AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rahul Gandhi

Rahul Gandhi

ನೆಹರು ಕುಟುಂಬದ ನಾಲ್ಕನೇ ತಲೆಮಾರಿನ ಐದನೇ ನಾಯಕ ರಾಹುಲ್‌ ಗಾಂಧಿ. ನೆಹರು ಮರಿ ಮೊಮ್ಮಗ, ಇಂದಿರಾರ ಮೊಮ್ಮಗ ಹಾಗೂ ರಾಜೀವ್‌-ಸೋನಿಯಾ ಮಗ ಎನ್ನುವುದು ರಾಹುಲ್‌ಗೆ ಪ್ಲಸ್‌ ಹಾಗೂ ಮೈನಸ್‌ ಎರಡೂ ಹೌದು. ಕಳೆದ ಎರಡು ದಶಕಗಳಿಂದ ಭಾರತದ ರಾಜಕೀಯದಲ್ಲಿ ಸಕ್ರಿಯರಾಗಿರುವ ರಾಹುಲ್‌, ಪ್ರಧಾನಿಯಾಗುವ ಮಹತ್ವಾಕಾಂಕ್ಷೆ ಹೊಂದಿದ್ದಾರೆ. ಎಐಸಿಸಿ ಅಧ್ಯಕ್ಷರಾಗಿಯೂ ಕೆಲಸ ಮಾಡಿರುವ ರಾಹುಲ್‌, ಸತತ ಐದು ಬಾರಿ ಸಂಸದರಾಗಿ ಕೆಲಸ ಮಾಡಿದ್ದಾರೆ. ಆರಂಭದಲ್ಲಿ ಅಮೇಥಿ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ರಾಹುಲ್‌, ಈಗ ವಯ್ನಾಡು ಕ್ಷೇತ್ರ ಸದಸ್ಯರಾಗಿದ್ದಾರೆ. ವಿವಾದಾತ್ಮಕ ಹೇಳಿಕೆಗಳಿಗೆ ಹೆಸರುವಾಸಿಯಾಗಿರುವ ರಾಹುಲ್ ಗಾಂಧಿ, ಇದೇ ಕಾರಣದಿಂದ ಸಂಸದ ಸ್ಥಾನದಿಂದ ಅನರ್ಹರಾಗಿದ್ದರು. ಸದ್ಯ ಕೋರ್ಟ್‌ನಿಂದ ರಕ್ಷಣೆ ಪಡೆದು, ಮತ್ತೆ ಸದಸ್ಯತ್ವ ಪಡೆದಿದ್ದಾರೆ. ಮನಮೋಹನ್‌ ಸಿಂಗ್‌ ಸರ್ಕಾರದ ಸುಗ್ರೀವಾಜ್ಞೆಯನ್ನು ಹರಿದುಹಾಕಿದ್ದು, ರಫೇಲ್‌ ಹಾಗೂ ಅದಾನಿ ವಿರುದ್ಧ ಪ್ರಕರಣದಲ್ಲಿ ಧ್ವನಿ ಎತ್ತಿದ್ದು, ಎಐಸಿಸಿ ಅಧ್ಯಕ್ಷರಾಗಿ ಲೋಕಸಭೆ ಸೇರಿ ಹಲವು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ಸೋತಿದ್ದು ಹಾಗೂ ಭಾರತ್‌ ಜೋಡೋ ಯಾತ್ರೆಯು ರಾಹುಲ್‌ ಅವರ ರಾಜಕೀಯ ಪಥದಲ್ಲಿನ ಪ್ರಮುಖಾಂಶಗಳು. ರಾಹುಲ್‌ ಗಾಂಧಿ ಎನ್ನುವ ರಾಜಕೀಯ ವ್ಯಕ್ತಿಯು ಕಾಂಗ್ರೆಸ್‌ ಹಾಗೂ ಬಿಜೆಪಿ ಎರಡೂ ಪಕ್ಷಕ್ಕೂ ಪ್ರಮುಖ ದಾಳವಾಗಿದ್ದಾರೆ. ತಮ್ಮ ಪ್ರಚಾರಗಳಿಗೆ ಇವರಿಬ್ಬರೂ ರಾಹುಲ್‌ ಅವರನ್ನು ಬಳಸಿಕೊಳ್ಳುವುದು ವಿಶೇಷ.

