Rahul Gandhi
ನೆಹರು ಕುಟುಂಬದ ನಾಲ್ಕನೇ ತಲೆಮಾರಿನ ಐದನೇ ನಾಯಕ ರಾಹುಲ್ ಗಾಂಧಿ. ನೆಹರು ಮರಿ ಮೊಮ್ಮಗ, ಇಂದಿರಾರ ಮೊಮ್ಮಗ ಹಾಗೂ ರಾಜೀವ್-ಸೋನಿಯಾ ಮಗ ಎನ್ನುವುದು ರಾಹುಲ್ಗೆ ಪ್ಲಸ್ ಹಾಗೂ ಮೈನಸ್ ಎರಡೂ ಹೌದು. ಕಳೆದ ಎರಡು ದಶಕಗಳಿಂದ ಭಾರತದ ರಾಜಕೀಯದಲ್ಲಿ ಸಕ್ರಿಯರಾಗಿರುವ ರಾಹುಲ್, ಪ್ರಧಾನಿಯಾಗುವ ಮಹತ್ವಾಕಾಂಕ್ಷೆ ಹೊಂದಿದ್ದಾರೆ. ಎಐಸಿಸಿ ಅಧ್ಯಕ್ಷರಾಗಿಯೂ ಕೆಲಸ ಮಾಡಿರುವ ರಾಹುಲ್, ಸತತ ಐದು ಬಾರಿ ಸಂಸದರಾಗಿ ಕೆಲಸ ಮಾಡಿದ್ದಾರೆ. ಆರಂಭದಲ್ಲಿ ಅಮೇಥಿ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ರಾಹುಲ್, ಈಗ ವಯ್ನಾಡು ಕ್ಷೇತ್ರ ಸದಸ್ಯರಾಗಿದ್ದಾರೆ. ವಿವಾದಾತ್ಮಕ ಹೇಳಿಕೆಗಳಿಗೆ ಹೆಸರುವಾಸಿಯಾಗಿರುವ ರಾಹುಲ್ ಗಾಂಧಿ, ಇದೇ ಕಾರಣದಿಂದ ಸಂಸದ ಸ್ಥಾನದಿಂದ ಅನರ್ಹರಾಗಿದ್ದರು. ಸದ್ಯ ಕೋರ್ಟ್ನಿಂದ ರಕ್ಷಣೆ ಪಡೆದು, ಮತ್ತೆ ಸದಸ್ಯತ್ವ ಪಡೆದಿದ್ದಾರೆ. ಮನಮೋಹನ್ ಸಿಂಗ್ ಸರ್ಕಾರದ ಸುಗ್ರೀವಾಜ್ಞೆಯನ್ನು ಹರಿದುಹಾಕಿದ್ದು, ರಫೇಲ್ ಹಾಗೂ ಅದಾನಿ ವಿರುದ್ಧ ಪ್ರಕರಣದಲ್ಲಿ ಧ್ವನಿ ಎತ್ತಿದ್ದು, ಎಐಸಿಸಿ ಅಧ್ಯಕ್ಷರಾಗಿ ಲೋಕಸಭೆ ಸೇರಿ ಹಲವು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ಸೋತಿದ್ದು ಹಾಗೂ ಭಾರತ್ ಜೋಡೋ ಯಾತ್ರೆಯು ರಾಹುಲ್ ಅವರ ರಾಜಕೀಯ ಪಥದಲ್ಲಿನ ಪ್ರಮುಖಾಂಶಗಳು. ರಾಹುಲ್ ಗಾಂಧಿ ಎನ್ನುವ ರಾಜಕೀಯ ವ್ಯಕ್ತಿಯು ಕಾಂಗ್ರೆಸ್ ಹಾಗೂ ಬಿಜೆಪಿ ಎರಡೂ ಪಕ್ಷಕ್ಕೂ ಪ್ರಮುಖ ದಾಳವಾಗಿದ್ದಾರೆ. ತಮ್ಮ ಪ್ರಚಾರಗಳಿಗೆ ಇವರಿಬ್ಬರೂ ರಾಹುಲ್ ಅವರನ್ನು ಬಳಸಿಕೊಳ್ಳುವುದು ವಿಶೇಷ.
