Rahul Gandhi
ನೆಹರು ಕುಟುಂಬದ ನಾಲ್ಕನೇ ತಲೆಮಾರಿನ ಐದನೇ ನಾಯಕ ರಾಹುಲ್ ಗಾಂಧಿ. ನೆಹರು ಮರಿ ಮೊಮ್ಮಗ, ಇಂದಿರಾರ ಮೊಮ್ಮಗ ಹಾಗೂ ರಾಜೀವ್-ಸೋನಿಯಾ ಮಗ ಎನ್ನುವುದು ರಾಹುಲ್ಗೆ ಪ್ಲಸ್ ಹಾಗೂ ಮೈನಸ್ ಎರಡೂ ಹೌದು. ಕಳೆದ ಎರಡು ದಶಕಗಳಿಂದ ಭಾರತದ ರಾಜಕೀಯದಲ್ಲಿ ಸಕ್ರಿಯರಾಗಿರುವ ರಾಹುಲ್, ಪ್ರಧಾನಿಯಾಗುವ ಮಹತ್ವಾಕಾಂಕ್ಷೆ ಹೊಂದಿದ್ದಾರೆ. ಎಐಸಿಸಿ ಅಧ್ಯಕ್ಷರಾಗಿಯೂ ಕೆಲಸ ಮಾಡಿರುವ ರಾಹುಲ್, ಸತತ ಐದು ಬಾರಿ ಸಂಸದರಾಗಿ ಕೆಲಸ ಮಾಡಿದ್ದಾರೆ. ಆರಂಭದಲ್ಲಿ ಅಮೇಥಿ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ರಾಹುಲ್, ಈಗ ವಯ್ನಾಡು ಕ್ಷೇತ್ರ ಸದಸ್ಯರಾಗಿದ್ದಾರೆ. ವಿವಾದಾತ್ಮಕ ಹೇಳಿಕೆಗಳಿಗೆ ಹೆಸರುವಾಸಿಯಾಗಿರುವ ರಾಹುಲ್ ಗಾಂಧಿ, ಇದೇ ಕಾರಣದಿಂದ ಸಂಸದ ಸ್ಥಾನದಿಂದ ಅನರ್ಹರಾಗಿದ್ದರು. ಸದ್ಯ ಕೋರ್ಟ್ನಿಂದ ರಕ್ಷಣೆ ಪಡೆದು, ಮತ್ತೆ ಸದಸ್ಯತ್ವ ಪಡೆದಿದ್ದಾರೆ. ಮನಮೋಹನ್ ಸಿಂಗ್ ಸರ್ಕಾರದ ಸುಗ್ರೀವಾಜ್ಞೆಯನ್ನು ಹರಿದುಹಾಕಿದ್ದು, ರಫೇಲ್ ಹಾಗೂ ಅದಾನಿ ವಿರುದ್ಧ ಪ್ರಕರಣದಲ್ಲಿ ಧ್ವನಿ ಎತ್ತಿದ್ದು, ಎಐಸಿಸಿ ಅಧ್ಯಕ್ಷರಾಗಿ ಲೋಕಸಭೆ ಸೇರಿ ಹಲವು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ಸೋತಿದ್ದು ಹಾಗೂ ಭಾರತ್ ಜೋಡೋ ಯಾತ್ರೆಯು ರಾಹುಲ್ ಅವರ ರಾಜಕೀಯ ಪಥದಲ್ಲಿನ ಪ್ರಮುಖಾಂಶಗಳು. ರಾಹುಲ್ ಗಾಂಧಿ ಎನ್ನುವ ರಾಜಕೀಯ ವ್ಯಕ್ತಿಯು ಕಾಂಗ್ರೆಸ್ ಹಾಗೂ ಬಿಜೆಪಿ ಎರಡೂ ಪಕ್ಷಕ್ಕೂ ಪ್ರಮುಖ ದಾಳವಾಗಿದ್ದಾರೆ. ತಮ್ಮ ಪ್ರಚಾರಗಳಿಗೆ ಇವರಿಬ್ಬರೂ ರಾಹುಲ್ ಅವರನ್ನು ಬಳಸಿಕೊಳ್ಳುವುದು ವಿಶೇಷ.
