Rahul Gandhi
ನೆಹರು ಕುಟುಂಬದ ನಾಲ್ಕನೇ ತಲೆಮಾರಿನ ಐದನೇ ನಾಯಕ ರಾಹುಲ್ ಗಾಂಧಿ. ನೆಹರು ಮರಿ ಮೊಮ್ಮಗ, ಇಂದಿರಾರ ಮೊಮ್ಮಗ ಹಾಗೂ ರಾಜೀವ್-ಸೋನಿಯಾ ಮಗ ಎನ್ನುವುದು ರಾಹುಲ್ಗೆ ಪ್ಲಸ್ ಹಾಗೂ ಮೈನಸ್ ಎರಡೂ ಹೌದು. ಕಳೆದ ಎರಡು ದಶಕಗಳಿಂದ ಭಾರತದ ರಾಜಕೀಯದಲ್ಲಿ ಸಕ್ರಿಯರಾಗಿರುವ ರಾಹುಲ್, ಪ್ರಧಾನಿಯಾಗುವ ಮಹತ್ವಾಕಾಂಕ್ಷೆ ಹೊಂದಿದ್ದಾರೆ. ಎಐಸಿಸಿ ಅಧ್ಯಕ್ಷರಾಗಿಯೂ ಕೆಲಸ ಮಾಡಿರುವ ರಾಹುಲ್, ಸತತ ಐದು ಬಾರಿ ಸಂಸದರಾಗಿ ಕೆಲಸ ಮಾಡಿದ್ದಾರೆ. ಆರಂಭದಲ್ಲಿ ಅಮೇಥಿ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ರಾಹುಲ್, ಈಗ ವಯ್ನಾಡು ಕ್ಷೇತ್ರ ಸದಸ್ಯರಾಗಿದ್ದಾರೆ. ವಿವಾದಾತ್ಮಕ ಹೇಳಿಕೆಗಳಿಗೆ ಹೆಸರುವಾಸಿಯಾಗಿರುವ ರಾಹುಲ್ ಗಾಂಧಿ, ಇದೇ ಕಾರಣದಿಂದ ಸಂಸದ ಸ್ಥಾನದಿಂದ ಅನರ್ಹರಾಗಿದ್ದರು. ಸದ್ಯ ಕೋರ್ಟ್ನಿಂದ ರಕ್ಷಣೆ ಪಡೆದು, ಮತ್ತೆ ಸದಸ್ಯತ್ವ ಪಡೆದಿದ್ದಾರೆ. ಮನಮೋಹನ್ ಸಿಂಗ್ ಸರ್ಕಾರದ ಸುಗ್ರೀವಾಜ್ಞೆಯನ್ನು ಹರಿದುಹಾಕಿದ್ದು, ರಫೇಲ್ ಹಾಗೂ ಅದಾನಿ ವಿರುದ್ಧ ಪ್ರಕರಣದಲ್ಲಿ ಧ್ವನಿ ಎತ್ತಿದ್ದು, ಎಐಸಿಸಿ ಅಧ್ಯಕ್ಷರಾಗಿ ಲೋಕಸಭೆ ಸೇರಿ ಹಲವು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ಸೋತಿದ್ದು ಹಾಗೂ ಭಾರತ್ ಜೋಡೋ ಯಾತ್ರೆಯು ರಾಹುಲ್ ಅವರ ರಾಜಕೀಯ ಪಥದಲ್ಲಿನ ಪ್ರಮುಖಾಂಶಗಳು. ರಾಹುಲ್ ಗಾಂಧಿ ಎನ್ನುವ ರಾಜಕೀಯ ವ್ಯಕ್ತಿಯು ಕಾಂಗ್ರೆಸ್ ಹಾಗೂ ಬಿಜೆಪಿ ಎರಡೂ ಪಕ್ಷಕ್ಕೂ ಪ್ರಮುಖ ದಾಳವಾಗಿದ್ದಾರೆ. ತಮ್ಮ ಪ್ರಚಾರಗಳಿಗೆ ಇವರಿಬ್ಬರೂ ರಾಹುಲ್ ಅವರನ್ನು ಬಳಸಿಕೊಳ್ಳುವುದು ವಿಶೇಷ.
