Ram Gopal Varma RGV
ರಾಮ್ ಗೋಪಾಲ್ ವರ್ಮಾ ಜನಿಸಿದ್ದು 1962ರ ಏಪ್ರಿಲ್ 7ರಂದು. ಭಾರತೀಯ ಚಲನಚಿತ್ರೋದ್ಯಮದಲ್ಲಿ ಅವರು ವಿಶಿಷ್ಟ ಮತ್ತು ವಿವಾದಾತ್ಮಕ ಶೈಲಿಯ ಸಿನಿಮಾಗಳಿಂದ ಹೆಸರುವಾಸಿ ಆಗಿದ್ದಾರೆ. 1989ರಲ್ಲಿ ವಿಮರ್ಶಾತ್ಮಕವಾಗಿ ಮೆಚ್ಚುಗೆ ಪಡೆದ ‘ಶಿವ’ ಸಿನಿಮಾದೊಂದಿಗೆ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದ ಅವರು, ತಮ್ಮ ಸಿನಿಮಾಗಳಲ್ಲಿ ವಿಶೇಷವಾಗಿ ಕಥೆ ಹೇಳುವಿಕೆ ಮತ್ತು ಹೊಸ ಬಗೆಯ ಛಾಯಾಗ್ರಹಣದ ಮೂಲಕ ಪ್ರಾಮುಖ್ಯತೆಯನ್ನು ಪಡೆದರು. ವರ್ಮಾ ಅವರು ಕ್ರೈಮ್, ಡ್ರಾಮಾ ಸೇರಿದಂತೆ ವಿವಿಧ ಬಗೆಯ ಸಿನಿಮಾಗಳನ್ನು ನಿರ್ದೇಶಿಸಿದ್ದಾರೆ. ಅವರ ಕೆಲವು ಗಮನಾರ್ಹ ಸಿನಿಮಾಗಳಲ್ಲಿ ‘ಸತ್ಯ’, ‘ರಂಗೀಲಾ’, ‘ಕಂಪನಿ’ ಮುಂತಾದವು ಸೇರಿವೆ. ಅಷ್ಟೆಲ್ಲ ಜನಪ್ರಿಯತೆ ಪಡೆದರೂ ಕೂಡ ಅವರ ನಂತರದ ಚಿತ್ರಗಳು ಮಿಶ್ರ ವಿಮರ್ಶೆಗಳನ್ನು ಸ್ವೀಕರಿಸಿದವು. ಅವರ ವೃತ್ತಿಜೀವನದಲ್ಲಿ ವಿವಾದಗಳು ಮತ್ತು ಏರಿಳಿತಗಳ ಹೊರತಾಗಿಯೂ, ರಾಮ್ ಗೋಪಾಲ್ ವರ್ಮಾ ಭಾರತೀಯ ಚಿತ್ರರಂಗದಲ್ಲಿ ಗಮನಾರ್ಹ ಮತ್ತು ಪ್ರಭಾವಶಾಲಿ ವ್ಯಕ್ತಿಯಾಗಿ ಉಳಿದಿದ್ದಾರೆ.
ಎನ್ಕೌಂಟರ್ ಸ್ಪೆಷಲಿಸ್ಟ್ ದಯಾ ನಾಯಕ್ ಬಯೋಪಿಕ್ ಮಾಡಲಿರುವ ರಾಮ್ ಗೋಪಾಲ್ ವರ್ಮಾ?
ಈ ಹಿಂದೆ ಮುಂಬೈ ಮಾಫಿಯಾ ಕಥೆಗಳನ್ನಿಟ್ಟುಕೊಂಡು ‘ಸತ್ಯ’, ‘ಕಂಪನಿ’ ರೀತಿಯ ಕಲ್ಟ್ ಸಿನಿಮಾಗಳನ್ನು ಕೊಟ್ಟಿದ್ದ ನಿರ್ದೇಶಕ ರಾಮ್ ಗೋಪಾಲ್ ವರ್ಮಾ, ಈಗ ದಯಾ ನಾಯಕ್ ಬಯೋಪಿಕ್ ಮೂಲಕ ಹಳೇ ಫಾರ್ಮ್ಗೆ ಮರಳುವ ಸೂಚನೆ ನೀಡಿದ್ದಾರೆ. ಈ ಸಿನಿಮಾಗೆ ದೊಡ್ಡ ನಿರ್ಮಾಣ ಸಂಸ್ಥೆಯೊಂದು ಬಂಡವಾಳ ಹೂಡಲಿದೆ.
