AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ram Gopal Varma RGV

Ram Gopal Varma RGV

ರಾಮ್ ಗೋಪಾಲ್ ವರ್ಮಾ ಜನಿಸಿದ್ದು 1962ರ ಏಪ್ರಿಲ್ 7ರಂದು. ಭಾರತೀಯ ಚಲನಚಿತ್ರೋದ್ಯಮದಲ್ಲಿ ಅವರು ವಿಶಿಷ್ಟ ಮತ್ತು ವಿವಾದಾತ್ಮಕ ಶೈಲಿಯ ಸಿನಿಮಾಗಳಿಂದ ಹೆಸರುವಾಸಿ ಆಗಿದ್ದಾರೆ. 1989ರಲ್ಲಿ ವಿಮರ್ಶಾತ್ಮಕವಾಗಿ ಮೆಚ್ಚುಗೆ ಪಡೆದ ‘ಶಿವ’ ಸಿನಿಮಾದೊಂದಿಗೆ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದ ಅವರು, ತಮ್ಮ ಸಿನಿಮಾಗಳಲ್ಲಿ ವಿಶೇಷವಾಗಿ ಕಥೆ ಹೇಳುವಿಕೆ ಮತ್ತು ಹೊಸ ಬಗೆಯ ಛಾಯಾಗ್ರಹಣದ ಮೂಲಕ ಪ್ರಾಮುಖ್ಯತೆಯನ್ನು ಪಡೆದರು. ವರ್ಮಾ ಅವರು ಕ್ರೈಮ್, ಡ್ರಾಮಾ ಸೇರಿದಂತೆ ವಿವಿಧ ಬಗೆಯ ಸಿನಿಮಾಗಳನ್ನು ನಿರ್ದೇಶಿಸಿದ್ದಾರೆ. ಅವರ ಕೆಲವು ಗಮನಾರ್ಹ ಸಿನಿಮಾಗಳಲ್ಲಿ ‘ಸತ್ಯ’, ‘ರಂಗೀಲಾ’, ‘ಕಂಪನಿ’ ಮುಂತಾದವು ಸೇರಿವೆ. ಅಷ್ಟೆಲ್ಲ ಜನಪ್ರಿಯತೆ ಪಡೆದರೂ ಕೂಡ ಅವರ ನಂತರದ ಚಿತ್ರಗಳು ಮಿಶ್ರ ವಿಮರ್ಶೆಗಳನ್ನು ಸ್ವೀಕರಿಸಿದವು. ಅವರ ವೃತ್ತಿಜೀವನದಲ್ಲಿ ವಿವಾದಗಳು ಮತ್ತು ಏರಿಳಿತಗಳ ಹೊರತಾಗಿಯೂ, ರಾಮ್ ಗೋಪಾಲ್ ವರ್ಮಾ ಭಾರತೀಯ ಚಿತ್ರರಂಗದಲ್ಲಿ ಗಮನಾರ್ಹ ಮತ್ತು ಪ್ರಭಾವಶಾಲಿ ವ್ಯಕ್ತಿಯಾಗಿ ಉಳಿದಿದ್ದಾರೆ.

ಇನ್ನೂ ಹೆಚ್ಚು ಓದಿ

Dhurandhar 2: ರಣವೀರ್ ಸಿಂಗ್ ಮುಂದೆ ಬೇರೆ ಹೀರೋಗಳೆಲ್ಲ ಜೋಕರ್​ಗಳು; ಆರ್​ಜಿವಿ ಟೀಕೆ

ರಣವೀರ್ ಸಿಂಗ್ ನಟನೆಯ ‘ಧುರಂಧರ್ 2’ ಸಿನಿಮಾ ಬಿಡುಗಡೆಯಾಗಿ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಈ ಸಿನಿಮಾ ನೋಡಿದ ರಾಮ್ ಗೋಪಾಲ್ ವರ್ಮಾ ಅವರು ಪುಟ್ಟಗಟ್ಟಲೆ ವಿಮರ್ಶೆ ಹಂಚಿಕೊಂಡಿದ್ದಾರೆ. ಆರ್​ಜಿವಿ ಅವರಿಗೆ ಈ ಸಿನಿಮಾ ಬಹಳ ಇಷ್ಟ ಆಗಿದೆ. ಚಿತ್ರದ ಬಗ್ಗೆ ಅವರು ಮಾಡಿರುವ ಪೋಸ್ಟ್ ಇಲ್ಲಿದೆ..

