AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

R Ashoka

R Ashoka

ಬೆಂಗಳೂರಿನ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಆರ್. ಅಶೋಕ್ ಕರ್ನಾಟಕ ಬಿಜೆಪಿಯ ಹಿರಿಯ ನಾಯಕರು. ಆರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಅವರು ಪ್ರಸ್ತುತ ವಿರೋಧ ಪಕ್ಷದ ನಾಯಕರಾಗಿದ್ದಾರೆ. ಇವರು 1957ರ ಜುಲೈ 1 ರಂದು ಜನಿಸಿದರು. ಬೆಂಗಳೂರಿನಲ್ಲಿ ಹುಟ್ಟಿ ಬೆಳೆದ ಆರ್​. ಅಶೋಕ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಕ್ರೀಯ ಕಾರ್ಯಕರ್ತರು. ನಂತರದ ದಿನಗಳಲ್ಲಿ ಬಿಜೆಪಿಯೊಂದಿಗೆ ಗುರುತಿಸಿಕೊಂಡು ರಾಜಕೀಯಕ್ಕೆ ಬಂದರು. ಹಂತ ಹಂತವಾಗಿ ಪಕ್ಷ ಹಾಗೂ ರಾಜಕೀಯದಲ್ಲಿ ಮುನ್ನೆಲೆಗೆ ಬಂದರು. ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ (1975 ರಿಂದ 77) ಅಶೋಕ್ ಜೈಲುವಾಸ ಅನುಭವಿಸಿದ್ದರು. ಬಿಜೆಪಿ ಹಿರಿಯ ನಾಯಕ, ಭಾರತ ರತ್ನ ಎಲ್.ಕೆ. ಅಡ್ವಾಣಿ ಮುಂತಾದವರೊಂದಿಗೆ ಜೈಲಿನಲ್ಲಿದ್ದರು. 1997 ರಲ್ಲಿ ಬೆಂಗಳೂರಿನ ಉತ್ತರಹಳ್ಳಿ ಕ್ಷೇತ್ರಕ್ಕೆ ನಡೆದ ವಿಧಾನಸಭಾ ಉಪ ಚುನಾವಣೆಯಲ್ಲಿ ಸ್ಪರ್ಧಿಸಿ ಪ್ರಥಮ ಬಾರಿಗೆ ಶಾಸಕರಾದರು. 2021ರಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಂಪುಟಕ್ಕೆ ಆರ್. ಅಶೋಕ ಸೇರ್ಪಡೆಯಾಗಿ ಕಂದಾಯ ಸಚಿವ ಖಾತೆ ನಿಭಾಯಿಸಿದರು. 1999 ಹಾಗೂ 2004 ರಲ್ಲಿ ಉತ್ತರಹಳ್ಳಿ ಕ್ಷೇತ್ರದಿಂದ ಮತ್ತೆ ಶಾಸಕರಾಗಿ ಆಯ್ಕೆಯಾದರು. 2008ರಲ್ಲಿ ಮತ್ತೊಮ್ಮೆ ಶಾಸಕರಾಗಿ ಆಯ್ಕೆಯಾದರು. ಬಿಎಸ್​ ಯಡಿಯೂರಪ್ಪ ಅವರ ಸರ್ಕಾರದಲ್ಲಿ ಸಾರಿಗೆ ಖಾತೆಯ ಸಚಿವರಾದರು. 2012ರಲ್ಲಿ ಜಗದೀಶ ಶೆಟ್ಟರ್ ಮುಖ್ಯಮಂತ್ರಿಯಾದಾಗ ಉಪ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದರು. ಉಪ ಮುಖ್ಯಮಂತ್ರಿ ಜೊತೆಗೆ ಸಾರಿಗೆ ಹಾಗೂ ಗೃಹ ಇಲಾಖೆಗಳ ಜವಾಬ್ದಾರಿ ನಿಭಾಯಿಸಿದರು. 2018ರಲ್ಲಿ ಆರ್‌. ಅಶೋಕ್ ಪದ್ಮನಾಭನಗರದಿಂದ ಶಾಸಕರಾಗಿ ಮತ್ತೆ ಆಯ್ಕೆಯಾದರು. 2019ರಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಾಗ ಕಂದಾಯ, ಮುಜರಾಯಿ ಖಾತೆ ಹೊಣೆ ಹೊತ್ತಿದ್ದರು. ಪ್ರಸ್ತುತ ಆರ್. ಅಶೋಕ ವಿರೋಧ ಪಕ್ಷದ ನಾಯಕರಾಗಿದ್ದಾರೆ

