AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prime Minister Of India

Prime Minister Of India

ಭಾರತ ಪ್ರಜಾತಂತ್ರ ವ್ಯವಸ್ಥೆಯ ನಾಯಕನೆಂದರೆ ಪ್ರಧಾನಿ. ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಒಂದಕ್ಕೆ ನಾಯಕರಾಗಿರುವ ಪ್ರಧಾನಿಗೆ ಐದು ವರ್ಷ ಶಾಸನಬದ್ಧ ಅಧಿಕಾರವಿರುತ್ತದೆ. ಲೋಕಸಭೆಯಲ್ಲಿ ಬಹುಮತ ಹೊಂದಿರುವ ಪಕ್ಷ ಅಥವಾ ಒಕ್ಕೂಟದ ಸದಸ್ಯರ ನಾಯಕನೇ ಪ್ರಧಾನಿ ಆಗಲಿದ್ದು, ಭಾರತವು ಸಧ್ಯಕ್ಕೆ 14ನೇ ಪ್ರಧಾನಿಯನ್ನು ಹೊಂದಿದೆ.

ಭಾರತದಲ್ಲಿ ಒಬ್ಬ ವ್ಯಕ್ತಿ ಎಷ್ಟು ವರ್ಷ ಅಥವಾ ಎಷ್ಟು ಅವಧಿಗೆ ಪ್ರಧಾನಿ ಆಗಬಹುದು ಎನ್ನುವ ಯಾವುದೇ ಮಿತಿಯಿಲ್ಲ. ಐದು ವರ್ಷಕ್ಕೊಮ್ಮೆ ನಡೆಯುವ ಚುನಾವಣೆಯಲ್ಲಿ ಪ್ರಧಾನಿ ಆಗುವ ಪಕ್ಷ ಅಥವಾ ಒಕ್ಕೂಟ ಗೆಲುವು ಸಾಧಿಸಿದರೆ ಸಾಕಾಗುತ್ತದೆ. ಜವಾಹರ್‌ಲಾಲ್‌ ನೆಹರು ಅವರು ಭಾರತದ ಮೊದಲ ಪ್ರಧಾನಿ ಆಗಿದ್ದರು. ಬಳಿಕ ಲಾಲ್‌ಬಹದ್ದೂರ್‌ ಶಾಸ್ತ್ರೀ, ಇಂದಿರಾ ಗಾಂಧಿ ಪ್ರಧಾನಿ ಆಗಿದ್ದರು.

ಮೊರಾರ್ಜಿ ದೇಸಾಯಿ ಅವರು ದೇಶದ ಮೊದಲ ಕಾಂಗ್ರೆಸ್ಸೇತರ ಪ್ರಧಾನಿಯಾದರೇ, ಇಂದಿರಾ ಅವರು ಮೊದಲ ಮಹಿಳಾ ಪ್ರಧಾನಿ ಎನಿಸಿಕೊಂಡರು. ಬಳಿಕ ರಾಜೀವ್‌ ಗಾಂಧಿ, ವಿ.ಪಿ ಸಿಂಗ್‌, ಚಂದ್ರಶೇಖರ್‌, ಪಿ.ವಿ ನರಸಿಂಹರಾವ್‌, ಅಟಲ್‌ ಬಿಹಾರಿ ವಾಜಪೇಯಿ, ಎಚ್‌.ಡಿ ದೇವೇಗೌಡ, ಐ.ಕೆ ಗುಜ್ರಾಲ್‌, ಮನಮೋಹನ್‌ ಸಿಂಗ್‌ ಈ ಹುದ್ದೆಯನ್ನು ಏರಿದರು.

