AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rahul Gandhi

Rahul Gandhi

ನೆಹರು ಕುಟುಂಬದ ನಾಲ್ಕನೇ ತಲೆಮಾರಿನ ಐದನೇ ನಾಯಕ ರಾಹುಲ್‌ ಗಾಂಧಿ. ನೆಹರು ಮರಿ ಮೊಮ್ಮಗ, ಇಂದಿರಾರ ಮೊಮ್ಮಗ ಹಾಗೂ ರಾಜೀವ್‌-ಸೋನಿಯಾ ಮಗ ಎನ್ನುವುದು ರಾಹುಲ್‌ಗೆ ಪ್ಲಸ್‌ ಹಾಗೂ ಮೈನಸ್‌ ಎರಡೂ ಹೌದು. ಕಳೆದ ಎರಡು ದಶಕಗಳಿಂದ ಭಾರತದ ರಾಜಕೀಯದಲ್ಲಿ ಸಕ್ರಿಯರಾಗಿರುವ ರಾಹುಲ್‌, ಪ್ರಧಾನಿಯಾಗುವ ಮಹತ್ವಾಕಾಂಕ್ಷೆ ಹೊಂದಿದ್ದಾರೆ. ಎಐಸಿಸಿ ಅಧ್ಯಕ್ಷರಾಗಿಯೂ ಕೆಲಸ ಮಾಡಿರುವ ರಾಹುಲ್‌, ಸತತ ಐದು ಬಾರಿ ಸಂಸದರಾಗಿ ಕೆಲಸ ಮಾಡಿದ್ದಾರೆ. ಆರಂಭದಲ್ಲಿ ಅಮೇಥಿ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ರಾಹುಲ್‌, ಈಗ ವಯ್ನಾಡು ಕ್ಷೇತ್ರ ಸದಸ್ಯರಾಗಿದ್ದಾರೆ. ವಿವಾದಾತ್ಮಕ ಹೇಳಿಕೆಗಳಿಗೆ ಹೆಸರುವಾಸಿಯಾಗಿರುವ ರಾಹುಲ್ ಗಾಂಧಿ, ಇದೇ ಕಾರಣದಿಂದ ಸಂಸದ ಸ್ಥಾನದಿಂದ ಅನರ್ಹರಾಗಿದ್ದರು. ಸದ್ಯ ಕೋರ್ಟ್‌ನಿಂದ ರಕ್ಷಣೆ ಪಡೆದು, ಮತ್ತೆ ಸದಸ್ಯತ್ವ ಪಡೆದಿದ್ದಾರೆ. ಮನಮೋಹನ್‌ ಸಿಂಗ್‌ ಸರ್ಕಾರದ ಸುಗ್ರೀವಾಜ್ಞೆಯನ್ನು ಹರಿದುಹಾಕಿದ್ದು, ರಫೇಲ್‌ ಹಾಗೂ ಅದಾನಿ ವಿರುದ್ಧ ಪ್ರಕರಣದಲ್ಲಿ ಧ್ವನಿ ಎತ್ತಿದ್ದು, ಎಐಸಿಸಿ ಅಧ್ಯಕ್ಷರಾಗಿ ಲೋಕಸಭೆ ಸೇರಿ ಹಲವು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ಸೋತಿದ್ದು ಹಾಗೂ ಭಾರತ್‌ ಜೋಡೋ ಯಾತ್ರೆಯು ರಾಹುಲ್‌ ಅವರ ರಾಜಕೀಯ ಪಥದಲ್ಲಿನ ಪ್ರಮುಖಾಂಶಗಳು. ರಾಹುಲ್‌ ಗಾಂಧಿ ಎನ್ನುವ ರಾಜಕೀಯ ವ್ಯಕ್ತಿಯು ಕಾಂಗ್ರೆಸ್‌ ಹಾಗೂ ಬಿಜೆಪಿ ಎರಡೂ ಪಕ್ಷಕ್ಕೂ ಪ್ರಮುಖ ದಾಳವಾಗಿದ್ದಾರೆ. ತಮ್ಮ ಪ್ರಚಾರಗಳಿಗೆ ಇವರಿಬ್ಬರೂ ರಾಹುಲ್‌ ಅವರನ್ನು ಬಳಸಿಕೊಳ್ಳುವುದು ವಿಶೇಷ.