ಇನ್ನೂ ಹೆಚ್ಚು ಓದಿ

ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು

ಕೋಗಿಲು ಲೇಔಟ್‌ನಲ್ಲಿ ಮನೆ ಹಂಚಿಕೆ ಕುರಿತು ಸಚಿವ ಜಮೀರ್ ಖಾನ್ ಖಡಾಖಂಡಿತ ಹೇಳಿಕೆ ನೀಡಿದ್ದಾರೆ. 257 ಮನೆಗಳ ಪೈಕಿ ಕರ್ನಾಟಕ ನಿವಾಸಿಗಳಿಗೆ, ಸೂಕ್ತ ದಾಖಲೆಗಳನ್ನು ಹೊಂದಿರುವ ಸ್ಥಳೀಯರಿಗೆ ಮಾತ್ರ ಮನೆ ನೀಡಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬಾಂಗ್ಲಾದೇಶಿಯರಿಗೆ ಮನೆ ನೀಡುವ ಪ್ರಶ್ನೆಯೇ ಇಲ್ಲ ಎಂದಿರುವ ಜಮೀರ್, ವಿರೋಧ ಪಕ್ಷದ ಆರೋಪಗಳನ್ನು ತಳ್ಳಿಹಾಕಿದ್ದಾರೆ.

ಕೋಗಿಲು ನಿರಾಶ್ರಿತರ ಪ್ರಕರಣಕ್ಕೂ ಪಾಕಿಸ್ತಾನಕ್ಕೂ ಇದೆಯಾ ಲಿಂಕ್? ಎನ್​ಐಎ ತನಿಖೆಗೆ ಆಗ್ರಹಿಸಿದ ಅಶೋಕ್

ಕೋಗಿಲು ಲೇಔಟ್ ಮನೆಗಳ ತೆರವು ಕಾರ್ಯಾಚರಣೆಗೆ ಸಂಬಂಧಿಸಿದಂತೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು ಎನ್ಐಎ ತನಿಖೆಗೆ ಆಗ್ರಹಿಸಿದ್ದಾರೆ. ತೆರವುಗೊಂಡ ಪ್ರದೇಶಗಳಲ್ಲಿ ಪಾಕಿಸ್ತಾನದ ನಂಟಿನ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಅವರು, ರಾಜ್ಯ ಸರ್ಕಾರ ಕೇರಳದ ರಾಜಕೀಯಕ್ಕೆ ಬಲಿಯಾಗಿದೆ ಎಂದು ಟೀಕಿಸಿದ್ದಾರೆ. ಸಂತ್ರಸ್ತ ಕನ್ನಡಿಗರಿಗೆ ಪರಿಹಾರ ನೀಡದಿರುವ ಬಗ್ಗೆಯೂ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಸರ್ಕಾರ ಕೇರಳದ್ದಾ ಅಥವಾ ಕರ್ನಾಟಕದ್ದಾ? ಆರ್​ ಅಶೋಕ್​​ ವಾಗ್ದಾಳಿ

ಬೆಂಗಳೂರಿನ ಕೋಗಿಲು ಅಕ್ರಮ ವಲಸಿಗರ ಮನೆ ತೆರವು ವಿಚಾರವಾಗಿ ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಪಕ್ಷ ನಾಯಕ ಆರ್. ಅಶೋಕ್​​ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ಈ ವಿಚಾರವಾಗಿ ಕೋರ್ಟ್​ ಮೊರೆ ಹೋಗುವ ಸಂಬಂಧ ಚರ್ಚೆ ನಡೆಸಿದ್ದೇವೆ ಎಂದು ಹೇಳಿದ್ದಾರೆ.

