Priyanka Gandhi Vadra
ಪ್ರಿಯಾಂಕಾ ಗಾಂಧಿ ವಾದ್ರಾ: ಕೇರಳದ ವಯನಾಡಿನಲ್ಲಿ ರಾಹುಲ್ ಗಾಂಧಿಯಿಂದ ತೆರವಾದ ಸ್ಥಾನಕ್ಕೆ ಪ್ರಿಯಾಂಕಾ ಸ್ಪರ್ಧಿಸಿ ನಾಲ್ಕು ಲಕ್ಷಗಳ ಅಂತರದಿಂದ ಗೆಲುವು ಸಾಧಿಸಿದ್ದರು. ದಶಕಗಳಲ್ಲಿ ಮೊದಲ ಬಾರಿಗೆ, ನೆಹರು-ಗಾಂಧಿ ಕುಟುಂಬದ ಮೂವರೂ-ಸೋನಿಯಾ, ರಾಹುಲ್ ಮತ್ತು ಪ್ರಿಯಾಂಕಾ-ಇದೀಗ ಸಂಸತ್ತಿನ ಭಾಗವಾಗಿದ್ದಾರೆ. ಮೊದಲು ತಾಯಿ ಸೋನಿಯಾ ಮತ್ತು ಸಹೋದರ ರಾಹುಲ್ ಗಾಂಧಿ ಪರ ಪ್ರಚಾರ ಮಾಡುತ್ತಿದ್ದ ಪ್ರಿಯಾಂಕ ಅವರನ್ನು, ನಂತರ ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಗೆ ಉಸ್ತುವಾರಿಯನ್ನಾಗಿ ಮಾಡಲಾಗಿತ್ತು. ಇದಾದ ನಂತರ ಪಕ್ಷದ ಸ್ಟಾರ್ ಕ್ಯಾಂಪೇನರ್ ಆದ ಪ್ರಿಯಾಂಕ, ಇದೇ ಮೊದಲ ಬಾರಿಗೆ ಚುನಾವಣಾ ರಾಜಕೀಯಕ್ಕೆ ಇಳಿದಿದ್ದಾರೆ.
2019ರ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅಮೇಠಿ ಮತ್ತು ವಯನಾಡ್ ನಿಂದ ಸ್ಪರ್ಧಿಸಿದ್ದರು. ಆ ಪೈಕಿ, ಅಮೇಠಿಯಲ್ಲಿ ಸೋತ ಹಿನ್ನಲೆಯಲ್ಲಿ ವಯನಾಡ್ ಕ್ಷೇತ್ರವನ್ನು ಉಳಿಸಿಕೊಂಡಿದ್ದರು.
‘ಪ್ರಜಾಪ್ರಭುತ್ವದ ಗೆಲುವು’; ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿರೋಧ ಪಕ್ಷಗಳ ಪ್ರತಿಕ್ರಿಯೆ
ದೇಶಾದ್ಯಂತ ಭುಗಿಲೆದ್ದಿದ್ದ ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆಯನ್ನು ವಿರೋಧಿಸಿ ನಡೆದ ಭಾರೀ ಪ್ರತಿಭಟನೆಗೆ ಕೇಂದ್ರ ಸರ್ಕಾರ ತಲೆಬಾಗಿದೆ. ಇಂದು ಮಧ್ಯಾಹ್ನ ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಇದರ ಬೆನ್ನಲ್ಲೇ ಕೇಂದ್ರ ಸಚಿವರಾದ ಜೆಪಿ ನಡ್ಡಾ ಮತ್ತು ಜಿತೇಂದ್ರ ಸಿಂಗ್ ಸಿಜೆಪಿ ವಕ್ತಾರರ ಜೊತೆ ಮೂರನೇ ಸುತ್ತಿನ ಮಾತುಕತೆ ನಡೆಸುತ್ತಿದ್ದಾರೆ. ಧರ್ಮೇಂದ್ರ ಪ್ರಧಾನ್ ರಾಜೀನಾಮೆಯ ಕುರಿತು ವಿರೋಧ ಪಕ್ಷಗಳು ಹೇಳಿದ್ದೇನು? ಎಂಬುದರ ಮಾಹಿತಿ ಇಲ್ಲಿದೆ.
