AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

R Ashoka

R Ashoka

ಬೆಂಗಳೂರಿನ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಆರ್. ಅಶೋಕ್ ಕರ್ನಾಟಕ ಬಿಜೆಪಿಯ ಹಿರಿಯ ನಾಯಕರು. ಆರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಅವರು ಪ್ರಸ್ತುತ ವಿರೋಧ ಪಕ್ಷದ ನಾಯಕರಾಗಿದ್ದಾರೆ. ಇವರು 1957ರ ಜುಲೈ 1 ರಂದು ಜನಿಸಿದರು. ಬೆಂಗಳೂರಿನಲ್ಲಿ ಹುಟ್ಟಿ ಬೆಳೆದ ಆರ್​. ಅಶೋಕ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಕ್ರೀಯ ಕಾರ್ಯಕರ್ತರು. ನಂತರದ ದಿನಗಳಲ್ಲಿ ಬಿಜೆಪಿಯೊಂದಿಗೆ ಗುರುತಿಸಿಕೊಂಡು ರಾಜಕೀಯಕ್ಕೆ ಬಂದರು. ಹಂತ ಹಂತವಾಗಿ ಪಕ್ಷ ಹಾಗೂ ರಾಜಕೀಯದಲ್ಲಿ ಮುನ್ನೆಲೆಗೆ ಬಂದರು. ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ (1975 ರಿಂದ 77) ಅಶೋಕ್ ಜೈಲುವಾಸ ಅನುಭವಿಸಿದ್ದರು. ಬಿಜೆಪಿ ಹಿರಿಯ ನಾಯಕ, ಭಾರತ ರತ್ನ ಎಲ್.ಕೆ. ಅಡ್ವಾಣಿ ಮುಂತಾದವರೊಂದಿಗೆ ಜೈಲಿನಲ್ಲಿದ್ದರು. 1997 ರಲ್ಲಿ ಬೆಂಗಳೂರಿನ ಉತ್ತರಹಳ್ಳಿ ಕ್ಷೇತ್ರಕ್ಕೆ ನಡೆದ ವಿಧಾನಸಭಾ ಉಪ ಚುನಾವಣೆಯಲ್ಲಿ ಸ್ಪರ್ಧಿಸಿ ಪ್ರಥಮ ಬಾರಿಗೆ ಶಾಸಕರಾದರು. 2021ರಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಂಪುಟಕ್ಕೆ ಆರ್. ಅಶೋಕ ಸೇರ್ಪಡೆಯಾಗಿ ಕಂದಾಯ ಸಚಿವ ಖಾತೆ ನಿಭಾಯಿಸಿದರು. 1999 ಹಾಗೂ 2004 ರಲ್ಲಿ ಉತ್ತರಹಳ್ಳಿ ಕ್ಷೇತ್ರದಿಂದ ಮತ್ತೆ ಶಾಸಕರಾಗಿ ಆಯ್ಕೆಯಾದರು. 2008ರಲ್ಲಿ ಮತ್ತೊಮ್ಮೆ ಶಾಸಕರಾಗಿ ಆಯ್ಕೆಯಾದರು. ಬಿಎಸ್​ ಯಡಿಯೂರಪ್ಪ ಅವರ ಸರ್ಕಾರದಲ್ಲಿ ಸಾರಿಗೆ ಖಾತೆಯ ಸಚಿವರಾದರು. 2012ರಲ್ಲಿ ಜಗದೀಶ ಶೆಟ್ಟರ್ ಮುಖ್ಯಮಂತ್ರಿಯಾದಾಗ ಉಪ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದರು. ಉಪ ಮುಖ್ಯಮಂತ್ರಿ ಜೊತೆಗೆ ಸಾರಿಗೆ ಹಾಗೂ ಗೃಹ ಇಲಾಖೆಗಳ ಜವಾಬ್ದಾರಿ ನಿಭಾಯಿಸಿದರು. 2018ರಲ್ಲಿ ಆರ್‌. ಅಶೋಕ್ ಪದ್ಮನಾಭನಗರದಿಂದ ಶಾಸಕರಾಗಿ ಮತ್ತೆ ಆಯ್ಕೆಯಾದರು. 2019ರಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಾಗ ಕಂದಾಯ, ಮುಜರಾಯಿ ಖಾತೆ ಹೊಣೆ ಹೊತ್ತಿದ್ದರು. ಪ್ರಸ್ತುತ ಆರ್. ಅಶೋಕ ವಿರೋಧ ಪಕ್ಷದ ನಾಯಕರಾಗಿದ್ದಾರೆ