ಅಪಾರ್ಟ್​ಮೆಂಟ್​​ ನಿವಾಸಿಗಳೊಂದಿಗೆ ಸಂವಾದ ವೇಳೆ ಡಿಕೆ ಶಿವಕುಮಾರ್​​ ಗರಂ! ಡಿಸಿಎಂ ಮಾತಿಗೆ ಅಸಮಾಧಾನ

ಬೆಂಗಳೂರಿನ ಅಪಾರ್ಟ್​ಮೆಂಟ್ ನಿವಾಸಿಗಳ ಜೊತೆ ನಡೆದ ಸಂವಾದದ ವೇಳೆ ಡಿಸಿಎಂ ಡಿಕೆ ಶಿವಕುಮಾರ್​, ವೇದಿಕೆ ಮೇಲೆಯೇ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬ್ಲಾಕ್ ಮೇಲ್ ತಂತ್ರಕ್ಕೆ ಹೆದರಲ್ಲ, ಹುಷಾರ್ ಅಂತ ಎಚ್ಚರಿಕೆ ನೀಡಿದ್ದಾರೆ. ಸದ್ಯ ಡಿಕೆ ಶಿವಕುಮಾರ್​​​ ಮಾತಿಗೆ ಉದ್ಯಮಿ ಸೇರಿದಂತೆ ವಿಪಕ್ಷ ನಾಯಕರು ಕಿಡಿಕಾರಿದ್ದಾರೆ.

ಬೆಳಗಾವಿ ಅಧಿವೇಶನದಲ್ಲಿ ಇಂದಿನಿಂದ ಅಸಲಿ ಕದನ: 20 ಸಾವಿರ ರೈತರೊಂದಿಗೆ ಸುವರ್ಣಸೌಧ ಮುತ್ತಿಗೆಗೆ ಬಿಜೆಪಿ ಸಜ್ಜು

Karnataka Winter Session; ಬೆಳಗಾವಿ ಅಧಿವೇಶನದಲ್ಲಿ ಬಿಜೆಪಿ ರೈತರ ಸಮಸ್ಯೆಗಳ ಮುಂದಿಟ್ಟುಕೊಂಡು ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಬೃಹತ್ ಪ್ರತಿಭಟನೆಗೆ ಮುಂದಾಗಿದೆ. ಉತ್ತರ ಕರ್ನಾಟಕದ ಅಭಿವೃದ್ಧಿ, ಬೆಳೆಹಾನಿ ಪರಿಹಾರಕ್ಕೆ ಆಗ್ರಹಿಸಿ 20 ಸಾವಿರ ರೈತರೊಂದಿಗೆ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಬಿಜೆಪಿ ಸಿದ್ಧತೆ ನಡೆಸಿದೆ. ದೊಡ್ಡ ಮಟ್ಟದ ಹೋರಾಟದ ನಿರೀಕ್ಷೆಯಿದೆ.

ಸುವರ್ಣಸೌಧದ ಮೊಗಸಾಲೆಯಲ್ಲಿ ಸಿದ್ದರಾಮಯ್ಯ ಮತ್ತು ಅಶೋಕ್​​ ನಡುವೆ ‘ನಾಟಿಕೋಳಿ’ ಮಾತು

ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯ ಮತ್ತು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ನಡುವೆ ಸೌಹಾರ್ದಯುತ ಮಾತುಕತೆ ನಡೆಯಿತು. ಅಶೋಕ್ ಅವರ ಸಣ್ಣಗಾಗಿದ್ದನ್ನು ಗಮನಿಸಿ ಸಿಎಂ ಪ್ರಶ್ನಿಸಿದ ವೇಳೆ, ಅಶೋಕ್​​ ಅವರು ನೀಡಿದ 'ನಾಟಿ ಕೋಳಿ' ಹೇಳಿಕೆ ಇಬ್ಬರ ಮುಖದಲ್ಲಿ ನಗು ಮೂಡಿಸಿತು. ರಾಜಕೀಯ ಭಿನ್ನಾಭಿಪ್ರಾಯಗಳ ಹೊರತಾಗಿಯೂ ನಾಯಕರ ನಡುವಿನ ಸೌಹಾರ್ದದ ದೃಶ್ಯ, ನೆರೆದಿದ್ದವರ ಗಮನ ಸೆಳೆಯಿತು.

