Rahul Gandhi
ನೆಹರು ಕುಟುಂಬದ ನಾಲ್ಕನೇ ತಲೆಮಾರಿನ ಐದನೇ ನಾಯಕ ರಾಹುಲ್ ಗಾಂಧಿ. ನೆಹರು ಮರಿ ಮೊಮ್ಮಗ, ಇಂದಿರಾರ ಮೊಮ್ಮಗ ಹಾಗೂ ರಾಜೀವ್-ಸೋನಿಯಾ ಮಗ ಎನ್ನುವುದು ರಾಹುಲ್ಗೆ ಪ್ಲಸ್ ಹಾಗೂ ಮೈನಸ್ ಎರಡೂ ಹೌದು. ಕಳೆದ ಎರಡು ದಶಕಗಳಿಂದ ಭಾರತದ ರಾಜಕೀಯದಲ್ಲಿ ಸಕ್ರಿಯರಾಗಿರುವ ರಾಹುಲ್, ಪ್ರಧಾನಿಯಾಗುವ ಮಹತ್ವಾಕಾಂಕ್ಷೆ ಹೊಂದಿದ್ದಾರೆ. ಎಐಸಿಸಿ ಅಧ್ಯಕ್ಷರಾಗಿಯೂ ಕೆಲಸ ಮಾಡಿರುವ ರಾಹುಲ್, ಸತತ ಐದು ಬಾರಿ ಸಂಸದರಾಗಿ ಕೆಲಸ ಮಾಡಿದ್ದಾರೆ. ಆರಂಭದಲ್ಲಿ ಅಮೇಥಿ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ರಾಹುಲ್, ಈಗ ವಯ್ನಾಡು ಕ್ಷೇತ್ರ ಸದಸ್ಯರಾಗಿದ್ದಾರೆ. ವಿವಾದಾತ್ಮಕ ಹೇಳಿಕೆಗಳಿಗೆ ಹೆಸರುವಾಸಿಯಾಗಿರುವ ರಾಹುಲ್ ಗಾಂಧಿ, ಇದೇ ಕಾರಣದಿಂದ ಸಂಸದ ಸ್ಥಾನದಿಂದ ಅನರ್ಹರಾಗಿದ್ದರು. ಸದ್ಯ ಕೋರ್ಟ್ನಿಂದ ರಕ್ಷಣೆ ಪಡೆದು, ಮತ್ತೆ ಸದಸ್ಯತ್ವ ಪಡೆದಿದ್ದಾರೆ. ಮನಮೋಹನ್ ಸಿಂಗ್ ಸರ್ಕಾರದ ಸುಗ್ರೀವಾಜ್ಞೆಯನ್ನು ಹರಿದುಹಾಕಿದ್ದು, ರಫೇಲ್ ಹಾಗೂ ಅದಾನಿ ವಿರುದ್ಧ ಪ್ರಕರಣದಲ್ಲಿ ಧ್ವನಿ ಎತ್ತಿದ್ದು, ಎಐಸಿಸಿ ಅಧ್ಯಕ್ಷರಾಗಿ ಲೋಕಸಭೆ ಸೇರಿ ಹಲವು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ಸೋತಿದ್ದು ಹಾಗೂ ಭಾರತ್ ಜೋಡೋ ಯಾತ್ರೆಯು ರಾಹುಲ್ ಅವರ ರಾಜಕೀಯ ಪಥದಲ್ಲಿನ ಪ್ರಮುಖಾಂಶಗಳು. ರಾಹುಲ್ ಗಾಂಧಿ ಎನ್ನುವ ರಾಜಕೀಯ ವ್ಯಕ್ತಿಯು ಕಾಂಗ್ರೆಸ್ ಹಾಗೂ ಬಿಜೆಪಿ ಎರಡೂ ಪಕ್ಷಕ್ಕೂ ಪ್ರಮುಖ ದಾಳವಾಗಿದ್ದಾರೆ. ತಮ್ಮ ಪ್ರಚಾರಗಳಿಗೆ ಇವರಿಬ್ಬರೂ ರಾಹುಲ್ ಅವರನ್ನು ಬಳಸಿಕೊಳ್ಳುವುದು ವಿಶೇಷ.
