Rahul Gandhi
ನೆಹರು ಕುಟುಂಬದ ನಾಲ್ಕನೇ ತಲೆಮಾರಿನ ಐದನೇ ನಾಯಕ ರಾಹುಲ್ ಗಾಂಧಿ. ನೆಹರು ಮರಿ ಮೊಮ್ಮಗ, ಇಂದಿರಾರ ಮೊಮ್ಮಗ ಹಾಗೂ ರಾಜೀವ್-ಸೋನಿಯಾ ಮಗ ಎನ್ನುವುದು ರಾಹುಲ್ಗೆ ಪ್ಲಸ್ ಹಾಗೂ ಮೈನಸ್ ಎರಡೂ ಹೌದು. ಕಳೆದ ಎರಡು ದಶಕಗಳಿಂದ ಭಾರತದ ರಾಜಕೀಯದಲ್ಲಿ ಸಕ್ರಿಯರಾಗಿರುವ ರಾಹುಲ್, ಪ್ರಧಾನಿಯಾಗುವ ಮಹತ್ವಾಕಾಂಕ್ಷೆ ಹೊಂದಿದ್ದಾರೆ. ಎಐಸಿಸಿ ಅಧ್ಯಕ್ಷರಾಗಿಯೂ ಕೆಲಸ ಮಾಡಿರುವ ರಾಹುಲ್, ಸತತ ಐದು ಬಾರಿ ಸಂಸದರಾಗಿ ಕೆಲಸ ಮಾಡಿದ್ದಾರೆ. ಆರಂಭದಲ್ಲಿ ಅಮೇಥಿ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ರಾಹುಲ್, ಈಗ ವಯ್ನಾಡು ಕ್ಷೇತ್ರ ಸದಸ್ಯರಾಗಿದ್ದಾರೆ. ವಿವಾದಾತ್ಮಕ ಹೇಳಿಕೆಗಳಿಗೆ ಹೆಸರುವಾಸಿಯಾಗಿರುವ ರಾಹುಲ್ ಗಾಂಧಿ, ಇದೇ ಕಾರಣದಿಂದ ಸಂಸದ ಸ್ಥಾನದಿಂದ ಅನರ್ಹರಾಗಿದ್ದರು. ಸದ್ಯ ಕೋರ್ಟ್ನಿಂದ ರಕ್ಷಣೆ ಪಡೆದು, ಮತ್ತೆ ಸದಸ್ಯತ್ವ ಪಡೆದಿದ್ದಾರೆ. ಮನಮೋಹನ್ ಸಿಂಗ್ ಸರ್ಕಾರದ ಸುಗ್ರೀವಾಜ್ಞೆಯನ್ನು ಹರಿದುಹಾಕಿದ್ದು, ರಫೇಲ್ ಹಾಗೂ ಅದಾನಿ ವಿರುದ್ಧ ಪ್ರಕರಣದಲ್ಲಿ ಧ್ವನಿ ಎತ್ತಿದ್ದು, ಎಐಸಿಸಿ ಅಧ್ಯಕ್ಷರಾಗಿ ಲೋಕಸಭೆ ಸೇರಿ ಹಲವು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ಸೋತಿದ್ದು ಹಾಗೂ ಭಾರತ್ ಜೋಡೋ ಯಾತ್ರೆಯು ರಾಹುಲ್ ಅವರ ರಾಜಕೀಯ ಪಥದಲ್ಲಿನ ಪ್ರಮುಖಾಂಶಗಳು. ರಾಹುಲ್ ಗಾಂಧಿ ಎನ್ನುವ ರಾಜಕೀಯ ವ್ಯಕ್ತಿಯು ಕಾಂಗ್ರೆಸ್ ಹಾಗೂ ಬಿಜೆಪಿ ಎರಡೂ ಪಕ್ಷಕ್ಕೂ ಪ್ರಮುಖ ದಾಳವಾಗಿದ್ದಾರೆ. ತಮ್ಮ ಪ್ರಚಾರಗಳಿಗೆ ಇವರಿಬ್ಬರೂ ರಾಹುಲ್ ಅವರನ್ನು ಬಳಸಿಕೊಳ್ಳುವುದು ವಿಶೇಷ.
