AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prime Minister Of India

Prime Minister Of India

ಭಾರತ ಪ್ರಜಾತಂತ್ರ ವ್ಯವಸ್ಥೆಯ ನಾಯಕನೆಂದರೆ ಪ್ರಧಾನಿ. ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಒಂದಕ್ಕೆ ನಾಯಕರಾಗಿರುವ ಪ್ರಧಾನಿಗೆ ಐದು ವರ್ಷ ಶಾಸನಬದ್ಧ ಅಧಿಕಾರವಿರುತ್ತದೆ. ಲೋಕಸಭೆಯಲ್ಲಿ ಬಹುಮತ ಹೊಂದಿರುವ ಪಕ್ಷ ಅಥವಾ ಒಕ್ಕೂಟದ ಸದಸ್ಯರ ನಾಯಕನೇ ಪ್ರಧಾನಿ ಆಗಲಿದ್ದು, ಭಾರತವು ಸಧ್ಯಕ್ಕೆ 14ನೇ ಪ್ರಧಾನಿಯನ್ನು ಹೊಂದಿದೆ.

ಭಾರತದಲ್ಲಿ ಒಬ್ಬ ವ್ಯಕ್ತಿ ಎಷ್ಟು ವರ್ಷ ಅಥವಾ ಎಷ್ಟು ಅವಧಿಗೆ ಪ್ರಧಾನಿ ಆಗಬಹುದು ಎನ್ನುವ ಯಾವುದೇ ಮಿತಿಯಿಲ್ಲ. ಐದು ವರ್ಷಕ್ಕೊಮ್ಮೆ ನಡೆಯುವ ಚುನಾವಣೆಯಲ್ಲಿ ಪ್ರಧಾನಿ ಆಗುವ ಪಕ್ಷ ಅಥವಾ ಒಕ್ಕೂಟ ಗೆಲುವು ಸಾಧಿಸಿದರೆ ಸಾಕಾಗುತ್ತದೆ. ಜವಾಹರ್‌ಲಾಲ್‌ ನೆಹರು ಅವರು ಭಾರತದ ಮೊದಲ ಪ್ರಧಾನಿ ಆಗಿದ್ದರು. ಬಳಿಕ ಲಾಲ್‌ಬಹದ್ದೂರ್‌ ಶಾಸ್ತ್ರೀ, ಇಂದಿರಾ ಗಾಂಧಿ ಪ್ರಧಾನಿ ಆಗಿದ್ದರು.

ಮೊರಾರ್ಜಿ ದೇಸಾಯಿ ಅವರು ದೇಶದ ಮೊದಲ ಕಾಂಗ್ರೆಸ್ಸೇತರ ಪ್ರಧಾನಿಯಾದರೇ, ಇಂದಿರಾ ಅವರು ಮೊದಲ ಮಹಿಳಾ ಪ್ರಧಾನಿ ಎನಿಸಿಕೊಂಡರು. ಬಳಿಕ ರಾಜೀವ್‌ ಗಾಂಧಿ, ವಿ.ಪಿ ಸಿಂಗ್‌, ಚಂದ್ರಶೇಖರ್‌, ಪಿ.ವಿ ನರಸಿಂಹರಾವ್‌, ಅಟಲ್‌ ಬಿಹಾರಿ ವಾಜಪೇಯಿ, ಎಚ್‌.ಡಿ ದೇವೇಗೌಡ, ಐ.ಕೆ ಗುಜ್ರಾಲ್‌, ಮನಮೋಹನ್‌ ಸಿಂಗ್‌ ಈ ಹುದ್ದೆಯನ್ನು ಏರಿದರು.

