Priyanka Gandhi Vadra
ಪ್ರಿಯಾಂಕಾ ಗಾಂಧಿ ವಾದ್ರಾ: ಕೇರಳದ ವಯನಾಡಿನಲ್ಲಿ ರಾಹುಲ್ ಗಾಂಧಿಯಿಂದ ತೆರವಾದ ಸ್ಥಾನಕ್ಕೆ ಪ್ರಿಯಾಂಕಾ ಸ್ಪರ್ಧಿಸಿ ನಾಲ್ಕು ಲಕ್ಷಗಳ ಅಂತರದಿಂದ ಗೆಲುವು ಸಾಧಿಸಿದ್ದರು. ದಶಕಗಳಲ್ಲಿ ಮೊದಲ ಬಾರಿಗೆ, ನೆಹರು-ಗಾಂಧಿ ಕುಟುಂಬದ ಮೂವರೂ-ಸೋನಿಯಾ, ರಾಹುಲ್ ಮತ್ತು ಪ್ರಿಯಾಂಕಾ-ಇದೀಗ ಸಂಸತ್ತಿನ ಭಾಗವಾಗಿದ್ದಾರೆ. ಮೊದಲು ತಾಯಿ ಸೋನಿಯಾ ಮತ್ತು ಸಹೋದರ ರಾಹುಲ್ ಗಾಂಧಿ ಪರ ಪ್ರಚಾರ ಮಾಡುತ್ತಿದ್ದ ಪ್ರಿಯಾಂಕ ಅವರನ್ನು, ನಂತರ ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಗೆ ಉಸ್ತುವಾರಿಯನ್ನಾಗಿ ಮಾಡಲಾಗಿತ್ತು. ಇದಾದ ನಂತರ ಪಕ್ಷದ ಸ್ಟಾರ್ ಕ್ಯಾಂಪೇನರ್ ಆದ ಪ್ರಿಯಾಂಕ, ಇದೇ ಮೊದಲ ಬಾರಿಗೆ ಚುನಾವಣಾ ರಾಜಕೀಯಕ್ಕೆ ಇಳಿದಿದ್ದಾರೆ.
2019ರ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅಮೇಠಿ ಮತ್ತು ವಯನಾಡ್ ನಿಂದ ಸ್ಪರ್ಧಿಸಿದ್ದರು. ಆ ಪೈಕಿ, ಅಮೇಠಿಯಲ್ಲಿ ಸೋತ ಹಿನ್ನಲೆಯಲ್ಲಿ ವಯನಾಡ್ ಕ್ಷೇತ್ರವನ್ನು ಉಳಿಸಿಕೊಂಡಿದ್ದರು.
ಹಳೆಯ ಮಹಿಳಾ ಮೀಸಲಾತಿ ಮಸೂದೆ ಮಂಡಿಸಿ; ಪ್ರಧಾನಿ ಮೋದಿಗೆ ಪ್ರಿಯಾಂಕಾ ಗಾಂಧಿ ಸವಾಲು
ಮಹಿಳಾ ಮೀಸಲಾತಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರವಾಗಲು ವಿಫಲವಾಗಿದೆ. ವಿಪಕ್ಷಗಳಿಂದಾಗಿ ಬಹುಮತ ಲಭ್ಯವಾಗದ ಕಾರಣದಿಂದ ಎನ್ಡಿಎ ತೀವ್ರ ವಾಗ್ದಾಳಿ ನಡೆಸಿತ್ತು. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ,'ಹಳೆಯ ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡಿಸಿ. ಆಗ ನಾವೆಲ್ಲರೂ ಮತ ಚಲಾಯಿಸುತ್ತೇವೆ ಮತ್ತು ನಿಮ್ಮನ್ನು ಬೆಂಬಲಿಸುತ್ತೇವೆ' ಎಂದು ಪ್ರಧಾನಿ ಮೋದಿಗೆ ಸವಾಲು ಹಾಕಿದ್ದಾರೆ.
