AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Priyanka Chopra

Priyanka Chopra

ಪ್ರಿಯಾಂಕಾ ಚೋಪ್ರಾ ಭಾರತದ ನಟಿ ಹಾಗೂ ನಿರ್ಮಾಪಕಿ. 1982ರ ಜುಲೈ 18ರಂದು ಭಾರತದ ಜಮ್ಶೆಡ್‌ಪುರದಲ್ಲಿ ಜನಿಸಿದರು. 2000ರಲ್ಲಿ ವಿಶ್ವ ಸುಂದರಿ ಸ್ಪರ್ಧೆಯನ್ನು ಗೆದ್ದಿದ್ದಕ್ಕಾಗಿ ಅವರು ವ್ಯಾಪಕವಾದ ಮನ್ನಣೆಯನ್ನು ಪಡೆದರು. ಸಿನಿಮಾ ಕ್ಷೇತ್ರಕ್ಕೆ ಬರಲು ಇದು ಸಹಕಾರಿ ಆಯಿತು. ಪ್ರಿಯಾಂಕಾ ಬಾಲಿವುಡ್ ಮತ್ತು ಹಾಲಿವುಡ್ ಚಿತ್ರಗಳಲ್ಲಿ ನಟಿಸಿದ್ದಾರೆ. ‘ಫ್ಯಾಶನ್’, ‘ಬಾಜಿರಾವ್ ಮಸ್ತಾನಿ’, ‘ಡಾನ್’, ‘ಡಾನ್ 2’ ಸೇರಿ ಅನೇಕ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಈ ಮೂಲಕ ತಮ್ಮ ನಟನಾ ಕೌಶಲ್ಯವನ್ನು ಪ್ರದರ್ಶಿಸಿದ್ದಾರೆ. ಹಲವು ಸಾಮಾಜಿಕ ಕೆಲಸಗಳನ್ನು ಅವರು ಮಾಡಿದ್ದಾರೆ. ಅಮೆರಿಕದ ಪಾಪ್ ಸಿಂಗರ್ ನಿಕ್ ಜೋನಸ್ ಅವರನ್ನು ಪ್ರಿಯಾಂಕಾ ಮದುವೆ ಆಗಿದ್ದಾರೆ. ಈ ದಂಪತಿಗೆ ಮಾಲ್ತಿ ಹೆಸರಿನ ಮಗಳಿದ್ದಾಳೆ. ಈ ದಂಪತಿ ಸದ್ಯ ಅಮೆರಿಕದಲ್ಲಿ ನೆಲೆಸಿದ್ದಾರೆ.

ಇನ್ನೂ ಹೆಚ್ಚು ಓದಿ

ರಾಜಮೌಳಿ ಸಿನಿಮಾದಲ್ಲಿ ಮಂದಾಕಿನಿ ಆದ ಪ್ರಿಯಾಂಕಾ ಚೋಪ್ರಾ

‘ಎಸ್​ಎಸ್​ಎಂಬಿ 29’ ಸಿನಿಮಾದಿಂದ ಪ್ರಿಯಾಂಕಾ ಚೋಪ್ರಾ ಅವರ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ಪೋಸ್ಟರ್ ವೈರಲ್ ಆಗಿದೆ. ಮಂದಾಕಿನಿ ಎಂಬ ಪಾತ್ರವನ್ನು ಅವರು ಮಾಡುತ್ತಿದ್ದಾರೆ. ಎಸ್​ಎಸ್​ ರಾಜಮೌಳಿ ಅವರು ನಿರ್ದೇಶಿಸುತ್ತಿರುವ ಈ ಬಹುನಿರೀಕ್ಷಿತ ಸಿನಿಮಾ ಬಹಳ ಅದ್ದೂರಿಯಾಗಿ ಮೂಡಿಬರುತ್ತಿದೆ.

