
Priyanka Gandhi Vadra
ಪ್ರಿಯಾಂಕಾ ಗಾಂಧಿ ವಾದ್ರಾ: ಕೇರಳದ ವಯನಾಡಿನಲ್ಲಿ ರಾಹುಲ್ ಗಾಂಧಿಯಿಂದ ತೆರವಾದ ಸ್ಥಾನಕ್ಕೆ ಪ್ರಿಯಾಂಕಾ ಸ್ಪರ್ಧಿಸಿ ನಾಲ್ಕು ಲಕ್ಷಗಳ ಅಂತರದಿಂದ ಗೆಲುವು ಸಾಧಿಸಿದ್ದರು. ದಶಕಗಳಲ್ಲಿ ಮೊದಲ ಬಾರಿಗೆ, ನೆಹರು-ಗಾಂಧಿ ಕುಟುಂಬದ ಮೂವರೂ-ಸೋನಿಯಾ, ರಾಹುಲ್ ಮತ್ತು ಪ್ರಿಯಾಂಕಾ-ಇದೀಗ ಸಂಸತ್ತಿನ ಭಾಗವಾಗಿದ್ದಾರೆ. ಮೊದಲು ತಾಯಿ ಸೋನಿಯಾ ಮತ್ತು ಸಹೋದರ ರಾಹುಲ್ ಗಾಂಧಿ ಪರ ಪ್ರಚಾರ ಮಾಡುತ್ತಿದ್ದ ಪ್ರಿಯಾಂಕ ಅವರನ್ನು, ನಂತರ ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಗೆ ಉಸ್ತುವಾರಿಯನ್ನಾಗಿ ಮಾಡಲಾಗಿತ್ತು. ಇದಾದ ನಂತರ ಪಕ್ಷದ ಸ್ಟಾರ್ ಕ್ಯಾಂಪೇನರ್ ಆದ ಪ್ರಿಯಾಂಕ, ಇದೇ ಮೊದಲ ಬಾರಿಗೆ ಚುನಾವಣಾ ರಾಜಕೀಯಕ್ಕೆ ಇಳಿದಿದ್ದಾರೆ.
2019ರ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅಮೇಠಿ ಮತ್ತು ವಯನಾಡ್ ನಿಂದ ಸ್ಪರ್ಧಿಸಿದ್ದರು. ಆ ಪೈಕಿ, ಅಮೇಠಿಯಲ್ಲಿ ಸೋತ ಹಿನ್ನಲೆಯಲ್ಲಿ ವಯನಾಡ್ ಕ್ಷೇತ್ರವನ್ನು ಉಳಿಸಿಕೊಂಡಿದ್ದರು.
ಬಿಜೆಪಿಯ ರಾಜಕೀಯ ಪಿತೂರಿ; ಇಡಿ ಸಮನ್ಸ್ ಬಳಿಕ ರಾಬರ್ಟ್ ವಾದ್ರಾ ಆರೋಪ
ಇಡಿ ಜಾರಿ ಮಾಡಿರುವ ಸಮನ್ಸ್ ಅನ್ನು "ಬಿಜೆಪಿಯ ರಾಜಕೀಯ ದ್ವೇಷ" ಎಂದು ಕರೆದ ರಾಬರ್ಟ್ ವಾದ್ರಾ ಅವರನ್ನು ಭೂ ವ್ಯವಹಾರಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಆರೋಪದ ಮೇಲೆ ವಿಚಾರಣೆಗೆ ಒಳಪಡಿಸಲಾಗಿದೆ. "ಅವರು ತನಿಖಾ ಸಂಸ್ಥೆಗಳ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಾರೆ. ನನಗೆ ಯಾವುದೇ ಭಯವಿಲ್ಲ. ನನಗೆ ಮರೆಮಾಡಲು ಏನೂ ಇಲ್ಲ" ಎಂದು 56 ವರ್ಷದ ಉದ್ಯಮಿ ರಾಬರ್ಟ್ ವಾದ್ರಾ ಕಾಂಗ್ರೆಸ್ ಬೆಂಬಲಿಗರ ಜೊತೆ ಮೆರವಣಿಗೆ ನಡೆಸಿದರು.