ರಾಹುಲ್ ಗಾಂಧಿ ಬಿಜೆಪಿಯ ಬಿ-ಟೀಮ್; ಕಾಂಗ್ರೆಸ್ ವಿರುದ್ಧ ಕೇರಳ ಸಿಎಂ ಪಿಣರಾಯಿ ವಿಜಯನ್ ವಾಗ್ದಾಳಿ
ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಇಂದು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಪರೋಕ್ಷವಾಗಿ ಬಿಜೆಪಿಗೆ ಸಹಾಯ ಮಾಡುತ್ತಿದೆ ಮತ್ತು ವಿಧಾನಸಭಾ ಚುನಾವಣೆಗೆ ಮುನ್ನ ಓಲೈಕೆ ರಾಜಕೀಯದಲ್ಲಿ ತೊಡಗಿದೆ ಎಂದು ಅವರು ಆರೋಪಿಸಿದ್ದಾರೆ. ರಾಹುಲ್ ಗಾಂಧಿಯವರ ರಾಜಕೀಯ ವಿಧಾನವು ಬಿಜೆಪಿಗೆ ಪದೇ ಪದೇ ಪ್ರಯೋಜನವನ್ನು ನೀಡಿದೆ. ಹೀಗಾಗಿ, ಕಾಂಗ್ರೆಸ್ ಬಿಜೆಪಿಯ ಬಿ-ಟೀಂ ಎಂದು ಟೀಕಿಸಿದ್ದಾರೆ.
- Sushma Chakre
- Updated on: Mar 21, 2026
- 10:24 pm
ಟಪೋರಿ ರೀತಿ ವರ್ತಿಸುತ್ತಾರೆ; ರಾಹುಲ್ ಗಾಂಧಿ ಮುಂದೆ ಮಹಿಳೆಯರು ಓಡಾಡುವುದೇ ಕಷ್ಟ ಎಂದ ಕಂಗನಾ ರಣಾವತ್
ರಾಹುಲ್ ಗಾಂಧಿ ಯಾವಾಗಲೂ ಮಹಿಳೆಯರಿಗೆ ಮುಜುಗರವಾಗುವಂತೆ ವರ್ತಿಸುತ್ತಾರೆ. ಅವರು ಎದುರು ಬಂದರೆ ಸಾಕು ಮಹಿಳಾ ಸಂಸದರಿಗೆ ಅನ್ಕಂಫರ್ಟಬಲ್ ಆಗುತ್ತದೆ. ಅವರು ಟಪೋರಿ ರೀತಿ ವರ್ತಿಸುತ್ತಾರೆ. ಯಾರಾದರೂ ಇಂಟರ್ವ್ಯೂ ನೀಡುತ್ತಿದ್ದರೆ ಜೋರಾಗಿ ಕಿರುಚುತ್ತಾ ಡಿಸ್ಟರ್ಬ್ ಮಾಡುತ್ತಾರೆ ಎಂದು ಕಂಗನಾ ರಣಾವತ್ ಸಂಸತ್ತಿನ ಸಂಕೀರ್ಣದಲ್ಲಿ ಹೇಳಿದ್ದಾರೆ.
- Sushma Chakre
- Updated on: Mar 18, 2026
- 7:10 pm
ಸಂಸತ್ ಹೊರಗೆ ರಾಹುಲ್ ಗಾಂಧಿಯ ಚಹಾ-ಪಕೋಡ ಪ್ರತಿಭಟನೆಗೆ ಮಾಜಿ ಅಧಿಕಾರಿಗಳ ವಿರೋಧ; ಕ್ಷಮೆ ಯಾಚನೆಗೆ ಒತ್ತಾಯ
ಲೋಕಸಭಾ ಅಧಿವೇಶನದ ವೇಳೆ 5 ದಿನಗಳ ಹಿಂದೆ ಸಂಸತ್ ಹೊರಗೆ ಕಾಂಗ್ರೆಸ್ ನಾಯಕ ಹಾಗೂ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯ ನೇತೃತ್ವದಲ್ಲಿ ಎಲ್ಪಿಜಿ ಬಿಕ್ಕಟ್ಟನ್ನು ವಿರೋಧಿಸಿ ಪ್ರತಿಭಟನೆ ನಡೆಸಲಾಗಿತ್ತು. ಈ 'ಚಾಯ್-ಪಕೋಡ' ಪ್ರತಿಭಟನೆಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ದೇಶದ ಕ್ಷಮೆ ಯಾಚಿಸಬೇಕೆಂದು ಒತ್ತಾಯಿಸಿ 204 ಮಾಜಿ ಅಧಿಕಾರಿಗಳು ಸಹಿ ಮಾಡಿ ಬಹಿರಂಗ ಪತ್ರ ಬರೆದಿದ್ದಾರೆ. ಸ್ಪೀಕರ್ ನೀಡಿದ ಸ್ಪಷ್ಟ ಸೂಚನೆಯನ್ನು ನಿರ್ಲಕ್ಷ್ಯಿಸಿದ ರಾಹುಲ್ ಗಾಂಧಿ ವಿರುದ್ಧ ಪತ್ರದಲ್ಲಿ ಆಕ್ರೋಶ ಹೊರಹಾಕಲಾಗಿದೆ.
