AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prime Minister Of India

Prime Minister Of India

ಭಾರತ ಪ್ರಜಾತಂತ್ರ ವ್ಯವಸ್ಥೆಯ ನಾಯಕನೆಂದರೆ ಪ್ರಧಾನಿ. ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಒಂದಕ್ಕೆ ನಾಯಕರಾಗಿರುವ ಪ್ರಧಾನಿಗೆ ಐದು ವರ್ಷ ಶಾಸನಬದ್ಧ ಅಧಿಕಾರವಿರುತ್ತದೆ. ಲೋಕಸಭೆಯಲ್ಲಿ ಬಹುಮತ ಹೊಂದಿರುವ ಪಕ್ಷ ಅಥವಾ ಒಕ್ಕೂಟದ ಸದಸ್ಯರ ನಾಯಕನೇ ಪ್ರಧಾನಿ ಆಗಲಿದ್ದು, ಭಾರತವು ಸಧ್ಯಕ್ಕೆ 14ನೇ ಪ್ರಧಾನಿಯನ್ನು ಹೊಂದಿದೆ.

ಭಾರತದಲ್ಲಿ ಒಬ್ಬ ವ್ಯಕ್ತಿ ಎಷ್ಟು ವರ್ಷ ಅಥವಾ ಎಷ್ಟು ಅವಧಿಗೆ ಪ್ರಧಾನಿ ಆಗಬಹುದು ಎನ್ನುವ ಯಾವುದೇ ಮಿತಿಯಿಲ್ಲ. ಐದು ವರ್ಷಕ್ಕೊಮ್ಮೆ ನಡೆಯುವ ಚುನಾವಣೆಯಲ್ಲಿ ಪ್ರಧಾನಿ ಆಗುವ ಪಕ್ಷ ಅಥವಾ ಒಕ್ಕೂಟ ಗೆಲುವು ಸಾಧಿಸಿದರೆ ಸಾಕಾಗುತ್ತದೆ. ಜವಾಹರ್‌ಲಾಲ್‌ ನೆಹರು ಅವರು ಭಾರತದ ಮೊದಲ ಪ್ರಧಾನಿ ಆಗಿದ್ದರು. ಬಳಿಕ ಲಾಲ್‌ಬಹದ್ದೂರ್‌ ಶಾಸ್ತ್ರೀ, ಇಂದಿರಾ ಗಾಂಧಿ ಪ್ರಧಾನಿ ಆಗಿದ್ದರು.

ಮೊರಾರ್ಜಿ ದೇಸಾಯಿ ಅವರು ದೇಶದ ಮೊದಲ ಕಾಂಗ್ರೆಸ್ಸೇತರ ಪ್ರಧಾನಿಯಾದರೇ, ಇಂದಿರಾ ಅವರು ಮೊದಲ ಮಹಿಳಾ ಪ್ರಧಾನಿ ಎನಿಸಿಕೊಂಡರು. ಬಳಿಕ ರಾಜೀವ್‌ ಗಾಂಧಿ, ವಿ.ಪಿ ಸಿಂಗ್‌, ಚಂದ್ರಶೇಖರ್‌, ಪಿ.ವಿ ನರಸಿಂಹರಾವ್‌, ಅಟಲ್‌ ಬಿಹಾರಿ ವಾಜಪೇಯಿ, ಎಚ್‌.ಡಿ ದೇವೇಗೌಡ, ಐ.ಕೆ ಗುಜ್ರಾಲ್‌, ಮನಮೋಹನ್‌ ಸಿಂಗ್‌ ಈ ಹುದ್ದೆಯನ್ನು ಏರಿದರು.

2014ರಿಂದ ನರೇಂದ್ರ ಮೋದಿಯು ಪ್ರಧಾನಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಭಾರತದ ಸಂವಿಧಾನಬದ್ಧ ಪ್ರಜಾತಂತ್ರ ವ್ಯವಸ್ಥೆಯಲ್ಲಿ ರಾಷ್ಟ್ರಪತಿಯು ಮೊದಲ ಪ್ರಜೆಯಾಗಿದ್ದರೂ, ಆಡಳಿತಾತ್ಮಕವಾಗಿ ಪ್ರಧಾನಿಯೇ ದೇಶದ ಅತ್ಯಂತ ಪ್ರಭಾವಿ ವ್ಯಕ್ತಿ.

