R Ashoka
ಬೆಂಗಳೂರಿನ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಆರ್. ಅಶೋಕ್ ಕರ್ನಾಟಕ ಬಿಜೆಪಿಯ ಹಿರಿಯ ನಾಯಕರು. ಆರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಅವರು ಪ್ರಸ್ತುತ ವಿರೋಧ ಪಕ್ಷದ ನಾಯಕರಾಗಿದ್ದಾರೆ. ಇವರು 1957ರ ಜುಲೈ 1 ರಂದು ಜನಿಸಿದರು. ಬೆಂಗಳೂರಿನಲ್ಲಿ ಹುಟ್ಟಿ ಬೆಳೆದ ಆರ್. ಅಶೋಕ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಕ್ರೀಯ ಕಾರ್ಯಕರ್ತರು. ನಂತರದ ದಿನಗಳಲ್ಲಿ ಬಿಜೆಪಿಯೊಂದಿಗೆ ಗುರುತಿಸಿಕೊಂಡು ರಾಜಕೀಯಕ್ಕೆ ಬಂದರು. ಹಂತ ಹಂತವಾಗಿ ಪಕ್ಷ ಹಾಗೂ ರಾಜಕೀಯದಲ್ಲಿ ಮುನ್ನೆಲೆಗೆ ಬಂದರು. ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ (1975 ರಿಂದ 77) ಅಶೋಕ್ ಜೈಲುವಾಸ ಅನುಭವಿಸಿದ್ದರು. ಬಿಜೆಪಿ ಹಿರಿಯ ನಾಯಕ, ಭಾರತ ರತ್ನ ಎಲ್.ಕೆ. ಅಡ್ವಾಣಿ ಮುಂತಾದವರೊಂದಿಗೆ ಜೈಲಿನಲ್ಲಿದ್ದರು. 1997 ರಲ್ಲಿ ಬೆಂಗಳೂರಿನ ಉತ್ತರಹಳ್ಳಿ ಕ್ಷೇತ್ರಕ್ಕೆ ನಡೆದ ವಿಧಾನಸಭಾ ಉಪ ಚುನಾವಣೆಯಲ್ಲಿ ಸ್ಪರ್ಧಿಸಿ ಪ್ರಥಮ ಬಾರಿಗೆ ಶಾಸಕರಾದರು. 2021ರಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಂಪುಟಕ್ಕೆ ಆರ್. ಅಶೋಕ ಸೇರ್ಪಡೆಯಾಗಿ ಕಂದಾಯ ಸಚಿವ ಖಾತೆ ನಿಭಾಯಿಸಿದರು. 1999 ಹಾಗೂ 2004 ರಲ್ಲಿ ಉತ್ತರಹಳ್ಳಿ ಕ್ಷೇತ್ರದಿಂದ ಮತ್ತೆ ಶಾಸಕರಾಗಿ ಆಯ್ಕೆಯಾದರು. 2008ರಲ್ಲಿ ಮತ್ತೊಮ್ಮೆ ಶಾಸಕರಾಗಿ ಆಯ್ಕೆಯಾದರು. ಬಿಎಸ್ ಯಡಿಯೂರಪ್ಪ ಅವರ ಸರ್ಕಾರದಲ್ಲಿ ಸಾರಿಗೆ ಖಾತೆಯ ಸಚಿವರಾದರು. 2012ರಲ್ಲಿ ಜಗದೀಶ ಶೆಟ್ಟರ್ ಮುಖ್ಯಮಂತ್ರಿಯಾದಾಗ ಉಪ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದರು. ಉಪ ಮುಖ್ಯಮಂತ್ರಿ ಜೊತೆಗೆ ಸಾರಿಗೆ ಹಾಗೂ ಗೃಹ ಇಲಾಖೆಗಳ ಜವಾಬ್ದಾರಿ ನಿಭಾಯಿಸಿದರು. 2018ರಲ್ಲಿ ಆರ್. ಅಶೋಕ್ ಪದ್ಮನಾಭನಗರದಿಂದ ಶಾಸಕರಾಗಿ ಮತ್ತೆ ಆಯ್ಕೆಯಾದರು. 2019ರಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಾಗ ಕಂದಾಯ, ಮುಜರಾಯಿ ಖಾತೆ ಹೊಣೆ ಹೊತ್ತಿದ್ದರು. ಪ್ರಸ್ತುತ ಆರ್. ಅಶೋಕ ವಿರೋಧ ಪಕ್ಷದ ನಾಯಕರಾಗಿದ್ದಾರೆ
