AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ram Gopal Varma RGV

Ram Gopal Varma RGV

ರಾಮ್ ಗೋಪಾಲ್ ವರ್ಮಾ ಜನಿಸಿದ್ದು 1962ರ ಏಪ್ರಿಲ್ 7ರಂದು. ಭಾರತೀಯ ಚಲನಚಿತ್ರೋದ್ಯಮದಲ್ಲಿ ಅವರು ವಿಶಿಷ್ಟ ಮತ್ತು ವಿವಾದಾತ್ಮಕ ಶೈಲಿಯ ಸಿನಿಮಾಗಳಿಂದ ಹೆಸರುವಾಸಿ ಆಗಿದ್ದಾರೆ. 1989ರಲ್ಲಿ ವಿಮರ್ಶಾತ್ಮಕವಾಗಿ ಮೆಚ್ಚುಗೆ ಪಡೆದ ‘ಶಿವ’ ಸಿನಿಮಾದೊಂದಿಗೆ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದ ಅವರು, ತಮ್ಮ ಸಿನಿಮಾಗಳಲ್ಲಿ ವಿಶೇಷವಾಗಿ ಕಥೆ ಹೇಳುವಿಕೆ ಮತ್ತು ಹೊಸ ಬಗೆಯ ಛಾಯಾಗ್ರಹಣದ ಮೂಲಕ ಪ್ರಾಮುಖ್ಯತೆಯನ್ನು ಪಡೆದರು. ವರ್ಮಾ ಅವರು ಕ್ರೈಮ್, ಡ್ರಾಮಾ ಸೇರಿದಂತೆ ವಿವಿಧ ಬಗೆಯ ಸಿನಿಮಾಗಳನ್ನು ನಿರ್ದೇಶಿಸಿದ್ದಾರೆ. ಅವರ ಕೆಲವು ಗಮನಾರ್ಹ ಸಿನಿಮಾಗಳಲ್ಲಿ ‘ಸತ್ಯ’, ‘ರಂಗೀಲಾ’, ‘ಕಂಪನಿ’ ಮುಂತಾದವು ಸೇರಿವೆ. ಅಷ್ಟೆಲ್ಲ ಜನಪ್ರಿಯತೆ ಪಡೆದರೂ ಕೂಡ ಅವರ ನಂತರದ ಚಿತ್ರಗಳು ಮಿಶ್ರ ವಿಮರ್ಶೆಗಳನ್ನು ಸ್ವೀಕರಿಸಿದವು. ಅವರ ವೃತ್ತಿಜೀವನದಲ್ಲಿ ವಿವಾದಗಳು ಮತ್ತು ಏರಿಳಿತಗಳ ಹೊರತಾಗಿಯೂ, ರಾಮ್ ಗೋಪಾಲ್ ವರ್ಮಾ ಭಾರತೀಯ ಚಿತ್ರರಂಗದಲ್ಲಿ ಗಮನಾರ್ಹ ಮತ್ತು ಪ್ರಭಾವಶಾಲಿ ವ್ಯಕ್ತಿಯಾಗಿ ಉಳಿದಿದ್ದಾರೆ.