- Sushma Chakre
- Updated on: Mar 17, 2026
- 3:19 pm
ಎಪ್ಸ್ಟೀನ್ ಲಿಂಕ್ ಆರೋಪದ ವಿರುದ್ಧ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಹರ್ದೀಪ್ ಸಿಂಗ್ ಪುರಿ ಪುತ್ರಿ
ತನ್ನ ವಿರುದ್ಧ ಮಾಡಲಾಗಿರುವ ಎಪ್ಸ್ಟೀನ್ ಲಿಂಕ್ ಆರೋಪದಿಂದಾಗಿ ತಮ್ಮ ಕುಟುಂಬದ ಗೌರವಕ್ಕೆ ಧಕ್ಕೆಯಾಗಿದೆ ಎಂದು ಆರೋಪಿಸಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಮಗಳು ಹಿಮಾಯನಿ ಪುರಿ ದೆಹಲಿ ಹೈಕೋರ್ಟ್ನಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಪ್ರತಿವಾದಿಗಳಿಂದ 10 ಕೋಟಿ ರೂ. ಪರಿಹಾರ ಕೋರಿ ಅವರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ಶಿಕ್ಷೆಗೊಳಗಾದ ಜೆಫ್ರಿ ಎಪ್ಸ್ಟೀನ್ ಅವರೊಂದಿಗೆ ತಮ್ಮನ್ನು ಲಿಂಕ್ ಮಾಡುವ ಸಾಮಾಜಿಕ ಮಾಧ್ಯಮ ಪೋಸ್ಟ್ಗಳ ವಿರುದ್ಧ ಅವರು ದೆಹಲಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
- Sushma Chakre
- Updated on: Mar 16, 2026
- 5:25 pm
ಮೊದಲು ಸತ್ಯ ತಿಳೀರಿ, ವಿದ್ಯಾರ್ಥಿಗಳ ಪ್ರವೇಶ, ಅಧ್ಯಾಪಕರ ನೇಮಕದ ಬಗ್ಗೆ ರಾಹುಲ್ ಗಾಂಧಿ ಹೇಳಿಕೆಗೆ ದೆಹಲಿ ವಿವಿ ತೀವ್ರ ಆಕ್ಷೇಪ
ದೆಹಲಿ ವಿಶ್ವವಿದ್ಯಾಲಯ (DU) ವಿದ್ಯಾರ್ಥಿಗಳ ಪ್ರವೇಶ ಮತ್ತು ಅಧ್ಯಾಪಕರ ನೇಮಕಾತಿ ಕುರಿತು ರಾಹುಲ್ ಗಾಂಧಿ ಅವರ ಹೇಳಿಕೆಯನ್ನು ತೀವ್ರವಾಗಿ ಆಕ್ಷೇಪಿಸಿದೆ. CUET ಅಂಕಗಳ ಆಧಾರದ ಮೇಲೆ ಪ್ರವೇಶಗಳು ನಡೆಯುತ್ತವೆ ಮತ್ತು ಸಂದರ್ಶನಗಳು ಕಡ್ಡಾಯವಲ್ಲ ಎಂದು DU ಸ್ಪಷ್ಟಪಡಿಸಿದೆ. ಸಾವಿರಾರು ಅಧ್ಯಾಪಕರನ್ನು ಪಾರದರ್ಶಕವಾಗಿ, ನಿಯಮಾನುಸಾರ ನೇಮಕ ಮಾಡಲಾಗಿದೆ ಎಂದು ವಿವಿ ತಿಳಿಸಿದೆ. ತಪ್ಪು ಮಾಹಿತಿ ವಿಶ್ವವಿದ್ಯಾಲಯದ ವಾತಾವರಣಕ್ಕೆ ಹಾನಿಕರ ಎಂದು ಹೇಳಿದೆ.