ಇನ್ನೂ ಹೆಚ್ಚು ಓದಿ

ಒಬ್ಬ ಶಾಂತಿಪ್ರಿಯ ಮುಖ್ಯಮಂತ್ರಿ ಸಾರ್ವಜನಿಕವಾಗಿ ಪೊಲೀಸ್ ಅಧಿಕಾರಿಯ ಮೇಲೆ ಕೈ ಎತ್ತುತ್ತಾರೆಯೇ? ಅರ್ ಅಶೋಕ

ಮುಖ್ಯಮಂತ್ರಿ ಸಿದ್ದರಾಮಯ್ಯ ದುರಹಂಕಾರದ ಮೂಟೆ, ಪ್ರಾಯಶಃ ಮುಂದಿನ ನಾಲ್ಕೈದು ತಿಂಗಳ ಅವಧಿಯಲ್ಲಿ ಅಧಿಕಾರದಿಂದ ಕೆಳಗಿಳಿಯಬೇಕಾದ ಹತಾಷೆ ಅವರನ್ನು ಕಾಡುತ್ತಿರಬಹುದು, ಅವರ ಹೇಳಿಕೆಗೆ ಪಕ್ಕದಲ್ಲೇ ಕುಳಿತಿದ್ದ ಉಪ ಮುಖ್ಯಮಂತ್ರಿಯವರೇ ಬೆಂಬಲ ನೀಡಿಲ್ಲ, ಅವರ ಹೇಳಿಕೆಗೆ ಅವರೇ ಹೊಣೆಗಾರರು ಎಂದು ಶಿವಕುಮಾರ್ ಯಾಕೆ ಹೇಳಿದ್ದಾರೆ ಅಂತ ಸಿದ್ದರಾಮಯ್ಯ ವಿವರಣೆ ನೀಡುತ್ತಾರೆಯೇ ಎಂದು ಆಶೋಕ ಪ್ರಶ್ನಿಸಿದರು.

ಸಚಿವ ತಿಮ್ಮಾಪುರ ಪಹಲ್ಗಾಮ್ ಉಗ್ರರ ಸಂದರ್ಶನ ಮಾಡಿಕೊಂಡು ಬಂದಂತಿದೆ: ಅರ್ ಅಶೋಕ

ಪಾಕಿಸ್ತಾನದ ಜೊತೆ ಯುದ್ಧ ಬೇಡವೆನ್ನುವ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ಭಾರತದ ನಿಜವಾದ ರಾಯಭಾರಿ ಆಗುತ್ತಾರೆ. ಇವರನ್ನ ರಾಯಭಾರಿಯಾಗಿ ಕಳಿಸಿದರೆ ಪಾಕಿಸ್ತಾನ ತನ್ನ ಎಲ್ಲ ಅತ್ಯುನ್ನತ ಗೌರವ ಪುರಸ್ಕಾರಗಳನ್ನು ಇವರಿಗೆ ನೀಡಿ ಅಲ್ಲಿನ ರಸ್ತೆಗಳಲ್ಲಿ ಚಿನ್ನದ ರಥದಲ್ಲಿ ಮೆರವಣಿಗೆ ಮಾಡಿಸುತ್ತದೆ ಎಂದು ವಿರೋಧ ಪಕ್ಷದ ನಾಯಕ ಅರ್ ಅಶೋಕ ವ್ಯಂಗ್ಯವಾಡಿದರು.

ದೇಶ ಕಾಯುವ ಸೈನಿಕನೇ ಪರಮೋಚ್ಛ, ಆದರೆ ಕಾಂಗ್ರೆಸ್ ಸೈನಿಕರ ಮನೋಬಲ ಕುಗ್ಗಿಸುತ್ತಿದೆ: ಆರ್ ಅಶೋಕ

ಕಾಂಗ್ರೆಸ್ ಪಕ್ಷದ ನಾಯಕರ ಹಾಗೆ ತಾನೂ ಸಹ ರಾಜ್ಯ ಸರ್ಕಾರದ ಲೋಪಗಳನ್ನು ಎಣಿಸುತ್ತಾ ಕೂತರೆ ಅವರ ಯೋಗ್ಯತೆ ಏನು ಅನ್ನೋದು ಗೊತ್ತಾಗುತ್ತದೆ, ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಬ್ಲಾಸ್ಟ್ ಪ್ರಕರಣ, ಮಂಗಳೂರು ಕುಕ್ಕರ್ ಬಾಂಬ್ ಪ್ರಕರಣಗಳು ಭದ್ರತಾ ಲೋಪವಲ್ಲದೆ ಮತ್ತೇನು? ಎಂದು ವಿರೋಧ ಪಕ್ಷದ ನಾಯಕ ಅರ್ ಅಶೋಕ ಕೇಳಿದರು.