ಇನ್ನೂ ಹೆಚ್ಚು ಓದಿ

‘ಕೆಜಿಎಫ್ ಚಿತ್ರಕ್ಕೂ ಮುನ್ನ ಯಶ್ ಯಾರು?’; ನಿರ್ಮಾಪಕರ ಹೇಳಿಕೆಗೆ ಆರ್‌ಜಿವಿ ಸಮರ್ಥನೆ

ಪ್ರಸಿದ್ಧರಲ್ಲದ ನಟರನ್ನು ಇಟ್ಟುಕೊಂಡು ದೊಡ್ಡ ಸಿನಿಮಾಗಳನ್ನು ಮಾಡುವುದರ ಕುರಿತು ಅಲ್ಲು ಅರವಿಂದ್ ಮಾತನಾಡಿದ್ದರು. ‘ಕೆಜಿಎಫ್’ಗಿಂತ ಮುಂಚೆ ತಮಗೆ ಯಶ್ ಯಾರೆಂದೇ ತಿಳಿದಿರಲಿಲ್ಲ ಎಂದು ಅವರು ಹೇಳಿದ್ದರು. ಆ ಹಿನ್ನೆಲೆಯನ್ನು ಪ್ರತಿಯೊಬ್ಬರೂ ಅರ್ಥಮಾಡಿಕೊಳ್ಳಬೇಕು ಎಂದು ರಾಮ್ ಗೋಪಾಲ್ ವರ್ಮಾ ಅವರು ಪೋಸ್ಟ್ ಮಾಡಿದ್ದಾರೆ.

‘ಧುರಂಧರ್’ ಹೊಗಳುವ ನೆಪದಲ್ಲಿ ‘ಟಾಕ್ಸಿಕ್’ ತೆಗಳಿದ್ರಾ ರಾಮ್ ಗೋಪಾಲ್ ವರ್ಮಾ?

ಆರಂಭದಲ್ಲಿ ‘ಧುರಂಧರ್’ ಮತ್ತು ‘ಟಾಕ್ಸಿಕ್’ ಸಿನಿಮಾಗಳು ಒಂದೇ ದಿನ ತೆರೆಗೆ ಬರಲು ಸಜ್ಜಾಗಿದ್ದವು. ಆದರೆ ‘ಟಾಕ್ಸಿಕ್’ ತಂಡ ಬಿಡುಗಡೆಯ ದಿನಾಂಕವನ್ನು ಮುಂದೂಡಿತ್ತು. ಇತ್ತೀಚೆಗಷ್ಟೇ ಚಿತ್ರಮಂದಿರಗಳಲ್ಲಿ ಈ ಸಿನಿಮಾ ಬಿಡುಗಡೆ ಆಯಿತು. ಈಗಲೂ ಕೂಡ ಈ ಎರಡು ಸಿನಿಮಾಗಳ ನಡುವಿನ ಹೋಲಿಕೆ ಮತ್ತು ಚರ್ಚೆಗಳು ನಿಂತಿಲ್ಲ.

ಬಿಸಿಮುಟ್ಟಿದ ಮೇಲೆ ಎಚ್ಚೆತ್ತು ಹಳೆಯ ಸಾಲ ತೀರಿಸಿದ ರಾಮ್ ಗೋಪಾಲ್ ವರ್ಮ 

ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಒಂಬತ್ತು ವರ್ಷಗಳ 1.11 ಕೋಟಿ ರೂಪಾಯಿ ಹಳೆಯ ಬಾಕಿ ಹಣವನ್ನು ಪಾವತಿಸಿದ್ದಾರೆ. ‘ಪೊಲೀಸ್ ಕಂಪನಿ’ ಚಿತ್ರೀಕರಣವನ್ನು ಕಾರ್ಮಿಕರ ಸಂಘಟನೆ ಸ್ಥಗಿತಗೊಳಿಸಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಸಂಘಟನೆಯ ಕಠಿಣ ನಿರ್ಧಾರದಿಂದಾಗಿ ಕೊನೆಗೂ ಕಾರ್ಮಿಕರಿಗೆ ಹಾಗೂ ತಂತ್ರಜ್ಞರಿಗೆ ನ್ಯಾಯ ಸಿಕ್ಕಂತಾಗಿದೆ.