ಸಿಎಂ ಸಿದ್ದರಾಮಯ್ಯ Vs ವಿಪಕ್ಷ ನಾಯಕ ಅಶೋಕ್​​: ಸಾಮಾಜಿಕ ಜಾಲತಾಣದಲ್ಲಿ ‘ಭ್ರಷ್ಟಾಚಾರ’ ವಾರ್​

ಕರ್ನಾಟಕದಲ್ಲಿ ಭ್ರಷ್ಟಾಚಾರ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಮತ್ತು ವಿಪಕ್ಷ ನಾಯಕ ಆರ್​. ಅಶೋಕ್ ನಡುವೆ ಮಾತಿನ ಸಮರ ತೀವ್ರಗೊಂಡಿದೆ. ಉಪ ಲೋಕಾಯುಕ್ತರ ಹೇಳಿಕೆ ಆಧರಿಸಿ ಪರಸ್ಪರ ಆರೋಪ-ಪ್ರತ್ಯಾರೋಪ ನಡೆದಿದೆ. ಸಾಮಾಜಿಕ ಜಾಲತಾಣದಲ್ಲಿ ಉಭಯ ನಾಯಕರು ಏಟು-ಎದಿರೇಟು ನೀಡಿದ್ದು, ಈ ಎಲ್ಲ ಬೆಳವಣಿಗೆಗಳ ನಡುವೆ ಉಪಲೋಕಾಯುಕ್ತರು ತಮ್ಮ ಹೇಳಿಕೆ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ.

ಕರ್ನಾಟಕದಲ್ಲಿ ಶೇ 63ರಷ್ಟು ಭ್ರಷ್ಟಾಚಾರ: ಬಿಜೆಪಿ ಕಡೆಗೇ ಬಾಣ ತಿರುಗಿಸಿದ ಸಿಎಂ ಸಿದ್ದರಾಮಯ್ಯ!

ಉಪಲೋಕಾಯುಕ್ತರ 63% ಭ್ರಷ್ಟಾಚಾರ ಹೇಳಿಕೆ ಆಧರಿಸಿ ಬಿಜೆಪಿ ಕಾಂಗ್ರೆಸ್‌ಗೆ ಸಿಬಿಐ ತನಿಖೆಯ ಸವಾಲು ಹಾಕಿತ್ತು. ಇದಕ್ಕೆ ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ, ಬಿ.ವೀರಪ್ಪ ಹೇಳಿಕೆ ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಆಡಳಿತದ ಅವಧಿಗೇ ಸೇರಿದ್ದು ಎಂದಿದ್ದಾರೆ. 40% ಕಮಿಷನ್, ಪಿಎಸ್‌ಐ ಹಗರಣ ಸೇರಿ ಹಲವು ಭ್ರಷ್ಟಾಚಾರ ಪ್ರಕರಣಗಳನ್ನು ಉಲ್ಲೇಖಿಸಿ, ತಮ್ಮ ಸರ್ಕಾರ ಪಾರದರ್ಶಕತೆಗಾಗಿ ಶ್ರಮಿಸುತ್ತಿದೆ ಎಂದಿದ್ದಾರೆ.

ಕರ್ನಾಟಕದಲ್ಲಿ ಭ್ರಷ್ಟಾಚಾರ: ನಿಮಗೆ ಧೈರ್ಯ ಇದ್ರೆ ಸಿಬಿಐ ತನಿಖೆ ಮಾಡಿಸಿ; ಆರ್​​ ಅಶೋಕ್ ಸವಾಲು

ಕರ್ನಾಟಕದಲ್ಲಿ ಶೇ. 63ರಷ್ಟು ಭ್ರಷ್ಟಾಚಾರವಿದೆ ಎಂಬ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರ ಹೇಳಿಕೆಯನ್ನೇ ಬಿಜೆಪಿ ಅಸ್ತ್ರಮಾಡಿಕೊಂಡಿದ್ದು, ಸರ್ಕಾರದ ಮೇಲೆ ಮುಗಿಬಿದ್ದಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಅಶೋಕ್, ಪೇ ಸಿಎಂ ಅಂತಾ ರೋಡ್​ನಲ್ಲಿ ಪೋಸ್ಟರ್ ಅಂಟಿಸಿದ್ರಲ್ಲಾ, ಅದನ್ನ ಈಗ ನಿಮ್ಮ ಮುಖದ ಮೇಲೆ ಅಂಟಿಸಬೇಕು ಎಂದು ವಾಗ್ದಾಳಿ ಮಾಡಿದ್ದಾರೆ.

