Priyanka Chopra

Priyanka Chopra

ಪ್ರಿಯಾಂಕಾ ಚೋಪ್ರಾ ಭಾರತದ ನಟಿ ಹಾಗೂ ನಿರ್ಮಾಪಕಿ. 1982ರ ಜುಲೈ 18ರಂದು ಭಾರತದ ಜಮ್ಶೆಡ್‌ಪುರದಲ್ಲಿ ಜನಿಸಿದರು. 2000ರಲ್ಲಿ ವಿಶ್ವ ಸುಂದರಿ ಸ್ಪರ್ಧೆಯನ್ನು ಗೆದ್ದಿದ್ದಕ್ಕಾಗಿ ಅವರು ವ್ಯಾಪಕವಾದ ಮನ್ನಣೆಯನ್ನು ಪಡೆದರು. ಸಿನಿಮಾ ಕ್ಷೇತ್ರಕ್ಕೆ ಬರಲು ಇದು ಸಹಕಾರಿ ಆಯಿತು. ಪ್ರಿಯಾಂಕಾ ಬಾಲಿವುಡ್ ಮತ್ತು ಹಾಲಿವುಡ್ ಚಿತ್ರಗಳಲ್ಲಿ ನಟಿಸಿದ್ದಾರೆ. ‘ಫ್ಯಾಶನ್’, ‘ಬಾಜಿರಾವ್ ಮಸ್ತಾನಿ’, ‘ಡಾನ್’, ‘ಡಾನ್ 2’ ಸೇರಿ ಅನೇಕ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಈ ಮೂಲಕ ತಮ್ಮ ನಟನಾ ಕೌಶಲ್ಯವನ್ನು ಪ್ರದರ್ಶಿಸಿದ್ದಾರೆ. ಹಲವು ಸಾಮಾಜಿಕ ಕೆಲಸಗಳನ್ನು ಅವರು ಮಾಡಿದ್ದಾರೆ. ಅಮೆರಿಕದ ಪಾಪ್ ಸಿಂಗರ್ ನಿಕ್ ಜೋನಸ್ ಅವರನ್ನು ಪ್ರಿಯಾಂಕಾ ಮದುವೆ ಆಗಿದ್ದಾರೆ. ಈ ದಂಪತಿಗೆ ಮಾಲ್ತಿ ಹೆಸರಿನ ಮಗಳಿದ್ದಾಳೆ. ಈ ದಂಪತಿ ಸದ್ಯ ಅಮೆರಿಕದಲ್ಲಿ ನೆಲೆಸಿದ್ದಾರೆ.

ಇನ್ನೂ ಹೆಚ್ಚು ಓದಿ

ಶೂಟಿಂಗ್​ನಲ್ಲಿ ಗಾಯಗೊಂಡ ಪ್ರಿಯಾಂಕಾ ಚೋಪ್ರಾ; ವಿದೇಶದಲ್ಲಿ ಭಾರತದ ಮನೆಮದ್ದು

ಪ್ರಿಯಾಂಕಾ ಚೋಪ್ರಾ ಅವರು ವಿದೇಶದಲ್ಲಿ ನೆಲೆಸಿದ್ದರೂ ಕೂಡ ಭಾರತದ ಸಂಪ್ರದಾಯ ಮರೆತಿಲ್ಲ. ಚಿತ್ರೀಕರಣದ ವೇಳೆ ಗಾಯಗೊಂಡಿರುವ ಅವರು ಭಾರತೀಯ ಶೈಲಿಯ ಮನೆಮದ್ದು ಪ್ರಯೋಗಿಸಿದ್ದಾರೆ. ಆ ಬಗ್ಗೆ ತಮ್ಮ ಅಭಿಮಾನಿಗಳಿಗೂ ಅವರು ಮಾಹಿತಿ ನೀಡಿದ್ದಾರೆ. ‘ದ ಬ್ಲಫ್​’, ‘ಹೆಡ್ಸ್​ ಆಫ್​ ಸ್ಟೇಟ್​’ ಮುಂತಾದ ಸಿನಿಮಾಗಳಲ್ಲಿ ಪ್ರಿಯಾಂಕಾ ಚೋಪ್ರಾ ನಟಿಸುತ್ತಿದ್ದಾರೆ.

ಆ್ಯಕ್ಷನ್ ದೃಶ್ಯದ ವೇಳೆ ಪ್ರಿಯಾಂಕಾ ಚೋಪ್ರಾ ಕತ್ತಿಗೆ ಆಯ್ತು ಗಾಯ

ಆ್ಯಕ್ಷನ್ ಸಿನಿಮಾಗಳನ್ನು ಮಾಡೋ ಸಂದರ್ಭದಲ್ಲಿ ಈ ರೀತಿಯ ಸಮಸ್ಯೆ ಎದುರಾಗೋದು ಸಹಜ. ಹೀಗಾಗಿಯೇ ಪ್ರಿಯಾಂಕಾ ತೊಂದರೆ ಅನುಭವಿಸಿದ್ದಾರೆ.  ಈ ಮೊದಲು ಕೂಡ ಪ್ರಿಯಾಂಕಾ ಚೋಪ್ರಾ ಹಲವು ಬಾರಿ ಗಾಯಗೊಂಡಿದ್ದರು. ಆದರೆ, ಅವರು ಆ್ಯಕ್ಷನ್ ಸಿನಿಮಾಗಳಿಂದ ದೂರ ಹೋಗಿಲ್ಲ.