ಶಾಸಕರ ಅಮಾನತು ವಾಪಸ್ಸು ಪಡೆಯುವಂತೆ ಸ್ಪೀಕರ್ ಹಾಗೂ ಕಾನೂನು ಸಚಿವರಿಗೆ ಮನವಿ ಮಾಡಿದ್ದೇವೆ: ಅಶೋಕ

ಅಧಿವೇಶನದಲ್ಲಿ ಬಿಜೆಪಿ ಶಾಸಕರಿಂದ ಏನಾದರೂ ಲೋಪ ಆಗಿದ್ದರೆ ಅದನ್ನು ಒಪ್ಪಿಕೊಳ್ಳಲು ತಾವು ಸಿದ್ಧರಿರೋದಾಗಿ ಹೇಳಿದ ಅಶೋಕ ಸದನದೊಳಗೆ ಇದಕ್ಕೆ ಮೊದಲು ಸಹ ಅನೇಕ ಸಲ ಧರಣಿ ಮಾಡಿದ್ದೇವೆ, ಕಾಂಗ್ರೆಸ್ ಶಾಸಕರು ಮೈಕ್ ಕಿತ್ತಾಡಿ ಸ್ಪೀಕರ್ ಅವರನ್ನು ಎಳೆದಾಡಿದ ನಿದರ್ಶನಗಳೂ ಇವೆ, ಅವರಿಗೆ ಆಗ ಅನ್ವಯಿಸದ ಕಾನೂನು ಈಗ ನಮಗ್ಯಾಕೆ ಎಂದು ಅಶೋಕ ಪ್ರಶ್ನಿಸಿದರು.

ನನ್ನ ಉಚ್ಚಾಟನೆ ನಂತರ ಬಿಜೆಪಿಯಲ್ಲಿ ಒಗ್ಗಟ್ಟು ಕಂಡುಬರುತ್ತಿದೆ ಅನ್ನೋದು ಸುಳ್ಳು: ಬಸನಗೌಡ ಯತ್ನಾಳ್

ಬಿಜೆಪಿ ನಾಯಕರು ಸುದ್ದಿಗೋಷ್ಠಿಯಲ್ಲಿ ತನ್ನ ಮತ್ತು ಗೋಶಾಲೆಯ ಬಗ್ಗೆ ಮಾಡಿರುವ ಕಾಮೆಂಟ್​​ಗಳಿಗೆ ತೀವ್ರ ಆಕ್ಷೇಪಣೆ ವ್ಯಕ್ತಪಡಿಸಿದ ಯತ್ನಾಳ್, ಗೋಶಾಲೆಯ ಬಗ್ಗೆ ಮಾತಾಡಿದವರೆಲ್ಲರ ವಿರುದ್ಧ ಮಾನಹಾನಿ ಮೊಕದ್ದಮೆ ಹೂಡುವ ನಿರ್ಣಯವನ್ ಸಿದ್ದೇಶ್ವರ ಕಮಿಟಿಯು ನಿರ್ಣಯ ತೆಗೆದುಕೊಂಡಿದೆ,ಕಾಮೆಂಟ್ ಮಾಡಿರುವವರು ಹಿಂದೂಗಳ ಬೇಷರತ್ ಕ್ಷಮೆ ಕೇಳಬೇಕು, ಇಲ್ಲವಾದಲ್ಲಿ ಕೋರ್ಟ್ ನಲ್ಲಿ ತಮ್ಮನ್ನು ಎದುರಿಸಬೇಕು ಎಂದು ಯತ್ನಾಳ್ ಹೇಳಿದರು.

ವಿಜಯಪುರದಲ್ಲಿ ಜನಾಕ್ರೋಶ ಯಾತ್ರೆ ಭರ್ಜರಿ ಯಶಸ್ಸಿಗೆ ಬಸನಗೌಡ ಯತ್ನಾಳ್ ವಿರೋಧಿಗಳ ಪ್ಲ್ಯಾನ್!

