R Ashoka
ಬೆಂಗಳೂರಿನ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಆರ್. ಅಶೋಕ್ ಕರ್ನಾಟಕ ಬಿಜೆಪಿಯ ಹಿರಿಯ ನಾಯಕರು. ಆರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಅವರು ಪ್ರಸ್ತುತ ವಿರೋಧ ಪಕ್ಷದ ನಾಯಕರಾಗಿದ್ದಾರೆ. ಇವರು 1957ರ ಜುಲೈ 1 ರಂದು ಜನಿಸಿದರು. ಬೆಂಗಳೂರಿನಲ್ಲಿ ಹುಟ್ಟಿ ಬೆಳೆದ ಆರ್. ಅಶೋಕ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಕ್ರೀಯ ಕಾರ್ಯಕರ್ತರು. ನಂತರದ ದಿನಗಳಲ್ಲಿ ಬಿಜೆಪಿಯೊಂದಿಗೆ ಗುರುತಿಸಿಕೊಂಡು ರಾಜಕೀಯಕ್ಕೆ ಬಂದರು. ಹಂತ ಹಂತವಾಗಿ ಪಕ್ಷ ಹಾಗೂ ರಾಜಕೀಯದಲ್ಲಿ ಮುನ್ನೆಲೆಗೆ ಬಂದರು. ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ (1975 ರಿಂದ 77) ಅಶೋಕ್ ಜೈಲುವಾಸ ಅನುಭವಿಸಿದ್ದರು. ಬಿಜೆಪಿ ಹಿರಿಯ ನಾಯಕ, ಭಾರತ ರತ್ನ ಎಲ್.ಕೆ. ಅಡ್ವಾಣಿ ಮುಂತಾದವರೊಂದಿಗೆ ಜೈಲಿನಲ್ಲಿದ್ದರು. 1997 ರಲ್ಲಿ ಬೆಂಗಳೂರಿನ ಉತ್ತರಹಳ್ಳಿ ಕ್ಷೇತ್ರಕ್ಕೆ ನಡೆದ ವಿಧಾನಸಭಾ ಉಪ ಚುನಾವಣೆಯಲ್ಲಿ ಸ್ಪರ್ಧಿಸಿ ಪ್ರಥಮ ಬಾರಿಗೆ ಶಾಸಕರಾದರು. 2021ರಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಂಪುಟಕ್ಕೆ ಆರ್. ಅಶೋಕ ಸೇರ್ಪಡೆಯಾಗಿ ಕಂದಾಯ ಸಚಿವ ಖಾತೆ ನಿಭಾಯಿಸಿದರು. 1999 ಹಾಗೂ 2004 ರಲ್ಲಿ ಉತ್ತರಹಳ್ಳಿ ಕ್ಷೇತ್ರದಿಂದ ಮತ್ತೆ ಶಾಸಕರಾಗಿ ಆಯ್ಕೆಯಾದರು. 2008ರಲ್ಲಿ ಮತ್ತೊಮ್ಮೆ ಶಾಸಕರಾಗಿ ಆಯ್ಕೆಯಾದರು. ಬಿಎಸ್ ಯಡಿಯೂರಪ್ಪ ಅವರ ಸರ್ಕಾರದಲ್ಲಿ ಸಾರಿಗೆ ಖಾತೆಯ ಸಚಿವರಾದರು. 2012ರಲ್ಲಿ ಜಗದೀಶ ಶೆಟ್ಟರ್ ಮುಖ್ಯಮಂತ್ರಿಯಾದಾಗ ಉಪ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದರು. ಉಪ ಮುಖ್ಯಮಂತ್ರಿ ಜೊತೆಗೆ ಸಾರಿಗೆ ಹಾಗೂ ಗೃಹ ಇಲಾಖೆಗಳ ಜವಾಬ್ದಾರಿ ನಿಭಾಯಿಸಿದರು. 2018ರಲ್ಲಿ ಆರ್. ಅಶೋಕ್ ಪದ್ಮನಾಭನಗರದಿಂದ ಶಾಸಕರಾಗಿ ಮತ್ತೆ ಆಯ್ಕೆಯಾದರು. 2019ರಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಾಗ ಕಂದಾಯ, ಮುಜರಾಯಿ ಖಾತೆ ಹೊಣೆ ಹೊತ್ತಿದ್ದರು. ಪ್ರಸ್ತುತ ಆರ್. ಅಶೋಕ ವಿರೋಧ ಪಕ್ಷದ ನಾಯಕರಾಗಿದ್ದಾರೆ