- Sushma Chakre
- Updated on: Apr 18, 2026
- 4:27 pm
ನಿಮ್ಮ ಪ್ಲಾನ್ ನೋಡಿ ಚಾಣಕ್ಯನೂ ಶಾಕ್ ಆಗುತ್ತಿದ್ದ; ಅಮಿತ್ ಶಾಗೆ ಪ್ರಿಯಾಂಕಾ ಗಾಂಧಿ ತಮಾಷೆ
3 ಮಸೂದೆಗಳ ಮಂಡನೆಗಾಗಿ ಇಂದು ಸಂಸತ್ನ ವಿಶೇಷ ಅಧಿವೇಶನ ಕರೆಯಲಾಗಿತ್ತು. ಮಹಿಳಾ ಮೀಸಲಾತಿಯ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಉದ್ದೇಶಿಸಿ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಮಾತನಾಡಿರುವ ವಿಡಿಯೋ ವೈರಲ್ ಆಗಿದೆ. ಪ್ರಿಯಾಂಕಾ ಗಾಂಧಿಯ ಮಾತು ಕೇಳಿ ಗೃಹ ಸಚಿವ ಅಮಿತ್ ಶಾ ನಗುತ್ತಾ ಕುಳಿತಿದ್ದರು. ಅದನ್ನು ನೋಡಿದ ಪ್ರಿಯಾಂಕಾ ಗಾಂಧಿ ಅಮಿತ್ ಶಾ ಅವರನ್ನು ತತ್ವಜ್ಞಾನಿ ಮತ್ತು ರಾಜಕೀಯ ತಂತ್ರಜ್ಞ ಚಾಣಕ್ಯ ಅವರ ಜೊತೆ ಹೋಲಿಸಿ ತಮಾಷೆ ಮಾಡಿದ್ದಾರೆ.
- Sushma Chakre
- Updated on: Apr 16, 2026
- 9:09 pm
ಕರ್ನಾಟಕ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ? ಬಿಗ್ ಅಪ್ಡೇಟ್ ಕೊಟ್ಟ ರಾಬರ್ಟ್ ವಾದ್ರಾ
ಬೆಂಗಳೂರಿಗೆ ಆಗ್ರಹಿಸಿರುವ ರಾಬರ್ಟ್ ವಾದ್ರಾ ಇಸ್ಕಾನ್ ದೇವಸ್ಥಾನ, ಮಸೀದಿ ಮತ್ತು ಮಿಷನರೀಸ್ ಆಫ್ ಚಾರಿಟಿ ಸೇವಾ ಕೇಂದ್ರಗಳಿಗೆ ಭೇಟಿ ನೀಡಿದ್ದಾರೆ. ಕರ್ನಾಟಕದ ಜನರು ಪ್ರೀತಿ ತೋರಿಸಿದ್ದು, ಬೆಂಗಳೂರು ಎರಡನೇ ಮನೆಯಂತಿದೆ ಎಂದು ಅವರು ಹೇಳಿದ್ದಾರೆ. ರಾಜ್ಯದಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರು ಒಟ್ಟಾಗಿ ಜನರ ಪ್ರಗತಿಗೆ ಶ್ರಮಿಸುತ್ತಿದ್ದು, ನಾಯಕತ್ವ ಬದಲಾವಣೆಯ ಯಾವುದೇ ಸಾಧ್ಯತೆಯ ಬಗ್ಗೆ ತಮಗೆ ಮಾಹಿತಿ ಇಲ್ಲ ಎಂದು ತಿಳಿಸಿದ್ದಾರೆ.