ತಮಿಳುನಾಡು ಮೈತ್ರಿಕೂಟದಲ್ಲಿ ಪಿಎಂ ಗಾದಿ ಜಟಾಪಟಿ, ಸಿಎಂ ವಿಜಯ್ ಪರ ಟಿವಿಕೆ ಬ್ಯಾಟಿಂಗ್, ಕಾಂಗ್ರೆಸ್ನಿಂದ ರಾಜೀನಾಮೆ ಅಸ್ತ್ರ
2029ರ ಪ್ರಧಾನಿ ಅಭ್ಯರ್ಥಿ ವಿಚಾರವಾಗಿ ತಮಿಳುನಾಡು ಮೈತ್ರಿಕೂಟದಲ್ಲಿ ಬಿಕ್ಕಟ್ಟು ತಲೆದೋರಿದೆ. ರಾಹುಲ್ ಗಾಂಧಿ ಅವರನ್ನು ಬೆಂಬಲಿಸದಿದ್ದರೆ ಟಿವಿಕೆ ಸರ್ಕಾರದಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಕಾಂಗ್ರೆಸ್ ಎಚ್ಚರಿಸಿದೆ. ಸಿಎಂ ವಿಜಯ್ ಅವರನ್ನು ಪಿಎಂ ಅಭ್ಯರ್ಥಿಯನ್ನಾಗಿ ಬಿಂಬಿಸುತ್ತಿರುವ ಟಿವಿಕೆ ವಿರುದ್ಧ ಕಾಂಗ್ರೆಸ್ ಈ ಕಠಿಣ ನಿಲುವು ತಳೆದಿದೆ.
- Nayana Rajeev
- Updated on: Aug 31, 2026
- 1:02 pm
ಮಲ್ಲಿಕಾರ್ಜುನ ಖರ್ಗೆ ಭಾಷಣದ ಸ್ಥಳದ ಶುದ್ಧೀಕರಣ ಕುರಿತ ಹೇಳಿಕೆ, ರಾಹುಲ್ ಗಾಂಧಿ ವಿರುದ್ಧ ಎಫ್ಐಆರ್
ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಉತ್ತರಾಖಂಡ್ನ ಹಲ್ದ್ವಾನಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ಸ್ಥಳವನ್ನು ಬಿಜೆಪಿಯವರು ಶುದ್ಧೀಕರಣ ಮಾಡಿದ್ದನ್ನು ಖಂಡಿಸಿ ರಾಹುಲ್ ನೀಡಿದ್ದ ಹೇಳಿಕೆಗಳು ಪರಿಶಿಷ್ಟ ಜಾತಿ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿವೆ ಎಂದು ಆರೋಪಿಸಲಾಗಿದೆ.
- Nayana Rajeev
- Updated on: Aug 31, 2026
- 7:53 am
ಎಫ್ಐಆರ್ ಬೆನ್ನಲ್ಲೇ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಷಣದ ನಂತರ ಹಲ್ದ್ವಾನಿಯಲ್ಲಿ ನಡೆದ ಸ್ಥಳಶುದ್ಧೀಕರಣ ವಿವಾದಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪರಿಶಿಷ್ಟ ಜಾತಿಗೆ ಸೇರಿದ ಅಮಿತ್ ಕುಮಾರ್ ದೂರಿನ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ. ಇದರ ಬೆನ್ನಲ್ಲೇ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ರಾಹುಲ್ ಗಾಂಧಿ ವಿರುದ್ಧ ಕಿಡಿಕಾರಿದ್ದು, ಬಿಜೆಪಿ ಅಥವಾ ಆರ್ಎಸ್ಎಸ್ಗೆ ಈ ಘಟನೆಯೊಂದಿಗೆ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
- Ganapathi Sharma
- Updated on: Aug 31, 2026
- 7:33 am
‘ಸೋನಿಯಾ ಗಾಂಧಿ ಆತ್ಮಕತೆಯನ್ನು ನಾವು ಪ್ರಕಟಿಸುವುದಿಲ್ಲ’; ಪೆಂಗ್ವಿನ್ ಇಂಡಿಯಾ ಸ್ಪಷ್ಟನೆ
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಕತೆ 'ಬಿಲಾಂಗಿಂಗ್: ಎ ಜರ್ನಿ ಆಫ್ ಲವ್' ಪುಸ್ತಕವನ್ನು ಪೆಂಗ್ವಿನ್ ಇಂಡಿಯಾ ಪ್ರಕಾಶನ ಪ್ರಕಟಿಸುವುದಾಗಿ ಘೋಷಿಸಿತ್ತು. ಆದರೆ, ಈಗ ಆ ಕುರಿತು ಅಧಿಕೃತ ಸ್ಪಷ್ಟನೆ ನೀಡಿರುವ ಪೆಂಗ್ವಿನ್ ಇಂಡಿಯಾ ತಾವು ಸೋನಿಯಾ ಗಾಂಧಿಯವರ ಆತ್ಮಕಥನವನ್ನು ಪ್ರಕಟಿಸುವುದಿಲ್ಲ ಎಂದು ಪ್ರಕಟಣೆ ಹೊರಡಿಸಿದೆ. ಮಾಜಿ ಪ್ರಧಾನಿ ರಾಜೀವ್ ಗಾಂಧಿ ಜನ್ಮ ದಿನೋತ್ಸವದ ವೇಳೆ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ತಮ್ಮ ತಾಯಿ ಸೋನಿಯಾ ಗಾಂಧಿಯವರ ಈ ಆತ್ಮಕತೆಯ ಬಗ್ಗೆ ಮಾಹಿತಿ ನೀಡಿದ್ದರು.