ಎನ್‌ಕೌಂಟರ್ ಸ್ಪೆಷಲಿಸ್ಟ್ ದಯಾ ನಾಯಕ್ ಜೀವನ ಆಧರಿಸಿ ಸಿನಿಮಾ ಘೋಷಿಸಿದ ಆರ್​ಜಿವಿ

ಮುಂಬೈ ಅಂಡರ್‌ವರ್ಲ್ಡ್ ಹಿನ್ನೆಲೆಯಲ್ಲಿ ನಿರ್ದೇಶಕ ರಾಮ್ ಗೋಪಾಲ್ ವರ್ಮಾ 'ಪೋಲಿಸ್ ಕಂಪನಿ' ಎಂಬ ಹೊಸ ಸಿನಿಮಾ ಘೋಷಿಸಿದ್ದಾರೆ. 300ಕ್ಕೂ ಹೆಚ್ಚು ಗ್ಯಾಂಗ್‌ಸ್ಟರ್‌ಗಳನ್ನು ಎನ್‌ಕೌಂಟರ್ ಮಾಡಿದ ವಿಶೇಷ ಪೋಲಿಸ್ ಪಡೆಯ ಕಥೆಯನ್ನು ಈ ಚಿತ್ರ ಒಳಗೊಂಡಿದ್ದು, ನಟ ಹರ್ಷವರ್ಧನ್ ರಾಣೆ ಎನ್‌ಕೌಂಟರ್ ಸ್ಪೆಷಲಿಸ್ಟ್ ದಯಾ ನಾಯಕ್ ಪಾತ್ರದಲ್ಲಿ ನಟಿಸಲಿದ್ದಾರೆ.

ಎನ್‌ಕೌಂಟರ್ ಸ್ಪೆಷಲಿಸ್ಟ್ ದಯಾ ನಾಯಕ್ ಬಯೋಪಿಕ್ ಮಾಡಲಿರುವ ರಾಮ್ ಗೋಪಾಲ್ ವರ್ಮಾ?

ಈ ಹಿಂದೆ ಮುಂಬೈ ಮಾಫಿಯಾ ಕಥೆಗಳನ್ನಿಟ್ಟುಕೊಂಡು ‘ಸತ್ಯ’, ‘ಕಂಪನಿ’ ರೀತಿಯ ಕಲ್ಟ್ ಸಿನಿಮಾಗಳನ್ನು ಕೊಟ್ಟಿದ್ದ ನಿರ್ದೇಶಕ ರಾಮ್ ಗೋಪಾಲ್ ವರ್ಮಾ, ಈಗ ದಯಾ ನಾಯಕ್ ಬಯೋಪಿಕ್ ಮೂಲಕ ಹಳೇ ಫಾರ್ಮ್‌ಗೆ ಮರಳುವ ಸೂಚನೆ ನೀಡಿದ್ದಾರೆ. ಈ ಸಿನಿಮಾಗೆ ದೊಡ್ಡ ನಿರ್ಮಾಣ ಸಂಸ್ಥೆಯೊಂದು ಬಂಡವಾಳ ಹೂಡಲಿದೆ.

ರಣವೀರ್ ಸಿಂಗ್ ಬ್ಯಾನ್ ಮಾಡಿದ್ದಕ್ಕೆ ಗರಂ ಆದ ನಿರ್ದೇಶಕ ರಾಮ್ ಗೋಪಾಲ್ ವರ್ಮಾ

ಖ್ಯಾತ ನಟ ರಣವೀರ್ ಸಿಂಗ್ ಅವರನ್ನು ಬ್ಯಾನ್ ಮಾಡಿದ್ದರ ವಿರುದ್ಧ ಅನೇಕರು ಧ್ವನಿ ಎತ್ತಿದ್ದಾರೆ. ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಕೂಡ ಈ ಬಗ್ಗೆ ತಮ್ಮ ನಿಲುವು ತಿಳಿಸಿದ್ದಾರೆ. ಬ್ಯಾನ್ ಮಾಡಿದರೂ ಕೂಡ ರಣವೀರ್ ಸಿಂಗ್​​ಗೆ ಇರುವ ಬೇಡಿಕೆ ಕಡಿಮೆ ಆಗಲ್ಲ ಎಂದು ಆರ್​ಜಿವಿ ಹೇಳಿದ್ದಾರೆ.