ಇನ್ನೂ ಹೆಚ್ಚು ಓದಿ

ಇದು ಸರ್ಕಾರಕ್ಕೆ ವಿದ್ಯಾರ್ಥಿಗಳು, ವಿಪಕ್ಷದ ಎಚ್ಚರಿಕೆ; ಪ್ರತಿಭಟನೆ ಅಂತ್ಯ ಬಳಿಕ ರಾಹುಲ್ ಗಾಂಧಿ ಪ್ರತಿಕ್ರಿಯೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ಬೆನ್ನಲ್ಲೇ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸುದ್ದಿಗೋಷ್ಠಿ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ವಿದ್ಯಾರ್ಥಿ ಚಳವಳಿಯು ಸರ್ಕಾರಕ್ಕೆ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ನೀಡಿದ ಬಲವಾದ ಎಚ್ಚರಿಕೆ ಎಂದಿರುವ ರಾಹುಲ್ ಗಾಂಧಿ, "ಇದು ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳಿಂದ ಸರ್ಕಾರಕ್ಕೆ ನೀಡಲಾದ ಎಚ್ಚರಿಕೆ. ನೀವು ಇಲ್ಲಿಯವರೆಗೆ ನಡೆಸಿಕೊಂಡು ಬಂದ ರೀತಿಯಲ್ಲಿ ದೇಶವನ್ನು ನಡೆಸಲು ಸಾಧ್ಯವಿಲ್ಲ. ವಿದ್ಯಾರ್ಥಿಗಳ ಮೇಲೆ ನಡೆದ ಹಿಂಸಾಚಾರಕ್ಕೆ ಕೇಂದ್ರ ಗೃಹಸಚಿವ ಅಮಿತ್ ಶಾ ಅವರೇ ನೇರ ಹೊಣೆ" ಎಂದು ಆರೋಪಿಸಿದ್ದಾರೆ.

‘ಪ್ರಜಾಪ್ರಭುತ್ವದ ಗೆಲುವು’; ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿರೋಧ ಪಕ್ಷಗಳ ಪ್ರತಿಕ್ರಿಯೆ

ದೇಶಾದ್ಯಂತ ಭುಗಿಲೆದ್ದಿದ್ದ ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆಯನ್ನು ವಿರೋಧಿಸಿ ನಡೆದ ಭಾರೀ ಪ್ರತಿಭಟನೆಗೆ ಕೇಂದ್ರ ಸರ್ಕಾರ ತಲೆಬಾಗಿದೆ. ಇಂದು ಮಧ್ಯಾಹ್ನ ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಇದರ ಬೆನ್ನಲ್ಲೇ ಕೇಂದ್ರ ಸಚಿವರಾದ ಜೆಪಿ ನಡ್ಡಾ ಮತ್ತು ಜಿತೇಂದ್ರ ಸಿಂಗ್ ಸಿಜೆಪಿ ವಕ್ತಾರರ ಜೊತೆ ಮೂರನೇ ಸುತ್ತಿನ ಮಾತುಕತೆ ನಡೆಸುತ್ತಿದ್ದಾರೆ. ಧರ್ಮೇಂದ್ರ ಪ್ರಧಾನ್ ರಾಜೀನಾಮೆಯ ಕುರಿತು ವಿರೋಧ ಪಕ್ಷಗಳು ಹೇಳಿದ್ದೇನು? ಎಂಬುದರ ಮಾಹಿತಿ ಇಲ್ಲಿದೆ.

