AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Priyanka Gandhi Vadra

Priyanka Gandhi Vadra

ಪ್ರಿಯಾಂಕಾ ಗಾಂಧಿ ವಾದ್ರಾ: ಕೇರಳದ ವಯನಾಡಿನಲ್ಲಿ ರಾಹುಲ್​ ಗಾಂಧಿಯಿಂದ ತೆರವಾದ ಸ್ಥಾನಕ್ಕೆ ಪ್ರಿಯಾಂಕಾ ಸ್ಪರ್ಧಿಸಿ ನಾಲ್ಕು ಲಕ್ಷಗಳ ಅಂತರದಿಂದ ಗೆಲುವು ಸಾಧಿಸಿದ್ದರು. ದಶಕಗಳಲ್ಲಿ ಮೊದಲ ಬಾರಿಗೆ, ನೆಹರು-ಗಾಂಧಿ ಕುಟುಂಬದ ಮೂವರೂ-ಸೋನಿಯಾ, ರಾಹುಲ್ ಮತ್ತು ಪ್ರಿಯಾಂಕಾ-ಇದೀಗ ಸಂಸತ್ತಿನ ಭಾಗವಾಗಿದ್ದಾರೆ. ಮೊದಲು ತಾಯಿ ಸೋನಿಯಾ ಮತ್ತು ಸಹೋದರ ರಾಹುಲ್ ಗಾಂಧಿ ಪರ ಪ್ರಚಾರ ಮಾಡುತ್ತಿದ್ದ ಪ್ರಿಯಾಂಕ ಅವರನ್ನು, ನಂತರ ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಗೆ ಉಸ್ತುವಾರಿಯನ್ನಾಗಿ ಮಾಡಲಾಗಿತ್ತು. ಇದಾದ ನಂತರ ಪಕ್ಷದ ಸ್ಟಾರ್ ಕ್ಯಾಂಪೇನರ್ ಆದ ಪ್ರಿಯಾಂಕ, ಇದೇ ಮೊದಲ ಬಾರಿಗೆ ಚುನಾವಣಾ ರಾಜಕೀಯಕ್ಕೆ ಇಳಿದಿದ್ದಾರೆ.
2019ರ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅಮೇಠಿ ಮತ್ತು ವಯನಾಡ್ ನಿಂದ ಸ್ಪರ್ಧಿಸಿದ್ದರು. ಆ ಪೈಕಿ, ಅಮೇಠಿಯಲ್ಲಿ ಸೋತ ಹಿನ್ನಲೆಯಲ್ಲಿ ವಯನಾಡ್ ಕ್ಷೇತ್ರವನ್ನು ಉಳಿಸಿಕೊಂಡಿದ್ದರು.

ಇನ್ನೂ ಹೆಚ್ಚು ಓದಿ

ಪ್ರಧಾನಿ ಮೋದಿ ಕೂಡ ವಿದೇಶ ಪ್ರವಾಸದಲ್ಲೇ ಇರುತ್ತಾರಲ್ಲ; ರಾಹುಲ್ ಕುರಿತ ಬಿಜೆಪಿ ಟೀಕೆಗೆ ಪ್ರಿಯಾಂಕಾ ಗಾಂಧಿ ತಿರುಗೇಟು

ಬಿಜೆಪಿ ಇಂದು ಕಾಂಗ್ರೆಸ್ ಸಂಸದ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಮುಂಬರುವ ಜರ್ಮನಿ ಪ್ರವಾಸದ ಬಗ್ಗೆ ಟೀಕಾಪ್ರಹಾರ ನಡೆಸಿದ್ದಾರೆ. ಲೋಕಸಭಾ ಅಧಿವೇಶನದ ವೇಳೆ ವಿದೇಶಕ್ಕೆ ಹೋಗುತ್ತಾರೆ, ಆಮೇಲೆ ಬಂದು ನನಗೆ ಮಾತನಾಡಲು ಅವಕಾಶವೇ ಸಿಗಲಿಲ್ಲ ಎನ್ನುತ್ತಾರೆ ಎಂದು ಬಿಜೆಪಿ ನಾಯಕರು ಟೀಕಿಸಿದ್ದಾರೆ. ಈ ಹೇಳಿಕೆಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕೂಡ ವಿದೇಶ ಪ್ರವಾಸದಲ್ಲೇ ಇರುತ್ತಾರೆ ಎನ್ನುವ ಮೂಲಕ ಅವರು ಬಿಜೆಪಿಗೆ ತಿರುಗೇಟು ನೀಡಿದ್ದಾರೆ.