ಇನ್ನೂ ಹೆಚ್ಚು ಓದಿತಮಿಳುನಾಡಿಗೆ ಕಾವೇರಿ ನೀರು ಬಿಡಲು CWRC ಆದೇಶ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಸಮರ
ಕಾವೇರಿ ನೀರು ನಿಯಂತ್ರಣ ಸಮಿತಿಯ ಆದೇಶದಿಂದ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿದೆ. ಬರಗಾಲವಿದ್ದರೂ ತಮಿಳುನಾಡಿಗೆ 3,500 ಕ್ಯೂಸೆಕ್ ನೀರು ಹರಿಸಲು ಆದೇಶಿಸಿದ್ದಕ್ಕೆ ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರದ ನಡೆ ಕನ್ನಡಿಗರಿಗೆ ದ್ರೋಹ ಎಂದು ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಆದರೆ, ಸರ್ಕಾರವು ಪ್ರಾಧಿಕಾರದ ತೀರ್ಮಾನಕ್ಕೆ ಬದ್ಧವಾಗಿ ಕುಡಿಯುವ ನೀರಿಗೆ ಆದ್ಯತೆ ನೀಡಿ ತೀರ್ಮಾನ ಕೈಗೊಳ್ಳುವುದಾಗಿ ಹೇಳಿದೆ.
- Akshay Pallamajalu
- Updated on: Jul 28, 2026
- 4:14 pm
ಪಶುವೈದ್ಯ ನೇಮಕಾತಿ ಹಗರಣ: ಕೆಪಿಎಸ್ಸಿ ಕಚೇರಿಗೆ ಆರ್. ಅಶೋಕ್ ಒಳಗೊಂಡ ಬಿಜೆಪಿ ನಿಯೋಗ ಭೇಟಿ
KPSC Scam: ಕೆಪಿಎಸ್ಸಿಯಲ್ಲಿ ನಡೆದ ಪಶುವೈದ್ಯರ ನೇಮಕಾತಿ ಹಗರಣ ಸಂಬಂಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಬಿಜೆಪಿ ನಿಯೋಗವು ಕೆಪಿಎಸ್ಸಿ ಹಂಗಾಮಿ ಅಧ್ಯಕ್ಷ ಡಾ. ಬಿ. ಪ್ರಭುದೇವ್ ಅವರನ್ನು ಭೇಟಿಯಾಗಿತು. ಈ ವೇಳೆ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ಚರ್ಚೆ ನಡೆಸಲಾಗಿದೆ. ಆ ಬಳಿಕ ಮಾತನಾಡಿದ ಅಶೋಕ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
- Kiran Haniyadka
- Updated on: Jul 27, 2026
- 4:28 pm
NEET ವಿಚಾರವಾಗಿ ಕೇಂದ್ರ ಸಚಿವರ ರಾಜೀನಾಮೆ ಬೆನ್ನಲ್ಲೇ ಕರ್ನಾಟಕದಲ್ಲಿ ನಡೆದ ಗಂಭೀರ ಘಟನೆಗಳಿಗೆ ಹೊಣೆ ಯಾರೆಂದು ಕಾಂಗ್ರೆಸ್ಗೆ ಅಶೋಕ್ ಪ್ರಶ್ನೆ