‘ಧುರಂಧರ್ 2’ ಮೊದಲ ವಿಮರ್ಶೆ: ಹಾಲಿವುಡ್ ನಿರ್ದೇಶಕರು ನೋಡಬೇಕು ಎಂದ ಆರ್​ಜಿವಿ

‘ಧುರಂಧರ್ 2’ ಸಿನಿಮಾ ಹೇಗಿದೆ ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಮೊದಲ ವಿಮರ್ಶೆ ಹೊರಬಿದ್ದಿದೆ. ರಾಮ್ ಗೋಪಾಲ್ ವರ್ಮಾ ಅವರು ವಿಶೇಷ ಪ್ರದರ್ಶನದಲ್ಲಿ ಸಿನಿಮಾ ವೀಕ್ಷಿಸಿ ವಿಮರ್ಶೆ ತಿಳಿಸಿದ್ದಾರೆ. ಅವರಿಗೆ ಈ ಸಿನಿಮಾ ತುಂಬಾ ಇಷ್ಟ ಆಗಿದೆ. ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಹೊಗಳಿದ್ದಾರೆ.

‘ಸತ್ಯ’, ‘ಕಂಪನಿ’ ಸಿನಿಮಾ ಸೇರಿಸಿ ‘ಧುರಂಧರ್’ ಮಾಡಿದ ಆದಿತ್ಯ ಧಾರ್: ವಿಷಯ ಬಯಲು

‘ಧುರಂಧರ್’ ಸಿನಿಮಾದ ಕಥೆ ಹೇಗೆ ಸಿದ್ಧವಾಯ್ತು ಎಂಬ ಬಗ್ಗೆ ರಾಮ್ ಗೋಪಾಲ್ ವರ್ಮಾ ಬಾಯಿಬಿಟ್ಟಿದ್ದಾರೆ. ನಿರ್ದೇಶಕ ಆದಿತ್ಯ ಧಾರ್ ತಮಗೆ ಹೇಳಿದ ವಿಷಯವನ್ನು ಈಗ ಆರ್​ಜಿವಿ ಬಹಿರಂಗ ಪಡಿಸಿದ್ದಾರೆ. ಆರ್​ಜಿವಿ ನಿರ್ದೇಶಿಸಿದ್ದ 2 ಸಿನಿಮಾಗಳನ್ನು ಸೇರಿಸಿ ‘ಧುರಂಧರ್’ ಮಾಡಲಾಯ್ತು ಎಂಬುದು ಗೊತ್ತಾಗಿದೆ.

ಮುಖ ಮೂತಿ ನೋಡದೇ ಹೊಡೆದಾಡಿಕೊಂಡ ಮಹೇಶ್ ಬಾಬು, ರಾಜಮೌಳಿ? ಸಿನಿಮಾ ಸತ್ತುಹೋಯ್ತು ಎಂದ ಆರ್​ಜಿವಿ

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ಈ ವಿಡಿಯೋಗೆ ಜನರಿಂದ ಬಗೆಬಗೆಯ ಕಮೆಂಟ್ ಬಂದಿದೆ. ಟಾಲಿವುಡ್​ನ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ‘ಸಿನಿಮಾ ಸತ್ತುಹೋಯ್ತು’ ಎಂಬ ಕ್ಯಾಪ್ಷನ್ ಜೊತೆ ಈ ವಿಡಿಯೋವನ್ನು ಅವರು ಶೇರ್ ಮಾಡಿದ್ದಾರೆ.