- Sushma Chakre
- Updated on: Jul 25, 2026
- 4:59 pm
ಪ್ರಶ್ನೆಪತ್ರಿಕೆ ಸೋರಿಕೆ ಇಡೀ ದೇಶದ ಸಮಸ್ಯೆ, ತಡೆಯಲು ಗೆಹ್ಲೋಟ್ ಯತ್ನಿಸಿದರೂ ಸಾಧ್ಯವಾಗಲಿಲ್ಲ, ಪ್ರಿಯಾಂಕಾ ಗಾಂಧಿ ಮುಕ್ತ ಮಾತು
ಪ್ರಶ್ನೆಪತ್ರಿಕೆ ಸೋರಿಕೆ ಇಡೀ ದೇಶವನ್ನು ಕಾಡುತ್ತಿರುವ ಬೃಹತ್ ಸಮಸ್ಯೆ. ಇದು ಯುವಕರ ಭವಿಷ್ಯದ ಮೇಲೆ ತೀವ್ರ ಪರಿಣಾಮ ಬೀರುತ್ತಿದೆ. ಸರ್ಕಾರಗಳು ಬದಲಾದರೂ ಈ ಸಾಂಸ್ಥಿಕ ಅಕ್ರಮ ತಡೆಯಲು ವಿಫಲವಾಗಿವೆ. ರಾಜಸ್ಥಾನದಲ್ಲಿ ಗೆಹ್ಲೋಟ್ ಸರ್ಕಾರ ಯತ್ನಿಸಿದರೂ ತಡೆಯಲಾಗಲಿಲ್ಲ ಎಂದು ಪ್ರಿಯಾಂಕಾ ಗಾಂಧಿಯೇ ಮುಕ್ತವಾಗಿ ಒಪ್ಪಿಕೊಂಡಿದ್ದಾರೆ. ಇದು ಕೇವಲ ರಾಜಕೀಯ ವಿಷಯವಲ್ಲ, ಬದಲಿಗೆ ಶಿಕ್ಷಣ ವ್ಯವಸ್ಥೆಯ ಆಳವಾದ ಸಮಸ್ಯೆಯಾಗಿದೆ.
- Nayana Rajeev
- Updated on: Jul 22, 2026
- 11:26 am
ಪೊಲೀಸ್ ಠಾಣೆಗೆ ಸೋನಿಯಾ ಗಾಂಧಿ ಭೇಟಿ; ಕೊನೆಗೂ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಬಿಡುಗಡೆ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಲೋಕ್ ಕಲ್ಯಾಣ್ ಮಾರ್ಗದಲ್ಲಿರುವ ಅಧಿಕೃತ ನಿವಾಸದ ಹೊರಗೆ ಬೃಹತ್ ಪ್ರತಿಭಟನೆ ನಡೆಸಿ ದೆಹಲಿ ಪೊಲೀಸರಿಂದ ವಶಕ್ಕೆ ಪಡೆಯಲಾಗಿದ್ದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ, ಸಮಾಜವಾದಿ ಪಾರ್ಟಿ ಅಧ್ಯಕ್ಷ ಅಖಿಲೇಶ್ ಯಾದವ್ ಸೇರಿದಂತೆ ಹಿರಿಯ ವಿಪಕ್ಷ ನಾಯಕರನ್ನು ಪೊಲೀಸರು ಕೆಲವೇ ಗಂಟೆಗಳ ಬಂಧನದ ನಂತರ ಬಿಡುಗಡೆ ಮಾಡಿದ್ದಾರೆ. ಪ್ರತಿಭಟನಾ ಸ್ಥಳದಿಂದ ವಶಕ್ಕೆ ಪಡೆಯಲಾಗಿದ್ದ ನಾಯಕರನ್ನು ಬೇರೆ ಬೇರೆ ಸ್ಥಳಗಳಲ್ಲಿ ಬಂಧನದಲ್ಲಿಡಲಾಗಿತ್ತು.
