AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prime Minister Of India

Prime Minister Of India

ಭಾರತ ಪ್ರಜಾತಂತ್ರ ವ್ಯವಸ್ಥೆಯ ನಾಯಕನೆಂದರೆ ಪ್ರಧಾನಿ. ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಒಂದಕ್ಕೆ ನಾಯಕರಾಗಿರುವ ಪ್ರಧಾನಿಗೆ ಐದು ವರ್ಷ ಶಾಸನಬದ್ಧ ಅಧಿಕಾರವಿರುತ್ತದೆ. ಲೋಕಸಭೆಯಲ್ಲಿ ಬಹುಮತ ಹೊಂದಿರುವ ಪಕ್ಷ ಅಥವಾ ಒಕ್ಕೂಟದ ಸದಸ್ಯರ ನಾಯಕನೇ ಪ್ರಧಾನಿ ಆಗಲಿದ್ದು, ಭಾರತವು ಸಧ್ಯಕ್ಕೆ 14ನೇ ಪ್ರಧಾನಿಯನ್ನು ಹೊಂದಿದೆ.

ಭಾರತದಲ್ಲಿ ಒಬ್ಬ ವ್ಯಕ್ತಿ ಎಷ್ಟು ವರ್ಷ ಅಥವಾ ಎಷ್ಟು ಅವಧಿಗೆ ಪ್ರಧಾನಿ ಆಗಬಹುದು ಎನ್ನುವ ಯಾವುದೇ ಮಿತಿಯಿಲ್ಲ. ಐದು ವರ್ಷಕ್ಕೊಮ್ಮೆ ನಡೆಯುವ ಚುನಾವಣೆಯಲ್ಲಿ ಪ್ರಧಾನಿ ಆಗುವ ಪಕ್ಷ ಅಥವಾ ಒಕ್ಕೂಟ ಗೆಲುವು ಸಾಧಿಸಿದರೆ ಸಾಕಾಗುತ್ತದೆ. ಜವಾಹರ್‌ಲಾಲ್‌ ನೆಹರು ಅವರು ಭಾರತದ ಮೊದಲ ಪ್ರಧಾನಿ ಆಗಿದ್ದರು. ಬಳಿಕ ಲಾಲ್‌ಬಹದ್ದೂರ್‌ ಶಾಸ್ತ್ರೀ, ಇಂದಿರಾ ಗಾಂಧಿ ಪ್ರಧಾನಿ ಆಗಿದ್ದರು.

ಮೊರಾರ್ಜಿ ದೇಸಾಯಿ ಅವರು ದೇಶದ ಮೊದಲ ಕಾಂಗ್ರೆಸ್ಸೇತರ ಪ್ರಧಾನಿಯಾದರೇ, ಇಂದಿರಾ ಅವರು ಮೊದಲ ಮಹಿಳಾ ಪ್ರಧಾನಿ ಎನಿಸಿಕೊಂಡರು. ಬಳಿಕ ರಾಜೀವ್‌ ಗಾಂಧಿ, ವಿ.ಪಿ ಸಿಂಗ್‌, ಚಂದ್ರಶೇಖರ್‌, ಪಿ.ವಿ ನರಸಿಂಹರಾವ್‌, ಅಟಲ್‌ ಬಿಹಾರಿ ವಾಜಪೇಯಿ, ಎಚ್‌.ಡಿ ದೇವೇಗೌಡ, ಐ.ಕೆ ಗುಜ್ರಾಲ್‌, ಮನಮೋಹನ್‌ ಸಿಂಗ್‌ ಈ ಹುದ್ದೆಯನ್ನು ಏರಿದರು.

2014ರಿಂದ ನರೇಂದ್ರ ಮೋದಿಯು ಪ್ರಧಾನಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಭಾರತದ ಸಂವಿಧಾನಬದ್ಧ ಪ್ರಜಾತಂತ್ರ ವ್ಯವಸ್ಥೆಯಲ್ಲಿ ರಾಷ್ಟ್ರಪತಿಯು ಮೊದಲ ಪ್ರಜೆಯಾಗಿದ್ದರೂ, ಆಡಳಿತಾತ್ಮಕವಾಗಿ ಪ್ರಧಾನಿಯೇ ದೇಶದ ಅತ್ಯಂತ ಪ್ರಭಾವಿ ವ್ಯಕ್ತಿ.