2014ರಿಂದ ನರೇಂದ್ರ ಮೋದಿಯು ಪ್ರಧಾನಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಭಾರತದ ಸಂವಿಧಾನಬದ್ಧ ಪ್ರಜಾತಂತ್ರ ವ್ಯವಸ್ಥೆಯಲ್ಲಿ ರಾಷ್ಟ್ರಪತಿಯು ಮೊದಲ ಪ್ರಜೆಯಾಗಿದ್ದರೂ, ಆಡಳಿತಾತ್ಮಕವಾಗಿ ಪ್ರಧಾನಿಯೇ ದೇಶದ ಅತ್ಯಂತ ಪ್ರಭಾವಿ ವ್ಯಕ್ತಿ.

ಇನ್ನೂ ಹೆಚ್ಚು ಓದಿ

ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ

ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ ಜೋರ್ಡಾನ್, ಓಮನ್ ಮತ್ತು ಇಥಿಯೋಪಿಯಾಗೆ ಪ್ರವಾಸ ಆರಂಭಿಸಿದ್ದಾರೆ. ಈ ಭೇಟಿ ಈ ರಾಷ್ಟ್ರಗಳೊಂದಿಗಿನ ಭಾರತದ ಸಂಬಂಧಗಳು ವ್ಯವಹಾರ, ವಿಶ್ವಾಸಾರ್ಹತೆ ಮತ್ತು ಸಹಕಾರವನ್ನು ಹೇಗೆ ಒತ್ತಿಹೇಳುತ್ತವೆ. ಪ್ರಧಾನಿ ಮೋದಿ ಜೋರ್ಡಾನ್‌ನ ಅಮ್ಮನ್‌ನಲ್ಲಿ ಬಂದಿಳಿದಿದ್ದಾರೆ. ಜೋರ್ಡಾನ್ ಪ್ರಧಾನಿ ಅವರಿಂದ ಮೋದಿಗೆ ಸ್ವಾಗತ ನೀಡಲಾಯಿತು.

ಬಹಿರಂಗವಾಗಿ ಕ್ಷಮೆ ಕೇಳಿ; ರ‍್ಯಾಲಿಯಲ್ಲಿ ‘ಮೋದಿ ಸಮಾಧಿ’ ಘೋಷಣೆ ಕೂಗಿದ ಕಾಂಗ್ರೆಸ್ ವಿರುದ್ಧ ಕಿರಣ್ ರಿಜಿಜು ಆಕ್ರೋಶ

ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆದ ಕಾಂಗ್ರೆಸ್ ರ‍್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ವಿವಾದಾತ್ಮಕ ಘೋಷಣೆಗಳನ್ನು ಕೂಗಲಾಗಿತ್ತು. ಮೋದಿ ಸಮಾಧಿ ಅಗೆಯಬೇಕು ಎಂಬೆಲ್ಲ ಘೋಷಣೆಗಳನ್ನು ಕಾಂಗ್ರೆಸ್ ಕಾರ್ಯಕರ್ತರು ಕೂಗಿದ್ದರು. ಹೀಗಾಗಿ, ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಕ್ಷಮೆ ಯಾಚಿಸಬೇಕೆಂದು ಬಿಜೆಪಿ ಆಗ್ರಹಿಸಿದೆ.

ವಿಕಸಿತ ಕೇರಳವೇ ನಮ್ಮ ಗುರಿ; ಕಾರ್ಪೋರೇಷನ್ ಗೆಲುವಿನ ಬಳಿಕ ತಿರುವನಂತಪುರಂ ಜನರಿಗೆ ಪ್ರಧಾನಿ ಮೋದಿ ಧನ್ಯವಾದ

ಕೇರಳದ ತಿರುವನಂತಪುರಂ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಭಾರೀ ಗೆಲುವು ಸಾಧಿಸಿದೆ. ತಿರುವನಂತಪುರಂ ಮಹಾನಗರ ಪಾಲಿಕೆಯ 101 ವಾರ್ಡ್‌ಗಳಲ್ಲಿ 50 ವಾರ್ಡ್‌ಗಳನ್ನು ಗೆಲ್ಲುವ ಮೂಲಕ ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಹೊಸ ಇತಿಹಾಸ ಬರೆದಿದೆ. ಇದು ಆಡಳಿತಾರೂಢ ಎಡ ಪ್ರಜಾಸತ್ತಾತ್ಮಕ ರಂಗ (ಎಲ್‌ಡಿಎಫ್) ಮತ್ತು ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ (ಯುಡಿಎಫ್) ಗೆ ಭಾರಿ ಹೊಡೆತ ನೀಡಿದೆ. ತಿರುವನಂತಪುರಂನಲ್ಲಿ ಬಿಜೆಪಿಯ ಬಲಪ್ರದರ್ಶನಕ್ಕೆ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯಿಸಿದ್ದಾರೆ.

