AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ram Gopal Varma RGV

Ram Gopal Varma RGV

ರಾಮ್ ಗೋಪಾಲ್ ವರ್ಮಾ ಜನಿಸಿದ್ದು 1962ರ ಏಪ್ರಿಲ್ 7ರಂದು. ಭಾರತೀಯ ಚಲನಚಿತ್ರೋದ್ಯಮದಲ್ಲಿ ಅವರು ವಿಶಿಷ್ಟ ಮತ್ತು ವಿವಾದಾತ್ಮಕ ಶೈಲಿಯ ಸಿನಿಮಾಗಳಿಂದ ಹೆಸರುವಾಸಿ ಆಗಿದ್ದಾರೆ. 1989ರಲ್ಲಿ ವಿಮರ್ಶಾತ್ಮಕವಾಗಿ ಮೆಚ್ಚುಗೆ ಪಡೆದ ‘ಶಿವ’ ಸಿನಿಮಾದೊಂದಿಗೆ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದ ಅವರು, ತಮ್ಮ ಸಿನಿಮಾಗಳಲ್ಲಿ ವಿಶೇಷವಾಗಿ ಕಥೆ ಹೇಳುವಿಕೆ ಮತ್ತು ಹೊಸ ಬಗೆಯ ಛಾಯಾಗ್ರಹಣದ ಮೂಲಕ ಪ್ರಾಮುಖ್ಯತೆಯನ್ನು ಪಡೆದರು. ವರ್ಮಾ ಅವರು ಕ್ರೈಮ್, ಡ್ರಾಮಾ ಸೇರಿದಂತೆ ವಿವಿಧ ಬಗೆಯ ಸಿನಿಮಾಗಳನ್ನು ನಿರ್ದೇಶಿಸಿದ್ದಾರೆ. ಅವರ ಕೆಲವು ಗಮನಾರ್ಹ ಸಿನಿಮಾಗಳಲ್ಲಿ ‘ಸತ್ಯ’, ‘ರಂಗೀಲಾ’, ‘ಕಂಪನಿ’ ಮುಂತಾದವು ಸೇರಿವೆ. ಅಷ್ಟೆಲ್ಲ ಜನಪ್ರಿಯತೆ ಪಡೆದರೂ ಕೂಡ ಅವರ ನಂತರದ ಚಿತ್ರಗಳು ಮಿಶ್ರ ವಿಮರ್ಶೆಗಳನ್ನು ಸ್ವೀಕರಿಸಿದವು. ಅವರ ವೃತ್ತಿಜೀವನದಲ್ಲಿ ವಿವಾದಗಳು ಮತ್ತು ಏರಿಳಿತಗಳ ಹೊರತಾಗಿಯೂ, ರಾಮ್ ಗೋಪಾಲ್ ವರ್ಮಾ ಭಾರತೀಯ ಚಿತ್ರರಂಗದಲ್ಲಿ ಗಮನಾರ್ಹ ಮತ್ತು ಪ್ರಭಾವಶಾಲಿ ವ್ಯಕ್ತಿಯಾಗಿ ಉಳಿದಿದ್ದಾರೆ.

ಇನ್ನೂ ಹೆಚ್ಚು ಓದಿ

ರಾಜ್​ಕುಮಾರ್ ಬಗ್ಗೆ ಆರ್​ಜಿವಿ ಅಲ್ಪಜ್ಞಾನದ ಹೇಳಿಕೆ ಸುಳ್ಳು; ಅಣ್ಣಾವ್ರ ಚಿತ್ರವನ್ನು ರಿಮೇಕ್ ಮಾಡಿದ್ದ ಅಮಿತಾಭ್

ತೆಲುಗು ನಿರ್ದೇಶಕ RGV ಅವರ ಅಲ್ಪಜ್ಞಾನದ ಹೇಳಿಕೆ ಸುಳ್ಳೆಂದು ಸಾಬೀತಾಗಿದೆ. ಅವರು ದಕ್ಷಿಣ ಭಾರತದ ನಟರು ಅಮಿತಾಭ್ ಬಚ್ಚನ್ ಚಿತ್ರಗಳನ್ನು ರಿಮೇಕ್ ಮಾಡಿ ಸ್ಟಾರ್ ಆದರು ಎಂದು ಹೇಳಿದ್ದರು. ಆದರೆ, ವಾಸ್ತವದಲ್ಲಿ ರಾಜ್ಕುಮಾರ್ ಅವರ ಚಿತ್ರವನ್ನು ಬಚ್ಚನ್ ಅವರೇ ರಿಮೇಕ್ ಮಾಡಿದ್ದರು. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಭಾರೀ ಚರ್ಚೆ ನಡೆದಿವೆ.