ಔಪಚಾರಿಕವಾಗಿ ಮೂರ್ನಾಲ್ಕು ಬಾರಿ ಎಪ್ಸ್ಟೀನ್ ಭೇಟಿಯಾಗಿದ್ದೆ; ರಾಹುಲ್ ಗಾಂಧಿ ಆರೋಪಕ್ಕೆ ಸಚಿವ ಹರ್ದೀಪ್ ಪುರಿ ಸ್ಪಷ್ಟನೆ
ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರ ಆರೋಪಕ್ಕೆ ಕೇಂದ್ರ ಸಚಿವ ಹರ್ದೀಪ್ ಪುರಿ ಸ್ಪಷ್ಟನೆ ನೀಡಿದ್ದು, ಎಪ್ಸ್ಟೀನ್ ಜೊತೆಗಿನ ಭೇಟಿ ಐಪಿಐ ನಿಯೋಗದ ಶಿಷ್ಟಾಚಾರದ ಭಾಗವಾಗಿದ್ದವೇ ವಿನಃ ಬೇರೇನೂ ಇಲ್ಲ ಎಂದು ಹೇಳಿದ್ದಾರೆ. ಸಚಿವ ಹರ್ದೀಪ್ ಪುರಿ ಅವರ ಹೆಸರನ್ನು ಎಪ್ಸ್ಟೀನ್ ಫೈಲ್ಸ್ನಲ್ಲಿ ಉಲ್ಲೇಖಿಸಲಾಗಿದೆ ಎಂದು ರಾಹುಲ್ ಗಾಂಧಿ ಲೋಕಸಭೆಯಲ್ಲಿ ಹೇಳಿದ ನಂತರ ಈ ಸ್ಪಷ್ಟೀಕರಣ ಬಂದಿದೆ.
- Sushma Chakre
- Updated on: Feb 11, 2026
- 8:42 pm
ಭಾರತ ಮಾರಾಟಕ್ಕಿಲ್ಲ; ರಾಹುಲ್ ಗಾಂಧಿ ವಿರುದ್ಧ ಹಕ್ಕುಚ್ಯುತಿ ನೋಟಿಸ್ ನೀಡುವುದಾಗಿ ಕಿರಣ್ ರಿಜಿಜು ಎಚ್ಚರಿಕೆ
ಲೋಕಸಭೆಯಲ್ಲಿ ಇಂದು ರಾಹುಲ್ ಗಾಂಧಿಯವರ ಭಾಷಣ ಮುಗಿದ ನಂತರ ಪ್ರತಿಕ್ರಿಯೆ ನೀಡಿದ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ಭಾರತವನ್ನು ಯಾರೂ ಮಾರಾಟ ಮಾಡಲು ಸಾಧ್ಯವಿಲ್ಲ. ಕಾಂಗ್ರೆಸ್ ಪಕ್ಷವು ದೇಶವನ್ನು ದುರ್ಬಲಗೊಳಿಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಭಾರತದ ಅತ್ಯಂತ ಬಲಿಷ್ಠ ಪ್ರಧಾನಿ. ಭಾರತ ಪ್ರಗತಿ ಹೊಂದುತ್ತಿರುವುದರಿಂದ ಕಾಂಗ್ರೆಸ್ ದುಃಖಿತವಾಗಿದೆ ಎಂದು ಹೇಳಿದ್ದಾರೆ. ಇಂದು ಸದನದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಬಿಜೆಪಿ ಸಚಿವ ಕಿರಣ್ ರಿಜಿಜು ನಡುವೆ ತೀವ್ರ ವಾಕ್ಸಮರ ನಡೆಯಿತು.
- Sushma Chakre
- Updated on: Feb 11, 2026
- 6:39 pm
ಭಾರತ ಮಾತೆಯನ್ನು ಮಾರಲು ನಿಮಗೆ ನಾಚಿಕೆಯಾಗುವುದಿಲ್ಲವೇ? ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ
ಇಂದು ಲೋಕಸಭೆಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಇತ್ತೀಚೆಗೆ ಅಮೆರಿಕದೊಂದಿಗೆ ಅಂತಿಮಗೊಳಿಸಿದ ವ್ಯಾಪಾರ ಒಪ್ಪಂದದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮೇಲೆ ವಾಗ್ದಾಳಿ ಮಾಡಿದರು. ಭಾರತದ ಕೃಷಿ ಮತ್ತು ಡೈರಿ ಮಾರುಕಟ್ಟೆಗಳನ್ನು ಅಮೆರಿಕದ ಕೃಷಿ ಉತ್ಪನ್ನಗಳಿಗೆ ತೆರೆಯಲು ಒಪ್ಪುವ ಮೂಲಕ ಮೋದಿ ಸರ್ಕಾರ ಭಾರತ ಮಾತೆಯನ್ನು ಮಾರಾಟ ಮಾಡಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.