- Sushma Chakre
- Updated on: Apr 15, 2025
- 4:04 pm
Robert Vadra: ಭೂ ಅವ್ಯವಹಾರ ಆರೋಪ, ಸಮನ್ಸ್, ಇಡಿ ಕಚೇರಿಗೆ ಹಾಜರಾದ ರಾಬರ್ಟ್ ವಾದ್ರಾ
ಉದ್ಯಮಿ ರಾಬರ್ಟ್ ವಾದ್ರಾ(Robert Vadra) ಸಂಕಷ್ಟ ಮತ್ತೆ ಬಂದೊದಗಿದೆ. ಭೂ ಅವ್ಯವಹಾರದ ಆರೋಪಕ್ಕೆ ಸಂಧಿಸಿದಂತೆ ಜಾರಿ ನಿರ್ದೇಶನಾಲಯ ಈಗಾಗಲೇ ಸಮನ್ಸ್ ಕಳುಹಿಸಿದ್ದು, ಇಂದು ಇಡಿ ಕಚೇರಿಗೆ ವಾದ್ರಾ ಹಾಜರಾಗಿದ್ದಾರೆ. ಇದು ರಾಬರ್ಟ್ ವಾದ್ರಾಗೆ ಕಳುಹಿಸಲಾದ ಎರಡನೇ ಸಮನ್ಸ್ ಆಗಿದ್ದು, ಹರ್ಯಾಣ ಭೂ ವ್ಯವಹಾರ ಪ್ರಕರಣದಲ್ಲಿ ರಾಬರ್ಟ್ ವಾದ್ರಾ ಅವರನ್ನು ಇಂದು ವಿಚಾರಣೆಗೆ ಒಳಪಡಿಸಲಾಗಿದೆ.
- Nayana Rajeev
- Updated on: Apr 15, 2025
- 11:42 am
ಪ್ರಿಯಾಂಕಾ ಗಾಂಧಿಗೆ ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷೆ ಸ್ಥಾನ ಸಿಗುವ ಸಾಧ್ಯತೆ
Priyanka Gandhi: ಕಾಂಗ್ರೆಸ್ ಪಕ್ಷದ ಮೂಲಗಳ ಪ್ರಕಾರ, ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಪ್ರಸ್ತುತ ಯಾವುದೇ ನಿರ್ದಿಷ್ಟ ಸಾಂಸ್ಥಿಕ ಜವಾಬ್ದಾರಿಯಿಲ್ಲದೆ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ಹೊಂದಿದ್ದರೂ ಸಹ ತೆರೆಮರೆಯಲ್ಲಿ ಕಾಂಗ್ರೆಸ್ನಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಗುಜರಾತ್ನಿಂದ ಪ್ರಾರಂಭಿಸಿ ಜಿಲ್ಲಾ ಅಧ್ಯಕ್ಷರನ್ನು ಸಬಲೀಕರಣಗೊಳಿಸುವ ಗುರಿಯನ್ನು ಹೊಂದಿರುವ ಪೈಲಟ್ ಯೋಜನೆಯ ನೀಲನಕ್ಷೆ ಕಾಂಗ್ರೆಸ್ ಪಕ್ಷಕ್ಕೆ ಪ್ರಿಯಾಂಕಾ ಗಾಂಧಿಯ ಇತ್ತೀಚಿನ ಕೊಡುಗೆಗಳಲ್ಲಿ ಒಂದಾಗಿದೆ.