- Sushma Chakre
- Updated on: Jul 21, 2026
- 11:02 pm
ಬಿಜೆಪಿ ನಾಯಕರು ಹೇಡಿಗಳು, ನಮಗೆ ಹೆದರುತ್ತಿದ್ದಾರೆ; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
ಪ್ರಶ್ನೆಪತ್ರಿಕೆ ಸೋರಿಕೆ ಹಗರಣದ ಹೊಣೆಗಾರಿಕೆ, ವಿದ್ಯಾರ್ಥಿ ಪ್ರತಿಭಟನಾಕಾರರ ಮೇಲಿನ ಪೊಲೀಸ್ ದೌರ್ಜನ್ಯದ ವಿರುದ್ಧ ಕ್ರಮ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ರಾಜಾಜಿ ಮಾರ್ಗದಿಂದ ಲೋಕ್ ಕಲ್ಯಾಣ್ ಮಾರ್ಗದತ್ತ ಮೆರವಣಿಗೆ ನಡೆಸಿದರು. ಪೋಲಿಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯುತ್ತಿದ್ದಂತೆ ಪ್ರಿಯಾಂಕಾ ಗಾಂಧಿ ಅವರು ಸರ್ಕಾರದ ಈ ಕ್ರಮವನ್ನು ತೀವ್ರವಾಗಿ ಟೀಕಿಸಿದರು.
- Sushma Chakre
- Updated on: Jul 21, 2026
- 10:26 pm
ನೀಟ್ ಅಕ್ರಮ ಖಂಡಿಸಿ ಪ್ರಧಾನಿ ನಿವಾಸದ ಹೊರಗೆ ಕಾಂಗ್ರೆಸ್ ಧರಣಿ; ಮೋದಿ ರಾಜೀನಾಮೆಗೆ ರಾಹುಲ್ ಗಾಂಧಿ, ಖರ್ಗೆ ಒತ್ತಾಯ
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಗರಣ ಮತ್ತು 'ಕಾಕ್ರೋಚ್ ಜನತಾ ಪಾರ್ಟಿ' (CJP) ಯುವ ಪ್ರತಿಭಟನಾಕಾರರ ಮೇಲಿನ ಪೊಲೀಸ್ ದೌರ್ಜನ್ಯವನ್ನು ಖಂಡಿಸಿ, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ನವದೆಹಲಿಯಲ್ಲಿ ಪ್ರಧಾನಿ ನಿವಾಸದ ಮುಂದೆ ಬೃಹತ್ ಪ್ರತಿಭಟನೆ ನಡೆಸಿದ್ದಾರೆ.
- Sushma Chakre
- Updated on: Jul 21, 2026
- 6:34 pm
ವಯನಾಡು ‘ಕೈ’ ಕಚೇರಿ ಬಳಿಯೇ ರಾಹುಲ್, ಪ್ರಿಯಾಂಕಾ ವಿರುದ್ಧ ರಾರಾಜಿಸಿದ ಪೋಸ್ಟರ್!