- Malatesh Jaggin
- Updated on: Feb 27, 2026
- 6:45 pm
ನಾವು ಯಾರನ್ನೂ ನಿಂದಿಸಿಲ್ಲ; ಸಚಿವ ಕಿರಣ್ ರಿಜಿಜು ಹೇಳಿಕೆಗೆ ಪ್ರಿಯಾಂಕಾ ಗಾಂಧಿ ತಿರುಗೇಟು
ಕಾಂಗ್ರೆಸ್ ಸಂಸದರು ಸ್ಪೀಕರ್ ಕೊಠಡಿಯೊಳಗೆ ನುಗ್ಗಿ, ಅವರನ್ನು ನಿಂದಿಸಿ, ಪ್ರಧಾನಿ ಮೋದಿಗೂ ಬೆದರಿಕೆ ಹಾಕಿದ್ದಾರೆ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ವಿಡಿಯೋವೊಂದನ್ನು ರಿಲೀಸ್ ಮಾಡಿದ್ದರು. ಬಿಜೆಪಿ ಸಚಿವರ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ನಾವು ಯಾರಿಗೂ ಯಾವುದೇ ನಿಂದನೆ ಮಾಡಿಲ್ಲ ಎಂದು ಹೇಳಿದ್ದಾರೆ. 20ರಿಂದ 25 ಕಾಂಗ್ರೆಸ್ ಸಂಸದರು ಓಂ ಬಿರ್ಲಾ ಅವರನ್ನು ತಮ್ಮ ಕೊಠಡಿಯಲ್ಲಿ ನಿಂದಿಸಿದ್ದಾರೆ. ಅಲ್ಲಿದ್ದ ಹಿರಿಯ ಕಾಂಗ್ರೆಸ್ ನಾಯಕರಾದ ಕೆ.ಸಿ. ವೇಣುಗೋಪಾಲ್ ಮತ್ತು ಪ್ರಿಯಾಂಕಾ ಗಾಂಧಿ ಅವರನ್ನು ತಡೆಯಲಿಲ್ಲ ಎಂದು ಕಿರಣ್ ರಿಜಿಜು ಹೇಳಿಕೆ ನೀಡಿದ್ದರು.
- Sushma Chakre
- Updated on: Feb 12, 2026
- 5:16 pm
ಪ್ರಧಾನಿ ಮೋದಿ ಕೂಡ ವಿದೇಶ ಪ್ರವಾಸದಲ್ಲೇ ಇರುತ್ತಾರಲ್ಲ; ರಾಹುಲ್ ಕುರಿತ ಬಿಜೆಪಿ ಟೀಕೆಗೆ ಪ್ರಿಯಾಂಕಾ ಗಾಂಧಿ ತಿರುಗೇಟು
ಬಿಜೆಪಿ ಇಂದು ಕಾಂಗ್ರೆಸ್ ಸಂಸದ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಮುಂಬರುವ ಜರ್ಮನಿ ಪ್ರವಾಸದ ಬಗ್ಗೆ ಟೀಕಾಪ್ರಹಾರ ನಡೆಸಿದ್ದಾರೆ. ಲೋಕಸಭಾ ಅಧಿವೇಶನದ ವೇಳೆ ವಿದೇಶಕ್ಕೆ ಹೋಗುತ್ತಾರೆ, ಆಮೇಲೆ ಬಂದು ನನಗೆ ಮಾತನಾಡಲು ಅವಕಾಶವೇ ಸಿಗಲಿಲ್ಲ ಎನ್ನುತ್ತಾರೆ ಎಂದು ಬಿಜೆಪಿ ನಾಯಕರು ಟೀಕಿಸಿದ್ದಾರೆ. ಈ ಹೇಳಿಕೆಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕೂಡ ವಿದೇಶ ಪ್ರವಾಸದಲ್ಲೇ ಇರುತ್ತಾರೆ ಎನ್ನುವ ಮೂಲಕ ಅವರು ಬಿಜೆಪಿಗೆ ತಿರುಗೇಟು ನೀಡಿದ್ದಾರೆ.