ಪರಪ್ಪನ ಅಗ್ರಹಾರದಲ್ಲಿ ರೌಡಿಗಳಿಗೆ, ಉಗ್ರರಿಗೆ ರಾಜಾತಿಥ್ಯ: ಗೃಹ ಇಲಾಖೆ ಸತ್ತು ಹೋಗಿದೆ; ಸರ್ಕಾರದ ವಿರುದ್ಧ ಅಶೋಕ್ ವಾಗ್ದಾಳಿ

ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್​​​ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ಮಾಡಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ, ಭಯೋತ್ಪಾದಕರಿಗೆ ಮೊಬೈಲ್ ಬಳಕೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೆ ರಸ್ತೆ ಗುಂಡಿ, ವೋಟ್ ಚೋರಿ ವಿಚಾರವಾಗಿಯೂ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

ಕಲ್ಯಾಣ ಕರ್ನಾಟಕದ 38 ಹಳ್ಳಿಗಳ ಮಹಿಳೆಯರಿಗಿಲ್ಲ ಶಕ್ತಿ ಯೋಜನೆ ಭಾಗ್ಯ: ಪ್ರಿಯಾಂಕ್ ಖರ್ಗೆಗೆ ಇದು ಕಾಣ್ಸಲ್ಲವೇ? ಅಶೋಕ್ ಪ್ರಶ್ನೆ

ಕಲ್ಯಾಣ ಕರ್ನಾಟಕದ 38 ಹಳ್ಳಿಗಳಲ್ಲಿ ಬಸ್, ರಸ್ತೆ ಇಲ್ಲದೆ ಶಕ್ತಿ ಯೋಜನೆ ನಿರುಪಯುಕ್ತವಾಗಿರುವ ಬಗ್ಗೆ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಜತೆಗೆ, ಬೆಂಗಳೂರು ಟೆಕ್ ಸಮ್ಮಿಟ್‌ಗೆ ಮುನ್ನ ಗುಂಡಿ ಬಿದ್ದ ರಸ್ತೆಗಳನ್ನು ಸರಿಪಡಿಸಲು ಒತ್ತಾಯಿಸಿದ್ದಾರೆ.

ಟನಲ್ ರಸ್ತೆಗಾಗಿ ಲಾಲ್​ಬಾಗ್​​ನ 6 ಎಕರೆ ಬಳಸಲು ಪರ್ಮಿಷನ್ ಕೊಟ್ರಾ? ಜಂಟಿ ನಿರ್ದೇಶಕರಿಗೆ ಅಶೋಕ್ ಪ್ರಶ್ನೆ!

ಬೆಂಗಳೂರಿನ ಲಾಲ್​ಬಾಗ್​ನಲ್ಲಿ ಪ್ರಸ್ತಾವಿತ ಸುರಂಗ ರಸ್ತೆ ನಿರ್ಮಾಣಕ್ಕೆ 6 ಎಕರೆ ಭೂಮಿ ಬಳಕೆ ಬಗ್ಗೆ ಶಾಸಕ ಆರ್. ಅಶೋಕ್ ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ. ಹಾರ್ಟಿಕಲ್ಚರ್ ಇಲಾಖೆಯ ಜಂಟಿ ನಿರ್ದೇಶಕರನ್ನು ಪ್ರಶ್ನಿಸಿದ ಅಶೋಕ್, ಲಾಲ್​ಬಾಗ್​​ನ ಐತಿಹಾಸಿಕ ಮಹತ್ವ, ಪುರಾತನ ಬಂಡೆ ಮತ್ತು ಕೆಂಪೇಗೌಡ ಗೋಪುರದಂತಹ ಸ್ಮಾರಕಗಳ ರಕ್ಷಣೆಯ ಮಹತ್ವವನ್ನು ಒತ್ತಿ ಹೇಳಿದರು. ಯೋಜನೆಗೆ ಇನ್ನೂ ಅನುಮತಿ ನೀಡಿಲ್ಲ ಎಂದು ನಿರ್ದೇಶಕರು ತಿಳಿಸಿದ್ದಾರೆ.

ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ
ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?