‘ಟಾಕ್ಸಿಕ್’ ಚಿತ್ರದ ವಿರುದ್ಧ ಮತ್ತೆ ನಾಲಿಗೆ ಹರಿಬಿಟ್ಟ ಆರ್​​ಜಿವಿ; ಚಳಿಬಿಡಿಸಿದ ಕನ್ನಡಿಗರು 

ರಾಮ್ ಗೋಪಾಲ್ ವರ್ಮಾ 'ಟಾಕ್ಸಿಕ್' ಚಿತ್ರದ ಬಗ್ಗೆ ನೆಗೆಟಿವ್ ಹೇಳಿಕೆ ನೀಡಿ 'ಧುರಂಧರ್ 2' ಅನ್ನು ಹೊಗಳಿ ವಿವಾದ ಸೃಷ್ಟಿಸಿದ್ದಾರೆ. ಈ ಹೇಳಿಕೆಗಳ ನಂತರ ಆರ್​​ಜಿವಿ ಸ್ಪಷ್ಟನೆ ನೀಡಿದರೂ, ಅವರ ದ್ವಂದ್ವ ನಿಲುವು ಮತ್ತು 'ಟಾಕ್ಸಿಕ್' ವಿರೋಧಿ ವರ್ತನೆ ಕನ್ನಡಿಗರಿಂದ ತೀವ್ರ ಟೀಕೆಗೆ ಗುರಿಯಾಗಿದೆ.

ಟಾಕ್ಸಿಕ್: ದಕ್ಷಿಣದ ಹೀರೋಗಳ ಆರಾಧನೆ ಅಂತ್ಯ ಆಗಬಹುದು; ಆರ್​ಜಿವಿ ಭವಿಷ್ಯ

ಈ ವರ್ಷ ಮಾರ್ಚ್ 19ರಂದು ‘ಧುರಂಧರ್ 2’ ಹಾಗೂ ‘ಟಾಕ್ಸಿಕ್’ ಸಿನಿಮಾಗಳು ತೆರೆಕಾಣಲಿವೆ. ಈ ಸಿನಿಮಾಗಳ ಕ್ಲ್ಯಾಶ್ ಬಗ್ಗೆ ರಾಮ್ ಗೋಪಾಲ್ ವರ್ಮಾ ಅವರು ತಮ್ಮ ಅನಿಸಿಕೆ ತಿಳಿಸಿದ್ದಾರೆ. ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಹೇಗೆ ಇರಬಹುದು ಎಂಬುದನ್ನು ಆರ್​ಜಿವಿ ಊಹಿಸಿದ್ದಾರೆ.

ಗೀತು ಮೋಹನ್​ದಾಸ್ ‘ಟಾಕ್ಸಿಕ್’ ಚಿತ್ರಿಸಿದ್ದಾರೆ ಅಂತ ನಂಬೋಕೆ ಆಗಲ್ಲ: ಆರ್​ಜಿವಿ ನೇರ ಮಾತು

ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ‘ಟಾಕ್ಸಿಕ್’ ಸಿನಿಮಾ ಟೀಸರ್ ನೋಡಿ ಅಚ್ಚರಿಪಟ್ಟಿದ್ದಾರೆ. ಈ ಚಿತ್ರದ ನಿರ್ದೇಶಕಿ ಗೀತು ಮೋಹನ್​ದಾಸ್ ಬಗ್ಗೆ ತಮಗೆ ಇರುವ ಅಭಿಪ್ರಾಯವನ್ನು ಆರ್​ಜಿವಿ ಹಂಚಿಕೊಂಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ‘ಟಾಕ್ಸಿಕ್’ ಸಿನಿಮಾದ ಟೀಸರ್ ಬಗ್ಗೆ ಸಾಕಷ್ಟು ಚರ್ಚೆ ಆಗುತ್ತಿದೆ.

ದೇವರ ಮೇಲೆ ನಂಬಿಕೆ ಇಲ್ಲದಿದ್ದರೂ ರಾಜಮೌಳಿಗೆ ದೊಡ್ಡ ಗೆಲುವು ಸಿಕ್ಕಿದೆ: ಆರ್​ಜಿವಿ ಬೆಂಬಲ

‘ವಾರಾಣಸಿ’ ಸಿನಿಮಾದ ನಿರ್ದೇಶಕ ರಾಜಮೌಳಿ ಅವರು ದೇವರ ಬಗ್ಗೆ ನೀಡಿದ ಹೇಳಿಕೆಯಿಂದ ವಿವಾದ ಶುರುವಾಗಿದೆ. ಈ ವಿಚಾರದಲ್ಲಿ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ರಾಜಮೌಳಿ ಪರವಾಗಿ ವಾದ ಮುಂದಿಟ್ಟಿದ್ದಾರೆ. ದೇವರನ್ನು ನಂಬದೇ ಇರುವ ವಿಷಯಕ್ಕೆ ಸಂಬಂಧಿಸಿದಂತೆ ಅವರು ತಮ್ಮ ಅಭಿಪ್ರಾಯವನ್ನು ದೀರ್ಘವಾಗಿ ತಿಳಿಸಿದ್ದಾರೆ.