ವಿಧಾನಸಭೆಯಲ್ಲಿ ಪೆನ್ಡ್ರೈವ್ ಪ್ರದರ್ಶಿಸಿ ವಿಪಕ್ಷ ನಾಯಕ ಅಶೋಕ್ ಗಂಭೀರ ಆರೋಪ
ಪ್ರತಿಪಕ್ಷ ನಾಯಕ ಆರ್ ಅಶೋಕ್ ವಿಧಾನಸಭೆ ವಿಶೇಷ ಅಧಿವೇಶನದಲ್ಲಿ ಗಂಭೀರ ಆರೋಪ ಮಾಡಿದ್ದು, ಅಬಕಾರಿ ಇಲಾಖೆ ಹಗರಣಕ್ಕೆ ಸಂಬಂಧಿಸಿದ ಆಡಿಯೋ, ವಿಡಿಯೋ ಸಾಕ್ಷಿ ತಮ್ಮ ಬಳಿ ಇದೆ ಎಂದು ಪೆನ್ಡ್ರೈವ್ ಪ್ರದರ್ಶನ ಮಾಡಿದರು. ಈ ಸಂಬಂಧ ಆಡಿಯೋ ವೈರಲ್ ಆಗಿದ್ದನ್ನೂ ಪ್ರಸ್ತಾಪಿಸಿದ ಅವರು, ಪ್ರತಿ ಅಂಗಡಿಯಿಂದ ತಿಂಗಳಿಗೆ 10ರಿಂದ 15 ಸಾವಿರ ರೂ. ಸಂಗ್ರಹಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
- Ganapathi Sharma
- Updated on: Feb 3, 2026
- 2:08 pm
ಡ್ರಗ್ಸ್ ದಂಧೆಗೆ ಕಡಿವಾಣ ಹಾಕುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲ: ಮೈಸೂರಲ್ಲಿ ದಾಳಿ ಬೆನ್ನಲ್ಲೇ ಅಶೋಕ್ ವಾಗ್ದಾಳಿ
ಮೈಸೂರಿನಲ್ಲಿ ಡ್ರಗ್ಸ್ ತಯಾರಿಕೆ ಘಟಕ ಪತ್ತೆ ವಿಚಾರ ಪ್ರಸ್ತಾಪಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಪಕ್ಷ ನಾಯಕ ಆರ್. ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಡ್ರಗ್ಸ್ ದಂಧೆ ತಡೆಗಟ್ಟುವಲ್ಲಿ ಸರ್ಕಾರ ವಿಫಲವಾಗಿದೆ. ರಾಜ್ಯದ ಯುವಕರ ಭವಿಷ್ಯವನ್ನು ಹಾಳುಮಾಡುತ್ತಿದೆ ಎಂದು ಅವರು ಕಿಡಿಕಾರಿದ್ದು, ತೀವ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ.
- Ganapathi Sharma
- Updated on: Jan 31, 2026
- 11:00 am
ಸದನದಲ್ಲಿ ಪೆನ್ಡ್ರೈವ್ ತೋರಿಸಿದ ಆರ್ ಅಶೋಕ್: ಅದರಲ್ಲಿರುವುದು ಯಾವ ಮ್ಯಾಟರ್ ಗೊತ್ತಾ?
