R Ashoka
ಬೆಂಗಳೂರಿನ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಆರ್. ಅಶೋಕ್ ಕರ್ನಾಟಕ ಬಿಜೆಪಿಯ ಹಿರಿಯ ನಾಯಕರು. ಆರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಅವರು ಪ್ರಸ್ತುತ ವಿರೋಧ ಪಕ್ಷದ ನಾಯಕರಾಗಿದ್ದಾರೆ. ಇವರು 1957ರ ಜುಲೈ 1 ರಂದು ಜನಿಸಿದರು. ಬೆಂಗಳೂರಿನಲ್ಲಿ ಹುಟ್ಟಿ ಬೆಳೆದ ಆರ್. ಅಶೋಕ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಕ್ರೀಯ ಕಾರ್ಯಕರ್ತರು. ನಂತರದ ದಿನಗಳಲ್ಲಿ ಬಿಜೆಪಿಯೊಂದಿಗೆ ಗುರುತಿಸಿಕೊಂಡು ರಾಜಕೀಯಕ್ಕೆ ಬಂದರು. ಹಂತ ಹಂತವಾಗಿ ಪಕ್ಷ ಹಾಗೂ ರಾಜಕೀಯದಲ್ಲಿ ಮುನ್ನೆಲೆಗೆ ಬಂದರು. ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ (1975 ರಿಂದ 77) ಅಶೋಕ್ ಜೈಲುವಾಸ ಅನುಭವಿಸಿದ್ದರು. ಬಿಜೆಪಿ ಹಿರಿಯ ನಾಯಕ, ಭಾರತ ರತ್ನ ಎಲ್.ಕೆ. ಅಡ್ವಾಣಿ ಮುಂತಾದವರೊಂದಿಗೆ ಜೈಲಿನಲ್ಲಿದ್ದರು. 1997 ರಲ್ಲಿ ಬೆಂಗಳೂರಿನ ಉತ್ತರಹಳ್ಳಿ ಕ್ಷೇತ್ರಕ್ಕೆ ನಡೆದ ವಿಧಾನಸಭಾ ಉಪ ಚುನಾವಣೆಯಲ್ಲಿ ಸ್ಪರ್ಧಿಸಿ ಪ್ರಥಮ ಬಾರಿಗೆ ಶಾಸಕರಾದರು. 2021ರಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಂಪುಟಕ್ಕೆ ಆರ್. ಅಶೋಕ ಸೇರ್ಪಡೆಯಾಗಿ ಕಂದಾಯ ಸಚಿವ ಖಾತೆ ನಿಭಾಯಿಸಿದರು. 1999 ಹಾಗೂ 2004 ರಲ್ಲಿ ಉತ್ತರಹಳ್ಳಿ ಕ್ಷೇತ್ರದಿಂದ ಮತ್ತೆ ಶಾಸಕರಾಗಿ ಆಯ್ಕೆಯಾದರು. 2008ರಲ್ಲಿ ಮತ್ತೊಮ್ಮೆ ಶಾಸಕರಾಗಿ ಆಯ್ಕೆಯಾದರು. ಬಿಎಸ್ ಯಡಿಯೂರಪ್ಪ ಅವರ ಸರ್ಕಾರದಲ್ಲಿ ಸಾರಿಗೆ ಖಾತೆಯ ಸಚಿವರಾದರು. 2012ರಲ್ಲಿ ಜಗದೀಶ ಶೆಟ್ಟರ್ ಮುಖ್ಯಮಂತ್ರಿಯಾದಾಗ ಉಪ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದರು. ಉಪ ಮುಖ್ಯಮಂತ್ರಿ ಜೊತೆಗೆ ಸಾರಿಗೆ ಹಾಗೂ ಗೃಹ ಇಲಾಖೆಗಳ ಜವಾಬ್ದಾರಿ ನಿಭಾಯಿಸಿದರು. 2018ರಲ್ಲಿ ಆರ್. ಅಶೋಕ್ ಪದ್ಮನಾಭನಗರದಿಂದ ಶಾಸಕರಾಗಿ ಮತ್ತೆ ಆಯ್ಕೆಯಾದರು. 2019ರಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಾಗ ಕಂದಾಯ, ಮುಜರಾಯಿ ಖಾತೆ ಹೊಣೆ ಹೊತ್ತಿದ್ದರು. ಪ್ರಸ್ತುತ ಆರ್. ಅಶೋಕ ವಿರೋಧ ಪಕ್ಷದ ನಾಯಕರಾಗಿದ್ದಾರೆ
ಅಪಾರ್ಟ್ಮೆಂಟ್ ನಿವಾಸಿಗಳೊಂದಿಗೆ ಸಂವಾದ ವೇಳೆ ಡಿಕೆ ಶಿವಕುಮಾರ್ ಗರಂ! ಡಿಸಿಎಂ ಮಾತಿಗೆ ಅಸಮಾಧಾನ
ಬೆಂಗಳೂರಿನ ಅಪಾರ್ಟ್ಮೆಂಟ್ ನಿವಾಸಿಗಳ ಜೊತೆ ನಡೆದ ಸಂವಾದದ ವೇಳೆ ಡಿಸಿಎಂ ಡಿಕೆ ಶಿವಕುಮಾರ್, ವೇದಿಕೆ ಮೇಲೆಯೇ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬ್ಲಾಕ್ ಮೇಲ್ ತಂತ್ರಕ್ಕೆ ಹೆದರಲ್ಲ, ಹುಷಾರ್ ಅಂತ ಎಚ್ಚರಿಕೆ ನೀಡಿದ್ದಾರೆ. ಸದ್ಯ ಡಿಕೆ ಶಿವಕುಮಾರ್ ಮಾತಿಗೆ ಉದ್ಯಮಿ ಸೇರಿದಂತೆ ವಿಪಕ್ಷ ನಾಯಕರು ಕಿಡಿಕಾರಿದ್ದಾರೆ.