ಇನ್ನೂ ಹೆಚ್ಚು ಓದಿ

ರಾಜ್ಯದಲ್ಲಿ ಜಾತಿ ಜನಗಣತಿ ಮರು ಸರ್ವೇ: ಹೈಕಮಾಂಡ್ ಸಭೆ ಬಳಿಕ ಸಿದ್ದರಾಮಯ್ಯ ಮಹತ್ವದ ಘೋಷಣೆ

ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ಈಗ ರಾಜ್ಯ ಕಾಂಗ್ರೆಸ್‌ಗೆ ಯಮಯಾತನೆ ತಂದಿಟ್ಟಿದೆ. 11ಮಂದಿ ಸಾವಿನಿಂದಾಗಿ ರಾಷ್ಟ್ರಮಟ್ಟದಲ್ಲಿ ಟೀಕೆಗೆ ಗುರಿಯಾಗಿದ್ದು, ಇದು ಕಾಂಗ್ರೆಸ್ ಹೈಕಮಾಂಡ್ ಅಂಗಳಕ್ಕೆ ಹೋಗಿದೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್​ ಅವರನ್ನು ಹೈಕಮಾಂಡ್​ ದೆಹಲಿಗೆ ಕರೆಯಿಸಿಕೊಂಡು ಘಟನೆಯ ವಿವರ ಕೇಳಿದೆ. ಅಲ್ಲದೇ ರಾಹುಲ್ ಗಾಂಧಿಯವರ ಮಹತ್ವಕಾಂಕ್ಷೆ ಜಾತಿ ಗಣತಿ ವರದಿ ಬಗ್ಗೆಯೂ ಸಹ ಸಭೆಯಲ್ಲಿ ಚರ್ಚೆ ನಡೆದಿದೆ. ಸಭೆಯಲ್ಲಿ ಏನೆಲ್ಲಾ ಆಯ್ತು? ಸಿಎಂ ಹೇಳಿದ್ದೇನು ಎನ್ನುವ ವಿವರ ಇಲ್ಲಿದೆ.

ಪ್ರಜಾಪ್ರಭುತ್ವಕ್ಕೆ ಸತ್ಯ ಬೇಕೇ ವಿನಃ ನಾಟಕವಲ್ಲ; ರಾಹುಲ್ ಗಾಂಧಿ ವಿರುದ್ಧ ಜೆಪಿ ನಡ್ಡಾ ವಾಗ್ದಾಳಿ

ಬಿಜೆಪಿ ನಾಯಕ ಜೆಪಿ ನಡ್ಡಾ ಇಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗಳಿಗೆ ಸಂಬಂಧಿಸಿದಂತೆ ಅವರ ಇತ್ತೀಚಿನ "ಮ್ಯಾಚ್ ಫಿಕ್ಸಿಂಗ್" ಹೇಳಿಕೆಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಹುಲ್ ಗಾಂಧಿಯವರ ಆರೋಪಕ್ಕೆ ಪ್ರತಿಕ್ರಿಯಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಪ್ರಜಾಪ್ರಭುತ್ವಕ್ಕೆ ನಾಟಕವಲ್ಲ ಸತ್ಯ ಬೇಕು ಎಂದು ಹೇಳಿದ್ದಾರೆ.