- Sushma Chakre
- Updated on: Aug 28, 2026
- 4:22 pm
ಹೊಸ ಸರ್ಕಾರದ ಮೊದಲ ವಿಕೆಟ್ ಪತನ ಫಿಕ್ಸ್? ರಾಹುಲ್ ಗಾಂಧಿ ಭೇಟಿ ಬಳಿಕ ಡಿಕೆಶಿ ಸ್ಫೋಟಕ ಹೇಳಿಕೆ
ವಾಲ್ಮೀಕಿ ಹಗರಣ ಪ್ರಕರಣ (Valmiki Scam Case) ತೀವ್ರ ಸ್ವರೂಪ ಪಡೆದುಕೊಂಡಿದೆ. ಪ್ರಕರಣದ ಆರೋಪಿ ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲೇಬೇಕೆಂದು ವಿಪಕ್ಷ ಬಿಜೆಪಿ ಆಗ್ರಹಿಸುತ್ತಿದ್ದು, ಈ ಸಂಬಂಧ ರಾಜೀನಾಮೆಗೆ ಒತ್ತಾಯಿ ಈಗಾಲಗೇ ಅಧಿವೇಶನದಲ್ಲೂ ತೀವ್ರ ಪ್ರಮಾಣದಲ್ಲಿ ಪ್ರತಿಭಟನೆ ಮಾಡಿ ಗಮನಸೆಳೆದಿದ್ದು, ಇದೀಗ ರಾಯಚೂರಿನಿಂದ ಬಳ್ಳಾರಿ ತನಕ ಪಾದಯಾತ್ರೆ ಮಾಡಲು ತೀರ್ಮಾನಿಸಿದೆ. ಹೀಗಾಗಿ ನಾಗೇಂದ್ರ ಅವರು ಸಿಎಂ ಡಿಕೆ ಶಿವಕುಮಾರ್ ಭೇಟಿ ಮಾಡಿ ರಾಜೀನಾಮೆ ನೀಡುವ ಮಾತುಗಳನ್ನಾಡಿದ್ದಾರೆ. ಇದನ್ನು ಸ್ವತಃ ಸಿಎ. ಬಹಿರಂಗವಾಗಿಯೇ ಹೇಳಿದ್ದಾರೆ.