‘ಅಂದು ಕರುಣಾನಿಧಿ ಹಿಂದೆ ನಿಂತಿದ್ದ ಹುಡುಗ ಇಂದು ಅವರ ಪಕ್ಷವನ್ನೇ ಮುಗಿಸಿದ’: ಆರ್​ಜಿವಿ

ದಳಪತಿ ವಿಜಯ್ ಅವರನ್ನು ತಮ್ಮ ‘ಜನ ನಾಯಕ’ ಎಂದು ಅಭಿಮಾನಿಗಳು ಕರೆಯುತ್ತಿದ್ದಾರೆ. ಅವರು ತಮಿಳುನಾಡಿನ ಮುಂದಿನ ಮುಖ್ಯಮಂತ್ರಿ ಆಗುವುದು ಖಚಿತವಾಗಿದೆ. ಡಿಎಂಕೆ ಪಕ್ಷದ ಎದುರು ವಿಜಯ್ ಅವರ ಟಿವಿಕೆ ಪಕ್ಷ ಸಾಧಿಸಿದ ಅಭೂತಪೂರ್ವ ಗೆಲುವಿನ ಬಗ್ಗೆ ರಾಮ್ ಗೋಪಾಲ್ ವರ್ಮಾ ಅವರು ಟ್ವೀಟ್ ಮಾಡಿದ್ದಾರೆ.

‘ಧುರಂಧರ್ 2’ ಸಿನಿಮಾದಲ್ಲಿ ಅದು ಸರಿಯಿಲ್ಲ: ಮೊದಲ ಬಾರಿ ಟೀಕಿಸಿದ ರಾಮ್ ಗೋಪಾಲ್ ವರ್ಮಾ

ಇಷ್ಟು ದಿನ ‘ಧುರಂಧರ್ 2’ ಚಿತ್ರವನ್ನು ಹೊಗಳುತ್ತಿದ್ದ ರಾಮ್ ಗೋಪಾಲ್ ವರ್ಮಾ ಈಗ ತಕರಾರು ತೆಗೆದಿದ್ದಾರೆ. ಈ ಸಿನಿಮಾದಲ್ಲಿ ದಾವುದ್ ಇಬ್ರಾಹಿಂ ಪಾತ್ರವನ್ನು ಸರಿಯಾಗಿ ತೋರಿಸಿಲ್ಲ ಎಂದು ಅವರು ಆರೋಪಿಸಿದ್ದಾರೆ. ತಾವು ತೋರಿಸಿದ್ದೇ ಸರಿ ಎಂದು ನಿರ್ದೇಶಕ ಆದಿತ್ಯ ಧರ್ ಸಾಬೀತು ಮಾಡಲು ಸಾಧ್ಯವಿಲ್ಲ ಎಂದು ಆರ್​ಜಿವಿ ಹೇಳಿದ್ದಾರೆ.

ನನ್ನ ಯಶಸ್ಸಿಗೆ ದಾವುದ್ ಇಬ್ರಾಹಿಂ ಕಾರಣ: ರಾಮ್ ಗೋಪಾಲ್ ವರ್ಮಾ ವಿವಾದಾತ್ಮಕ ಹೇಳಿಕೆ

ಭೂಗತ ಪಾತಕಿ ದಾವುದ್ ಇಬ್ರಾಹಿಂ ಬಗ್ಗೆ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ಅಚ್ಚರಿಯ ಕೇಳಿಕೆ ನೀಡಿದ್ದಾರೆ. ತಾವು ಬದುಕು ಕಟ್ಟಿಕೊಳ್ಳಲು ದಾವುದ್ ಇಬ್ರಾಹಿಂ ಕಾರಣ ಎಂದು ಅವರು ಹೇಳಿದ್ದಾರೆ. ಆರ್​ಜಿವಿ ನೀಡಿದ ಈ ವಿವಾದಾತ್ಮಕ ಹೇಳಿಕೆಯು ಚರ್ಚೆಗೆ ಕಾರಣ ಆಗಿದೆ.