ಶಿವರಾಜ್ ಸಿಂಗ್ ಚೌಹಾಣ್ ಮಗನ ವಿರುದ್ಧದ ಹೇಳಿಕೆಗೆ ಕ್ಷಮೆ ಕೇಳಿದ ರಾಹುಲ್ ಗಾಂಧಿ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ ತೀಕ್ಷ್ಣ ರಾಜಕೀಯ ಹೇಳಿಕೆಗಳು ಹಾಗೂ ವಾಗ್ದಾಳಿಗಳ ಮೂಲಕ ಸದಾ ಸುದ್ದಿಯಲ್ಲಿರುತ್ತಾರೆ. ಆದರೆ, ಕೆಲವು ಸಂದರ್ಭಗಳಲ್ಲಿ ಅವರ ಹೇಳಿಕೆಗಳು ತೀವ್ರ ಕಾನೂನು ಬಿಕ್ಕಟ್ಟು ಹಾಗೂ ರಾಜಕೀಯ ವಿವಾದಗಳಿಗೆ ಕಾರಣವಾಗಿವೆ. ಇಂತಹ ಸಂದರ್ಭಗಳಲ್ಲಿ ಅವರು ಸುಪ್ರೀಂ ಕೋರ್ಟ್ ಸೇರಿದಂತೆ ನ್ಯಾಯಾಲಯಗಳಲ್ಲಿ ಅಧಿಕೃತವಾಗಿ ಕ್ಷಮೆಯಾಚಿಸಬೇಕಾಗಿ ಬಂದಿತ್ತು. ಇದೀಗ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರ ಮಗನ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕೆ ರಾಹುಲ್ ಗಾಂಧಿ ಕ್ಷಮೆ ಕೋರಿದ್ದಾರೆ. ಇದೇ ರೀತಿ ಈ ಹಿಂದೆ ಯಾವ ಪ್ರಕರಣಗಳಲ್ಲಿ ರಾಹುಲ್ ಗಾಂಧಿ ಕ್ಷಮೆಯಾಚನೆ ಮಾಡಿದ್ದರು ಎಂಬ ವಿವರಗಳು ಇಲ್ಲಿವೆ.
- Sushma Chakre
- Updated on: Jun 25, 2026
- 7:50 pm
ಭಯೋತ್ಪಾದಕ ಎಂಬ ಪದ ಬಳಸಿದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ನರೇಂದ್ರ ಮೋದಿ ಸರ್ಕಾರ ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳ ವಿರುದ್ಧ ಸಚಿವರು ಮಾಡಿದ್ದಾರೆ ಎನ್ನಲಾದ ಹೇಳಿಕೆಗಳನ್ನು ಉಲ್ಲೇಖಿಸಿರುವ ಅವರು, ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳನ್ನು ಬಗೆಹರಿಸುವ ಬದಲಿಗೆ, ನ್ಯಾಯಸಮ್ಮತವಾದ ಪರೀಕ್ಷೆಗಳು ಮತ್ತು ಸುರಕ್ಷಿತ ಭವಿಷ್ಯಕ್ಕಾಗಿ ಒತ್ತಾಯಿಸುತ್ತಿರುವ ಯುವಕರನ್ನು ಕೇಂದ್ರ ಸರ್ಕಾರವು ಭಯೋತ್ಪಾದಕರು ಎಂದು ಬಿಂಬಿಸುತ್ತಿದೆ ಎಂದು ಆರೋಪಿಸಿದ್ದಾರೆ.
- Sushma Chakre
- Updated on: Jun 25, 2026
- 3:27 pm
‘ರಫೇಲ್ ಯುದ್ಧ ವಿಮಾನಗಳ ಬಗ್ಗೆ ಪಾಕಿಸ್ತಾನದ ಸುಳ್ಳು ಬಯಲು’; ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ವಾಗ್ದಾಳಿ
ರಾಹುಲ್ ಗಾಂಧಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕರಾಗಿ ಜವಾಬ್ದಾರಿಯುತ ಸ್ಥಾನದಲ್ಲಿದ್ದಾರೆ. ರಾಷ್ಟ್ರೀಯ ಭದ್ರತೆಯ ವಿಷಯದಲ್ಲಿ ರಾಜಕೀಯವನ್ನು ಬದಿಗಿಟ್ಟು ದೇಶದೊಂದಿಗೆ ನಿಲ್ಲಬೇಕಾದ ಅವರು, ಅಂತರರಾಷ್ಟ್ರೀಯ ವೇದಿಕೆಗಳಲ್ಲಿ ಭಾರತದ ಇಮೇಜ್ಗೆ ಧಕ್ಕೆ ತರುವಂತಹ ಮತ್ತು ಶತ್ರು ದೇಶಗಳ ನಿರೂಪಣೆಗಳನ್ನು ಪುಷ್ಟೀಕರಿಸುವಂತಹ ಹೇಳಿಕೆಗಳನ್ನು ನೀಡುವುದು ಖಂಡನೀಯ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.