ಮೆಟ್ರೋ, ಇಂಟರ್ನೆಟ್ ಬಂದ್ ಮಾಡಬಹುದು, ಆದರೆ ಪೇಪರ್ ಲೀಕ್ ತಡೆಯಲು ಆಗಲ್ಲ!: ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನೀಟ್ ಪರೀಕ್ಷಾ ಅಕ್ರಮ ಖಂಡಿಸಿ ಧರಣಿ ನಡೆಸುತ್ತಿರುವ ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮವನ್ನು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತೀವ್ರವಾಗಿ ಖಂಡಿಸಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಕ್ಷಣವೇ ರಾಜೀನಾಮೆ ನೀಡಬೇಕು ಹಾಗೂ ಪ್ರಧಾನಿ ಮೋದಿ ದೇಶದ ವಿದ್ಯಾರ್ಥಿಗಳ ಕ್ಷಮೆಯಾಚಿಸಬೇಕೆಂದು ದೆಹಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದ್ದಾರೆ.

ವಿದ್ಯಾರ್ಥಿಗಳ ಪ್ರತಿಭಟನೆಗೆ ಬೆಂಬಲ; ಗಾಂಧಿ ಸ್ಮೃತಿಗೆ ರಾಹುಲ್ ಗಾಂಧಿ ನೇತೃತ್ವದಲ್ಲಿ ಸಂಸದರ ಮೆರವಣಿಗೆ

ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ದೆಹಲಿಯಲ್ಲಿ ವಿರೋಧ ಪಕ್ಷಗಳ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ನೀಟ್ (NEET) ಪೇಪರ್ ಲೀಕ್‌ನಿಂದಾಗಿ ಮನನೊಂದು ಜೀವ ಕಳೆದುಕೊಂಡ ಹಾಗೂ ಪ್ರತಿಭಟನೆಯ ವೇಳೆ ಗಾಯಗೊಂಡ ವಿದ್ಯಾರ್ಥಿಗಳನ್ನು ಸ್ಮರಿಸಲು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಸೇರಿದಂತೆ ಇಂಡಿಯ (INDIA) ಒಕ್ಕೂಟದ ಸಂಸದರು ತೀಸ್ ಜನವರಿ ಮಾರ್ಗದಲ್ಲಿರುವ ಗಾಂಧಿ ಸ್ಮೃತಿಗೆ ತೆರಳಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ.

ಕೆಪಿಎಸ್ಸಿ ಕರ್ಮಕಾಂಡ ಬಗ್ಗೆ ರಾಹುಲ್ ಗಾಂಧಿ ಮೌನ ಯಾಕೆ?: ಕಾಂಗ್ರೆಸಿಗರ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿ

KPSC scam: ನೀಟ್ ವಿಚಾರದಲ್ಲಿ ರಾಜಕೀಯ ಮಾಡುತ್ತಿರುವ ರಾಹುಲ್ ಗಾಂಧಿ, ಕರ್ನಾಟಕದ ಕೆಪಿಎಸ್‌ಸಿ ಹಗರಣದ ಬಗ್ಗೆ ಏಕೆ ಮೌನವಾಗಿದ್ದಾರೆ ಎಂದು ಪ್ರಶ್ನಿಸಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಕಾಂಗ್ರೆಸ್​​ ನಾಯಕರ ದ್ವಿಮುಖ ನೀತಿಯನ್ನು ಪ್ರಶ್ನಿಸಿದ್ದಾರೆ. ನೀಟ್ ವಿಚಾರದಲ್ಲಿ ಕೇಂದ್ರ ಸರ್ಕಾರ ಯಾವತ್ತೂ ನೆಪ ಹೇಳಿ ಜಾರಿಕೊಂಡಿಲ್ಲ. ವ್ಯವಸ್ಥೆ ಸುಧಾರಿಸಲು ಪ್ರಥಮಾದ್ಯತೆ ನೀಡಿದೆ. ನೀಟ್ ಪ್ರಕರಣದಲ್ಲಿ ಈಗಾಗಲೇ 14 ಜನರನ್ನು ಬಂಧಿಸಲಾಗಿದೆ ಎಂದೂ ಅವರು ಈ ವೇಳೆ ಸ್ಪಷ್ಟಪಡಿಸಿದ್ದಾರೆ.