ವಿಪಕ್ಷ ನಾಯಕ ಅಶೋಕ್ ಅವರು ಸದನದಲ್ಲಿ ಪೆನ್ಡ್ರೈವ್ ಪ್ರದರ್ಶಿಸಿ ಶಾಸಕರೊಬ್ಬರ ವಿವಾದಾತ್ಮಕ ಹೇಳಿಕೆಗಳ ಬಗ್ಗೆ ಪ್ರಶ್ನಿಸಿದ್ದಾರೆ. ಬಳ್ಳಾರಿಯನ್ನು ಸುಡುವ ಬೆದರಿಕೆ ಹಾಕಿದ ಶಾಸಕರಿಗೆ ಡಿಕೆ ಶಿವಕುಮಾರ್ ಬೆಂಬಲ ಸೂಚಿಸಿದ್ದನ್ನು ಅವರು ಖಂಡಿಸಿದ್ದಾರೆ. ಬಳ್ಳಾರಿ ಘಟನೆಯಲ್ಲಿ ಪೊಲೀಸರ ನಡೆ ಮತ್ತು ಎಫ್ಐಆರ್ ದಾಖಲಾತಿಯಲ್ಲಿನ ವಿಳಂಬವನ್ನೂ ಅಶೋಕ್ ಪ್ರಸ್ತಾಪಿಸಿದ್ದಾರೆ.
- Harish GR
- Updated on: Jan 29, 2026
- 6:25 pm
ರಾಜ್ಯಪಾಲರ ಫೋನ್ ಕದ್ದಾಲಿಕೆ: ಬಿಜೆಪಿ ಸದಸ್ಯರಿಂದ ಗಂಭೀರ ಆರೋಪ, ಸದನದಲ್ಲಿ ಚರ್ಚೆ ಜೋರು
ರಾಜ್ಯಪಾಲರಿಗೆ ಕೇಶವ ಕೃಪಾದಿಂದ ಫೋನ್ ಬರುತ್ತೆ ಎಂಬ ಕಾನೂನು ಸಚಿವ ಹೆಚ್.ಕೆ ಪಾಟೀಲ್ ಹೇಳಿಕೆ ಕರ್ನಾಟಕ ವಿಧಾನಸಭೆ ಅಧಿವೇಶನದಲ್ಲಿಂದು ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಈ ಬಗ್ಗೆ ಬಿಜೆಪಿ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಆಡಳಿತರೂಢ ಹಾಗೂ ವಿಪಕ್ಷ ಸದಸ್ಯರ ನಡುವೆ ಪರ ವಿರೋಧದ ಚರ್ಚೆಗೆ ಗ್ರಾಸವಾಗಿದ್ದು, ಈ ವೇಳೆ ಹೆಚ್ಕೆ ಪಾಟೀಲ್ ಕೂಡಲೇ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದರು. ಇದಕ್ಕೆ ಸ್ವತಃ ಹೆಚ್ಕೆ ಪಾಟೀಲ್ ಹಾಗೂ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದು, ಏನೆಲ್ಲಾ ಹೇಳಿದ್ದಾರೆ ಎನ್ನುವುದು ಈ ಕೆಳಗಿನಂತಿದೆ.
- Harish GR
- Updated on: Jan 28, 2026
- 5:55 pm
ರಾಜ್ಯಪಾಲರನ್ನೇ ತಡೆದು ಗೂಂಡಾಗಿರಿ, ಇದೊಂದು ಕರಾಳ ದಿನ: ವಿಪಕ್ಷ ನಾಯಕ ಅಶೋಕ್ ವಾಗ್ದಾಳಿ
ವಿಧಾನಸಭೆಯಲ್ಲಿ ರಾಜ್ಯಪಾಲರಿಗೆ ಕಾಂಗ್ರೆಸ್ ಶಾಸಕರು ಅಡ್ಡಿಪಡಿಸಿದ್ದಕ್ಕೆ ವಿಪಕ್ಷ ನಾಯಕ ಆರ್. ಅಶೋಕ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದೊಂದು ‘ಕರಾಳ ದಿನ’ ಎಂದು ಬಣ್ಣಿಸಿದ ಅವರು, ರಾಜ್ಯಪಾಲರಿಗೆ ಅಗೌರವ ತೋರಿದ್ದು ‘ಗೂಂಡಾಗಿರಿ’ ಎಂದು ಅವರು ಕಿಡಿಕಾರಿದರು. ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಕೂಡ ಇದು ‘ಪ್ರಜಾಪ್ರಭುತ್ವದ ಕಗ್ಗೊಲೆ’ ಎಂದು ಟೀಕಿಸಿದ್ದಾರೆ.
