Prime Minister Of India
ಭಾರತ ಪ್ರಜಾತಂತ್ರ ವ್ಯವಸ್ಥೆಯ ನಾಯಕನೆಂದರೆ ಪ್ರಧಾನಿ. ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಒಂದಕ್ಕೆ ನಾಯಕರಾಗಿರುವ ಪ್ರಧಾನಿಗೆ ಐದು ವರ್ಷ ಶಾಸನಬದ್ಧ ಅಧಿಕಾರವಿರುತ್ತದೆ. ಲೋಕಸಭೆಯಲ್ಲಿ ಬಹುಮತ ಹೊಂದಿರುವ ಪಕ್ಷ ಅಥವಾ ಒಕ್ಕೂಟದ ಸದಸ್ಯರ ನಾಯಕನೇ ಪ್ರಧಾನಿ ಆಗಲಿದ್ದು, ಭಾರತವು ಸಧ್ಯಕ್ಕೆ 14ನೇ ಪ್ರಧಾನಿಯನ್ನು ಹೊಂದಿದೆ.
ಭಾರತದಲ್ಲಿ ಒಬ್ಬ ವ್ಯಕ್ತಿ ಎಷ್ಟು ವರ್ಷ ಅಥವಾ ಎಷ್ಟು ಅವಧಿಗೆ ಪ್ರಧಾನಿ ಆಗಬಹುದು ಎನ್ನುವ ಯಾವುದೇ ಮಿತಿಯಿಲ್ಲ. ಐದು ವರ್ಷಕ್ಕೊಮ್ಮೆ ನಡೆಯುವ ಚುನಾವಣೆಯಲ್ಲಿ ಪ್ರಧಾನಿ ಆಗುವ ಪಕ್ಷ ಅಥವಾ ಒಕ್ಕೂಟ ಗೆಲುವು ಸಾಧಿಸಿದರೆ ಸಾಕಾಗುತ್ತದೆ. ಜವಾಹರ್ಲಾಲ್ ನೆಹರು ಅವರು ಭಾರತದ ಮೊದಲ ಪ್ರಧಾನಿ ಆಗಿದ್ದರು. ಬಳಿಕ ಲಾಲ್ಬಹದ್ದೂರ್ ಶಾಸ್ತ್ರೀ, ಇಂದಿರಾ ಗಾಂಧಿ ಪ್ರಧಾನಿ ಆಗಿದ್ದರು.
ಮೊರಾರ್ಜಿ ದೇಸಾಯಿ ಅವರು ದೇಶದ ಮೊದಲ ಕಾಂಗ್ರೆಸ್ಸೇತರ ಪ್ರಧಾನಿಯಾದರೇ, ಇಂದಿರಾ ಅವರು ಮೊದಲ ಮಹಿಳಾ ಪ್ರಧಾನಿ ಎನಿಸಿಕೊಂಡರು. ಬಳಿಕ ರಾಜೀವ್ ಗಾಂಧಿ, ವಿ.ಪಿ ಸಿಂಗ್, ಚಂದ್ರಶೇಖರ್, ಪಿ.ವಿ ನರಸಿಂಹರಾವ್, ಅಟಲ್ ಬಿಹಾರಿ ವಾಜಪೇಯಿ, ಎಚ್.ಡಿ ದೇವೇಗೌಡ, ಐ.ಕೆ ಗುಜ್ರಾಲ್, ಮನಮೋಹನ್ ಸಿಂಗ್ ಈ ಹುದ್ದೆಯನ್ನು ಏರಿದರು.
2014ರಿಂದ ನರೇಂದ್ರ ಮೋದಿಯು ಪ್ರಧಾನಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಭಾರತದ ಸಂವಿಧಾನಬದ್ಧ ಪ್ರಜಾತಂತ್ರ ವ್ಯವಸ್ಥೆಯಲ್ಲಿ ರಾಷ್ಟ್ರಪತಿಯು ಮೊದಲ ಪ್ರಜೆಯಾಗಿದ್ದರೂ, ಆಡಳಿತಾತ್ಮಕವಾಗಿ ಪ್ರಧಾನಿಯೇ ದೇಶದ ಅತ್ಯಂತ ಪ್ರಭಾವಿ ವ್ಯಕ್ತಿ.
