AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

R Ashoka

R Ashoka

ಬೆಂಗಳೂರಿನ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಆರ್. ಅಶೋಕ್ ಕರ್ನಾಟಕ ಬಿಜೆಪಿಯ ಹಿರಿಯ ನಾಯಕರು. ಆರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಅವರು ಪ್ರಸ್ತುತ ವಿರೋಧ ಪಕ್ಷದ ನಾಯಕರಾಗಿದ್ದಾರೆ. ಇವರು 1957ರ ಜುಲೈ 1 ರಂದು ಜನಿಸಿದರು. ಬೆಂಗಳೂರಿನಲ್ಲಿ ಹುಟ್ಟಿ ಬೆಳೆದ ಆರ್​. ಅಶೋಕ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಕ್ರೀಯ ಕಾರ್ಯಕರ್ತರು. ನಂತರದ ದಿನಗಳಲ್ಲಿ ಬಿಜೆಪಿಯೊಂದಿಗೆ ಗುರುತಿಸಿಕೊಂಡು ರಾಜಕೀಯಕ್ಕೆ ಬಂದರು. ಹಂತ ಹಂತವಾಗಿ ಪಕ್ಷ ಹಾಗೂ ರಾಜಕೀಯದಲ್ಲಿ ಮುನ್ನೆಲೆಗೆ ಬಂದರು. ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ (1975 ರಿಂದ 77) ಅಶೋಕ್ ಜೈಲುವಾಸ ಅನುಭವಿಸಿದ್ದರು. ಬಿಜೆಪಿ ಹಿರಿಯ ನಾಯಕ, ಭಾರತ ರತ್ನ ಎಲ್.ಕೆ. ಅಡ್ವಾಣಿ ಮುಂತಾದವರೊಂದಿಗೆ ಜೈಲಿನಲ್ಲಿದ್ದರು. 1997 ರಲ್ಲಿ ಬೆಂಗಳೂರಿನ ಉತ್ತರಹಳ್ಳಿ ಕ್ಷೇತ್ರಕ್ಕೆ ನಡೆದ ವಿಧಾನಸಭಾ ಉಪ ಚುನಾವಣೆಯಲ್ಲಿ ಸ್ಪರ್ಧಿಸಿ ಪ್ರಥಮ ಬಾರಿಗೆ ಶಾಸಕರಾದರು. 2021ರಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಂಪುಟಕ್ಕೆ ಆರ್. ಅಶೋಕ ಸೇರ್ಪಡೆಯಾಗಿ ಕಂದಾಯ ಸಚಿವ ಖಾತೆ ನಿಭಾಯಿಸಿದರು. 1999 ಹಾಗೂ 2004 ರಲ್ಲಿ ಉತ್ತರಹಳ್ಳಿ ಕ್ಷೇತ್ರದಿಂದ ಮತ್ತೆ ಶಾಸಕರಾಗಿ ಆಯ್ಕೆಯಾದರು. 2008ರಲ್ಲಿ ಮತ್ತೊಮ್ಮೆ ಶಾಸಕರಾಗಿ ಆಯ್ಕೆಯಾದರು. ಬಿಎಸ್​ ಯಡಿಯೂರಪ್ಪ ಅವರ ಸರ್ಕಾರದಲ್ಲಿ ಸಾರಿಗೆ ಖಾತೆಯ ಸಚಿವರಾದರು. 2012ರಲ್ಲಿ ಜಗದೀಶ ಶೆಟ್ಟರ್ ಮುಖ್ಯಮಂತ್ರಿಯಾದಾಗ ಉಪ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದರು. ಉಪ ಮುಖ್ಯಮಂತ್ರಿ ಜೊತೆಗೆ ಸಾರಿಗೆ ಹಾಗೂ ಗೃಹ ಇಲಾಖೆಗಳ ಜವಾಬ್ದಾರಿ ನಿಭಾಯಿಸಿದರು. 2018ರಲ್ಲಿ ಆರ್‌. ಅಶೋಕ್ ಪದ್ಮನಾಭನಗರದಿಂದ ಶಾಸಕರಾಗಿ ಮತ್ತೆ ಆಯ್ಕೆಯಾದರು. 2019ರಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಾಗ ಕಂದಾಯ, ಮುಜರಾಯಿ ಖಾತೆ ಹೊಣೆ ಹೊತ್ತಿದ್ದರು. ಪ್ರಸ್ತುತ ಆರ್. ಅಶೋಕ ವಿರೋಧ ಪಕ್ಷದ ನಾಯಕರಾಗಿದ್ದಾರೆ