- Sushma Chakre
- Updated on: Apr 14, 2025
- 4:28 pm
Fact Check: ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರಿಯಾಂಕಾ ಗಾಂಧಿ ಪ್ರತಿಭಟನೆ ಎಂದು 2022ರ ವಿಡಿಯೋ ವೈರಲ್
Priyanka Gandhi Waqf Protest: ಪ್ರಿಯಾಂಕಾ ಗಾಂಧಿ ಅವರು ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ಧ ಪ್ರತಿಭಟಿಸುತ್ತಿದ್ದಾರೆ ಎಂಬ ಹೇಳಿಕೆಯೊಂದಿಗೆ ಅನೇಕ ಬಳಕೆದಾರರು ಸೋಷಿಯಲ್ ಮೀಡಿಯಾದಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳುತ್ತಿದ್ದಾರೆ. ಈ ಸುದ್ದಿಯ ಸತ್ಯಾಸತ್ಯತೆಯನ್ನು ಪರಿಶೋದಿಸಿದಾಗ ಸುಳ್ಳು ಹೇಳಿಕೆಯೊಂದಿಗೆ ವಿಡಿಯೋ ವೈರಲ್ ಆಗುತ್ತಿದೆ ಎಂಬುದು ಕಂಡುಬಂದಿದೆ. ಅಸಲಿಗೆ ಈ ವೈರಲ್ ವಿಡಿಯೋ ಇತ್ತೀಚಿನದಲ್ಲ, ಇದು 2022 ರದ್ದಾಗಿದೆ.
- Vinay Bhat
- Updated on: Apr 9, 2025
- 4:42 pm
Video: ಅವರು ಯಾವ ಗ್ರಹದಲ್ಲಿ ವಾಸಿಸುತ್ತಿದ್ದಾರೋ ಗೊತ್ತಿಲ್ಲ, ಪ್ರಿಯಾಂಕಾ ಗಾಂಧಿ ಹೇಳಿದ್ದು ಯಾರಿಗೆ?
ಅವರು ಯಾವ ಗ್ರಹದಲ್ಲಿ ವಾಸಿಸುತ್ತಿದ್ದಾರೋ ಗೊತ್ತಿಲ್ಲ ಎಂದು ಸಂಸದೆ ಪ್ರಿಯಾಂಕಾ ಗಾಂಧಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಂಗಳವಾರ ಸಂಸತ್ತಿನಲ್ಲಿ ಬಜೆಟ್ ಮೇಲಿನ ಸಾಮಾನ್ಯ ಚರ್ಚೆ ನಡೆಯಿತು. ಈ ಸಂದರ್ಭದಲ್ಲಿ ನಿರ್ಮಲಾ ಸೀತಾರಾಮನ್ ಅವರ ಉತ್ತರಕ್ಕೆ ಪ್ರತಿಕ್ರಿಯಿಸುತ್ತಾ ತೀವ್ರ ವಾಗ್ದಾಳಿ ನಡೆಸಿದರು. ಅವರು ಯಾವ ಗ್ರಹದಲ್ಲಿ ವಾಸಿಸುತ್ತಿದ್ದಾರೋ ನನಗೆ ಗೊತ್ತಿಲ್ಲ, ಹಣದುಬ್ಬರವಿಲ್ಲ, ನಿರುದ್ಯೋಗ ಹೆಚ್ಚಿಲ್ಲ, ಬೆಲೆ ಏರಿಕೆ ಇಲ್ಲವೇ ಇಲ್ಲ ಎನ್ನುತ್ತಿದ್ದಾರೆ ಅವರಿಗೆ ಪ್ರಸ್ತುತ ಪರಿಸ್ಥಿತಿ ಬಗ್ಗೆ ತಿಳಿವಳಿಕೆ ಇಲ್ಲದಿರಬಹುದು ಎಂದು ಹೇಳಿದ್ದಾರೆ.