- Nayana Rajeev
- Updated on: Mar 14, 2026
- 9:56 am
ಪಕ್ಷಪಾತ ಮಾಡಿಲ್ಲ, ಸದನಕ್ಕಿಂತ ವಿಪಕ್ಷ ನಾಯಕ ಮೇಲಲ್ಲ; ರಾಹುಲ್ ಗಾಂಧಿಗೆ ಸ್ಪೀಕರ್ ಓಂ ಬಿರ್ಲಾ ತಿರುಗೇಟು
ಈಗಾಗಲೇ ವಿರೋಧ ಪಕ್ಷಗಳು ಸ್ಪೀಕರ್ ವಿರುದ್ಧ ಮಂಡಿಸಿದ್ದ ಅವಿಶ್ವಾಸ ನಿರ್ಣಯಕ್ಕೆ ಸೋಲಾಗಿದೆ. ಇಂದು ವಿಪಕ್ಷ ನಾಯಕರಾದ ರಾಹುಲ್ ಗಾಂಧಿಗೆ ಅಧಿವೇಶನದಲ್ಲಿ ಮಾತನಾಡಲು ಅವಕಾಶ ನೀಡಿಲ್ಲ ಎಂಬ ಕಾಂಗ್ರೆಸ್ ಹಾಗೂ ಇತರೆ ವಿಪಕ್ಷಗಳ ಆರೋಪಕ್ಕೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಸ್ಪಷ್ಟನೆ ನೀಡಿದ್ದಾರೆ. 'ಪ್ರತಿಯೊಬ್ಬ ಸದಸ್ಯರಿಗೂ ಮಾತನಾಡುವ ಹಕ್ಕಿದೆ, ನಾನು ಎರಡೂ ಕಡೆಯವರಿಗೂ ಮಾತನಾಡಲು ಸಮಾನ ಅವಕಾಶ ನೀಡಿದ್ದೇನೆ. ಕೆಲವರು ವಿಪಕ್ಷ ನಾಯಕನ ಸ್ಥಾನ ಸದನಕ್ಕಿಂತಲೂ ದೊಡ್ಡದು ಎಂದು ಭಾವಿಸಿದ್ದಾರೆ' ಎಂದು ಸ್ಪೀಕರ್ ಓಂ ಬಿರ್ಲಾ ರಾಹುಲ್ ಗಾಂಧಿಗೆ ತಿರುಗೇಟು ನೀಡಿದ್ದಾರೆ.
- Sushma Chakre
- Updated on: Mar 12, 2026
- 4:11 pm
ಲೋಕಸಭೆಯಲ್ಲಿ ವಿರೋಧ ಪಕ್ಷಗಳಿಗೆ ಮುಖಭಂಗ; ಸ್ಪೀಕರ್ ವಿರುದ್ಧ ಮಂಡಿಸಿದ ಅವಿಶ್ವಾಸ ನಿರ್ಣಯಕ್ಕೆ ಸೋಲು
ಲೋಕಸಭೆಯಲ್ಲಿ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ಪ್ರತಿಪಕ್ಷಗಳು ಮಂಡಿಸಿದ ಅವಿಶ್ವಾಸ ನಿರ್ಣಯಕ್ಕೆ ಸೋಲು ಉಂಟಾಗಿದೆ. ಲೋಕಸಭೆಯಲ್ಲಿ ಸ್ಪೀಕರ್ ಓಂ ಬಿರ್ಲಾ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ಪ್ರತಿಪಕ್ಷಗಳು ಮಂಡಿಸಿದ ಅವಿಶ್ವಾಸ ನಿರ್ಣಯವನ್ನು ತಿರಸ್ಕರಿಸಲಾಯಿತು. ಸದನದಲ್ಲಿ ಜೋರಾದ ಘೋಷಣೆಗಳು ಮತ್ತು ಪ್ರತಿಭಟನೆಗಳ ನಡುವೆ ಧ್ವನಿ ಮತದಿಂದ ನಿರ್ಣಯವನ್ನು ತಿರಸ್ಕರಿಸಲಾಯಿತು. ನಾಳೆ ಬೆಳಿಗ್ಗೆ 11 ಗಂಟೆಗೆ ಸದನ ಮತ್ತೆ ಸಭೆ ಸೇರಲಿದೆ. ಇಂದು ಒಂದು ದಿನದ ಮಟ್ಟಿಗೆ ಕಲಾಪವನ್ನು ಮುಂದೂಡಲಾಯಿತು.