ಇನ್ನೂ ಹೆಚ್ಚು ಓದಿ

ದಿನಕ್ಕೊಂದು ವಿಚಾರಗಳಿಂದ ಗಮನ ಸೆಳೆಯುತ್ತಿರುವ ಬಳ್ಳಾರಿ ಚಲೋ: 8ನೇ ದಿನಕ್ಕೆ ಪ್ರವೇಶಿಸಿದ ಬಿಜೆಪಿಯ ಪಾದಯಾತ್ರೆ

ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದ ಬಳ್ಳಾರಿ ಚಲೋ ಪಾದಯಾತ್ರೆ ಎಂಟನೇ ದಿನಕ್ಕೆ ಕಾಲಿಟ್ಟಿದೆ. ದರೋಜಿಯಲ್ಲಿ ಸೋಮವಾರ ಕೊನೆಗೊಂಡಿದ್ದ ಯಾತ್ರೆ ಇಂದು ಕುಡಿತಿನಿವರೆಗೆ ಸಾಗಲಿದೆ. ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ವಾಗ್ದಾಳಿ ನಡೆಸಿದ್ದಾರೆ. ಸೆಪ್ಟೆಂಬರ್ 10ರಂದು ಬಳ್ಳಾರಿಯಲ್ಲಿ ಸಮಾರೋಪ ನಡೆಯಲಿದೆ.

ಸರ್ಕಾರಿ ಶಾಲಾ ಮಕ್ಕಳಿಗೆ ಕಳಪೆ ಗುಣಮಟ್ಟದ ಶೂ ವಿತರಣೆ: ರಾಜ್ಯ ಸರ್ಕಾರದ ವಿರುದ್ಧ ಶೇ.40 ಕಮಿಷನ್​​ ಆರೋಪ ಮಾಡಿದ ಅಶೋಕ್​

ಸರ್ಕಾರಿ ಶಾಲಾ ಮಕ್ಕಳಿಗೆ ಕಳಪೆ ಗುಣಮಟ್ಟದ ಶೂ-ಸಾಕ್ಸ್ ವಿತರಿಸಿರುವುದರ ವಿರುದ್ಧ ವಿಪಕ್ಷ ನಾಯಕ ಆರ್. ಅಶೋಕ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಈ ಯೋಜನೆಯಲ್ಲೂ ಶೇ.40 ಕಮಿಷನ್ ಹೊಡೆಯಲಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಕಾವೇರಿ 6ನೇ ಹಂತದ ಹೆಸರಿನಲ್ಲಿ 7,000 ಕೋಟಿ ಹೊಸ ಲೂಟಿಗೆ ರಾಜ್ಯ ಸರ್ಕಾರ ಸಿದ್ಧತೆ ನಡೆಸಿದ್ದು, ಸೋರಿಕೆ ಮತ್ತು ಅಕ್ರಮ ಸಂಪರ್ಕ ತಡೆಯುವಲ್ಲಿ ಸರ್ಕಾರ ವಿಫಲವಾಗಿದೆ ಎಂದವರು ವಾಗ್ದಾಳಿ ನಡೆಸಿದ್ದಾರೆ.

ಮೊಬೈಲ್​​ ಟಾರ್ಚ್​​ ಬೆಳಕಲ್ಲಿ ಬಸ್​​ ಚಾಲನೆ ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಅಶೋಕ್​​ ವಾಗ್ದಾಳಿ

ಧಾರವಾಡದ ಕುಂದಗೋಳದಲ್ಲಿ ಬಸ್ ಹೆಡ್‌ಲೈಟ್ ಕೈಕೊಟ್ಟಿದ್ದರಿಂದ ಮೊಬೈಲ್ ಟಾರ್ಚ್ ಬೆಳಕಿನಲ್ಲಿ 15 ಕಿ.ಮೀ ಬಸ್ ಚಲಾಯಿಸಿದ ಘಟನೆ ಖಂಡಿಸಿ, ಪ್ರಯಾಣಿಕರ ಜೀವದ ಜೊತೆ ಸರ್ಕಾರ ಚೆಲ್ಲಾಟವಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್‌ ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.ನಿನ್ನೆ ರಾತ್ರಿ 8 ಗಂಟೆಗೆ ಹುಬ್ಬಳ್ಳಿಯಿಂದ ಅತ್ತಿಗೇರಿಗೆ ಹೊರಟಿದ್ದ ಬಸ್​​ನ ಹೆಡ್‌ಲೈಟ್ ತಾಂತ್ರಿಕ ದೋಷದಿಂದ ಕುಂದಗೋಳ ತಾಲೂಕಿನ ಸಂಶಿ ಬಳಿ ಬಂದ್​​ ಆಗಿತ್ತು. ಪ್ರಯಾಣಿಕರನ್ನು ಅರ್ಧಕ್ಕೆ ಇಳಿಸಲು ಸಾಧ್ಯವಾಗದ ಕಾರಣ, ಪ್ರಯಾಣಿಕರ ಮೊಬೈಲ್​​ ಟಾರ್ಚ್‌ ಬೆಳಕಿನಲ್ಲಿ ಚಾಲಕ ಅತ್ತಿಗೇರಿವರೆಗೆ ಬಸ್ ಚಲಾಯಿಸಿದ್ದರು.

