AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

R Ashoka

R Ashoka

ಬೆಂಗಳೂರಿನ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಆರ್. ಅಶೋಕ್ ಕರ್ನಾಟಕ ಬಿಜೆಪಿಯ ಹಿರಿಯ ನಾಯಕರು. ಆರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಅವರು ಪ್ರಸ್ತುತ ವಿರೋಧ ಪಕ್ಷದ ನಾಯಕರಾಗಿದ್ದಾರೆ. ಇವರು 1957ರ ಜುಲೈ 1 ರಂದು ಜನಿಸಿದರು. ಬೆಂಗಳೂರಿನಲ್ಲಿ ಹುಟ್ಟಿ ಬೆಳೆದ ಆರ್​. ಅಶೋಕ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಕ್ರೀಯ ಕಾರ್ಯಕರ್ತರು. ನಂತರದ ದಿನಗಳಲ್ಲಿ ಬಿಜೆಪಿಯೊಂದಿಗೆ ಗುರುತಿಸಿಕೊಂಡು ರಾಜಕೀಯಕ್ಕೆ ಬಂದರು. ಹಂತ ಹಂತವಾಗಿ ಪಕ್ಷ ಹಾಗೂ ರಾಜಕೀಯದಲ್ಲಿ ಮುನ್ನೆಲೆಗೆ ಬಂದರು. ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ (1975 ರಿಂದ 77) ಅಶೋಕ್ ಜೈಲುವಾಸ ಅನುಭವಿಸಿದ್ದರು. ಬಿಜೆಪಿ ಹಿರಿಯ ನಾಯಕ, ಭಾರತ ರತ್ನ ಎಲ್.ಕೆ. ಅಡ್ವಾಣಿ ಮುಂತಾದವರೊಂದಿಗೆ ಜೈಲಿನಲ್ಲಿದ್ದರು. 1997 ರಲ್ಲಿ ಬೆಂಗಳೂರಿನ ಉತ್ತರಹಳ್ಳಿ ಕ್ಷೇತ್ರಕ್ಕೆ ನಡೆದ ವಿಧಾನಸಭಾ ಉಪ ಚುನಾವಣೆಯಲ್ಲಿ ಸ್ಪರ್ಧಿಸಿ ಪ್ರಥಮ ಬಾರಿಗೆ ಶಾಸಕರಾದರು. 2021ರಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಂಪುಟಕ್ಕೆ ಆರ್. ಅಶೋಕ ಸೇರ್ಪಡೆಯಾಗಿ ಕಂದಾಯ ಸಚಿವ ಖಾತೆ ನಿಭಾಯಿಸಿದರು. 1999 ಹಾಗೂ 2004 ರಲ್ಲಿ ಉತ್ತರಹಳ್ಳಿ ಕ್ಷೇತ್ರದಿಂದ ಮತ್ತೆ ಶಾಸಕರಾಗಿ ಆಯ್ಕೆಯಾದರು. 2008ರಲ್ಲಿ ಮತ್ತೊಮ್ಮೆ ಶಾಸಕರಾಗಿ ಆಯ್ಕೆಯಾದರು. ಬಿಎಸ್​ ಯಡಿಯೂರಪ್ಪ ಅವರ ಸರ್ಕಾರದಲ್ಲಿ ಸಾರಿಗೆ ಖಾತೆಯ ಸಚಿವರಾದರು. 2012ರಲ್ಲಿ ಜಗದೀಶ ಶೆಟ್ಟರ್ ಮುಖ್ಯಮಂತ್ರಿಯಾದಾಗ ಉಪ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದರು. ಉಪ ಮುಖ್ಯಮಂತ್ರಿ ಜೊತೆಗೆ ಸಾರಿಗೆ ಹಾಗೂ ಗೃಹ ಇಲಾಖೆಗಳ ಜವಾಬ್ದಾರಿ ನಿಭಾಯಿಸಿದರು. 2018ರಲ್ಲಿ ಆರ್‌. ಅಶೋಕ್ ಪದ್ಮನಾಭನಗರದಿಂದ ಶಾಸಕರಾಗಿ ಮತ್ತೆ ಆಯ್ಕೆಯಾದರು. 2019ರಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಾಗ ಕಂದಾಯ, ಮುಜರಾಯಿ ಖಾತೆ ಹೊಣೆ ಹೊತ್ತಿದ್ದರು. ಪ್ರಸ್ತುತ ಆರ್. ಅಶೋಕ ವಿರೋಧ ಪಕ್ಷದ ನಾಯಕರಾಗಿದ್ದಾರೆ

ಇನ್ನೂ ಹೆಚ್ಚು ಓದಿ

ಕರ್ನಾಟಕದಲ್ಲಿ ಶೇ 63ರಷ್ಟು ಭ್ರಷ್ಟಾಚಾರ: ಬಿಜೆಪಿ ಕಡೆಗೇ ಬಾಣ ತಿರುಗಿಸಿದ ಸಿಎಂ ಸಿದ್ದರಾಮಯ್ಯ!

