R Ashoka
ಬೆಂಗಳೂರಿನ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಆರ್. ಅಶೋಕ್ ಕರ್ನಾಟಕ ಬಿಜೆಪಿಯ ಹಿರಿಯ ನಾಯಕರು. ಆರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಅವರು ಪ್ರಸ್ತುತ ವಿರೋಧ ಪಕ್ಷದ ನಾಯಕರಾಗಿದ್ದಾರೆ. ಇವರು 1957ರ ಜುಲೈ 1 ರಂದು ಜನಿಸಿದರು. ಬೆಂಗಳೂರಿನಲ್ಲಿ ಹುಟ್ಟಿ ಬೆಳೆದ ಆರ್. ಅಶೋಕ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಕ್ರೀಯ ಕಾರ್ಯಕರ್ತರು. ನಂತರದ ದಿನಗಳಲ್ಲಿ ಬಿಜೆಪಿಯೊಂದಿಗೆ ಗುರುತಿಸಿಕೊಂಡು ರಾಜಕೀಯಕ್ಕೆ ಬಂದರು. ಹಂತ ಹಂತವಾಗಿ ಪಕ್ಷ ಹಾಗೂ ರಾಜಕೀಯದಲ್ಲಿ ಮುನ್ನೆಲೆಗೆ ಬಂದರು. ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ (1975 ರಿಂದ 77) ಅಶೋಕ್ ಜೈಲುವಾಸ ಅನುಭವಿಸಿದ್ದರು. ಬಿಜೆಪಿ ಹಿರಿಯ ನಾಯಕ, ಭಾರತ ರತ್ನ ಎಲ್.ಕೆ. ಅಡ್ವಾಣಿ ಮುಂತಾದವರೊಂದಿಗೆ ಜೈಲಿನಲ್ಲಿದ್ದರು. 1997 ರಲ್ಲಿ ಬೆಂಗಳೂರಿನ ಉತ್ತರಹಳ್ಳಿ ಕ್ಷೇತ್ರಕ್ಕೆ ನಡೆದ ವಿಧಾನಸಭಾ ಉಪ ಚುನಾವಣೆಯಲ್ಲಿ ಸ್ಪರ್ಧಿಸಿ ಪ್ರಥಮ ಬಾರಿಗೆ ಶಾಸಕರಾದರು. 2021ರಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಂಪುಟಕ್ಕೆ ಆರ್. ಅಶೋಕ ಸೇರ್ಪಡೆಯಾಗಿ ಕಂದಾಯ ಸಚಿವ ಖಾತೆ ನಿಭಾಯಿಸಿದರು. 1999 ಹಾಗೂ 2004 ರಲ್ಲಿ ಉತ್ತರಹಳ್ಳಿ ಕ್ಷೇತ್ರದಿಂದ ಮತ್ತೆ ಶಾಸಕರಾಗಿ ಆಯ್ಕೆಯಾದರು. 2008ರಲ್ಲಿ ಮತ್ತೊಮ್ಮೆ ಶಾಸಕರಾಗಿ ಆಯ್ಕೆಯಾದರು. ಬಿಎಸ್ ಯಡಿಯೂರಪ್ಪ ಅವರ ಸರ್ಕಾರದಲ್ಲಿ ಸಾರಿಗೆ ಖಾತೆಯ ಸಚಿವರಾದರು. 2012ರಲ್ಲಿ ಜಗದೀಶ ಶೆಟ್ಟರ್ ಮುಖ್ಯಮಂತ್ರಿಯಾದಾಗ ಉಪ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದರು. ಉಪ ಮುಖ್ಯಮಂತ್ರಿ ಜೊತೆಗೆ ಸಾರಿಗೆ ಹಾಗೂ ಗೃಹ ಇಲಾಖೆಗಳ ಜವಾಬ್ದಾರಿ ನಿಭಾಯಿಸಿದರು. 