ಸ್ಕ್ರಿಪ್ಟ್​ ಮೇಲೆ ‘ಓಂ’ ಅಂತ ಬರೆದು ಕೆಲಸ ಶುರು ಮಾಡಿದ ಪ್ರಿಯಾಂಕಾ ಚೋಪ್ರಾ

ಪ್ರಿಯಾಂಕಾ ಚೋಪ್ರಾ ಅವರು ನಿಕ್​ ಜೋನಸ್​ ಅವರನ್ನು ಮದುವೆ ಆಗಿದ್ದರೂ ಕೂಡ ಹಿಂದೂ ಧರ್ಮದ ಆಚರಣೆಗಳನ್ನು ನಿಲ್ಲಿಸಿಲ್ಲ. ಅಮೆರಿಕದಲ್ಲಿ ಸೆಟ್ಲ್​ ಆಗಿರುವ ಅವರು ಈಗ ಹೊಸ ಸಿನಿಮಾದ ಕೆಲಸ ಶುರು ಮಾಡಿದ್ದಾರೆ. ಆ ಚಿತ್ರದ ಸ್ಕ್ರಿಪ್ಟ್​ ಮೇಲೆ ‘ಓಂ’ ಎಂದು ಬರೆಯುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಈ ಫೋಟೋ ವೈರಲ್​ ಆಗಿದೆ.

ವಿಜಯ್​ ಜತೆ ಸಿನಿಮಾ ಮಾಡಲ್ಲ ಅಂತ ಕಣ್ಣೀರು ಹಾಕಿದ್ದ ಪ್ರಿಯಾಂಕಾ ಚೋಪ್ರಾ

ನಟಿ ಪ್ರಿಯಾಂಕಾ ಚೋಪ್ರಾ ಅವರು ಮೊಟ್ಟ ಮೊದಲ ಬಾರಿ ತೆರೆ ಹಂಚಿಕೊಂಡಿದ್ದು ದಳಪತಿ ವಿಜಯ್​ ಜೊತೆ. ಆ ಸಿನಿಮಾದಲ್ಲಿ ನಟಿಸಲು ಆಫರ್​ ಬಂದಾಗ ಪ್ರಿಯಾಂಕಾ ಅವರು ಒಪ್ಪಿಕೊಳ್ಳಲು ಸಿದ್ಧರಿರಲಿಲ್ಲ. ಆ ಘಟನೆಯ ಬಗ್ಗೆ ಅವರ ತಾಯಿ ಮಧು ಚೋಪ್ರಾ ಈಗ ಮಾತನಾಡಿದ್ದಾರೆ. ತಮಿಳಿನಲ್ಲಿ ಮೊದಲ ಸಿನಿಮಾ ಮಾಡಿದ ಬಳಿಕ ಪ್ರಿಯಾಂಕಾ ಅವರು ಬಾಲಿವುಡ್​ನಲ್ಲಿ ಬ್ಯುಸಿ ಆದರು.

‘ಮೊಡವೆ ಆಗಿದ್ದಕ್ಕೆ ಅವಕಾಶ ಕಿತ್ತುಕೊಂಡು ಮನೆಗೆ ಕಳಿಸಿದ್ರು’: ಮನ್ನಾರಾ ಚೋಪ್ರಾ

ಅವಕಾಶಕ್ಕಾಗಿ ನಟಿ ಮನ್ನಾರಾ ಚೋಪ್ರಾ ಅವರು ಬಹಳ ಕಷ್ಟಪಟ್ಟಿದ್ದರು. ಹಲವು ಸುತ್ತುಗಳ ಆಡಿಷನ್​ ನೀಡಿ ಚಾನ್ಸ್​ ಪಡೆದುಕೊಂಡಿದ್ದರು. ಫೇರ್​ನೆಸ್​ ಕ್ರೀಮ್​ ಜಾಹೀರಾತಿನಲ್ಲಿ ಅವರು ನಟಿಸಬೇಕಿತ್ತು. ಆದೆ ಆ ಒಂದು ಅವಕಾಶ ದಿಢೀರ್​​ ಅಂತ ಕೈ ತಪ್ಪಿಹೋಯಿತು. ಅದಕ್ಕೆಲ್ಲ ಕಾರಣ ಆಗಿದ್ದು ಮೊಡವೆ! ಆ ಘಟನೆಯನ್ನು ಮನ್ನಾರಾ ಚೋಪ್ರಾ ಅವರು ಈಗ ಮೆಲುಕು ಹಾಕಿದ್ದಾರೆ.