NEET ಪರೀಕ್ಷೆಗೆ ಸಂಬಂಧಿಸಿದ ಬೆಳವಣಿಗೆಯ ಹಿನ್ನೆಲೆಯಲ್ಲಿ ಕೇಂದ್ರ ಸಚಿವರ ರಾಜೀನಾಮೆ ಬೆನ್ನಲ್ಲೇ ಕೆಪಿಎಸ್ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ, ಐಪಿಎಲ್ ಕಾಲ್ತುಳಿತ ದುರಂತ ಹಾಗೂ ರೈತರ ಆತ್ಮಹತ್ಯೆಗಳಿಗೆ ನೈತಿಕ ಹೊಣೆ ಯಾರೆಂದು ಕಾಂಗ್ರೆಸ್ ಸರ್ಕಾರಕ್ಕೆ ಆರ್. ಅಶೋಕ್ ಪ್ರಶ್ನಿಸಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಅಧಿಕಾರ ಎಂದರೆ ಕೇವಲ ಹುದ್ದೆಯಲ್ಲ; ಅದರೊಂದಿಗೆ ಜವಾಬ್ದಾರಿಯೂ ಇರುತ್ತದೆ ಎಂದವರು ಇದೇ ವೇಳೆ ತಿಳಿಸಿದ್ದಾರೆ.
- Prasanna Hegde
- Updated on: Jul 26, 2026
- 1:47 pm
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್ ಅಶೋಕ್
ಬಿಜೆಪಿ ನಾಯಕರ ಮೇಲೆ ಮೊಟ್ಟೆ ಎಸೆದ ಘಟನೆಯನ್ನು ಖಂಡಿಸಿದ ಆರ್. ಅಶೋಕ ಅವರು, ಇದು ಪಾಕಿಸ್ತಾನ ಪರ ಇರುವವರಿಂದ ಹಿಂದೂಗಳ ಮೇಲೆ ನಡೆದ ಹಲ್ಲೆ ಎಂದರು. ಘಟನೆ ಪೂರ್ವ ನಿಯೋಜಿತ ಕೃತ್ಯವಾಗಿದ್ದು, ಆರೋಪಿಗಳನ್ನು ಗೂಂಡಾ ಕಾಯ್ದೆ ಅಡಿಯಲ್ಲಿ ಬಂಧಿಸಬೇಕು ಎಂದು ಆಗ್ರಹಿಸಿದರು. ಅಲ್ಲದೆ, ಕಾಂಗ್ರೆಸ್ ಕಚೇರಿಗಳಲ್ಲಿ ಬಾಂಬ್ಗಳಿವೆಯೇ ಎಂದು ಪೊಲೀಸರು ತನಿಖೆ ನಡೆಸಬೇಕೆಂದು ಒತ್ತಾಯಿಸಿದರು.
- Kiran Haniyadka
- Updated on: Jul 22, 2026
- 5:58 pm
TV9 Kannada News Live:ನೂತನ ಸಚಿವರಿಗೆ ಪ್ರತಿಜ್ಞಾವಿಧಿ ಬೋಧಿಸಲು ರಾಜ್ಯಪಾಲರಿಗೆ ಮನವಿ ಮಾಡಿದ್ದೇನೆ ಎಂದ ಸಿಎಂ
Karnataka News Today Live Updates: ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ ಸಿಜೆಪಿ ಹೋರಾಟ ಜೋರಾಗಿದ್ದು, ಮತ್ತೊಂದೆಡೆ ಸಂಸತ್ ಮುಂಗಾರು ಅಧಿವೇಶನ ಕೂಡ ನಡೆಯುತ್ತಿದೆ. ಇತ್ತ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಸಂಬಂಧ ಸಿಎಂ ಡಿಕೆ ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ದೆಹಲಿಯಲ್ಲಿ ಹೈಕಮಾಂಡ್ ನಾಯಕರ ಜತೆ ಮಾತುಕತೆ ನಡೆಸಿದ್ದಾರೆ. ಇಂದಿನ ಪ್ರಮುಖ ಸುದ್ದಿ ವಿದ್ಯಮಾನಗಳ ಕ್ಷಣದ ಅಪ್ಡೇಟ್ ಇಲ್ಲಿದೆ.