2014ರಿಂದ ನರೇಂದ್ರ ಮೋದಿಯು ಪ್ರಧಾನಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಭಾರತದ ಸಂವಿಧಾನಬದ್ಧ ಪ್ರಜಾತಂತ್ರ ವ್ಯವಸ್ಥೆಯಲ್ಲಿ ರಾಷ್ಟ್ರಪತಿಯು ಮೊದಲ ಪ್ರಜೆಯಾಗಿದ್ದರೂ, ಆಡಳಿತಾತ್ಮಕವಾಗಿ ಪ್ರಧಾನಿಯೇ ದೇಶದ ಅತ್ಯಂತ ಪ್ರಭಾವಿ ವ್ಯಕ್ತಿ.

ಇನ್ನೂ ಹೆಚ್ಚು ಓದಿ

ಪ್ರಧಾನಿ ಮೋದಿಯಿಂದ ಪಂಜಾಬ್‌ನ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಏರ್​​ಪೋರ್ಟ್ ಎಂದು ಮರುನಾಮಕರಣ

ರೇಂದ್ರ ಮೋದಿ ಇಂದು ಪಂಜಾಬ್‌ನ ಆದಂಪುರ ವಿಮಾನ ನಿಲ್ದಾಣಕ್ಕೆ ಹೊಸ ಹೆಸರನ್ನು ಅನಾವರಣಗೊಳಿಸಿದ್ದಾರೆ. ಸಂತ ರವಿದಾಸ್ ಅವರ 649ನೇ ಜನ್ಮ ದಿನಾಚರಣೆಯ ಪ್ರಯುಕ್ತ ಈ ವಿಮಾನ ನಿಲ್ದಾಣಕ್ಕೆ ಸಂತ ಗುರು ರವಿದಾಸ್ ವಿಮಾನ ನಿಲ್ದಾಣ ಎಂದು ಮರುನಾಮಕರಣ ಮಾಡಲಾಗಿದೆ. ಇದರ ಜೊತೆಗೆ, ಪ್ರಧಾನಿ ಮೋದಿ ಲುಧಿಯಾನದ ಹಲ್ವಾರ ವಿಮಾನ ನಿಲ್ದಾಣದಲ್ಲಿ ಹೊಸದಾಗಿ ನಿರ್ಮಿಸಲಾದ ಟರ್ಮಿನಲ್ ಅನ್ನು ವರ್ಚುವಲ್ ಆಗಿ ಉದ್ಘಾಟಿಸಿದರು.

ಭಾರತದ ಉಜ್ವಲ ಭವಿಷ್ಯಕ್ಕೆ ಅಡಿಪಾಯ ಬಲಪಡಿಸುವ ಬಜೆಟ್; ಪ್ರಧಾನಿ ಮೋದಿ ಬಣ್ಣನೆ

PM Modi on Budget 2026: ಈ ಬಾರಿಯ ಬಜೆಟ್​ ಯುವ ಭಾರತದ ಕನಸುಗಳು, ದೃಢನಿಶ್ಚಯ, ಶಕ್ತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಇಂದು ಸಚಿವೆ ನಿರ್ಮಲಾ ಸೀತಾರಾಮನ್ 9ನೇ ಬಾರಿಗೆ ಬಜೆಟ್ ಮಂಡಿಸಿದ್ದಾರೆ. ಈ ಬಜೆಟ್ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯಿಸಿದ್ದು, ಈ ಬಜೆಟ್ ಐತಿಹಾಸಿಕವಾಗಿದೆ, ದೇಶದ ಸ್ತ್ರೀ ಶಕ್ತಿಯ ಸಬಲೀಕರಣದ ಉಪಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ ಎಂದಿದ್ದಾರೆ.