ರಾಜ್​ಕುಮಾರ್ ಬಗ್ಗೆ ಆರ್​ಜಿವಿ ಅಲ್ಪಜ್ಞಾನದ ಹೇಳಿಕೆ ಸುಳ್ಳು; ಅಣ್ಣಾವ್ರ ಚಿತ್ರವನ್ನು ರಿಮೇಕ್ ಮಾಡಿದ್ದ ಅಮಿತಾಭ್

ತೆಲುಗು ನಿರ್ದೇಶಕ RGV ಅವರ ಅಲ್ಪಜ್ಞಾನದ ಹೇಳಿಕೆ ಸುಳ್ಳೆಂದು ಸಾಬೀತಾಗಿದೆ. ಅವರು ದಕ್ಷಿಣ ಭಾರತದ ನಟರು ಅಮಿತಾಭ್ ಬಚ್ಚನ್ ಚಿತ್ರಗಳನ್ನು ರಿಮೇಕ್ ಮಾಡಿ ಸ್ಟಾರ್ ಆದರು ಎಂದು ಹೇಳಿದ್ದರು. ಆದರೆ, ವಾಸ್ತವದಲ್ಲಿ ರಾಜ್ಕುಮಾರ್ ಅವರ ಚಿತ್ರವನ್ನು ಬಚ್ಚನ್ ಅವರೇ ರಿಮೇಕ್ ಮಾಡಿದ್ದರು. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಭಾರೀ ಚರ್ಚೆ ನಡೆದಿವೆ.

ಕಮಲ್ ಹಾಸನ್ ಬಳಿಕ ಕನ್ನಡಿಗರನ್ನು ಕೆಣಕಿದ ನಿರ್ದೇಶಕ ರಾಮ್ ಗೋಪಾಲ್ ವರ್ಮಾ

ಕನ್ನಡ ಭಾಷೆ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಕಮಲ್ ಹಾಸನ್ ಅವರು ಕರುನಾಡ ಜನತೆಯ ಕೆಂಗಣ್ಣಿಗೆ ಗುರಿ ಆಗಿದ್ದಾರೆ. ಅವರ ಸಿನಿಮಾವನ್ನು ಬ್ಯಾನ್ ಮಾಡಬೇಕು ಎಂಬುದು ಹೊಸ ರೀತಿ ಗೂಂಡಾಗಿರಿ ಎಂದು ರಾಮ್ ಗೋಪಾಲ್ ವರ್ಮಾ ಹೇಳಿದ್ದಾರೆ. ಆ ಮೂಲಕ ಅವರು ಕೂಡ ಕನ್ನಡಿಗರನ್ನು ಕೆಣಕಿದ್ದಾರೆ.

ನಟಿ ಕಿಯಾರಾ ಬಿಕಿನಿ ಬಗ್ಗೆ ಕೆಟ್ಟದಾಗಿ ಪೋಸ್ಟ್ ಮಾಡಿದ ರಾಮ್ ಗೋಪಾಲ್ ವರ್ಮಾ

ಯಾವಾಗಲೂ ಫಿಲ್ಟರ್ ಇಲ್ಲದೇ ಮಾತನಾಡುವ ರಾಮ್ ಗೋಪಾಲ್ ವರ್ಮಾ ಅವರು ಈಗ ವಿವಾದ ಮಾಡಿಕೊಂಡಿದ್ದಾರೆ. ‘ವಾರ್ 2’ ಸಿನಿಮಾದ ಟೀಸರ್​ನಲ್ಲಿ ಕಿಯಾರಾ ಅಡ್ವಾಣಿ ಅವರ ಬಿಕಿನಿ ದೃಶ್ಯದ ಬಗ್ಗೆ ಆರ್​ಜಿವಿ ಅಸಭ್ಯವಾಗಿ ಕಮೆಂಟ್ ಮಾಡಿದ್ದಾರೆ. ಅವರ ಪೋಸ್ಟ್ ನೋಡಿದ ನೆಟ್ಟಿಗರು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಬಳಿಕ ಆರ್​ಜಿವಿ ಆ ಪೋಸ್ಟ್ ಡಿಲೀಟ್ ಮಾಡಿದ್ದಾರೆ.

