Prime Minister Of India
ಭಾರತ ಪ್ರಜಾತಂತ್ರ ವ್ಯವಸ್ಥೆಯ ನಾಯಕನೆಂದರೆ ಪ್ರಧಾನಿ. ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಒಂದಕ್ಕೆ ನಾಯಕರಾಗಿರುವ ಪ್ರಧಾನಿಗೆ ಐದು ವರ್ಷ ಶಾಸನಬದ್ಧ ಅಧಿಕಾರವಿರುತ್ತದೆ. ಲೋಕಸಭೆಯಲ್ಲಿ ಬಹುಮತ ಹೊಂದಿರುವ ಪಕ್ಷ ಅಥವಾ ಒಕ್ಕೂಟದ ಸದಸ್ಯರ ನಾಯಕನೇ ಪ್ರಧಾನಿ ಆಗಲಿದ್ದು, ಭಾರತವು ಸಧ್ಯಕ್ಕೆ 14ನೇ ಪ್ರಧಾನಿಯನ್ನು ಹೊಂದಿದೆ.
ಭಾರತದಲ್ಲಿ ಒಬ್ಬ ವ್ಯಕ್ತಿ ಎಷ್ಟು ವರ್ಷ ಅಥವಾ ಎಷ್ಟು ಅವಧಿಗೆ ಪ್ರಧಾನಿ ಆಗಬಹುದು ಎನ್ನುವ ಯಾವುದೇ ಮಿತಿಯಿಲ್ಲ. ಐದು ವರ್ಷಕ್ಕೊಮ್ಮೆ ನಡೆಯುವ ಚುನಾವಣೆಯಲ್ಲಿ ಪ್ರಧಾನಿ ಆಗುವ ಪಕ್ಷ ಅಥವಾ ಒಕ್ಕೂಟ ಗೆಲುವು ಸಾಧಿಸಿದರೆ ಸಾಕಾಗುತ್ತದೆ. ಜವಾಹರ್ಲಾಲ್ ನೆಹರು ಅವರು ಭಾರತದ ಮೊದಲ ಪ್ರಧಾನಿ ಆಗಿದ್ದರು. ಬಳಿಕ ಲಾಲ್ಬಹದ್ದೂರ್ ಶಾಸ್ತ್ರೀ, ಇಂದಿರಾ ಗಾಂಧಿ ಪ್ರಧಾನಿ ಆಗಿದ್ದರು.
ಮೊರಾರ್ಜಿ ದೇಸಾಯಿ ಅವರು ದೇಶದ ಮೊದಲ ಕಾಂಗ್ರೆಸ್ಸೇತರ ಪ್ರಧಾನಿಯಾದರೇ, ಇಂದಿರಾ ಅವರು ಮೊದಲ ಮಹಿಳಾ ಪ್ರಧಾನಿ ಎನಿಸಿಕೊಂಡರು. ಬಳಿಕ ರಾಜೀವ್ ಗಾಂಧಿ, ವಿ.ಪಿ ಸಿಂಗ್, ಚಂದ್ರಶೇಖರ್, ಪಿ.ವಿ ನರಸಿಂಹರಾವ್, ಅಟಲ್ ಬಿಹಾರಿ ವಾಜಪೇಯಿ, ಎಚ್.ಡಿ ದೇವೇಗೌಡ, ಐ.ಕೆ ಗುಜ್ರಾಲ್, ಮನಮೋಹನ್ ಸಿಂಗ್ ಈ ಹುದ್ದೆಯನ್ನು ಏರಿದರು.
2014ರಿಂದ ನರೇಂದ್ರ ಮೋದಿಯು ಪ್ರಧಾನಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಭಾರತದ ಸಂವಿಧಾನಬದ್ಧ ಪ್ರಜಾತಂತ್ರ ವ್ಯವಸ್ಥೆಯಲ್ಲಿ ರಾಷ್ಟ್ರಪತಿಯು ಮೊದಲ ಪ್ರಜೆಯಾಗಿದ್ದರೂ, ಆಡಳಿತಾತ್ಮಕವಾಗಿ ಪ್ರಧಾನಿಯೇ ದೇಶದ ಅತ್ಯಂತ ಪ್ರಭಾವಿ ವ್ಯಕ್ತಿ.