ಗುಂಪುಗಾರಿಕೆ ಇಲ್ಲ ಎನ್ನುತ್ತಲೇ ಗೇಮ್ ಪ್ಲ್ಯಾನ್: ಕರ್ನಾಟಕ ಕಾಂಗ್ರೆಸ್ ಬಗ್ಗೆ ದೆಹಲೀಲಿ ಸೋನಿಯಾ, ರಾಹುಲ್ ಚರ್ಚೆ?
ಕರ್ನಾಟಕ ಕಾಂಗ್ರೆಸ್ನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನಡುವಿನ ‘ಕೊಟ್ಟ ಮಾತು’ ಕುರಿತ ವಿವಾದ ತೀವ್ರಗೊಂಡಿದೆ. ಹೈಕಮಾಂಡ್ಗೆ ಬಿಸಿತುಪ್ಪವಾಗಿರುವ ಈ ಚರ್ಚೆ, 2023ರ ಸಿಎಂ ಆಯ್ಕೆ ವೇಳೆ ನಡೆದ ಒಪ್ಪಂದದ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಈ ಬಗ್ಗೆ ದೆಹಲಿಯಲ್ಲಿ ಸೋನಿಯಾ, ರಾಹುಲ್ ಗಾಂಧಿ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
- Prasanna Gaonkar
- Updated on: Dec 2, 2025
- 11:12 am
ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಹೊಸ ಎಫ್ಐಆರ್
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ಹಿರಿಯ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಹಾಗೂ ಇತರ ಹಲವಾರು ಪ್ರಮುಖ ವ್ಯಕ್ತಿಗಳ ವಿರುದ್ಧ ಪ್ರಥಮ ಮಾಹಿತಿ ವರದಿ (ಎಫ್ಐಆರ್) ದಾಖಲಿಸಿದ್ದಾರೆ. ಎಫ್ಐಆರ್ನಲ್ಲಿ ಪ್ರಮುಖ ಹೆಸರುಗಳು ಮತ್ತು ಆರೋಪಗಳು ಅಧಿಕೃತ ಮೂಲಗಳ ಪ್ರಕಾರ, ದೆಹಲಿ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗವು ಅಕ್ಟೋಬರ್ 3 ರಂದು ಗಾಂಧಿ ಕುಟುಂಬ ಮತ್ತು ಇತರ ಏಳು ಜನರ ವಿರುದ್ಧ ದೂರು ದಾಖಲಿಸಿದೆ.
- Nayana Rajeev
- Updated on: Nov 30, 2025
- 12:44 pm
ಕರ್ನಾಟಕ ಕಾಂಗ್ರೆಸ್ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಜತೆ ರಾಹುಲ್ ಗಾಂಧಿ ಮಹತ್ವದ ಸಭೆ
ಕರ್ನಾಕ ಕಾಂಗ್ರೆಸ್ ಆಂತರಿಕ ಬೆಳವಣಿಗೆಗಳ ಸಂಬಂಧ ರಾಹುಲ್ ಗಾಂಧಿ ನೇತೃತ್ವದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ದೆಹಲಿ ನಿವಾಸದಲ್ಲಿ ಮಹತ್ವದ ಸಭೆ ನಡೆದಿದೆ. ಮತ್ತೆ ನಾಳೆಯೂ ಸಭೆ ನಡೆಯುವ ನಿರೀಕ್ಷೆ ಇದೆ. ಇಂದಿನ ಸಭೆಯಲ್ಲಿ ಕೆಸಿ ವೇಣುಗೋಪಾಲ್, ಸುರ್ಜೆವಾಲ ಗೈರಾಗಿದ್ದು, ನಾಳಿನ ಸಭೆಗೆ ಹಾಜರಾಗುವ ನಿರೀಕ್ಷೆ ಇದೆ.