ಕಮಲ್ ಹಾಸನ್ ಬಳಿಕ ಕನ್ನಡಿಗರನ್ನು ಕೆಣಕಿದ ನಿರ್ದೇಶಕ ರಾಮ್ ಗೋಪಾಲ್ ವರ್ಮಾ

ಕನ್ನಡ ಭಾಷೆ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಕಮಲ್ ಹಾಸನ್ ಅವರು ಕರುನಾಡ ಜನತೆಯ ಕೆಂಗಣ್ಣಿಗೆ ಗುರಿ ಆಗಿದ್ದಾರೆ. ಅವರ ಸಿನಿಮಾವನ್ನು ಬ್ಯಾನ್ ಮಾಡಬೇಕು ಎಂಬುದು ಹೊಸ ರೀತಿ ಗೂಂಡಾಗಿರಿ ಎಂದು ರಾಮ್ ಗೋಪಾಲ್ ವರ್ಮಾ ಹೇಳಿದ್ದಾರೆ. ಆ ಮೂಲಕ ಅವರು ಕೂಡ ಕನ್ನಡಿಗರನ್ನು ಕೆಣಕಿದ್ದಾರೆ.

ನಟಿ ಕಿಯಾರಾ ಬಿಕಿನಿ ಬಗ್ಗೆ ಕೆಟ್ಟದಾಗಿ ಪೋಸ್ಟ್ ಮಾಡಿದ ರಾಮ್ ಗೋಪಾಲ್ ವರ್ಮಾ

ಯಾವಾಗಲೂ ಫಿಲ್ಟರ್ ಇಲ್ಲದೇ ಮಾತನಾಡುವ ರಾಮ್ ಗೋಪಾಲ್ ವರ್ಮಾ ಅವರು ಈಗ ವಿವಾದ ಮಾಡಿಕೊಂಡಿದ್ದಾರೆ. ‘ವಾರ್ 2’ ಸಿನಿಮಾದ ಟೀಸರ್​ನಲ್ಲಿ ಕಿಯಾರಾ ಅಡ್ವಾಣಿ ಅವರ ಬಿಕಿನಿ ದೃಶ್ಯದ ಬಗ್ಗೆ ಆರ್​ಜಿವಿ ಅಸಭ್ಯವಾಗಿ ಕಮೆಂಟ್ ಮಾಡಿದ್ದಾರೆ. ಅವರ ಪೋಸ್ಟ್ ನೋಡಿದ ನೆಟ್ಟಿಗರು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಬಳಿಕ ಆರ್​ಜಿವಿ ಆ ಪೋಸ್ಟ್ ಡಿಲೀಟ್ ಮಾಡಿದ್ದಾರೆ.

‘ಬುದ್ಧಿವಂತರು ಪ್ರೀತಿಸುತ್ತಾರೆ, ಮೂರ್ಖರು ಮದುವೆಯಾಗುತ್ತಾರೆ’; ರಾಮ್ ಗೋಪಾಲ್ ವರ್ಮ

ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ತಮ್ಮ ನೇರ ಮಾತುಗಳಿಂದ ಯಾವಾಗಲೂ ಚರ್ಚೆ ಆಗುತ್ತಾರೆ. ಅವರಿಗೆ ಹೀರೋಯಿನ್​ಗಳ ಬಗ್ಗೆ ವಿಶೇಷ ಪ್ರೀತಿ. ಯುವ ನಾಯಕಿಯರ ಜೊತೆ ಅವರು ಬೋಲ್ಡ್ ಆಗಿ ಕಾಣಿಸಿಕೊಂಡ ಉದಾಹರಣೆ ಇದೆ. ಅವರ ವಿವಾಹದ ಬಗ್ಗೆ ನೀಡಿದ ಹೇಳಿಕೆ ಸಾಕಷ್ಟು ಚರ್ಚೆ ಆಗುತ್ತಲೇ ಇರುತ್ತದೆ.

ಅರೆಸ್ಟ್ ಮಾಡಲು ಬಂದ ಪೊಲೀಸರು ನನ್ನ ಜತೆ ಎಣ್ಣೆ ಹೊಡೆದರು: ರಾಮ್ ಗೋಪಾಲ್ ವರ್ಮಾ

ರಾಮ್ ಗೋಪಾಲ್ ವರ್ಮಾ ಅವರು ಒಂದು ವಿಲಕ್ಷಣ ಘಟನೆಯನ್ನು ಈಗ ಮೆಲುಕು ಹಾಕಿದ್ದಾರೆ. ಅರೆಸ್ಟ್ ಮಾಡಲು ಬಂದಿದ್ದ ಪೊಲೀಸರು ತಮ್ಮ ಜೊತೆ ಕುಳಿತು ಡ್ರಿಂಕ್ಸ್ ಮಾಡಿ ವಾಪಸ್ಸು ಹೋಗಿದ್ದರು ಎಂದು ಆರ್​ಜಿವಿ ಹೇಳಿದ್ದಾರೆ. ಅಂದು ಏನೆಲ್ಲ ನಡೆಯಿತು ಎಂಬುದನ್ನು ರಾಮ್ ಗೋಪಾಲ್ ವರ್ಮಾ ವಿವರಿಸಿದ್ದಾರೆ.