Dhurandhar 2: ರಣವೀರ್ ಸಿಂಗ್ ಮುಂದೆ ಬೇರೆ ಹೀರೋಗಳೆಲ್ಲ ಜೋಕರ್​ಗಳು; ಆರ್​ಜಿವಿ ಟೀಕೆ

ರಣವೀರ್ ಸಿಂಗ್ ನಟನೆಯ ‘ಧುರಂಧರ್ 2’ ಸಿನಿಮಾ ಬಿಡುಗಡೆಯಾಗಿ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಈ ಸಿನಿಮಾ ನೋಡಿದ ರಾಮ್ ಗೋಪಾಲ್ ವರ್ಮಾ ಅವರು ಪುಟ್ಟಗಟ್ಟಲೆ ವಿಮರ್ಶೆ ಹಂಚಿಕೊಂಡಿದ್ದಾರೆ. ಆರ್​ಜಿವಿ ಅವರಿಗೆ ಈ ಸಿನಿಮಾ ಬಹಳ ಇಷ್ಟ ಆಗಿದೆ. ಚಿತ್ರದ ಬಗ್ಗೆ ಅವರು ಮಾಡಿರುವ ಪೋಸ್ಟ್ ಇಲ್ಲಿದೆ..

‘ಧುರಂಧರ್ 2’ ಮೊದಲ ವಿಮರ್ಶೆ: ಹಾಲಿವುಡ್ ನಿರ್ದೇಶಕರು ನೋಡಬೇಕು ಎಂದ ಆರ್​ಜಿವಿ

‘ಧುರಂಧರ್ 2’ ಸಿನಿಮಾ ಹೇಗಿದೆ ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಮೊದಲ ವಿಮರ್ಶೆ ಹೊರಬಿದ್ದಿದೆ. ರಾಮ್ ಗೋಪಾಲ್ ವರ್ಮಾ ಅವರು ವಿಶೇಷ ಪ್ರದರ್ಶನದಲ್ಲಿ ಸಿನಿಮಾ ವೀಕ್ಷಿಸಿ ವಿಮರ್ಶೆ ತಿಳಿಸಿದ್ದಾರೆ. ಅವರಿಗೆ ಈ ಸಿನಿಮಾ ತುಂಬಾ ಇಷ್ಟ ಆಗಿದೆ. ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಹೊಗಳಿದ್ದಾರೆ.

‘ಸತ್ಯ’, ‘ಕಂಪನಿ’ ಸಿನಿಮಾ ಸೇರಿಸಿ ‘ಧುರಂಧರ್’ ಮಾಡಿದ ಆದಿತ್ಯ ಧಾರ್: ವಿಷಯ ಬಯಲು

‘ಧುರಂಧರ್’ ಸಿನಿಮಾದ ಕಥೆ ಹೇಗೆ ಸಿದ್ಧವಾಯ್ತು ಎಂಬ ಬಗ್ಗೆ ರಾಮ್ ಗೋಪಾಲ್ ವರ್ಮಾ ಬಾಯಿಬಿಟ್ಟಿದ್ದಾರೆ. ನಿರ್ದೇಶಕ ಆದಿತ್ಯ ಧಾರ್ ತಮಗೆ ಹೇಳಿದ ವಿಷಯವನ್ನು ಈಗ ಆರ್​ಜಿವಿ ಬಹಿರಂಗ ಪಡಿಸಿದ್ದಾರೆ. ಆರ್​ಜಿವಿ ನಿರ್ದೇಶಿಸಿದ್ದ 2 ಸಿನಿಮಾಗಳನ್ನು ಸೇರಿಸಿ ‘ಧುರಂಧರ್’ ಮಾಡಲಾಯ್ತು ಎಂಬುದು ಗೊತ್ತಾಗಿದೆ.