ಮಹೇಶ್ ಬಾಬು ಸಿನಿಮಾದಲ್ಲಿ ಆರ್. ಮಾಧವನ್? ಹಿರಿದಾಗುತ್ತಿದೆ ಪಾತ್ರವರ್ಗ

ಬಹುನಿರೀಕ್ಷಿತ ‘ಎಸ್​ಎಸ್​ಎಂಬಿ 29’ ಸಿನಿಮಾದ ಪಾತ್ರವರ್ಗದ ಬಗ್ಗೆ ಇಂಟರೆಸ್ಟಿಂಗ್ ವಿಷಯಗಳು ಬಹಿರಂಗ ಆಗುತ್ತಿವೆ. ರಾಜಮೌಳಿ, ಮಹೇಶ್ ಬಾಬು ಕಾಂಬಿನೇಷನ್​ನ ಈ ಸಿನಿಮಾಗೆ ಸ್ಟಾರ್ ಕಲಾವಿದರು ಒಬ್ಬೊಬ್ಬರಾಗಿಯೇ ಸೇರ್ಪಡೆ ಆಗುತ್ತಿದ್ದಾರೆ. ಪ್ರಿಯಾಂಕಾ ಚೋಪ್ರಾ, ಪೃಥ್ವಿರಾಜ್ ಸುಕುಮಾರನ್ ಬಳಿಕ ಆರ್. ಮಾಧವನ್ ಕೂಡ ಆಯ್ಕೆ ಆಗಿದ್ದಾರೆ ಎನ್ನಲಾಗುತ್ತಿದೆ.

‘ಕ್ರಿಶ್ 4’ ಸಿನಿಮಾಗೆ ಪ್ರಿಯಾಂಕಾ ಚೋಪ್ರಾ ನಾಯಕಿ? ಬಾಲಿವುಡ್ ಕಡೆಗೆ ಮತ್ತೆ ಒಲವು

ಕಳೆದ ಒಂದಷ್ಟು ವರ್ಷಗಳಿಂದ ಹಾಲಿವುಡ್​ನಲ್ಲೇ ಬ್ಯುಸಿ ಆಗಿರುವ ಪ್ರಿಯಾಂಕಾ ಚೋಪ್ರಾ ಅವರು ಈಗ ಮತ್ತೆ ಹಿಂದಿ ಚಿತ್ರದತ್ತ ಗಮನ ಹರಿಸಿದ್ದಾರೆ. ಹೃತಿಕ್ ರೋಷನ್ ನಟನೆಯ ‘ಕ್ರಿಶ್ 4’ ಸಿನಿಮಾಗೆ ಪ್ರಿಯಾಂಕಾ ಚೋಪ್ರಾ ನಾಯಕಿ ಆಗುತ್ತಾರೆ ಎನ್ನಲಾಗಿದೆ. ಈ ಬಗ್ಗೆ ಮಾಧ್ಯಮಗಳಲ್ಲಿ ವರದಿ ಆಗಿದೆ. ಆದರೆ ಚಿತ್ರತಂಡದವರು ಅಧಿಕೃತ ಹೇಳಿಕೆ ನೀಡುವುದು ಬಾಕಿ ಇದೆ.

ಅಲ್ಲು ಅರ್ಜುನ್​ಗೆ ಪ್ರಿಯಾಂಕಾ ಚೋಪ್ರಾ ನಾಯಕಿ? ನಿರ್ದೇಶಕ ಅಟ್ಲಿ ಮಾಸ್ಟರ್ ಪ್ಲ್ಯಾನ್

ಖ್ಯಾತ ನಿರ್ದೇಶಕ ಅಟ್ಲಿ ಅವರು ಅಲ್ಲು ಅರ್ಜುನ್ ಜೊತೆ ಸಿನಿಮಾ ಮಾಡಲಿದ್ದಾರೆ. ಆ ಪ್ರಾಜೆಕ್ಟ್​ಗೆ ಈಗಾಗಲೇ ತಯಾರಿ ನಡೆಯುತ್ತಿದೆ. ನಾಯಕಿಯಾಗಿ ಪ್ರಿಯಾಂಕಾ ಚೋಪ್ರಾ ಅವರನ್ನು ಆಯ್ಕೆ ಮಾಡಿಕೊಳ್ಳಲು ಅಟ್ಲಿ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಈಗಾಗಲೇ ಅವರು ಒಂದು ಸುತ್ತಿನ ಮಾತುಕಥೆ ನಡೆಸಿದ್ದಾರೆ ಎಂದು ವರದಿ ಆಗಿದೆ.