- Gangadhar Saboji
- Updated on: Dec 13, 2025
- 9:17 pm
ಬೆಳಗಾವಿ ಅಧಿವೇಶನದಲ್ಲಿ ಇಂದಿನಿಂದ ಅಸಲಿ ಕದನ: 20 ಸಾವಿರ ರೈತರೊಂದಿಗೆ ಸುವರ್ಣಸೌಧ ಮುತ್ತಿಗೆಗೆ ಬಿಜೆಪಿ ಸಜ್ಜು
Karnataka Winter Session; ಬೆಳಗಾವಿ ಅಧಿವೇಶನದಲ್ಲಿ ಬಿಜೆಪಿ ರೈತರ ಸಮಸ್ಯೆಗಳ ಮುಂದಿಟ್ಟುಕೊಂಡು ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಬೃಹತ್ ಪ್ರತಿಭಟನೆಗೆ ಮುಂದಾಗಿದೆ. ಉತ್ತರ ಕರ್ನಾಟಕದ ಅಭಿವೃದ್ಧಿ, ಬೆಳೆಹಾನಿ ಪರಿಹಾರಕ್ಕೆ ಆಗ್ರಹಿಸಿ 20 ಸಾವಿರ ರೈತರೊಂದಿಗೆ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಬಿಜೆಪಿ ಸಿದ್ಧತೆ ನಡೆಸಿದೆ. ದೊಡ್ಡ ಮಟ್ಟದ ಹೋರಾಟದ ನಿರೀಕ್ಷೆಯಿದೆ.
- Sahadev Mane
- Updated on: Dec 9, 2025
- 8:42 am
ಸುವರ್ಣಸೌಧದ ಮೊಗಸಾಲೆಯಲ್ಲಿ ಸಿದ್ದರಾಮಯ್ಯ ಮತ್ತು ಅಶೋಕ್ ನಡುವೆ ‘ನಾಟಿಕೋಳಿ’ ಮಾತು
ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯ ಮತ್ತು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ನಡುವೆ ಸೌಹಾರ್ದಯುತ ಮಾತುಕತೆ ನಡೆಯಿತು. ಅಶೋಕ್ ಅವರ ಸಣ್ಣಗಾಗಿದ್ದನ್ನು ಗಮನಿಸಿ ಸಿಎಂ ಪ್ರಶ್ನಿಸಿದ ವೇಳೆ, ಅಶೋಕ್ ಅವರು ನೀಡಿದ 'ನಾಟಿ ಕೋಳಿ' ಹೇಳಿಕೆ ಇಬ್ಬರ ಮುಖದಲ್ಲಿ ನಗು ಮೂಡಿಸಿತು. ರಾಜಕೀಯ ಭಿನ್ನಾಭಿಪ್ರಾಯಗಳ ಹೊರತಾಗಿಯೂ ನಾಯಕರ ನಡುವಿನ ಸೌಹಾರ್ದದ ದೃಶ್ಯ, ನೆರೆದಿದ್ದವರ ಗಮನ ಸೆಳೆಯಿತು.