ಟಿಎಂಸಿ ಬುಡಕಟ್ಟು ಸಮುದಾಯದವನ್ನು ಅವಮಾನಿಸಿದೆ, ಹಿಂದೂಗಳನ್ನು ಅಲ್ಪಸಂಖ್ಯಾತರನ್ನಾಗಿಸುತ್ತಿದೆ; ಮೋದಿ ವಾಗ್ದಾಳಿ
ಟಿಎಂಸಿ ರಾಷ್ಟ್ರಪತಿ, ಬುಡಕಟ್ಟು ಜನಾಂಗದವರನ್ನು ಅವಮಾನಿಸಿದೆ, ಅವರ ಆಳ್ವಿಕೆ ಅಂತ್ಯಗೊಳ್ಳುತ್ತಿದೆ. ಬಂಗಾಳ ಸರ್ಕಾರ ಉದ್ದೇಶಪೂರ್ವಕವಾಗಿ ಹಿಂದೂಗಳನ್ನು ಅಲ್ಪಸಂಖ್ಯಾತರನ್ನಾಗಿ ಮಾಡುತ್ತಿದೆ. ಅವಕಾಶಗಳನ್ನು ಹುಡುಕಿಕೊಂಡು ಅನೇಕ ಯುವಕರು ಬಂಗಾಳವನ್ನು ತೊರೆಯುವಂತಾಗಿದೆ. ಬಂಗಾಳದ ಯುವಕರು ವಲಸೆಯ ಶಾಪದಿಂದ ಬಳಲುತ್ತಿದ್ದಾರೆ. ಅವರಿಗೆ ಪದವಿಗಳು ಅಥವಾ ಉದ್ಯೋಗಗಳು ಸಿಗುತ್ತಿಲ್ಲ ಎಂದು ಪಶ್ಚಿಮ ಬಂಗಾಳದಲ್ಲಿ ಸಿಎಂ ಮಮತಾ ಬ್ಯಾನರ್ಜಿ ಸರ್ಕಾರದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.
- Sushma Chakre
- Updated on: Mar 14, 2026
- 8:17 pm
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನಲ್ಲಿ ಪ್ರಧಾನಿ ಮೋದಿ ಅವರು 800 ಚಹಾ ತೋಟಗಳಲ್ಲಿರುವ 3.5 ಲಕ್ಷ ಕುಟುಂಬಗಳಿಗೆ 28,000 ಭೂ ಪಟ್ಟಾಗಳನ್ನು ವಿತರಿಸುವಾಗ ಚಹಾ ಬುಡಕಟ್ಟು ಮಹಿಳೆಯ ಪಾದಗಳನ್ನು ಮುಟ್ಟಿದ್ದಾರೆ. ಆ ಮಹಿಳೆ ಪ್ರಧಾನಿ ಮೋದಿಗೆ ನಮಸ್ಕರಿಸಿದ್ದಾರೆ. ಅದಕ್ಕೆ ಪ್ರತಿಯಾಗಿ ಮೋದಿಯವರು ಕೂಡ ಬಗ್ಗಿ ಆಕೆಯ ಪಾದಗಳನ್ನು ಮುಟ್ಟಿದ್ದಾರೆ. ಈ ವಿಡಿಯೋ ಭಾರೀ ವೈರಲ್ ಆಗಿದೆ. ಪ್ರಧಾನಿ ಮೋದಿ ಮಹಿಳೆಯರಿಗೆ ನೀಡುವ ಗೌರವವನ್ನು ಈ ವಿಡಿಯೋ ಸಂಕೇತಿಸುತ್ತದೆ.