- Sushma Chakre
- Updated on: Jun 24, 2026
- 8:18 pm
ರಾಹುಲ್ ಗಾಂಧಿಯನ್ನು ಪರಶುರಾಮನ ಅವತಾರದಲ್ಲಿ ಚಿತ್ರಿಸಿ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರ 56ನೇ ಜನ್ಮದಿನದ ಅಂಗವಾಗಿ, ಉತ್ತರ ಪ್ರದೇಶದ ವಾರಾಣಸಿಯಲ್ಲಿ ಯೂತ್ ಕಾಂಗ್ರೆಸ್ ಕಾರ್ಯಕರ್ತರು ವಿಶೇಷವಾಗಿ ಹುಟ್ಟುಹಬ್ಬ ಆಚರಿಸಿದ್ದಾರೆ. ರಾಹುಲ್ ಗಾಂಧಿ ಜನ್ಮದಿನದ ಪ್ರಯುಕ್ತ ಅವರನ್ನು 'ಪರಶುರಾಮ'ನ ಅವತಾರದಲ್ಲಿ ಬಿಂಬಿಸಿ ಗಂಗಾನದಿಯಲ್ಲಿ ಕ್ಷೀರಾಭಿಷೇಕ ಮಾಡಿದ್ದಾರೆ. ಈ ಪೋಸ್ಟರ್ನಲ್ಲಿ ರಾಹುಲ್ ಗಾಂಧಿ ಒಂದು ಕೈಯಲ್ಲಿ ಕೊಡಲಿಯನ್ನು ಮತ್ತು ಇನ್ನೊಂದು ಕೈಯಲ್ಲಿ ಭಾರತದ ಸಂವಿಧಾನವನ್ನು ಹಿಡಿದಿರುವುದನ್ನು ಚಿತ್ರಿಸಲಾಗಿತ್ತು.
- Sushma Chakre
- Updated on: Jun 19, 2026
- 7:36 pm
ಕೇರಳ, ತಮಿಳುನಾಡು ಮಾದರಿ: ಡಿಕೆಶಿ ಸಂಪುಟದಲ್ಲಿ 3-4 ಯುವ ಮುಖಗಳಿಗೆ ಮಣೆ ಸಾಧ್ಯತೆ
ಕರ್ನಾಟಕದಲ್ಲಿ ಸಚಿವ ಸಂಪುಟ ವಿಸ್ತರಣೆ ಮತ್ತು ಖಾತೆ ಬದಲಾವಣೆಯ ಕಸರತ್ತು ಜೋರಾಗಿದ್ದು, ಸಿಎಂ ಡಿಕೆ ಶಿವಕುಮಾರ್ ಹಾಗೂ ಡಿಸಿಎಂ ಡಾ. ಜಿ ಪರಮೇಶ್ವರ್ ದೆಹಲಿ ತಲುಪಿದ್ದಾರೆ. ಭರತ್ ರೆಡ್ಡಿ, ಪ್ರದೀಪ್ ಈಶ್ವರ್ ಸೇರಿದಂತೆ ಯುವ ಮುಖಗಳಿಗೆ ಮಣೆ ಹಾಕುವ ಬಗ್ಗೆಯೂ ಚರ್ಚೆ ನಡೆಯುತ್ತಿದೆ. ಕೇರಳ, ತಮಿಳುನಾಡು ರೀತಿ ಹೊಸ ಹಾಗೂ ಯುವ ಮುಖಗಳಿಗೆ ಮಣೆ ಹಾಕುವ ಸಾಧ್ಯತೆ ದಟ್ಟವಾಗಿದೆ.