- Ganapathi Sharma
- Updated on: Jan 22, 2026
- 12:29 pm
ಅಭಿಮಾನಿ ಕೊಟ್ಟ ರಾಯರ ಫೋಟೊ ತಿರಸ್ಕರಿಸಿದ ಸಿಎಂ ಸಿದ್ದರಾಮಯ್ಯ! ಶುರುವಾಯ್ತು ಚರ್ಚೆ
ಸಿಎಂ ಸಿದ್ದರಾಮಯ್ಯ ಅಭಿಮಾನಿಯೊಬ್ಬರು ಕೊಟ್ಟ ರಾಘವೇಂದ್ರ ಸ್ವಾಮಿಗಳ ಫೋಟೊ ಸ್ವೀಕರಿಸಲು ನಿರಾಕರಿಸಿ ವಾಪಸ್ ಕೊಟ್ಟ ವಿಚಾರ ಈಗ ಚರ್ಚೆಗೆ ಗ್ರಾಸವಾಗಿದೆ. ಪ್ರತಿಪಕ್ಷ ನಾಯಕ ಆರ್ ಅಶೋಕ್ ಅವರು ಈ ವಿಚಾರ ಮುಂದಿಟ್ಟುಕೊಂಡು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಯರ ಫೋಟೊವನ್ನು ಸಿದ್ದರಾಮಯ್ಯ ತಿರಸ್ಕರಿಸಿದ ವಿಡಿಯೋ ಇಲ್ಲಿದೆ.
- Ganapathi Sharma
- Updated on: Jan 19, 2026
- 2:52 pm
ಅಬಕಾರಿ ಇಲಾಖೆಯಲ್ಲಿ 2500 ಕೋಟಿ ರೂ. ಹಗರಣ, ಅಕ್ರಮದ ಹಣ ಅಸ್ಸಾಂ ಚುನಾವಣೆಗೆ ಬಳಕೆ: ಆರ್ ಅಶೋಕ್ ಗಂಭೀರ ಆರೋಪ
ಪ್ರತಿಪಕ್ಷ ನಾಯಕ ಆರ್ ಅಬಕಾರಿ ಇಲಾಖೆಯಲ್ಲಿ 2,500 ಕೋಟಿ ರೂ. ಹಗರಣ ನಡೆದಿದೆ ಎಂದು ಆರೋಪಿಸಿದ್ದು, ಸಚಿವ ಆರ್ಬಿ ತಿಮ್ಮಾಪುರ ರಾಜೀನಾಮೆಗೆ ಒತ್ತಾಯಿಸಿದ್ದಾರೆ. ವರ್ಗಾವಣೆ ಮತ್ತು ಪರವಾನಗಿ ಹಂಚಿಕೆಯಲ್ಲಿ ಭಾರಿ ಭ್ರಷ್ಟಾಚಾರ ನಡೆದಿದ್ದು, ಈ ಹಣವನ್ನು ಅಸ್ಸಾಂ ಚುನಾವಣೆಗಳಿಗೆ ಬಳಸಲಾಗುತ್ತಿದೆ ಎಂದು ಅವರು ಆರೋಪ ಮಾಡಿದ್ದಾರೆ.