ಪ್ರಿಯಾಂಕಾ ಚೋಪ್ರಾಗಾಗಿ ಬೇಲಿ ಹಾರಿ ಮನೆಗೆ ನುಗ್ಗಿದ್ದ ಹುಡುಗ; ಘಟನೆ ವಿವರಿಸಿದ ತಾಯಿ

ಅಮೆರಿಕದಲ್ಲಿ ವಿದ್ಯಾಭ್ಯಾಸ ಮಾಡಿ ಬಂದಿದ್ದ ಪ್ರಿಯಾಂಕಾ ಚೋಪ್ರಾ ಅವರು ಬರೇಲಿಯಲ್ಲಿ ವೆಸ್ಟರ್ನ್ ಡ್ರೆಸ್ ಧರಿಸುತ್ತಿದ್ದರು. ಅವರನ್ನು ಫಾಲೋ ಮಾಡಿಕೊಂಡು ಹುಡುಗರು ಮನೆಗೆ ಬರುತ್ತಿದ್ದರು. ಆ ಘಟನೆಯನ್ನು ಈಗ ಪ್ರಿಯಾಂಕಾ ಚೋಪ್ರಾ ತಾಯಿ ಮಧು ಚೋಪ್ರಾ ನೆನಪಿಸಿಕೊಂಡಿದ್ದಾರೆ. ಆ ದಿನಗಳನ್ನು ಅವರು ಮೆಲುಕು ಹಾಕಿದ್ದಾರೆ.

ಮಹೇಶ್ ಬಾಬು ಜೊತೆಗಿನ ಸಿನಿಮಾಗೆ 30 ಕೋಟಿ ರೂ. ಸಂಭಾವನೆ ಪಡೆದ ಪ್ರಿಯಾಂಕಾ ಚೋಪ್ರಾ?

ಬಾಲಿವುಡ್ ಮತ್ತು ಹಾಲಿವುಡ್​ನಲ್ಲಿ ಗುರುತಿಸಿಕೊಂಡಿರುವ ನಟಿ ಪ್ರಿಯಾಂಕಾ ಚೋಪ್ರಾ ಅವರಿಗೆ ತುಂಬ ಬೇಡಿಕೆ ಇದೆ. ರಾಜಮೌಳಿ ನಿರ್ದೇಶನದ ಹೊಸ ಸಿನಿಮಾ ಅವರೇ ನಾಯಕಿ ಎಂದು ಹೇಳಲಾಗುತ್ತಿದೆ. ಈ ಸಿನಿಮಾಗಾಗಿ ಅವರು ದೊಡ್ಡ ಸಂಭಾವನೆ ಪಡೆಯುತ್ತಿದ್ದಾರೆ. ಮಹೇಶ್ ಬಾಬುಗೆ ಜೋಡಿಯಾಗಿ ಪ್ರಿಯಾಂಕಾ ಚೋಪ್ರಾ ನಟಿಸುತ್ತಾರೆ ಎನ್ನಲಾಗಿದೆ.

ಅಮೆರಿಕದಲ್ಲಿ ಪ್ರಿಯಾಂಕಾ ಚೋಪ್ರಾ ಜತೆ ‘ಫ್ಯಾಷನ್​’ ನಿರ್ದೇಶಕನ ಮಾತುಕತೆ; ಸೀಕ್ವೆಲ್ ಗುಮಾನಿ

ಖ್ಯಾತ ನಿರ್ದೇಶಕ ಮಧುರ್​ ಭಂಡರ್ಕರ್​ ಅವರು ಅಮೆರಿಕಕ್ಕೆ ತೆರಳಿದ್ದಾರೆ. ಅಲ್ಲಿ ಅವರು ಪ್ರಿಯಾಂಕಾ ಚೋಪ್ರಾ ಜೊತೆ ಮಾತುಕಥೆ ನಡೆಸಿದ್ದಾರೆ. ‘ಫ್ಯಾಷನ್​ 2’ ಸಿನಿಮಾ ಸಲುವಾಗಿ ಈ ಭೇಟಿ ನಡೆದಿರಬಹುದು ಎಂದು ಅಭಿಮಾನಿಗಳು ಊಹಿಸಿದ್ದಾರೆ. ಈ ಬಗ್ಗೆ ಮಧುರ್​ ಭಂಡರ್ಕರ್​ ಅವರು ಇನ್ನಷ್ಟೇ ಹೆಚ್ಚಿನ ಮಾಹಿತಿ ಬಿಟ್ಟುಕೊಡುವುದು ಬಾಕಿ ಇದೆ.