- Ganapathi Sharma
- Updated on: Jul 21, 2026
- 10:38 pm
ಚಿನ್ನಸ್ವಾಮಿ ಸ್ಟೇಡಿಯಲ್ಲಿ ಕಾಲ್ತುಳಿತ ದುರಂತ: 11 ಜನರ ಸಾವಿಗೆ ಹೊಣೆ ಯಾರು? ಅಶೋಕ್ ಪ್ರಶ್ನೆ
Chinnaswamy stadium stampede: ಕಾಲ್ತುಳಿತ ದುರಂತದಲ್ಲಿ ಅಧಿಕಾರಿಗಳಿಗೆ ಕ್ಲೀನ್ ಚಿಟ್ ಸಂಬಂಧ ಪ್ರತಿಕ್ರಿಯಸಿರುವ ವಿಪಕ್ಷ ನಾಯಕ ಆರ್. ಅಶೋಕ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 11 ಮಂದಿ ಅಮಾಯಕರ ಸಾವಿಗೆ ನ್ಯಾಯ ಎಲ್ಲಿದೆ? ಕಾಂಗ್ರೆಸ್ ಸರ್ಕಾರ ಘಟನೆಯನ್ನು ಮುಚ್ಚಿಹಾಕಲು ಪ್ರಯತ್ನಿಸುತ್ತಿದ್ದು, ಇಲ್ಲಿ ಅಪರಾಧಿಗಳು ಹಾಗಿದ್ದರೆ ಯಾರು ಎಂದವರು ಪ್ರಶ್ನಿಸಿದ್ದಾರೆ. ನಮ್ಮ ಸರ್ಕಾರ ಬಂದರೆ ಪ್ರಕರಣದ ತನಿಖೆಯನ್ನು ಸಿಬಿಐಗೆ ಕೊಡ್ತೇವೆ ಎಂದೂ ಅವರು ತಿಳಿಸಿದ್ದಾರೆ.
- Kiran Haniyadka
- Updated on: Jul 15, 2026
- 3:30 pm
Neevu Heliddu Naavu Keliddu: ಬಿವೈ ವಿಜಯೇಂದ್ರ ಆರ್ ಅಶೋಕ್ ಕಾಮಿಡಿ
ನೀವು ಹೇಳಿದ್ದು ನಾವು ಕೇಳಿದ್ದು: ಇದು ಟಿವಿ9 ಕನ್ನಡದಲ್ಲಿ ಪ್ರಸಾರವಾಗುವ ಜನಪ್ರಿಯ ರಾಜಕೀಯ ವಿಡಂಬನೆ ಮತ್ತು ಹಾಸ್ಯ ಕಾರ್ಯಕ್ರಮ. ಕರ್ನಾಟಕ ರಾಜ್ಯದ ಪ್ರಮುಖ ರಾಜಕಾರಣಿಗಳು ವಿವಿಧ ಸ್ಥಳ ಮತ್ತು ಸಮಯಗಳಲ್ಲಿ ನೀಡಿದ ಹೇಳಿಕೆಗಳನ್ನು ಸೇರಿಸಿ ಮಿಮಿಕ್ರಿ ಮತ್ತು ಧ್ವನಿಮುದ್ರಿಕೆಗಳ ರೂಪದಲ್ಲಿ ಹಾಸ್ಯಮಯವಾಗಿ ತೋರಿಸುವ ಕಾರ್ಯಕ್ರಮವಾಗಿದೆ.