ಇನ್ನೂ ಹೆಚ್ಚು ಓದಿ

ಅಪರೂಪದ ಖನಿಜ ಒಪ್ಪಂದಕ್ಕೆ ಸಹಿ ಹಾಕಿದ ಭಾರತ-ಬ್ರೆಜಿಲ್; 20 ಬಿಲಿಯನ್ ಡಾಲರ್ ವ್ಯಾಪಾರದ ಗುರಿ

ಭಾರತ ಸರ್ಕಾರವು ಚೀನಾದ ಮೇಲಿನ ಅವಲಂಬನೆಯನ್ನು ತಡೆಯಲು ಹೊಸ ಪೂರೈಕೆದಾರರನ್ನು ಹುಡುಕುತ್ತಿರುವುದರಿಂದ, ನಿರ್ಣಾಯಕ ಖನಿಜಗಳು ಮತ್ತು ಅಪರೂಪದ ಭೂಮಿಯ ಮೇಲಿನ ಸಹಕಾರವನ್ನು ಹೆಚ್ಚಿಸಲು ಬ್ರೆಜಿಲ್ ಮತ್ತು ಭಾರತ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿವೆ. ಬ್ರೆಜಿಲ್ ಅಧ್ಯಕ್ಷ ಲೂಯಿಸ್ ಇನಾಸಿಯೊ ಲುಲಾ ಡ ಸಿಲ್ವಾ ಇಂದು ನವದೆಹಲಿಯಲ್ಲಿ ಭಾರತೀಯ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ವ್ಯಾಪಾರ ಮತ್ತು ಹೂಡಿಕೆ ಅವಕಾಶಗಳನ್ನು ಹೆಚ್ಚಿಸುವ ಬಗ್ಗೆ ಚರ್ಚಿಸಿದರು.

ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಇನಾಸಿಯೊ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಅದ್ದೂರಿ ಸ್ವಾಗತ

ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಔಪಚಾರಿಕ ಸ್ವಾಗತ ನೀಡಲಾಯಿತು. ರಾಷ್ಟ್ರಪತಿ ಭವನದಲ್ಲಿ ಅಧ್ಯಕ್ಷ ಲೂಲಾ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಗಾರ್ಡ್ ಆಫ್ ಹಾನರ್ ನೀಡಲಾಯಿತು. ಬ್ರೆಜಿಲ್ ಅಧ್ಯಕ್ಷರನ್ನು ಪ್ರಧಾನಿ ಮೋದಿ ಮತ್ತು ರಾಷ್ಟ್ರಪತಿ ದ್ರೌಪದಿ ಮುರ್ಮು ರಾಷ್ಟ್ರಪತಿ ಭವನದಲ್ಲಿ ಬರಮಾಡಿಕೊಂಡರು.

ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್​​ನಿಂದ ಅರೆಬೆತ್ತಲೆ ಪ್ರತಿಭಟನೆ; ಬಂಧಿತ 4 ಆರೋಪಿಗಳು 5 ದಿನ ಪೊಲೀಸ್ ವಶಕ್ಕೆ

ನಿನ್ನೆ (ಶುಕ್ರವಾರ) ದೆಹಲಿಯ ಭಾರತ್ ಮಂಟಪದಲ್ಲಿ ನಡೆಯುತ್ತಿದ್ದ ಎಐ ಶೃಂಗಸಭೆಯ ಆವರಣದೊಳಗೆ ಅಂಗಿ ಬಿಚ್ಚಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆ ಕೂಗುತ್ತಾ ಪ್ರತಿಭಟನೆ ನಡೆಸಿದ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದರು. ಬಂಧಿತ ನಾಲ್ವರು ಆರೋಪಿಗಳನ್ನು ಇಂದು ಪಟಿಯಾಲ ಹೌಸ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಈ ಕೋರ್ಟ್ ಆ ಎಲ್ಲ ಆರೋಪಿಗಳ ಜಾಮೀನು ಅರ್ಜಿಯನ್ನು ರದ್ದುಗೊಳಿಸಿ, 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ.