ಶೂಟಿಂಗ್​ನಲ್ಲಿ ಗಾಯಗೊಂಡ ಪ್ರಿಯಾಂಕಾ ಚೋಪ್ರಾ; ವಿದೇಶದಲ್ಲಿ ಭಾರತದ ಮನೆಮದ್ದು

ಪ್ರಿಯಾಂಕಾ ಚೋಪ್ರಾ ಅವರು ವಿದೇಶದಲ್ಲಿ ನೆಲೆಸಿದ್ದರೂ ಕೂಡ ಭಾರತದ ಸಂಪ್ರದಾಯ ಮರೆತಿಲ್ಲ. ಚಿತ್ರೀಕರಣದ ವೇಳೆ ಗಾಯಗೊಂಡಿರುವ ಅವರು ಭಾರತೀಯ ಶೈಲಿಯ ಮನೆಮದ್ದು ಪ್ರಯೋಗಿಸಿದ್ದಾರೆ. ಆ ಬಗ್ಗೆ ತಮ್ಮ ಅಭಿಮಾನಿಗಳಿಗೂ ಅವರು ಮಾಹಿತಿ ನೀಡಿದ್ದಾರೆ. ‘ದ ಬ್ಲಫ್​’, ‘ಹೆಡ್ಸ್​ ಆಫ್​ ಸ್ಟೇಟ್​’ ಮುಂತಾದ ಸಿನಿಮಾಗಳಲ್ಲಿ ಪ್ರಿಯಾಂಕಾ ಚೋಪ್ರಾ ನಟಿಸುತ್ತಿದ್ದಾರೆ.

ಆ್ಯಕ್ಷನ್ ದೃಶ್ಯದ ವೇಳೆ ಪ್ರಿಯಾಂಕಾ ಚೋಪ್ರಾ ಕತ್ತಿಗೆ ಆಯ್ತು ಗಾಯ

ಆ್ಯಕ್ಷನ್ ಸಿನಿಮಾಗಳನ್ನು ಮಾಡೋ ಸಂದರ್ಭದಲ್ಲಿ ಈ ರೀತಿಯ ಸಮಸ್ಯೆ ಎದುರಾಗೋದು ಸಹಜ. ಹೀಗಾಗಿಯೇ ಪ್ರಿಯಾಂಕಾ ತೊಂದರೆ ಅನುಭವಿಸಿದ್ದಾರೆ.  ಈ ಮೊದಲು ಕೂಡ ಪ್ರಿಯಾಂಕಾ ಚೋಪ್ರಾ ಹಲವು ಬಾರಿ ಗಾಯಗೊಂಡಿದ್ದರು. ಆದರೆ, ಅವರು ಆ್ಯಕ್ಷನ್ ಸಿನಿಮಾಗಳಿಂದ ದೂರ ಹೋಗಿಲ್ಲ.

ಸ್ಕ್ರಿಪ್ಟ್​ ಮೇಲೆ ‘ಓಂ’ ಅಂತ ಬರೆದು ಕೆಲಸ ಶುರು ಮಾಡಿದ ಪ್ರಿಯಾಂಕಾ ಚೋಪ್ರಾ

ಪ್ರಿಯಾಂಕಾ ಚೋಪ್ರಾ ಅವರು ನಿಕ್​ ಜೋನಸ್​ ಅವರನ್ನು ಮದುವೆ ಆಗಿದ್ದರೂ ಕೂಡ ಹಿಂದೂ ಧರ್ಮದ ಆಚರಣೆಗಳನ್ನು ನಿಲ್ಲಿಸಿಲ್ಲ. ಅಮೆರಿಕದಲ್ಲಿ ಸೆಟ್ಲ್​ ಆಗಿರುವ ಅವರು ಈಗ ಹೊಸ ಸಿನಿಮಾದ ಕೆಲಸ ಶುರು ಮಾಡಿದ್ದಾರೆ. ಆ ಚಿತ್ರದ ಸ್ಕ್ರಿಪ್ಟ್​ ಮೇಲೆ ‘ಓಂ’ ಎಂದು ಬರೆಯುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಈ ಫೋಟೋ ವೈರಲ್​ ಆಗಿದೆ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