ಕಾಂಗ್ರೆಸ್ ವಂದೇ ಮಾತರಂ ಅನ್ನು ಮೊಟಕುಗೊಳಿಸದಿದ್ದರೆ ಭಾರತ ವಿಭಜನೆಯಾಗುತ್ತಿರಲಿಲ್ಲ; ರಾಜ್ಯಸಭೆಯಲ್ಲಿ ಅಮಿತ್ ಶಾ ಟೀಕೆ

ಒಂದುವೇಳೆ, ವಂದೇ ಮಾತರಂ ಗೀತೆಯನ್ನು ಓಲೈಕೆಗಾಗಿ ಮೊಟಕುಗೊಳಿಸದಿದ್ದರೆ ಭಾರತ ವಿಭಜನೆಯಾಗುತ್ತಿರಲಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಮತ್ತೊಮ್ಮೆ ರಾಜ್ಯಸಭೆಯಲ್ಲಿ ನೆಹರೂ, ಇಂದಿರಾ ಗಾಂಧಿಯನ್ನು ಅಮಿತ್ ಶಾ ಟೀಕಿಸಿದ್ದಾರೆ. ಪಶ್ಚಿಮ ಬಂಗಾಳದ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಎನ್‌ಡಿಎ ಸರ್ಕಾರ ವಂದೇ ಮಾತರಂ ಕುರಿತು ಸಂಸದೀಯ ಚರ್ಚೆಯನ್ನು ಪ್ರಸ್ತಾಪಿಸಿದೆ ಎಂಬ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಆರೋಪಕ್ಕೆ ಅಮಿತ್ ಶಾ ತಿರುಗೇಟು ನೀಡಿದ್ದಾರೆ.

ವಂದೇ ಮಾತರಂ ಕುರಿತ ನೆಹರು ಪತ್ರ ಓದಿದ ಪ್ರಿಯಾಂಕಾ ಗಾಂಧಿ, ಬಿಜೆಪಿಗೆ ತರಾಟೆ

ಸಂಸತ್ ಅಧಿವೇಶನದಲ್ಲಿ ಇಂದು ವಂದೇ ಮಾತರಂ ಗೀತೆಯ ಬಗ್ಗೆ ತೀವ್ರ ಚರ್ಚೆಗಳು ನಡೆದಿವೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರ ಹೆಸರನ್ನು ಪ್ರಸ್ತಾಪಿಸಿದ್ದರು. ಈ ಹಿನ್ನೆಲೆಯಲ್ಲಿ ತಿರುಗೇಟು ನೀಡಿರುವ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ, 'ನೀವು ಚುನಾವಣೆಗಾಗಿ ಇಲ್ಲಿದ್ದೀರಿ, ನಾವು ದೇಶಕ್ಕಾಗಿ ಇಲ್ಲಿದ್ದೇವೆ' ಎಂದು ಟೀಕಾಪ್ರಹಾರ ನಡೆಸಿದ್ದಾರೆ. ಅಲ್ಲದೆ, ಸುಭಾಷ್ ಚಂದ್ರ ಬೋಸ್​​ಗೆ ವಂದೇ ಮಾತರಂ ಕುರಿತು ನೆಹರು ಬರೆದಿದ್ದ ಪತ್ರವನ್ನು ಕೂಡ ಓದಿದ್ದಾರೆ.

ಅಕ್ರಮ ಹಣ ವರ್ಗಾವಣೆ ಪ್ರಕರಣ; ರಾಬರ್ಟ್ ವಾದ್ರಾ ವಿರುದ್ಧ ಇಡಿ ಹೊಸ ಚಾರ್ಜ್​​ಶೀಟ್ ಸಲ್ಲಿಕೆ

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಅವರ ಪತಿ ರಾಬರ್ಟ್ ವಾದ್ರಾ ವಿರುದ್ಧ ಇಡಿ ಹೊಸ ಆರೋಪಪಟ್ಟಿ ಸಲ್ಲಿಸಿದೆ. ಈ ಮೂಲಕ ಕಪ್ಪು ಹಣ ಪ್ರಕರಣದಲ್ಲಿ ರಾಬರ್ಟ್ ವಾದ್ರಾಗೆ ಹೊಸ ಸಂಕಷ್ಟ ಎದುರಾಗಿದೆ. ಯುಕೆ ಮೂಲದ ರಕ್ಷಣಾ ಡೀಲರ್ ಸಂಜಯ್ ಭಂಡಾರಿಗೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಉದ್ಯಮಿ ರಾಬರ್ಟ್ ವಾದ್ರಾ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಹೊಸ ಚಾರ್ಜ್​​ಶೀಟ್ ಸಲ್ಲಿಸಿದೆ.