ಕೊಲ್ಕತ್ತಾ ಅಗ್ನಿ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ಪಶ್ಚಿಮ ಬಂಗಾಳದ ಪುಷ್ಪಾಂಜಲಿ ಡೆಕೋರೇಟರ್ಸ್ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿತು. ಅದು ವಾವ್ ಮೊಮೊ! ನಿರ್ವಹಿಸುತ್ತಿದ್ದ ಪಕ್ಕದ ಗೋದಾಮಿಗೆ ಬೇಗನೆ ಹರಡಿ, ಎರಡೂ ಕಟ್ಟಡಗಳನ್ನು ಆವರಿಸಿತು. ಈ ಬೆಂಕಿ ಅವಘಡದಲ್ಲಿ ಇದುವರೆಗೆ 25 ಜನರು ಸಾವನ್ನಪ್ಪಿದ್ದಾರೆ. ಕೋಲ್ಕತ್ತಾ ಪೊಲೀಸರು ವಾವ್ ಮೊಮೊ! ಗೋದಾಮಿನ ವ್ಯವಸ್ಥಾಪಕ ರಾಜ ಚಕ್ರವರ್ತಿ ಮತ್ತು ಉಪ ವ್ಯವಸ್ಥಾಪಕ ಮನೋರಂಜನ್ ಶೀತ್ವ್ ಅವರನ್ನು ಬಂಧಿಸಿದ್ದಾರೆ.

ಹೆಚ್ಚುತ್ತಲೇ ಇದೆ ಮೋದಿ ಅಲೆ; ಇಂದೇ ಲೋಕಸಭಾ ಚುನಾವಣೆ ನಡೆದರೂ ಎನ್​ಡಿಎಗೆ ಎಷ್ಟು ಸ್ಥಾನ ಸಿಗುತ್ತದೆ ಗೊತ್ತಾ?

ದೇಶದಲ್ಲಿ 12 ವರ್ಷಗಳ ಹಿಂದೆ ಶುರುವಾದ ನರೇಂದ್ರ ಮೋದಿಯವರ ಅಲೆ ಇನ್ನೂ ಕಡಿಮೆಯಾಗಿಲ್ಲ. ವರ್ಷದಿಂದ ವರ್ಷಕ್ಕೆ ನಮೋ ಅಭಿಮಾನ ಹೆಚ್ಚುತ್ತಲೇ ಇದೆ. ಇದಕ್ಕೆ 3ನೇ ಅವಧಿಗೆ ಅವರು ಪ್ರಧಾನಿಯಾಗಿರುವುದೇ ಸಾಕ್ಷಿ. ಆದರೆ, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ಹವಾ ಕೊಂಚ ಕಡಿಮೆಯಾಗಿದೆ ಎನ್ನಲಾಗಿತ್ತು. ಇದೀಗ ಇಂಡಿಯಾ ಟುಡೇ-ಸಿವೋಟರ್ ನಡೆಸಿದ ಮೂಡ್ ಆಫ್ ದಿ ನೇಷನ್ ಸಮೀಕ್ಷೆ ಕುತೂಹಲಕಾರಿ ಅಂಕಿ-ಅಂಶವನ್ನು ಬಹಿರಂಗಪಡಿಸಿದೆ.

ಯುಎಇ ಅಧ್ಯಕ್ಷರಿಗೆ ಉಡುಗೊರೆಯಾಗಿ ಕುಸುರಿ ಕೆತ್ತನೆಯ ಮರದ ಉಯ್ಯಾಲೆ ನೀಡಿದ ಮೋದಿ

ಭಾರತಕ್ಕೆ ಕೇವಲ 2 ಗಂಟೆಗಳ ಭೇಟಿಗೆ ಆಗಮಿಸಿದ್ದ ಯುಎಇ ಅಧ್ಯಕ್ಷರಿಗೆ ಪ್ರಧಾನಿ ನರೇಂದ್ರ ಮೋದಿ ಮರೆಯಲಾಗದ ಉಡುಗೊರೆ ನೀಡಿದ್ದಾರೆ. ಗುಜರಾತಿನ ಕರಕುಶಲಕರ್ಮಿಗಳು ಕೆತ್ತಿದ ಮರದ ಉಯ್ಯಾಲೆಯನ್ನು ಯುಎಇ ಅಧ್ಯಕ್ಷರಿಗೆ ನೀಡಲಾಯಿತು. ಅದನ್ನು ಹೂವಿನ ಮತ್ತು ಸಾಂಪ್ರದಾಯಿಕ ವಿನ್ಯಾಸಗಳೊಂದಿಗೆ ಕೈಯಿಂದ ಕೆತ್ತಲಾಗಿದೆ. ಗುಜರಾತಿ ಸಂಸ್ಕೃತಿಯಲ್ಲಿ ತಲೆಮಾರುಗಳಾದ್ಯಂತ ಒಗ್ಗಟ್ಟು ಮತ್ತು ಬಾಂಧವ್ಯವನ್ನು ಪ್ರತಿನಿಧಿಸುವ ಈ ಉಯ್ಯಾಲೆಯ ಜೊತೆಗೆ ಕಾಶ್ಮೀರದ ಪಶ್ಮಿನಾ ಶಾಲನ್ನು ಸಹ ಉಡುಗೊರೆಯಾಗಿ ನೀಡಲಾಯಿತು. 