10 ವರ್ಷಗಳಲ್ಲಿ 152 ಪ್ರಶ್ನೆಪತ್ರಿಕೆ ಸೋರಿಕೆ, ಒಬ್ಬರಿಗೂ ಶಿಕ್ಷೆಯಾಗಿಲ್ಲ; ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸೋಮವಾರ ಜಂತರ್​ ಮಂತರ್​​ನಲ್ಲಿ ನಡೆಸಲಾಗಿದ್ದ ಯುವಕರ ಪ್ರತಿಭಟನೆ ವೇಳೆ ಪೊಲೀಸ್ ಲಾಠಿಚಾರ್ಜ್ ನಡೆಸಲಾಗಿತ್ತು. ಈ ಘಟನೆಯಲ್ಲಿ ಅನೇಕ ಯುವಕರಿಗೆ ಗಂಭೀರ ಗಾಯಗಳಾಗಿತ್ತು. ಈ ದೌರ್ಜನ್ಯವನ್ನು ವಿರೋಧಿಸಿ ಮಂಗಳವಾರ ಪ್ರಧಾನಿ ನಿವಾಸದ ಬಳಿ ಕಾಂಗ್ರೆಸ್ ನಾಯಕರು ಧರಣಿ ನಡೆಸುತ್ತಿದ್ದಾಗ ಪೊಲೀಸರು ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವರನ್ನು ವಶಕ್ಕೆ ಪಡೆದು ಬಳಿಕ ರಾತ್ರಿ ಬಿಡುಗಡೆ ಮಾಡಿದ್ದರು. ಇದೀಗ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಸುದ್ದಿಗೋಷ್ಠಿ ನಡೆಸಿದ್ದಾರೆ.

ರಾಹುಲ್ ಗಾಂಧಿಗೆ ವಿದ್ಯಾರ್ಥಿಗಳ ಹಿತಕ್ಕಿಂತ ರಾಜಕೀಯವೇ ಮುಖ್ಯ, ನೀಟ್ ವಿವಾದಕ್ಕೆ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಿರುಗೇಟು

ನೀಟ್ ಪೇಪರ್ ಸೋರಿಕೆ ವಿವಾದದ ಕುರಿತು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್, ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ರಾಜಕೀಯ ಲಾಭಕ್ಕಾಗಿ ವಿದ್ಯಾರ್ಥಿಗಳನ್ನು ದಾಳವಾಗಿ ಬಳಸುತ್ತಿದೆ ಎಂದು ಆರೋಪಿಸಿದ್ದಾರೆ. ಸರ್ಕಾರವು ಪರೀಕ್ಷಾ ಸುಧಾರಣೆಗೆ ಬದ್ಧವಾಗಿದೆ, ಆದರೆ ವಿಪಕ್ಷಗಳು ಚರ್ಚೆ ಬದಲು ರಾಜಕೀಯ ಪ್ರದರ್ಶನಕ್ಕೆ ಆದ್ಯತೆ ನೀಡುತ್ತಿವೆ ಎಂದು ಸಚಿವರು ಪ್ರತಿಪಾದಿಸಿದರು. ರಾಹುಲ್ ಗಾಂಧಿ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ.

ಪೊಲೀಸ್ ಠಾಣೆಗೆ ಸೋನಿಯಾ ಗಾಂಧಿ ಭೇಟಿ; ಕೊನೆಗೂ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಬಿಡುಗಡೆ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಲೋಕ್ ಕಲ್ಯಾಣ್ ಮಾರ್ಗದಲ್ಲಿರುವ ಅಧಿಕೃತ ನಿವಾಸದ ಹೊರಗೆ ಬೃಹತ್ ಪ್ರತಿಭಟನೆ ನಡೆಸಿ ದೆಹಲಿ ಪೊಲೀಸರಿಂದ ವಶಕ್ಕೆ ಪಡೆಯಲಾಗಿದ್ದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ, ಸಮಾಜವಾದಿ ಪಾರ್ಟಿ ಅಧ್ಯಕ್ಷ ಅಖಿಲೇಶ್ ಯಾದವ್ ಸೇರಿದಂತೆ ಹಿರಿಯ ವಿಪಕ್ಷ ನಾಯಕರನ್ನು ಪೊಲೀಸರು ಕೆಲವೇ ಗಂಟೆಗಳ ಬಂಧನದ ನಂತರ ಬಿಡುಗಡೆ ಮಾಡಿದ್ದಾರೆ. ಪ್ರತಿಭಟನಾ ಸ್ಥಳದಿಂದ ವಶಕ್ಕೆ ಪಡೆಯಲಾಗಿದ್ದ ನಾಯಕರನ್ನು ಬೇರೆ ಬೇರೆ ಸ್ಥಳಗಳಲ್ಲಿ ಬಂಧನದಲ್ಲಿಡಲಾಗಿತ್ತು.