ಇನ್ನೂ ಹೆಚ್ಚು ಓದಿ

ಆಸ್ಟ್ರೇಲಿಯಾ ಪ್ರಧಾನಿಗೆ ವಿಶೇಷ ಉಡುಗೊರೆ; ಮೋದಿ ‘ಕಲೋನಿಯಲ್ ಕಸಿನ್ಸ್’ ಆಲ್ಬಮ್ ಕೊಟ್ಟಿದ್ದೇಕೆ?

Explainer: ಭಾರತದ ಪ್ರಧಾನಿ ನರೇಂದ್ರ ಮೋದಿ ಕಳೆದ ವಾರ ಇಂಡೋನೇಷ್ಯಾ, ಆಸ್ಟ್ರೇಲಿಯಾ, ನ್ಯೂಜಿಲೆಂಡ್​ಗೆ ಅಧಿಕೃತ ಭೇಟಿ ನೀಡಿದ್ದರು. ಈ ಪ್ರವಾಸದ ವೇಳೆ ಆಸ್ಟ್ರೇಲಿಯಾದ ಪ್ರಧಾನಿಗೆ ಈ ಭೇಟಿಯ ನೆನಪಿಗಾಗಿ ಪ್ರಧಾನಿ ನರೇಂದ್ರ ಮೋದಿ ಇಂಡೋ- ಪಾಪ್ ಮ್ಯೂಸಿಕ್​ನ 'ಕಲೋನಿಯಲ್ ಕಸಿನ್ಸ್' ವಿನೈಲ್ ರೆಕಾರ್ಡ್ ಅನ್ನು ಉಡುಗೊರೆಯಾಗಿ ನೀಡಿದ್ದರು. ಈ ಗ್ರಾಮಫೋನ್ ಆಲ್ಬಂ ಅನ್ನು ಆಸ್ಟ್ರೇಲಿಯನ್ ಪ್ರಧಾನಿಗೆ ಮೋದಿ ನೀಡಿದ್ದೇಕೆ? ಇದರ ವಿಶೇಷತೆಯೇನು? ಎಂಬ ಚರ್ಚೆಗಳು ಒಂದೆಡೆ ನಡೆಯುತ್ತಿದ್ದರೆ ಇನ್ನೊಂದೆಡೆ ಪ್ರಧಾನಿ ಮೋದಿಯ ಗಿಫ್ಟ್​ನಿಂದಾಗಿ ಈ ಆಲ್ಬಂನ ಜನಪ್ರಿಯತೆ ಮತ್ತಷ್ಟು ಹೆಚ್ಚಾಗಿದೆ.

‘ಬೆಂಗಳೂರಿಗರಿಗೆ ಬಸ್ಸುಗಳು ಬೇಡವೇ?’: ಇ-ಬಸ್ ವಿಳಂಬ ನೀತಿ ವಿರುದ್ಧ ಜೆಡಿಎಸ್ ಕೆಂಡಾಮಂಡಲ!

ಕೇಂದ್ರ ಸರ್ಕಾರದ 'ಪಿಎಂ ಇ-ಡ್ರೈವ್' ಯೋಜನೆಯಡಿ ಬೆಂಗಳೂರಿಗೆ ಮಂಜೂರಾಗಿರುವ 4,500 ಎಲೆಕ್ಟ್ರಿಕ್ ಬಸ್‌ಗಳ ಜಾರಿಗೆ ಕ್ಯಾಬಿನೆಟ್ ಅನುಮೋದನೆ ನೀಡದ ಕಾಂಗ್ರೆಸ್ ಸರ್ಕಾರದ ವಿಳಂಬ ನೀತಿಯನ್ನು ಜೆಡಿಎಸ್ ತೀವ್ರವಾಗಿ ಖಂಡಿಸಿದೆ. ವಾರ್ಷಿಕ 1,000 ಕೋಟಿ ರೂ. ನಷ್ಟದ ಭೀತಿಯಿಂದ ಸರ್ಕಾರ ಹಿಂದೇಟು ಹಾಕುತ್ತಿದ್ದರೆ, ಇತ್ತ ಜೆಡಿಎಸ್ ಸರ್ಕಾರದ ಆಡಳಿತ ವೈಫಲ್ಯದ ವಿರುದ್ಧ ಎಕ್ಸ್ ಖಾತೆಯಲ್ಲಿ ವಾಗ್ದಾಳಿ ನಡೆಸಿದೆ.