‘ಬುದ್ಧಿವಂತರು ಪ್ರೀತಿಸುತ್ತಾರೆ, ಮೂರ್ಖರು ಮದುವೆಯಾಗುತ್ತಾರೆ’; ರಾಮ್ ಗೋಪಾಲ್ ವರ್ಮ

ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ತಮ್ಮ ನೇರ ಮಾತುಗಳಿಂದ ಯಾವಾಗಲೂ ಚರ್ಚೆ ಆಗುತ್ತಾರೆ. ಅವರಿಗೆ ಹೀರೋಯಿನ್​ಗಳ ಬಗ್ಗೆ ವಿಶೇಷ ಪ್ರೀತಿ. ಯುವ ನಾಯಕಿಯರ ಜೊತೆ ಅವರು ಬೋಲ್ಡ್ ಆಗಿ ಕಾಣಿಸಿಕೊಂಡ ಉದಾಹರಣೆ ಇದೆ. ಅವರ ವಿವಾಹದ ಬಗ್ಗೆ ನೀಡಿದ ಹೇಳಿಕೆ ಸಾಕಷ್ಟು ಚರ್ಚೆ ಆಗುತ್ತಲೇ ಇರುತ್ತದೆ.

ರೀಲ್ಸ್​ಗಾಗಿ ಮೊಸಳೆಯ ಬಾಲ ಹಿಡಿದು ಹಿಂಸೆ ನೀಡಿದ ಯುವಕ; ವಿಡಿಯೋ ವೈರಲ್
ರೀಲ್ಸ್​ಗಾಗಿ ಮೊಸಳೆಯ ಬಾಲ ಹಿಡಿದು ಹಿಂಸೆ ನೀಡಿದ ಯುವಕ; ವಿಡಿಯೋ ವೈರಲ್
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾ
ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾ
ಸ್ಯಾಂಕಿ ಕೆರೆ ಮುಂದೆ 800 ಕೆಜಿ ತೂಕದ ಪುನೀತ್ ಕಂಚಿನ ಪ್ರತಿಮೆ ಲೋಕಾರ್ಪಣೆ
ಸ್ಯಾಂಕಿ ಕೆರೆ ಮುಂದೆ 800 ಕೆಜಿ ತೂಕದ ಪುನೀತ್ ಕಂಚಿನ ಪ್ರತಿಮೆ ಲೋಕಾರ್ಪಣೆ
ತಂದೆಯಿಂದಲೇ ಹಸುಗೂಸಿನ ಕೊಲೆ: ಭೀಮರಾಯನ ಕ್ರೂರತೆ ಬಿಚ್ಚಿಟ್ಟ ಸಂಬಂಧಿಕರು
ತಂದೆಯಿಂದಲೇ ಹಸುಗೂಸಿನ ಕೊಲೆ: ಭೀಮರಾಯನ ಕ್ರೂರತೆ ಬಿಚ್ಚಿಟ್ಟ ಸಂಬಂಧಿಕರು
ರೌಡಿ ಶೀಟರ್ ಜೊತೆ ದೋಸ್ತಿ: ಡಾಗ್ ಸತೀಶ್​​ಗೆ ಸಂಕಷ್ಟ
ರೌಡಿ ಶೀಟರ್ ಜೊತೆ ದೋಸ್ತಿ: ಡಾಗ್ ಸತೀಶ್​​ಗೆ ಸಂಕಷ್ಟ
ಇರಾನ್-ಇಸ್ರೇಲ್ ಸಂಘರ್ಷ; ರಿಯಾದ್‌ನಲ್ಲಿ ಭಾರತೀಯ ಪ್ರಜೆ ಸಾವು
ಇರಾನ್-ಇಸ್ರೇಲ್ ಸಂಘರ್ಷ; ರಿಯಾದ್‌ನಲ್ಲಿ ಭಾರತೀಯ ಪ್ರಜೆ ಸಾವು
ಟೊಮೆಟೊ ಬೆಲೆ ಕುಸಿತ: ರೈತರಿಂದ ರಸ್ತೆಗೆ ಟೊಮೆಟೊ ಸುರಿದು ಆಕ್ರೋಶ
ಟೊಮೆಟೊ ಬೆಲೆ ಕುಸಿತ: ರೈತರಿಂದ ರಸ್ತೆಗೆ ಟೊಮೆಟೊ ಸುರಿದು ಆಕ್ರೋಶ