ವಯನಾಡು ಡಿಸಿಸಿ ಕಚೇರಿ ಹೊರಗೆ ರಾಹುಲ್, ಪ್ರಿಯಾಂಕಾ ವಿರುದ್ಧ ಪೋಸ್ಟರ್ ರಾರಾಜಿಸಿವೆ. "ವಯನಾಡ್ ಮರೆಯಿರಿ, ಮತ್ತೆ ಗೆಲ್ಲುವುದಿಲ್ಲ" ಎಂದು ಅದರಲ್ಲಿ ಬರೆದಿದ್ದು, ಸಿಎಂ ಘೋಷಣೆ ವಿಳಂಬದಿಂದ ಕಾಂಗ್ರೆಸ್ ಕಾರ್ಯಕರ್ತರ ಅಸಮಾಧಾನ ಹೆಚ್ಚಾಗಿದೆ ಎನ್ನಲಾಗಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ. ಸಿ, ವೇಣುಗೋಪಾಲ್ ಅವರನ್ನು ಉಲ್ಲೇಖಿಸಿ, ರಾಹುಲ್, ಕೆಸಿ ನಿಮ್ಮ ಬ್ಯಾಗ್ ಹೊರುವವರಾಗಿರಬಹುದು. ಆದರೆ ಕೇರಳದ ಜನರು ನಿಮ್ಮನ್ನು ಕ್ಷಮಿಸುವುದಿಲ್ಲ ಎಂದು ಎಚ್ಚರಿಸಲಾಗಿದೆ.
- Prasanna Hegde
- Updated on: May 13, 2026
- 2:29 pm
ಹಳೆಯ ಮಹಿಳಾ ಮೀಸಲಾತಿ ಮಸೂದೆ ಮಂಡಿಸಿ; ಪ್ರಧಾನಿ ಮೋದಿಗೆ ಪ್ರಿಯಾಂಕಾ ಗಾಂಧಿ ಸವಾಲು
ಮಹಿಳಾ ಮೀಸಲಾತಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರವಾಗಲು ವಿಫಲವಾಗಿದೆ. ವಿಪಕ್ಷಗಳಿಂದಾಗಿ ಬಹುಮತ ಲಭ್ಯವಾಗದ ಕಾರಣದಿಂದ ಎನ್ಡಿಎ ತೀವ್ರ ವಾಗ್ದಾಳಿ ನಡೆಸಿತ್ತು. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ,'ಹಳೆಯ ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡಿಸಿ. ಆಗ ನಾವೆಲ್ಲರೂ ಮತ ಚಲಾಯಿಸುತ್ತೇವೆ ಮತ್ತು ನಿಮ್ಮನ್ನು ಬೆಂಬಲಿಸುತ್ತೇವೆ' ಎಂದು ಪ್ರಧಾನಿ ಮೋದಿಗೆ ಸವಾಲು ಹಾಕಿದ್ದಾರೆ.
- Sushma Chakre
- Updated on: Apr 18, 2026
- 4:27 pm
ನಿಮ್ಮ ಪ್ಲಾನ್ ನೋಡಿ ಚಾಣಕ್ಯನೂ ಶಾಕ್ ಆಗುತ್ತಿದ್ದ; ಅಮಿತ್ ಶಾಗೆ ಪ್ರಿಯಾಂಕಾ ಗಾಂಧಿ ತಮಾಷೆ
3 ಮಸೂದೆಗಳ ಮಂಡನೆಗಾಗಿ ಇಂದು ಸಂಸತ್ನ ವಿಶೇಷ ಅಧಿವೇಶನ ಕರೆಯಲಾಗಿತ್ತು. ಮಹಿಳಾ ಮೀಸಲಾತಿಯ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಉದ್ದೇಶಿಸಿ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಮಾತನಾಡಿರುವ ವಿಡಿಯೋ ವೈರಲ್ ಆಗಿದೆ. ಪ್ರಿಯಾಂಕಾ ಗಾಂಧಿಯ ಮಾತು ಕೇಳಿ ಗೃಹ ಸಚಿವ ಅಮಿತ್ ಶಾ ನಗುತ್ತಾ ಕುಳಿತಿದ್ದರು. ಅದನ್ನು ನೋಡಿದ ಪ್ರಿಯಾಂಕಾ ಗಾಂಧಿ ಅಮಿತ್ ಶಾ ಅವರನ್ನು ತತ್ವಜ್ಞಾನಿ ಮತ್ತು ರಾಜಕೀಯ ತಂತ್ರಜ್ಞ ಚಾಣಕ್ಯ ಅವರ ಜೊತೆ ಹೋಲಿಸಿ ತಮಾಷೆ ಮಾಡಿದ್ದಾರೆ.