- Ganapathi Sharma
- Updated on: Jan 19, 2026
- 9:49 am
ಅರೆಸ್ಟ್ ಆಗಿದ್ದ ಅಬಕಾರಿ ಡಿಸಿಗೆ ನ್ಯಾಯಾಂಗ ಬಂಧನ: ಆಡಿಯೋ ರಿಲೀಸ್ ಮಾಡಿದ ಬಿಜೆಪಿ ನಾಯಕರು
ಮದ್ಯ ಪರವಾನಗಿ ಲಂಚ ಪ್ರಕರಣದಲ್ಲಿ ಅಬಕಾರಿ ಡಿಸಿ ಜಗದೀಶ್ ನಾಯಕ್, ಅಧೀಕ್ಷಕ ತಮ್ಮಣ್ಣ ಮತ್ತು ಕಾನ್ಸ್ಟೇಬಲ್ ಲಕ್ಕಪ್ಪ ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. 25 ಲಕ್ಷ ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದಿದ್ದರು. ಬಂಧನವಾದ ಬೆನ್ನಲ್ಲೇ ಬಿಜೆಪಿ ನಾಯಕರು ಆಡಿಯೋ ರಿಲೀಸ್ ಮಾಡಿ, ಸಚಿವರ ಪಾತ್ರದ ಕುರಿತು ಗಂಭೀರ ಆರೋಪಗಳನ್ನು ಮಾಡಿದ್ದಾರೆ.
- Anil Kalkere
- Updated on: Jan 18, 2026
- 4:20 pm
ಸಿಎಂ, ಡಿಸಿಎಂಗೆ ಮಾತಲ್ಲೇ ತಿವಿದ ವಿಪಕ್ಷ ನಾಯಕ: ಎಕ್ಸ್ ಪೋಸ್ಟ್ ಮಾಡಿ ಅಶೋಕ್ ಹೇಳಿದ್ದೇನು?
ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ನಡೆಯನ್ನು ವಿಪಕ್ಷ ನಾಯಕ ಆರ್. ಅಶೋಕ್ ಅವರು ಕಟುವಾಗಿ ಟೀಕಿಸಿದ್ದಾರೆ. ಜರ್ಮನ್ ಫೆಡರಲ್ ಚಾನ್ಸಲರ್ ಕರ್ನಾಟಕಕ್ಕೆ ಭೇಟಿ ನೀಡಿದ್ದಾಗ, ರಾಜ್ಯದ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳು ರಾಹುಲ್ ಗಾಂಧಿ ಭೇಟಿಯಾಗಲು ಮೈಸೂರಿಗೆ ತೆರಳಿದ್ದನ್ನು ಅವರು ಪ್ರಶ್ನಿಸಿದ್ದಾರೆ. ಇದು ರಾಜ್ಯದ ಹಿತಾಸಕ್ತಿಗಳನ್ನು ನಿರ್ಲಕ್ಷ್ಯವಾಗಿದ್ದು, ಇದರಿಂದ ರಾಜ್ಯಕ್ಕೆ ಹೂಡಿಕೆ ಅವಕಾಶಗಳು ಕೈತಪ್ಪಿವೆ ಎಂದವರು ಆರೋಪಿಸಿದ್ದಾರೆ.