ನಾನೇ ಭಾರತ-ಪಾಕ್ ಸಂಘರ್ಷ ನಿಲ್ಲಿಸಿದ್ದು; ಮತ್ತೆ ಹಳೇ ರಾಗ ಹಾಡಿದ ಟ್ರಂಪ್, ಶೆಹಬಾಜ್ ಷರೀಫ್ ಗಪ್​ಚುಪ್

2025ರಲ್ಲಿ ಉಂಟಾದ ಭಾರತ ಮತ್ತು ಪಾಕಿಸ್ತಾನದ ಮಿಲಿಟರಿ ಬಿಕ್ಕಟ್ಟಿನ ಸಮಯದಲ್ಲಿ ನಾನು ಮಧ್ಯಸ್ಥಿಕೆ ವಹಿಸಿದ್ದೆ ಎಂಬ ತಮ್ಮ ಹಳೆಯ ಹೇಳಿಕೆಯನ್ನು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುನರುಚ್ಚರಿಸಿದ್ದಾರೆ. ಎರಡು ಪರಮಾಣು ಶಸ್ತ್ರಸಜ್ಜಿತ ನೆರೆಹೊರೆಯ ದೇಶಗಳು ಯುದ್ಧವನ್ನು ನಿಲ್ಲಿಸದಿದ್ದರೆ ಅವರ ಮೇಲೆ ಶೇ. 200ರಷ್ಟು ಸುಂಕವನ್ನು ವಿಧಿಸುವುದಾಗಿ ಬೆದರಿಕೆ ಹಾಕಿದ್ದೆ. ಅದರಿಂದಲೇ ಎರಡೂ ದೇಶಗಳು ಕದನವಿರಾಮ ಘೋಷಿಸಿದವು ಎಂದು ಅವರು ಹೇಳಿದ್ದಾರೆ. ಈ ವೇಳೆ ಅಲ್ಲಿಯೇ ಕುಳಿತಿದ್ದ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಹಲ್ಲು ಕಿರಿಯುತ್ತಾ ಎದ್ದು ನಿಂತರು. ಆದರೆ, ಅಮೆರಿಕ ಮಧ್ಯಸ್ಥಿಕೆ ವಹಿಸಿಲ್ಲ ಎಂದು ಭಾರತ ಹಲವು ಬಾರಿ ಸ್ಪಷ್ಟನೆ ನೀಡಿದೆ.