- Prasanna Gaonkar
- Updated on: Jun 11, 2026
- 7:12 am
ಕಾಂಗ್ರೆಸ್ ಜೊತೆ ವಿಲೀನವಾಗುತ್ತಾ ಟಿಎಂಸಿ? ಮಮತಾ ಬ್ಯಾನರ್ಜಿಗೆ ದೊಡ್ಡ ಹುದ್ದೆಯ ಆಫರ್
ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಪಕ್ಷದಲ್ಲಿ ಭುಗಿಲೆದ್ದ ಭಿನ್ನಮತದ ಹಿನ್ನೆಲೆಯಲ್ಲಿ ಟಿಎಂಸಿ ಸಂಸದರು ಮತ್ತು ನಾಯಕರು ಸಾಲು ಸಾಲು ರಾಜೀನಾಮೆ ನೀಡುತ್ತಿದ್ದಾರೆ. ಇದರ ಬೆನ್ನಲ್ಲೇ ಟಿಎಂಸಿ ಕಾಂಗ್ರೆಸ್ ಜೊತೆ ವಿಲೀನವಾಗಲಿದೆ ಎಂಬ ಸುದ್ದಿಗಳೂ ಹರಿದಾಡುತ್ತಿವೆ. ಮಮತಾ ಬ್ಯಾನರ್ಜಿ 2 ದಿನಗಳಿಂದ ಕಾಂಗ್ರೆಸ್ ನಾಯಕರೊಂದಿಗೆ ಸಾಲು ಸಾಲು ಮಾತುಕತೆ ನಡೆಸುತ್ತಿರುವುದು ಈ ವದಂತಿಗೆ ಇನ್ನಷ್ಟು ಪುಷ್ಠಿ ನೀಡಿದೆ. ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳಲು ಕಾಂಗ್ರೆಸ್ ಜೊತೆ ಟಿಎಂಸಿ ವಿಲೀನವಾಗುತ್ತಾ? ಎಂಬ ಕುತೂಹಲ ಮೂಡಿದೆ.
- Sushma Chakre
- Updated on: Jun 10, 2026
- 5:27 pm
ಆತ್ಮನಿರ್ಭರ ಭಾರತವನ್ನು ಲೇವಡಿ ಮಾಡಿದ್ದಕ್ಕೆ ರಾಹುಲ್ ಗಾಂಧಿ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ
ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ನ ಸೂರತ್ನಲ್ಲಿ ನಡೆದ ಬೃಹತ್ ಸಾರ್ವಜನಿಕ ರ್ಯಾಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ವಿರೋಧ ಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ದೇಶದಲ್ಲಿರುವ ಕೆಲವು ನಿರಾಶಾವಾದಿಗಳು ಸದಾ ಸರ್ಕಾರದ 'ಆತ್ಮನಿರ್ಭರ ಭಾರತ' (ಸ್ವಾವಲಂಬಿ ಭಾರತ) ಅಭಿಯಾನವನ್ನು ಲೇವಡಿ ಮಾಡುತ್ತಿದ್ದಾರೆ ಎಂದು ಪ್ರಧಾನಿ ಮೋದಿ ಕಿಡಿಕಾರಿದರು. ಕಳೆದ 12 ವರ್ಷಗಳಿಂದ ಕಾಂಗ್ರೆಸ್ ಪಕ್ಷವು ದೇಶದಲ್ಲಿ ಅರಾಜಕತೆ ಮತ್ತು ಅನಿಶ್ಚಿತತೆಯನ್ನು ಹರಡುವ ಮೂಲಕ ರಾಜಕೀಯ ಲಾಭ ಹುಡುಕುತ್ತಿದೆ, ಆದರೆ ಜನತೆ ಅವರಿಗೆ ಪದೇ ಪದೇ ತಕ್ಕ ಉತ್ತರ ನೀಡಿದ್ದಾರೆ ಎಂದು ಮೋದಿ ಹೇಳಿದರು.