ಸಂಪುಟ ಪುನಾರಚನೆ ವದಂತಿ; ರಾಷ್ಟ್ರಪತಿಯನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
ಕೇಂದ್ರ ಸಚಿವ ಜಾರ್ಜ್ ಕುರಿಯನ್ ಅವರ ರಾಜ್ಯಸಭಾ ಅವಧಿ ಮುಗಿದು ಅವರು ರಾಜೀನಾಮೆ ನೀಡಿದ ಮರುದಿನವೇ ಪ್ರಧಾನಿ ನರೇಂದ್ರ ಮೋದಿ ಇಂದು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿದ್ದಾರೆ. ಇದು ದೆಹಲಿ ರಾಜಕೀಯ ವಲಯದಲ್ಲಿ ಶೀಘ್ರದಲ್ಲೇ ಕೇಂದ್ರ ಸಚಿವ ಸಂಪುಟ ಪುನಾರಚನೆ ಆಗಲಿದೆ ಎಂಬ ವದಂತಿಗಳಿಗೆ ಪುಷ್ಟಿ ನೀಡಿದೆ. ಕೇಂದ್ರ ಅಲ್ಪಸಂಖ್ಯಾತರ ವ್ಯವಹಾರಗಳು ಹಾಗೂ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಇಲಾಖೆಯ ರಾಜ್ಯ ಸಚಿವರಾಗಿದ್ದ ಜಾರ್ಜ್ ಕುರಿಯನ್ ಅವರಿಗೆ ಜೂನ್ 18ರಂದು ನಡೆದ ರಾಜ್ಯಸಭಾ ಚುನಾವಣೆಗೆ ಬಿಜೆಪಿ ಮತ್ತೆ ಟಿಕೆಟ್ ನೀಡಿರಲಿಲ್ಲ. ಅವರ ರಾಜ್ಯಸಭಾ ಅವಧಿಯು ಜೂನ್ 21ಕ್ಕೆ ಕೊನೆಗೊಂಡಿತ್ತು.
- Sushma Chakre
- Updated on: Jun 23, 2026
- 9:44 pm
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋ ಕೋಚಿಂಗ್ ಸೆಂಟರ್ನಲ್ಲಿ ಉಂಟಾದ ಬೆಂಕಿಯ ಜ್ವಾಲೆಗೆ 14 ವಿದ್ಯಾರ್ಥಿಗಳು ಸಜೀವ ದಹನವಾಗಿದ್ದಾರೆ. ಈ ದುರಂತಕ್ಕೆ ಪ್ರಧಾನಿ ಮೋದಿ, ಸಿಎಂ ಯೋಗಿ ಆದಿತ್ಯನಾಥ್ ತೀವ್ರ ಸಂತಾಪ ಸೂಚಿಸಿದ್ದಾರೆ. "ಉತ್ತರ ಪ್ರದೇಶದ ಲಕ್ನೋದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಜೀವಹಾನಿಯಾಗಿರುವುದು ತೀವ್ರ ಆಘಾತ ತಂದಿದೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ. ರಕ್ಷಣಾ ಕಾರ್ಯಾಚರಣೆಗಳು ಪ್ರಗತಿಯಲ್ಲಿದ್ದು, ಅಧಿಕಾರಿಗಳು ಸಾಧ್ಯವಿರುವ ಎಲ್ಲಾ ನೆರವು ನೀಡುತ್ತಿದ್ದಾರೆ" ಎಂದು ಪ್ರಧಾನಿ ಮೋದಿ ಪೋಸ್ಟ್ ಮಾಡಿದ್ದಾರೆ.