- Sushma Chakre
- Updated on: Mar 13, 2026
- 11:11 pm
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ ಪ್ರಧಾನಿ ಮೋದಿ
ನರೇಂದ್ರ ಮೋದಿ ಅಸ್ಸಾಂನಲ್ಲಿ ಇಂದು ಸುಮಾರು 19,480 ಕೋಟಿ ರೂ. ಮೌಲ್ಯದ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ ರಾಷ್ಟ್ರಕ್ಕೆ ಅರ್ಪಿಸಿದರು. ದೇಶಾದ್ಯಂತ 9.3 ಕೋಟಿಗೂ ಹೆಚ್ಚು ರೈತರಿಗೆ ಪ್ರಧಾನ ಮಂತ್ರಿ-ಕಿಸಾನ್ ಯೋಜನೆಯ 22ನೇ ಕಂತನ್ನು ಕೂಡ ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿದರು. ಇದೇ ವೇಳೆ ಇನ್ನೂ ಕೆಲವು ಯೋಜನೆಗಳಿಗೂ ಮೋದಿ ಶಂಕುಸ್ಥಾಪನೆ ನೆರವೇರಿಸಿದರು. ಈ ವೇಳೆ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಕಾಂಗ್ರೆಸ್ ತಪ್ಪು ಮಾಹಿತಿ ಮತ್ತು ಸುಳ್ಳುಗಳನ್ನು ಹರಡುವುದರ ಮೇಲೆ ಕೇಂದ್ರೀಕರಿಸಿದೆ ಎಂದು ಹೇಳಿದರು.
- Sushma Chakre
- Updated on: Mar 13, 2026
- 10:57 pm
ಜಾಗತಿಕವಾಗಿ ಭಾರತ ನಿರ್ಣಾಯಕ ಪಾತ್ರ ವಹಿಸುತ್ತಿದೆ; ಫಿನ್ಲೆಂಡ್ ಅಧ್ಯಕ್ಷ ಮೆಚ್ಚುಗೆ
ಭಾರತ ಮತ್ತು ಫಿನ್ಲೆಂಡ್ ಇಂದು ತಮ್ಮ ದ್ವಿಪಕ್ಷೀಯ ಸಂಬಂಧಗಳಲ್ಲಿ ಪ್ರಮುಖ ಮೈಲಿಗಲ್ಲನ್ನು ಗುರುತಿಸಿವೆ. ಎರಡೂ ದೇಶಗಳು ವ್ಯಾಪಾರ, ತಂತ್ರಜ್ಞಾನ, ಚಲನಶೀಲತೆ, ಸುಸ್ಥಿರತೆ ಮತ್ತು ನಾವೀನ್ಯತೆಗಳನ್ನು ಒಳಗೊಂಡ ಸರಣಿ ಉಪಕ್ರಮಗಳಿಗೆ ಒಪ್ಪಿಕೊಂಡಿವೆ. ಫಿನ್ಲೆಂಡ್ ಅಧ್ಯಕ್ಷ ಅಲೆಕ್ಸಾಂಡರ್ ಸ್ಟಬ್ ಅವರ ಭಾರತ ಭೇಟಿಯ ಸಂದರ್ಭದಲ್ಲಿ, 11ನೇ ರೈಸಿನಾ ಸಂವಾದದಲ್ಲಿ ಈ ಘೋಷಣೆ ಮಾಡಲಾಯಿತು. ಎರಡೂ ದೇಶಗಳು ಜೈವಿಕ ಇಂಧನ, ತ್ಯಾಜ್ಯದಿಂದ ಇಂಧನ ತಯಾರಿಕೆ, ಹಸಿರು ಹೈಡ್ರೋಜನ್, ವಿದ್ಯುತ್ ಸಂಗ್ರಹಣೆ ಮತ್ತು ನವೀಕರಿಸಬಹುದಾದ ಇಂಧನ ವ್ಯವಸ್ಥೆಗಳು, ಗಾಳಿ, ಸೌರಶಕ್ತಿ ಮತ್ತು ಸಣ್ಣ ಜಲವಿದ್ಯುತ್ ಸೇರಿದಂತೆ ಕ್ಷೇತ್ರಗಳಲ್ಲಿ ಸಹಯೋಗವನ್ನು ವಿಸ್ತರಿಸಿದರು.