- Prasanna Hegde
- Updated on: Jan 13, 2026
- 6:24 pm
ಕನ್ನಡಪರ ಮಾತನಾಡಿ ‘ಕೋಗಿಲು’ ಆಗು, ಇಲ್ಲದಿದ್ರೆ ಕಾಗೆ ಆಗ್ತೀಯಾ: ವೇಣುಗೋಪಾಲ್ಗೆ ಅಶೋಕ್ ಟಾಂಗ್
ಆರ್. ಅಶೋಕ್ ಅವರು ಕೆ.ಸಿ. ವೇಣುಗೋಪಾಲ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ಕೇರಳದಲ್ಲಿ ಕನ್ನಡದ ಬಗ್ಗೆ ಮಾತನಾಡದೆ ಇಲ್ಲಿ ಕೋಗಿಲೆ ಕೂಗಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೋಗಿಲು ಬಡಾವಣೆಯಲ್ಲಿನ ಅನ್ಯಾಯದ ಬಗ್ಗೆ ಪ್ರಶ್ನಿಸಿದ್ದಾರೆ. ಸಿದ್ದರಾಮಯ್ಯ ಅವರನ್ನು "ಲೀಸ್" ರಾಜಕಾರಣಿ ಎಂದು ಟೀಕಿಸಿ, ಕರ್ನಾಟಕದ ಹಣವನ್ನು ಬೇರೆ ರಾಜ್ಯಗಳ ಚುನಾವಣೆಗೆ ಬಳಸುವುದರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
- Sunil MH
- Updated on: Jan 10, 2026
- 9:29 pm
ಅಕ್ರಮ ಬಾಂಗ್ಲಾ ವಲಸಿಗರ ಕುರಿತ ನಿಮ್ಮ ಕಾಳಜಿ ಕಾಸರಗೋಡಿನ ಕನ್ನಡಿಗರ ಬಗ್ಗೆ ಯಾಕಿಲ್ಲ: ಕಾಂಗ್ರೆಸ್ ಹೈಕಮಾಂಡ್ಗೆ ಅಶೋಕ್ ಪ್ರಶ್ನೆ
ಕೋಗಿಲು ಲೇಔಟ್ನಲ್ಲಿ ಅಕ್ರಮ ಬಾಂಗ್ಲಾ ವಲಸಿಗರನ್ನು ತೆರವು ಮಾಡಿದಾಗ ಮಿಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಹೃದಯ ಈಗ ಮಲಯಾಳ ಭಾಷೆ ಮಸೂದೆ ವಿಚಾರದಲ್ಲಿ ಕಾಸರಗೋಡಿನ ಕನ್ನಡಿಗರಿಗಾಗಿ ಏಕೆ ಮಿಡಿಯುತ್ತಿಲ್ಲ? ಬಂಡೀಪುರದಲ್ಲಿ ರಾತ್ರಿ ಸಂಚಾರ ನಿಷೇಧ ತೆರವುಗೊಳಿಸುವಾಗ ಇದ್ದ ಕಾಳಜಿ ಕನ್ನಡಿಗರ ಬಗ್ಗೆ ಏಕಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಪ್ರಶ್ನಿಸಿದ್ದಾರೆ.
- Ganapathi Sharma
- Updated on: Jan 10, 2026
- 12:44 pm
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕೋಗಿಲು ಲೇಔಟ್ನಲ್ಲಿ ಮನೆ ಹಂಚಿಕೆ ಕುರಿತು ಸಚಿವ ಜಮೀರ್ ಖಾನ್ ಖಡಾಖಂಡಿತ ಹೇಳಿಕೆ ನೀಡಿದ್ದಾರೆ. 257 ಮನೆಗಳ ಪೈಕಿ ಕರ್ನಾಟಕ ನಿವಾಸಿಗಳಿಗೆ, ಸೂಕ್ತ ದಾಖಲೆಗಳನ್ನು ಹೊಂದಿರುವ ಸ್ಥಳೀಯರಿಗೆ ಮಾತ್ರ ಮನೆ ನೀಡಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬಾಂಗ್ಲಾದೇಶಿಯರಿಗೆ ಮನೆ ನೀಡುವ ಪ್ರಶ್ನೆಯೇ ಇಲ್ಲ ಎಂದಿರುವ ಜಮೀರ್, ವಿರೋಧ ಪಕ್ಷದ ಆರೋಪಗಳನ್ನು ತಳ್ಳಿಹಾಕಿದ್ದಾರೆ.
- Gangadhar Saboji
- Updated on: Jan 1, 2026
- 5:40 pm