  • Sunil MH
  • Updated on: Jul 12, 2026
  • 11:39 am

ನ್ಯೂಜಿಲೆಂಡ್ ಪ್ರವಾಸ ಮುಗಿಸಿ ಭಾರತಕ್ಕೆ ಮರಳಿದ ಪ್ರಧಾನಿ ಮೋದಿ

ನರೇಂದ್ರ ಮೋದಿ ಅವರು ತಮ್ಮ 2 ದಿನಗಳ ನ್ಯೂಜಿಲೆಂಡ್ ಪ್ರವಾಸವನ್ನು ಮುಗಿಸಿ ಇಂದು ಭಾರತಕ್ಕೆ ಮರಳಿದ್ದಾರೆ. 40 ವರ್ಷಗಳ ಬಳಿಕ ಭಾರತದ ಪ್ರಧಾನಿಯೊಬ್ಬರು ನ್ಯೂಜಿಲೆಂಡ್​ಗೆ ಭೇಟಿ ನೀಡಿದ್ದರಿಂದು ಇದು ಬಹಳ ಐತಿಹಾಸಿಕ ಮಹತ್ವ ಪಡೆಯಿತು. ಇದಕ್ಕೂ ಮೊದಲು ಪ್ರಧಾನಿ ಮೋದಿ ಇಂಡೋನೇಷ್ಯಾ ಮತ್ತು ಆಸ್ಟ್ರೇಲಿಯಾ ದೇಶಗಳಿಗೂ ಭೇಟಿ ನೀಡಿದ್ದರು. ಮೂರನೇ ದೇಶವಾಗಿ ನ್ಯೂಜಿಲೆಂಡ್​ಗೆ ಭೇಟಿ ನೀಡಿದ್ದ ಅವರು ಇದೀಗ ದೆಹಲಿಗೆ ಮರಳಿದ್ದಾರೆ. ಇಂದು ಸಂಜೆ ವಿಮಾನ ನಿಲ್ದಾಣದಲ್ಲಿ ನ್ಯೂಜಿಲೆಂಡ್ ಪ್ರಧಾನಿ ಕ್ರಿಸ್ಟೋಫರ್ ಲಕ್ಸನ್ ಅವರು ಖುದ್ದಾಗಿ ಬಂದು ಪ್ರಧಾನಿ ಮೋದಿಯವರನ್ನು ಆತ್ಮೀಯವಾಗಿ ಬೀಳ್ಕೊಟ್ಟರು.

ವಿಯೆಟ್ನಾಂನಲ್ಲಿ ಬೋಟ್ ಮುಳುಗಿ ಆಂಧ್ರ, ತಮಿಳುನಾಡಿನ 15 ಪ್ರವಾಸಿಗರು ಸಾವು; ಪ್ರಧಾನಿ ಮೋದಿ ಸಂತಾಪ

ವಿಯೆಟ್ನಾಂನ ಫೂ ಕ್ವೋಕ್ ದ್ವೀಪದ ಸಮೀಪವಿರುವ ಹಾನ್ ಮೇ ರುತ್ ನ್ಗೋಯ್ ಎಂಬಲ್ಲಿ ಇಂದು 32 ಭಾರತೀಯ ಪ್ರವಾಸಿಗರಿದ್ದ ಬೋಟ್ ಮುಳುಗಿದೆ. ಇದರಲ್ಲಿ 15 ಜನರು ಸಾವನ್ನಪ್ಪಿದ್ದಾರೆ ಎಂದು ವಿಯೆಟ್ನಾಂ ಮಾಧ್ಯಮಗಳು ವರದಿ ಮಾಡಿವೆ. ಈ ಘಟನೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ಸೂಚಿಸಿದ್ದಾರೆ. ವಿಯೆಟ್ನಾಂನಲ್ಲಿ ಭಾರತೀಯ ನಾಗರಿಕರು ಒಳಗೊಂಡಿರುವ ಬೋಟ್ ಅಪಘಾತದ ದುರಂತ ಸುದ್ದಿ ಕೇಳಿ ಅತ್ಯಂತ ಆಘಾತವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಪ್ರಾಮಾಣಿಕ ಸಾಂತ್ವನಗಳು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ನ್ಯೂಜಿಲೆಂಡ್​ನಲ್ಲಿ ತಮ್ಮ ಮಫ್ಲರ್ ಕತೆ ಹೇಳುತ್ತಾ ಭಾವುಕರಾದ ಪ್ರಧಾನಿ ಮೋದಿ