- Sushma Chakre
- Updated on: Jun 5, 2026
- 8:40 pm
ರಾಹುಲ್ ಗಾಂಧಿ ಮಹತ್ವದ ಭರವಸೆ: ಐ ಆ್ಯಮ್ ಹ್ಯಾಪಿ ಎಂದ ಸಚಿವ ಕೆ.ಹೆಚ್.ಮುನಿಯಪ್ಪ
ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಸರ್ಕಾರ ರಚನೆಯಾದ ಆರಂಭದಲ್ಲೇ ಒಂದರಿಂದೊಂದು ಸಂಕಷ್ಟ ಎದುರಾಗುತ್ತಿವೆ. ಬಯಸಿದ ಖಾತೆ ಸಿಗದ್ದಕ್ಕೆ ಹಿರಿಯ ಸಚಿವರು ಅಸಮಾಧಾನಗೊಂಡಿದ್ದಾರೆ. ಬೆಂಗಳೂರು ನಗರಾಭಿವೃದ್ಧಿ ಖಾತೆ ಸಿಗದಿದ್ದಕ್ಕೆ ರಾಮಲಿಂಗಾ ರೆಡ್ಡಿ ಅವರು ಆಪ್ತರ ಮನವೊಲಿಕೆ ನಡುವೆಯೂ ರಾಜೀನಾಮೆ ನೀಡಿದ್ದು, ಭಾರೀ ಸಂಚನಲಕ್ಕೆ ಕಾರಣವಾಗಿದೆ. ಇದರ ನಡುವೆ ಆಹಾರ ಇಲಾಖೆ ಬೇಡವೆಂದು ಅಸಮಾಧಾನಗೊಂಡಿದ್ದ ಮುನಿಯಪ್ಪ ಅವರಿಗೆ ರಾಹುಲ್ ಗಾಂಧಿ ಮಹತ್ವದ ಭರವಸೆ ನೀಡಿದ್ದಾರೆ.
- Ramesh B Jawalagera
- Updated on: Jun 5, 2026
- 4:52 pm
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ: ವಿಡಿಯೋ ನೋಡಿ
ಡಿ.ಕೆ.ಶಿವಕುಮಾರ್ ಅವರ ಮುಖ್ಯಮಂತ್ರಿ ಪ್ರಮಾಣ ವಚನ ಸಮಾರಂಭಕ್ಕಾಗಿ ಆಗಮಿಸಿದ ರಾಹುಲ್ ಗಾಂಧಿ, ಲೋಕಭವನದ ಮುಂದೆ ನೆರೆದಿದ್ದ ಕಾರ್ಯಕರ್ತರತ್ತ ಕಾರಿನಿಂದ ಕೈ ಬೀಸಿ, ಫ್ಲೈಯಿಂಗ್ ಕಿಸ್ ನೀಡಿದರು. ಕೆ.ಸಿ.ವೇಣುಗೋಪಾಲ್ ಮತ್ತು ಮಲ್ಲಿಕಾರ್ಜುನ ಖರ್ಗೆಯವರೂ ಈ ಸಂದರ್ಭದಲ್ಲಿ ಹಾಜರಿದ್ದರು. ರಾಹುಲ್ ಗಾಂಧಿಯವರನ್ನು ನೋಡಿದ ಅಭಿಮಾನಿಗಳು ಸರ್ ವೇವ್ ಯುವರ್ ಹ್ಯಾಂಡ್ ಎಂದು ಪದೇ ಪದೇ ಕೂಗುತ್ತಾ ಸಂಭ್ರಮಿಸಿದರು.
- Shivaprasad B
- Updated on: Jun 3, 2026
- 4:16 pm
ಸಚಿವ ಸಂಪುಟ ರಚನೆಗೆ ಕಾಂಗ್ರೆಸ್ ಹೈಕಮಾಂಡ್ ಕಸರತ್ತು: ವರಿಷ್ಠರಿಗೆ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಪ್ರತ್ಯೇಕ ಪಟ್ಟಿ!