ಕಾಂಗ್ರೆಸ್ ಸರ್ಕಾರದ ವಿರುದ್ಧ ಸಮರ: 3ನೇ ದಿನಕ್ಕೆ ಕಾಲಿಟ್ಟ ಬಿಜೆಪಿ ‘ಬಳ್ಳಾರಿ ಚಲೋ’ ಪಾದಯಾತ್ರೆ, ಇಂದು ಸಿಂಧನೂರಿನತ್ತ ಪಯಣ

BJP Padayatra: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದ ಬಿಜೆಪಿ ‘ಬಳ್ಳಾರಿ ಚಲೋ’ ಪಾದಯಾತ್ರೆ ಮೂರನೇ ದಿನಕ್ಕೆ ಕಾಲಿಟ್ಟಿದೆ. ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ನಾಯಕರು, ದಲಿತ ಮುಖಂಡರೊಂದಿಗೆ ಸಂವಾದ ನಡೆಸಿದ್ದಾರೆ. ಬಿಜೆಪಿ ಪಾದಯಾತ್ರೆಗೆ ಕಾಂಗ್ರೆಸ್‌ ಕೂಡ ಕೌಂಟರ್‌ ಪ್ಲ್ಯಾನ್ ರೂಪಿಸುತ್ತಿದೆ.

‘ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ಲೂಟಿ ವ್ಯವಹಾರ ಬಯಲು’: ಕಮಿಷನ್ ಸರ್ಕಾರಕ್ಕೆ ಲಂಚದ ಬಗ್ಗೆ ಮಾತನಾಡೋ ನೈತಿಕತೆ ಇಲ್ಲವೆಂದ ಅಶೋಕ್

ಮಂಗಳೂರು KRIDL ವಿಭಾಗದಲ್ಲಿ ಸಚಿವರ ಹೆಸರಿನಲ್ಲಿ ಶೇ 7ರಷ್ಟು ಕಮಿಷನ್ ವಸೂಲಿ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಶಾಸಕ ಅಶೋಕ್ ರೈ ಆರೋಪಿಸಿ ಮುಖ್ಯಮಂತ್ರಿಗೆ ಪತ್ರ ಬರೆದ ವಿಚಾರವನ್ನೇ ಇಟ್ಟುಕೊಂಡು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೆ, ಆರೋಪದ ಕುರಿತ ತನಿಖೆಗೆ ಆಗ್ರಹಿಸಿದ್ದಾರೆ.

ನಾಗೇಂದ್ರ ರಾಜೀನಾಮೆ ಕೊಟ್ಟರೂ ಬಿಜೆಪಿ ಪಾದಯಾತ್ರೆ ನಿಲ್ಲಿಸಲ್ಲ: ಆರ್ ಅಶೋಕ್

ವಾಲ್ಮೀಕಿ ನಿಗಮ ಹಗರಣದ ಹಿನ್ನೆಲೆಯಲ್ಲಿ ಬಿ. ನಾಗೇಂದ್ರ ರಾಜೀನಾಮೆಯನ್ನು ವಿಪಕ್ಷದ ಹೋರಾಟದ ಫಲ ಎಂದು ಆರ್. ಅಶೋಕ್ ಬಣ್ಣಿಸಿದ್ದಾರೆ. ದಲಿತರ ಹಣ ದುರುಪಯೋಗಪಡಿಸಿಕೊಂಡರೆ ಉಳಿಗಾಲವಿಲ್ಲ ಎಂದು ಕಾಂಗ್ರೆಸ್‌ಗೆ ಎಚ್ಚರಿಕೆ ನೀಡಿದ ಅವರು, ಬರಗಾಲ, ನೈಸ್, ಬಿಡದಿ, ಕೆಪಿಎಸ್ಸಿ ಹಗರಣದಂತಹ ಹಲವು ವಿಚಾರಗಳಿಗಾಗಿ ಪಾದಯಾತ್ರೆ ಮುಂದುವರಿಯಲಿದೆ ಎಂದು ಘೋಷಿಸಿದರು.