- Sushma Chakre
- Updated on: Dec 10, 2025
- 6:13 pm
ಕಾಂಗ್ರೆಸ್ ವಂದೇ ಮಾತರಂ ಅನ್ನು ಮೊಟಕುಗೊಳಿಸದಿದ್ದರೆ ಭಾರತ ವಿಭಜನೆಯಾಗುತ್ತಿರಲಿಲ್ಲ; ರಾಜ್ಯಸಭೆಯಲ್ಲಿ ಅಮಿತ್ ಶಾ ಟೀಕೆ
ಒಂದುವೇಳೆ, ವಂದೇ ಮಾತರಂ ಗೀತೆಯನ್ನು ಓಲೈಕೆಗಾಗಿ ಮೊಟಕುಗೊಳಿಸದಿದ್ದರೆ ಭಾರತ ವಿಭಜನೆಯಾಗುತ್ತಿರಲಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಮತ್ತೊಮ್ಮೆ ರಾಜ್ಯಸಭೆಯಲ್ಲಿ ನೆಹರೂ, ಇಂದಿರಾ ಗಾಂಧಿಯನ್ನು ಅಮಿತ್ ಶಾ ಟೀಕಿಸಿದ್ದಾರೆ. ಪಶ್ಚಿಮ ಬಂಗಾಳದ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಎನ್ಡಿಎ ಸರ್ಕಾರ ವಂದೇ ಮಾತರಂ ಕುರಿತು ಸಂಸದೀಯ ಚರ್ಚೆಯನ್ನು ಪ್ರಸ್ತಾಪಿಸಿದೆ ಎಂಬ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಆರೋಪಕ್ಕೆ ಅಮಿತ್ ಶಾ ತಿರುಗೇಟು ನೀಡಿದ್ದಾರೆ.
- Sushma Chakre
- Updated on: Dec 9, 2025
- 6:22 pm
ವಂದೇ ಮಾತರಂ ಕುರಿತ ನೆಹರು ಪತ್ರ ಓದಿದ ಪ್ರಿಯಾಂಕಾ ಗಾಂಧಿ, ಬಿಜೆಪಿಗೆ ತರಾಟೆ
ಸಂಸತ್ ಅಧಿವೇಶನದಲ್ಲಿ ಇಂದು ವಂದೇ ಮಾತರಂ ಗೀತೆಯ ಬಗ್ಗೆ ತೀವ್ರ ಚರ್ಚೆಗಳು ನಡೆದಿವೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರ ಹೆಸರನ್ನು ಪ್ರಸ್ತಾಪಿಸಿದ್ದರು. ಈ ಹಿನ್ನೆಲೆಯಲ್ಲಿ ತಿರುಗೇಟು ನೀಡಿರುವ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ, 'ನೀವು ಚುನಾವಣೆಗಾಗಿ ಇಲ್ಲಿದ್ದೀರಿ, ನಾವು ದೇಶಕ್ಕಾಗಿ ಇಲ್ಲಿದ್ದೇವೆ' ಎಂದು ಟೀಕಾಪ್ರಹಾರ ನಡೆಸಿದ್ದಾರೆ. ಅಲ್ಲದೆ, ಸುಭಾಷ್ ಚಂದ್ರ ಬೋಸ್ಗೆ ವಂದೇ ಮಾತರಂ ಕುರಿತು ನೆಹರು ಬರೆದಿದ್ದ ಪತ್ರವನ್ನು ಕೂಡ ಓದಿದ್ದಾರೆ.