- Sushma Chakre
- Updated on: Jun 22, 2026
- 6:02 pm
ಮೋದಿಯನ್ನು ಬೆಂಬಲಿಸುವ ಮೂಲಕ ರಾಹುಲ್ ಗಾಂಧಿಗೆ ಶಶಿ ತರೂರ್ ಜನ್ಮದಿನದ ಗಿಫ್ಟ್ ನೀಡಿದ್ದಾರೆ; ಬಿಜೆಪಿ ಲೇವಡಿ
ಫ್ರಾನ್ಸ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜೊತೆ ನಡೆಸಿದ ಮಾತುಕತೆಗೆ ಕಾಂಗ್ರೆಸ್ ಸಂಸದ ಶಶಿ ತರೂರ್ ಬೆಂಬಲ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ರಾಹುಲ್ ಗಾಂಧಿಗೆ ಲೇವಡಿ ಮಾಡಿದ್ದಾರೆ. ಶಶಿ ತರೂರ್ ಅವರ ಈ ಹೇಳಿಕೆಗಳು ಪ್ರಧಾನಿ ಮೋದಿಯವರ ನಾಯಕತ್ವಕ್ಕೆ ಸಿಗುತ್ತಿರುವ ಬೆಳೆಯುತ್ತಿರುವ ಮನ್ನಣೆಯನ್ನು ಪ್ರತಿಬಿಂಬಿಸುತ್ತವೆ ಎಂದು ಪ್ರತಿಪಾದಿಸಿದ್ದಾರೆ.
- Sushma Chakre
- Updated on: Jun 20, 2026
- 5:22 pm
ಟ್ರಂಪ್ ಭೇಟಿ ವಿಚಾರ; ಪ್ರಧಾನಿ ಮೋದಿ ಪರ ಬ್ಯಾಟ್ ಬೀಸಿದ ಕಾಂಗ್ರೆಸ್ ನಾಯಕ ಶಶಿ ತರೂರ್
ಫ್ರಾನ್ಸ್ನಲ್ಲಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಯ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಿರಿಯ ನಾಯಕ ಮತ್ತು ಸಂಸದ ಶಶಿ ತರೂರ್ ಅವರು ಪ್ರಧಾನಿ ನರೇಂದ್ರ ಮೋದಿಯವರ ನಿಲುವನ್ನು ಬೆಂಬಲಿಸಿದ್ದಾರೆ. ಪ್ರಾದೇಶಿಕವಾಗಿ ಪ್ರಸ್ತುತ ನಡೆಯುತ್ತಿರುವ ಕದನ ವಿರಾಮದ ಪ್ರಯತ್ನಗಳು ದೀರ್ಘಕಾಲದ ಶಾಂತಿಗೆ ನಾಂದಿಯಾಗಲಿ ಎಂದು ಆಶಿಸುತ್ತಾ, "ಮೋದಿ ಅವರು ಹೇಳಿರುವುದು ಸರಿಯಾಗಿದೆ. ನಾವಿಕರನ್ನು ಯುದ್ಧದ ದಾಳಿಗಳಿಂದ ಮುಕ್ತಗೊಳಿಸಬೇಕು" ಎಂದು ಶಶಿ ತರೂರ್ ಹೇಳಿದ್ದಾರೆ.
- Sushma Chakre
- Updated on: Jun 20, 2026
- 3:24 pm
ಪ್ರಿಯ ಮಿತ್ರ ನರೇಂದ್ರ, ಜೈ ಹಿಂದ್; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್
ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರಾನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಿಂದಿ ಭಾಷೆಯಲ್ಲಿ ವಿದಾಯ ಸಂದೇಶ ನೀಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಜಿ7 ಶೃಂಗಸಭೆಯ ಪ್ರವಾಸದ ಕೊನೆಯಲ್ಲಿ ಈ ಅಪರೂಪದ ಘಟನೆ ನಡೆದಿದ್ದು, ಪ್ರಧಾನಿ ಮೋದಿ ಈ ಪ್ರವಾಸದಲ್ಲಿ ಜಾಗತಿಕ ನಾಯಕರೊಂದಿಗೆ ಸರಣಿ ಉನ್ನತ ಮಟ್ಟದ ಸಭೆಗಳನ್ನು ನಡೆಸಿ ಭಾರತದ ರಾಜತಾಂತ್ರಿಕ ಸಂಬಂಧವನ್ನು ಮತ್ತಷ್ಟು ಬಲಪಡಿಸಿದ್ದಾರೆ.