ಆ ದಿನ ಸಾಮಾನ್ಯ ಪ್ರಜೆಯಾಗಿ ನ್ಯೂಜಿಲೆಂಡ್​ಗೆ ಬಂದಿದ್ದ ನಾನು ಈ ಬಾರಿ ಪ್ರಧಾನಿಯಾಗಿ ಆಗಮಿಸಿದ್ದೇನೆ. ಅಂದು ನ್ಯೂಜಿಲೆಂಡ್​ನ ಪ್ರಜೆ ನನಗೆ ನೀಡಿದ್ದ ಮಫ್ಲರ್, ಟೋಪಿಯನ್ನು ಇಂದಿಗೂ ನಾನು ಇಟ್ಟುಕೊಂಡಿದ್ದೇನೆ ಎಂದು ಮೋದಿ ಹಳೆಯ ದಿನಗಳನ್ನು ಮೆಲುಕು ಹಾಕಿದ್ದಾರೆ. ನ್ಯೂಜಿಲೆಂಡ್‌ಗೆ 2 ದಿನಗಳ ಅಧಿಕೃತ ಪ್ರವಾಸ ಕೈಗೊಂಡಿರುವ ಪ್ರಧಾನಿ ಮೋದಿ, ಆಕ್ಲೆಂಡ್‌ನಲ್ಲಿ ನಡೆದ ಅದ್ಧೂರಿ ಸಮುದಾಯ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು. ಪ್ರಧಾನಿಯಾಗಿ ಇದು ತಮ್ಮ ಮೊದಲ ಭೇಟಿಯಾಗಿದ್ದರೂ, ಈ ಪ್ರವಾಸವು 25ರಿಂದ 30 ವರ್ಷಗಳ ಹಿಂದಿನ ನೆನಪುಗಳನ್ನು ಮರುಕಳಿಸುವಂತೆ ಮಾಡಿದೆ ಎಂದರು.

ಭಾರತ-ನ್ಯೂಜಿಲೆಂಡ್ ಹೊಸ ಪಯಣಕ್ಕೆ ಸಿದ್ಧವಾಗಿದೆ; ಆಕ್ಲೆಂಡ್‌ನಲ್ಲಿ ಅನಿವಾಸಿ ಭಾರತೀಯರನ್ನುದ್ದೇಶಿಸಿ ಪ್ರಧಾನಿ ಮೋದಿ ಐತಿಹಾಸಿಕ ಭಾಷಣ

ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ನ್ಯೂಜಿಲೆಂಡ್‌ನ ಆಕ್ಲೆಂಡ್‌ನಲ್ಲಿ ಕಿಕ್ಕಿರಿದು ತುಂಬಿದ್ದ ಬೃಹತ್ ಭಾರತೀಯ ಸಮುದಾಯದ ಸಮಾವೇಶವನ್ನುದ್ದೇಶಿಸಿ ಮಾತನಾಡಿದರು. ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಬಾಂಧವ್ಯವು ಕೇವಲ ರಾಜತಾಂತ್ರಿಕತೆಯಲ್ಲ. ಅದು ಸುದೀರ್ಘ ಸ್ನೇಹ, ಹಂಚಿಕೆಯ ಮೌಲ್ಯಗಳು ಮತ್ತು ಬಲಿಷ್ಠ ಭವಿಷ್ಯದ ಬದ್ಧತೆಯ ಮೇಲೆ ನಿರ್ಮಾಣವಾಗಿದೆ ಎಂದು ಅವರು ಹೇಳಿದರು. ಪ್ರಧಾನಿ ಮೋದಿ ವೇದಿಕೆಗೆ ಬಂದ ಕೂಡಲೇ ಎಲ್ಲರಿಗೂ ನಮಸ್ತೆ ಎಂದು ನಮಸ್ಕರಿಸಿದರು. ನಂತರ ಅವರು "ಕಿಯಾ ಓರಾ" ಎಂಬ ಪದಗಳನ್ನು ಉಚ್ಚರಿಸಿದರು. ಆಗ ಇಡೀ ಸಭಾಂಗಣವೇ ಜೋರಾದ ಚಪ್ಪಾಳೆ ತಟ್ಟುವ ಮೂಲಕ ಸಂತಸ ವ್ಯಕ್ತಪಡಿಸಿತು. 40 ವರ್ಷಗಳ ನಂತರ, ಭಾರತೀಯ ಪ್ರಧಾನಿಯೊಬ್ಬರು ನ್ಯೂಜಿಲೆಂಡ್‌ಗೆ ಭೇಟಿ ನೀಡಿದ್ದಾರೆ. ಇದು ಒಂದು ಐತಿಹಾಸಿಕ ಸಂದರ್ಭವಾಗಿದೆ ಎಂದು ಮೋದಿ ಹೇಳಿದರು.