- Kiran Haniyadka
- Updated on: Dec 8, 2025
- 12:52 pm
ಸಿಎಂ ಸಿದ್ದರಾಮಯ್ಯ Vs ವಿಪಕ್ಷ ನಾಯಕ ಅಶೋಕ್: ಸಾಮಾಜಿಕ ಜಾಲತಾಣದಲ್ಲಿ ‘ಭ್ರಷ್ಟಾಚಾರ’ ವಾರ್
ಕರ್ನಾಟಕದಲ್ಲಿ ಭ್ರಷ್ಟಾಚಾರ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಮತ್ತು ವಿಪಕ್ಷ ನಾಯಕ ಆರ್. ಅಶೋಕ್ ನಡುವೆ ಮಾತಿನ ಸಮರ ತೀವ್ರಗೊಂಡಿದೆ. ಉಪ ಲೋಕಾಯುಕ್ತರ ಹೇಳಿಕೆ ಆಧರಿಸಿ ಪರಸ್ಪರ ಆರೋಪ-ಪ್ರತ್ಯಾರೋಪ ನಡೆದಿದೆ. ಸಾಮಾಜಿಕ ಜಾಲತಾಣದಲ್ಲಿ ಉಭಯ ನಾಯಕರು ಏಟು-ಎದಿರೇಟು ನೀಡಿದ್ದು, ಈ ಎಲ್ಲ ಬೆಳವಣಿಗೆಗಳ ನಡುವೆ ಉಪಲೋಕಾಯುಕ್ತರು ತಮ್ಮ ಹೇಳಿಕೆ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ.
- Prasanna Hegde
- Updated on: Dec 5, 2025
- 3:36 pm
ಕರ್ನಾಟಕದಲ್ಲಿ ಶೇ 63ರಷ್ಟು ಭ್ರಷ್ಟಾಚಾರ: ಬಿಜೆಪಿ ಕಡೆಗೇ ಬಾಣ ತಿರುಗಿಸಿದ ಸಿಎಂ ಸಿದ್ದರಾಮಯ್ಯ!
ಉಪಲೋಕಾಯುಕ್ತರ 63% ಭ್ರಷ್ಟಾಚಾರ ಹೇಳಿಕೆ ಆಧರಿಸಿ ಬಿಜೆಪಿ ಕಾಂಗ್ರೆಸ್ಗೆ ಸಿಬಿಐ ತನಿಖೆಯ ಸವಾಲು ಹಾಕಿತ್ತು. ಇದಕ್ಕೆ ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ, ಬಿ.ವೀರಪ್ಪ ಹೇಳಿಕೆ ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಆಡಳಿತದ ಅವಧಿಗೇ ಸೇರಿದ್ದು ಎಂದಿದ್ದಾರೆ. 40% ಕಮಿಷನ್, ಪಿಎಸ್ಐ ಹಗರಣ ಸೇರಿ ಹಲವು ಭ್ರಷ್ಟಾಚಾರ ಪ್ರಕರಣಗಳನ್ನು ಉಲ್ಲೇಖಿಸಿ, ತಮ್ಮ ಸರ್ಕಾರ ಪಾರದರ್ಶಕತೆಗಾಗಿ ಶ್ರಮಿಸುತ್ತಿದೆ ಎಂದಿದ್ದಾರೆ.
- Ganapathi Sharma
- Updated on: Dec 5, 2025
- 7:42 am
ಕರ್ನಾಟಕದಲ್ಲಿ ಭ್ರಷ್ಟಾಚಾರ: ನಿಮಗೆ ಧೈರ್ಯ ಇದ್ರೆ ಸಿಬಿಐ ತನಿಖೆ ಮಾಡಿಸಿ; ಆರ್ ಅಶೋಕ್ ಸವಾಲು
ಕರ್ನಾಟಕದಲ್ಲಿ ಶೇ. 63ರಷ್ಟು ಭ್ರಷ್ಟಾಚಾರವಿದೆ ಎಂಬ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರ ಹೇಳಿಕೆಯನ್ನೇ ಬಿಜೆಪಿ ಅಸ್ತ್ರಮಾಡಿಕೊಂಡಿದ್ದು, ಸರ್ಕಾರದ ಮೇಲೆ ಮುಗಿಬಿದ್ದಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಅಶೋಕ್, ಪೇ ಸಿಎಂ ಅಂತಾ ರೋಡ್ನಲ್ಲಿ ಪೋಸ್ಟರ್ ಅಂಟಿಸಿದ್ರಲ್ಲಾ, ಅದನ್ನ ಈಗ ನಿಮ್ಮ ಮುಖದ ಮೇಲೆ ಅಂಟಿಸಬೇಕು ಎಂದು ವಾಗ್ದಾಳಿ ಮಾಡಿದ್ದಾರೆ.