- Prasanna Hegde
- Updated on: Jul 15, 2026
- 3:17 pm
ಕರ್ನಾಟಕ ಶಾಶ್ವತ ನಿವಾಸ ಪ್ರಮಾಣಪತ್ರ ರದ್ದುಪಡಿಸುವಂತೆ ರಾಜ್ಯಪಾಲರಿಗೆ ಬಿಜೆಪಿ ಮನವಿ
ಶಾಶ್ವತ ನಿವಾಸ ಪ್ರಮಾಣಪತ್ರ ನೀಡುವ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ಬಿಜೆಪಿ ನಾಯಕ ಆರ್. ಅಶೋಕ್ ಅವರು ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಈ ನಿರ್ಧಾರವು ಅಕ್ರಮ ಬಾಂಗ್ಲಾದೇಶೀಯರನ್ನು ಮತದಾರರನ್ನಾಗಿ ಮಾಡುವ ಹುನ್ನಾರವಾಗಿದ್ದು, ರಾಷ್ಟ್ರೀಯ ಭದ್ರತೆಗೆ ಅಪಾಯ ತರುತ್ತದೆ ಎಂದು ಅಶೋಕ್ ಆರೋಪಿಸಿದ್ದಾರೆ. ಇದನ್ನು ತಕ್ಷಣವೇ ರದ್ದುಪಡಿಸುವಂತೆ ಅವರು ಆಗ್ರಹಿಸಿದ್ದಾರೆ.
- Ganapathi Sharma
- Updated on: Jul 15, 2026
- 2:04 pm
TV9 Kannada News Highlights: ಗೃಹಜ್ಯೋತಿ ನಿಯಮದಲ್ಲಿ ಬದಲಾವಣೆ: ಬಾಡಿಗೆದಾರರು ಬದಲಾದ್ರೂ ಸಿಗುತ್ತೆ ಫ್ರೀ ಕರೆಂಟ್
Karnataka News Today Highlights: ಸಿಎಂ ಡಿಕೆ ಶಿವಕುಮಾರ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಕಸರತ್ತು ಜೋರಾಗಿದ್ದು, ಜುಲೈ 17 ರ ನಂತರ ಮುಖ್ಯಮಂತ್ರಿಗಳು ದೆಹಲಿಗೆ ತೆರಳುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಅಪಾರ್ಟ್ಮೆಂಟ್ ನಿರ್ವಹಣೆಗೆ ಹೊಸ ಕಾನೂನು ತರುವ ಬಗ್ಗೆ ಸಿಎಂ ನೇತೃತ್ವದಲ್ಲಿ ಸಂವಾದ, ಬಿಡದಿ ರೈತರ ಪ್ರತಿಭಟನೆ ಸೇರಿದಂತೆ ಇಂದಿನ ಎಲ್ಲ ಸುದ್ದಿ ಬೆಳವಣಿಗೆಗಳ ಕ್ಷಣ ಕ್ಷಣದ ಅಪ್ಡೇಟ್ ಇಲ್ಲಿ ಲಭ್ಯ.
- Ganapathi Sharma
- Updated on: Jul 15, 2026
- 10:53 pm
ಕಾಂಗ್ರೆಸ್ ಮನೆಯಲ್ಲಿ ಗರಿಗೆದರಿಂದ ಸಂಪುಟ ವಿಸ್ತರಣೆ ಕಸರತ್ತು: ಆರ್. ಅಶೋಕ್ ಲೇವಡಿ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾಗಿ ತಿಂಗಳು ಕಳೆದರೂ ಸಂಪುಟ ವಿಸ್ತರಣೆ ಕಸರತ್ತು ಮುಂದುವರಿದಿದೆ. ಜುಲೈ 17ರ ಬಳಿಕ ಸಿಎಂ ಡಿಕೆ ದೆಹಲಿಗೆ ತೆರಳಲಿದ್ದು, ಈ ನಡುವೆ ಒಂದು ಸಚಿವ ಸ್ಥಾನಕ್ಕೆ 150 ಕೋಟಿ ರೂ. ಲಾಬಿ ನಡೆಯುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ. ಆಕಾಂಕ್ಷಿ ಶಾಸಕರಲ್ಲಿ ಸಚಿವ ಸ್ಥಾನಕ್ಕಾಗಿ ಭಾರಿ ಪೈಪೋಟಿ ಶುರುವಾಗಿದೆ.