ಮುಖಕ್ಕೆ ಮಸಿ ಬಳಿಯುತ್ತೇವೆ, ಕಲ್ಲು ಎಸೆಯುತ್ತೇವೆ; ಸಾವರ್ಕರ್ ಕುರಿತ ಹೇಳಿಕೆಗೆ ರಾಹುಲ್ ಗಾಂಧಿಗೆ ಶಿವಸೇನೆ ನಾಯಕ ಬೆದರಿಕೆ

ಶಿವಸೇನೆ ಉದ್ಧವ್ ಠಾಕ್ರೆ ಬಣದ ನಾಯಕ ಬಾಲಾ ದರಾದೆ ಅವರ ಹೇಳಿಕೆಯನ್ನು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ಹರ್ಷವರ್ಧನ್ ಸಪ್ಕಲ್ ಟೀಕಿಸಿದ್ದಾರೆ. ಅವರು ವಿ.ಡಿ ಸಾವರ್ಕರ್ ಅವರ ಬಗ್ಗೆ ರಾಹುಲ್ ಗಾಂಧಿಯ ನೀಡಿದ ಹೇಳಿಕೆಗಳು ಸಾರ್ವಜನಿಕವಾಗಿ ಲಭ್ಯವಿರುವ ಐತಿಹಾಸಿಕ ದಾಖಲೆಗಳನ್ನು ಆಧರಿಸಿವೆ ಎಂದು ಹೇಳಿದ್ದಾರೆ.

ಭಾರತದ ಸಶಸ್ತ್ರ ಪಡೆಗಳ ದುರ್ಬಲಗೊಳಿಸಲು ಯತ್ನ, ರಾಹುಲ್ ಯಾರ ಪರ ಮಾತಾಡ್ತಿದ್ದಾರೆ: ಕಿಶನ್ ರೆಡ್ಡಿ ಪ್ರಶ್ನೆ

ಸಂಸದ ರಾಹುಲ್ ಗಾಂಧಿ ಯಾರ ಪರವಾಗಿ ಮಾತನಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಕಿಶನ್ ರೆಡ್ಡಿ ಪ್ರಶ್ನೆ ಮಾಡಿದ್ದಾರೆ. ಬೇರೆ ದೇಶಗಳ ಡ್ರೋನ್​ಗಳನ್ನು ಹೊಗಳುವುದರಿಂದ ಹಿಡಿದು ರಫೇಲ್ ಒಪ್ಪಂದವನ್ನು ಹಗರಣ ಎಂದು ಕರೆಯುವವರೆಗೆ ಅಗ್ನಿವೀರರನ್ನು ಟೀಕಿಸುವುದರಿಂದ ಹಿಡಿದು ನಮ್ಮ ಮೇಕ್ ಇನ್ ಇಂಡಿಯಾ ಪ್ರಯತ್ನಗಳಿಗೆ ಹಾನಿ ಮಾಡುವವರೆಗೆ, ರಾಹುಲ್ ಗಾಂಧಿ ಎಂದಿಗೂ ಭಾರತದ ಪರವಾಗಿ ಮಾತನಾಡಿಲ್ಲ ಎಂದಿದ್ದಾರೆ.

ಕ್ಯಾಮೆರಾಗಳ ಮುಂದೆ ಮಾತ್ರ ಏಕೆ ನಿಮ್ಮ ರಕ್ತ ಕುದಿಯುತ್ತದೆ?; ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಟುವಾದ ವಾಗ್ದಾಳಿ ನಡೆಸಿದ್ದಾರೆ. ‘ನಿಮ್ಮ ರಕ್ತ ಕ್ಯಾಮೆರಾಗಳ ಮುಂದೆ ಮಾತ್ರ ಕುದಿಯುವುದೇಕೆ?’ ಎಂದು ರಾಹುಲ್ ಗಾಂಧಿ ಪ್ರಶ್ನೆ ಮಾಡಿದ್ದಾರೆ. ಪಾಕಿಸ್ತಾನ, ಭಯೋತ್ಪಾದನೆ ಮತ್ತು ಡೊನಾಲ್ಡ್ ಟ್ರಂಪ್ ಬಗ್ಗೆ ರಾಹುಲ್ ಗಾಂಧಿ ಪ್ರಧಾನಿ ಮೋದಿ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದು, ಪಾಕಿಸ್ತಾನದ ವಿರುದ್ಧದ ಮಿಲಿಟರಿ ಯುದ್ಧವನ್ನು ನಿಲ್ಲಿಸಲು ಒಪ್ಪುವ ಮೂಲಕ ಪ್ರಧಾನಿ ನರೇಂದ್ರ ಮೋದಿ ದೇಶದ ಪ್ರತಿಷ್ಠೆಯ ಜೊತೆ ರಾಜಿ ಮಾಡಿಕೊಂಡಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