- Madan Kumar
- Updated on: Jun 18, 2026
- 7:11 pm
ರಣವೀರ್ ಸಿಂಗ್ ಬ್ಯಾನ್ ಮಾಡಿದ್ದಕ್ಕೆ ಗರಂ ಆದ ನಿರ್ದೇಶಕ ರಾಮ್ ಗೋಪಾಲ್ ವರ್ಮಾ
ಖ್ಯಾತ ನಟ ರಣವೀರ್ ಸಿಂಗ್ ಅವರನ್ನು ಬ್ಯಾನ್ ಮಾಡಿದ್ದರ ವಿರುದ್ಧ ಅನೇಕರು ಧ್ವನಿ ಎತ್ತಿದ್ದಾರೆ. ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಕೂಡ ಈ ಬಗ್ಗೆ ತಮ್ಮ ನಿಲುವು ತಿಳಿಸಿದ್ದಾರೆ. ಬ್ಯಾನ್ ಮಾಡಿದರೂ ಕೂಡ ರಣವೀರ್ ಸಿಂಗ್ಗೆ ಇರುವ ಬೇಡಿಕೆ ಕಡಿಮೆ ಆಗಲ್ಲ ಎಂದು ಆರ್ಜಿವಿ ಹೇಳಿದ್ದಾರೆ.
- Madan Kumar
- Updated on: May 31, 2026
- 10:30 am
‘ಅಂದು ಕರುಣಾನಿಧಿ ಹಿಂದೆ ನಿಂತಿದ್ದ ಹುಡುಗ ಇಂದು ಅವರ ಪಕ್ಷವನ್ನೇ ಮುಗಿಸಿದ’: ಆರ್ಜಿವಿ
ದಳಪತಿ ವಿಜಯ್ ಅವರನ್ನು ತಮ್ಮ ‘ಜನ ನಾಯಕ’ ಎಂದು ಅಭಿಮಾನಿಗಳು ಕರೆಯುತ್ತಿದ್ದಾರೆ. ಅವರು ತಮಿಳುನಾಡಿನ ಮುಂದಿನ ಮುಖ್ಯಮಂತ್ರಿ ಆಗುವುದು ಖಚಿತವಾಗಿದೆ. ಡಿಎಂಕೆ ಪಕ್ಷದ ಎದುರು ವಿಜಯ್ ಅವರ ಟಿವಿಕೆ ಪಕ್ಷ ಸಾಧಿಸಿದ ಅಭೂತಪೂರ್ವ ಗೆಲುವಿನ ಬಗ್ಗೆ ರಾಮ್ ಗೋಪಾಲ್ ವರ್ಮಾ ಅವರು ಟ್ವೀಟ್ ಮಾಡಿದ್ದಾರೆ.
- Madan Kumar
- Updated on: May 5, 2026
- 3:08 pm
‘ಧುರಂಧರ್ 2’ ಸಿನಿಮಾದಲ್ಲಿ ಅದು ಸರಿಯಿಲ್ಲ: ಮೊದಲ ಬಾರಿ ಟೀಕಿಸಿದ ರಾಮ್ ಗೋಪಾಲ್ ವರ್ಮಾ
ಇಷ್ಟು ದಿನ ‘ಧುರಂಧರ್ 2’ ಚಿತ್ರವನ್ನು ಹೊಗಳುತ್ತಿದ್ದ ರಾಮ್ ಗೋಪಾಲ್ ವರ್ಮಾ ಈಗ ತಕರಾರು ತೆಗೆದಿದ್ದಾರೆ. ಈ ಸಿನಿಮಾದಲ್ಲಿ ದಾವುದ್ ಇಬ್ರಾಹಿಂ ಪಾತ್ರವನ್ನು ಸರಿಯಾಗಿ ತೋರಿಸಿಲ್ಲ ಎಂದು ಅವರು ಆರೋಪಿಸಿದ್ದಾರೆ. ತಾವು ತೋರಿಸಿದ್ದೇ ಸರಿ ಎಂದು ನಿರ್ದೇಶಕ ಆದಿತ್ಯ ಧರ್ ಸಾಬೀತು ಮಾಡಲು ಸಾಧ್ಯವಿಲ್ಲ ಎಂದು ಆರ್ಜಿವಿ ಹೇಳಿದ್ದಾರೆ.
- Madan Kumar
- Updated on: Apr 17, 2026
- 5:55 pm
ನನ್ನ ಯಶಸ್ಸಿಗೆ ದಾವುದ್ ಇಬ್ರಾಹಿಂ ಕಾರಣ: ರಾಮ್ ಗೋಪಾಲ್ ವರ್ಮಾ ವಿವಾದಾತ್ಮಕ ಹೇಳಿಕೆ
ಭೂಗತ ಪಾತಕಿ ದಾವುದ್ ಇಬ್ರಾಹಿಂ ಬಗ್ಗೆ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ಅಚ್ಚರಿಯ ಕೇಳಿಕೆ ನೀಡಿದ್ದಾರೆ. ತಾವು ಬದುಕು ಕಟ್ಟಿಕೊಳ್ಳಲು ದಾವುದ್ ಇಬ್ರಾಹಿಂ ಕಾರಣ ಎಂದು ಅವರು ಹೇಳಿದ್ದಾರೆ. ಆರ್ಜಿವಿ ನೀಡಿದ ಈ ವಿವಾದಾತ್ಮಕ ಹೇಳಿಕೆಯು ಚರ್ಚೆಗೆ ಕಾರಣ ಆಗಿದೆ.