ಉಪಲೋಕಾಯುಕ್ತರ 63% ಭ್ರಷ್ಟಾಚಾರ ಹೇಳಿಕೆ ಆಧರಿಸಿ ಬಿಜೆಪಿ ಕಾಂಗ್ರೆಸ್‌ಗೆ ಸಿಬಿಐ ತನಿಖೆಯ ಸವಾಲು ಹಾಕಿತ್ತು. ಇದಕ್ಕೆ ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ, ಬಿ.ವೀರಪ್ಪ ಹೇಳಿಕೆ ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಆಡಳಿತದ ಅವಧಿಗೇ ಸೇರಿದ್ದು ಎಂದಿದ್ದಾರೆ. 40% ಕಮಿಷನ್, ಪಿಎಸ್‌ಐ ಹಗರಣ ಸೇರಿ ಹಲವು ಭ್ರಷ್ಟಾಚಾರ ಪ್ರಕರಣಗಳನ್ನು ಉಲ್ಲೇಖಿಸಿ, ತಮ್ಮ ಸರ್ಕಾರ ಪಾರದರ್ಶಕತೆಗಾಗಿ ಶ್ರಮಿಸುತ್ತಿದೆ ಎಂದಿದ್ದಾರೆ.

ಕರ್ನಾಟಕದಲ್ಲಿ ಭ್ರಷ್ಟಾಚಾರ: ನಿಮಗೆ ಧೈರ್ಯ ಇದ್ರೆ ಸಿಬಿಐ ತನಿಖೆ ಮಾಡಿಸಿ; ಆರ್​​ ಅಶೋಕ್ ಸವಾಲು

ಕರ್ನಾಟಕದಲ್ಲಿ ಶೇ. 63ರಷ್ಟು ಭ್ರಷ್ಟಾಚಾರವಿದೆ ಎಂಬ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರ ಹೇಳಿಕೆಯನ್ನೇ ಬಿಜೆಪಿ ಅಸ್ತ್ರಮಾಡಿಕೊಂಡಿದ್ದು, ಸರ್ಕಾರದ ಮೇಲೆ ಮುಗಿಬಿದ್ದಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಅಶೋಕ್, ಪೇ ಸಿಎಂ ಅಂತಾ ರೋಡ್​ನಲ್ಲಿ ಪೋಸ್ಟರ್ ಅಂಟಿಸಿದ್ರಲ್ಲಾ, ಅದನ್ನ ಈಗ ನಿಮ್ಮ ಮುಖದ ಮೇಲೆ ಅಂಟಿಸಬೇಕು ಎಂದು ವಾಗ್ದಾಳಿ ಮಾಡಿದ್ದಾರೆ.

ಪರಪ್ಪನ ಅಗ್ರಹಾರದಲ್ಲಿ ರೌಡಿಗಳಿಗೆ, ಉಗ್ರರಿಗೆ ರಾಜಾತಿಥ್ಯ: ಗೃಹ ಇಲಾಖೆ ಸತ್ತು ಹೋಗಿದೆ; ಸರ್ಕಾರದ ವಿರುದ್ಧ ಅಶೋಕ್ ವಾಗ್ದಾಳಿ

ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್​​​ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ಮಾಡಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ, ಭಯೋತ್ಪಾದಕರಿಗೆ ಮೊಬೈಲ್ ಬಳಕೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೆ ರಸ್ತೆ ಗುಂಡಿ, ವೋಟ್ ಚೋರಿ ವಿಚಾರವಾಗಿಯೂ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

ಕಲ್ಯಾಣ ಕರ್ನಾಟಕದ 38 ಹಳ್ಳಿಗಳ ಮಹಿಳೆಯರಿಗಿಲ್ಲ ಶಕ್ತಿ ಯೋಜನೆ ಭಾಗ್ಯ: ಪ್ರಿಯಾಂಕ್ ಖರ್ಗೆಗೆ ಇದು ಕಾಣ್ಸಲ್ಲವೇ? ಅಶೋಕ್ ಪ್ರಶ್ನೆ

ಕಲ್ಯಾಣ ಕರ್ನಾಟಕದ 38 ಹಳ್ಳಿಗಳಲ್ಲಿ ಬಸ್, ರಸ್ತೆ ಇಲ್ಲದೆ ಶಕ್ತಿ ಯೋಜನೆ ನಿರುಪಯುಕ್ತವಾಗಿರುವ ಬಗ್ಗೆ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಜತೆಗೆ, ಬೆಂಗಳೂರು ಟೆಕ್ ಸಮ್ಮಿಟ್‌ಗೆ ಮುನ್ನ ಗುಂಡಿ ಬಿದ್ದ ರಸ್ತೆಗಳನ್ನು ಸರಿಪಡಿಸಲು ಒತ್ತಾಯಿಸಿದ್ದಾರೆ.