National Herald Case: ರಾಜೀವ್​ ಗಾಂಧಿ ಪುಣ್ಯ ತಿಥಿಯಂದೇ ಸೋನಿಯಾ ಗಾಂಧಿ, ರಾಹುಲ್​ಗೆ ಇಡಿ ಶಾಕ್

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ವಿರುದ್ಧ ಇಡಿ ದೊಡ್ಡ ಆರೋಪ ಮಾಡಿದೆ. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ 142 ಕೋಟಿ ರೂಪಾಯಿ ಮೌಲ್ಯದ ಅಪರಾಧ ಹಣವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ತನಿಖಾ ಸಂಸ್ಥೆ ಇಡಿ ಮುಕ್ತ ನ್ಯಾಯಾಲಯಕ್ಕೆ ತಿಳಿಸಿದೆ. ನ್ಯಾಷನಲ್ ಹೆರಾಲ್ಡ್​ ಪ್ರಕರಣದಲ್ಲಿ ಸೋನಿಯಾ ಗಾಂಧಿ, ರಾಹುಲ್ ಹಾಗೂ ಇತರರ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಾಗಿದೆ ಎಂದು ಜಾರಿ ನಿರ್ದೇಶನಾಲಯ ದೆಹಲಿ ನ್ಯಾಯಾಲಯಕ್ಕೆ ತಿಳಿಸಿದೆ.

ರಾಹುಲ್ ಗಾಂಧಿ ಆಧುನಿಕ ಯುಗದ ಮೀರ್ ಜಾಫರ್; ಬಿಜೆಪಿಯಿಂದ ತೀವ್ರ ವಾಗ್ದಾಳಿ

ಆಪರೇಷನ್ ಸಿಂಧೂರದಲ್ಲಿ ಭಾರತೀಯ ಸೇನೆಯ ಎಷ್ಟು ಯುದ್ಧ ವಿಮಾನಗಳು ನಾಶವಾಗಿವೆ? ಎಂದು ಬೆಂಬಿಡದೆ ಕೇಂದ್ರ ಸರ್ಕಾರಕ್ಕೆ ಪ್ರಶ್ನೆ ಕೇಳುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪಾಕಿಸ್ತಾನದಲ್ಲಿ ಹೀರೋ ಆಗಿದ್ದಾರೆ. ಪಾಕಿಸ್ತಾನದ ವಕ್ತಾರನಂತೆ ಭಾರತಕ್ಕೆ ಡ್ಯಾಮೇಜಿಂಗ್ ಹೇಳಿಕೆ ನೀಡುತ್ತಿರುವ ರಾಹುಲ್ ಗಾಂಧಿ ಆಧುನಿಕ ಯುಗದ ಮೀರ್ ಜಾಫರ್ ಎಂದು ಬಿಜೆಪಿ ಟೀಕಿಸಿದೆ. ಅಲ್ಲದೆ, ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಹಾಗೂ ರಾಹುಲ್ ಗಾಂಧಿಯ ಅರ್ಧ ಮುಖದ ಫೋಟೋ ಹಂಚಿಕೊಂಡು ಬಿಜೆಪಿ ನಾಯಕರು ಸೋಷಿಯಲ್ ಮೀಡಿಯಾದಲ್ಲಿ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ಸಾಧನಾ ಸಮಾವೇಶ: ಶಾಶ್ವತ ಹಕ್ಕು ಪತ್ರ ವಿತರಿಸಿದ ಸಂದರ್ಭವನ್ನು ಐತಿಹಾಸಿಕವೆಂದ ಕೃಷ್ಣ ಭೈರೇಗೌಡ