- Sushma Chakre
- Updated on: Mar 5, 2026
- 9:46 pm
ಮಿಲಿಟರಿ ಸಂಘರ್ಷ ಯಾವುದೇ ಸಮಸ್ಯೆಗೆ ಪರಿಹಾರ ಅಸಾಧ್ಯ; ಅಮೆರಿಕ-ಇರಾನ್ ಯುದ್ಧದ ಬಗ್ಗೆ ಪ್ರಧಾನಿ ಮೋದಿ ಹೇಳಿಕೆ
'ಮಿಲಿಟರಿ ಸಂಘರ್ಷವು ಯಾವುದೇ ಸಮಸ್ಯೆಯನ್ನು ಪರಿಹರಿಸಲು ಸಾಧ್ಯವಿಲ್ಲ' ಎಂದು ಅಮೆರಿಕ, ಇಸ್ರೇಲ್-ಇರಾನ್ ನಡುವಿನ ಯುದ್ಧದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮಹತ್ವದ ಹೇಳಿಕೆ ನೀಡಿದ್ದಾರೆ. ಮಿಲಿಟರಿ ಮುಖಾಮುಖಿಯ ಮೂಲಕ ಯಾವುದೇ ವಿಷಯವನ್ನು ಪರಿಹರಿಸಲಾಗುವುದಿಲ್ಲ ಎಂದು ಮೋದಿ ಹೇಳಿದ್ದಾರೆ. ಫಿನ್ಲೆಂಡ್ ಅಧ್ಯಕ್ಷ ಅಲೆಕ್ಸಾಂಡರ್ ಸ್ಟಬ್ ಅವರೊಂದಿಗೆ ವ್ಯಾಪಕ ಮಾತುಕತೆ ನಡೆಸಿದ ನಂತರ ಪ್ರಧಾನಿ ಮೋದಿ ಈ ಹೇಳಿಕೆ ನೀಡಿದ್ದಾರೆ.
- Sushma Chakre
- Updated on: Mar 5, 2026
- 4:20 pm
ಮಾರ್ಚ್ 11ರಂದು ತಮಿಳುನಾಡಿಗೆ ಪ್ರಧಾನಿ ಮೋದಿ ಭೇಟಿ; ಬಿಜೆಪಿಯ ಅದ್ಧೂರಿ ಸಾರ್ವಜನಿಕ ಸಭೆಯಲ್ಲಿ ಭಾಗಿ
ಪ್ರಧಾನಿ ನರೇಂದ್ರ ಮೋದಿ ಮಾರ್ಚ್ 11ರಂದು ಮತ್ತೆ ತಮಿಳುನಾಡಿಗೆ ಭೇಟಿ ನೀಡಲಿದ್ದಾರೆ. ಮಾರ್ಚ್ 1ರಂದು ತಮಿಳುನಾಡು ಮತ್ತು ಪುದುಚೆರಿಗೆ ತೆರಳಿದ್ದ ಮೋದಿ 7,100 ಕೋಟಿ ರೂ.ಗಳಿಗೂ ಹೆಚ್ಚಿನ ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ್ದರು. ಇದೀಗ ಮತ್ತೆ ಅವರು ತಮಿಳುನಾಡಿಗೆ ಭೇಟಿ ನೀಡಲಿದ್ದಾರೆ. ಮಾರ್ಚ್ 11ರಂದು ತಿರುಚ್ಚಿಯಲ್ಲಿ ನಡೆಯಲಿರುವ ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮೋದಿ ಮಾತನಾಡಲಿದ್ದಾರೆ. ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವುದರಿಂದ ಮೋದಿ ಪದೇಪದೇ ಈ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ.
- Sushma Chakre
- Updated on: Mar 4, 2026
- 5:54 pm
ಒಮಾನ್, ಕುವೈತ್ ನಾಯಕರಿಗೆ ಕರೆ ಮಾಡಿದ ಪ್ರಧಾನಿ ಮೋದಿ; ಇರಾನ್ ದಾಳಿಗೆ ಖಂಡನೆ
ಪ್ರಧಾನಿ ನರೇಂದ್ರ ಮೋದಿ ಒಮಾನ್, ಕುವೈತ್ ದೇಶಗಳ ನಾಯಕರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ್ದಾರೆ. ಈ ವೇಲೆ ಅವರು ಆ ದೇಶಗಳಲ್ಲಿರುವ ಭಾರತೀಯ ಸಮುದಾಯದ ಭದ್ರತೆಯ ಬಗ್ಗೆ ಚರ್ಚಿಸಿದ್ದಾರೆ. ಹಾಗೇ, ಇರಾನ್ ನಡೆಸಿದ ದಾಳಿಯನ್ನು ಖಂಡಿಸಿದ್ದಾರೆ. ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಸಂಘರ್ಷದ ನಡುವೆಯೇ ಪ್ರಧಾನಿ ಮೋದಿ ಅವರು ಒಮಾನ್, ಕತಾರ್, ಕುವೈತ್ನ ನಾಯಕರೊಂದಿಗೆ ಮಾತನಾಡಿದ್ದಾರೆ.