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್​ ಕುಮಾರ್​ಗೆ ಬಹಿರಂಗವಾಗಿ ಧಮ್ಕಿ ಹಾಕಿದ ಪ್ರಿಯಾಂಕಾ ಗಾಂಧಿ

ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಭಾರತೀಯ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್​ ಕುಮಾರ್​ಗೆ ಬೆದರಿಕೆ ಹಾಕಿದ್ದಾರೆ. ರಿಗಾದಲ್ಲಿ ನಡೆದ ರ‍್ಯಾಲಿಯಲ್ಲಿ ಸಭ್ಯತೆಯನ್ನು ಮರೆತು ವರ್ತಿಸಿದ್ದಾರೆ.  ‘‘ನೀವು ನೆಮ್ಮದಿಯಿಂದ ನಿವೃತ್ತರಾಗಲು ಸಾಧ್ಯವಿಲ್ಲ, ಜ್ಞಾನೇಶ್ ಕುಮಾರ್ ಅವರ ಹೆಸರನ್ನು ನೀವು ಎಂದಿಗೂ ಮರೆಯಬಾರದು ಎಂದು ನಾನು ಸಾವ್ಝನಿಕರಲ್ಲಿ ಮನವಿ ಮಾಡುತ್ತೇನೆ’’ ಎಂದ ಪ್ರಿಯಾಂಕಾ ಎಸ್​ಎಸ್ ಸಂಧು ಹಾಗೂ ವಿವೇಕ್ ಜೋಶಿ ಹೆಸರುಗಳನ್ನು ಕೂಡ ಹೇಳಿದ್ದಾರೆ.

ಎನ್‌ಇಪಿ ಮತ್ತು ಪಿಎಂಶ್ರೀ ಕುರಿತ ಪ್ರಿಯಾಂಕಾ ಗಾಂಧಿ ಹೇಳಿಕೆಗೆ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಆಕ್ರೋಶ

ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಅವರು NEP 2020 ಮತ್ತು ಪಿಎಂ ಶ್ರೀ ಶಾಲೆಗಳ ವಿರುದ್ಧ ಹೇಳಿಕೆ ನೀಡಿದ್ದು, ಅವು ಮಕ್ಕಳ ಬ್ರೈನ್ ವಾಶ್ ಮಾಡುವ ಪ್ರಯತ್ನಗಳಾಗಿವೆ ಎಂದು ಕರೆದಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಪ್ರಿಯಾಂಕಾ ಗಾಂಧಿಯ ಹೇಳಿಕೆಗಳನ್ನು "ಅಜ್ಞಾನ ಮತ್ತು ರಾಜಕೀಯ ಅವಕಾಶವಾದ" ಎಂದು ಕರೆದಿದ್ದಾರೆ. ಧರ್ಮೇಂದ್ರ ಪ್ರಧಾನ್ ಅವರು NEP ಮತ್ತು ಪಿಎಂ ಶ್ರೀಗಳನ್ನು ಭಾರತದ 21ನೇ ಶತಮಾನದ ಸವಾಲುಗಳಿಗೆ ನಡೆದ ಪ್ರಮುಖ ಶಿಕ್ಷಣ ಸುಧಾರಣೆಗಳು ಎಂದು ಬಣ್ಣಿಸಿದ್ದಾರೆ.