- Sushma Chakre
- Updated on: Jun 18, 2026
- 11:24 pm
ಜಗತ್ತಿನಲ್ಲೇ ಅತಿ ವೇಗದಲ್ಲಿ ಬೆಳೆಯುತ್ತಿರುವ ಆರ್ಥಿಕತೆ ನಮ್ಮದು; ಪ್ಯಾರಿಸ್ನ ಭಾರತೀಯರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ
ಫ್ರಾನ್ಸ್ನ ಎವಿಯಾನ್ನಲ್ಲಿ ನಡೆದ ಜಿ7 ಶೃಂಗಸಭೆ ಮತ್ತು ನೈಸ್ ನಗರದ ದ್ವಿಪಕ್ಷೀಯ ಮಾತುಕತೆಗಳನ್ನು ಯಶಸ್ವಿಯಾಗಿ ಮುಗಿಸಿದ ಪ್ರಧಾನಿ ನರೇಂದ್ರ ಮೋದಿ ಪ್ಯಾರಿಸ್ ತಲುಪಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಫ್ರಾನ್ಸ್ ಪ್ರವಾಸದ ಕೊನೆಯ ಭಾಗವಾಗಿ ಪ್ಯಾರಿಸ್ನಲ್ಲಿ ಇಂದು ರಾತ್ರಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಪ್ಯಾರಿಸ್ನಲ್ಲಿನ ಭಾರತೀಯ ಸಮುದಾಯ ಪ್ರಧಾನಿ ಮೋದಿಗಾಗಿ "ಬೊಂಜೊರ್ ಮೋದಿ" ಎಂಬ ಕಾರ್ಯಕ್ರಮವನ್ನು ಆಯೋಜಿಸಿತ್ತು. ಈ ಭವ್ಯ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮೋದಿ ಸಹಸ್ರಾರು ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಮಾತನಾಡಿದರು.
- Sushma Chakre
- Updated on: Jun 18, 2026
- 11:06 pm
ಮೋದಿ ರಾಜತಾಂತ್ರಿಕತೆ ಯಶಸ್ವಿ; ಬ್ರಿಟನ್, ಕೆನಡಾ ಮತ್ತು ಐರೋಪ್ಯ ಒಕ್ಕೂಟದಿಂದ ಭಾರತಕ್ಕೆ ಭಾರಿ ಆರ್ಥಿಕ ಲಾಭ!
ಫ್ರಾನ್ಸ್ನಲ್ಲಿ ನಡೆದ ಜಿ7 ಶೃಂಗಸಭೆಯ ವೇದಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನಡೆಸಿದ ಸರಣಿ ದ್ವಿಪಕ್ಷೀಯ ಮಾತುಕತೆಗಳು ಭಾರತದ ಆರ್ಥಿಕತೆಗೆ ಉತ್ತೇಜನ ನೀಡುವ ಮುನ್ಸೂಚನೆ ನೀಡಿವೆ. ಫ್ರಾನ್ಸ್ನಲ್ಲಿ ಮುಕ್ತಾಯಗೊಂಡ ಜಿ7 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ವಿದೇಶಾಂಗ ನೀತಿಯು ದೇಶಕ್ಕೆ ಭಾರಿ ಆರ್ಥಿಕ ಯಶಸ್ಸನ್ನು ತಂದುಕೊಟ್ಟಿದೆ. ಬ್ರಿಟನ್, ಕೆನಡಾ ಮತ್ತು ಐರೋಪ್ಯ ಒಕ್ಕೂಟದ ಜಾಗತಿಕ ನಾಯಕರೊಂದಿಗೆ ಪ್ರಧಾನಿ ಮೋದಿ ನಡೆಸಿದ ಮಾತುಕತೆಗಳು ಕೇವಲ ಚರ್ಚೆಗೆ ಸೀಮಿತವಾಗದೆ, ಕೋಟ್ಯಂತರ ರೂ. ವ್ಯಾಪಾರ ಒಪ್ಪಂದಗಳ ಮುಖಾಂತರ ಭಾರತಕ್ಕೆ ಭಾರೀ ಆರ್ಥಿಕ ಲಾಭ ತಂದುಕೊಡುತ್ತಿದೆ.