ಸಂಜಯ್​ ಲೀಲಾ ಬನ್ಸಾಲಿ ಜೊತೆ ಪ್ರಿಯಾಂಕಾ ಚೋಪ್ರಾ ಹೊಸ ಸಿನಿಮಾ?

ಒಂದಷ್ಟು ಕೆಲಸಗಳ ಸಲುವಾಗಿ ಪ್ರಿಯಾಂಕಾ ಚೋಪ್ರಾ ಅವರು ಅಮೆರಿಕದಿಂದ ಮುಂಬೈಗೆ ಆಗಮಿಸಿದ್ದಾರೆ. ಅವರ ಪ್ರೊಡಕ್ಷನ್​ ಹೌಸ್​ ಕೂಡ ಇದೆ. ಅದರಲ್ಲಿ 3-4 ಪ್ರಾಜೆಕ್ಟ್​ಗಳನ್ನು ಸದ್ಯದಲ್ಲೇ ಆರಂಭಿಸಲಾಗುತ್ತಿದೆ. ಆ ಸಲುವಾಗಿ ಕೆಲವರ ಜೊತೆ ಪ್ರಿಯಾಂಕಾ ಚೋಪ್ರಾ ಮೀಟಿಂಗ್​ ನಡೆಸಿದ್ದಾರೆ. ಇದೇ ವೇಳೆ ಸಂಜಯ್​ ಲೀಲಾ ಬನ್ಸಾಲಿ ಜೊತೆಗೂ ಅವರು ಮಾತುಕತೆ ಮಾಡಿದ್ದಾರೆ ಎನ್ನಲಾಗಿದೆ.

41ರ ಪ್ರಾಯದ ಪ್ರಿಯಾಂಕಾ ಚೋಪ್ರಾ ಎಷ್ಟು ಫಿಟ್​ ಆಗಿದ್ದಾರೆ ನೋಡಿ..

ಹೆಣ್ಣು ಮಗುವಿನ ಆರೈಕೆಯಲ್ಲಿ ಬ್ಯುಸಿ ಆಗಿರುವ ಪ್ರಿಯಾಂಕಾ ಚೋಪ್ರಾ ಅವರು ಫಿಟ್ನೆಸ್​ ಬಗ್ಗೆಯೂ ಗಮನ ನೀಡಿದ್ದಾರೆ. ಈಗ ಅವರಿಗೆ 41 ವರ್ಷ ವಯಸ್ಸು. ಈ ಪ್ರಾಯದಲ್ಲಿ ಅವರು ಹದಿಹರೆಯದ ಹುಡುಗಿಯರೂ ನಾಚುವಂತೆ ಫಿಟ್ನೆಸ್​ ಕಾಪಾಡಿಕೊಂಡಿದ್ದಾರೆ. ಅವರ ಹೊಸ ಫೋಟೋ ವೈರಲ್​ ಆಗಿದೆ. ಅದನ್ನು ನೋಡಿ ಅಭಿಮಾನಿಗಳು ಮೆಚ್ಚುಗೆ ಸೂಚಿಸುತ್ತಿದ್ದಾರೆ.

ಅಭಿಮಾನಿಗಳ ಜೊತೆ ದುರ್ವರ್ತನೆ ತೋರಿದ್ದಾರೆ ಈ ಸೆಲೆಬ್ರಿಟಿಗಳು; ಇಲ್ಲಿದೆ ವಿವರ

ಸಿಂಗರ್​ ಆದಿತ್ಯ ನಾರಾಯಣ್ ಅವರ ಒಂದು ವಿಡಿಯೋ ಇತ್ತೀಚೆಗೆ ಸಖತ್​ ವೈರಲ್​ ಆಗಿತ್ತು. ಅವರ ವರ್ತನೆ ಬಗ್ಗೆ ಸಾಕಷ್ಟು ಚರ್ಚೆ ಆಗಿತ್ತು. ಅಭಿಮಾನಿಗೆ ಮೈಕ್​ನಿಂದ ಅವರು ಹೊಡೆದಿದ್ದಾರೆ ಎಂಬ ಆರೋಪವೂ ಇದೆ. ಸಾರ್ವಜನಿಕವಾಗಿ ಕಪಾಳ ಮೋಕ್ಷ ಮಾಡಿದ ಅನೇಕ ನಟ-ನಟಿಯರು ಇದ್ದಾರೆ. ಆ ಕುರಿತು ಇಲ್ಲಿದೆ ಮಾಹಿತಿ..

165 ಕೋಟಿ ಮೌಲ್ಯದ ಮನೆಯಿಂದ ಹೊರಬಂದ ಪ್ರಿಯಾಂಕಾ ಚೋಪ್ರಾ

Priyanka Chopra: ಪ್ರಿಯಾಂಕಾ ಚೋಪ್ರಾ ಹಾಗೂ ನಿಕ್ ಜೋನಸ್​ ತಮ್ಮ ಲಾಸ್ ಏಂಜಲ್ಸ್​ನ 165 ಕೋಟಿ ಮೌಲ್ಯದ ಮನೆ ತೊರೆದಿದ್ದಾರೆ. ಕಾರಣವೇನು?

Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