- Mahesha E
- Updated on: Nov 29, 2025
- 2:09 pm
ಕ್ಲೈಮ್ಯಾಕ್ಸ್ ಹಂತ ತಲುಪಿದ ಸಿಎಂ ಕುರ್ಚಿ ಕದನ: ಪದತ್ಯಾಗನಾ? ಪಟ್ಟಾಭಿಷೇಕನಾ?
ಕರ್ನಾಟಕ ಕಾಂಗ್ರೆಸ್ನಲ್ಲಿ ಕುರ್ಚಿ ಗುದ್ದಾಟ ದಿನಕ್ಕೊಂದು ತಿರುವು, ಕ್ಷಣಕ್ಕೊಂದು ದಿಕ್ಕು ಬದಲಿಸ್ತಿದೆ. ಕುರ್ಚಿ ಗುದ್ದಾಟ ತಾರಕಕ್ಕೇರ್ತಿದ್ದು, ಸಿಎಂ ಮತ್ತು ಡಿಸಿಎಂ ಬಣಗಳ ತಂತ್ರ ಪ್ರತಿತಂತ್ರ ಜೋರಾಗಿದೆ. ಹೀಗಾಗಿ ಕೈ ಪಾಳೆಯದಲ್ಲಿ ಉಂಟಾಗಿರುವ ನಾಯಕತ್ವ ಬದಲಾವಣೆ ಗುದ್ದಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಈ ತಿಂಗಳಾಂತ್ಯಕ್ಕೆ ಅಥವಾ ಡಿಸಿಎಂಬರ್ ಮೊದಲ ವಾರದೊಳಗೆ ಹೈಕಮಾಂಡ್ ಈ ಬಿಕ್ಕಟ್ಟಿಗೆ ಪರಿಹಾರ ಸೂತ್ರ ರೂಪಿಸುವ ಸಾಧ್ಯತೆಗಳಿವೆ.
- Ramesh B Jawalagera
- Updated on: Nov 28, 2025
- 4:26 pm
ಸಿದ್ದರಾಮಯ್ಯ ಮೇಲೆ ರಾಹುಲ್ ಗಾಂಧಿ ಬೇಸರ, ಗದ್ದುಗೆ ಗುದ್ದಾಟಕ್ಕೆ ಹೊಸ ತಿರುವು?
ದಿನದಿಂದ ದಿನಕ್ಕೆ ಹಾವು ಏಣಿಯಾಟದಂತೆ ನಡೆಯುತ್ತಿರುವ ಅಧಿಕಾರ ಹಸ್ತಾಂತರದ ಆಟ, ಈಗ ಬಣ ಬಡಿದಾಟವಾಗಿ ನಿಂತಿಲ್ಲ. ದೆಹಲಿಯಲ್ಲಿ ಭಾರಿ ಸಂಚಲನ ಸೃಷ್ಟಿ ಮೂಡಿಸಿದ ಈ ಬೆಳವಣಿಗೆ ಪಕ್ಷದ ನಾಯಕ ರಾಹುಲ್ ಗಾಂಧಿಗೂ ಸವಾಲಾಗಿದೆ. ಈ ಎಲ್ಲ ಬೆಳವಣಿಗೆ ಮತ್ತು ಇದರಲ್ಲಿ ಇಲ್ಲೀವರೆಗೆ ಸಿದ್ದರಾಮಯ್ಯ ಇಟ್ಟ ಹೆಜ್ಜೆ ಕುರಿತು ರಾಹುಲ್ ಬೇಸರಿಸಿಕೊಂಡಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
- Web contact
- Updated on: Nov 27, 2025
- 5:02 pm
ಕರ್ನಾಟಕ ಅಧಿಕಾರ ಹಂಚಿಕೆ: ಖರ್ಗೆ ಜತೆ ರಾಹುಲ್ ಗಾಂಧಿ 25 ನಿಮಿಷ ಮಾತುಕತೆ! ಏನೇನು ಚರ್ಚೆ ನಡೆಯಿತು ನೋಡಿ