ಅಧಿಕಾರಕ್ಕೆ ಬಂದು ಎರಡು ವರ್ಷಗಳ ಅವಧಿಯಲ್ಲಿ ಸರ್ಕಾರದ ಸಾಧನೆಗಳನ್ನು ವಿವರಿಸುವ 5 ಪುಸ್ತಕಗಳನ್ನು ಇಂದು ಬಿಡುಗಡೆ ಮಾಡಲಾಯಿತು. ಸರ್ಕಾರವಲ್ಲದೆ, ಕಂದಾಯ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಾಭಿವೃದ್ಧಿ ಇಲಾಖೆಯ ಸಾಧನೆ ವಿವರಿಸುವ ಪುಸ್ತಕಗಳನ್ನು ಬಿಡುಗಡೆ ಮಾಡಲಾಯಿತು. ಮಲ್ಲಿಕಾರ್ಜನ ಖರ್ಗೆ, ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಮತ್ತು ರಂದೀಪ್ ಸುರ್ಜೆವಾಲಾ ಪುಸ್ತಕಗಳನ್ನು ಬಿಡುಗಡೆ ಮಾಡಿದರು.

ಕಾಂಗ್ರೆಸ್ ಸಾಧನಾ ಸಮಾವೇಶ: ರಾಹುಲ್ ಗಾಂಧಿಯ ಗಮನಸೆಳೆಯುವಲ್ಲಿ ವಿಫಲರಾದ ಕೃಷ್ಣ ಭೈರೇಗೌಡ

ವೇದಿಕೆಯ ಪೋಡಿಯಂ ಮುಂದೆ ನಿಂತು ಮಾತಾಡುತ್ತಿದ್ದ ಕೃಷ್ಣ ಭೈರೇಗೌಡ, ದಾಖಲೆಗಳಿಲ್ಲದ ಗ್ರಾಮಗಳಿಗೆ ಶಾಶ್ವತ ಪರಿಹಾರ ಒದಗಿಸುವುದು ರಾಹುಲ್ ಗಾಂಧಿ ಕಂಡ ಕನಸಾಗಿತ್ತು, ಹಾಗಾಗಿ ಅವರ ಮೂಲಕವೇ 1,11,111 ಜನರಿಗೆ ಡಿಜಿಟಲ್ ಹಕ್ಕುಪತ್ರಗಳನ್ನು ವಿತರಿಸಲಾಗುತ್ತಿದೆ ಎನ್ನುತ್ತಾರೆ. ಅವರು ಇದನ್ನು ಹೇಳುವಾಗ ರಾಹುಲ್ ಗಮನ ಸೆಳೆಯುವ ಪ್ರಯತ್ನ ಮಾಡುತ್ತಾರಾದರೂ ದೆಹಲಿ ನಾಯಕ ಮಾತ್ರ ಮಾತಿನಲ್ಲಿ ಬ್ಯೂಸಿ.

ಆಪರೇಷನ್ ಸಿಂಧೂರದ ಬಗ್ಗೆ ಮತ್ತೊಮ್ಮೆ ಜೈಶಂಕರ್ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ; ಪಾಕಿಸ್ತಾನದಲ್ಲಿ ಅದೇ ಹೆಡ್​ಲೈನ್!