- Madan Kumar
- Updated on: Apr 12, 2026
- 9:53 am
Dhurandhar 2: ರಣವೀರ್ ಸಿಂಗ್ ಮುಂದೆ ಬೇರೆ ಹೀರೋಗಳೆಲ್ಲ ಜೋಕರ್ಗಳು; ಆರ್ಜಿವಿ ಟೀಕೆ
ರಣವೀರ್ ಸಿಂಗ್ ನಟನೆಯ ‘ಧುರಂಧರ್ 2’ ಸಿನಿಮಾ ಬಿಡುಗಡೆಯಾಗಿ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಈ ಸಿನಿಮಾ ನೋಡಿದ ರಾಮ್ ಗೋಪಾಲ್ ವರ್ಮಾ ಅವರು ಪುಟ್ಟಗಟ್ಟಲೆ ವಿಮರ್ಶೆ ಹಂಚಿಕೊಂಡಿದ್ದಾರೆ. ಆರ್ಜಿವಿ ಅವರಿಗೆ ಈ ಸಿನಿಮಾ ಬಹಳ ಇಷ್ಟ ಆಗಿದೆ. ಚಿತ್ರದ ಬಗ್ಗೆ ಅವರು ಮಾಡಿರುವ ಪೋಸ್ಟ್ ಇಲ್ಲಿದೆ..
- Madan Kumar
- Updated on: Mar 20, 2026
- 6:00 pm
‘ಧುರಂಧರ್ 2’ ಮೊದಲ ವಿಮರ್ಶೆ: ಹಾಲಿವುಡ್ ನಿರ್ದೇಶಕರು ನೋಡಬೇಕು ಎಂದ ಆರ್ಜಿವಿ
‘ಧುರಂಧರ್ 2’ ಸಿನಿಮಾ ಹೇಗಿದೆ ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಮೊದಲ ವಿಮರ್ಶೆ ಹೊರಬಿದ್ದಿದೆ. ರಾಮ್ ಗೋಪಾಲ್ ವರ್ಮಾ ಅವರು ವಿಶೇಷ ಪ್ರದರ್ಶನದಲ್ಲಿ ಸಿನಿಮಾ ವೀಕ್ಷಿಸಿ ವಿಮರ್ಶೆ ತಿಳಿಸಿದ್ದಾರೆ. ಅವರಿಗೆ ಈ ಸಿನಿಮಾ ತುಂಬಾ ಇಷ್ಟ ಆಗಿದೆ. ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಹೊಗಳಿದ್ದಾರೆ.
- Madan Kumar
- Updated on: Mar 18, 2026
- 1:41 pm
‘ಸತ್ಯ’, ‘ಕಂಪನಿ’ ಸಿನಿಮಾ ಸೇರಿಸಿ ‘ಧುರಂಧರ್’ ಮಾಡಿದ ಆದಿತ್ಯ ಧಾರ್: ವಿಷಯ ಬಯಲು
‘ಧುರಂಧರ್’ ಸಿನಿಮಾದ ಕಥೆ ಹೇಗೆ ಸಿದ್ಧವಾಯ್ತು ಎಂಬ ಬಗ್ಗೆ ರಾಮ್ ಗೋಪಾಲ್ ವರ್ಮಾ ಬಾಯಿಬಿಟ್ಟಿದ್ದಾರೆ. ನಿರ್ದೇಶಕ ಆದಿತ್ಯ ಧಾರ್ ತಮಗೆ ಹೇಳಿದ ವಿಷಯವನ್ನು ಈಗ ಆರ್ಜಿವಿ ಬಹಿರಂಗ ಪಡಿಸಿದ್ದಾರೆ. ಆರ್ಜಿವಿ ನಿರ್ದೇಶಿಸಿದ್ದ 2 ಸಿನಿಮಾಗಳನ್ನು ಸೇರಿಸಿ ‘ಧುರಂಧರ್’ ಮಾಡಲಾಯ್ತು ಎಂಬುದು ಗೊತ್ತಾಗಿದೆ.