- Sushma Chakre
- Updated on: Dec 8, 2025
- 7:28 pm
ಅಕ್ರಮ ಹಣ ವರ್ಗಾವಣೆ ಪ್ರಕರಣ; ರಾಬರ್ಟ್ ವಾದ್ರಾ ವಿರುದ್ಧ ಇಡಿ ಹೊಸ ಚಾರ್ಜ್ಶೀಟ್ ಸಲ್ಲಿಕೆ
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಅವರ ಪತಿ ರಾಬರ್ಟ್ ವಾದ್ರಾ ವಿರುದ್ಧ ಇಡಿ ಹೊಸ ಆರೋಪಪಟ್ಟಿ ಸಲ್ಲಿಸಿದೆ. ಈ ಮೂಲಕ ಕಪ್ಪು ಹಣ ಪ್ರಕರಣದಲ್ಲಿ ರಾಬರ್ಟ್ ವಾದ್ರಾಗೆ ಹೊಸ ಸಂಕಷ್ಟ ಎದುರಾಗಿದೆ. ಯುಕೆ ಮೂಲದ ರಕ್ಷಣಾ ಡೀಲರ್ ಸಂಜಯ್ ಭಂಡಾರಿಗೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಉದ್ಯಮಿ ರಾಬರ್ಟ್ ವಾದ್ರಾ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಹೊಸ ಚಾರ್ಜ್ಶೀಟ್ ಸಲ್ಲಿಸಿದೆ.
- Sushma Chakre
- Updated on: Nov 20, 2025
- 4:53 pm
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ಗೆ ಬಹಿರಂಗವಾಗಿ ಧಮ್ಕಿ ಹಾಕಿದ ಪ್ರಿಯಾಂಕಾ ಗಾಂಧಿ
ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಭಾರತೀಯ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ಗೆ ಬೆದರಿಕೆ ಹಾಕಿದ್ದಾರೆ. ರಿಗಾದಲ್ಲಿ ನಡೆದ ರ್ಯಾಲಿಯಲ್ಲಿ ಸಭ್ಯತೆಯನ್ನು ಮರೆತು ವರ್ತಿಸಿದ್ದಾರೆ. ‘‘ನೀವು ನೆಮ್ಮದಿಯಿಂದ ನಿವೃತ್ತರಾಗಲು ಸಾಧ್ಯವಿಲ್ಲ, ಜ್ಞಾನೇಶ್ ಕುಮಾರ್ ಅವರ ಹೆಸರನ್ನು ನೀವು ಎಂದಿಗೂ ಮರೆಯಬಾರದು ಎಂದು ನಾನು ಸಾವ್ಝನಿಕರಲ್ಲಿ ಮನವಿ ಮಾಡುತ್ತೇನೆ’’ ಎಂದ ಪ್ರಿಯಾಂಕಾ ಎಸ್ಎಸ್ ಸಂಧು ಹಾಗೂ ವಿವೇಕ್ ಜೋಶಿ ಹೆಸರುಗಳನ್ನು ಕೂಡ ಹೇಳಿದ್ದಾರೆ.
- Nayana Rajeev
- Updated on: Nov 7, 2025
- 2:55 pm
ಎನ್ಇಪಿ ಮತ್ತು ಪಿಎಂಶ್ರೀ ಕುರಿತ ಪ್ರಿಯಾಂಕಾ ಗಾಂಧಿ ಹೇಳಿಕೆಗೆ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಆಕ್ರೋಶ
ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಅವರು NEP 2020 ಮತ್ತು ಪಿಎಂ ಶ್ರೀ ಶಾಲೆಗಳ ವಿರುದ್ಧ ಹೇಳಿಕೆ ನೀಡಿದ್ದು, ಅವು ಮಕ್ಕಳ ಬ್ರೈನ್ ವಾಶ್ ಮಾಡುವ ಪ್ರಯತ್ನಗಳಾಗಿವೆ ಎಂದು ಕರೆದಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಪ್ರಿಯಾಂಕಾ ಗಾಂಧಿಯ ಹೇಳಿಕೆಗಳನ್ನು "ಅಜ್ಞಾನ ಮತ್ತು ರಾಜಕೀಯ ಅವಕಾಶವಾದ" ಎಂದು ಕರೆದಿದ್ದಾರೆ. ಧರ್ಮೇಂದ್ರ ಪ್ರಧಾನ್ ಅವರು NEP ಮತ್ತು ಪಿಎಂ ಶ್ರೀಗಳನ್ನು ಭಾರತದ 21ನೇ ಶತಮಾನದ ಸವಾಲುಗಳಿಗೆ ನಡೆದ ಪ್ರಮುಖ ಶಿಕ್ಷಣ ಸುಧಾರಣೆಗಳು ಎಂದು ಬಣ್ಣಿಸಿದ್ದಾರೆ.