- Sushma Chakre
- Updated on: Jun 17, 2026
- 11:24 pm
ಮೋದಿ ಬಹಳ ಸುಂದರ ವ್ಯಕ್ತಿ, ಕೆಲಸದ ವಿಷಯದಲ್ಲಿ ಮಾತ್ರ ಕಿಲ್ಲರ್; ಗೆಳೆಯನನ್ನು ಹೊಗಳಿದ ಟ್ರಂಪ್
ಫ್ರಾನ್ಸ್ನ ಎವಿಯಾನ್ನಲ್ಲಿ ನಡೆದ ಜಿ7 (G7) ಶೃಂಗಸಭೆಯ ದ್ವಿಪಕ್ಷೀಯ ಮಾತುಕತೆಯ ವೇಳೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು "ಏಂಜಲ್" ಹಾಗೂ "ಕಿಲ್ಲರ್" ಎಂದು ವಿಶಿಷ್ಟವಾಗಿ ಬಣ್ಣಿಸಿದ್ದಾರೆ. ಜಿ7 ಶೃಂಗಸಭೆಯ ಅಂತಿಮ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾಧ್ಯಮಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಮೋದಿಯವರ ವ್ಯಕ್ತಿತ್ವವನ್ನು ಮುಕ್ತವಾಗಿ ಶ್ಲಾಘಿಸಿದ್ದಾರೆ.
- Sushma Chakre
- Updated on: Jun 17, 2026
- 9:29 pm
ಭಾರತದ ಮೇಲೆ ದಾಳಿಯಾದರೆ ಅಮೆರಿಕ ರಕ್ಷಣೆಗೆ ಧಾವಿಸುತ್ತದೆ; ಮೋದಿಗೆ ಟ್ರಂಪ್ ಭರವಸೆ
ಫ್ರಾನ್ಸ್ನ ಎವಿಯಾನ್ನಲ್ಲಿ ನಡೆಯುತ್ತಿರುವ ಜಿ7 (G7) ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡುವೆ ಮಹತ್ವದ ದ್ವಿಪಕ್ಷೀಯ ಮಾತುಕತೆ ನಡೆದಿದೆ. ಕಳೆದ ಒಂದೂವರೆ ವರ್ಷದಿಂದ ಹಳಸಿದ್ದ ಭಾರತ-ಅಮೆರಿಕ ಸಂಬಂಧವನ್ನು ಮರಳಿ ಹಳಿಗೆ ತರುವ ನಿಟ್ಟಿನಲ್ಲಿ ಪ್ರಧಾನಿ ಮೋದಿ ಮತ್ತು ಅಧ್ಯಕ್ಷ ಟ್ರಂಪ್ ಇಂದು ಮಹತ್ವದ ಮಾತುಕತೆ ನಡೆಸಿದ್ದಾರೆ. "ಭಾರತದ ಮೇಲೆ ಯಾರಾದರೂ ದಾಳಿ ಮಾಡಿದರೆ ಅಮೆರಿಕ ಸಹಾಯಕ್ಕೆ ಬರಲಿದೆ" ಎಂದು ಟ್ರಂಪ್ ಭರವಸೆ ನೀಡಿದ್ದಾರೆ.
- Sushma Chakre
- Updated on: Jun 17, 2026
- 8:46 pm
ಸಿಗರೇಟ್ ಬಿಟ್ಟ ಮೆಲೋನಿ, ವಾಚ್ ಮರೆತ ಮ್ಯಾಕ್ರನ್, ಮತ್ತೆ ಮೆಲೋಡಿ ಮೋಡಿ; ಜಿ7 ಶೃಂಗಸಭೆಯ ವೈರಲ್ ಕ್ಷಣಗಳಿವು
ಫ್ರಾನ್ಸ್ನ ಎವಿಯಾನ್-ಲೆ-ಬೈನ್ಸ್ನಲ್ಲಿ ಮುಕ್ತಾಯದ ಹಂತಕ್ಕೆ ತಲುಪಿರುವ ಜಿ7 (G7) ಶೃಂಗಸಭೆಯ ಗಂಭೀರ ರಾಜತಾಂತ್ರಿಕ ಚರ್ಚೆಗಳ ನಡುವೆ, ಜಾಗತಿಕ ನಾಯಕರ ವೈಯಕ್ತಿಕ ರಹಸ್ಯಗಳು ಹಾಗೂ ಮೋಜಿನ ಕ್ಷಣಗಳು ಮೈಕ್ರೋಫೋನ್ನಲ್ಲಿ ಆಕಸ್ಮಿಕವಾಗಿ ರೆಕಾರ್ಡ್ ಆಗಿದೆ. ಈ ವಿಡಿಯೋ ಜಾಗತಿಕವಾಗಿ ವೈರಲ್ ಆಗಿವೆ. ಜಿ7 ಶೃಂಗಸಭೆಯು ಕೇವಲ ಜಾಗತಿಕ ಬಿಕ್ಕಟ್ಟುಗಳ ಚರ್ಚೆಗೆ ಮಾತ್ರವಲ್ಲದೆ, ನಾಯಕರ ತಮಾಷೆಯ ಆಫ್-ದಿ-ರೆಕಾರ್ಡ್ ಮಾತುಗಳಿಗೂ ಸಾಕ್ಷಿಯಾಗಿದೆ.