ಭ್ರಷ್ಟ ಕಾಂಗ್ರೆಸ್ ಸರ್ಕಾರ ಜನಾಕ್ರೋಶದ ಮುಂದೆ ಮಂಡಿಯೂರಿ ಶರಣಾಗಿದೆ: ಸಚಿವ ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ಅಶೋಕ್​​ ಪೋಸ್ಟ್​​

ಸಚಿವ ಬಿ. ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ಭ್ರಷ್ಟ ಕಾಂಗ್ರೆಸ್ ಸರ್ಕಾರ ಜನಾಕ್ರೋಶಕ್ಕೆ ಮಂಡಿಯೂರಿ ಶರಣಾಗಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಲೇವಡಿ ಮಾಡಿದ್ದು, ಇದನ್ನು ದಲಿತರ ಜಯ ಎಂದು ಬಣ್ಣಿಸಿದ್ದಾರೆ. ಮಾತುಮಾತಿಗೂ ಬಾಬಾಸಾಹೇಬ್‌ ಅಂಬೇಡ್ಕರ್​ರ ಹೆಸರು ಹೇಳಿಕೊಂಡು ದಲಿತರನ್ನು ತುಳಿದ ಕಾಂಗ್ರೆಸ್‌ಗೆ ದಲಿತರ ಆಕ್ರೋಶದ ಬಿಸಿ ತಟ್ಟಿದೆ ಎಂದವರು ತಿಳಿಸಿದ್ದಾರೆ.

RSS ನೋಂದಣಿ ವಿವಾದ: ಗೃಹ ಸಚಿವ ಪ್ರಿಯಾಂಕ್​​ ಖರ್ಗೆ ಹೇಳಿಕೆಗೆ ಆರ್​​. ಅಶೋಕ್​​ ಕೌಂಟರ್​​

ಸಚಿವ ಪ್ರಿಯಾಂಕ್ ಖರ್ಗೆ ಅವರ ಆರ್‌ಎಸ್‌ಎಸ್ ನೋಂದಣಿ ಹೇಳಿಕೆಗೆ ವಿಪಕ್ಷ ನಾಯಕ ಅಶೋಕ್ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಸಂವಿಧಾನದಲ್ಲಿ ನೋಂದಣಿ ಕಡ್ಡಾಯ ಎಂದು ಎಲ್ಲೂ ಹೇಳಿಲ್ಲ. ಅಂಬೇಡ್ಕರ್ ಅವರ ಸಂವಿಧಾನವನ್ನು ಓದಿ ಅರ್ಥಮಾಡಿಕೊಳ್ಳುವಂತೆ ಪ್ರಿಯಾಂಕ್ ಖರ್ಗೆಗೆ ಸವಾಲೆಸೆದ ಅಶೋಕ್, ಬ್ರಿಟಿಷರ ಆಳ್ವಿಕೆಯಲ್ಲೇ ಆರ್‌ಎಸ್‌ಎಸ್ ಸ್ಥಾಪನೆಯಾಗಿದೆ, ಅದನ್ನು ಯಾರೂ ಪ್ರಶ್ನಿಸಿರಲಿಲ್ಲ ಎಂದಿದ್ದಾರೆ.

ವಿಧಾನಸಭೆಯ ಕಾರ್ಯಕಲಾಪದಲ್ಲಿ ತಾರತಮ್ಯ ಆರೋಪ: ವಿಧಾನಸಭೆ ಸ್ಪೀಕರ್​​​ಗೆ ವಿಪಕ್ಷ ನಾಯಕ ಆರ್.ಅಶೋಕ್ ಪತ್ರ

ವಿಧಾನಸಭೆಯ ಕಾರ್ಯಕಲಾಪಗಳಲ್ಲಿ ವಿಪಕ್ಷ ನಾಯಕರು ಹಾಗೂ ಶಾಸಕರ ಹೇಳಿಕೆ, ವೀಡಿಯೋಗಳನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡದೆ ವಾರ್ತಾ ಇಲಾಖೆ ತಾರತಮ್ಯ ಮಾಡುತ್ತಿದೆ ಎಂದು ಆರ್. ಅಶೋಕ್ ಆರೋಪಿಸಿದ್ದು, ಅಧಿಕಾರಿಗಳ ವಿರುದ್ಧ ಹಕ್ಕುಚ್ಯುತಿ ಮಂಡಿಸುವುದಾಗಿ ಸ್ಪೀಕರ್​​ಗೆ ಪತ್ರ ಬರೆದಿದ್ದಾರೆ. ಈ ಸಂಬಂಧ ವಾರ್ತಾ ಇಲಾಖೆಗೆ ನಿರ್ದೇಶನ ನೀಡಿ ಎಂದವರು ಆಗ್ರಹಿಸಿದ್ದಾರೆ.