ಕರ್ನಾಟಕ ಸಚಿವ ಸಂಪುಟ ರಚನೆ ಕಾಂಗ್ರೆಸ್ ಹೈಕಮಾಂಡ್ಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಪ್ರತ್ಯೇಕ ಪಟ್ಟಿಗಳನ್ನು ಹೈಕಮಾಂಡ್ಗೆ ಸಲ್ಲಿಸಿದ್ದು, ದೆಹಲಿಯಲ್ಲಿ ಮ್ಯಾರಥಾನ್ ಸಭೆಗಳು ನಡೆದಿವೆ. ಜಾತಿ ಸಮೀಕರಣ, ಹಿರಿಯರಿಗೆ ಹಾಗೂ ಹೊಸಬರಿಗೆ ಅವಕಾಶ ಕಲ್ಪಿಸುವ ಬಗ್ಗೆ ಹೈಕಮಾಂಡ್ ತೀವ್ರ ಚಿಂತನೆ ನಡೆಸಿದೆ. ಮೊದಲ ಹಂತದ ಪಟ್ಟಿ ಇಂದೇ ಅಂತಿಮವಾಗುವ ಸಾಧ್ಯತೆ ಇದೆ.
- Prasanna Gaonkar
- Updated on: Jun 2, 2026
- 11:56 am
ಸಿದ್ದರಾಮಯ್ಯ ಪತ್ನಿಗೆ ರಾಜ್ಯಸಭಾ ಆಫರ್ ನೀಡಿದ್ದ ರಾಹುಲ್ ಗಾಂಧಿ: ಬೇಡವೆಂದಿದ್ದ ಮಾಜಿ ಸಿಎಂ ಇಟ್ಟಿದ್ದು ಬೇರೆಯೇ ಬೇಡಿಕೆ!
ಸಚಿವ ಸಂಪುಟ ರಚನೆ ಹಾಗೂ ಡಿಸಿಎಂ ಹುದ್ದೆಗಳ ಸೃಷ್ಟಿಯ ಕುರಿತು ಹೈಕಮಾಂಡ್ ಜೊತೆ ಚರ್ಚಿಸಲು ನಿರ್ಗಮಿತ ಸಿಎಂ ಸಿದ್ದರಾಮಯ್ಯ ಮತ್ತು ನಿಯೋಜಿತ ಸಿಎಂ ಡಿಕೆ ಶಿವಕುಮಾರ್ ಇಂದು ದೆಹಲಿಗೆ ತೆರಳುತ್ತಿದ್ದಾರೆ. ಮತ್ತೊಂದೆಡೆ, ತಮ್ಮ ಪತ್ನಿಗೆ ರಾಹುಲ್ ಗಾಂಧಿ ನೀಡಿದ್ದ ರಾಜ್ಯಸಭಾ ಸ್ಥಾನದ ಆಫರನ್ನು ಸಿದ್ದರಾಮಯ್ಯ ತಿರಸ್ಕರಿಸಿರುವ ವಿಚಾರ ತಿಳಿದುಬಂದಿದೆ.
- Prasanna Gaonkar
- Updated on: Jun 1, 2026
- 9:27 am
ವೀರೇಂದ್ರ ಪಾಟೀಲರಿಗೆ ಅಪ್ಪ,ಸಿದ್ದರಾಮಯ್ಯಗೆ ಮಗ ಅಪಮಾನ:ಇದ್ದೊಬ್ಬ ಒಬಿಸಿ ಸಿಎಂ ಕೆಳಗಿಸಿದ ಕೈ ಎಂದ ಜೋಶಿ
2930 ದಿನ. ಎರಡು ಅವಧಿ. 8 ವರ್ಷ 8 ದಿನ ಆಡಳಿತ ನಡೆಸಿದ ಸಿದ್ದರಾಮಯ್ಯ ಇಂದು (ಮೇ 28) ನಾಡಿನ ದೊರೆಯ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಲೋಕಭವನಕ್ಕೆ ತೆರಳಿ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ್ದು, ಸಿದ್ದರಾಮಯ್ಯ ರಾಜೀನಾಮೆ ಕೇವಲ ಅಭಿಮಾನಿಗಳಿಗಷ್ಟೇ ಅಲ್ಲ, ಸಂಪುಟ ಸಹದ್ಯೋಗಿಗಳಿಗೂ ಆಘಾತ ತಂದಿದೆ. ಅಲ್ಲದೇ ವಿರೋಧ ಪಕ್ಷದ ನಾಯಕರು ಸಹ ಸಿದ್ದರಾಮಯ್ಯನವರನ್ನ ಕೆಳಗಿಳಿಸಿದ್ದಕ್ಕೆ ಬೇಸರ, ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅದರಂತೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
- Ramesh B Jawalagera
- Updated on: May 28, 2026
- 8:22 pm