- Sushma Chakre
- Updated on: Mar 11, 2026
- 9:09 pm
ಇಡೀ ನೆಹರು-ಗಾಂಧಿ ಕುಟುಂಬವೇ ದೇಶದ ಹಿತಾಸಕ್ತಿಯೊಂದಿಗೆ ರಾಜಿ ಮಾಡಿಕೊಂಡಿದೆ; ಪಿಯೂಷ್ ಗೋಯಲ್ ಆರೋಪ
ಅಮೆರಿಕದ ಜೊತೆಗಿನ ವ್ಯಾಪಾರ ಒಪ್ಪಂದದ ನಂತರ "ಪ್ರಧಾನಿ ನರೇಂದ್ರ ಮೋದಿ ದೇಶದ ಹಿತಾಸಕ್ತಿಯೊಂದಿಗೆ ರಾಜಿ ಮಾಡಿಕೊಂಡಿದ್ದಾರೆ" ಎಂದು ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರು ಪದೇಪದೆ ಆರೋಪ ಮಾಡುತ್ತಲೇ ಇದ್ದಾರೆ. ಈ ಬಗ್ಗೆ ಬಿಜೆಪಿ ನಾಯಕರು ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿದ್ದರು. ಇದೀಗ ಕೇಂದ್ರ ಸಚಿವ ಪಿಯೂಷ್ ಗೋಯಲ್ ಸುದ್ದಿಗೋಷ್ಠಿ ಮಾಡುವ ಮೂಲಕ ಕಾಂಗ್ರೆಸ್ ನಾಯಕರ ಹಾಗೂ ಯುಪಿಎ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
- Sushma Chakre
- Updated on: Feb 25, 2026
- 5:03 pm
‘ನೆಹರೂ, ಇಂದಿರಾ ಕಾಲದಲ್ಲಿ ವಿದೇಶೀ ಗುಪ್ತಚರರ ಕೈಲಿತ್ತು ಭಾರತ’: ಕಾಂಗ್ರೆಸ್ಗೆ ಬಿಜೆಪಿ ತಿರುಗೇಟು; ಸುಧಾಂಶು ತ್ರಿವೇದಿ ಸರಣಿ ಟ್ವೀಟ್
BJP spokesperson Dr. Sudhanshu Trivedi says India was compromised during Nehru's and Indira's governance: ಅಮೆರಿಕದೊಂದಿಗೆ ಟ್ರೇಡ್ ಡೀಲ್ ಮಾಡಿಕೊಂಡು ರೈತರಿಗೆ ಮರಣ ಶಾಸನ ಬರೆದಿದ್ದಾರೆ ಎಂದು ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ಮಾಡಿರುವ ಆರೋಪಕ್ಕೆ ಬಿಜೆಪಿ ವಕ್ತಾರ ಸುಧಾಂಶು ತ್ರಿವೇದಿ ಸರಣಿ ಟ್ವೀಟ್ಗಳ ಮೂಲಕ ಉತ್ತರ ಕೊಟ್ಟಿದ್ದಾರೆ. ನೆಹರೂ ಮತ್ತು ಇಂದಿರಾ ಗಾಂಧಿ ಆಡಳಿತದ ಅವಧಿಯಲ್ಲಿ ಭಾರತದ ರಾಜಕೀಯ, ಆರ್ಥಿಕತೆ ಮತ್ತು ಭದ್ರತೆ ಹೇಗೆ ರಾಜಿಗೊಂಡಿತ್ತು ಎಂಬುದನ್ನು ದಾಖಲೆಗಳ ಸಮೇತ ವಿವರಿಸಿದ್ದಾರೆ.