ಪ್ರಧಾನಿ ಮೋದಿ ಜನ್ಮದಿನಕ್ಕೆ ಸಿಎಂ ಧಾಮಿಯಿಂದ ಯಮುನಾ ಆರತಿ
ಪ್ರಧಾನಿ ಮೋದಿ ಜನ್ಮದಿನಕ್ಕೆ ಸಿಎಂ ಧಾಮಿಯಿಂದ ಯಮುನಾ ಆರತಿ
ಶಿಪ್ರಾ ನದಿ ದಂಡೆಯಲ್ಲಿ ದೀಪಗಳಿಂದಲೇ ಮೂಡಿದ ಪ್ರಧಾನಿ ಮೋದಿಯವರ ಬೃ
ಶಿಪ್ರಾ ನದಿ ದಂಡೆಯಲ್ಲಿ ದೀಪಗಳಿಂದಲೇ ಮೂಡಿದ ಪ್ರಧಾನಿ ಮೋದಿಯವರ ಬೃ
ಪ್ರಧಾನಿ ಮೋದಿ ಹುಟ್ಟುಹಬ್ಬ ಅಂಗವಾಗಿ ರಕ್ತದಾನ ಮಾಡಿದ ಪ್ರಲ್ಹಾದ್​​ ಜೋಶಿ
ಪ್ರಧಾನಿ ಮೋದಿ ಹುಟ್ಟುಹಬ್ಬ ಅಂಗವಾಗಿ ರಕ್ತದಾನ ಮಾಡಿದ ಪ್ರಲ್ಹಾದ್​​ ಜೋಶಿ
'ವಿದೇಶಿ ಕಂಪನಿಗೆ ಹೆದರಿ ಯುಪಿಐ ತೆರಿಗೆ ಜಾರಿ ಮಾಡಿದ್ದಲ್ಲ'; ಜೋಶಿ
'ವಿದೇಶಿ ಕಂಪನಿಗೆ ಹೆದರಿ ಯುಪಿಐ ತೆರಿಗೆ ಜಾರಿ ಮಾಡಿದ್ದಲ್ಲ'; ಜೋಶಿ
ಪ್ರಧಾನಿ ಮೋದಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಇಟಲಿ ಪ್ರಧಾನಿ ಮೆಲೋನಿ
ಪ್ರಧಾನಿ ಮೋದಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಇಟಲಿ ಪ್ರಧಾನಿ ಮೆಲೋನಿ
ರಾಜ್ಯ SC ST ಪತ್ರಿಕಾ ಸಂಪಾದಕರ ಸಂಘದ ವಾರ್ಷಿಕ ದತ್ತಿ ಪ್ರಶಸ್ತಿ ಪ್ರದಾನ
ರಾಜ್ಯ SC ST ಪತ್ರಿಕಾ ಸಂಪಾದಕರ ಸಂಘದ ವಾರ್ಷಿಕ ದತ್ತಿ ಪ್ರಶಸ್ತಿ ಪ್ರದಾನ
‘ಅಮೆರಿಕ ಅಮೆರಿಕ 2’ ಸಿನಿಮಾ ನೋಡಿ ಮೆಚ್ಚಿಕೊಂಡ ಸುಧಾ ಮೂರ್ತಿ
‘ಅಮೆರಿಕ ಅಮೆರಿಕ 2’ ಸಿನಿಮಾ ನೋಡಿ ಮೆಚ್ಚಿಕೊಂಡ ಸುಧಾ ಮೂರ್ತಿ
ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ: ಸಾರಾ ಗೋವಿಂದು ಪ್ರತಿಕ್ರಿಯೆ
ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ: ಸಾರಾ ಗೋವಿಂದು ಪ್ರತಿಕ್ರಿಯೆ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಹಲವೆಡೆ ಎಂಟ್ರಿ-ಎಕ್ಸಿಟ್ ಕ್ಲೋಸ್​​
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಹಲವೆಡೆ ಎಂಟ್ರಿ-ಎಕ್ಸಿಟ್ ಕ್ಲೋಸ್​​
ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಗೊತ್ತು
ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಗೊತ್ತು