ಸುಂಕದ ಉದ್ವಿಗ್ನತೆ ನಡುವೆ ಟ್ರಂಪ್ ಜೊತೆ ಪ್ರಧಾನಿ ಮೋದಿ ಮಾತುಕತೆ; ವ್ಯಾಪಾರ, ತಂತ್ರಜ್ಞಾನ ಸಹಕಾರದ ಬಗ್ಗೆ ಚರ್ಚೆ

ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಉದ್ವಿಗ್ನತೆಯ ನಡುವೆ, ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇಂದು ದೂರವಾಣಿ ಸಂಭಾಷಣೆ ನಡೆಸಿದ್ದಾರೆ. ಭಾರತ ಮತ್ತು ಅಮೆರಿಕದ ನಡುವಿನ ಸಮಗ್ರ ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆಯ ಸ್ಥಿತಿಯ ಮೇಲೆ ಅವರಿಬ್ಬರೂ ತಮ್ಮ ಮಾತನ್ನು ಕೇಂದ್ರೀಕರಿಸಿದರು. ಎಲ್ಲಾ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರವನ್ನು ಸ್ಥಿರವಾಗಿ ಬಲಪಡಿಸುವ ಬಗ್ಗೆ ಇಬ್ಬರೂ ತೃಪ್ತಿ ವ್ಯಕ್ತಪಡಿಸಿದರು.

ಹೊಸ ಲುಕ್​​ನಲ್ಲಿ ಪ್ರಧಾನಿ; ಧುರಂಧರ್ ಸ್ಟೈಲ್​ನ ಮೋದಿ ಮಾಂಟೇಜ್ ವೈರಲ್

'ಧುರಂಧರ್' ಶೈಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ವ್ಲಾಡಿಮಿರ್ ಪುಟಿನ್ ಜೊತೆಗಿನ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಟ್ರೆಂಡಿಂಗ್ ಆಗಿದೆ. ಈ ವೀಡಿಯೊದಲ್ಲಿ ಜಿ20, ಜಪಾನ್, ಇಂಡೋನೇಷ್ಯಾ, ದಕ್ಷಿಣ ಆಫ್ರಿಕಾ, ಬ್ರೆಜಿಲ್ ಮತ್ತು ಯುರೋಪಿಯನ್ ಒಕ್ಕೂಟದೊಂದಿಗಿನ ಪ್ರಧಾನಿ ಮೋದಿಯವರ ಸಂವಹನದ ದೃಶ್ಯವೂ ಇದೆ. ಈ ವೀಡಿಯೊ ಕ್ಲಿಪ್, ಕಪ್ಪು ಕನ್ನಡಕ ಮತ್ತು ಕಪ್ಪು ಪಫರ್ ಜಾಕೆಟ್ ಧರಿಸಿ, ನೇರವಾಗಿ ಕ್ಯಾಮೆರಾ ಕಡೆಗೆ ನಡೆದುಕೊಂಡು ಬರುತ್ತಿರುವ ಪ್ರಧಾನಿ ಮೋದಿಯವರ ಸಿನಿಮೀಯ ಫೋಟೋದೊಂದಿಗೆ ಕೊನೆಗೊಳ್ಳುತ್ತದೆ.