- Madan Kumar
- Updated on: Mar 15, 2026
- 11:04 am
ಮುಖ ಮೂತಿ ನೋಡದೇ ಹೊಡೆದಾಡಿಕೊಂಡ ಮಹೇಶ್ ಬಾಬು, ರಾಜಮೌಳಿ? ಸಿನಿಮಾ ಸತ್ತುಹೋಯ್ತು ಎಂದ ಆರ್ಜಿವಿ
ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ಈ ವಿಡಿಯೋಗೆ ಜನರಿಂದ ಬಗೆಬಗೆಯ ಕಮೆಂಟ್ ಬಂದಿದೆ. ಟಾಲಿವುಡ್ನ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ‘ಸಿನಿಮಾ ಸತ್ತುಹೋಯ್ತು’ ಎಂಬ ಕ್ಯಾಪ್ಷನ್ ಜೊತೆ ಈ ವಿಡಿಯೋವನ್ನು ಅವರು ಶೇರ್ ಮಾಡಿದ್ದಾರೆ.
- Madan Kumar
- Updated on: Feb 24, 2026
- 5:33 pm
‘ಟಾಕ್ಸಿಕ್’ ಚಿತ್ರದ ವಿರುದ್ಧ ಮತ್ತೆ ನಾಲಿಗೆ ಹರಿಬಿಟ್ಟ ಆರ್ಜಿವಿ; ಚಳಿಬಿಡಿಸಿದ ಕನ್ನಡಿಗರು
ರಾಮ್ ಗೋಪಾಲ್ ವರ್ಮಾ 'ಟಾಕ್ಸಿಕ್' ಚಿತ್ರದ ಬಗ್ಗೆ ನೆಗೆಟಿವ್ ಹೇಳಿಕೆ ನೀಡಿ 'ಧುರಂಧರ್ 2' ಅನ್ನು ಹೊಗಳಿ ವಿವಾದ ಸೃಷ್ಟಿಸಿದ್ದಾರೆ. ಈ ಹೇಳಿಕೆಗಳ ನಂತರ ಆರ್ಜಿವಿ ಸ್ಪಷ್ಟನೆ ನೀಡಿದರೂ, ಅವರ ದ್ವಂದ್ವ ನಿಲುವು ಮತ್ತು 'ಟಾಕ್ಸಿಕ್' ವಿರೋಧಿ ವರ್ತನೆ ಕನ್ನಡಿಗರಿಂದ ತೀವ್ರ ಟೀಕೆಗೆ ಗುರಿಯಾಗಿದೆ.
- Rajesh Duggumane
- Updated on: Feb 23, 2026
- 7:03 am
ಟಾಕ್ಸಿಕ್: ದಕ್ಷಿಣದ ಹೀರೋಗಳ ಆರಾಧನೆ ಅಂತ್ಯ ಆಗಬಹುದು; ಆರ್ಜಿವಿ ಭವಿಷ್ಯ
ಈ ವರ್ಷ ಮಾರ್ಚ್ 19ರಂದು ‘ಧುರಂಧರ್ 2’ ಹಾಗೂ ‘ಟಾಕ್ಸಿಕ್’ ಸಿನಿಮಾಗಳು ತೆರೆಕಾಣಲಿವೆ. ಈ ಸಿನಿಮಾಗಳ ಕ್ಲ್ಯಾಶ್ ಬಗ್ಗೆ ರಾಮ್ ಗೋಪಾಲ್ ವರ್ಮಾ ಅವರು ತಮ್ಮ ಅನಿಸಿಕೆ ತಿಳಿಸಿದ್ದಾರೆ. ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಹೇಗೆ ಇರಬಹುದು ಎಂಬುದನ್ನು ಆರ್ಜಿವಿ ಊಹಿಸಿದ್ದಾರೆ.
- Madan Kumar
- Updated on: Jan 13, 2026
- 7:20 pm
ಗೀತು ಮೋಹನ್ದಾಸ್ ‘ಟಾಕ್ಸಿಕ್’ ಚಿತ್ರಿಸಿದ್ದಾರೆ ಅಂತ ನಂಬೋಕೆ ಆಗಲ್ಲ: ಆರ್ಜಿವಿ ನೇರ ಮಾತು
ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ‘ಟಾಕ್ಸಿಕ್’ ಸಿನಿಮಾ ಟೀಸರ್ ನೋಡಿ ಅಚ್ಚರಿಪಟ್ಟಿದ್ದಾರೆ. ಈ ಚಿತ್ರದ ನಿರ್ದೇಶಕಿ ಗೀತು ಮೋಹನ್ದಾಸ್ ಬಗ್ಗೆ ತಮಗೆ ಇರುವ ಅಭಿಪ್ರಾಯವನ್ನು ಆರ್ಜಿವಿ ಹಂಚಿಕೊಂಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ‘ಟಾಕ್ಸಿಕ್’ ಸಿನಿಮಾದ ಟೀಸರ್ ಬಗ್ಗೆ ಸಾಕಷ್ಟು ಚರ್ಚೆ ಆಗುತ್ತಿದೆ.
- Madan Kumar
- Updated on: Jan 8, 2026
- 7:58 pm