- Vijaya Sarathy SN
- Updated on: Feb 25, 2026
- 3:57 pm
ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ರಫೀಕುಲ್ ಇಸ್ಲಾಂ ಪ್ರತಿಕ್ರಿಯೆ
ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಅವರ ಹೇಳಿಕೆಗಳನ್ನು ರಾಹುಲ್ ಗಾಂಧಿ ಎಷ್ಟು ಗಂಭೀರವಾಗಿ ಪರಿಗಣಿಸುತ್ತಾರೆಂದು ನನಗೆ ತಿಳಿದಿಲ್ಲ. ಅವರು ತುಂಬಾ ಪ್ರಬುದ್ಧರಾಗಿದ್ದಾರೆ. ರಾಹುಲ್ ಗಾಂಧಿ ಇಂಡಿಯ ಬ್ಲಾಕ್ನ ಅಧ್ಯಕ್ಷರಾಗಿದ್ದರೆ ಮತ್ತು ಅವರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಮಾಡಿದರೆ ಇತರೆ ಮಿತ್ರಪಕ್ಷಗಳು ಅವರನ್ನು ಬೆಂಬಲಿಸುತ್ತಾರೆಯೇ? ಈಗ ವರ್ಷಗಳೇ ಕಳೆದಿವೆ. ನಿಧಾನವಾಗಿ, ಇಂಡಿಯ ಬ್ಲಾಕ್ ಮೂಲೆಗುಂಪಾಗಿ ಬಿಜೆಪಿ ಆಡಳಿತವನ್ನು ಮುಂದುವರಿಸುತ್ತದೆ. ಆದ್ದರಿಂದ, ಮಣಿಶಂಕರ್ ಅಯ್ಯರ್ ಹೇಳಿದ್ದು ಸರಿ. ಕಾಂಗ್ರೆಸ್ ಅದರಲ್ಲೂ ವಿಶೇಷವಾಗಿ ರಾಹುಲ್ ಗಾಂಧಿ ಇತರರನ್ನು ಮುಂದಕ್ಕೆ ಬಿಟ್ಟು ಬಿಜೆಪಿಯನ್ನು ಅಳಿಸಿ ಹಾಕಬೇಕು ಎಂದು AIUDF ನಾಯಕ ರಫೀಕುಲ್ ಇಸ್ಲಾಂ ಹೇಳಿದ್ದಾರೆ.
- Sushma Chakre
- Updated on: Feb 23, 2026
- 9:53 pm
ರಾಹುಲ್ ಗಾಂಧಿ ಇಂಡಿಯ ಬ್ಲಾಕ್ ನಾಯಕನ ಸ್ಥಾನದಿಂದ ಕೆಳಗಿಳಿಯಬೇಕು; ಮಣಿಶಂಕರ್ ಅಯ್ಯರ್ ಒತ್ತಾಯ
ಕಾಂಗ್ರೆಸ್ ಹೈಕಮಾಂಡ್ ಪಾಲಿಗೆ ಕಾಂಗ್ರೆಸ್ನಲ್ಲಿರುವ ಕೆಲವು ಹಿರಿಯ ನಾಯಕರೇ ನುಂಗಲಾರದ ತುಪ್ಪವಾಗಿದ್ದಾರೆ. ಶಶಿ ತರೂರ್, ಮಣಿಶಂಕರ್ ಅಯ್ಯರ್ ರೀತಿಯ ಹಿರಿಯ ಕಾಂಗ್ರೆಸ್ ನಾಯಕರು ಈಗಿನ ಕಾಂಗ್ರೆಸ್ ಹೈಕಮಾಂಡ್ ಬಗ್ಗೆ ಆಗಾಗ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕುವ ಮೂಲಕ ಪಕ್ಷಕ್ಕೆ ಮುಜುಗರ ತರುವ ಕೆಲಸ ಮಾಡುತ್ತಲೇ ಇರುತ್ತಾರೆ. ಅತ್ತ ಶಶಿ ತರೂರ್ ಪ್ರಧಾನಿ ಮೋದಿಯನ್ನು ಹೊಗಳಿ ಹೊಗಳಿ ಕಾಂಗ್ರೆಸ್ ನಾಯಕರ ಹೊಟ್ಟೆ ಉರಿಸಿದರೆ ಇತ್ತ ಮಣಿಶಂಕರ್ ಅಯ್ಯರ್ ನೇರವಾಗಿಯೇ ಗಾಂಧಿ ಕುಟುಂಬದ ವಿರುದ್ಧ ಅಸಮಾಧಾನ ಹೊರಹಾಕುತ್ತಿದ್ದಾರೆ.
- Sushma Chakre
- Updated on: Feb 23, 2026
- 3:28 pm
ಎಐ ಶೃಂಗಸಭೆಯ ಪ್ರತಿಭಟನೆಗೆ ಆಕ್ರೋಶ; ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ದೆಹಲಿಯ AI ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಅಂಗಿ ಬಿಚ್ಚಿ ಪ್ರತಿಭಟನೆ ನಡೆಸಿದ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಬಿಜೆಪಿ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿದ್ದಾರೆ. 2014ರ RSS ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಿವಂಡಿ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದ ಮುಂದೆ ಹಾಜರಾಗಲು ಲೋಕಸಭೆಯ ವಿರೋಧ ಪಕ್ಷದ ನಾಯಕ ಇಂದು ಮುಂಬೈಗೆ ತೆರಳಿದ್ದರು.
- Sushma Chakre
- Updated on: Feb 21, 2026
- 7:44 pm