ವಿಜಯಪುರ ಯತ್ನಾಳ್ ಪ್ರತಿನಿಧಿಸುವ ಕ್ಷೇತ್ರವಾಗಿದೆ, ನಗರದಲ್ಲಿ ಅವರ ಶಕ್ತಿ ಏನೂ ಇಲ್ಲ ಅನ್ನೋದನ್ನು ಸಾಬೀತು ಮಾಡಬೇಕಿದೆ, ವಿಜಯಪುರದಿಂದಲೇ ಕನಿಷ್ಠ ಐದು ಸಾವಿರ ಜನ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂಬ ನಿರೀಕ್ಷೆ ಇದೆ, ಆದರೆ ಜಿಲ್ಲೆಯ ಬೇರೆ ಭಾಗಗಳಿಂದಲೂ ಕಾರ್ಯಕರ್ತರನ್ನು ಸೇರಿಸೋಣ ಮತ್ತು ಯಾತ್ರೆಯನ್ನು ಭಾರೀ ಯಶಗೊಳಿಸೋಣ ಎಂದು ಪಟ್ಟಣಶೆಟ್ಟಿ ಕರೆ ನೀಡಿದರು.

ನಿಪ್ಪಾಣಿ ಭೀಮ ಹೆಜ್ಜೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕರಿಗೆ 5 ಪ್ರಶ್ನೆ ಕೇಳಿ ಉತ್ತರ ಬಯಸಿದ ಆರ್ ಅಶೋಕ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಲಿತರ ಕೈಬಿಟ್ಟಿದ್ದಾರೆ, ಅವರಿಗೆ ಈಗ ಮುಸಲ್ಮಾನರು ಮಾತ್ರ ಬೇಕು, ಹಾಗಾಗಿ ದಲಿತರು ತಪ್ಪು ಹೆಜ್ಜೆ ಇಡಬಾರದು ಅಂತ ಭೀಮ ಹೆಜ್ಜೆ ಕಾರ್ಯಕ್ರಮದಲ್ಲಿ ಕಳಕಳಿಯಿಂದ ಎಚ್ಚರಿಸುತ್ತೇನೆ, ತಪ್ಪು ಹೆಜ್ಜೆ ಇಟ್ಟರೆ ಅಂಬೇಡ್ಕರ್ ಅವರನ್ನು ಸೋಲಿಸಿದ ಹಾಗೆ ದಲಿತರನ್ನು ಮುಗಿಸುತ್ತಾರೆ ಎಂದು ನಿಪ್ಪಾಣಿಯಲ್ಲಿ ಆರ್ ಅಶೋಕ ಹೇಳಿದರು.

ಜಾತಿ ಗಣತಿ ವರದಿ ಹಿಂಪಡೆದು, ಪ್ರತಿ ಮನೆಗೆ ಹೋಗಿ ಸಮೀಕ್ಷೆ ಮಾಡಿ ವೈಜ್ಞಾನಿಕ ವರದಿ ರೂಪಿಸಿ: ಅಶೋಕ್ ಆಗ್ರಹ

ಬಿಜೆಪಿ ನಾಯಕ ಆರ್. ಅಶೋಕ್ ಅವರು ಕರ್ನಾಟಕದ ಜಾತಿ ಗಣತಿ ವರದಿಯನ್ನು ಟೀಕಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಸ್ಲಿಂ ಮತಗಳನ್ನು ಗಳಿಸಲು ಈ ವರದಿಯನ್ನು ಬಳಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ವರದಿ ಅವೈಜ್ಞಾನಿಕವಾಗಿದ್ದು, ಪುನರ್ ಪರಿಶೀಲನೆ ಅಗತ್ಯ ಎಂದು ಅವರು ಆಗ್ರಹಿಸಿದ್ದಾರೆ. ಲಿಂಗಾಯತ, ಒಕ್ಕಲಿಗ ಮತ್ತು ದಲಿತ ಸಮುದಾಯಗಳ ನಿರ್ಲಕ್ಷ್ಯವನ್ನು ಅವರು ಪ್ರಶ್ನಿಸಿದ್ದಾರೆ.

ಜೆಡಿಎಸ್​ನೊಂದಿಗೆ ಭಿನ್ನಾಭಿಪ್ರಾಯವಿಲ್ಲ, ಕುಮಾರಸ್ವಾಮಿಯರೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ: ಆರ್ ಅಶೋಕ

ಎರಡೂ ಪಕ್ಷಗಳ ಒಂದು ಸಮನ್ವಯ ಸಮಿತಿ ರಚಿಸಬೇಕೆಂದು ನಿಖಿಲ್ ಕುಮಾರಸ್ವಾಮಿ ಹೇಳುತ್ತಾರೆ ಮತ್ತು ಹಿರಿಯ ಬಿಜೆಪಿ ನಾಯಕ ಡಿವಿ ಸದಾನಂದಗೌಡ ಸಹ ಹೇಳಿದ್ದಾರೆ. ಮುಂದಿನ ದಿನಗಳಲ್ಲಿ ಬಿಜೆಪಿ ಮತ್ತು ಜೆಡಿಎಸ್ ಒಟ್ಟಿಗೆ ಪ್ರತಿಭಟನೆ ಮಾಡಬೇಕಾ ಅಥವಾ ಪ್ರತ್ಯೇಕವಾಗಿ ಮಾಡಬೇಕಾ ಅಂತ ಸಮನ್ವಯ ಸಮಿತಿ ಸಭೆಯಲ್ಲಿ ನಿರ್ಣಯಿಸುತ್ತೇವೆ ಎಂದು ಅಶೋಕ ಹೇಳಿದರು.