ಬಿಜೆಪಿ ನಾಯಕರು ಹೇಡಿಗಳು, ನಮಗೆ ಹೆದರುತ್ತಿದ್ದಾರೆ; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ

ಪ್ರಶ್ನೆಪತ್ರಿಕೆ ಸೋರಿಕೆ ಹಗರಣದ ಹೊಣೆಗಾರಿಕೆ, ವಿದ್ಯಾರ್ಥಿ ಪ್ರತಿಭಟನಾಕಾರರ ಮೇಲಿನ ಪೊಲೀಸ್ ದೌರ್ಜನ್ಯದ ವಿರುದ್ಧ ಕ್ರಮ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ರಾಜಾಜಿ ಮಾರ್ಗದಿಂದ ಲೋಕ್ ಕಲ್ಯಾಣ್ ಮಾರ್ಗದತ್ತ ಮೆರವಣಿಗೆ ನಡೆಸಿದರು. ಪೋಲಿಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯುತ್ತಿದ್ದಂತೆ ಪ್ರಿಯಾಂಕಾ ಗಾಂಧಿ ಅವರು ಸರ್ಕಾರದ ಈ ಕ್ರಮವನ್ನು ತೀವ್ರವಾಗಿ ಟೀಕಿಸಿದರು.

ಸಂಧಾನದ ವೇಳೆ ಬೇಡಿಕೆ ಬದಲಾಯಿಸಿದ ರಾಹುಲ್ ಗಾಂಧಿ; ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಆರೋಪ

ದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಿವಾಸದ ಬಳಿ ನಡೆದ ಕಾಂಗ್ರೆಸ್ ಪ್ರತಿಭಟನೆಯ ವೇಳೆ ಸಂಧಾನಕ್ಕೆ ತೆರಳಿದ್ದ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಸಂಧಾನದ ಮಾತುಕತೆಯ ಮಧ್ಯದಲ್ಲಿ ರಾಹುಲ್ ಗಾಂಧಿ ತಮ್ಮ ಬೇಡಿಕೆಗಳನ್ನು ಇದ್ದಕ್ಕಿದ್ದಂತೆ ಬದಲಾಯಿಸಿ, ಕೊಟ್ಟ ಮಾತಿನಿಂದ ಹಿಂದೆ ಸರಿದರು ಎಂದು ಸಚಿವರು ಹೇಳಿದ್ದಾರೆ. ಇಂದು ರಾತ್ರಿಯಿಡೀ ಧರಣಿ ನಡೆಸುವುದಾಗಿ ಪಟ್ಟು ಹಿಡಿದಿದ್ದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತಿತರ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರಧಾನಿ ನಿವಾಸದ ಬಳಿ ಧರಣಿ ನಡೆಸುತ್ತಿದ್ದ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ 

ಇಂದು ರಾತ್ರಿಯಿಡೀ ಪ್ರಧಾನಿ ನಿವಾಸದ ಹೊರಗೆ ಧರಣಿ ಮುಂದುವರಿಸುವುದಾಗಿ ಕಾಂಗ್ರೆಸ್ ನಾಯಕರು ಘೋಷಿಸಿದ್ದರು. ಆದರೆ, ಇಂದು ಸಂಜೆ ಸುಮಾರು 6.40ರ ವೇಳೆಗೆ ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಭದ್ರತಾ ಪಡೆಗಳ ಜೊತೆ ಸ್ಥಳಕ್ಕೆ ಆಗಮಿಸಿದ ದೆಹಲಿ ಪೊಲೀಸರು ಪ್ರತಿಭಟನಾನಿರತರನ್ನು ತೆರವುಗೊಳಿಸಲು ಆರಂಭಿಸಿದರು. ಆದರೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ರಸ್ತೆಯ ಮೇಲೆಯೇ ಕುಳಿತು, ತಮ್ಮ ಬೇಡಿಕೆಗಳು ಈಡೇರುವವರೆಗೆ ಆ ಜಾಗದಿಂದ ಕದಲುವುದಿಲ್ಲ ಎಂದು ಪಟ್ಟು ಹಿಡಿದರು.

ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಈ ಪ್ರತಿಭಟನಾ ಸ್ಥಳಕ್ಕೆ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹಾಗೂ ಕೇರಳದ ಸಿಎಂ ವಿ.ಡಿ. ಸತೀಶನ್ ಸೇರಿದಂತೆ ಪಕ್ಷದ ಪ್ರಮುಖ ರಾಷ್ಟ್ರೀಯ ಹಾಗೂ ರಾಜ್ಯಮಟ್ಟದ ನಾಯಕರು ಆಗಮಿಸಿ ಧರಣಿಯಲ್ಲಿ ಕುಳಿತಿದ್ದಾರೆ.

ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ
ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ
ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್
ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್
ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ
ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ
ಡಿಕೆಶಿಗೆ ಹೈ ಸೆಕ್ಯೂರಿಟಿ:ದೆಹಲಿಯಲ್ಲಿ ವಿಶೇಷ ಭದ್ರತೆ ಇದೇ ಮೊದಲು
ಡಿಕೆಶಿಗೆ ಹೈ ಸೆಕ್ಯೂರಿಟಿ:ದೆಹಲಿಯಲ್ಲಿ ವಿಶೇಷ ಭದ್ರತೆ ಇದೇ ಮೊದಲು
ಆನ್ಲೈನ್ ಫುಡ್ ಡೆಲಿವರಿ ಆಪ್‌ಗಳ ವಿರುದ್ಧ ತಿರುಗಿಬಿದ್ದ ಹೋಟೆಲ್ ಮಾಲೀಕರು
ಆನ್ಲೈನ್ ಫುಡ್ ಡೆಲಿವರಿ ಆಪ್‌ಗಳ ವಿರುದ್ಧ ತಿರುಗಿಬಿದ್ದ ಹೋಟೆಲ್ ಮಾಲೀಕರು
ಕುಡುಕ ಎಂದ ಕಾಂಗ್ರೆಸ್​​​​​ ವಿರುದ್ಧ ಸಿಟಿ ರವಿ ಕೆಂಡಾಮಂಡಲ
ಕುಡುಕ ಎಂದ ಕಾಂಗ್ರೆಸ್​​​​​ ವಿರುದ್ಧ ಸಿಟಿ ರವಿ ಕೆಂಡಾಮಂಡಲ
ಪಶುವೈದ್ಯ ನೇಮಕಾತಿ ಹಗರಣ: ಕೆಪಿಎಸ್‌ಸಿ ಕಚೇರಿಗೆ ಬಿಜೆಪಿ ನಿಯೋಗ ಭೇಟಿ
ಪಶುವೈದ್ಯ ನೇಮಕಾತಿ ಹಗರಣ: ಕೆಪಿಎಸ್‌ಸಿ ಕಚೇರಿಗೆ ಬಿಜೆಪಿ ನಿಯೋಗ ಭೇಟಿ
ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಹೈಡ್ರಾಮಾ
ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಹೈಡ್ರಾಮಾ
ರಾತ್ರೋರಾತ್ರಿ ಮೆಟ್ರೋ ಕ್ರೇನ್ ಏರಿ ಕೆಳಗಿಳಿಯಲಾಗದೆ ಒದ್ದಾಡಿದ ವ್ಯಕ್ತಿ
ರಾತ್ರೋರಾತ್ರಿ ಮೆಟ್ರೋ ಕ್ರೇನ್ ಏರಿ ಕೆಳಗಿಳಿಯಲಾಗದೆ ಒದ್ದಾಡಿದ ವ್ಯಕ್ತಿ
ಪಂಜಾಬ್‌ನಲ್ಲಿ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ
ಪಂಜಾಬ್‌ನಲ್ಲಿ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