- Ramesh B Jawalagera
- Updated on: Aug 27, 2026
- 4:54 pm
ರಾಹುಲ್ ಗಾಂಧಿ ಸೂಚನೆಯಂತೆ ಹಿಮಂತ ಶರ್ಮ ವಿರುದ್ಧ ಸುಳ್ಳು ಆರೋಪ; ಪವನ್ ಖೇರಾ ಬಗ್ಗೆ ಕಿರಣ್ ರಿಜಿಜು ಟೀಕೆ
ಅಸ್ಸಾಂ ವಿಧಾನಸಭೆ ಚುನಾವಣಾ ಪ್ರಚಾರದ ವೇಳೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಮತ್ತು ಅವರ ಪತ್ನಿ ವಿರುದ್ಧ ಮಾಡಿದ ಗಂಭೀರ ಆರೋಪಗಳು ಉಲ್ಟಾ ಹೊಡೆದ ನಂತರ, ಕಾಂಗ್ರೆಸ್ ನಾಯಕ ಪವನ್ ಖೇರಾಗೆ ಬಹುಮಾನವಾಗಿ ರಾಜ್ಯಸಭಾ ಸ್ಥಾನವನ್ನು ನೀಡಲಾಗಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಇಂದು ಆರೋಪಿಸಿದ್ದಾರೆ. ಅರುಣಾಚಲ ಪ್ರದೇಶದ ನದಿಯೊಂದರಲ್ಲಿ ಕಿರಣ್ ರಿಜಿಜು ಈಜುತ್ತಿರುವ ವಿಡಿಯೋ ಹಾಗೂ ರಾಹುಲ್ ಗಾಂಧಿ ವಿರುದ್ಧ ಅವರು ಮಾಡಿದ್ದರೆನ್ನಲಾದ ಟೀಕೆಯ ಬಳಿಕ ಪವನ್ ಖೇರಾ ಮತ್ತು ಕಿರಣ್ ರಿಜಿಜು ನಡುವೆ ಆರಂಭವಾದ ಮಾತಿನ ಚಕಮಕಿಯ ನಡುವೆಯೇ ಈ ಹೊಸ ಆರೋಪ ಕೇಳಿಬಂದಿದೆ.
- Sushma Chakre
- Updated on: Aug 26, 2026
- 7:31 pm
ದೆಹಲಿ ಪೊಲೀಸ್ ಠಾಣೆ ಮುಂದೆ ರಾಹುಲ್ ಗಾಂಧಿ ಧರಣಿ; ಕೊನೆಗೂ ‘ಪೆಲೆಟ್ ಗನ್’ ಪ್ರಕರಣದಲ್ಲಿ ಎಫ್ಐಆರ್ ದಾಖಲು
ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ನವದೆಹಲಿಯ ಸಂಸತ್ ಮಾರ್ಗ ಪೊಲೀಸ್ ಠಾಣೆಯ ಹೊರಗೆ ನಡೆಸಿದ ಸತತ ಧರಣಿಯ ನಂತರ, ದೆಹಲಿ ಪೊಲೀಸರು ಪೆಲೆಟ್ ಗನ್ ಗಾಯದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಎಫ್ಐಆರ್ ದಾಖಲಿಸಿದ್ದಾರೆ. ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರು ಪೆಲೆಟ್ ಗನ್ ದಾಳಿಯಿಂದ ಗಾಯಗೊಂಡಿದ್ದ ಯುವಕನೊಂದಿಗೆ ಸಂಸತ್ ಮಾರ್ಗ ಪೊಲೀಸ್ ಠಾಣೆಯಲ್ಲಿ ಧರಣಿ ನಡೆಸುತ್ತಿರುವಾಗ ಈ ಎಫ್ಐಆರ್ ದಾಖಲಾಗಿದೆ. ಅಪರಿಚಿತ ವ್ಯಕ್ತಿಗಳ ವಿರುದ್ಧ ಈ ಎಫ್ಐಆರ್ ದಾಖಲಿಸಲಾಗಿದೆ.
- Sushma Chakre
- Updated on: Aug 21, 2026
- 8:18 pm
‘ಅರಾಜಕತೆಯ ರಾಜಕೀಯ’; ದೆಹಲಿಯ ಪೊಲೀಸ್ ಠಾಣೆ ಹೊರಗೆ ರಾಹುಲ್ ಗಾಂಧಿಯ ಪ್ರತಿಭಟನೆಗೆ ಬಿಜೆಪಿ ಆಕ್ರೋಶ
ದೆಹಲಿಯ ಪೊಲೀಸ್ ಠಾಣೆ ಎದುರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನಡೆಸಿದ ಪ್ರತಿಭಟನೆಯನ್ನು ಬಿಜೆಪಿ ತೀವ್ರವಾಗಿ ಖಂಡಿಸಿದ್ದು, ಇದನ್ನು "ಅರಾಜಕತೆಯ ರಾಜಕೀಯ" ಎಂದು ಕರೆದಿದೆ. ಜುಲೈ 20ರಂದು ನವದೆಹಲಿಯಲ್ಲಿ ನಡೆದ ಪ್ರತಿಭಟನೆಯ ವೇಳೆ ಸಾಹಿಲ್ ಲೋಚಬ್ ಎಂಬ ಯುವಕನ ಮೇಲೆ ಪೊಲೀಸರು 'ಪೆಲೆಟ್ ಗನ್' ಬಳಸಿ ದಾಳಿ ಮಾಡಿದ್ದಾರೆ, ಇದರಿಂದ ಯುವಕನ ಕಣ್ಣಿಗೆ ತೀವ್ರ ಗಾಯವಾಗಿದೆ ಎಂದು ಕಾಂಗ್ರೆಸ್ ಆರೋಪಿಸಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸುವಂತೆ ಆಗ್ರಹಿಸಿ ರಾಹುಲ್ ಗಾಂಧಿ ದೆಹಲಿಯ ಸಂಸತ್ ಮಾರ್ಗ ಪೊಲೀಸ್ ಠಾಣೆಗೆ ತೆರಳಿ ಧರಣಿ ಸತ್ಯಾಗ್ರಹ ನಡೆಸಿದ್ದರು.