- Sushma Chakre
- Updated on: Apr 16, 2026
- 9:09 pm
ಕರ್ನಾಟಕ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ? ಬಿಗ್ ಅಪ್ಡೇಟ್ ಕೊಟ್ಟ ರಾಬರ್ಟ್ ವಾದ್ರಾ
ಬೆಂಗಳೂರಿಗೆ ಆಗ್ರಹಿಸಿರುವ ರಾಬರ್ಟ್ ವಾದ್ರಾ ಇಸ್ಕಾನ್ ದೇವಸ್ಥಾನ, ಮಸೀದಿ ಮತ್ತು ಮಿಷನರೀಸ್ ಆಫ್ ಚಾರಿಟಿ ಸೇವಾ ಕೇಂದ್ರಗಳಿಗೆ ಭೇಟಿ ನೀಡಿದ್ದಾರೆ. ಕರ್ನಾಟಕದ ಜನರು ಪ್ರೀತಿ ತೋರಿಸಿದ್ದು, ಬೆಂಗಳೂರು ಎರಡನೇ ಮನೆಯಂತಿದೆ ಎಂದು ಅವರು ಹೇಳಿದ್ದಾರೆ. ರಾಜ್ಯದಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರು ಒಟ್ಟಾಗಿ ಜನರ ಪ್ರಗತಿಗೆ ಶ್ರಮಿಸುತ್ತಿದ್ದು, ನಾಯಕತ್ವ ಬದಲಾವಣೆಯ ಯಾವುದೇ ಸಾಧ್ಯತೆಯ ಬಗ್ಗೆ ತಮಗೆ ಮಾಹಿತಿ ಇಲ್ಲ ಎಂದು ತಿಳಿಸಿದ್ದಾರೆ.
- Malatesh Jaggin
- Updated on: Feb 27, 2026
- 6:45 pm
ನಾವು ಯಾರನ್ನೂ ನಿಂದಿಸಿಲ್ಲ; ಸಚಿವ ಕಿರಣ್ ರಿಜಿಜು ಹೇಳಿಕೆಗೆ ಪ್ರಿಯಾಂಕಾ ಗಾಂಧಿ ತಿರುಗೇಟು
ಕಾಂಗ್ರೆಸ್ ಸಂಸದರು ಸ್ಪೀಕರ್ ಕೊಠಡಿಯೊಳಗೆ ನುಗ್ಗಿ, ಅವರನ್ನು ನಿಂದಿಸಿ, ಪ್ರಧಾನಿ ಮೋದಿಗೂ ಬೆದರಿಕೆ ಹಾಕಿದ್ದಾರೆ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ವಿಡಿಯೋವೊಂದನ್ನು ರಿಲೀಸ್ ಮಾಡಿದ್ದರು. ಬಿಜೆಪಿ ಸಚಿವರ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ನಾವು ಯಾರಿಗೂ ಯಾವುದೇ ನಿಂದನೆ ಮಾಡಿಲ್ಲ ಎಂದು ಹೇಳಿದ್ದಾರೆ. 20ರಿಂದ 25 ಕಾಂಗ್ರೆಸ್ ಸಂಸದರು ಓಂ ಬಿರ್ಲಾ ಅವರನ್ನು ತಮ್ಮ ಕೊಠಡಿಯಲ್ಲಿ ನಿಂದಿಸಿದ್ದಾರೆ. ಅಲ್ಲಿದ್ದ ಹಿರಿಯ ಕಾಂಗ್ರೆಸ್ ನಾಯಕರಾದ ಕೆ.ಸಿ. ವೇಣುಗೋಪಾಲ್ ಮತ್ತು ಪ್ರಿಯಾಂಕಾ ಗಾಂಧಿ ಅವರನ್ನು ತಡೆಯಲಿಲ್ಲ ಎಂದು ಕಿರಣ್ ರಿಜಿಜು ಹೇಳಿಕೆ ನೀಡಿದ್ದರು.