- Nayana Rajeev
- Updated on: Feb 12, 2025
- 8:09 am
Delhi Assembly Poll Results; ಜನ ಬದಲಾವಣೆ ಬಯಸಿದ್ದರು ಮತ್ತು ಬದಲಾವಣೆಗಾಗಿ ವೋಟು ಮಾಡಿದ್ದಾರೆ: ಪ್ರಿಯಾಂಕಾ ಗಾಂಧಿ, ಸಂಸದೆ
ತಮ್ಮ ಪಕ್ಷದ ಬಗ್ಗೆ ಮಾತಾಡಿದ ಪ್ರಿಯಾಂಕಾ, ತಾವೆಲ್ಲ ಹೆಚ್ಚು ಶ್ರಮವಹಿಸಿ ಕೆಲಸ ಮಾಡಬೇಕಿದೆ ಅನ್ನೋದನ್ನು ಈ ಚುನಾವಣೆ ನಿರೂಪಿಸಿದೆ, ಜನರೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿರಬೇಕು ಮತ್ತು ಅವರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಹೇಳಿದರು. ಪ್ರಿಯಾಂಕಾ ಮತ್ತು ರಾಹುಲ್ ಗಾಂಧಿ ಏನೇ ಹೇಳಿದರೂ ದೆಹಲಿಯಲ್ಲಿ ಕಾಂಗ್ರೆಸ್ ಗೆ ಇಂಥ ಸ್ಥಿತಿ ಬಂದೀತು ಅಂತ ಕಟ್ಟಾ ಕಾಂಗ್ರೆಸ್ ಭಕ್ತನೂ ಎಣಿಸಿರಲಿಲ್ಲ.
- Arun Belly
- Updated on: Feb 8, 2025
- 2:16 pm
ನನ್ನ ಅಮ್ಮನಿಗೂ ವಯಸ್ಸಾಗಿದೆ; ರಾಷ್ಟ್ರಪತಿ ಕುರಿತ ಸೋನಿಯಾ ಗಾಂಧಿ ಹೇಳಿಕೆಗೆ ಪ್ರಿಯಾಂಕಾ ಗಾಂಧಿ ಸಮರ್ಥನೆ
ರಾಷ್ಟ್ರಪತಿ ದ್ರೌಪದಿ ಮುರ್ಮು ಕುರಿತು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಇಂದು ನೀಡಿದ್ದ ಹೇಳಿಕೆ ಭಾರೀ ಚರ್ಚೆಗೆ ಒಳಗಾಗಿದೆ. ಸೋನಿಯಾ ಗಾಂಧಿ ರಾಷ್ಟ್ರಪತಿಗಳಿಗೆ ಕ್ಷಮೆ ಯಾಚಿಸಬೇಕು ಎಂದು ಬಿಜೆಪಿ ಒತ್ತಾಯಿಸಿದೆ. ರಾಷ್ಟ್ರಪತಿ ಭವನ ಕೂಡ ಸೋನಿಯಾ ಗಾಂಧಿ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ, ಪ್ರಕಟಣೆ ಬಿಡುಗಡೆ ಮಾಡಿದೆ. ಇದೀಗ ಪ್ರಿಯಾಂಕಾ ಗಾಂಧಿ ವಾದ್ರಾ ತಮ್ಮ ತಾಯಿಯ ಹೇಳಿಕೆಯನ್ನು ಸಮರ್ಥನೆ ಮಾಡಿಕೊಂಡಿದ್ದಾರೆ.
- Sushma Chakre
- Updated on: Jan 31, 2025
- 9:40 pm
ಅಮಿತ್ ಶಾ ಅಂಬೇಡ್ಕರ್ರನ್ನು ಅಪಮಾನಿಸಿಲ್ಲ, ಸ್ವಾತಂತ್ರ್ಯ ಹೋರಾಟಗಾರರನ್ನು ಅಪಮಾನಿಸಿದ್ದಾರೆ: ಪ್ರಿಯಾಂಕಾ ಗಾಂಧಿ
ಬೆಳಗಾವಿಯ ಗಾಂಧಿ ಭಾರತ ಸಮಾವೇಶದಲ್ಲಿ ಪ್ರಿಯಾಂಕಾ ಗಾಂಧಿ ಅವರು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ಮಾಡಿದ್ದಾರೆ. ಆರ್ಟಿಐ ಕಾಯ್ದೆ ರದ್ದು, ರೈತರ ನಿರ್ಲಕ್ಷ್ಯ, ಸಂವಿಧಾನದ ದುರ್ಬಳಕೆ ಹಾಗೂ ಉದ್ಯಮಿಗಳಿಗೆ ಅನುಕೂಲ ಮಾಡುವ ನೀತಿಗಳನ್ನು ಟೀಕಿಸಿದರು. ಜನಸಾಮಾನ್ಯರ ಮೇಲೆ GST ಹೆಚ್ಚಳವಾಗುತ್ತಿರುವುದನ್ನು ಖಂಡಿಸಿದ್ದಾರೆ.
