AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

R Ashoka

R Ashoka

ಬೆಂಗಳೂರಿನ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಆರ್. ಅಶೋಕ್ ಕರ್ನಾಟಕ ಬಿಜೆಪಿಯ ಹಿರಿಯ ನಾಯಕರು. ಆರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಅವರು ಪ್ರಸ್ತುತ ವಿರೋಧ ಪಕ್ಷದ ನಾಯಕರಾಗಿದ್ದಾರೆ. ಇವರು 1957ರ ಜುಲೈ 1 ರಂದು ಜನಿಸಿದರು. ಬೆಂಗಳೂರಿನಲ್ಲಿ ಹುಟ್ಟಿ ಬೆಳೆದ ಆರ್​. ಅಶೋಕ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಕ್ರೀಯ ಕಾರ್ಯಕರ್ತರು. ನಂತರದ ದಿನಗಳಲ್ಲಿ ಬಿಜೆಪಿಯೊಂದಿಗೆ ಗುರುತಿಸಿಕೊಂಡು ರಾಜಕೀಯಕ್ಕೆ ಬಂದರು. ಹಂತ ಹಂತವಾಗಿ ಪಕ್ಷ ಹಾಗೂ ರಾಜಕೀಯದಲ್ಲಿ ಮುನ್ನೆಲೆಗೆ ಬಂದರು. ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ (1975 ರಿಂದ 77) ಅಶೋಕ್ ಜೈಲುವಾಸ ಅನುಭವಿಸಿದ್ದರು. ಬಿಜೆಪಿ ಹಿರಿಯ ನಾಯಕ, ಭಾರತ ರತ್ನ ಎಲ್.ಕೆ. ಅಡ್ವಾಣಿ ಮುಂತಾದವರೊಂದಿಗೆ ಜೈಲಿನಲ್ಲಿದ್ದರು. 1997 ರಲ್ಲಿ ಬೆಂಗಳೂರಿನ ಉತ್ತರಹಳ್ಳಿ ಕ್ಷೇತ್ರಕ್ಕೆ ನಡೆದ ವಿಧಾನಸಭಾ ಉಪ ಚುನಾವಣೆಯಲ್ಲಿ ಸ್ಪರ್ಧಿಸಿ ಪ್ರಥಮ ಬಾರಿಗೆ ಶಾಸಕರಾದರು. 2021ರಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಂಪುಟಕ್ಕೆ ಆರ್. ಅಶೋಕ ಸೇರ್ಪಡೆಯಾಗಿ ಕಂದಾಯ ಸಚಿವ ಖಾತೆ ನಿಭಾಯಿಸಿದರು. 1999 ಹಾಗೂ 2004 ರಲ್ಲಿ ಉತ್ತರಹಳ್ಳಿ ಕ್ಷೇತ್ರದಿಂದ ಮತ್ತೆ ಶಾಸಕರಾಗಿ ಆಯ್ಕೆಯಾದರು. 2008ರಲ್ಲಿ ಮತ್ತೊಮ್ಮೆ ಶಾಸಕರಾಗಿ ಆಯ್ಕೆಯಾದರು. ಬಿಎಸ್​ ಯಡಿಯೂರಪ್ಪ ಅವರ ಸರ್ಕಾರದಲ್ಲಿ ಸಾರಿಗೆ ಖಾತೆಯ ಸಚಿವರಾದರು. 2012ರಲ್ಲಿ ಜಗದೀಶ ಶೆಟ್ಟರ್ ಮುಖ್ಯಮಂತ್ರಿಯಾದಾಗ ಉಪ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದರು. ಉಪ ಮುಖ್ಯಮಂತ್ರಿ ಜೊತೆಗೆ ಸಾರಿಗೆ ಹಾಗೂ ಗೃಹ ಇಲಾಖೆಗಳ ಜವಾಬ್ದಾರಿ ನಿಭಾಯಿಸಿದರು. 2018ರಲ್ಲಿ ಆರ್‌. ಅಶೋಕ್ ಪದ್ಮನಾಭನಗರದಿಂದ ಶಾಸಕರಾಗಿ ಮತ್ತೆ ಆಯ್ಕೆಯಾದರು. 2019ರಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಾಗ ಕಂದಾಯ, ಮುಜರಾಯಿ ಖಾತೆ ಹೊಣೆ ಹೊತ್ತಿದ್ದರು. ಪ್ರಸ್ತುತ ಆರ್. ಅಶೋಕ ವಿರೋಧ ಪಕ್ಷದ ನಾಯಕರಾಗಿದ್ದಾರೆ

ಇನ್ನೂ ಹೆಚ್ಚು ಓದಿ

ಜಿಬಿಎ ಚುನಾವಣೆ: ಹೈಕಮಾಂಡ್​​ ಅಂಗಳದಲ್ಲಿದ್ಯಾ BJP, JDS ಮೈತ್ರಿ ಭವಿಷ್ಯ?