- Sushma Chakre
- Updated on: Feb 11, 2026
- 6:10 pm
ತಮಿಳುನಾಡಿನಲ್ಲಿ ಅಧಿಕಾರ ಹಂಚಿಕೆಯಿಲ್ಲ, ಡಿಎಂಕೆ ಸ್ವತಂತ್ರವಾಗಿ ಸರ್ಕಾರ ರಚಿಸಲಿದೆ; ಕಾಂಗ್ರೆಸ್ಗೆ ಸಿಎಂ ಸ್ಟಾಲಿನ್ ಸಂದೇಶ
ಡಿಎಂಕೆ ಮತ್ತು ಕಾಂಗ್ರೆಸ್ ನಡುವಿನ ಮೈತ್ರಿ ಗಟ್ಟಿಯಾಗಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಇಂದು ಹೇಳಿದ್ದಾರೆ. ಎರಡೂ ಪಕ್ಷಗಳ ನಡುವಿನ ಬಿರುಕುಗಳ ವರದಿಗಳನ್ನು ಅವರು ತಳ್ಳಿಹಾಕಿದ್ದಾರೆ. ಆದರೆ, ತಮಿಳುನಾಡಿನಲ್ಲಿ ಸಮ್ಮಿಶ್ರ ಸರ್ಕಾರದ ಸಾಧ್ಯತೆಯನ್ನು ಅವರು ನಿರಾಕರಿಸಿದ್ದಾರೆ. "ಸರ್ಕಾರದಲ್ಲಿ ಅಧಿಕಾರ ಹಂಚಿಕೊಳ್ಳುವುದು ತಮಿಳುನಾಡಿಗೆ ಸರಿಹೊಂದುವುದಿಲ್ಲ. ಕಾಂಗ್ರೆಸ್ಗೂ ಅದು ಚೆನ್ನಾಗಿ ತಿಳಿದಿದೆ" ಎಂದು ಡಿಎಂಕೆ ಮುಖ್ಯಸ್ಥರೂ ಆಗಿರುವ ಸ್ಟಾಲಿನ್ ಸ್ಪಷ್ಟಪಡಿಸಿದ್ದಾರೆ.
- Sushma Chakre
- Updated on: Feb 11, 2026
- 4:41 pm
ಸಿಎಂ ಸ್ಥಾನಕ್ಕೆ ಬಿಗಿಪಟ್ಟು: ರಾಹುಲ್ ಗಾಂಧಿ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ನಲ್ಲಿ ಕುರ್ಚಿ ಕಿತ್ತಾಟ ಜೋರಾಗಿದ್ದು, ಇದೀಗ ದೆಹಲಿ ಅಂಗಳ ತಲುಪಿದೆ. ಸಿಎಂ ಪಟ್ಟಕ್ಕಾಗಿ ಪಟ್ಟು ಹಿಡಿದಿರುವ ಡಿಕೆ ಶಿವಕುಮಾರ್ ರಾಹುಲ್ ಗಾಂಧಿ ಮನವೊಲಿಕೆಗೆ ಪ್ಲಾನ್ ಮಾಡಿದ್ದಾರೆ. ಹೀಗಾಗಿ ಅಸ್ಸಾಂ ಚುನಾವಣಾ ಪೂರ್ವ ಸಿದ್ಧತೆ ನೆಪದಲ್ಲಿ ದೆಹಲಿಗೆ ತೆರಳಿರುವ ಡಿಕೆ ಶಿವಕುಮಾರ್, ರಾಹುಲ್ ಗಾಂಧಿ ಭೇಟಿಗೆ ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಡಿಕೆ ಶಿವಕುಮಾರ್, ರಾಹುಲ್ ಗಾಂಧಿ ಭೇಟಿಗೆ ಇನ್ನೂ ಸಮಯ ಕೇಳಿಲ್ಲ. ಅಸ್ಸಾಂ ರಾಜ್ಯದ ಚುನಾವಣೆ ವಿಚಾರದ ಜಂಜಾಟದಲ್ಲಿದ್ದೇನೆ. ನಾನು ಯಾರನ್ನೂ ಭೇಟಿ ಮಾಡಿಲ್ಲ. ಸುಮ್ಮನೇ ವಿಭಿನ್ನ ರೀತಿಯಲ್ಲಿ ಬೇಡ, ಮಾತನಾಡುತ್ತೇನೆ ಎಂದಿದ್ದಾರೆ.