2018ರಲ್ಲಿ ಆರ್. ಅಶೋಕ್ ಪದ್ಮನಾಭನಗರದಿಂದ ಶಾಸಕರಾಗಿ ಮತ್ತೆ ಆಯ್ಕೆಯಾದರು. 2019ರಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಾಗ ಕಂದಾಯ, ಮುಜರಾಯಿ ಖಾತೆ ಹೊಣೆ ಹೊತ್ತಿದ್ದರು. ಪ್ರಸ್ತುತ ಆರ್. ಅಶೋಕ ವಿರೋಧ ಪಕ್ಷದ ನಾಯಕರಾಗಿದ್ದಾರೆ
ಇನ್ನೂ ಹೆಚ್ಚು ಓದಿಸೆಪ್ಟೆಂಬರ್ 21 ರಿಂದ 3 ದಿನ ವಿಧಾನಮಂಡಲದ ವಿಶೇಷ ಅಧಿವೇಶನ: ಬರ, ಕಸ್ತೂರಿ ರಂಗನ್ ವರದಿ ಕುರಿತಷ್ಟೇ ವಿಸ್ತೃತ ಚರ್ಚೆ ಎಂದ ಸರ್ಕಾರ
ರಾಜ್ಯದಲ್ಲಿ ಭೀಕರ ಬರಗಾಲ, ಜಾನುವಾರುಗಳ ಮೇವಿನ ಕೊರತೆ ಹಾಗೂ ಪಶ್ಚಿಮ ಘಟ್ಟಗಳ ಕಸ್ತೂರಿ ರಂಗನ್ ವರದಿ ಕುರಿತು ಚರ್ಚಿಸಲು ಸೆಪ್ಟೆಂಬರ್ 21ರಿಂದ 23ರವರೆಗೆ ಮೂರು ದಿನಗಳ ವಿಧಾನಮಂಡಲದ ವಿಶೇಷ ಅಧಿವೇಶನ ನಡೆಯಲಿದೆ. ಪ್ರಶ್ನೋತ್ತರ ಕಲಾಪವಿಲ್ಲದೆ ಅಧಿವೇಶನ ನಡೆಯಲಿದೆ ಎಂದು ಸರ್ಕಾರ ಹೇಳಿದ್ದು, ಕಸ್ತೂರಿ ರಂಗನ್ ವರದಿಗೆ ವಿರೋಧವಾಗಿ ಕೇಂದ್ರಕ್ಕೆ ಒಮ್ಮತದ ನಿರ್ಣಯ ಕಳುಹಿಸಲು ಯೋಜಿಸಿದೆ.
- Harish GR
- Updated on: Sep 15, 2026
- 6:45 am
ಗಣಪತಿ ಮೆರವಣಿಗೆಗೆ ಕಂಡೀಷನ್ ಹಾಕುವ ಸರ್ಕಾರ, ಈದ್ ಮಿಲಾದ್ಗೆ ಯಾಕೆ ಹಾಕಲ್ಲ?: ಆರ್. ಅಶೋಕ್
ಯಡಿಯೂರು ಕೆರೆಯಲ್ಲಿ ಗಣಪತಿ ವಿಸರ್ಜನೆ ವೇಳೆ ಮಾತನಾಡಿದ ಆರ್. ಅಶೋಕ್, ಗಣಪತಿ ಪ್ರತಿಷ್ಠಾಪನೆಗೆ ಕಠಿಣ ನಿಯಮಾವಳಿಗಳನ್ನು ವಿಧಿಸಿ, 70-80% ಗಣಪತಿ ವಿಸರ್ಜನೆ ಕಡಿಮೆಯಾಗಲು ಸರ್ಕಾರವೇ ಕಾರಣ ಎಂದು ಆರೋಪಿಸಿದರು. ಈದ್ ಮಿಲಾದ್ ಮತ್ತು ಉರುಸ್ಗಳಿಗೆ ಯಾವುದೇ ಮೈಕ್, ಡಿಜೆ ನಿರ್ಬಂಧಗಳಿಲ್ಲದಿರುವುದು ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ಧೋರಣೆಯನ್ನು ಎತ್ತಿ ತೋರಿಸುತ್ತದೆ ಎಂದರು.