ಪ್ರಧಾನಿ ಮೋದಿಗೆ ಇಸ್ರೇಲ್ ಪ್ರಧಾನಿ ನೆತನ್ಯಾಹು ಫೋನ್; ಭಯೋತ್ಪಾದನೆ, ಗಾಜಾ ಶಾಂತಿ ಯೋಜನೆಯ ಬಗ್ಗೆ ಚರ್ಚೆ

ಪ್ರಧಾನಿ ನರೇಂದ್ರ ಮೋದಿ ಇಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರಿಂದ ದೂರವಾಣಿ ಕರೆ ಸ್ವೀಕರಿಸಿದರು. ಅಧಿಕೃತ ಹೇಳಿಕೆಯ ಪ್ರಕಾರ, ಈ ಮಾತುಕತೆಯು ಜಾಗತಿಕ ಮತ್ತು ಪ್ರಾದೇಶಿಕ ಕಾಳಜಿಗಳ ಮೇಲೆ ಕೇಂದ್ರೀಕರಿಸಿತ್ತು. ಫೋನ್ ಸಂಭಾಷಣೆ ವೇಳೆ ಇಬ್ಬರೂ ನಾಯಕರು ಭಯೋತ್ಪಾದನೆಯನ್ನು ಬಲವಾಗಿ ಖಂಡಿಸಿದರು. ಬೆದರಿಕೆಯನ್ನು ಎದುರಿಸಲು ಮತ್ತು ಜನರ ಜೀವಗಳನ್ನು ರಕ್ಷಿಸಲು ಏಕೀಕೃತ ಜಾಗತಿಕ ಕ್ರಮದ ಅಗತ್ಯವನ್ನು ಅವರು ಒತ್ತಿ ಹೇಳಿದರು ಎನ್ನಲಾಗಿದೆ.

ಪ್ರಧಾನಿ ಮೋದಿ ಕೂಡ ವಿದೇಶ ಪ್ರವಾಸದಲ್ಲೇ ಇರುತ್ತಾರಲ್ಲ; ರಾಹುಲ್ ಕುರಿತ ಬಿಜೆಪಿ ಟೀಕೆಗೆ ಪ್ರಿಯಾಂಕಾ ಗಾಂಧಿ ತಿರುಗೇಟು

ಬಿಜೆಪಿ ಇಂದು ಕಾಂಗ್ರೆಸ್ ಸಂಸದ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಮುಂಬರುವ ಜರ್ಮನಿ ಪ್ರವಾಸದ ಬಗ್ಗೆ ಟೀಕಾಪ್ರಹಾರ ನಡೆಸಿದ್ದಾರೆ. ಲೋಕಸಭಾ ಅಧಿವೇಶನದ ವೇಳೆ ವಿದೇಶಕ್ಕೆ ಹೋಗುತ್ತಾರೆ, ಆಮೇಲೆ ಬಂದು ನನಗೆ ಮಾತನಾಡಲು ಅವಕಾಶವೇ ಸಿಗಲಿಲ್ಲ ಎನ್ನುತ್ತಾರೆ ಎಂದು ಬಿಜೆಪಿ ನಾಯಕರು ಟೀಕಿಸಿದ್ದಾರೆ. ಈ ಹೇಳಿಕೆಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕೂಡ ವಿದೇಶ ಪ್ರವಾಸದಲ್ಲೇ ಇರುತ್ತಾರೆ ಎನ್ನುವ ಮೂಲಕ ಅವರು ಬಿಜೆಪಿಗೆ ತಿರುಗೇಟು ನೀಡಿದ್ದಾರೆ.