- Sushma Chakre
- Updated on: Feb 12, 2026
- 5:16 pm
ಪ್ರಧಾನಿ ಮೋದಿ ಕೂಡ ವಿದೇಶ ಪ್ರವಾಸದಲ್ಲೇ ಇರುತ್ತಾರಲ್ಲ; ರಾಹುಲ್ ಕುರಿತ ಬಿಜೆಪಿ ಟೀಕೆಗೆ ಪ್ರಿಯಾಂಕಾ ಗಾಂಧಿ ತಿರುಗೇಟು
ಬಿಜೆಪಿ ಇಂದು ಕಾಂಗ್ರೆಸ್ ಸಂಸದ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಮುಂಬರುವ ಜರ್ಮನಿ ಪ್ರವಾಸದ ಬಗ್ಗೆ ಟೀಕಾಪ್ರಹಾರ ನಡೆಸಿದ್ದಾರೆ. ಲೋಕಸಭಾ ಅಧಿವೇಶನದ ವೇಳೆ ವಿದೇಶಕ್ಕೆ ಹೋಗುತ್ತಾರೆ, ಆಮೇಲೆ ಬಂದು ನನಗೆ ಮಾತನಾಡಲು ಅವಕಾಶವೇ ಸಿಗಲಿಲ್ಲ ಎನ್ನುತ್ತಾರೆ ಎಂದು ಬಿಜೆಪಿ ನಾಯಕರು ಟೀಕಿಸಿದ್ದಾರೆ. ಈ ಹೇಳಿಕೆಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕೂಡ ವಿದೇಶ ಪ್ರವಾಸದಲ್ಲೇ ಇರುತ್ತಾರೆ ಎನ್ನುವ ಮೂಲಕ ಅವರು ಬಿಜೆಪಿಗೆ ತಿರುಗೇಟು ನೀಡಿದ್ದಾರೆ.
- Sushma Chakre
- Updated on: Dec 10, 2025
- 6:13 pm
ಕಾಂಗ್ರೆಸ್ ವಂದೇ ಮಾತರಂ ಅನ್ನು ಮೊಟಕುಗೊಳಿಸದಿದ್ದರೆ ಭಾರತ ವಿಭಜನೆಯಾಗುತ್ತಿರಲಿಲ್ಲ; ರಾಜ್ಯಸಭೆಯಲ್ಲಿ ಅಮಿತ್ ಶಾ ಟೀಕೆ
ಒಂದುವೇಳೆ, ವಂದೇ ಮಾತರಂ ಗೀತೆಯನ್ನು ಓಲೈಕೆಗಾಗಿ ಮೊಟಕುಗೊಳಿಸದಿದ್ದರೆ ಭಾರತ ವಿಭಜನೆಯಾಗುತ್ತಿರಲಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಮತ್ತೊಮ್ಮೆ ರಾಜ್ಯಸಭೆಯಲ್ಲಿ ನೆಹರೂ, ಇಂದಿರಾ ಗಾಂಧಿಯನ್ನು ಅಮಿತ್ ಶಾ ಟೀಕಿಸಿದ್ದಾರೆ. ಪಶ್ಚಿಮ ಬಂಗಾಳದ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಎನ್ಡಿಎ ಸರ್ಕಾರ ವಂದೇ ಮಾತರಂ ಕುರಿತು ಸಂಸದೀಯ ಚರ್ಚೆಯನ್ನು ಪ್ರಸ್ತಾಪಿಸಿದೆ ಎಂಬ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಆರೋಪಕ್ಕೆ ಅಮಿತ್ ಶಾ ತಿರುಗೇಟು ನೀಡಿದ್ದಾರೆ.
- Sushma Chakre
- Updated on: Dec 9, 2025
- 6:22 pm