ಕರ್ನಾಟಕ ಕಾಂಗ್ರೆಸ್ನ ಎಲ್ಲ ಬೆಳವಣಿಗೆಗಳು ಹೈಕಮಾಂಡ್ ಅಂಗಳ ತಲುಪಿವೆ. ರಾಹುಲ್ ಗಾಂಧಿ ವರದಿಗಳನ್ನು ತರಿಸಿಕೊಂಡು ಚರ್ಚೆ ನಡೆಸಿದ್ದಾರೆ. ಈ ಮಧ್ಯೆ, ಮಲ್ಲಕಾರ್ಜುನ ಖರ್ಗೆ ಜತೆ ರಾಹುಲ್ ಗಾಂಧಿ ಸುಮಾರು 25 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ. ಭವಿಷ್ಯದ ಚುನಾವಣೆ, ಜಾತಿವಾರು ವರದಿ ಕುರಿತು ಗಂಭೀರ ಚಿಂತನೆಗಳು ನಡೆಯುತ್ತಿವೆ.
- Ganapathi Sharma
- Updated on: Nov 27, 2025
- 8:21 am
ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಮಧ್ಯೆ ಸಂಧಾನಕ್ಕೆ ಮುಹೂರ್ತ ಫಿಕ್ಸ್! ಸಿಎಂ, ಡಿಸಿಎಂಗೆ ದೆಹಲಿಗೆ ಬುಲಾವ್ ಸಾಧ್ಯತೆ
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿನಿಂದ ದೆಹಲಿಗೆ ವಾಪಸ್ ಆಗಿದ್ದಾರೆ. ರಾಜ್ಯದಲ್ಲಿ ಅನೇಕ ನಾಯಕರ ಅಭಿಪ್ರಾಯ ಸಂಗ್ರಹಿಸಿರುವ ಖರ್ಗೆ ಅವರ ಮುಂದಿನ ನಡೆ ಕುತೂಹಲ ಮೂಡಿಸಿದೆ. ಈ ಮಧ್ಯೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಮಧ್ಯೆ ಸಂಧಾನಕ್ಕೆ ಹೈಕಮಾಂಡ್ ಮುಹೂರ್ತ ನಿಗದಿ ಮಾಡಿದೆ ಎಂಬ ಎಕ್ಸ್ಕ್ಲೂಸಿವ್ ಮಾಹಿತಿ ‘ಟಿವಿ9’ಗೆ ಲಭ್ಯವಾಗಿದೆ.
- Mahesha E
- Updated on: Nov 26, 2025
- 7:45 am
ದೆಹಲಿಯಿಂದ ಸಂದೇಶ ಹೊತ್ತು ತಂದ ಪ್ರಿಯಾಂಕ್ ಖರ್ಗೆ, ಪ್ರತ್ಯೇಕವಾಗಿ ಸಿಎಂ-ಡಿಸಿಎಂ ಭೇಟಿಯಾಗಿ ಚರ್ಚೆ
ರಾಹುಲ್ ಗಾಂಧಿ ಭೇಟಿ ಮಾಡಿ ಬೆಂಗಳೂರಿಗೆ ಬಂದಿಳಿದ ಪ್ರಿಯಾಂಕ್ ಖರ್ಗೆ, ನೇರವಾಗಿ ಹೋಗಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ರಾಹುಲ್ ಕೊಟ್ಟ ಸಂದೇಶವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಸುಮಾರು ಅರ್ಧ ಗಂಟೆ ಚರ್ಚಿಸಿದ ಬಳಿಕ ಪ್ರಿಯಾಂಕ್ ಖರ್ಗೆ ನೇರವಾಗಿ ಡಿಸಿಎಂ ನಿವಾಸಕ್ಕೆ ತೆರಳಿ ಡಿಕೆ ಶಿವಕುಮಾರ್ ಅವರನ್ನ ಭೇಟಿ ಮಾಡಿದ್ದು, ರಾಹುಲ್ ಗಾಂಧಿ ಹೇಳಿರುವುದನ್ನು ಡಿಕೆಶಿ ಗಮನಕ್ಕೆ ತಂದಿದ್ದಾರೆ.