ಸಿಎಂ ತವರು ಜಿಲ್ಲೆಯಿಂದಲೇ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ಆರಂಭಿಸಿದ ಬಿಜೆಪಿ ನಾಯಕರು

ರಾಜ್ಯ ಬಿಜೆಪಿಯ ಮತ್ತೊಂದು ಬಣದಲ್ಲಿ ಗುರುತಿಸಿಕೊಂಡಿದ್ದ ಮಾಜಿ ಸಂಸದ ಪ್ರತಾಪ್ ಸಿಂಹ ಸಹ ಜನಾಕ್ರೋಶ ಯಾತ್ರೆಯಲ್ಲಿ ಪಾಲ್ಗೊಂಡಿದ್ದು ಗಮನ ಸೆಳೆಯಿತು. ಆದರೆ ಬಸನಗೌಡ ಯತ್ನಾಳ್ ಬಣದ ಭಾಗವಾಗಿದ್ದ ಗೋಕಾಕ ಶಾಸಕ ರಮೇಶ್ ಜಾರಕಿಹೊಳಿ ಮತ್ತು ಇತರ ನಾಯಕರು ಕಾಣಿಸಲಿಲ್ಲ. ಬಿಜೆಪಿ ಆರಂಭಿಸಿರುವ ಜನಾಕ್ರೋಶ ಯಾತ್ರೆ ರಾಜ್ಯಾದ್ಯಂತ ನಾಲ್ಕು ಹಂತಗಳಲ್ಲಿ ನಡೆಯಲಿದೆ.

ನಾನು-ರಾಗಿಣಿ ಜೋಡಿ ಅಲ್ಲ: ಎಲ್ಲರ ಎದುರು ಸ್ಪಷ್ಟಪಡಿಸಿದ ಧರ್ಮ ಕೀರ್ತಿರಾಜ್
ನಾನು-ರಾಗಿಣಿ ಜೋಡಿ ಅಲ್ಲ: ಎಲ್ಲರ ಎದುರು ಸ್ಪಷ್ಟಪಡಿಸಿದ ಧರ್ಮ ಕೀರ್ತಿರಾಜ್
ಯುದ್ಧದ ಭೀತಿ; ಎಲ್​ಒಸಿಗೆ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಭೇಟಿ?
ಯುದ್ಧದ ಭೀತಿ; ಎಲ್​ಒಸಿಗೆ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಭೇಟಿ?
ಧೋನಿ ಸೇರಿದಂತೆ ಒಂದೇ ಓವರ್​ನಲ್ಲಿ 4 ವಿಕೆಟ್ ಉರುಳಿಸಿದ ಚಾಹಲ್
ಧೋನಿ ಸೇರಿದಂತೆ ಒಂದೇ ಓವರ್​ನಲ್ಲಿ 4 ವಿಕೆಟ್ ಉರುಳಿಸಿದ ಚಾಹಲ್
ಯುದ್ಧ ನಡೆದರೆ ಪಾಕಿಸ್ತಾನಕ್ಕೆ ಉಳಿಗಾಲವಿಲ್ಲ ಅನ್ನೋದು ಮೇಲ್ನೋಟಕ್ಕೆ ಸ್ಪಷ್ಟ
ಯುದ್ಧ ನಡೆದರೆ ಪಾಕಿಸ್ತಾನಕ್ಕೆ ಉಳಿಗಾಲವಿಲ್ಲ ಅನ್ನೋದು ಮೇಲ್ನೋಟಕ್ಕೆ ಸ್ಪಷ್ಟ
ಪ್ರಧಾನಿ ಮೋದಿ ಉಗ್ರರಿಗೆ ತಕ್ಕ ಪಾಠ ಕಲಿಸದೆ ಬಿಡೋದಿಲ್ಲ: ರಾಜೇಶ್ವರಿ
ಪ್ರಧಾನಿ ಮೋದಿ ಉಗ್ರರಿಗೆ ತಕ್ಕ ಪಾಠ ಕಲಿಸದೆ ಬಿಡೋದಿಲ್ಲ: ರಾಜೇಶ್ವರಿ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’