- Kiran Haniyadka
- Updated on: Dec 4, 2025
- 4:46 pm
ಪರಪ್ಪನ ಅಗ್ರಹಾರದಲ್ಲಿ ರೌಡಿಗಳಿಗೆ, ಉಗ್ರರಿಗೆ ರಾಜಾತಿಥ್ಯ: ಗೃಹ ಇಲಾಖೆ ಸತ್ತು ಹೋಗಿದೆ; ಸರ್ಕಾರದ ವಿರುದ್ಧ ಅಶೋಕ್ ವಾಗ್ದಾಳಿ
ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ಮಾಡಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ, ಭಯೋತ್ಪಾದಕರಿಗೆ ಮೊಬೈಲ್ ಬಳಕೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೆ ರಸ್ತೆ ಗುಂಡಿ, ವೋಟ್ ಚೋರಿ ವಿಚಾರವಾಗಿಯೂ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.
- Kiran Haniyadka
- Updated on: Nov 8, 2025
- 3:14 pm
ಕಲ್ಯಾಣ ಕರ್ನಾಟಕದ 38 ಹಳ್ಳಿಗಳ ಮಹಿಳೆಯರಿಗಿಲ್ಲ ಶಕ್ತಿ ಯೋಜನೆ ಭಾಗ್ಯ: ಪ್ರಿಯಾಂಕ್ ಖರ್ಗೆಗೆ ಇದು ಕಾಣ್ಸಲ್ಲವೇ? ಅಶೋಕ್ ಪ್ರಶ್ನೆ
ಕಲ್ಯಾಣ ಕರ್ನಾಟಕದ 38 ಹಳ್ಳಿಗಳಲ್ಲಿ ಬಸ್, ರಸ್ತೆ ಇಲ್ಲದೆ ಶಕ್ತಿ ಯೋಜನೆ ನಿರುಪಯುಕ್ತವಾಗಿರುವ ಬಗ್ಗೆ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಜತೆಗೆ, ಬೆಂಗಳೂರು ಟೆಕ್ ಸಮ್ಮಿಟ್ಗೆ ಮುನ್ನ ಗುಂಡಿ ಬಿದ್ದ ರಸ್ತೆಗಳನ್ನು ಸರಿಪಡಿಸಲು ಒತ್ತಾಯಿಸಿದ್ದಾರೆ.
- Ganapathi Sharma
- Updated on: Nov 4, 2025
- 12:00 pm
ಟನಲ್ ರಸ್ತೆಗಾಗಿ ಲಾಲ್ಬಾಗ್ನ 6 ಎಕರೆ ಬಳಸಲು ಪರ್ಮಿಷನ್ ಕೊಟ್ರಾ? ಜಂಟಿ ನಿರ್ದೇಶಕರಿಗೆ ಅಶೋಕ್ ಪ್ರಶ್ನೆ!
ಬೆಂಗಳೂರಿನ ಲಾಲ್ಬಾಗ್ನಲ್ಲಿ ಪ್ರಸ್ತಾವಿತ ಸುರಂಗ ರಸ್ತೆ ನಿರ್ಮಾಣಕ್ಕೆ 6 ಎಕರೆ ಭೂಮಿ ಬಳಕೆ ಬಗ್ಗೆ ಶಾಸಕ ಆರ್. ಅಶೋಕ್ ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ. ಹಾರ್ಟಿಕಲ್ಚರ್ ಇಲಾಖೆಯ ಜಂಟಿ ನಿರ್ದೇಶಕರನ್ನು ಪ್ರಶ್ನಿಸಿದ ಅಶೋಕ್, ಲಾಲ್ಬಾಗ್ನ ಐತಿಹಾಸಿಕ ಮಹತ್ವ, ಪುರಾತನ ಬಂಡೆ ಮತ್ತು ಕೆಂಪೇಗೌಡ ಗೋಪುರದಂತಹ ಸ್ಮಾರಕಗಳ ರಕ್ಷಣೆಯ ಮಹತ್ವವನ್ನು ಒತ್ತಿ ಹೇಳಿದರು. ಯೋಜನೆಗೆ ಇನ್ನೂ ಅನುಮತಿ ನೀಡಿಲ್ಲ ಎಂದು ನಿರ್ದೇಶಕರು ತಿಳಿಸಿದ್ದಾರೆ.