- Arun Kumar R
- Updated on: Sep 14, 2026
- 7:34 pm
ಕಾವೇರಿ ಜಲವಿವಾದ: ತಕ್ಷಣ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಬಿಜೆಪಿ ಆಗ್ರಹ
ತಮಿಳುನಾಡಿಗೆ ದಿನಕ್ಕೆ 6,000 ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ಸಿಡಬ್ಲ್ಯೂಎಂಎ ನೀಡಿರುವ ಆದೇಶವನ್ನು ವಿರೋಧಿಸಿ, ತಕ್ಷಣವೇ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸುವಂತೆ ಬಿಜೆಪಿ ನಾಯಕರಾದ ಆರ್. ಅಶೋಕ್ ಹಾಗೂ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ತಾಂತ್ರಿಕ ತಜ್ಞರ ಜೊತೆಗೆ ಬದಲಾದ ಪರಿಸ್ಥಿತಿಯ ಬಗ್ಗೆ ಕುಲಂಕುಶವಾಗಿ ಚರ್ಚೆ ಮಾಡಿ ಅದಕ್ಕೆ ನ್ಯಾಯಾಂಗ ತಂಡಕ್ಕೆ ಹೊಸ ಶಕ್ತಿಯನ್ನು ತುಂಬಿ ಇದನ್ನು ಮಾಡದೆ ಇದ್ದರೆ ಬರುವಂತಹ ದಿನಗಳಲ್ಲಿ ಕಾವೇರಿ ಜಲಾನಯನ ಪ್ರದೇಶ ಬೆಂಗಳೂರು ನೀರಿನ ಆಹಾಕಾರದಲ್ಲಿ ಮುಳುಗುತ್ತದೆ ಎಂದು ಎಚ್ಚರಿಸಿದ್ದಾರೆ.
- Anil Kalkere
- Updated on: Sep 9, 2026
- 12:49 pm
ಎಹೆಚ್ಒ, ಎಡಿಹೆಚ್ ಪರೀಕ್ಷೆ ದಿನಾಂಕ ಮುಂದೂಡಿಕೆಗೆ ಆರ್. ಅಶೋಕ್ ಆಗ್ರಹ: ಕಾರಣ ಇಲ್ಲಿದೆ
ಸೆಪ್ಟೆಂಬರ್ 26 ಮತ್ತು 27, 2026ರಂದು ಸಹಾಯಕ ತೋಟಗಾರಿಕೆ ಅಧಿಕಾರಿ (AHO) ಮತ್ತು ಸಹಾಯಕ ತೋಟಗಾರಿಕೆ ನಿರ್ದೇಶಕ (ADH) ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. ಆದರೆ ಅಂದೇ SSC ಹಾಗೂ SBI Clerk ಪರೀಕ್ಷೆಗಳೂ ನಡೆಯುತ್ತಿರುವುದರಿಂದ ಉದ್ಯೋಗಾಕಾಂಕ್ಷಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ ಹಾಗೂ KEA ಆಡಳಿತ ಮಂಡಳಿ ಸೂಕ್ತವಾದ ಹೊಸ ದಿನಾಂಕಕ್ಕೆ ಪರೀಕ್ಷೆ ಮರುನಿಗದಿಪಡಿಸಬೇಕು ಎಂದು ವಿಪಕ್ಷ ನಾಯಕ ಆರ್. ಅಶೋಕ್ ಆಗ್ರಹಿಸಿದ್ದಾರೆ.