- Ramesh B Jawalagera
- Updated on: Feb 11, 2026
- 3:01 pm
ಮಾಜಿ ಸೇನಾ ಮುಖ್ಯಸ್ಥ ನರವಾಣೆಯ ವಿವಾದಿತ ಪುಸ್ತಕ ಎಲ್ಲೂ ಪ್ರಕಟವೇ ಆಗಿಲ್ಲ; ಪೆಂಗ್ವಿನ್ ಪ್ರಕಾಶನದಿಂದ ಸ್ಪಷ್ಟನೆ
ಭಾರತದ ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರ ವಿವಾದಿತ ಆತ್ಮಚರಿತ್ರೆಯ ಬಗ್ಗೆ ಈ ಬಾರಿಯ ಲೋಕಸಭಾ ಅಧಿವೇಶನದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಸ್ತಾಪಿಸಿದ್ದಕ್ಕೆ ಭಾರೀ ಗದ್ದಲ ಏರ್ಪಟ್ಟಿತ್ತು. ಇನ್ನೂ ಪ್ರಕಟವಾಗದ ಪುಸ್ತಕವನ್ನು ಸದನದಲ್ಲಿ ಓದುವಂತಿಲ್ಲ ಎಂದು ಆಡಳಿತ ಪಕ್ಷದ ನಾಯಕರು ವಿರೋಧ ವ್ಯಕ್ತಪಡಿಸಿದ್ದು ಗದ್ದಲಕ್ಕೆ ಕಾರಣವಾಗಿತ್ತು. ಇದೀಗ ಪ್ರಕಾಶಕರಾದ ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ ನರವಾಣೆಯವರ ಆತ್ಮಚರಿತ್ರೆ ಇನ್ನೂ ಪ್ರಕಟವಾಗಿಲ್ಲ, ಯಾವುದೇ ಆನ್ಲೈನ್ನಲ್ಲಿ ಕೂಡ ಇದರ ಸಾಫ್ಟ್ ಕಾಫಿಯನ್ನು ಹರಿಯಬಿಟ್ಟಿಲ್ಲ ಎಂದು ಸ್ಪಷ್ಟನೆ ನೀಡಿದೆ.
- Sushma Chakre
- Updated on: Feb 10, 2026
- 8:15 pm
ಮಾಜಿ ಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಅಪ್ರಕಟಿತ ಪುಸ್ತಕದ ಪ್ರಸಾರದ ಕುರಿತು ಕೇಸ್ ದಾಖಲು
ವಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರದ ನಡುವಿನ ಗಲಭೆಯ ಕೇಂದ್ರಬಿಂದುವಾಗಿರುವ ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆಯನ್ನು ಪಿಡಿಎಫ್ ರೂಪದಲ್ಲಿ ಎಲ್ಲೆಡೆ ಹಂಚುತ್ತಿರುವ ಬಗ್ಗೆ ದೆಹಲಿ ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದಾರೆ. 'ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ' ಪುಸ್ತಕದ ಸಾಫ್ಟ್ ಕಾಪಿಯನ್ನು ಆನ್ಲೈನ್ನಲ್ಲಿ ಪ್ರಸಾರ ಮಾಡಲಾಗುತ್ತಿದೆ ಎಂಬುದು ಗಮನಕ್ಕೆ ಬಂದ ಬಳಿಕ ದೆಹಲಿ ಪೊಲೀಸ್ ಕೇಸ್ ದಾಖಲಿಸಿದ್ದಾರೆ.
