನ್ಮಾನಿಸಿದರು. ನಾಳೆಯೂ ನಡೆಯುವ ಈ ಶೃಂಗಸಭೆಯಲ್ಲಿ ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್, ಉತ್ತರಾಖಂಡದ ಸಿಎಂ ಪುಷ್ಕರ್ ಧಾಮಿ, ರಾಜಸ್ಥಾನದ ಸಿಎಂ ಭಜನ್‌ಲಾಲ್ ಶರ್ಮಾ, ತೆಲಂಗಾಣದ ಮುಖ್ಯಮಂತ್ರಿ ರೇವಂತ್ ರೆಡ್ಡಿ, ಪಂಜಾಬ್ ಸಿಎಂ ಭಗವಂತ್ ಮಾನ್ ಭಾಗವಹಿಸಲಿದ್ದಾರೆ.

PM Modi in WITT Summit 2026: ನಾವು ಭಾರತೀಯರ ಪರ, ನಮಗೆ ಅಭಿವೃದ್ಧಿಯೇ ಮುಖ್ಯ; ವಿಟ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಘೋಷಣೆ

ಟಿವಿ9 ನೆಟ್​ವರ್ಕ್ ಆಯೋಜಿಸಿರುವ ವಾರ್ಷಿಕ ಶೃಂಗಸಭೆ ‘ವಾಟ್​ ಇಂಡಿಯಾ ಥಿಂಕ್ಸ್​ ಟುಡೆ’ (WITT Summit- 2026)ಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಮುಖ ಭಾಷಣ ಮಾಡಿದ್ದಾರೆ. ಈ ವೇಳೆ ಅವರು ಭಾರತದ ಅಭಿವೃದ್ಧಿಯ ಪಥದ ಬಗ್ಗೆ ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ 3ನೇ ಬಾರಿಗೆ ಟಿವಿ9ನ ಈ WITT ಶೃಂಗಸಭೆಯಲ್ಲಿ ಭಾಗಿಯಾಗಿದ್ದಾರೆ.

PM Modi in WITT Summit 2026: ಕಾಂಗ್ರೆಸ್​ನ ಪಾಪದ ಹೊರೆಯನ್ನು ನಾವು ಹೊತ್ತಿದ್ದೇವೆ; ವಿಟ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ

ಭಾರತ ದೇಶದ ಅತಿದೊಡ್ಡ ಸುದ್ದಿ ಜಾಲವಾದ ಟಿವಿ9 ಆಯೋಜಿಸಿರುವ ವಾಟ್ ಇಂಡಿಯಾ ಥಿಂಕ್ಸ್ ಟುಡೇ ಶೃಂಗಸಭೆ (WITT Summit 2026) ಇಂದು ಆರಂಭವಾಗಿದೆ. ಇಂದು ಮತ್ತು ನಾಳೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಈ ಶೃಂಗಸಭೆ ನಡೆಯಲಿದೆ. ಈ ಶೃಂಗಸಭೆಯ ಮೊದಲ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿ ವಿಶೇಷ ಅತಿಥಿಯಾಗಿ ಭಾಗವಹಿಸಿ ಮುಖ್ಯ ಭಾಷಣ ಮಾಡಿದ್ದಾರೆ. ನಾಳೆಯೂ ಶೃಂಗಸಭೆ ನಡೆಯಲಿದ್ದು, ಅನೇಕ ರಾಜಕಾರಣಿಗಳು, ಉದ್ಯಮಿಗಳು, ಕ್ರೀಡಾಪಟುಗಳು, ಸೆಲಬ್ರಿಟಿಗಳು ಪಾಲ್ಗೊಳ್ಳಲಿದ್ದಾರೆ.