ವಯನಾಡಿಗೆ ಕರ್ನಾಟಕ ಸರ್ಕಾರದಿಂದ 10 ಕೋಟಿ ರೂ. ವಿಶೇಷ ಅನುದಾನ: ‘ಕೇರಳ ಸಿಎಂ ಸಿದ್ದರಾಮಯ್ಯ’ ಎಂದು ಅಶೋಕ್ ವ್ಯಂಗ್ಯ

ಕರ್ನಾಟಕ ಕಾಂಗ್ರೆಸ್ ಸರ್ಕಾರವು ಕೇರಳದ ವಯನಾಡು ಲೋಕಸಭಾ ಕ್ಷೇತ್ರಕ್ಕೆ ಭೂಕುಸಿತ ಸಂತ್ರಸ್ತರ ಪುನರ್​ವಸತಿಗಾಗಿ 10 ಕೋಟಿ ರೂಪಾಯಿಗಳ ವಿಶೇಷ ಅನುದಾನ ಘೋಷಿಸಿರುವುದು ಬಿಜೆಪಿಯಿಂದ ತೀವ್ರ ಟೀಕೆಗೆ ಗುರಿಯಾಗಿದೆ. ಈ ಹಿಂದೆ ವಯನಾಡಿನಲ್ಲಿ ಆನೆ ದಾಳಿಯಿಂದ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ಘೋಷಿಸಿದ್ದಂತೆ ಇದೂ ರಾಜಕೀಯ ವಿವಾದಕ್ಕೆ ಕಾರಣವಾಗಿದೆ.

ಟಿ-ಶರ್ಟ್​ ಮೇಲೆ ನನ್ನ ಫೋಟೊ ಹಾಕೋಕೆ ಯಾರ್ರೀ ಪರ್ಮಿಷನ್ ಕೊಟ್ಟೋರು? ಪ್ರಿಯಾಂಕಾ ವಿರುದ್ಧ ಮಿಂಟಾ ದೇವಿ ವಾಗ್ದಾಳಿ

ಟಿ-ಶರ್ಟ್​ ಮೇಲೆ ನನ್ನ ಹೆಸರು, ಫೋಟೊ ಹಾಕೋಕೆ ಯಾರ್ರೀ ಪರ್ಮಿಷನ್ ಕೊಟ್ಟೋರು ಎಂದು ರಾಹುಲ್ ಹಾಗೂ ಪ್ರಿಯಾಂಕಾ ಗಾಂಧಿ ವಿರುದ್ಧ ಮಿಂಟಾ ದೇವಿ ವಾಗ್ದಾಳಿ ನಡೆಸಿದ್ದಾರೆ. ಬಿಹಾರದ ಸಿವಾನ್‌ನ ಮಿಂಟಾ ದೇವಿ ಅವರು ದೆಹಲಿಯಲ್ಲಿ ಮಿಂಟಾ ದೇವಿ ಹೆಸರಿರುವ ಟಿ-ಶರ್ಟ್ ಧರಿಸಿ ಪ್ರತಿಭಟನೆ ನಡೆಸುತ್ತಿದ್ದರಿಂದ ಇದ್ದಕ್ಕಿದ್ದಂತೆ ಸುದ್ದಿಯಾದರು. ಆದರೆ ತನ್ನ ಯಾಕೆ ನೀವು ರಾಜಕೀಯಕ್ಕೆ ಎಳೆಯುತ್ತಿದ್ದೀರಾ ಎಂದು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ಇತಿಹಾಸವನ್ನೆಲ್ಲ ಹೇಳಿದ್ರಲ್ಲ 11 ವರ್ಷದಿಂದ ನೀವೇನು ಮಾಡಿದ್ರಿ? ಸಂಸತ್​​ನಲ್ಲಿ ಪ್ರಿಯಾಂಕಾ ಗಾಂಧಿ ಟೀಕೆ

ಸಂಸತ್ ಅಧಿವೇಶನದಲ್ಲಿ ಕಾಂಗ್ರೆಸ್ ನಾಯಕಿ ಹಾಗೂ ಸಂಸದೆ ಪ್ರಿಯಾಂಕಾ ಗಾಂಧಿ ಇಂದು ಮಾಡಿರುವ ದಿಟ್ಟ ಭಾಷಣ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರಿಂದ ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ. ಪಹಲ್ಗಾಮ್ ದಾಳಿಗೆ ಭದ್ರತಾ ವೈಫಲ್ಯವೇ ಕಾರಣ ಎಂದು ಪ್ರಿಯಾಂಕಾ ಗಾಂಧಿ ಟೀಕಿಸಿದ್ದಾರೆ. ಜನರು ನಿಮ್ಮ ಸರ್ಕಾರವನ್ನು ನಂಬಿ ಪ್ರವಾಸಕ್ಕೆ ಹೋದರು. ಆದರೆ, ನೀವು ಅವರ ನಂಬಿಕೆಯನ್ನು ಉಳಿಸಿಕೊಳ್ಳಲಿಲ್ಲ ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