ವಂದೇ ಮಾತರಂ ಕುರಿತ ನೆಹರು ಪತ್ರ ಓದಿದ ಪ್ರಿಯಾಂಕಾ ಗಾಂಧಿ, ಬಿಜೆಪಿಗೆ ತರಾಟೆ

ಸಂಸತ್ ಅಧಿವೇಶನದಲ್ಲಿ ಇಂದು ವಂದೇ ಮಾತರಂ ಗೀತೆಯ ಬಗ್ಗೆ ತೀವ್ರ ಚರ್ಚೆಗಳು ನಡೆದಿವೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರ ಹೆಸರನ್ನು ಪ್ರಸ್ತಾಪಿಸಿದ್ದರು. ಈ ಹಿನ್ನೆಲೆಯಲ್ಲಿ ತಿರುಗೇಟು ನೀಡಿರುವ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ, 'ನೀವು ಚುನಾವಣೆಗಾಗಿ ಇಲ್ಲಿದ್ದೀರಿ, ನಾವು ದೇಶಕ್ಕಾಗಿ ಇಲ್ಲಿದ್ದೇವೆ' ಎಂದು ಟೀಕಾಪ್ರಹಾರ ನಡೆಸಿದ್ದಾರೆ. ಅಲ್ಲದೆ, ಸುಭಾಷ್ ಚಂದ್ರ ಬೋಸ್​​ಗೆ ವಂದೇ ಮಾತರಂ ಕುರಿತು ನೆಹರು ಬರೆದಿದ್ದ ಪತ್ರವನ್ನು ಕೂಡ ಓದಿದ್ದಾರೆ.

ಪುಟಿನ್ ಭೇಟಿ ಭಾರತ-ರಷ್ಯಾ ಬಾಂಧವ್ಯಕ್ಕೆ ಚೈತನ್ಯ ತುಂಬಲಿದೆ; ಪ್ರಧಾನಿ ಮೋದಿ

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಗುರುವಾರ ಸಂಜೆ 2 ದಿನದ ಭೇಟಿಗಾಗಿ ಭಾರತಕ್ಕೆ ಬಂದಿದ್ದರು. ದೆಹಲಿಯಲ್ಲಿ 2 ದಿನಗಳ ಕಾಲ ವಿವಿಧ ಕಾರ್ಯಕ್ರಮಗಳಲ್ಲಿ, ಔತಣಕೂಟದಲ್ಲಿ ಪಾಲ್ಗೊಂಡಿದ್ದ ಅವರು ಪ್ರಧಾನಿ ಮೋದಿಯವರೊಂದಿಗೆ ಸುದ್ದಿಗೋಷ್ಠಿಯಲ್ಲೂ ಮಾತನಾಡಿದರು. ಅವರ ಈ ಭೇಟಿಯ ಹೈಲೈಟ್ಸ್ ಅನ್ನು ಹಂಚಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಪುಟಿನ್ ಅವರ ಈ ಭೇಟಿ ಭಾರತ ಹಾಗೂ ರಷ್ಯಾ ದೇಶಗಳ ಬಾಂಧವ್ಯಕ್ಕೆ ಚೈತನ್ಯ ತುಂಬಲಿದೆ ಎಂದಿದ್ದಾರೆ.

ಪ್ರಧಾನಿ ಮೋದಿಯಿಂದ ಪುಟಿನ್​ಗೆ ಚಹಾ, ಬೆಳ್ಳಿ ಕುಸುರಿ, ಕಾಶ್ಮೀರಿ ಕೇಸರಿ, ಭಗವದ್ಗೀತೆ ಉಡುಗೊರೆ

ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಎರಡು ದಿನಗಳ ಭೇಟಿಯ ಸಂದರ್ಭದಲ್ಲಿ ಭಾರತೀಯ ಕರಕುಶಲ ಮತ್ತು ಸಾಂಸ್ಕೃತಿಕ ಸಂಪತ್ತುಗಳನ್ನು ಒಳಗೊಂಡ ವಿಶೇಷ ಉಡುಗೊರೆಗಳನ್ನು ನೀಡಿದ್ದಾರೆ. ಇದರಲ್ಲಿ ಅಸ್ಸಾಂ ಕಪ್ಪು ಚಹಾ, ಮುರ್ಷಿದಾಬಾದ್ ಬೆಳ್ಳಿ ಚಹಾ ಸೆಟ್, ಮಹಾರಾಷ್ಟ್ರದ ಕರಕುಶಲ ಬೆಳ್ಳಿ ಕುದುರೆ, ಆಗ್ರಾದ ಅಮೃತಶಿಲೆಯ ಚೆಸ್ ಸೆಟ್, ಪ್ರೀಮಿಯಂ ಕಾಶ್ಮೀರಿ ಕೇಸರಿ ಮತ್ತು ಭಗವದ್ಗೀತೆಯ ರಷ್ಯನ್ ಅನುವಾದಿತ ಆವೃತ್ತಿ ಸೇರಿದೆ.