ಹುಡುಗಿಯರ ಖಾಸಗಿ ಭಾಗಕ್ಕೆ ಮಾರುಹೋದ ಆರ್​ಜಿವಿ; ನಿರ್ದೇಶಕನ ಹೇಳಿಕೆಗೆ ತೀವ್ರ ಟೀಕೆ

ರಾಮ್ ಗೋಪಾಲ್ ವರ್ಮಾ ಅವರು ಯುವ ನಟಿಯರೊಂದಿಗೆ ಮಾಡಿದ ವಿಡಿಯೋಗಳು ಮತ್ತು ಹೇಳಿಕೆಗಳು ದೊಡ್ಡ ವಿವಾದಕ್ಕೆ ಕಾರಣವಾಗಿವೆ. ಪ್ರತ್ಯುಷಾ ಎಂಬ ನಟಿಯೊಂದಿಗಿನ ವಿಡಿಯೋದಲ್ಲಿ ಅವರ ಅಶ್ಲೀಲ ಹೇಳಿಕೆಗಳು ವ್ಯಾಪಕ ಟೀಕೆಗೆ ಒಳಗಾಗಿವೆ. ಇದರಿಂದಾಗಿ ಅವರ ಮೇಲೆ ಆಕ್ರೋಶ ವ್ಯಕ್ತವಾಗುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆ ನಡೆಯುತ್ತಿದೆ.

‘ಗೇಮ್ ಚೇಂಜರ್ ಬಾಕ್ಸ್ ಆಫೀಸ್​ ಲೆಕ್ಕ ಸುಳ್ಳು’: ಹಿಗ್ಗಾಮುಗ್ಗ ಜಾಡಿಸಿದ ರಾಮ್ ಗೋಪಾಲ್ ವರ್ಮಾ

ರಾಮ್ ಚರಣ್ ನಟನೆಯ ‘ಗೇಮ್​ ಚೇಂಜರ್​’ ಸಿನಿಮಾ ಜನವರಿ 10ರಂದು ಬಿಡುಗಡೆ ಆಯಿತು. ಈ ಸಿನಿಮಾದಲ್ಲಿ ಘಟಾನುಘಟಿಗಳು ಇದ್ದರೂ ಕೂಡ ನಿರೀಕ್ಷಿತ ಪ್ರಮಾಣದಲ್ಲಿ ಕಲೆಕ್ಷನ್ ಆಗಿಲ್ಲ. ಆದರೆ ಚಿತ್ರತಂಡದ ಕಡೆಯಿಂದ ಸುಳ್ಳು ಬಾಕ್ಸ್ ಆಫೀಸ್​ ಲೆಕ್ಕ ನೀಡಲಾಗಿದೆ ಎಂದು ರಾಮ್​ ಗೋಪಾಲ್ ವರ್ಮಾ ಅವರು ಆರೋಪ ಮಾಡಿದ್ದಾರೆ.

ತೆಲಂಗಾಣ ಪೊಲೀಸರು ಸ್ವರ್ಗಕ್ಕೆ ಹೋಗಿ ಶ್ರೀದೇವಿ ಅರೆಸ್ಟ್ ಮಾಡ್ತಾರಾ? ಆರ್​ಜಿವಿ ಪ್ರಶ್ನೆ

ಅಲ್ಲು ಅರ್ಜುನ್ ಅವರನ್ನು ಬಂಧಿಸಿದ್ದರ ಬಗ್ಗೆ ರಾಮ್ ಗೋಪಾಲ್ ವರ್ಮಾ ಅವರಿಗೆ ಅಸಮಾಧಾನ ಇದೆ. ಈ ಬಗ್ಗೆ ಅವರು ‘ಎಕ್ಸ್​’ ಖಾತೆಯಲ್ಲಿ ಪೋಸ್ಟ್​ ಮಾಡಿದ್ದಾರೆ. ಚಿತ್ರೀಕರಣದ ವೇಳೆ ಶ್ರೀದೇವಿಯನ್ನು ನೋಡಲು ಬಂದಿದ್ದ ಲಕ್ಷಾಂತರ ಅಭಿಮಾನಿಗಳಲ್ಲಿ ಮೂವರು ಮೃತರಾಗಿದ್ದರು ಎಂಬುದನ್ನು ಕೂಡ ರಾಮ್​ ಗೋಪಾಲ್ ವರ್ಮಾ ಅವರು ಈಗ ನೆನಪಿಸಿದ್ದಾರೆ.