Video:ವಯನಾಡು: ಪ್ರಿಯಾಂಕಾ ಗಾಂಧಿಯಿಂದ ಉದ್ಘಾಟನೆಗೊಳ್ಳುವ ಹೊತ್ತಲ್ಲೇ ಬಿದ್ದ ನಾಮಫಲಕ

ಕಾಂಗ್ರೆಸ್ ನಾಯಕಿ ಮತ್ತು ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಕುರಿತಾದ ವೀಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಕೇರಳದ ವಯನಾಡ್‌ನಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಅನಾವರಣಗೊಳಿಸಬೇಕಿದ್ದ ನಾಮಫಲಕವು ಉದ್ಘಾಟನೆಗೊಳ್ಳುವ ಮುನ್ನವೇ ವೇದಿಕೆ ಮೇಲೆ ಮುರಿದುಬಿದ್ದಿರುವ ಘಟನೆ ನಡೆದಿದೆ.

ಬಿಜೆಪಿಯ ರಾಜಕೀಯ ಪಿತೂರಿ; ಇಡಿ ಸಮನ್ಸ್ ಬಳಿಕ ರಾಬರ್ಟ್ ವಾದ್ರಾ ಆರೋಪ

ಇಡಿ ಜಾರಿ ಮಾಡಿರುವ ಸಮನ್ಸ್ ಅನ್ನು "ಬಿಜೆಪಿಯ ರಾಜಕೀಯ ದ್ವೇಷ" ಎಂದು ಕರೆದ ರಾಬರ್ಟ್ ವಾದ್ರಾ ಅವರನ್ನು ಭೂ ವ್ಯವಹಾರಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಆರೋಪದ ಮೇಲೆ ವಿಚಾರಣೆಗೆ ಒಳಪಡಿಸಲಾಗಿದೆ. "ಅವರು ತನಿಖಾ ಸಂಸ್ಥೆಗಳ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಾರೆ. ನನಗೆ ಯಾವುದೇ ಭಯವಿಲ್ಲ. ನನಗೆ ಮರೆಮಾಡಲು ಏನೂ ಇಲ್ಲ" ಎಂದು 56 ವರ್ಷದ ಉದ್ಯಮಿ ರಾಬರ್ಟ್ ವಾದ್ರಾ ಕಾಂಗ್ರೆಸ್ ಬೆಂಬಲಿಗರ ಜೊತೆ ಮೆರವಣಿಗೆ ನಡೆಸಿದರು.

Robert Vadra: ಭೂ ಅವ್ಯವಹಾರ ಆರೋಪ, ಸಮನ್ಸ್​, ಇಡಿ ಕಚೇರಿಗೆ ಹಾಜರಾದ ರಾಬರ್ಟ್​ ವಾದ್ರಾ

ಉದ್ಯಮಿ ರಾಬರ್ಟ್ ವಾದ್ರಾ(Robert Vadra) ಸಂಕಷ್ಟ ಮತ್ತೆ ಬಂದೊದಗಿದೆ. ಭೂ ಅವ್ಯವಹಾರದ ಆರೋಪಕ್ಕೆ ಸಂಧಿಸಿದಂತೆ ಜಾರಿ ನಿರ್ದೇಶನಾಲಯ ಈಗಾಗಲೇ ಸಮನ್ಸ್​ ಕಳುಹಿಸಿದ್ದು, ಇಂದು ಇಡಿ ಕಚೇರಿಗೆ ವಾದ್ರಾ ಹಾಜರಾಗಿದ್ದಾರೆ. ಇದು ರಾಬರ್ಟ್ ವಾದ್ರಾಗೆ ಕಳುಹಿಸಲಾದ ಎರಡನೇ ಸಮನ್ಸ್ ಆಗಿದ್ದು, ಹರ್ಯಾಣ ಭೂ ವ್ಯವಹಾರ ಪ್ರಕರಣದಲ್ಲಿ ರಾಬರ್ಟ್ ವಾದ್ರಾ ಅವರನ್ನು ಇಂದು ವಿಚಾರಣೆಗೆ ಒಳಪಡಿಸಲಾಗಿದೆ.