- Sushma Chakre
- Updated on: Jun 17, 2026
- 5:53 pm
ಫ್ರಾನ್ಸ್ನ ಜಿ7 ಶೃಂಗಸಭೆಯ ಗ್ರೂಪ್ ಫೋಟೋ ವೇಳೆಯೂ ಮೌನವಾಗೇ ನಿಂತ ಟ್ರಂಪ್-ಮೋದಿ
ಫ್ರಾನ್ಸ್ನ ಸುಂದರ ಸರೋವರದ ತೀರದ ಪ್ರವಾಸಿ ತಾಣವಾದ ಎವಿಯಾನ್-ಲೆ-ಬೈನ್ಸ್ನಲ್ಲಿ ನಡೆಯುತ್ತಿರುವ 52ನೇ ಜಿ7 (G7) ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಹಲವಾರು ಜಾಗತಿಕ ನಾಯಕರೊಂದಿಗೆ ಸಾಂಪ್ರದಾಯಿಕ ಸಮೂಹ ಗ್ರೂಪ್ ಫೋಟೋದಲ್ಲಿ ಭಾಗವಹಿಸಿದರು. ಫ್ರಾನ್ಸ್ನ ಎವಿಯಾನ್ನಲ್ಲಿರುವ ಜಿ7 ಶೃಂಗಸಭೆ 2026ರ ವೇದಿಕೆಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರಾನ್ ಅವರು ಅತ್ಯಂತ ಆತ್ಮೀಯವಾಗಿ ಬರಮಾಡಿಕೊಂಡರು.
- Sushma Chakre
- Updated on: Jun 16, 2026
- 8:48 pm
ಸ್ಲೋವಾಕಿಯಾದಲ್ಲಿ 11 ಒಪ್ಪಂದಗಳಿಗೆ ಪ್ರಧಾನಿ ಮೋದಿ ಸಹಿ; 3 ಪ್ರಮುಖ ಘೋಷಣೆಗಳೇನು?
ಪ್ರಧಾನಿ ನರೇಂದ್ರ ಮೋದಿಯವರ ಸ್ಲೋವಾಕಿಯಾ ಭೇಟಿಯು ಭಾರತ-ಸ್ಲೋವಾಕಿಯಾ ಸಂಬಂಧಗಳನ್ನು ಸಮಗ್ರ ಪಾಲುದಾರಿಕೆ ಮಟ್ಟಕ್ಕೆ ಏರಿಸಿತು. ಈ ಐತಿಹಾಸಿಕ ಭೇಟಿಯು 11 ಒಪ್ಪಂದಗಳಿಗೆ ಸಹಿ ಹಾಕಲು ಮತ್ತು ಮೂರು ಮಹತ್ವದ ಘೋಷಣೆಗಳನ್ನು ಮಾಡಲು ಕಾರಣವಾಯಿತು. ರಕ್ಷಣೆ, ಡಿಜಿಟಲ್ ತಂತ್ರಜ್ಞಾನ, ಶಿಕ್ಷಣ ಮತ್ತು ಪ್ರವಾಸೋದ್ಯಮದಂತಹ ಕ್ಷೇತ್ರಗಳಲ್ಲಿ ಸಹಕಾರವು ವಿಸ್ತರಿಸಿದೆ, ಎರಡೂ ದೇಶಗಳ ನಡುವೆ ನಂಬಿಕೆ ಮತ್ತು ಹಂಚಿಕೆಯ ಆದ್ಯತೆಗಳ ಹೊಸ ಅಧ್ಯಾಯವನ್ನು ತೆರೆಯಲಾಗಿದೆ.
- Sushma Chakre
- Updated on: Jun 15, 2026
- 11:23 pm