- Sushma Chakre
- Updated on: Oct 30, 2025
- 10:47 pm
ವಯನಾಡಿಗೆ ಕರ್ನಾಟಕ ಸರ್ಕಾರದಿಂದ 10 ಕೋಟಿ ರೂ. ವಿಶೇಷ ಅನುದಾನ: ‘ಕೇರಳ ಸಿಎಂ ಸಿದ್ದರಾಮಯ್ಯ’ ಎಂದು ಅಶೋಕ್ ವ್ಯಂಗ್ಯ
ಕರ್ನಾಟಕ ಕಾಂಗ್ರೆಸ್ ಸರ್ಕಾರವು ಕೇರಳದ ವಯನಾಡು ಲೋಕಸಭಾ ಕ್ಷೇತ್ರಕ್ಕೆ ಭೂಕುಸಿತ ಸಂತ್ರಸ್ತರ ಪುನರ್ವಸತಿಗಾಗಿ 10 ಕೋಟಿ ರೂಪಾಯಿಗಳ ವಿಶೇಷ ಅನುದಾನ ಘೋಷಿಸಿರುವುದು ಬಿಜೆಪಿಯಿಂದ ತೀವ್ರ ಟೀಕೆಗೆ ಗುರಿಯಾಗಿದೆ. ಈ ಹಿಂದೆ ವಯನಾಡಿನಲ್ಲಿ ಆನೆ ದಾಳಿಯಿಂದ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ಘೋಷಿಸಿದ್ದಂತೆ ಇದೂ ರಾಜಕೀಯ ವಿವಾದಕ್ಕೆ ಕಾರಣವಾಗಿದೆ.
- Ganapathi Sharma
- Updated on: Aug 21, 2025
- 11:09 am
ಟಿ-ಶರ್ಟ್ ಮೇಲೆ ನನ್ನ ಫೋಟೊ ಹಾಕೋಕೆ ಯಾರ್ರೀ ಪರ್ಮಿಷನ್ ಕೊಟ್ಟೋರು? ಪ್ರಿಯಾಂಕಾ ವಿರುದ್ಧ ಮಿಂಟಾ ದೇವಿ ವಾಗ್ದಾಳಿ
ಟಿ-ಶರ್ಟ್ ಮೇಲೆ ನನ್ನ ಹೆಸರು, ಫೋಟೊ ಹಾಕೋಕೆ ಯಾರ್ರೀ ಪರ್ಮಿಷನ್ ಕೊಟ್ಟೋರು ಎಂದು ರಾಹುಲ್ ಹಾಗೂ ಪ್ರಿಯಾಂಕಾ ಗಾಂಧಿ ವಿರುದ್ಧ ಮಿಂಟಾ ದೇವಿ ವಾಗ್ದಾಳಿ ನಡೆಸಿದ್ದಾರೆ. ಬಿಹಾರದ ಸಿವಾನ್ನ ಮಿಂಟಾ ದೇವಿ ಅವರು ದೆಹಲಿಯಲ್ಲಿ ಮಿಂಟಾ ದೇವಿ ಹೆಸರಿರುವ ಟಿ-ಶರ್ಟ್ ಧರಿಸಿ ಪ್ರತಿಭಟನೆ ನಡೆಸುತ್ತಿದ್ದರಿಂದ ಇದ್ದಕ್ಕಿದ್ದಂತೆ ಸುದ್ದಿಯಾದರು. ಆದರೆ ತನ್ನ ಯಾಕೆ ನೀವು ರಾಜಕೀಯಕ್ಕೆ ಎಳೆಯುತ್ತಿದ್ದೀರಾ ಎಂದು ಪ್ರಶ್ನಿಸಿದ್ದಾರೆ.
- Nayana Rajeev
- Updated on: Aug 13, 2025
- 2:54 pm