ದೇಶವೇ ತಲೆತಗ್ಗಿಸುವ ಕೆಲಸ; ಎಐ ಶೃಂಗಸಭೆಯಲ್ಲಿ ಯೂತ್ ಕಾಂಗ್ರೆಸ್ ಪ್ರತಿಭಟನೆಗೆ ಬಿಜೆಪಿ ಆಕ್ರೋಶ

ದೆಹಲಿಯಲ್ಲಿ ನಡೆಯುತ್ತಿರುವ ಎಐ ಶೃಂಗಸಭೆಯ ಕೊನೆಯ ದಿನವಾದ ಇಂದು ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆ ಕೂಗುತ್ತಾ, ತಮ್ಮ ಅಂಗಿ ಬಿಚ್ಚಿ ಕೈಯಲ್ಲಿ ಹಿಡಿದು ಬೀಸುತ್ತಾ ಪ್ರತಿಭಟನೆ ನಡೆಸಿದ್ದಾರೆ. ಈಗಾಗಲೇ ಎಐ ಶೃಂಗಸಭೆಯಲ್ಲಿ ಭಾಗವಹಿಸಿದ್ದ ಗಲ್ಗೋಟಿಯಾಸ್​ ವಿಶ್ವವಿದ್ಯಾಲಯ ಚೀನಾದ ರೋಬೋಟ್ ಅನ್ನು ನಮ್ಮ ದೇಶದ ಅನ್ವೇಷಣೆಯೆಂದು ಹೇಳಿಕೊಂಡಿದ್ದರಿಂದ ಬಿಜೆಪಿ ಸರ್ಕಾರ ತೀವ್ರ ಮುಜುಗರ ಅನುಭವಿಸಿತ್ತು. ಅದರ ಬೆನ್ನಲ್ಲೇ ಕಾಂಗ್ರೆಸ್ ನಡೆಸಿರುವ ಈ ಅರೆಬೆತ್ತಲೆ ಪ್ರತಿಭಟನೆಗೆ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಎಐ ಶೃಂಗಸಭೆಯಲ್ಲಿ ಶರ್ಟ್ ತೆಗೆದು ಘೋಷಣೆ ಕೂಗಿದ ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ದೆಹಲಿಯ ಭಾರತ್ ಮಂಟಪದಲ್ಲಿ ಆಯೋಜಿಸಲಾಗಿರುವ ಎಐ ಇಂಪ್ಯಾಕ್ಟ್​ ಶೃಂಗಸಭೆಗೆ ಜಗತ್ತಿನಾದ್ಯಂತ ಹಲವು ದೇಶಗಳ ನಾಯಕರು ಆಗಮಿಸಿದ್ದಾರೆ. ವಿವಿಧ ಕಂಪನಿಗಳ ಸಿಇಒಗಳು, ಉದ್ಯಮಿಗಳು ಕೂಡ ಪಾಲ್ಗೊಂಡಿದ್ದಾರೆ. ಇಂದು ಈ ಶೃಂಗಸಭೆಯ ಕೊನೆಯ ದಿನ. ಆದರೆ, ಅಂತಿಮ ದಿನವಾದ ಇಂದು ಈ ಶೃಂಗಸಭೆ ವಿಶ್ವಾದ್ಯಂತ ಗಮನ ಸೆಳೆದಿದೆ. ಇದಕ್ಕೆ ಕಾರಣ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಈ ಶೃಂಗಸಭೆಯ ಆವರಣದೊಳಗೆ ಅಂಗಿ ಬಿಚ್ಚಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಟ್ರಂಪ್ ನಡುವಿನ ವ್ಯಾಪಾರ ಒಪ್ಪಂದದ ವಿರುದ್ಧ ನಡೆಸಿದ ಅಸಭ್ಯಕರವಾದ ಪ್ರತಿಭಟನೆ.

ಹಸುಗಳಿಗೂ AI ಅನ್ವಯಿಸುವ ಬಗ್ಗೆ ಮೋದಿ ತುರ್ತು ನಿರ್ಧಾರ; ನಂದನ್ ನಿಲೇಕಣಿ ಬಣ್ಣನೆ

"2016ರ ಡಿಸೆಂಬರ್ 30ರಂದು ಪ್ರಧಾನಿಯವರು UPIನಲ್ಲಿ BHIM ಪಾವತಿ ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಿದರು. ಅವರು ಆ ಅಪ್ಲಿಕೇಶನ್ ಅನ್ನು ಪ್ರಾರಂಭಿಸಿದಾಗ ಅದು ಇಷ್ಟರ ಮಟ್ಟಿಗೆ ಜನಪ್ರಿಯವಾಗಲಿದೆ, ದಿನನಿತ್ಯದ ವಹಿವಾಟಿನ ಭಾಗವಾಗಲಿದೆ ಎಂದು ಊಹೆ ಇರಲಿಲ್ಲ. ಇಂದು ನಾವು 500 ಮಿಲಿಯನ್ ಬಳಕೆದಾರರೊಂದಿಗೆ ತಿಂಗಳಿಗೆ 21 ಬಿಲಿಯನ್ ವಹಿವಾಟುಗಳನ್ನು ಹೊಂದಿದ್ದೇವೆ. ನಾವು ವಿಶ್ವದ ಅತಿದೊಡ್ಡ ಪಾವತಿ ವ್ಯವಸ್ಥೆಯನ್ನು ಹೊಂದಿದ್ದೇವೆ. ಅದೇ ರೀತಿ AI ಕೂಡ ಮುಂದಿನ ದಿನಗಳಲ್ಲಿ ದಿನನಿತ್ಯದ ಭಾಗವಾಗಲಿದೆ ಎಂಬ ವಿಶ್ವಾಸ ನನಗಿದೆ. ಭಾರತೀಯರು, ಸಾಮಾನ್ಯ ಜನರು, ರೈತರು, ಕಾರ್ಮಿಕರ ಪ್ರಯೋಜನಕ್ಕಾಗಿ AI ಅನ್ನು ಹೇಗೆ ಬಳಸಬಹುದು ಎಂಬ ಮೋದಿಯವರ ನಾಯಕತ್ವ ಮತ್ತು ದೃಷ್ಟಿಕೋನದಿಂದ ಎಐ ದೇಶಾದ್ಯಂತ ಅಳವಡಿಕೆಯಾಗಲಿದೆ ಎಂದು ನನಗೆ ಅನಿಸುತ್ತಿದೆ" ಎಂದು ನಂದನ್ ನಿಲೇಕಣಿ ಹೇಳಿದ್ದಾರೆ.

ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು

ನರೇಂದ್ರ ಮೋದಿ ಅವರು AI ಶೃಂಗಸಭೆ ನಡೆಯುವ ಸ್ಥಳವಾದ ದೆಹಲಿಯ ಭಾರತ್ ಮಂಟಪಕ್ಕೆ ಆಗಮಿಸಿದ ವಿಶ್ವ ನಾಯಕರನ್ನು ಸ್ವಾಗತಿಸಿದ್ದಾರೆ. ಈ ವೇಳೆ ಅವರು ಭಾರತ್ ಮಂಟಪದಲ್ಲಿ ಭಾರತೀಯ ಕಲೆ, ಸಂಸ್ಕೃತಿಯನ್ನು ಬಿತ್ತರಿಸುವ ಸಾಂಸ್ಕೃತಿಕ ಪ್ರದರ್ಶನಗಳನ್ನು ಆನಂದಿಸಿದ್ದಾರೆ. ಪ್ರಧಾನಿ ಮೋದಿಯವರೇ ಖುದ್ದಾಗಿ ಬೇರೆ ದೇಶಗಳ ನಾಯಕರನ್ನು ಕರೆದುಕೊಂಡು ಹೋಗಿ ಸಾಂಸ್ಕೃತಿಕ ಕಲೆಯನ್ನು ವಿವರಿಸಿದ್ದಾರೆ.

AI ಶೃಂಗಸಭೆಗೆ ಆಗಮಿಸಿದ ಜಾಗತಿಕ ನಾಯಕರನ್ನು ಸ್ವಾಗತಿಸಿದ ಪ್ರಧಾನಿ ಮೋದಿ

ಭಾರತದಲ್ಲಿ ನಡೆಯುತ್ತಿರುವ AI ಇಂಪ್ಯಾಕ್ಟ್ ಶೃಂಗಸಭೆಗಾಗಿ ನವದೆಹಲಿಯ ಭಾರತ್ ಮಂಟಪಕ್ಕೆ ಹಲವು ದೇಶಗಳ ಗಣ್ಯರು ಆಗಮಿಸಿದ್ದಾರೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ವಿದೇಶಿ ಗಣ್ಯರು ಮತ್ತು ವಿಶ್ವ ನಾಯಕರನ್ನು ಸ್ವಾಗತಿಸಿದ್ದಾರೆ. ಕೃತಕ ಬುದ್ಧಿಮತ್ತೆಯ (ಎಐ) ಭವಿಷ್ಯವನ್ನು ರೂಪಿಸುವತ್ತ ಗಮನಹರಿಸುವ ಈ ಕಾರ್ಯಕ್ರಮದಲ್ಲಿ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಸೇರಿದಂತೆ ಹಲವು ಅತಿಥಿಗಳು ಪಾಲ್ಗೊಂಡಿದ್ದಾರೆ. ಶೃಂಗಸಭೆಯ ಅಧಿಕೃತ ಕಾರ್ಯಕಲಾಪಗಳಿಗೆ ಮುಂಚಿತವಾಗಿ ಪ್ರಧಾನಿಯವರು ಭೇಟಿ ನೀಡುವ ರಾಷ್ಟ್ರಗಳ ಮುಖ್ಯಸ್ಥರು ಮತ್ತು ಸರ್ಕಾರಿ ನಾಯಕರಿಗೆ ಔಪಚಾರಿಕ ಭೋಜನ ಕೂಟವನ್ನು ಆಯೋಜಿಸಿದ್ದರು.