- Sushma Chakre
- Updated on: Aug 21, 2026
- 7:34 pm
ವಿದ್ಯಾರ್ಥಿ ಪ್ರತಿಭಟನೆ ವೇಳೆ ಪೆಲೆಟ್ ಗನ್ ದಾಳಿ: ಸಂತ್ರಸ್ತ ಯುವಕನೊಂದಿಗೆ ಪೊಲೀಸ್ ಠಾಣೆಗೆ ಹೋದ ರಾಹುಲ್ ಗಾಂಧಿ
ನೀಟ್ ಪ್ರತಿಭಟನೆ ವೇಳೆ ಪೆಲೆಟ್ ಗನ್ ದಾಳಿಗೆ ಗಾಯಗೊಂಡಿದ್ದ ವಿದ್ಯಾರ್ಥಿ ಸಾಹಿಲ್ ಲೋಚಬ್ ಅವರೊಂದಿಗೆ ರಾಹುಲ್ ಗಾಂಧಿ ದೆಹಲಿ ಪೊಲೀಸ್ ಠಾಣೆಗೆ ಭೇಟಿ ನೀಡಿದರು. ಗಾಯಾಳು ಸಾಹಿಲ್ ಎಫ್ಐಆರ್ ದಾಖಲಿಸಲು ಪೊಲೀಸರು ನಿರಾಕರಿಸಿದ ಕಾರಣ, ರಾಹುಲ್ ಗಾಂಧಿ ಕಾನೂನು ಕ್ರಮಗಳ ಬಗ್ಗೆ ಪ್ರಶ್ನಿಸಿದರು. ಶಾಂತಿಯುತ ಪ್ರತಿಭಟನೆ ವೇಳೆ ನಡೆದ ಈ ದೌರ್ಜನ್ಯ ಖಂಡಿಸಿದ ಅವರು, ಕೇಂದ್ರ ಸಚಿವರ ರಾಜೀನಾಮೆಗೆ ಆಗ್ರಹಿಸಿದರು. ಸಾಹಿಲ್ ಒಂದು ಕಣ್ಣಿನ ದೃಷ್ಟಿ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ.
- Nayana Rajeev
- Updated on: Aug 21, 2026
- 1:26 pm
‘ರಾಹುಲ್ ಗಾಂಧಿ ರೋಲ್ ಮಾಡೆಲ್’ ಎಂದಿದ್ದಕ್ಕೆ 40 ಲಕ್ಷ ರೂ. ಪ್ಯಾಕೇಜ್ನ ವರನನ್ನೇ ರಿಜೆಕ್ಟ್ ಮಾಡಿದ ಯುವತಿ
ರಾಹುಲ್ ಗಾಂಧಿಯನ್ನು ರೋಲ್ ಮಾಡೆಲ್ ಎಂದು ಭಾವಿಸಿದ್ದ 40 ಲಕ್ಷ ರೂ. ಪ್ಯಾಕೇಜ್ ವರನ ಪ್ರಸ್ತಾಪವನ್ನು ಯುವತಿಯೊಬ್ಬಳು ತಿರಸ್ಕರಿಸಿದ್ದು ವೈರಲ್ ಆಗಿದೆ. ತಾನೊಬ್ಬ ಹೆಮ್ಮೆಯ ರಾಷ್ಟ್ರವಾದಿ ಹಿಂದೂ ಎಂದು ಹೇಳಿಕೊಂಡಿರುವ ಆ ಯುವತಿ, 'ಸೋಲುಣ್ಣುವ ವ್ಯಕ್ತಿಯನ್ನು ಆದರ್ಶವೆಂದು ಭಾವಿಸುವವರನ್ನು ಜೀವನಸಂಗಾತಿಯಾಗಿ ಸ್ವೀಕರಿಸಲು ಸಾಧ್ಯವಿಲ್ಲ' ಎಂದಿದ್ದಾಳೆ. ಈ ಘಟನೆ ರಾಜಕೀಯ ಸಿದ್ಧಾಂತ ಹಾಗೂ ವೈಯಕ್ತಿಕ ಆಯ್ಕೆಗಳ ಕುರಿತು ತೀವ್ರ ಚರ್ಚೆಗೆ ಗ್ರಾಸವಾಗಿದೆ.