40 ವರ್ಷದ ಬಳಿಕ ನ್ಯೂಜಿಲೆಂಡ್‌ಗೆ ಭಾರತದ ಪ್ರಧಾನಿ ಭೇಟಿ; ವಿಮಾನ ನಿಲ್ದಾಣದಲ್ಲೇ ಮೋದಿಯನ್ನು ಸ್ವಾಗತಿಸಿದ ನ್ಯೂಜಿಲೆಂಡ್ ಪಿಎಂ

ಭಾರತದ ಪ್ರಧಾನಿ ನರೇಂದ್ರ ಮೋದಿ ತಮ್ಮ 3 ದೇಶಗಳ ಜಾಗತಿಕ ಪ್ರವಾಸದ ಕೊನೆಯ ಹಂತವಾಗಿ ಇಂದು ನ್ಯೂಜಿಲೆಂಡ್‌ನ ಆಕ್ಲೆಂಡ್‌ಗೆ ಆಗಮಿಸಿದ್ದಾರೆ. ಕಳೆದ 40 ವರ್ಷಗಳಲ್ಲಿ ಭಾರತದ ಪ್ರಧಾನಿಯೊಬ್ಬರು ನ್ಯೂಜಿಲೆಂಡ್‌ಗೆ ನೀಡುತ್ತಿರುವ ಮೊದಲ ಅಧಿಕೃತ ಐತಿಹಾಸಿಕ ಭೇಟಿ ಇದಾಗಿದೆ. ವಿಮಾನ ನಿಲ್ದಾಣಕ್ಕೆ ಖುದ್ದಾಗಿ ಆಗಮಿಸಿದ ನ್ಯೂಜಿಲೆಂಡ್ ಪ್ರಧಾನಿ ಕ್ರಿಸ್ಟೋಫರ್ ಲಕ್ಸನ್ ಅವರು ಪ್ರಧಾನಿ ಮೋದಿಯವರನ್ನು ಅತ್ಯಂತ ಆತ್ಮೀಯವಾಗಿ ಬರಮಾಡಿಕೊಂಡಿದ್ದಾರೆ. ನಾಳೆ ನ್ಯೂಜಿಲೆಂಡ್‌ನ ಪ್ರಮುಖ ಉದ್ಯಮಿಗಳು ಹಾಗೂ ಕ್ರೀಡಾ ತಾರೆಯರೊಂದಿಗೆ ಪ್ರಧಾನಿ ಮೋದಿ ಸಂವಾದ ನಡೆಸಲಿದ್ದಾರೆ. ತಮ್ಮ 2 ದಿನಗಳ ಭೇಟಿಯಲ್ಲಿ ಪ್ರಧಾನಿ ಮೋದಿ ಅವರು ನ್ಯೂಜಿಲೆಂಡ್‌ನಲ್ಲಿ ನೆಲೆಸಿರುವ ಭಾರಿ ಸಂಖ್ಯೆಯ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಉಗ್ರರ ನೆಲೆ ಮೇಲಿನ ದಾಳಿ ಜಗತ್ತಿನಾದ್ಯಂತ ಪ್ರತಿಧ್ವನಿಸಿತು; ಆಸ್ಟ್ರೇಲಿಯಾದಲ್ಲಿ ಮೋದಿಯಿಂದ ಆಪರೇಷನ್ ಸಿಂಧೂರದ ಗುಣಗಾನ