- Sushma Chakre
- Updated on: Feb 9, 2026
- 9:05 pm
ಸಿಖ್ಖರಿಗೆ ಮಾಡಿದ ಅವಮಾನ; ರಾಹುಲ್ ಗಾಂಧಿಯ ದೇಶದ್ರೋಹಿ ಹೇಳಿಕೆಗೆ ಮೋದಿ ಆಕ್ರೋಶ
ರವನೀತ್ ಸಿಂಗ್ ಬಿಟ್ಟು ಅವರನ್ನು ದೇಶದ್ರೋಹಿ ಎಂದು ಕರೆಯಲು ಅವರು ಸಿಖ್ ಸಮುದಾಯದವರು ಎಂಬುದೇ ಕಾರಣ. ಇದು ಸಿಖ್ಖರಿಗೆ ಮಾಡಿದ ಅವಮಾನ, ಗುರುಗಳಿಗೆ ಮಾಡಿದ ಅವಮಾನ. ಇದು ಕಾಂಗ್ರೆಸ್ನಲ್ಲಿ ತುಂಬಿರುವ ಸಿಖ್ಖರ ಮೇಲಿನ ದ್ವೇಷದ ಅಭಿವ್ಯಕ್ತಿಯಾಗಿತ್ತು. ರವನೀತ್ ಬಿಟ್ಟು ದೇಶಕ್ಕಾಗಿ ತಮ್ಮನ್ನು ತಾವು ತ್ಯಾಗ ಮಾಡಿದ ಕುಟುಂಬದ ಸದಸ್ಯ. ಅಂಥವರನ್ನು ದೇಶದ್ರೋಹಿ ಎಂದು ಕರೆಯುವುದನ್ನು ದೇಶ ಹೇಗೆ ಸಹಿಸಿಕೊಳ್ಳುತ್ತದೆ? ಇದು ಅತ್ಯಂತ ದುರದೃಷ್ಟಕರ ಎಂದು ಪ್ರಧಾನಿ ಮೋದಿ ಆಕ್ರೋಶ ಹೊರಹಾಕಿದ್ದಾರೆ.
- Sushma Chakre
- Updated on: Feb 5, 2026
- 7:33 pm
ಸಿಖ್ಖರನ್ನು ಕೊಂದ ಗಾಂಧಿ ಕುಟುಂಬದ ಕುಡಿಯೊಂದಿಗೆ ನಾನು ಕೈಕುಲುಕುವುದಿಲ್ಲ; ರವನೀತ್ ಬಿಟ್ಟು ಪ್ರತಿಕ್ರಿಯೆ
ರಾಹುಲ್ ಗಾಂಧಿಯವರಿಗೆ ಹ್ಯಾಂಡ್ಶೇಕ್ ಏಕೆ ನೀಡಲಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ ಕೇಂದ್ರ ಸಚಿವ ರವನೀತ್ ಸಿಂಗ್ ಬಿಟ್ಟು, 1984ರಲ್ಲಿ ಗೋಲ್ಡನ್ ಟೆಂಪಲ್ ಸಂಕೀರ್ಣದಿಂದ ಉಗ್ರರನ್ನು ಹೊರಹಾಕಲು ನಡೆಸಿದ ಮಿಲಿಟರಿ ದಾಳಿ ಆಪರೇಷನ್ ಬ್ಲೂ ಸ್ಟಾರ್ ಮತ್ತು ಸಿಖ್ ವಿರೋಧಿ ಗಲಭೆಗಳ ಬಗ್ಗೆ ಗಾಂಧಿ ಕುಟುಂಬವನ್ನು ಟೀಕಿಸಿದರು. ಸಿಖ್ಖರ ಕೊಲೆಗಾರ ಗಾಂಧಿ ಕುಟುಂಬದ ಕುಡಿಯೊಂದಿಗೆ ಸರ್ದಾರ್ ಎಂದಿಗೂ ಕೈಕುಲುಕುವುದಿಲ್ಲ ಎಂದು ರವನೀತ್ ಬಿಟ್ಟು ಹೇಳಿದ್ದಾರೆ.
- Sushma Chakre
- Updated on: Feb 4, 2026
- 4:29 pm
ದೇಶದ್ರೋಹಿ ಸ್ನೇಹಿತ; ಕೇಂದ್ರ ಸಚಿವ ರವನೀತ್ ಬಿಟ್ಟುಗೆ ರಾಹುಲ್ ಗಾಂಧಿ ಲೇವಡಿ, ಸಂಸತ್ ಹೊರಗೆ ವಾಗ್ವಾದ
ನಿನ್ನೆ ಲೋಕಸಭಾ ಅಧಿವೇಶನದ ವೇಳೆ ಸಂಸತ್ ಒಳಗೆ ಉದ್ವಿಗ್ನತೆ ಸೃಷ್ಟಿಸಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಸಂಸತ್ ಹೊರಗೆ ಬಿಜೆಪಿ ನಾಯಕ ಹಾಗೂ ಕೇಂದ್ರ ಸಚಿವರನ್ನು ಕೆಣಕುವ ಮೂಲಕ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಸಂಸತ್ ಭವನದ ಹೊರಗೆ ಕುಳಿತಿದ್ದಾಗ ತಮ್ಮ ಮುಂದೆ ಹೋಗುತ್ತಿದ್ದ ಕೇಂದ್ರ ಸಚಿವ ರವನೀತ್ ಬಿಟ್ಟು ಅವರನ್ನು ನೋಡಿದ ರಾಹುಲ್ ಗಾಂಧಿ "ನನ್ನ ದೇಶದ್ರೋಹಿ ಗೆಳೆಯ ಬಂದರು ನೋಡಿ, ಹೇಗಿದ್ದೀರಿ?" ಎಂದು ಹ್ಯಾಂಡ್ ಶೇಕ್ ಮಾಡಲು ಹೋಗಿದ್ದಾರೆ. ಆದರೆ, ರವನೀತ್ ಬಿಟ್ಟು ರಾಹುಲ್ ಗಾಂಧಿಗೆ ಹಸ್ತಲಾಘವ ನೀಡಲು ನಿರಾಕರಿಸಿದ್ದಾರೆ. ಆಮೇಲೇನಾಯ್ತು?