ಉಪ ಚುನಾವಣೆ ಅಬ್ಬರದ ನಡುವೆ ಜಿಬಿಎ ಚುನಾವಣೆಗೂ ಪಕ್ಷಗಳು ತಯಾರಿ ನಡೆಸಿವೆ. ಆದರೆ ಮೈತ್ರಿಯಾಗಿಯೇ ಉಪ ಚುನಾವಣೆ ಎದುರಿಸುತ್ತಿರುವ ಬಿಜೆಪಿ ಮತ್ತು ಜೆಡಿಎಸ್​​ ಈ ಹೊಂದಾಣಿಕೆಯನ್ನು ಗ್ರೇಟರ್​​ ಬೆಂಗಳೂರು ಪ್ರಾಧಿಕಾರದ ಚುನಾವಣೆಗೂ ಮುಂದುವರಿಸುತ್ತವಾ ಎಂಬ ಪ್ರಶ್ನೆ ಸದ್ಯಕ್ಕಿದೆ. ಈ ವಿಚಾರವಾಗಿ ಈ ಹಿಂದೆಯೂ ಕೆಲ ನಾಯಕರಿಂದ ಪರ-ವಿರೋಧ ಅಬಿಪ್ರಾಯಗಳು ವ್ಯಕ್ತವಾಗಿದ್ದವು. ಈ ಹಿನ್ನೆಲೆ ಮೈತ್ರಿ ನಿರ್ಧಾರದ ಬಗ್ಗೆ ವಿಪಕ್ಷ ನಾಯಕ ಆರ್​​.ಅಶೋಕ್​​ ಸ್ಪಷ್ಟನೆ ನೀಡಿದ್ದಾರೆ.

ವಿಧಾನ ಸಭೆಯಲ್ಲಿ ದೋಸ್ತಿ, ಹೊರಗಡೆ ಕುಸ್ತಿ: ಸಿದ್ದರಾಮಯ್ಯ ಮತ್ತು ಅಶೋಕ್​​ ನಡುವೆ ಕಳ್ಳೆತ್ತು, ಕುಂಟೆತ್ತು ಕಾಳಗ

ವಿಧಾನಸಭೆಯಲ್ಲಿ ಮೃದುವಾಗಿದ್ದ ಸಿಎಂ ಸಿದ್ದರಾಮಯ್ಯ ಹಾಗೂ ವಿಪಕ್ಷ ನಾಯಕ ಆರ್. ಅಶೋಕ್ ನಡುವಿನ ಮಾತು, ಉಪಚುನಾವಣೆ ಅಖಾಡದಲ್ಲಿ ತೀವ್ರ ವಾಗ್ಯುದ್ಧಕ್ಕೆ ತಿರುಗಿದೆ. ಸಿದ್ದರಾಮಯ್ಯ ಬಿಜೆಪಿಗರನ್ನು 'ಕಳ್ಳೆತ್ತುಗಳು' ಎಂದಿದ್ದರೆ, ಅಶೋಕ್ 'ಸಿದ್ದರಾಮಯ್ಯ-ಡಿಕೆಶಿ ಜೋಡೆತ್ತುಗಳಲ್ಲ, ಕುಂಟೆತ್ತುಗಳು' ಎಂದು ತಿರುಗೇಟು ನೀಡಿದ್ದಾರೆ. ರಾಜ್ಯದ ಆರ್ಥಿಕ ಪರಿಸ್ಥಿತಿ, ಅಭಿವೃದ್ಧಿ ಹಾಗೂ ಸಾಲದ ವಿಚಾರದಲ್ಲಿ ಪರಸ್ಪರ ಆರೋಪ-ಪ್ರತ್ಯಾರೋಪಗಳು ಜೋರಾಗಿವೆ.

ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು

ವಿವಾದಿತ ಕಥಾಹಂದರ ಹೊಂದಿದೆ ಎಂಬ ಕಾರಣಕ್ಕೆ ‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ಈಗ ಈ ಸಿನಿಮಾವನ್ನು ಬಿಜೆಪಿಯ ಕೆಲವು ಶಾಸಕರು ವೀಕ್ಷಿಸಿದ್ದಾರೆ. ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಮಂತ್ರಿಮಾಲ್​​ನಲ್ಲಿ ಸಿನಿಮಾ ವೀಕ್ಷಣೆ ಮಾಡಲಾಗಿದೆ. ಆ ಸಂದರ್ಭದ ವಿಡಿಯೋ ಇಲ್ಲಿದೆ ನೋಡಿ..

ಆರ್​ ಅಶೋಕ್‌ ಹೇಳಿದ ಮನಕಲಕುವ ಸತ್ಯ ಘಟನೆಗೆ ಸದನವೇ ನಿಶ್ಯಬ್ದ

ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಅಶೋಕ್ ಅವರು ರಾಜ್ಯ ಸರ್ಕಾರವು 26,000 ಅನಾಥ ಮಕ್ಕಳಿಗೆ ಏಳು ತಿಂಗಳ ಮಾಸಾಶನ ಮತ್ತು ಭಿಕ್ಷುಕರ ಪುನರ್ವಸತಿಗಾಗಿ 23.43 ಕೋಟಿ ರೂ. ಬಾಕಿ ಉಳಿಸಿಕೊಂಡಿದೆ ಎಂದು ಆರೋಪಿಸಿದರು. ಸರ್ಕಾರ ಕರುಣೆ ರಹಿತವಾಗಿದೆ ಎಂದು ಟೀಕಿಸಿ, ಸಚಿವರು ಮತ್ತು ಗ್ಯಾರಂಟಿ ಸಮಿತಿಗಳಿಗೆ ಮೀಸಲಾದ ನಿಧಿಗಿಂತ ಇವರೇ ಹೆಚ್ಚು ಆದ್ಯತೆ ಎಂದು ಪ್ರತಿಪಾದಿಸಿದರು.

ರಾಜ್ಯ ರಾಜಕಾರಣದಲ್ಲಿ ಫೋನ್​​ ಟ್ಯಾಪಿಂಗ್​​ ಬಿರುಗಾಳಿ: ವಿಪಕ್ಷಗಳ ಮೇಲೆ ಮುಗಿಬಿದ್ದ ಕಾಂಗ್ರೆಸ್​​

ಫೋನ್ ಟ್ಯಾಪಿಂಗ್ ಆರೋಪಕ್ಕೂ ಹಾಗೂ ರಾಜಕಾರಣಕ್ಕೂ ನಂಟು ಹೊಸದೇನಲ್ಲ. ಈ ಹಿಂದಿನ ಹಲವು ಸರ್ಕಾರಗಳಲ್ಲೂ ಆರೋಪ ಕೇಳಿ‌ ಬಂದಿತ್ತು. ಇಂತಹ ಆರೋಪ ಪ್ರತ್ಯಾರೋಪ ಆಡಳಿತ ಮತ್ತು ವಿಪಕ್ಷಗಳ ನಡುವೆ ಕೇಳಿಬರೋದು ಕಾಮನ್. ಆದ್ರೆ ರಾಜ್ಯ ಕಾಂಗ್ರೆಸ್ ನಲ್ಲಿ‌ ಸ್ವಪಕ್ಷ ನಾಯಕರ ಫೋನ್ ಕದ್ದಾಲಿಕೆ ಮಾಡಲಾಗ್ತಿದೆ ಅಂತ ವಿಪಕ್ಷಗಳು ಹೊಸ ಬಾಂಬ್​​ ಸಿಡಿಸಿರೋದೀಗ ರಾಜಕೀಯ ಚದುರಂಗದಲ್ಲಿ ಮಾತಿನ ಸಮರಕ್ಕೆ ಕಾರಣವಾಗಿದೆ.