ಪ್ರಧಾನಿ ನರೇಂದ್ರ ಮೋದಿ ಇಂದು ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ ಅನಿವಾಸಿ ಭಾರತೀಯರ ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆ. ಅದ್ದೂರಿಯಾಗಿ ಆಯೋಜಿಸಲಾಗಿದ್ದ ಈ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಭಾರತದ ಭದ್ರತಾ ಪಡೆಗಳು ಕಳೆದ ವರ್ಷ ನಡೆಸಿದ 'ಆಪರೇಷನ್ ಸಿಂಧೂರ್' ಮಿಲಿಟರಿ ಕಾರ್ಯಾಚರಣೆಯನ್ನು ಶ್ಲಾಘಿಸಿದ್ದಾರೆ. ಆಸ್ಟ್ರೇಲಿಯಾದ ಅನಿವಾಸಿ ಭಾರತೀಯರ ಜೊತೆ ಇನ್ನೂ ಹಲವು ಸಂಗತಿಗಳ ಬಗ್ಗೆ ಮೋದಿ ಮಾತನಾಡಿದ್ದಾರೆ. ಆ ಕುರಿತು ಮಾಹಿತಿ ಇಲ್ಲಿದೆ.

ಆಸ್ಟ್ರೇಲಿಯಾದಲ್ಲಿ ಭಾರತೀಯರಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ; ವಂದೇ ಮಾತರಂ ಜೈಕಾರ

ನರೇಂದ್ರ ಮೋದಿ ಇಂದು ತಮ್ಮ 3 ದಿನಗಳ ಅಧಿಕೃತ ಭೇಟಿಗಾಗಿ ಆಸ್ಟ್ರೇಲಿಯಾಗೆ ಆಗಮಿಸಿದ್ದಾರೆ. ಈ ವೇಳೆ ಆಸ್ಟ್ರೆಲಿಯಾದ ಅನಿವಾಸಿ ಭಾರತೀಯರು ಅವರಿಗೆ ಅತ್ಯಂತ ಅದ್ಧೂರಿ ಸ್ವಾಗತ ಕೋರಿದ್ದಾರೆ. ಪ್ರಧಾನಿ ಮೋದಿ ಅವರು ಮೆಲ್ಬೋರ್ನ್ ತಲುಪುತ್ತಿದ್ದಂತೆ, ಭಾರತೀಯ ಸಮುದಾಯದ ನೂರಾರು ಸದಸ್ಯರು ಸಾಂಸ್ಕೃತಿಕ ಪ್ರದರ್ಶನಗಳ ಮೂಲಕ ಅವರನ್ನು ಬರಮಾಡಿಕೊಂಡರು. ಇದೇ ವೇಳೆ 'ಆಸ್ಟ್ರೇಲಿಯನ್ ಇಂಡಿಯನ್ ಆರ್ಕೆಸ್ಟ್ರಾ' ತಂಡವು ಪ್ರಸ್ತುತಪಡಿಸಿದ "ವಂದೇ ಮಾತರಂ" ಗೀತೆಯ ಗಾಯನ ಎಲ್ಲರ ಗಮನ ಸೆಳೆಯಿತು. ಅಲ್ಲಿ ನೆರೆದಿದ್ದ ಜಗತ್ತಿನಾದ್ಯಂತದ ಭಾರತೀಯರು "ಭಾರತ್ ಮಾತಾ ಕೀ ಜೈ" ಮತ್ತು "ಮೋದಿ, ಮೋದಿ" ಎಂಬ ಘೋಷಣೆಗಳನ್ನು ಕೂಗುತ್ತಾ ತಾಯ್ನಾಡಿನ ನಾಯಕನನ್ನು ಬರಮಾಡಿಕೊಂಡರು.

ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ

ಇಂಡೋನೇಷ್ಯಾದ ಯಶಸ್ವಿ ಪ್ರವಾಸದ ನಂತರ ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ 3 ರಾಷ್ಟ್ರಗಳ ಪ್ರವಾಸದ ಎರಡನೇ ಹಂತವಾಗಿ ಇಂದು ಸಂಜೆ ಆಸ್ಟ್ರೇಲಿಯಾದ ಮೆಲ್ಬೋರ್ನ್ ತಲುಪಿದ್ದಾರೆ. ಪ್ರಧಾನಿ ಮೋದಿ ಅವರ ಆಗಮನದಿಂದ ಮೆಲ್ಬೋರ್ನ್‌ನಲ್ಲಿರುವ ಭಾರತೀಯ ಸಮುದಾಯದಲ್ಲಿ ಭಾರಿ ಉತ್ಸಾಹ ಮೂಡಿದೆ. ಪ್ರಧಾನಿಯವರಿಗಾಗಿ ಆಯೋಜಿಸಲಾಗಿರುವ ವಿಶೇಷ ಸಮುದಾಯ ಸತ್ಕಾರ ಸಮಾರಂಭದಲ್ಲಿ ಅವರನ್ನು ಅತ್ಯಂತ ಅದ್ಧೂರಿಯಾಗಿ ಸ್ವಾಗತಿಸಲು ಭಾರತೀಯ ಮೂಲದ ನಾಗರಿಕರು ಸಜ್ಜಾಗಿದ್ದಾರೆ. 