- Bhavana Hegde
- Updated on: Nov 2, 2025
- 11:28 am
ಬೆಂಗಳೂರು ಸುರಂಗ ರಸ್ತೆ ಯೋಜನೆಗೆ ಬಿಜೆಪಿ ವಿರೋಧ: ಆರ್. ಅಶೋಕ್ ನೇತೃತ್ವದಲ್ಲಿ ಜನ ಜಾಗೃತಿ
ಬೆಂಗಳೂರಿನ ಟನಲ್ ರಸ್ತೆ ಯೋಜನೆ ವಿರುದ್ಧ ಲಾಲ್ಬಾಗ್ನಲ್ಲಿ ಬಿಜೆಪಿ ನಾಯಕರು ಮತ್ತು ನಾಗರಿಕರು ಪ್ರತಿಭಟನೆ ನಡೆಸಿದರು. ವಿಪಕ್ಷ ನಾಯಕ ಆರ್ ಅಶೋಕ್ ಮತ್ತು ತೇಜಸ್ವಿ ಸೂರ್ಯ ಯೋಜನೆಗೆ ಅನುಮತಿಗಳಿಲ್ಲದಿರುವುದು ಹಾಗೂ ಹಣ ಲೂಟಿಯ ಉದ್ದೇಶದ ಬಗ್ಗೆ ಮಾತನಾಡಿದರು. ಪರಿಸರ ಹೋರಾಟಗಾರರು ಸಹಿ ಸಂಗ್ರಹಿಸಿ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಈ ಯೋಜನೆ ಬೆಂಗಳೂರಿನ ಪರಿಸರಕ್ಕೆ ಮಾರಕ ಎಂದು ವ್ಯಾಪಕ ವಿರೋಧ ವ್ಯಕ್ತವಾಗಿದೆ.
- Bhavana Hegde
- Updated on: Nov 2, 2025
- 10:38 am
‘ಟನಲ್ ರೋಡ್ ಬಿಡಿ ಸ್ವಾಮಿ, ಪಾಲಿಕೆ ಶಿಕ್ಷಕರಿಗೆ ಮೊದಲು ಸಂಬಳ ಕೊಡಿ’: ಡಿಕೆ ಶಿವಕುಮಾರ್ ಕಾಲೆಳೆದ ಆರ್ ಅಶೋಕ್
ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಶಾಲಾ ಕಾಲೇಜುಗಳ ಶಿಕ್ಷಕರು ನಾಲ್ಕು ತಿಂಗಳಿಂದ ಸಂಬಳವಿಲ್ಲದೆ ಪರದಾಡುತ್ತಿದ್ದಾರೆ. ಜಿಬಿಎ ತಾಂತ್ರಿಕ ಅಸಮರ್ಪಕತೆಯಿಂದ ವೇತನ ಬಿಡುಗಡೆ ಆಗದೆ ಶಿಕ್ಷಕರು ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಡಿಕೆ ಶಿವಕುಮಾರ್ ಅವರನ್ನು ಟೀಕಿಸಿ, "ಟನಲ್ ರೋಡ್ ಬಿಡಿ ಸ್ವಾಮಿ, ಶಿಕ್ಷಕರಿಗೆ ಮೊದಲು ಸಂಬಳ ಕೊಡಿ" ಎಂದು ಟ್ವೀಟ್ ಮಾಡಿದ್ದಾರೆ.
- Bhavana Hegde
- Updated on: Oct 28, 2025
- 11:01 am
ಈ ತುರ್ತು ಪರಿಸ್ಥಿತಿ ಆಟ ಜಾಸ್ತಿ ದಿನ ನಡೆಯಲ್ಲ: ಪ್ರಿಯಾಂಕ್ ಖರ್ಗೆಗೆ ಅಶೋಕ್ ಎಚ್ಚರಿಕೆ
ಸಚಿವ ಪ್ರಿಯಾಂಕ್ ಕ್ಷೇತ್ರ ಚಿತ್ತಾಪುರದಲ್ಲಿ ಆರ್ಎಸ್ಎಸ್ ಪಥಸಂಚಲನ ಪೂರ್ವಭಾವಿಯಾಗಿ ಅಳವಡಿಸಿದ್ದ ಭಗವಾ ಧ್ವಜಗಳನ್ನು ಪುರಸಭೆ ಸಿಬ್ಬಂದಿ ತೆರವುಗೊಳಿಸಿದ್ದಾರೆ. ಇದು ಹಿಂದೂ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ. ಅನುಮತಿ ಇದ್ದರೂ ಧ್ವಜ ತೆರವುಗೊಳಿಸಿದ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಿಪಕ್ಷ ನಾಯಕ ಆರ್. ಅಶೋಕ್ ತೀವ್ರ ವಾಗ್ದಾಳಿ ಮಾಡಿದ್ದಾರೆ.
- Kiran Haniyadka
- Updated on: Oct 18, 2025
- 12:37 pm