ರಕ್ಷಣಾ ಪಾಲುದಾರಿಕೆ, AI ಸಹಯೋಗ, ರಫೇಲ್ ಜೆಟ್ ಖರೀದಿ; ಫ್ರಾನ್ಸ್​ ಜೊತೆ 20 ಒಪ್ಪಂದಗಳಿಗೆ ಸಹಿ ಹಾಕಿದ ಮೋದಿ

ಪ್ರಧಾನಿ ನರೇಂದ್ರ ಮೋದಿ ಇಂದು ಮುಂಬೈನಲ್ಲಿ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರನ್ನು ಭೇಟಿಯಾಗಿದ್ದಾರೆ. ಈ ವೇಳೆ ಇಬ್ಬರೂ ನಾಯಕರು ದ್ವಿಪಕ್ಷೀಯ ಮಾತುಕತೆ ನಡೆಸಿದರು. 114 ರಫೇಲ್ ಮತ್ತು ಹ್ಯಾಮರ್ ಕ್ಷಿಪಣಿಗಳ ಖರೀದಿ ಸೇರಿದಂತೆ ಹಲವು ಪ್ರಮುಖ ಒಪ್ಪಂದಕ್ಕೆ ಸಹಿ ಹಾಕಲಾಯಿತು. ರಕ್ಷಣಾ ಪಾಲುದಾರಿಕೆ, ಕೌಶಲ್ಯ ಮತ್ತು ಆರೋಗ್ಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಹಲವಾರು ಒಪ್ಪಂದಗಳಿಗೆ ಸಹಿ ಹಾಕಲಾಗಿದೆ.

ಮುಂಬೈನಲ್ಲಿ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್​​ಗೆ ಪ್ರಧಾನಿ ಮೋದಿಯಿಂದ ಅಪ್ಪುಗೆಯ ಸ್ವಾಗತ

ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಮುಂಬೈನ ಲೋಕ ಭವನಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಅವರನ್ನು ಪ್ರಧಾನಿ ಮೋದಿ ಭೇಟಿ ಮಾಡಿದ್ದಾರೆ. ಸೋಮವಾರ ರಾತ್ರಿ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅವರನ್ನು ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ರಾಜ್ಯಪಾಲ ಆಚಾರ್ಯ ದೇವವ್ರತ್ ಬರಮಾಡಿಕೊಂಡರು. ಇಂದು ಪ್ರಧಾನಿ ಮೋದಿ ಮುಂಬೈನ ಲೋಕ ಭವನದಲ್ಲಿ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರನ್ನು ಅಪ್ಪುಗೆಯೊಂದಿಗೆ ಸ್ವಾಗತಿಸಿದ್ದಾರೆ.

2 ದಿನಗಳ ಭೇಟಿಗೆ ಫೆ. 25ರಂದು ಪ್ರಧಾನಿ ಮೋದಿ ಇಸ್ರೇಲ್​ಗೆ ಪ್ರವಾಸ

ಫೆಬ್ರವರಿ 25 ಹಾಗೂ 26ರಂದು ಪ್ರಧಾನಿ ನರೇಂದ್ರ ಮೋದಿ ಇಸ್ರೇಲ್‌ಗೆ ಭೇಟಿ ನೀಡಲಿದ್ದಾರೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಘೋಷಿಸಿದ್ದಾರೆ. 'ಭಾರತ ಅತ್ಯಂತ ಶಕ್ತಿಶಾಲಿ ಮತ್ತು ಜನಪ್ರಿಯ ದೇಶವಾಗಿದೆ' ಎಂದು ಅವರು ಈ ವೇಳೆ ಬಣ್ಣಿಸಿದ್ದಾರೆ. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಇಸ್ರೇಲ್ ಹಣಕಾಸು ಸಚಿವ ಬೆಜಲೆಲ್ ಸ್ಮೋಟ್ರಿಚ್ ಅವರ ಭೇಟಿಯ ಸಮಯದಲ್ಲಿ ಎರಡೂ ದೇಶಗಳು ದ್ವಿಪಕ್ಷೀಯ ಹೂಡಿಕೆ ಒಪ್ಪಂದಕ್ಕೆ (ಬಿಐಟಿ) ಸಹಿ ಹಾಕಿದವು. ನಂತರ ಕಳೆದ ವರ್ಷ ನವೆಂಬರ್‌ನಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಅವರ ಇಸ್ರೇಲ್ ಭೇಟಿಯ ಸಮಯದಲ್ಲಿ ಎಫ್‌ಟಿಎಗೆ ಕಾರಣವಾಗುವ ನಿಯಮಗಳ ಉಲ್ಲೇಖ (ಟಿಒಆರ್) ಗೆ ಸಹಿ ಹಾಕಲಾಯಿತು.