- Prasanna Hegde
- Updated on: Sep 8, 2026
- 6:06 pm
108 ಆ್ಯಂಬುಲೆನ್ಸ್ ವಾಹನ ಸಿಬ್ಬಂದಿಯಿಂದ ರಾಜೀನಾಮೆ ಎಚ್ಚರಿಕೆ: ಸೇವೆಯಲ್ಲಿ ವ್ಯತ್ಯಯವಾದರೆ ಸರ್ಕಾರವೇ ಹೊಣೆ ಎಂದ ಅಶೋಕ್
108 ಆ್ಯಂಬುಲೆನ್ಸ್ ಸಿಬ್ಬಂದಿ ಸೆಪ್ಟೆಂಬರ್ 20ರಿಂದ ಸಾಮೂಹಿಕ ರಾಜೀನಾಮೆ ನೀಡುವ ಎಚ್ಚರಿಕೆ ಹಿನ್ನೆಲೆಯಲ್ಲಿ, ತುರ್ತು ಸೇವೆಯಲ್ಲಿ ವ್ಯತ್ಯಯವಾದರೆ ಸರ್ಕಾರವೇ ನೇರ ಹೊಣೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಪುಟಗಟ್ಟಲೆ ಜಾಹೀರಾತು ಕೊಡೋದಕ್ಕೆ ಹಣವಿದೆ, ಸಾಧನಾ ಸಮಾವೇಶಗಳಿಗೆ ಹಣವಿದೆ. ಆದರೆ ಜನರ ಜೀವ ಉಳಿಸುವ 108 ಸಿಬ್ಬಂದಿಗೆ ನ್ಯಾಯ ಕೊಡಲು ಹಣವಿಲ್ಲವೇ? ಎಂದವರು ಪ್ರಶ್ನಿಸಿದ್ದಾರೆ.
- Anil Kalkere
- Updated on: Sep 8, 2026
- 1:00 pm
ದಿನಕ್ಕೊಂದು ವಿಚಾರಗಳಿಂದ ಗಮನ ಸೆಳೆಯುತ್ತಿರುವ ಬಳ್ಳಾರಿ ಚಲೋ: 8ನೇ ದಿನಕ್ಕೆ ಪ್ರವೇಶಿಸಿದ ಬಿಜೆಪಿಯ ಪಾದಯಾತ್ರೆ
ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದ ಬಳ್ಳಾರಿ ಚಲೋ ಪಾದಯಾತ್ರೆ ಎಂಟನೇ ದಿನಕ್ಕೆ ಕಾಲಿಟ್ಟಿದೆ. ದರೋಜಿಯಲ್ಲಿ ಸೋಮವಾರ ಕೊನೆಗೊಂಡಿದ್ದ ಯಾತ್ರೆ ಇಂದು ಕುಡಿತಿನಿವರೆಗೆ ಸಾಗಲಿದೆ. ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ವಾಗ್ದಾಳಿ ನಡೆಸಿದ್ದಾರೆ. ಸೆಪ್ಟೆಂಬರ್ 10ರಂದು ಬಳ್ಳಾರಿಯಲ್ಲಿ ಸಮಾರೋಪ ನಡೆಯಲಿದೆ.
- Kiran Haniyadka
- Updated on: Sep 8, 2026
- 7:08 am
ಸರ್ಕಾರಿ ಶಾಲಾ ಮಕ್ಕಳಿಗೆ ಕಳಪೆ ಗುಣಮಟ್ಟದ ಶೂ ವಿತರಣೆ: ರಾಜ್ಯ ಸರ್ಕಾರದ ವಿರುದ್ಧ ಶೇ.40 ಕಮಿಷನ್ ಆರೋಪ ಮಾಡಿದ ಅಶೋಕ್
ಸರ್ಕಾರಿ ಶಾಲಾ ಮಕ್ಕಳಿಗೆ ಕಳಪೆ ಗುಣಮಟ್ಟದ ಶೂ-ಸಾಕ್ಸ್ ವಿತರಿಸಿರುವುದರ ವಿರುದ್ಧ ವಿಪಕ್ಷ ನಾಯಕ ಆರ್. ಅಶೋಕ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಈ ಯೋಜನೆಯಲ್ಲೂ ಶೇ.40 ಕಮಿಷನ್ ಹೊಡೆಯಲಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಕಾವೇರಿ 6ನೇ ಹಂತದ ಹೆಸರಿನಲ್ಲಿ 7,000 ಕೋಟಿ ಹೊಸ ಲೂಟಿಗೆ ರಾಜ್ಯ ಸರ್ಕಾರ ಸಿದ್ಧತೆ ನಡೆಸಿದ್ದು, ಸೋರಿಕೆ ಮತ್ತು ಅಕ್ರಮ ಸಂಪರ್ಕ ತಡೆಯುವಲ್ಲಿ ಸರ್ಕಾರ ವಿಫಲವಾಗಿದೆ ಎಂದವರು ವಾಗ್ದಾಳಿ ನಡೆಸಿದ್ದಾರೆ.