  • Kiran HV
  • Updated on: Aug 24, 2026
  • 1:01 pm

ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ: ವಿಕಾಸಸೌಧದ ಗೇಟ್​ ಬಳಿ ಭಾರಿ ಹೈಡ್ರಾಮಾ

BJP Protest: ವಾಲ್ಮೀಕಿ ನಿಗಮದ ಹಗರಣ ಸಂಬಂಧ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷ ಬಿಜೆಪಿ ವಿಧಾನಸೌಧ ಮುತ್ತಿಗೆಗೆ ಯತ್ನಿಸಿದೆ. ಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಮುತ್ತಿಗೆ ಯತ್ನ ನಡೆದಿದ್ದು, ನಾಯಕರನ್ನು ಪೊಲೀಸರು ವಶಕ್ಕೆ ಪಡೆದ ಪ್ರಸಂಗ ನಡೆದಿದೆ.

ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಹೋರಾಟ ಮತ್ತಷ್ಟು ತೀವ್ರಗೊಳಿಸಲು ಮೈತ್ರಿಪಡೆ ಸಜ್ಜು

ವಾಲ್ಮೀಕಿ ನಿಗಮದ ಹಗರಣ ಸಂಬಂಧ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಪಡೆ ಹೋರಾಟ ತೀವ್ರಗೊಳಿಸಿದ್ದು, ನಾಳೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದೆ. ಮತ್ತೊಂದೆಡೆ ಸಚಿವ ಬಿ.ನಾಗೇಂದ್ರ ರಾಜೀನಾಮೆ ಆಗ್ರಹಿಸಿ ಪಾದಯಾತ್ರೆಗೆ ನಿರ್ಧರಿಸಿರುವ ಬಿಜೆಪಿಗರು, ಎರಡು ಮಾರ್ಗದ ಬಗ್ಗೆ ಚರ್ಚೆ ನಡೆಸಿದ್ದಾರೆ. ಈ ಸಂಬಂಧ ಆಗಸ್ಟ್ 26ರಂದು ದಿನಾಂಕ ಮತ್ತು ಮಾರ್ಗವನ್ನು ಬಿಜೆಪಿ ಅಂತಿಮ‌ಗೊಳಿಸಲಿದೆ ಎನ್ನಲಾಗಿದೆ.

  • Sunil MH
  • Updated on: Aug 23, 2026
  • 12:14 pm

ಹನೂರಿನಲ್ಲಿ ಗುಂಡೇಟಿಗೆ ಮೂವರು ಬಲಿ ಪ್ರಕರಣ: ನ್ಯಾಯಾಂಗ ತನಿಖೆಗೆ ಆರ್​​. ಅಶೋಕ್​​ ಆಗ್ರಹ

ಚಾಮರಾಜನಗರ ಜಿಲ್ಲೆಯ ಹನೂರು ಬಳಿ ಅರಣ್ಯ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಸರ್ಕಾರ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಆಗ್ರಹಿಸಿದ್ದಾರೆ. ಪ್ರಾಣಿ ಕೊಂದು ಮಾಂಸ ಮಾರಾಟಕ್ಕೆ ಹೋಗುತ್ತಿದ್ದರು , ಹೀಗಾಗಿ ಮೂವರನ್ನು ಎನ್​ಕೌಂಟರ್ ಮಾಡಿದ್ದೇವೆ ಅಂತಾರೆ. ಆದರೆ ಹತ್ಯೆಯಾದವರ ಸಂಬಂಧಿಕರು ನಕಲಿ ಎನ್​ಕೌಂಟರ್ ಅಂತಾರೆ. ಕಳೆದ 10 ವರ್ಷದಲ್ಲಿ ಮೊದಲ ಬಾರಿಗೆ ಅರಣ್ಯದಲ್ಲಿ ಹೀಗಾಗಿದೆ ಎಂದವರು ತಿಳಿಸಿದ್ದಾರೆ.