ಕಾಂಗ್ರೆಸ್ ಸರ್ಕಾರದ ಆರನೇ ಗ್ಯಾರೆಂಟಿ ಅರಾಜಕತೆ! ವಿಪಕ್ಷ ನಾಯಕ ಆರ್ ಅಶೋಕ್ ವ್ಯಂಗ್ಯ

ವಿಪಕ್ಷ ನಾಯಕ ಆರ್. ಅಶೋಕ್ ಕಾಂಗ್ರೆಸ್ ಸರ್ಕಾರದ ಆಡಳಿತವನ್ನು ತೀವ್ರವಾಗಿ ಟೀಕಿಸಿ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದು, ಭ್ರಷ್ಟಾಚಾರ ಮತ್ತು ಅರಾಜಕತೆಯ ಆರೋಪ ಮಾಡಿದ್ದಾರೆ. ಖಾಲಿ ಹುದ್ದೆ ಭರ್ತಿಗಾಗಿ ವೈದ್ಯರು, ಧಾರವಾಡದಲ್ಲಿ ವಿದ್ಯಾರ್ಥಿಗಳು ಹಾಗೂ ಇತರೆ ಸಮುದಾಯಗಳ ಪ್ರತಿಭಟನೆಗಳನ್ನು ಉದಾಹರಿಸಿದ್ದಾರೆ. ನಿಮ್ಮ ಆಡಳಿತದಲ್ಲಿ ಜನ ನೆಮ್ಮದಿಯಿಂದ ಇದ್ದಾರಾ ಎಂದು ಸಿಎಂ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದ್ದಾರೆ.

ರಾಜ್ಯ ಸರ್ಕಾರ ದಿವಾಳಿ, ಸಂಬಳ ನೀಡಲೂ ಹಣವಿಲ್ಲ: ವಿಪಕ್ಷ ನಾಯಕ ಅಶೋಕ್​​ ಸ್ಫೋಟಕ ಆರೋಪ

ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳು ಬೃಹತ್ ಪ್ರತಿಭಟನೆ ನಡೆಸಿದ್ದು, ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕ ಆರ್. ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಲಕ್ಷಾಂತರ ಸರ್ಕಾರಿ ಹುದ್ದೆಗಳು ಖಾಲಿ ಇದ್ದರೂ, ನೇಮಕಾತಿ ನಡೆಸುತ್ತಿಲ್ಲ ಎಂದು ಅವರು ಆರೋಪಿಸಿದ್ದಾರೆ. ಸರ್ಕಾರವು ದಿವಾಳಿಯಾಗಿದೆ, ಸಂಬಳಕ್ಕೂ ಹಣವಿಲ್ಲ ಎಂದ ಅವರು ತಕ್ಷಣ ನೇಮಕಾತಿ ನಡೆಸದಿದ್ದರೆ ರಾಜ್ಯವ್ಯಾಪಿ ಹೋರಾಟದ ಎಚ್ಚರಿಕೆ ನೀಡಿದ್ದಾರೆ.

BJP-JDS ಮೈತ್ರಿ ಗೊಂದಲಕ್ಕೆ ಶೀಘ್ರವೇ ಇತಿಶ್ರೀ: ಸಮನ್ವಯ ಸಭೆಗೆ ನಾಯಕರ ನಿರ್ಧಾರ

ಬಿಜೆಪಿ ಮತ್ತು ಜೆಡಿಎಸ್ ನಾಯಕರು ಬೆಂಗಳೂರಿನಲ್ಲಿ ಸಮನ್ವಯ ಸಭೆ ನಡೆಸಲು ಸಿದ್ಧತೆ ನಡೆಸಿದ್ದಾರೆ. ಸ್ಥಳೀಯ ಸಂಸ್ಥೆ ಚುನಾವಣೆ ಸೇರಿದಂತೆ ಮೈತ್ರಿ ವಿಚಾರದಲ್ಲಿ ಉಂಟಾಗಿರುವ ಗೊಂದಲಗಳನ್ನು ಬಗೆಹರಿಸುವುದು ಇದರ ಮುಖ್ಯ ಉದ್ದೇಶ. ಕುಮಾರಸ್ವಾಮಿ, ಆರ್. ಅಶೋಕ್, ಬಿ.ವೈ. ವಿಜಯೇಂದ್ರರಂತಹ ಪ್ರಮುಖ ನಾಯಕರ ನೇತೃತ್ವದಲ್ಲಿ ಮೀಟಿಂಗ್​​ ನಡೆಯಲಿದೆ ಎನ್ನಲಾಗಿದೆ.

  • Sunil MH
  • Updated on: Feb 19, 2026
  • 11:58 am

ಕಮಿಷನ್ ಆರೋಪಕ್ಕೆ ಅಂದು ಸಾಕ್ಷಿ ಕೊಡದವರು ಇಂದು ಕೇಳ್ತಿರೋದೇಕೆ: ‘ಕೈ’ ಸರ್ಕಾರಕ್ಕೆ ಅಶೋಕ್ ಪ್ರಶ್ನೆ

ಗುತ್ತಿಗೆದಾರರ ಸಂಘ ಮಾಡಿರುವ 80 ಪರ್ಸೆಂಟ್ ಕಮಿಷನ್ ಆರೋಪ ಮತ್ತು ಕಸದ ಟೆಂಡರ್​ಗೆ ಕಮಿಷ್​ ಕೊಡಬೇಕೆಂಬ ಆರೋಪಗಳ ಬಗ್ಗೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಪ್ರತಿಕ್ರಿಯಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಸರ್ಕಾರ ಇದ್ದಾಗ ಕಮಿಷನ್ ಆರೋಪಕ್ಕೆ ಅಂದು ಸಾಕ್ಷಿ ಕೊಡದವರು ಇಂದು ಕೇಳ್ತಿರೋದೇಕೆ ಎಂದು ಪ್ರಶ್ನಿಸಿರುವ ಅವರು, ಕಮಿಷನ್ ಆರೋಪ ಸುಳ್ಳಾದ್ರೆ ಮೊಕದ್ದಮೆ ಹೂಡಿ ಎಂದು ಸವಾಲು ಹಾಕಿದ್ದಾರೆ.

ಸರ್ಕಾರಿ ಗೌರವಕ್ಕೆ ತಗುಲಿದ ವೆಚ್ಚ ಪಾವತಿಸುವಂತೆ ದಿ ರಾಮಯ್ಯ ಕುಟುಂಬಕ್ಕೆ ಸರ್ಕಾರ ಬಿಲ್? ಅಶೋಕ್​​​ ಕಿಡಿ

ಹಿರಿಯ ಪತ್ರಕರ್ತ ರಾಮಯ್ಯನವರ ಅಂತ್ಯಸಂಸ್ಕಾರವನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸುವುದಾಗಿ ಘೋಷಿಸಿದ್ದ ಕರ್ನಾಟಕ ಸರ್ಕಾರ, ಇದೀಗ ಅಂತ್ಯಸಂಸ್ಕಾರದ ಖರ್ಚು ವೆಚ್ಚದ ಬಿಲ್ ಅನ್ನು ರಾಮಯ್ಯನವರ ಕುಟುಂಬಕ್ಕೆ ಕಳುಹಿಸಿದೆ ಎನ್ನಲಾಗುತ್ತಿದೆ. ಸದ್ಯ ಈ ವಿಚಾರವಾಗಿ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ಮಾಡಿದೆ.

ವಿಧಾನಸಭೆಯಲ್ಲಿ ಪೆನ್​ಡ್ರೈವ್ ಪ್ರದರ್ಶಿಸಿ ವಿಪಕ್ಷ ನಾಯಕ ಅಶೋಕ್ ಗಂಭೀರ ಆರೋಪ

ಪ್ರತಿಪಕ್ಷ ನಾಯಕ ಆರ್ ಅಶೋಕ್ ವಿಧಾನಸಭೆ ವಿಶೇಷ ಅಧಿವೇಶನದಲ್ಲಿ ಗಂಭೀರ ಆರೋಪ ಮಾಡಿದ್ದು, ಅಬಕಾರಿ ಇಲಾಖೆ ಹಗರಣಕ್ಕೆ ಸಂಬಂಧಿಸಿದ ಆಡಿಯೋ, ವಿಡಿಯೋ ಸಾಕ್ಷಿ ತಮ್ಮ ಬಳಿ ಇದೆ ಎಂದು ಪೆನ್​ಡ್ರೈವ್ ಪ್ರದರ್ಶನ ಮಾಡಿದರು. ಈ ಸಂಬಂಧ ಆಡಿಯೋ ವೈರಲ್ ಆಗಿದ್ದನ್ನೂ ಪ್ರಸ್ತಾಪಿಸಿದ ಅವರು, ಪ್ರತಿ ಅಂಗಡಿಯಿಂದ ತಿಂಗಳಿಗೆ 10ರಿಂದ 15 ಸಾವಿರ ರೂ. ಸಂಗ್ರಹಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಡ್ರಗ್ಸ್ ದಂಧೆಗೆ ಕಡಿವಾಣ ಹಾಕುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲ: ಮೈಸೂರಲ್ಲಿ ದಾಳಿ ಬೆನ್ನಲ್ಲೇ ಅಶೋಕ್ ವಾಗ್ದಾಳಿ