- Anil Kalkere
- Updated on: Sep 7, 2026
- 1:31 pm
ಮೊಬೈಲ್ ಟಾರ್ಚ್ ಬೆಳಕಲ್ಲಿ ಬಸ್ ಚಾಲನೆ ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಅಶೋಕ್ ವಾಗ್ದಾಳಿ
ಧಾರವಾಡದ ಕುಂದಗೋಳದಲ್ಲಿ ಬಸ್ ಹೆಡ್ಲೈಟ್ ಕೈಕೊಟ್ಟಿದ್ದರಿಂದ ಮೊಬೈಲ್ ಟಾರ್ಚ್ ಬೆಳಕಿನಲ್ಲಿ 15 ಕಿ.ಮೀ ಬಸ್ ಚಲಾಯಿಸಿದ ಘಟನೆ ಖಂಡಿಸಿ, ಪ್ರಯಾಣಿಕರ ಜೀವದ ಜೊತೆ ಸರ್ಕಾರ ಚೆಲ್ಲಾಟವಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.ನಿನ್ನೆ ರಾತ್ರಿ 8 ಗಂಟೆಗೆ ಹುಬ್ಬಳ್ಳಿಯಿಂದ ಅತ್ತಿಗೇರಿಗೆ ಹೊರಟಿದ್ದ ಬಸ್ನ ಹೆಡ್ಲೈಟ್ ತಾಂತ್ರಿಕ ದೋಷದಿಂದ ಕುಂದಗೋಳ ತಾಲೂಕಿನ ಸಂಶಿ ಬಳಿ ಬಂದ್ ಆಗಿತ್ತು. ಪ್ರಯಾಣಿಕರನ್ನು ಅರ್ಧಕ್ಕೆ ಇಳಿಸಲು ಸಾಧ್ಯವಾಗದ ಕಾರಣ, ಪ್ರಯಾಣಿಕರ ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಚಾಲಕ ಅತ್ತಿಗೇರಿವರೆಗೆ ಬಸ್ ಚಲಾಯಿಸಿದ್ದರು.
- Anil Kalkere
- Updated on: Sep 6, 2026
- 11:47 am
ಕಾಂಗ್ರೆಸ್ ಸರ್ಕಾರದ ವಿರುದ್ಧ ಸಮರ: 3ನೇ ದಿನಕ್ಕೆ ಕಾಲಿಟ್ಟ ಬಿಜೆಪಿ ‘ಬಳ್ಳಾರಿ ಚಲೋ’ ಪಾದಯಾತ್ರೆ, ಇಂದು ಸಿಂಧನೂರಿನತ್ತ ಪಯಣ
BJP Padayatra: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದ ಬಿಜೆಪಿ ‘ಬಳ್ಳಾರಿ ಚಲೋ’ ಪಾದಯಾತ್ರೆ ಮೂರನೇ ದಿನಕ್ಕೆ ಕಾಲಿಟ್ಟಿದೆ. ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ನಾಯಕರು, ದಲಿತ ಮುಖಂಡರೊಂದಿಗೆ ಸಂವಾದ ನಡೆಸಿದ್ದಾರೆ. ಬಿಜೆಪಿ ಪಾದಯಾತ್ರೆಗೆ ಕಾಂಗ್ರೆಸ್ ಕೂಡ ಕೌಂಟರ್ ಪ್ಲ್ಯಾನ್ ರೂಪಿಸುತ್ತಿದೆ.