ಭಾರತಕ್ಕೆ ಆಗಮಿಸಿದ ಯುಎಇ ಅಧ್ಯಕ್ಷರಿಗೆ ಪ್ರಧಾನಿ ಮೋದಿಯಿಂದ ಅಪ್ಪುಗೆಯ ಸ್ವಾಗತ

ಯುಎಇ ಅಧ್ಯಕ್ಷ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಕೆಲವೇ ಗಂಟೆಗಳ ಭೇಟಿಗಾಗಿ ಭಾರತಕ್ಕೆ ಆಗಮಿಸಿದ್ದಾರೆ. ಅವರ ಈ ಭೇಟಿ ಭಾರೀ ಕುತೂಹಲ ಮೂಡಿಸಿದೆ. ದೆಹಲಿ ವಿಮಾನ ನಿಲ್ದಾಣದಲ್ಲಿ ಯುಎಇ ಅಧ್ಯಕ್ಷರನ್ನು ಪ್ರಧಾನಿ ನರೇಂದ್ರ ಮೋದಿ ಖುದ್ದಾಗಿ ಬರಮಾಡಿಕೊಂಡರು. ವಿಮಾನ ಇಳಿಯುತ್ತಿದ್ದಂತೆ ಯುಎಇ ಅಧ್ಯಕ್ಷರಿಗೆ ಬಿಗಿಯಾದ ಅಪ್ಪುಗೆ ನೀಡಿ ಸ್ವಾಗತಿಸಿದ ಪ್ರಧಾನಿ ಮೋದಿ ಬಳಿಕ ತಮ್ಮ ಕಾರಿನಲ್ಲಿಯೇ ಅವರನ್ನು ಕರೆದುಕೊಂಡು ಹೋಗುವ ಮೂಲಕ ಮತ್ತೊಮ್ಮೆ ಕಾರು ರಾಜತಾಂತ್ರಿತೆಯಿಂದ ಗಮನ ಸೆಳೆದಿದ್ದಾರೆ.

ಅಸ್ಸಾಂನಲ್ಲಿ ಪ್ರಧಾನಿ ಮೋದಿ ಮುಂದೆ 10 ಸಾವಿರ ಕಲಾವಿದರಿಂದ ಬಾಗುರುಂಬಾ ನೃತ್ಯ ಪ್ರದರ್ಶನ

ಗುವಾಹಟಿಯ ಸರೋಸ್ಜೈ ಪ್ರದೇಶದ ಅರ್ಜುನ್ ಭೋಗೇಶ್ವರ ಬರುವಾ ಕ್ರೀಡಾಂಗಣದಲ್ಲಿ ಈ ಕಾರ್ಯಕ್ರಮ ನಡೆಯಿತು. 23 ಜಿಲ್ಲೆಗಳ 81 ವಿಧಾನಸಭಾ ಕ್ಷೇತ್ರಗಳಿಂದ ಸುಮಾರು 8,000 ನೃತ್ಯಗಾರರು ಸೇರಿದಂತೆ 10,000 ಕ್ಕೂ ಹೆಚ್ಚು ಕಲಾವಿದರು ಈ ನೃತ್ಯ ಪ್ರದರ್ಶನದಲ್ಲಿ ಭಾಗವಹಿಸಿದ್ದರು. ಪ್ರಧಾನಿ ಮೋದಿ ಮಾತ್ರವಲ್ಲದೆ ಅಸ್ಸಾಂ ರಾಜ್ಯಪಾಲ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಮತ್ತು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ಇತರ ನಾಯಕರು ಈ ಸಮಾರಂಭಕ್ಕೆ ಸಾಕ್ಷಿಯಾದರು.