- Sushma Chakre
- Updated on: Mar 3, 2026
- 9:27 pm
ಬಹ್ರೇನ್ ರಾಜ, ಸೌದಿ ಅರೇಬಿಯಾದ ಪ್ರಿನ್ಸ್ಗೆ ಕರೆ ಮಾಡಿದ ಪ್ರಧಾನಿ ಮೋದಿ; ಎರಡೂ ದೇಶಗಳ ಮೇಲಿನ ದಾಳಿಗೆ ಖಂಡನೆ
ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ದಾಳಿ ನಡೆಸುತ್ತಿದ್ದಂತೆ ಇರಾನ್ ಅದಕ್ಕೆ ಪ್ರತಿಯಾಗಿ ಸೇಡಿನ ದಾಳಿ ನಡೆಸಲಾರಂಭಿಸಿದೆ. ಇದರಿಂದ ಈ ಮೂರು ದೇಶಗಳಿಗೆ ಮಾತ್ರವಲ್ಲದೆ ಮಧ್ಯಪ್ರಾಚ್ಯದ ಇತರೆ ಅರಬ್ ದೇಶಗಳಲ್ಲೂ ಜೀವಭಯ ಉಂಟಾಗಿದೆ. ಇರಾನ್ ಕುವೈತ್, ಬಹ್ರೇನ್, ಸೌದಿ ಅರೇಬಿಯಾ ಸೇರಿದಂತೆ ತನ್ನ ಅಕ್ಕಪಕ್ಕದ ಎಲ್ಲ ದೇಶಗಳ ಮೇಲೂ ವೈಮಾನಿಕ ದಾಳಿ ನಡೆಸಲಾರಂಭಿಸಿದೆ. ಅದರಿಂದ ಸಾಕಷ್ಟು ಸಾವು-ನೋವುಗಳು ಉಂಟಾಗಿವೆ. ಈ ದಾಳಿಯನ್ನು ಭಾರತ ಬಲವಾಗಿ ಖಂಡಿಸಿದೆ.
- Sushma Chakre
- Updated on: Mar 2, 2026
- 8:03 pm
ಇರಾನ್ ಸಂಘರ್ಷ ತೀವ್ರ ಕಳವಳಕಾರಿ; ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಲು ಪ್ರಧಾನಿ ಮೋದಿ ಮನವಿ
ಇರಾನ್ ಹಾಗೂ ಇಸ್ರೇಲ್, ಯುಎಸ್ ನಡುವೆ ನಡೆಯುತ್ತಿರುವ ಸಂಘರ್ಷದಿಂದ ಮಧ್ಯ ಪ್ರಾಚ್ಯ ದೇಶಗಳೂ ತತ್ತರಿಸುವಂತಾಗಿದೆ. ‘ಪಶ್ಚಿಮ ಏಷ್ಯಾ ಪರಿಸ್ಥಿತಿ ತೀವ್ರ ಕಳವಳಕಾರಿ ವಿಷಯ’ ಎಂದಿರುವ ಪ್ರಧಾನಿ ನರೇಂದ್ರ ಮೋದಿ ಈ ಸಂಘರ್ಷವನ್ನು ಬಗೆಹರಿಸಲು ಮಾತುಕತೆ ಮತ್ತು ರಾಜತಾಂತ್ರಿಕತೆಯ ಮಾರ್ಗವನ್ನು ಅನುಸರಿಸಲು ಆಗ್ರಹಿಸಿದ್ದಾರೆ. ಹಾಗೇ, ಈ ಸಂಘರ್ಷದಲ್ಲಿ ಭಾರತೀಯರನ್ನು ರಕ್ಷಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ.