- Sushma Chakre
- Updated on: Feb 4, 2026
- 3:38 pm
ಅಮೆರಿಕದೊಂದಿಗೆ ವ್ಯಾಪಾರ ಒಪ್ಪಂದ; ದಾರಿ ತಪ್ಪಿಸುತ್ತಿರುವ ರಾಹುಲ್ ಗಾಂಧಿ: ವಾಣಿಜ್ಯ ಸಚಿವರ ಟೀಕೆ
Piyush Goyal criticizes Rahul Gandhi's double standards on India US trade deal: ಅಮೆರಿಕದೊಂದಿಗೆ ಭಾರತ ಮಾಡಿಕೊಂಡಿರುವ ಒಪ್ಪಂದ ಅತ್ಯುತ್ತಮವಾದುದು ಎಂದು ಪೀಯೂಶ್ ಗೋಯಲ್ ಹೇಳಿದ್ದಾರೆ. ಭಾರತದ ನೆರೆ ದೇಶಗಳೊಂದಿಗೆ ಅಮೆರಿಕ ಮಾಡಿಕೊಂಡು ಒಪ್ಪಂದಗಳಲ್ಲೇ ಇದು ಬೆಸ್ಟ್ ಎಂದು ಅಭಿಪ್ರಾಯಪಟ್ಟಿದ್ದಾರೆ. ಅಮೆರಿಕದೊಂದಿಗೆ ವ್ಯಾಪಾರ ಒಪ್ಪಂದ ವಿಳಂಬ ಆಗುತ್ತಿದೆ ಎಂದು ಹೇಳುತ್ತಿದ್ದ ರಾಹುಲ್ ಗಾಂಧಿ ಈಗ ಟೀಕಿಸುತ್ತಿರುವುದು ಅವರ ದ್ವಂದ್ವ ಮನೋಭಾವನೆ ತೋರಿಸುತ್ತದೆ ಎಂದೂ ಗೋಯಲ್ ಟೀಕಿಸಿದ್ದಾರೆ.
- Vijaya Sarathy SN
- Updated on: Feb 3, 2026
- 7:16 pm
ಪ್ರಧಾನಿ ಮೋದಿ ರಾಜಿ ಮಾಡಿಕೊಂಡು ರಾಷ್ಟ್ರವನ್ನೇ ಮಾರಿದ್ದಾರೆ; ಅಮೆರಿಕ ವ್ಯಾಪಾರ ಒಪ್ಪಂದದ ಬಗ್ಗೆ ರಾಹುಲ್ ಗಾಂಧಿ ಆರೋಪ
ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇಂದು ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಸ್ಫೋಟಕ ಆರೋಪಗಳನ್ನು ಹೊರಿಸಿದ್ದಾರೆ. ಒತ್ತಡದಿಂದ ಪ್ರಧಾನಿ ಮೋದಿ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ಆದರೆ, ಈಗ ಅದು ಅವರ ಇಮೇಜ್ಗೆ ಹಾನಿ ಉಂಟುಮಾಡಬಹುದು ಎಂದು ಭಯಪಡುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ. ಲೋಕಸಭಾ ಅಧಿವೇಶನದಲ್ಲಿ ಮಾತನಾಡಲು ಎದ್ದು ನಿಂತಾಗ ಆಡಳಿತ ಪಕ್ಷದವರು ವಿರೋಧಿಸಿದರು. ಇದರಿಂದ ಕೆಲಕಾಲ ಸದನದಲ್ಲಿ ಮಾತಿನ ಚಕಮಕಿ ಏರ್ಪಟ್ಟು, ಕಲಾಪವನ್ನು ಮುಂದೂಡಲಾಯಿತು.
- Sushma Chakre
- Updated on: Feb 3, 2026
- 5:25 pm