ಪ್ರಧಾನಿ ಮೋದಿಗೆ ಬಿಗಿಯಾಗಿ ಹಸ್ತಲಾಘವ ನೀಡುವ ಮೂಲಕ ಪುಟಿನ್ ಜಗತ್ತಿಗೆ ನೀಡಿದ ಸಂದೇಶವೇನು?

ಭಾರತ ಪ್ರವಾಸದಲ್ಲಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ದೆಹಲಿಯ ವಿಮಾನ ನಿಲ್ದಾಣಕ್ಕೆ ಬಂದಿಳಿದಾಗ ಅವರನ್ನು ನಿನ್ನೆ ರಾತ್ರಿ ಪ್ರಧಾನಿ ಮೋದಿಯವರೇ ಸ್ವಾಗತಿಸಿದ್ದರು. ಈ ವೇಳೆ ಬಿಗಿಯಾದ ಅಪ್ಪುಗೆ ಹಾಗೂ ಹಸ್ತಲಾಘವ ನೀಡಿದ್ದರು. ಸಾಮಾನ್ಯವಾಗಿ ಜಾಗತಿಕ ನಾಯಕರಿಗೆ ನೀಡುವ ಹಸ್ತಲಾಘವಕ್ಕಿಂತ ವಿಭಿನ್ನವಾಗಿ ಪುಟಿನ್ ಅವರು ಮೋದಿಗೆ ಹ್ಯಾಂಡ್​​ಶೇಕ್ ಮಾಡಿದ್ದರು. ಬಿಗಿಯಾಗಿ ಹಸ್ತಲಾಘವ ಮಾಡುವ ಮೂಲಕ ಪುಟಿನ್ ತಮ್ಮ ಹಾಗೂ ಪ್ರಧಾನಿ ಮೋದಿಯ ಗೆಳೆತನವನ್ನು ಜಗತ್ತಿಗೆ ಸಾರಿದ್ದಾರೆ

ರಷ್ಯಾದ ಪ್ರವಾಸಿಗರಿಗೆ 30 ದಿನಗಳಲ್ಲಿ ಉಚಿತ ಇ-ವೀಸಾ; ಪುಟಿನ್ ಸಮ್ಮುಖದಲ್ಲಿ ಪ್ರಧಾನಿ ಮೋದಿ ಘೋಷಣೆ

ದ್ವಿಪಕ್ಷೀಯ ಮಾತುಕತೆ ಬಳಿಕ ಪ್ರಧಾನಿ ನರೇಂದ್ರ ಮೋದಿ ಹಾಗೂ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಜಂಟಿ ಸುದ್ದಿಗೋಷ್ಠಿ ನಡೆಸಿದ್ದಾರೆ. ದೆಹಲಿಯ ಹೈದರಾಬಾದ್‌ ಹೌಸ್​​ನಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಲಾಗಿದೆ. ಭಾರತ-ರಷ್ಯಾ ನಡುವೆ ಹಲವು ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಒಪ್ಪಂದಗಳನ್ನು ಮಾಡಿಕೊಳ್ಳಲಾಗಿದೆ. ರಕ್ಷಣೆ, ವ್ಯಾಪಾರ, ಇಂಧನ ಪೂರೈಕೆ ಸೇರಿದಂತೆ ಹಲವು ಒಪ್ಪಂದವಾಗಿದೆ. ಈ ಬಗ್ಗೆ ಮೋದಿ ಹಾಗೂ ಪುಟಿನ್ ಮಾಹಿತಿ ಹಂಚಿಕೊಂಡಿದ್ದಾರೆ.

ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?