- Sushma Chakre
- Updated on: Mar 2, 2026
- 6:19 pm
ಎದ್ದೇಳಿ, ಗುರಿ ಮುಟ್ಟುವವರೆಗೂ ನಿಲ್ಲದಿರಿ; ಸ್ವಾಮಿ ವಿವೇಕಾನಂದರು ಕೆನಡಾದಲ್ಲಿ ಕಳೆದ ದಿನಗಳ ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಇಂದು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಕೆನಡಾದ ಪ್ರಧಾನಿ ಮಾರ್ಕ್ ಕಾರ್ನಿ ಜಂಟಿ ಭಾಷಣ ಮಾಡಿದ್ದಾರೆ. ಈ ವೇಳೆ ಅವರು ಭಾರತದ ಆಧ್ಯಾತ್ಮ ಗುರು ಸ್ವಾಮಿ ವಿವೇಕಾನಂದರ ಬಗ್ಗೆಯೂ ಮಾತನಾಡಿದ್ದಾರೆ. "ನಾವು ಒಂದೇ ಕುಟುಂಬವಿದ್ದಂತೆ. ಎರಡು ಮಿಲಿಯನ್ ಕೆನಡಾದವರು ಭಾರತದಲ್ಲಿ ಬೇರುಗಳನ್ನು ಹೊಂದಿದ್ದಾರೆ. ನಮ್ಮ 2 ದೇಶಗಳ ನಡುವೆ ಹತ್ತಾರು ಸಾವಿರ ಜನರು ಪ್ರಯಾಣಿಸುತ್ತಾರೆ. ಆ ಸಾಮರ್ಥ್ಯಗಳ ಮೇಲೆ ನಿರ್ಮಿಸಲು ನಾವು ಸಹಯೋಗ ಹೊಂದಿದ್ದೇವೆ" ಎಂದು ಅವರು ಹೇಳಿದರು.
- Sushma Chakre
- Updated on: Mar 2, 2026
- 4:41 pm
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಕೆನಡಾದ ಪ್ರಧಾನಿ ಕಾರ್ನಿ ಅವರ ಮುಂಬೈ ಭೇಟಿಯ ನಂತರ ಭಾನುವಾರ ಸಂಜೆ ಅವರು ರಾಷ್ಟ್ರ ರಾಜಧಾನಿ ದೆಹಲಿಗೆ ಬಂದಿಳಿದಿದ್ದರು. ಇದು ಅವರ ಅಧಿಕೃತ ಭಾರತ ಪ್ರವಾಸದ ಭಾಗವಾಗಿದೆ. ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಮತ್ತು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ರಾಜ್ಯ ಸಚಿವ ಜಿತಿನ್ ಪ್ರಸಾದ ಅವರು ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಅವರನ್ನು ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡಿದ್ದರು.
- Sushma Chakre
- Updated on: Mar 2, 2026
- 3:20 pm
HPV Vaccination Drive: ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು 14 ವರ್ಷದ ಬಾಲಕಿಯರಿಗೆ HPV ಲಸಿಕೆ ಅಭಿಯಾನಕ್ಕೆ ಪ್ರಧಾನಿ ಮೋದಿ ಚಾಲನೆ
ಮಹಿಳೆಯರಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವ ಗರ್ಭಕಂಠದ ಕ್ಯಾನ್ಸರ್ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ 9ರಿಂದ 14 ವರ್ಷದೊಳಗಿನ ಹೆಣ್ಣುಮಕ್ಕಳಿಗೆ ಹೆಚ್ಪಿವಿ ಲಸಿಕೆ ನೀಡುವ ಅಭಿಯಾನವನ್ನು ಆರಂಭಿಸಿದೆ. ಈ ಅಭಿಯಾನಕ್ಕೆ ರಾಜಸ್ಥಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು. 14 ವರ್ಷ ವಯಸ್ಸಿನ ಹುಡುಗಿಯರಿಗೆ ರಾಷ್ಟ್ರವ್ಯಾಪಿ ಹ್ಯೂಮನ್ ಪ್ಯಾಪಿಲೋಮವೈರಸ್ (HPV) ಲಸಿಕೆ ಕಾರ್ಯಕ್ರಮವನ್ನು ಪ್ರಾರಂಭಿಸಲಾಗಿದೆ.
- Sushma Chakre
- Updated on: Feb 28, 2026
- 6:58 pm