- Sahadev Mane
- Updated on: Jan 21, 2025
- 8:50 pm
ಚುನಾವಣೆ ಗೆದ್ರೆ ಪ್ರಿಯಾಂಕಾ ಕೆನ್ನೆಯಂತೆ ರಸ್ತೆ ನಿರ್ಮಿಸುವೆ: ಬಿಜೆಪಿ ಅಭ್ಯರ್ಥಿ ರಮೇಶ್ ಬಿಧುರಿ ವಿವಾದಾತ್ಮಕ ಹೇಳಿಕೆ
ದೆಹಲಿ ವಿಧಾನಸಭಾ ಚುನಾವಣೆಗೆ ಪ್ರಚಾರದ ವೇಳೆ ಬಿಜೆಪಿ ಅಭ್ಯರ್ಥಿ ರಮೇಶ್ ಬಿಧುರಿ ಅವರು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರನ್ನು ಉಲ್ಲೇಖಿಸಿ ನೀಡಿದ ವಿವಾದಾತ್ಮಕ ಹೇಳಿಕೆ ರಾಜಕೀಯ ವಲಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿದೆ. ಅವರ ಹೇಳಿಕೆಯನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸಿದ್ದು, ಬಿಧುರಿ ಅವರು ನಂತರ ವಿಷಾದ ವ್ಯಕ್ತಪಡಿಸಿದ್ದಾರೆ. ಈ ಘಟನೆ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ.
- Web contact
- Updated on: Jan 5, 2025
- 8:31 pm
Fact Check: ನನಗೆ ಬಾಂಗ್ಲಾ ಹಿಂದೂಗಳ ಬಗ್ಗೆ ಕಾಳಜಿಯಿಲ್ಲವೆಂದು ಪ್ರಿಯಾಂಕ ಗಾಂಧಿ ಬ್ಯಾಗ್ ಮೇಲೆ ಬರೆಯಲಾಗಿದೆಯೇ?
ಅನೇಕ ಬಳಕೆದಾರರು ಇದನ್ನು ನಿಜವೆಂದು ಪರಿಗಣಿಸಿ ಹಂಚಿಕೊಳ್ಳುತ್ತಿದ್ದಾರೆ. ಆದರೆ, ಟಿವಿ9 ಕನ್ನಡ ವೈರಲ್ ಫೊಟೋವನ್ನು ತನಿಖೆ ಮಾಡಿದೆ. ಆಗ ಇದು ನಕಲಿ ಎಂದು ಸಾಬೀತಾಯಿತು. ವೈರಲ್ ಆಗಿರುವ ಫೋಟೋವನ್ನು ಉದ್ದೇಶಪೂರ್ವಕವಾಗಿ ಪ್ರಿಯಾಂಕಾ ಗಾಂಧಿಯವರ ಮೂಲ ಚಿತ್ರದೊಂದಿಗೆ ತಿರುಚಲಾಗಿದೆ. ಹುಡುಕಾಟದ ಸಮಯದಲ್ಲಿ ಮೂಲ ಚಿತ್ರವನ್ನು ಹಂಚಿಕೊಂಡು ಅನೇಕ ಸುದ್ದಿ ಮಾಧ್ಯಮ ವರದಿ ಮಾಡಿರುವುದು ನಮಗೆ ಸಿಕ್ಕಿದೆ.
- Preethi Bhat Gunavante
- Updated on: Dec 18, 2024
- 11:39 am