ಇಂಡೋನೇಷ್ಯಾದ 1,000 ವರ್ಷ ಹಳೆಯ ಶಿವನ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಪ್ರಧಾನಿ ಮೋದಿ ಬೆಂಬಲ

ಭಾರತ ಮತ್ತು ಇಂಡೋನೇಷ್ಯಾದ ನಡುವಿನ ಸಂಬಂಧವು ಕೇವಲ ಇತ್ತೀಚಿನ ರಾಜತಾಂತ್ರಿಕ ಸಂಬಂಧವಲ್ಲ. ಅದು ಸಾವಿರಾರು ವರ್ಷಗಳ ಇತಿಹಾಸವನ್ನು ಹೊಂದಿದೆ. ಪ್ರಂಬನನ್ ಶಿವ ದೇವಾಲಯವು 9ನೇ ಶತಮಾನದಲ್ಲಿ (ಸುಮಾರು 1,000 ವರ್ಷಗಳ ಹಿಂದೆ) ನಿರ್ಮಾಣಗೊಂಡ ಆಗ್ನೇಯ ಏಷ್ಯಾದ ಅತಿ ದೊಡ್ಡ ಹಿಂದೂ ದೇವಾಲಯ ಸಂಕೀರ್ಣಗಳಲ್ಲಿ ಒಂದಾಗಿದೆ. ಈ ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸುವುದು ಉಭಯ ದೇಶಗಳ ಹಂಚಿಕೆಯ ಇತಿಹಾಸವನ್ನು ಗೌರವಿಸಿದಂತೆ ಎಂದು ಪ್ರಧಾನಿ ಮೋದಿ ಒತ್ತಿಹೇಳಿದ್ದಾರೆ.

ರಾಮಾಯಣ, ಮಹಾಭಾರತ ಇಂಡೋನೇಷ್ಯಾ- ಭಾರತದ ಬಾಂಧವ್ಯದ ಸ್ತಂಭಗಳು; ಪ್ರಧಾನಿ ಮೋದಿ

"ಭಾರತ ಮತ್ತು ಇಂಡೋನೇಷ್ಯಾ ಕೇವಲ ಸಮುದ್ರವನ್ನು ಮಾತ್ರ ಹಂಚಿಕೊಂಡಿಲ್ಲ; ನಾವು ಜಂಟಿ ಇತಿಹಾಸವನ್ನೂ ಹಂಚಿಕೊಂಡಿದ್ದೇವೆ. ನಮ್ಮ ಬಾಂಧವ್ಯವು ರಾಮಾಯಣ, ಮಹಾಭಾರತದ ಪರಂಪರೆಯಲ್ಲಿ ಮತ್ತು ನಳಂದಾದ ಪ್ರಾಚೀನ ಜ್ಞಾನದಲ್ಲಿ ಬೇರೂರಿದೆ. ನಾವು ವಯಾಂಗ್ (ತೊಗಲು ಬೊಂಬೆಯಾಟ), ನೃತ್ಯ ಮತ್ತು ಸಂಗೀತದ ಮೂಲಕ ಹಾಗೂ ಬೊರೊಬುದುರ್ ಮತ್ತು ಪ್ರಂಬನನ್‌ನಂತಹ ಭವ್ಯವಾದ ಸ್ಮಾರಕಗಳ ಮೂಲಕ ಪರಸ್ಪರ ಸಂಪರ್ಕ ಹೊಂದಿದ್ದೇವೆ. ಇಂಡೋನೇಷ್ಯಾದ ರಾಷ್ಟ್ರೀಯ ಲಾಂಛನವಾದ 'ಗರುಡ' ಮತ್ತು ಒಡಿಶಾದ 'ಬಾಲಿ ಯಾತ್ರೆ'ಯ ಹಬ್ಬದ ಉತ್ಸಾಹದ ಮೂಲಕ ನಾವು ಒಂದಾಗಿದ್ದೇವೆ" ಎಂದು ಮೋದಿ ಹೇಳಿದರು.

ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು