
R Ashoka
ಬೆಂಗಳೂರಿನ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಆರ್. ಅಶೋಕ್ ಕರ್ನಾಟಕ ಬಿಜೆಪಿಯ ಹಿರಿಯ ನಾಯಕರು. ಆರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಅವರು ಪ್ರಸ್ತುತ ವಿರೋಧ ಪಕ್ಷದ ನಾಯಕರಾಗಿದ್ದಾರೆ. ಇವರು 1957ರ ಜುಲೈ 1 ರಂದು ಜನಿಸಿದರು. ಬೆಂಗಳೂರಿನಲ್ಲಿ ಹುಟ್ಟಿ ಬೆಳೆದ ಆರ್. ಅಶೋಕ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಕ್ರೀಯ ಕಾರ್ಯಕರ್ತರು. ನಂತರದ ದಿನಗಳಲ್ಲಿ ಬಿಜೆಪಿಯೊಂದಿಗೆ ಗುರುತಿಸಿಕೊಂಡು ರಾಜಕೀಯಕ್ಕೆ ಬಂದರು. ಹಂತ ಹಂತವಾಗಿ ಪಕ್ಷ ಹಾಗೂ ರಾಜಕೀಯದಲ್ಲಿ ಮುನ್ನೆಲೆಗೆ ಬಂದರು. ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ (1975 ರಿಂದ 77) ಅಶೋಕ್ ಜೈಲುವಾಸ ಅನುಭವಿಸಿದ್ದರು. ಬಿಜೆಪಿ ಹಿರಿಯ ನಾಯಕ, ಭಾರತ ರತ್ನ ಎಲ್.ಕೆ. ಅಡ್ವಾಣಿ ಮುಂತಾದವರೊಂದಿಗೆ ಜೈಲಿನಲ್ಲಿದ್ದರು. 1997 ರಲ್ಲಿ ಬೆಂಗಳೂರಿನ ಉತ್ತರಹಳ್ಳಿ ಕ್ಷೇತ್ರಕ್ಕೆ ನಡೆದ ವಿಧಾನಸಭಾ ಉಪ ಚುನಾವಣೆಯಲ್ಲಿ ಸ್ಪರ್ಧಿಸಿ ಪ್ರಥಮ ಬಾರಿಗೆ ಶಾಸಕರಾದರು. 2021ರಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಂಪುಟಕ್ಕೆ ಆರ್. ಅಶೋಕ ಸೇರ್ಪಡೆಯಾಗಿ ಕಂದಾಯ ಸಚಿವ ಖಾತೆ ನಿಭಾಯಿಸಿದರು. 1999 ಹಾಗೂ 2004 ರಲ್ಲಿ ಉತ್ತರಹಳ್ಳಿ ಕ್ಷೇತ್ರದಿಂದ ಮತ್ತೆ ಶಾಸಕರಾಗಿ ಆಯ್ಕೆಯಾದರು. 2008ರಲ್ಲಿ ಮತ್ತೊಮ್ಮೆ ಶಾಸಕರಾಗಿ ಆಯ್ಕೆಯಾದರು. ಬಿಎಸ್ ಯಡಿಯೂರಪ್ಪ ಅವರ ಸರ್ಕಾರದಲ್ಲಿ ಸಾರಿಗೆ ಖಾತೆಯ ಸಚಿವರಾದರು. 2012ರಲ್ಲಿ ಜಗದೀಶ ಶೆಟ್ಟರ್ ಮುಖ್ಯಮಂತ್ರಿಯಾದಾಗ ಉಪ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದರು. ಉಪ ಮುಖ್ಯಮಂತ್ರಿ ಜೊತೆಗೆ ಸಾರಿಗೆ ಹಾಗೂ ಗೃಹ ಇಲಾಖೆಗಳ ಜವಾಬ್ದಾರಿ ನಿಭಾಯಿಸಿದರು. 2018ರಲ್ಲಿ ಆರ್. ಅಶೋಕ್ ಪದ್ಮನಾಭನಗರದಿಂದ ಶಾಸಕರಾಗಿ ಮತ್ತೆ ಆಯ್ಕೆಯಾದರು. 2019ರಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಾಗ ಕಂದಾಯ, ಮುಜರಾಯಿ ಖಾತೆ ಹೊಣೆ ಹೊತ್ತಿದ್ದರು. ಪ್ರಸ್ತುತ ಆರ್. ಅಶೋಕ ವಿರೋಧ ಪಕ್ಷದ ನಾಯಕರಾಗಿದ್ದಾರೆ
ಮುಸಲ್ಮಾನರಿಗೆ ಮೀಸಲಾತಿ ನೀಡುವ ಬಿಲ್ ಪಾಸ್ ಮಾಡಲು ನಮ್ಮ ಶಾಸಕರನ್ನು ಸಸ್ಪೆಂಡ್ ಮಾಡಿದ್ದಾರೆ: ವಿಜಯೇಂದ್ರ
ಹಗಲಿರುಳು ಸಂವಿಧಾನದ ಪರಿಪಾಲಕರು, ಅದನ್ನು ಬಿಟ್ಟು ಬೇರೇನೂ ಯೋಚಿಸುವುದಿಲ್ಲ ಎಂಬಂತೆ ಪೋಸು ಬಿಗಿಯುವ ಕಾಂಗ್ರೆಸ್ ನಾಯಕರು ಮುಸಲ್ಮಾನರಿಗೆ ಮೀಸಲಾತಿಯನ್ನು ಕಲ್ಪಿಸಲು ಸಂವಿಧಾನವನ್ನೂ ಉಲ್ಲಂಘಿಸಿದ್ದಾರೆ ಎಂದು ಹೇಳಿದ ವಿಜಯೇಂದ್ರ ಮೀಸಲಾತಿಯನ್ನು ಧರ್ಮದ ಆಧಾರದಲ್ಲಿ ನೀಡಲು ಬರಲ್ಲ, ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದವರಿಗೆ ಮೀಸಲಾತಿ ಕೊಡಬೇಕೆನ್ನುವ ಸಂವಿಧಾನದ ಭಾಗವನ್ನು ಓದಿ ಹೇಳಿದರು.
- Arun Belly
- Updated on: Mar 22, 2025
- 5:37 pm
ನನ್ನನ್ನು ಹನಿ ಟ್ರ್ಯಾಪ್ ಮಾಡಲಾಗಿದೆ ಅಂತ ಸಚಿವರೊಬ್ಬರು ಹೇಳಿದಾಗ ಸಿಎಂಗೆ ಅಶ್ಲೀಲ ಅನಿಸಲಿಲ್ಲವೇ? ಅಶೋಕ
ಸದನದ ಮಾನ ಉಳಿಸಲು ಬಿಜೆಪಿ ನ್ಯಾಯ ಕೇಳಿದ್ದೇವೆ, ನ್ಯಾಯಾಂಗ ತನಿಖೆ ನಡೆಯಲಿ, ತನಿಖೆಯನ್ನು ಸಿಬಿಐಗೆ ಒಪ್ಪಿಸಲಿ ಅಂತ ಅಂತ ಹೋರಾಟ ಮಾಡಿದ್ದು ಕೇವಲ ಸದನದ ಗೌರವ ಉಳಿಸೋದಿಕ್ಕೆ, ಅಸಲಿಗೆ ಆಡಳಿತ ಪಕ್ಷವೇ ತನ್ನ ಸಚಿವನ ಬೆನ್ನಿಗೆ ನಿಲ್ಲಬೇಕಿತ್ತು, ಅದ್ಯಾವ ಮುಖ ಇಟ್ಕೊಂಡು ಇವರು ಸದನದ ಕಲಾಪಗಳಿಗೆ ಬರುತ್ತಾರೆ ಎಂದು ಆರ್ ಅಶೋಕ ಖಾರವಾಗಿ ಪ್ರಶ್ನಿಸಿದರು.
- Arun Belly
- Updated on: Mar 21, 2025
- 6:25 pm
ಹೆಲಿಕಾಪ್ಟರ್ನಲ್ಲಿ ಓಡಾಡಲು ಮಜಾವಾದಿ ಸಿದ್ದರಾಮಯ್ಯ ₹ 19 ಕೋಟಿ ಖರ್ಚು ಮಾಡಿದ್ದಾರೆ: ಅರ್ ಅಶೋಕ
ಸಾರ್ವಜನಿಕರಿಗೆ ಸೇರಬೇಕಿರುವ ಹಣವನ್ನು ಹೇಗೆ ಸ್ವಂತಕ್ಕಾಗಿ ಬಳಸಬೇಕೆಂದು ತಿಳಿಯಲು ಜನ ಕಾಂಗ್ರೆಸ್ ನಾಯಕರ ಬಳಿ ಹೋಗಬೇಕು, ಈ ವಿಷಯದಲ್ಲಿ ಅವರು ಒಂದು ಯೂನಿವರ್ಸಿಟಿಯನ್ನೇ ನಡೆಸುತ್ತಿದ್ದಾರೆ, ಪಕ್ಷದ ಕಾರ್ಯಕರ್ತರು ಮಜಾ ಮಾಡಲೆಂದು ಸಿದ್ದರಾಮಯ್ಯ ₹60 ಕೋಟಿ ಬಿಡುಗಡೆ ಮಾಡಿದ್ದಾರೆ ಎಂದು ಅಶೋಕ ಹೇಳಿದರು.
- Arun Belly
- Updated on: Mar 20, 2025
- 2:03 pm
Karnataka Budget Session: ಶಾಸಕರ ಗೌರವ ಮುಖ್ಯವೆಂದ ಸಭಾಧ್ಯಕ್ಷ ಯುಟಿ ಖಾದರ್ ರೂಲಿಂಗನ್ನು ಮೇಜುಕುಟ್ಟಿ ಸ್ವಾಗತಿಸಿದ ವಿಪಕ್ಷ ನಾಯಕರು
ಕಾನೂನು ಸಚಿವ ಹೆಚ್ ಕೆ ಪಾಟೀಲ್ ನ್ಯಾಚುರಲ್ ಜಸ್ಟೀಸ್ ಬಗ್ಗೆ ಮಾತಾಡಿದಾಗ ಸ್ಪೀಕರ್ ಖಾದರ್ ಅದನ್ನು ಓವರ್ರೂಲ್ ಮಾಡುತ್ತಾ ಶಾಸಕರ ಗೌರವ ಮುಖ್ಯ ಎಂದು ಹೇಳಿದರು. ವಿರೋಧ ಪಕ್ಷಗಳ ಪರವಾಗಿ ಮಾತಾಡಿದ ಆರ್ ಅಶೋಕ ಅವರು ಸ್ಪೀಕರ್ ಅವರಿಗೆ ಕೃತಜ್ಞತೆಗಳನ್ನು ಸಲ್ಲಿಸಿ, ಪಾಟೀಲ್ ಕಡೆ ತಿರುಗಿ ನೀವು ಸದನದ ಹಿರಿಯರು, ನಮಗೆಲ್ಲ ಗೌರವ ಮುಖ್ಯ, ಅಧಿಕಾರಿಗಳಿಗೆ ತಮ್ಮ ವಾದ ಮಂಡಿಸಲು ಅವಕಾಶ ಸಿಕ್ಕೇಸಿಗುತ್ತದೆ ಎಂದರು.
- Arun Belly
- Updated on: Mar 18, 2025
- 12:59 pm
Karnataka Budget Session: ಮುಖ್ಯಮಂತ್ರಿ ಹೇಳಿದ್ದಕ್ಕೆ ಕೂತಿದ್ದೆ; ಉಪ ಮುಖ್ಯಮಂತ್ರಿ ಹೇಳಿದಾಗಲೂ ಕೂರಬೇಕಾ? ಅರ್ ಅಶೋಕ
ನೀವು ಸಾಕಷ್ಟು ಅನುಭವಿಗಳು, ನಿಮಗೂ ಎಲ್ಲ ಗೊತ್ತಿದೆ ಅಂತ ಶಿವಕುಮಾರ್, ಅಶೋಕಗೆ ಹೇಳುತ್ತಾ ಮಾತು ಶುರುಮಾಡುತ್ತಾರೆ. ಹಿಂದೆ ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆಯನ್ನು ಜಾರಿ ಮಾಡಿದಾಗ ದೇಶದಲ್ಲಿ ಈ ಸಮುದಾಯಗಳಿಗೆ ₹27,000 ಕೋಟಿ ಮೀಸಲಿಡಲಾಗಿತ್ತು. ಜನಸಂಖ್ಯೆ ಆಧಾರದ ಮೇಲೆ ಈ ಸಮುದಾಯಗಳಿಗೆ ಅನುಕೂಲವಾಗಲಿ ಅಂತ ಕಾಯ್ದೆ ಮಾಡಿದೆವು ಎಂದು ಶಿವಕುಮಾರ್ ಹೇಳಿದರು.
- Arun Belly
- Updated on: Mar 13, 2025
- 6:07 pm
ಸದನದಲ್ಲಿ ಸಿಎಂ ಸಿದ್ದರಾಮಯ್ಯರ ಕನ್ನಡ ಪ್ರೇಮ ಹಾಡಿ ಹೊಗಳಿದ ವಿರೋಧ ಪಕ್ಷದ ನಾಯಕ ಆರ್ ಅಶೋಕ
ಕನ್ನಡ ಕಾವಲು ಸಮಿತಿ ಅಧ್ಯಕ್ಷರಾಗಿದದ್ದವರು ನೀವು ಅಂದಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಹೌದಪ್ಪ ಹೌದು ಎನ್ನುತ್ತಾರೆ! ಸಿದ್ದರಾಮಯ್ಯ ಸೀರಿಯಸ್ಸಾಗಿ ಆ ಮಾತನ್ನು ಹೇಳುತ್ತಿದ್ದಾರೋ ಅಥವಾ ಉಢಾಫೆ ಮಾಡುತ್ತಿದ್ದಾರೋ ಅಂತ ಗೊತ್ತಾಗದೆ ಅಶೋಕ ಪ್ರಶ್ನಾರ್ಥಕಾವಾಗಿ ಮುಖ್ಯಮಂತ್ರಿಯವರ ಕಡೆ ನೋಡುತ್ತಾರೆ. ಸದನದಲ್ಲಿದ್ದ ಸದಸ್ಯರೆಲ್ಲ ನಕ್ಕಾಗ ಅಶೋಕ ಅವರಿಗೆ ವಿಷಯ ಅರ್ಥವಾಗುತ್ತದೆ!
- Arun Belly
- Updated on: Mar 12, 2025
- 6:03 pm
ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಗೆ ಬೊಕ್ಕಸದಿಂದ ಸಂಬಳ ನೀಡುತ್ತಿರುವುದನ್ನು ವಿರೋಧಿಸಿ ವಿಷಕ್ಷಗಳ ರ್ಯಾಲಿ
ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಸರ್ಕಾರವು ಹೆಚ್ ಎಂ ರೇವಣ್ಣ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಿ ಪದಾಧಿಕಾರಿಗಳಿಗೆ ಬೊಕ್ಕಸದಿಂದ ಸಂಬಳ ನೀಡುತ್ತಿದೆ ಎಂದು ವಿರೋಧ ಪಕ್ಷದ ನಾಯಕರು ಅರೋಪಿಸುತ್ತಿದ್ದಾರೆ. ಅಭಿವೃದ್ಧಿ ಕಾರ್ಯಗಳಿಗೆ ಶಾಸಕರಿಗೆ ಅನುದಾನ ನೀಡದ ಸರ್ಕಾರ ತೆರಿಗೆ ಹಣವನ್ನು ಹೀಗೆ ಪೋಲು ಮಾಡುತ್ತಿದೆ, ಬೇಕಿದ್ದರೆ ಕಾಂಗ್ರೆಸ್ ಪಕ್ಷದ ಕಚೇರಿಯಿಂದ ಸಂಬಳ ನೀಡಲಿ ಎಂದು ನಾಯಕರು ಹೇಳಿದರು.
- Arun Belly
- Updated on: Mar 12, 2025
- 1:31 pm
ಗ್ಯಾರಂಟಿ ಅನುಷ್ಠಾನ ಹೆಸರಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ಸರ್ಕಾರದಿಂದ ಸಂಬಳ! ಸರ್ಕಾರದ ವಿರುದ್ಧ ಬಿಜೆಪಿ ಕಿಡಿ
ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಮೇಲ್ವಿಚಾರಣೆ ಸಮಿತಿಗಳನ್ನು ರಚಿಸಿ ಅದರಲ್ಲಿ ಕಾಂಗ್ರೆಸ್ ಪಕ್ಷದ ನಾಯಕರು, ಕಾರ್ಯಕರ್ತರನ್ನು ನೇಮಕ ಮಾಡಿ ಅವರಿಗೆ ಸರ್ಕಾರದಿಂದ ವೇತನ ನೀಡುವ ವಿಚಾರ ಈಗ ಭಾರಿ ಕೋಲಾಹಲಕ್ಕೆ ಕಾರಣವಾಗಿದೆ. ಗ್ಯಾರಂಟಿ ಯೋಜನೆಗಳೇ ಸರ್ಕಾರಕ್ಕೆ ಹೊರೆಯಾಗಿದೆ ಎಂದು ಆಡಳಿತ ಪಕ್ಷದ ಕೆಲವು ಮಂದಿ ನಾಯಕರೇ ಹೇಳುತ್ತಿರುವ ಈ ಹೊತ್ತಿನಲ್ಲಿ ಪಕ್ಷದ ಕಾರ್ಯಕರ್ತರಿಗೆ ವೇತನದ ಹೆಸರಿನಲ್ಲಿ ತೆರಿಗೆದಾರರ ಹಣವನ್ನು ಕಾಂಗ್ರೆಸ್ ಲೂಟಿ ಮಾಡುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.
- Ganapathi Sharma
- Updated on: Mar 12, 2025
- 10:51 am
ಗ್ರೇಟರ್ ಬೆಂಗಳೂರು ವಿಧೇಯಕ: ಇದು ಬೆಂಗಳೂರಿನ ಪಾಲಿಗೆ ಮರಣ ಶಾಸನ ಎಂದ ಆರ್ ಅಶೋಕ್
ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ವಿಭಜನೆಗೆ ವಿರೋಧ ಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿವೆ. ಗ್ರೇಟರ್ ಬೆಂಗಳೂರು ವಿಧೇಯಕ ಮರಣ ಶಾಸನ ಎಂದು ಕರೆದಿರುವ ವಿರೋಧ ಪಕ್ಷದ ನಾಯಕರು, ಬಿಬಿಎಂಪಿ ವಿಭಜನೆಯಿಂದ ಆಡಳಿತಾತ್ಮಕ ವೆಚ್ಚ ಹೆಚ್ಚಾಗುವುದು ಹಾಗೂ ಬೆಂಗಳೂರಿನ ಅಭಿವೃದ್ಧಿಗೆ ಅಡ್ಡಿಯಾಗುವುದು ಎಂದು ಆರೋಪಿಸಿದ್ದಾರೆ. ಬೆಂಗಳೂರು ಒಂದಾಗಿರಬೇಕೆಂಬುದು ಒತ್ತಾಯಿಸಿದ್ದಾರೆ.
- Web contact
- Updated on: Mar 10, 2025
- 4:57 pm
Karnataka Budget Session: ಕರ್ನಾಟಕ ಲೋಕಸೇವಾ ಆಯೋಗದ ವಿರುದ್ಧ ಅನೇಕ ವರದಿಗಳಿದ್ದರೂ ಸರ್ಕಾರ ನಂಬುತ್ತಿಲ್ಲ: ಅರ್ ಅಶೋಕ
ಅಶೋಕ ಕರ್ನಾಟಕ ಲೋಕಸೇವಾ ಆಯೋಗ ವರದಿ ಬಗ್ಗೆ ಹೇಳಿದಾಗ ಕೆರಳುವ ಶಿವಲಿಂಗೇಗೌಡರು, ಆಯೋಗವೇ ತಪ್ಪು ಮಾಡಿ ಅದೇ ತನಿಖೆ ನಡೆಸಿದರೆ ಅದಕ್ಕೇನು ಬೆಲೆ ಇದ್ದೀತು, ಆಯೋಗವು ಅಯೋಗ್ಯವಾಗಿದೆ, ಅದರ ಕಾರ್ಯಕ್ಷಮತೆ ನಂಬಲರ್ಹವಲ್ಲ ಎಂದು ಚಿಕ್ಕಮಕ್ಕಳು ಸಹ ಹೇಳುತ್ತಿದ್ದಾರೆ, ಅದು ನೀಡಿರುವ ವರದಿಯನ್ನು ಬದಿಗಿಟ್ಟು ಆಯೋಗವನ್ನೇ ರದ್ದು ಮಾಡುವಂತೆ ಹೇಳಿ ಎಂದು ಅಶೋಕ ಅವರಿಗೆ ಹೇಳುತ್ತಾರೆ.
- Arun Belly
- Updated on: Mar 4, 2025
- 6:37 pm