- Akshay Pallamajalu
- Updated on: Aug 21, 2026
- 3:53 pm
‘ಅಪ್ಪನ ಸಾವಿನ ಬಳಿಕ ಅಮ್ಮ ಪಟ್ಟ ಕಷ್ಟ ನಮಗಷ್ಟೇ ಗೊತ್ತು’; ಸೋನಿಯಾ ಗಾಂಧಿ ಬಗ್ಗೆ ರಾಹುಲ್ ಗಾಂಧಿ ಭಾವನಾತ್ಮಕ ಬರಹ
ರಾಜೀವ್ ಗಾಂಧಿಯವರ ಜನ್ಮದಿನವಾದ ಇಂದು ತಮ್ಮ ತಾಯಿ ಸೋನಿಯಾ ಗಾಂಧಿಯವರ ಬಗ್ಗೆ ಭಾವನಾತ್ಮಕ ಪೋಸ್ಟ್ ಒಂದನ್ನು ಮಾಡಿರುವ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ತಮ್ಮ ತಂದೆಯಾದ ಮಾಜಿ ಪ್ರಧಾನಿ ರಾಜೀವ್ ಗಾಂಧಿಯ ಮರಣದ ನಂತರ ಸೋನಿಯಾ ಗಾಂಧಿ ಜೀವನದ ಪ್ರತಿಯೊಂದು ಸವಾಲನ್ನು ಯಾವ ರೀತಿ ಧೈರ್ಯ ಮತ್ತು ಘನತೆಯಿಂದ ಎದುರಿಸಿದ್ದಾರೆ ಎಂಬುದನ್ನು ಮೆಲುಕು ಹಾಕಿದ್ದಾರೆ. ರಾಜೀವ್ ಗಾಂಧಿಯವರ 82ನೇ ಜನ್ಮ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಇಂದು ರಾಹುಲ್ ಗಾಂಧಿ ಈ ಪೋಸ್ಟ್ ಮಾಡಿದ್ದಾರೆ. ನವೆಂಬರ್ 10ರಂದು ಬಿಡುಗಡೆಯಾಗಲಿರುವ ತಮ್ಮ ತಾಯಿಯ ಆತ್ಮಚರಿತ್ರೆ 'ಬಿಲಾಂಗಿಂಗ್: ಎ ಜರ್ನಿ ಆಫ್ ಲವ್' ಕುರಿತಾಗಿಯೂ ಅವರು ಪ್ರಸ್ತಾಪಿಸಿದ್ದಾರೆ.
- Sushma Chakre
- Updated on: Aug 20, 2026
- 4:38 pm
ರಾಹುಲ್ ವಿರುದ್ಧ ಅಕ್ರಮ ಆಸ್ತಿ ಪ್ರಕರಣ: ವಿಚಾರಣೆ ಸದ್ಯಕ್ಕೆ ನಿಲ್ಲಿಸುವಂತೆ ಅಲಹಾಬಾದ್ ಹೈಕೋರ್ಟ್ಗೆ ಸುಪ್ರೀಂ ನಿರ್ದೇಶನ
If case is so serious, why probe agencies are silent, asks Supreme Court on Rahul Gandhi assets case: ರಾಹುಲ್ ಗಾಂಧಿ ಅವರ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ತನಿಖಾ ಸಂಸ್ಥೆಗಳಾದ ಸಿಬಿಐ, ಇಡಿ ಅನ್ನು ಕೋರ್ಟ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ರಾಹುಲ್ ವಿರುದ್ಧ ವಿಚಾರಣೆ ನಿಲ್ಲಿಸುವಂತೆ ಅಲಹಾಬಾದ್ ಹೈಕೋರ್ಟ್ಗೆ ನಿರ್ದೇಶನ ನೀಡಿದೆ.
- Vijaya Sarathy SN
- Updated on: Aug 17, 2026
- 6:04 pm