- Prasanna Gaonkar
- Updated on: Jul 15, 2026
- 7:50 am
ರಾಜ್ಯ ಸರ್ಕಾರದ ವಿರುದ್ಧ ಅಶೋಕ್ ಸ್ಫೋಟಕ ಆರೋಪ: ಮಂತ್ರಿ ಸ್ಥಾನಕ್ಕೆ ಕೊಡಬೇಕಾ ಕೋಟಿ ಕೋಟಿ?
Karnataka Politics: ವಿಪಕ್ಷ ನಾಯಕ ಆರ್. ಅಶೋಕ್ ಅವರು ರಾಜ್ಯ ಸರ್ಕಾರವನ್ನು ತೀವ್ರವಾಗಿ ಟೀಕಿಸಿದ್ದಾರೆ. ಚಿವರೇ ಇಲ್ಲದೆ ಸದನ ಕರೆಯಲು ಇವರು ಹೊರಟಿದ್ದಾರೆ. ಸಚಿವ ಸ್ಥಾನಕ್ಕೆ 100ರಿಂದ 150 ಕೋಟಿ ರೂಪಾಯಿ ನೀಡಬೇಕಾದ ಸ್ಥಿತಿ ಕಾಂಗ್ರೆಸ್ನಲ್ಲಿದೆ. ಇದೇ ರೀತಿ ರೈತರ ಹೋರಾಟಗಳು ನಡೆದಲ್ಲಿ ಈ ಸರ್ಕಾರದಲ್ಲಿ ಮೂರನೇ ಮುಖ್ಯಮಂತ್ರಿಯನ್ನೂ ನಾವು ಕಾಣುವ ಸಾಧ್ಯತೆ ಇದೆ ಎಂದು ಅವರು ಭವಿಷ್ಯ ನುಡಿದಿದ್ದಾರೆ.
- Kiran Haniyadka
- Updated on: Jul 14, 2026
- 4:54 pm
ವಿಪಕ್ಷ ನಾಯಕ ಆರ್. ಅಶೋಕ್ಗೆ ಚಾಮರಾಜನಗರದಲ್ಲಿ ರೈತರಿಂದ ಘೇರಾವ್
ಚಾಮರಾಜನಗರದಲ್ಲಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರನ್ನು ರೈತರು ಸುತ್ತುವರಿದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಾಮರಾಜನಗರದಲ್ಲಿ ಬರ ಅಧ್ಯಯನ ನಡೆಸದಿರುವುದಕ್ಕೆ ಮತ್ತು ರೈತರ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಸರ್ಕಾರಕ್ಕೆ ತಲುಪಿಸದಿರುವುದಕ್ಕೆ ರೈತರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ರಾಜ್ಯ ಕಬ್ಬು ಬೆಳೆಗಾರರ ಸಂಘದ ಸದಸ್ಯರು ಸೇರಿದಂತೆ ಹಲವು ರೈತರು ಅಶೋಕ್ ಅವರ ವಾಹನವನ್ನು ತಡೆದು, ಬರ ಘೋಷಣೆ ಮತ್ತು ಪ್ರತಿ ಎಕರೆಗೆ 50,000 ರೂಪಾಯಿ ಬೆಳೆ ನಷ್ಟ ಪರಿಹಾರಕ್ಕೆ ಆಗ್ರಹಿಸಿದ್ದಾರೆ.
- Suraj Prasad SN
- Updated on: Jul 13, 2026
- 4:16 pm