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರನ್ನು ಮತ್ತೊಮ್ಮೆ ಗುರಿಯಾಗಿಸಿಕೊಂಡಿದ್ದಾರೆ. ಆಪರೇಷನ್ ಸಿಂಧೂರ್ ಬಗ್ಗೆ ಕೇಂದ್ರ ಸರ್ಕಾರ ಆರಂಭದಲ್ಲೇ ಪಾಕಿಸ್ತಾನಕ್ಕೆ ಮಾಹಿತಿ ನೀಡಿದ್ದರ ಬಗ್ಗೆ ರಾಹುಲ್ ಗಾಂಧಿ ಮತ್ತೊಮ್ಮೆ ಜೈಶಂಕರ್ ಅವರನ್ನು ಪ್ರಶ್ನಿಸಿದ್ದಾರೆ. ದೇಶಕ್ಕೆ ಸತ್ಯ ಗೊತ್ತಾಗಬೇಕಿದೆ ಎಂದು ಅವರು ಆಗ್ರಹಿಸಿದ್ದಾರೆ. ಇದಕ್ಕೆ ಬಿಜೆಪಿ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದು, ವಿನಾಕಾರಣ ರಾಹುಲ್ ಗಾಂಧಿ ಸಚಿವ ಜೈಶಂಕರ್ ಅವರ ಹೇಳಿಕೆಗಳನ್ನು ಪದೇ ಪದೇ ತಪ್ಪಾಗಿ ಬಿಂಬಿಸುತ್ತಿದ್ದಾರೆ. ರಾಹುಲ್ ಗಾಂಧಿ ಕೆಲವು ಶಕ್ತಿಗಳ ಆಜ್ಞೆಯ ಮೇರೆಗೆ ಕಾರ್ಯನಿರ್ವಹಿಸುತ್ತಿರುವಂತೆ ತೋರುತ್ತಿದೆ ಎಂದಿದ್ದಾರೆ.

ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ: ಸ್ಫೋಟಕ ಅಂಶ ಬಿಚ್ಚಿಟ್ಟ ಲಾಯರ್
ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ: ಸ್ಫೋಟಕ ಅಂಶ ಬಿಚ್ಚಿಟ್ಟ ಲಾಯರ್
Ahmedabad Plane Crash: ವೈದ್ಯ ಪ್ರತೀಕ್ ನೆನೆದು ಸ್ನೇಹಿತ ಭಾವುಕ
Ahmedabad Plane Crash: ವೈದ್ಯ ಪ್ರತೀಕ್ ನೆನೆದು ಸ್ನೇಹಿತ ಭಾವುಕ
ಭವಿಷ್ಯ ನುಡಿದ ಎರಡು ತಿಂಗಳು ನಂತರ ಭಾರತದಲ್ಲಿ ವಿಮಾನ ದುರ್ಘಟನೆ ಜರುಗಿದೆ
ಭವಿಷ್ಯ ನುಡಿದ ಎರಡು ತಿಂಗಳು ನಂತರ ಭಾರತದಲ್ಲಿ ವಿಮಾನ ದುರ್ಘಟನೆ ಜರುಗಿದೆ
ಪ್ರತಾಪ್​ಗೆ ಗಗನನ ತಬ್ಬಿಕೊಳ್ಳೋ ಆಸೆ; ವೇದಿಕೆ ಮೇಲೆ ಹೇಳಿಕೊಂಡ ಸ್ಪರ್ಧಿ
ಪ್ರತಾಪ್​ಗೆ ಗಗನನ ತಬ್ಬಿಕೊಳ್ಳೋ ಆಸೆ; ವೇದಿಕೆ ಮೇಲೆ ಹೇಳಿಕೊಂಡ ಸ್ಪರ್ಧಿ
ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ
ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ
ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್
ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ
ಸಿದ್ದರಾಮಯ್ಯ ಮನೆ ಸಮೀಪವೇ ಕಳ್ಳತನ: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ
ಸಿದ್ದರಾಮಯ್ಯ ಮನೆ ಸಮೀಪವೇ ಕಳ್ಳತನ: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