ಟನಲ್ ರಸ್ತೆಗಾಗಿ ಲಾಲ್​ಬಾಗ್​​ನ 6 ಎಕರೆ ಬಳಸಲು ಪರ್ಮಿಷನ್ ಕೊಟ್ರಾ? ಜಂಟಿ ನಿರ್ದೇಶಕರಿಗೆ ಅಶೋಕ್ ಪ್ರಶ್ನೆ!

ಬೆಂಗಳೂರಿನ ಲಾಲ್​ಬಾಗ್​ನಲ್ಲಿ ಪ್ರಸ್ತಾವಿತ ಸುರಂಗ ರಸ್ತೆ ನಿರ್ಮಾಣಕ್ಕೆ 6 ಎಕರೆ ಭೂಮಿ ಬಳಕೆ ಬಗ್ಗೆ ಶಾಸಕ ಆರ್. ಅಶೋಕ್ ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ. ಹಾರ್ಟಿಕಲ್ಚರ್ ಇಲಾಖೆಯ ಜಂಟಿ ನಿರ್ದೇಶಕರನ್ನು ಪ್ರಶ್ನಿಸಿದ ಅಶೋಕ್, ಲಾಲ್​ಬಾಗ್​​ನ ಐತಿಹಾಸಿಕ ಮಹತ್ವ, ಪುರಾತನ ಬಂಡೆ ಮತ್ತು ಕೆಂಪೇಗೌಡ ಗೋಪುರದಂತಹ ಸ್ಮಾರಕಗಳ ರಕ್ಷಣೆಯ ಮಹತ್ವವನ್ನು ಒತ್ತಿ ಹೇಳಿದರು. ಯೋಜನೆಗೆ ಇನ್ನೂ ಅನುಮತಿ ನೀಡಿಲ್ಲ ಎಂದು ನಿರ್ದೇಶಕರು ತಿಳಿಸಿದ್ದಾರೆ.

ಬೆಂಗಳೂರು ಸುರಂಗ ರಸ್ತೆ ಯೋಜನೆಗೆ ಬಿಜೆಪಿ ವಿರೋಧ: ಆರ್. ಅಶೋಕ್ ನೇತೃತ್ವದಲ್ಲಿ ಜನ ಜಾಗೃತಿ

ಬೆಂಗಳೂರಿನ ಟನಲ್ ರಸ್ತೆ ಯೋಜನೆ ವಿರುದ್ಧ ಲಾಲ್‌ಬಾಗ್‌ನಲ್ಲಿ ಬಿಜೆಪಿ ನಾಯಕರು ಮತ್ತು ನಾಗರಿಕರು ಪ್ರತಿಭಟನೆ ನಡೆಸಿದರು. ವಿಪಕ್ಷ ನಾಯಕ ಆರ್ ಅಶೋಕ್ ಮತ್ತು ತೇಜಸ್ವಿ ಸೂರ್ಯ ಯೋಜನೆಗೆ ಅನುಮತಿಗಳಿಲ್ಲದಿರುವುದು ಹಾಗೂ ಹಣ ಲೂಟಿಯ ಉದ್ದೇಶದ ಬಗ್ಗೆ ಮಾತನಾಡಿದರು. ಪರಿಸರ ಹೋರಾಟಗಾರರು ಸಹಿ ಸಂಗ್ರಹಿಸಿ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಈ ಯೋಜನೆ ಬೆಂಗಳೂರಿನ ಪರಿಸರಕ್ಕೆ ಮಾರಕ ಎಂದು ವ್ಯಾಪಕ ವಿರೋಧ ವ್ಯಕ್ತವಾಗಿದೆ.