- Kiran Haniyadka
- Updated on: Sep 3, 2026
- 8:39 am
‘ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ಲೂಟಿ ವ್ಯವಹಾರ ಬಯಲು’: ಕಮಿಷನ್ ಸರ್ಕಾರಕ್ಕೆ ಲಂಚದ ಬಗ್ಗೆ ಮಾತನಾಡೋ ನೈತಿಕತೆ ಇಲ್ಲವೆಂದ ಅಶೋಕ್
ಮಂಗಳೂರು KRIDL ವಿಭಾಗದಲ್ಲಿ ಸಚಿವರ ಹೆಸರಿನಲ್ಲಿ ಶೇ 7ರಷ್ಟು ಕಮಿಷನ್ ವಸೂಲಿ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಶಾಸಕ ಅಶೋಕ್ ರೈ ಆರೋಪಿಸಿ ಮುಖ್ಯಮಂತ್ರಿಗೆ ಪತ್ರ ಬರೆದ ವಿಚಾರವನ್ನೇ ಇಟ್ಟುಕೊಂಡು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೆ, ಆರೋಪದ ಕುರಿತ ತನಿಖೆಗೆ ಆಗ್ರಹಿಸಿದ್ದಾರೆ.
- Anil Kalkere
- Updated on: Aug 31, 2026
- 1:39 pm
ನಾಗೇಂದ್ರ ರಾಜೀನಾಮೆ ಕೊಟ್ಟರೂ ಬಿಜೆಪಿ ಪಾದಯಾತ್ರೆ ನಿಲ್ಲಿಸಲ್ಲ: ಆರ್ ಅಶೋಕ್
ವಾಲ್ಮೀಕಿ ನಿಗಮ ಹಗರಣದ ಹಿನ್ನೆಲೆಯಲ್ಲಿ ಬಿ. ನಾಗೇಂದ್ರ ರಾಜೀನಾಮೆಯನ್ನು ವಿಪಕ್ಷದ ಹೋರಾಟದ ಫಲ ಎಂದು ಆರ್. ಅಶೋಕ್ ಬಣ್ಣಿಸಿದ್ದಾರೆ. ದಲಿತರ ಹಣ ದುರುಪಯೋಗಪಡಿಸಿಕೊಂಡರೆ ಉಳಿಗಾಲವಿಲ್ಲ ಎಂದು ಕಾಂಗ್ರೆಸ್ಗೆ ಎಚ್ಚರಿಕೆ ನೀಡಿದ ಅವರು, ಬರಗಾಲ, ನೈಸ್, ಬಿಡದಿ, ಕೆಪಿಎಸ್ಸಿ ಹಗರಣದಂತಹ ಹಲವು ವಿಚಾರಗಳಿಗಾಗಿ ಪಾದಯಾತ್ರೆ ಮುಂದುವರಿಯಲಿದೆ ಎಂದು ಘೋಷಿಸಿದರು.
- Ganapathi Sharma
- Updated on: Aug 29, 2026
- 12:35 pm
ಭ್ರಷ್ಟ ಕಾಂಗ್ರೆಸ್ ಸರ್ಕಾರ ಜನಾಕ್ರೋಶದ ಮುಂದೆ ಮಂಡಿಯೂರಿ ಶರಣಾಗಿದೆ: ಸಚಿವ ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ಅಶೋಕ್ ಪೋಸ್ಟ್
ಸಚಿವ ಬಿ. ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ಭ್ರಷ್ಟ ಕಾಂಗ್ರೆಸ್ ಸರ್ಕಾರ ಜನಾಕ್ರೋಶಕ್ಕೆ ಮಂಡಿಯೂರಿ ಶರಣಾಗಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಲೇವಡಿ ಮಾಡಿದ್ದು, ಇದನ್ನು ದಲಿತರ ಜಯ ಎಂದು ಬಣ್ಣಿಸಿದ್ದಾರೆ. ಮಾತುಮಾತಿಗೂ ಬಾಬಾಸಾಹೇಬ್ ಅಂಬೇಡ್ಕರ್ರ ಹೆಸರು ಹೇಳಿಕೊಂಡು ದಲಿತರನ್ನು ತುಳಿದ ಕಾಂಗ್ರೆಸ್ಗೆ ದಲಿತರ ಆಕ್ರೋಶದ ಬಿಸಿ ತಟ್ಟಿದೆ ಎಂದವರು ತಿಳಿಸಿದ್ದಾರೆ.
- Kiran Haniyadka
- Updated on: Aug 28, 2026
- 7:50 pm