- Ramesh B Jawalagera
- Updated on: Nov 25, 2025
- 6:20 pm
ಎಲ್ಲವೂ ಸುಭಿಕ್ಷವಾಗಿದೆ: ರಾಹುಲ್ ಗಾಂಧಿ ಭೇಟಿ ಬಳಿಕ ಬಿಕೆ ಹರಿಪ್ರಸಾದ್ ಅಚ್ಚರಿಕೆ ಹೇಳಿಕೆ
ಕರ್ನಾಟಕ ಸಿಎಂ ಕುರ್ಚಿ ಕದನ ಸಂಬಂಧ ದೆಹಲಿಯಲ್ಲಿ ಬಿರುಸಿನ ರಾಜಕೀಯ ಚಟುವಟಿಕೆಗಳು ನಡೆಯುತ್ತಿವೆ. ಡಿಕೆ ಶಿವಕುಮಾರ್ ಬಣದ ಶಾಸಕರು ದೆಹಲಿಯಲ್ಲೇ ಬೀಡುಬಿಟ್ಟಿದ್ದು, ಡಿಕೆಶಿ ಸಿಎಂ ಸ್ಥಾನ ಕೊಡಬೇಕೆಂದು ಹೈಕಮಾಂಡ್ ಮುಂದೆ ಪ್ರಸ್ತಾಪಿಸಲು ಕಸತ್ತು ನಡೆಸಿದ್ದಾರೆ. ಇದರ ನಡುವೆ ವಿಧಾನಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದು, ರಾಜ್ಯದ ರಾಜಕೀಯ ಪರಿಸ್ಥಿತಿ ಬಗ್ಗೆ ವರದಿ ಸಲ್ಲಿಸಿದ್ದಾರೆ.
- Ramesh B Jawalagera
- Updated on: Nov 24, 2025
- 9:43 pm
ಡಿಕೆಶಿ-ಸಿದ್ದು ಬಣ ಬಡಿದಾಟ ನಡುವೆ ತೂರಿ ಹೋಗಿ ರಾಹುಲ್ ಗಾಂಧಿ ಭೇಟಿಯಾದ ಬಿಕೆ ಹರಿಪ್ರಸಾದ್
ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ ಎರಡುವರೆ ವರ್ಷ ಪೂರ್ಣಗೊಳ್ಳುತ್ತಿದ್ದಂತೆಯೇ ಅಧಿಕಾರ ಹಂಚಿಕೆ ಕಿತ್ತಾಟ ಮುನ್ನೆಲೆಗೆ ಬಂದಿದೆ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ಕುರ್ಚಿ ಕದನ ದಿನಕ್ಕೊಂದು ಬೆಳವಣಿಗೆ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಈ ಬಗ್ಗೆ ಯಾವುದೇ ಕ್ರಮಕೈಗೊಳ್ಳದೇ ಸ್ವತಃ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ, ರಾಹುಲ್ ಗಾಂಧಿಯತ್ತ ಬೊಟ್ಟು ಮಾಡಿ ತಮ್ಮ ಅಸಹಾಯಕತೆ ತೋಡಿಕೊಂಡಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಬಿಕೆ ಹರಿಪ್ರಸಾದ್ ಅವರು ಸೈಲೆಂಟ್ ಆಗಿಯೇ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿದ್ದು, ಸದ್ಯ ರಾಜ್ಯದಲ್ಲಿ ಆಗುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಮಾಹಿತಿ ನೀಡಿದ್ದಾರೆ.
- Ramesh B Jawalagera
- Updated on: Nov 24, 2025
- 5:39 pm