ಅಸ್ಸಾಂನ ಸಾಂಪ್ರದಾಯಿಕ ಸೆರ್ಜಾ ವಾದ್ಯ ನುಡಿಸಿದ ಪ್ರಧಾನಿ ಮೋದಿ

"ನಾನು ಅಸ್ಸಾಂಗೆ ಭೇಟಿ ನೀಡಿದಷ್ಟು ಬೇರೆ ಯಾವುದೇ ಪ್ರಧಾನಿ ಭೇಟಿ ನೀಡಿಲ್ಲ. ಅಸ್ಸಾಂನ ಸಂಸ್ಕೃತಿಯನ್ನು ಜಾಗತಿಕವಾಗಿ ಗುರುತಿಸಬೇಕೆಂದು ನಾನು ಬಯಸುತ್ತೇನೆ ಮತ್ತು ಈ ನಿಟ್ಟಿನಲ್ಲಿ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ" ಎಂದ ಮೋದಿ ಬಾಗೂರುಂಬಾ ನೃತ್ಯದ ಅಪಾರ ಸಾಂಸ್ಕೃತಿಕ ಮಹತ್ವವನ್ನು ಶ್ಲಾಘಿಸಿದರು. ಈ ಪ್ರದರ್ಶನವು ಬೋಡೋ ಸಮುದಾಯದ ಸಂಪ್ರದಾಯಗಳು, ಮೌಲ್ಯಗಳು ಮತ್ತು ಸಾಂಸ್ಕೃತಿಕ ಪ್ರಜ್ಞೆಯನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದರು.

ಕಾಂಗ್ರೆಸ್ ಅಸ್ಸಾಂ ಜನರಿಗೆ ಗೌರವ ಕೊಡಲಿಲ್ಲ, ವಲಸಿಗರಿಗೆ ಮಣೆ ಹಾಕಿತು; ಗುವಾಹಟಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ

ಪ್ರಧಾನಿ ನರೇಂದ್ರ ಮೋದಿ 2 ದಿನಗಳ ಅಸ್ಸಾಂ ಭೇಟಿಗೆ ಇಂದು ಗುವಾಹಟಿಗೆ ಆಗಮಿಸಿದ್ದಾರೆ. ಈ ವೇಳೆ ಅವರು ಬೋಡೋ ಸಂಪ್ರದಾಯಗಳನ್ನು ಶ್ಲಾಘಿಸಿದರು. ಗುವಾಹಟಿಯಲ್ಲಿ ನಡೆದ ಬಾಗುರುಂಬಾ ದ್ವೌ ಕಾರ್ಯಕ್ರಮದ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಅಸ್ಸಾಂನ ಶ್ರೀಮಂತ ಸಾಂಸ್ಕೃತಿಕ ಪರಂಪರೆಗೆ ಜಾಗತಿಕ ಮನ್ನಣೆ ನೀಡುವ ಅಗತ್ಯವನ್ನು ಒತ್ತಿ ಹೇಳಿದರು. ಹಾಗೇ, ಈ ವೇಳೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

PM Modi in Assam: ಗುವಾಹಟಿಯಲ್ಲಿ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ

ಪ್ರಧಾನಿ ನರೇಂದ್ರ ಮೋದಿ ಇಂದು ಸಂಜೆ ಅಸ್ಸಾಂ ರಾಜಧಾನಿ ಗುವಾಹಟಿಗೆ ಆಗಮಿಸಿದರು. ತಮ್ಮ 2 ದಿನಗಳ ಪ್ರವಾಸದಲ್ಲಿ ಅವರು ಸುಮಾರು 7,000 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ. ಲೋಕಪ್ರಿಯ ಗೋಪಿನಾಥ್ ಬೋರ್ಡೊಲೊಯ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (ಎಲ್‌ಜಿಬಿಐಎ) ಹೊರಗಿನ ರಾಷ್ಟ್ರೀಯ ಹೆದ್ದಾರಿ-17 ರ ಸುತ್ತಿನಿಂದ ರೋಡ್ ಶೋ ಪ್ರಾರಂಭವಾಗಿ ಸುಮಾರು 4 ಕಿಲೋಮೀಟರ್ ದೂರ ನಡೆಯಿತು. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಪಕ್ಷದ ಇತರ ಹಿರಿಯ ನಾಯಕರು ರೋಡ್ ಶೋ ಸಮಯದಲ್ಲಿ ಮೋದಿ ಅವರೊಂದಿಗೆ ಇದ್ದರು.

ವಂದೇ ಭಾರತ್ ಸ್ಲೀಪರ್ ರೈಲಿನಲ್ಲಿ ವಿದ್ಯಾರ್ಥಿಗಳು, ಲೋಕೋ ಪೈಲಟ್ ಜೊತೆ ಮೋದಿ ಸಂವಾದ

ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಹಸಿರು ನಿಶಾನೆ ತೋರಿದ ಬಳಿಕ ಪ್ರಧಾನಿ ಮೋದಿ ವಿದ್ಯಾರ್ಥಿಗಳು, ಲೋಕೋ ಪೈಲಟ್‌ಗಳೊಂದಿಗೆ ಸಂವಾದ ನಡೆಸಿದರು. ಈ ಸ್ಲೀಪರ್ ರೈಲು ಸೇವೆಯು ಹೌರಾವನ್ನು ಕಾಮಾಕ್ಯ (ಗುವಾಹಟಿ) ಜೊತೆ ಸಂಪರ್ಕಿಸುತ್ತದೆ. ಇದು ಪ್ರಯಾಣಿಕರಿಗೆ ವೇಗವಾದ, ಹೆಚ್ಚು ಆರಾಮದಾಯಕ ಮತ್ತು ತಾಂತ್ರಿಕವಾಗಿ ಅಪ್​ಗ್ರೇಡ್ ಆದ ಪ್ರಯಾಣದ ಅನುಭವವನ್ನು ನೀಡುತ್ತದೆ.

Vande Bharat Sleeper Train: ಬಂಗಾಳದ ಮಾಲ್ಡಾದಲ್ಲಿ ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

ಪಶ್ಚಿಮ ಬಂಗಾಳದ ಮಾಲ್ಡಾ ಟೌನ್ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ದೇಶದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಚಾಲನೆ ನೀಡಿದರು. ಗುವಾಹಟಿ (ಕಾಮಾಕ್ಯ) ಹಾಗೂ ಹೌರಾ ನಡುವಿನ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಆಗಿ ಹಸಿರು ನಿಶಾನೆ ತೋರಿದರು. ಆಧುನಿಕ ಭಾರತದ ಸಾರಿಗೆ ಅಗತ್ಯಗಳನ್ನು ಪೂರೈಸಲು ಆಧುನಿಕ ಸೌಲಭ್ಯಗಳೊಂದಿಗೆ ವಂದೇ ಭಾರತ್ ಸ್ಲೀಪರ್ ರೈಲನ್ನು ತಯಾರಿಸಲಾಗಿದೆ. ಇದು ಸಂಪೂರ್ಣ ಹವಾನಿಯಂತ್ರಿತ ಸ್ಲೀಪರ್ ರೈಲು ಆಗಿದ್ದು, ಕಡಿಮೆ ದರದಲ್ಲಿ ಪ್ರಯಾಣಿಕರಿಗೆ ವಿಮಾನಯಾನದಂತಹ ಅನುಭವವನ್ನು ನೀಡುತ್ತದೆ.

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