‘ಟನಲ್ ರೋಡ್ ಬಿಡಿ ಸ್ವಾಮಿ, ಪಾಲಿಕೆ ಶಿಕ್ಷಕರಿಗೆ ಮೊದಲು ಸಂಬಳ ಕೊಡಿ’: ಡಿಕೆ ಶಿವಕುಮಾರ್ ಕಾಲೆಳೆದ ಆರ್ ಅಶೋಕ್‌

ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಶಾಲಾ ಕಾಲೇಜುಗಳ ಶಿಕ್ಷಕರು ನಾಲ್ಕು ತಿಂಗಳಿಂದ ಸಂಬಳವಿಲ್ಲದೆ ಪರದಾಡುತ್ತಿದ್ದಾರೆ. ಜಿಬಿಎ ತಾಂತ್ರಿಕ ಅಸಮರ್ಪಕತೆಯಿಂದ ವೇತನ ಬಿಡುಗಡೆ ಆಗದೆ ಶಿಕ್ಷಕರು ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಡಿಕೆ ಶಿವಕುಮಾರ್ ಅವರನ್ನು ಟೀಕಿಸಿ, "ಟನಲ್ ರೋಡ್ ಬಿಡಿ ಸ್ವಾಮಿ, ಶಿಕ್ಷಕರಿಗೆ ಮೊದಲು ಸಂಬಳ ಕೊಡಿ" ಎಂದು ಟ್ವೀಟ್ ಮಾಡಿದ್ದಾರೆ.

ಈ ತುರ್ತು ಪರಿಸ್ಥಿತಿ ಆಟ ಜಾಸ್ತಿ ದಿನ ನಡೆಯಲ್ಲ: ಪ್ರಿಯಾಂಕ್ ಖರ್ಗೆಗೆ ಅಶೋಕ್ ಎಚ್ಚರಿಕೆ

ಸಚಿವ ಪ್ರಿಯಾಂಕ್ ಕ್ಷೇತ್ರ ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಪಥಸಂಚಲನ ಪೂರ್ವಭಾವಿಯಾಗಿ ಅಳವಡಿಸಿದ್ದ ಭಗವಾ ಧ್ವಜಗಳನ್ನು ಪುರಸಭೆ ಸಿಬ್ಬಂದಿ ತೆರವುಗೊಳಿಸಿದ್ದಾರೆ. ಇದು ಹಿಂದೂ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ. ಅನುಮತಿ ಇದ್ದರೂ ಧ್ವಜ ತೆರವುಗೊಳಿಸಿದ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಿಪಕ್ಷ ನಾಯಕ ಆರ್. ಅಶೋಕ್ ತೀವ್ರ ವಾಗ್ದಾಳಿ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯಗೆ ಅಶೋಕ್ ಮಹತ್ವದ ಪತ್ರ: ವಿಪಕ್ಷ ನಾಯಕರ ಪತ್ರದಲ್ಲೇನಿದೆ?

ಮುಖ್ಯಮಂತ್ರಿ ಸಿದ್ದರಾಮಯ್ಯಗೆ ವಿಪಕ್ಷ ನಾಯಕ ಆರ್​.ಅಶೋಕ್, ವಿಧಾನಮಂಡಲದ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಯ ಶಿಫಾರಸ್ಸಿನ ಅನ್ವಯ ರಾಜ್ಯದಲ್ಲಿ ಅಂಗನವಾಡಿಗಳಿಗೆ ಸರಬರಾಜಾಗುತ್ತಿರುವ ಕಳಪೆ ಆಹಾರವನ್ನು ಕೂಡಲೇ ನಿಲ್ಲಿಸುವಂತೆ ಪತ್ರ ಬರೆಯಲಾಗಿದ್ದು, ಮೊದಲಿನಂತೆ ಸರ್ಕಾರಿ ಸ್ವಾಮ್ಯದ ಸಹಕಾರಿ ಸಂಸ್ಥೆಯಾದ ಜನತಾ ಬಜಾರ್ ಮೂಲಕ ಗುಣಮಟ್ಟದ ಆಹಾರ ಪದಾರ್ಥಗಳನ್ನು ಪೂರೈಸಬೇಕು ಎಂದು ಆಗ್ರಹಿಸಲಾಗಿದೆ.

ಕರ್ನಾಟಕದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣ ಪತನ; ತಕ್ಷಣವೇ ಮಧ್ಯ ಪ್ರವೇಶಿಸುವಂತೆ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಆರ್ ಅಶೋಕ್ ಪತ್ರ

ವಿಪಕ್ಷ ನಾಯಕ ಆರ್. ಅಶೋಕ್ ಅವರು ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ 979 ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿರುವುದನ್ನು ಉಲ್ಲೇಖಿಸಿ, ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಪತ್ರ ಬರೆದು ತಕ್ಷಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಮೈಸೂರು, ಕಲಬುರಗಿ ಮತ್ತು ಬೆಂಗಳೂರಿಗೆ ಸತ್ಯಶೋಧನಾ ನಿಯೋಗ ಕಳುಹಿಸಿ, ವರದಿ ಕೇಳಿ, ಮಹಿಳಾ ಸುರಕ್ಷತಾ ಕ್ರಮಗಳನ್ನು ಬಲಪಡಿಸಲು ಸೂಚಿಸಿದ್ದಾರೆ.

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