‘ಸಲ್ಮಾನ್ ಖಾನ್ ತಿರುಗೇಟು ನೀಡಬೇಕು’: ಲಾರೆನ್ಸ್ ಬಿಷ್ಣೋಯ್ ವಿಚಾರಕ್ಕೆ ತಲೆ ಹಾಕಿದ ಆರ್​ಜಿವಿ

ಮಾಜಿ ಸಚಿವ ಬಾಬಾ ಸಿದ್ಧಿಕಿ ಹತ್ಯೆ ಹಿಂದೆ ಗ್ಯಾಂಗ್​ಸ್ಟರ್​ ಲಾರೆನ್ಸ್ ಬಿಷ್ಣೋಯ್ ಕೈವಾಡ ಇದೆ ಎನ್ನಲಾಗಿದೆ. ಸಲ್ಮಾನ್​ ಖಾನ್​ಗೆ ಬಾಬಾ ಸಿದ್ಧಿಕಿ ಆಪ್ತವಾಗಿದ್ದರು. ಆ ಕಾರಣದಿಂದಲೇ ಹತ್ಯೆ ನಡೆಯಿತು ಎಂಬ ಮಾತು ಕೇಳಿಬಂದಿದೆ. ಈ ಎಲ್ಲ ವಿಚಾರಗಳ ಬಗ್ಗೆ ನಿರ್ದೇಶಕ ರಾಮ್​ ಗೋಪಾಲ್​ ವರ್ಮಾ ಅವರು ತಮ್ಮ ಅನಿಸಿಕೆ ತಿಳಿಸಲು ಶುರು ಮಾಡಿದ್ದಾರೆ.

ರಾಮ್ ಗೋಪಾಲ್ ವರ್ಮಾ ಜೊತೆ ರಶ್ಮಿಕಾ ಮಂದಣ್ಣ? ಗಮನವಿಟ್ಟು ನೋಡಿ

Rashmika Mandanna: ಇದೇನಿದು ರಾಮ್ ಗೋಪಾಲ್ ವರ್ಮಾ ಜೊತೆಗೆ ರಶ್ಮಿಕಾ ಮಂದಣ್ಣ! ಇದು ಹೇಗೆ ಸಾಧ್ಯ? ಸ್ವಲ್ಪ ಗಮನವಿಟ್ಟು ನೋಡಿ...

ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ
ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ
ನನ್ನ ಪತ್ರ ಸಿಎಂ ಏನು ಮಾಡಬೇಕೆಂದು ಕುಮಾರಸ್ವಾಮಿ ಹೇಳಬೇಕಿಲ್ಲ: ಪಾಟೀಲ್
ನನ್ನ ಪತ್ರ ಸಿಎಂ ಏನು ಮಾಡಬೇಕೆಂದು ಕುಮಾರಸ್ವಾಮಿ ಹೇಳಬೇಕಿಲ್ಲ: ಪಾಟೀಲ್
ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಗಮನಸೆಳೆದ ಶತಾಯುಷಿ ಅಜ್ಜಿಯ 100ನೇ ಬರ್ತಡೇ ಸಂಭ್ರಮಾಚರಣೆ
ಗಮನಸೆಳೆದ ಶತಾಯುಷಿ ಅಜ್ಜಿಯ 100ನೇ ಬರ್ತಡೇ ಸಂಭ್ರಮಾಚರಣೆ
ಒಳ್ಳೆಯದಕ್ಕೂ, ಕೆಟ್ಟದ್ದಕ್ಕೂ ಓಕೆ ಅಂತಾಳೆ; ಪತ್ನಿ ಬಗ್ಗೆ ಮಾತಾಡಿದ ಹಂಸಲೇಖ
ಒಳ್ಳೆಯದಕ್ಕೂ, ಕೆಟ್ಟದ್ದಕ್ಕೂ ಓಕೆ ಅಂತಾಳೆ; ಪತ್ನಿ ಬಗ್ಗೆ ಮಾತಾಡಿದ ಹಂಸಲೇಖ
ರಾಷ್ಟ್ರಪತಿಯವರನ್ನು ಭೇಟಿಯಾಗಿ ಮಸೂದೆಗಳ ಅನುಮೋದನೆ ಜ್ಞಾಪಿಸಿದೆವು: ಸಿಎಂ
ರಾಷ್ಟ್ರಪತಿಯವರನ್ನು ಭೇಟಿಯಾಗಿ ಮಸೂದೆಗಳ ಅನುಮೋದನೆ ಜ್ಞಾಪಿಸಿದೆವು: ಸಿಎಂ
ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಚಿವ
ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಚಿವ
ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ದೃಶ್ಯ ಇಲ್ಲಿದೆ!
ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ದೃಶ್ಯ ಇಲ್ಲಿದೆ!
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