ಮೈಸೂರಿನಲ್ಲಿ ಡ್ರಗ್ಸ್ ತಯಾರಿಕೆ ಘಟಕ ಪತ್ತೆ ವಿಚಾರ ಪ್ರಸ್ತಾಪಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಪಕ್ಷ ನಾಯಕ ಆರ್. ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಡ್ರಗ್ಸ್ ದಂಧೆ ತಡೆಗಟ್ಟುವಲ್ಲಿ ಸರ್ಕಾರ ವಿಫಲವಾಗಿದೆ. ರಾಜ್ಯದ ಯುವಕರ ಭವಿಷ್ಯವನ್ನು ಹಾಳುಮಾಡುತ್ತಿದೆ ಎಂದು ಅವರು ಕಿಡಿಕಾರಿದ್ದು, ತೀವ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ.

ಉತ್ತರ ಪ್ರದೇಶದ ಸಹರಾನ್‌ಪುರದ ವನ್ಯಜೀವಿ ಕಾರಿಡಾರ್‌ಗೆ ಪ್ರಧಾನಿ ಮೋದಿ ಭೇಟಿ
ಉತ್ತರ ಪ್ರದೇಶದ ಸಹರಾನ್‌ಪುರದ ವನ್ಯಜೀವಿ ಕಾರಿಡಾರ್‌ಗೆ ಪ್ರಧಾನಿ ಮೋದಿ ಭೇಟಿ
ಸಿದ್ದರಾಮಯ್ಯ ಜತೆ ರಹಸ್ಯ ಮಾತುಕತೆ ನಡೆಸಿ ಹೊರಟ ಜಮೀರ್, ಮಂತ್ರಿ ಕಥೆ ಏನು?
ಸಿದ್ದರಾಮಯ್ಯ ಜತೆ ರಹಸ್ಯ ಮಾತುಕತೆ ನಡೆಸಿ ಹೊರಟ ಜಮೀರ್, ಮಂತ್ರಿ ಕಥೆ ಏನು?
ಡೆಲಿವರಿ ಬಾಯ್ಸ್ ಕೆಲಸ ಗೌರವಿಸಿ; ಸ್ವಂತ ಅನುಭವ ಹಂಚಿಕೊಂಡ ಧರ್ಮ ಕೀರ್ತಿರಾಜ್
ಡೆಲಿವರಿ ಬಾಯ್ಸ್ ಕೆಲಸ ಗೌರವಿಸಿ; ಸ್ವಂತ ಅನುಭವ ಹಂಚಿಕೊಂಡ ಧರ್ಮ ಕೀರ್ತಿರಾಜ್
ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಬದುಕುತ್ತಿದ್ದ
ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಬದುಕುತ್ತಿದ್ದ
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ತಮಿಳುನಾಡು ಎಲೆಕ್ಷನ್‌ ಪ್ರಚಾರದ ವೇಳೆ ಕನ್ನಡದಲ್ಲಿ ಅಶೋಕ್‌ ಮತಬೇಟೆ
ತಮಿಳುನಾಡು ಎಲೆಕ್ಷನ್‌ ಪ್ರಚಾರದ ವೇಳೆ ಕನ್ನಡದಲ್ಲಿ ಅಶೋಕ್‌ ಮತಬೇಟೆ
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ಅನುಷಾ ರೈ ಜೊತೆ ಮದುವೆ ಆಗ್ತೀರಾ? ಧರ್ಮ ಕೀರ್ತಿರಾಜ್ ನೇರ ಉತ್ತರ
ಅನುಷಾ ರೈ ಜೊತೆ ಮದುವೆ ಆಗ್ತೀರಾ? ಧರ್ಮ ಕೀರ್ತಿರಾಜ್ ನೇರ ಉತ್ತರ
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?