Rahul Gandhi
ನೆಹರು ಕುಟುಂಬದ ನಾಲ್ಕನೇ ತಲೆಮಾರಿನ ಐದನೇ ನಾಯಕ ರಾಹುಲ್ ಗಾಂಧಿ. ನೆಹರು ಮರಿ ಮೊಮ್ಮಗ, ಇಂದಿರಾರ ಮೊಮ್ಮಗ ಹಾಗೂ ರಾಜೀವ್-ಸೋನಿಯಾ ಮಗ ಎನ್ನುವುದು ರಾಹುಲ್ಗೆ ಪ್ಲಸ್ ಹಾಗೂ ಮೈನಸ್ ಎರಡೂ ಹೌದು. ಕಳೆದ ಎರಡು ದಶಕಗಳಿಂದ ಭಾರತದ ರಾಜಕೀಯದಲ್ಲಿ ಸಕ್ರಿಯರಾಗಿರುವ ರಾಹುಲ್, ಪ್ರಧಾನಿಯಾಗುವ ಮಹತ್ವಾಕಾಂಕ್ಷೆ ಹೊಂದಿದ್ದಾರೆ. ಎಐಸಿಸಿ ಅಧ್ಯಕ್ಷರಾಗಿಯೂ ಕೆಲಸ ಮಾಡಿರುವ ರಾಹುಲ್, ಸತತ ಐದು ಬಾರಿ ಸಂಸದರಾಗಿ ಕೆಲಸ ಮಾಡಿದ್ದಾರೆ. ಆರಂಭದಲ್ಲಿ ಅಮೇಥಿ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ರಾಹುಲ್, ಈಗ ವಯ್ನಾಡು ಕ್ಷೇತ್ರ ಸದಸ್ಯರಾಗಿದ್ದಾರೆ. ವಿವಾದಾತ್ಮಕ ಹೇಳಿಕೆಗಳಿಗೆ ಹೆಸರುವಾಸಿಯಾಗಿರುವ ರಾಹುಲ್ ಗಾಂಧಿ, ಇದೇ ಕಾರಣದಿಂದ ಸಂಸದ ಸ್ಥಾನದಿಂದ ಅನರ್ಹರಾಗಿದ್ದರು. ಸದ್ಯ ಕೋರ್ಟ್ನಿಂದ ರಕ್ಷಣೆ ಪಡೆದು, ಮತ್ತೆ ಸದಸ್ಯತ್ವ ಪಡೆದಿದ್ದಾರೆ. ಮನಮೋಹನ್ ಸಿಂಗ್ ಸರ್ಕಾರದ ಸುಗ್ರೀವಾಜ್ಞೆಯನ್ನು ಹರಿದುಹಾಕಿದ್ದು, ರಫೇಲ್ ಹಾಗೂ ಅದಾನಿ ವಿರುದ್ಧ ಪ್ರಕರಣದಲ್ಲಿ ಧ್ವನಿ ಎತ್ತಿದ್ದು, ಎಐಸಿಸಿ ಅಧ್ಯಕ್ಷರಾಗಿ ಲೋಕಸಭೆ ಸೇರಿ ಹಲವು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ಸೋತಿದ್ದು ಹಾಗೂ ಭಾರತ್ ಜೋಡೋ ಯಾತ್ರೆಯು ರಾಹುಲ್ ಅವರ ರಾಜಕೀಯ ಪಥದಲ್ಲಿನ ಪ್ರಮುಖಾಂಶಗಳು. ರಾಹುಲ್ ಗಾಂಧಿ ಎನ್ನುವ ರಾಜಕೀಯ ವ್ಯಕ್ತಿಯು ಕಾಂಗ್ರೆಸ್ ಹಾಗೂ ಬಿಜೆಪಿ ಎರಡೂ ಪಕ್ಷಕ್ಕೂ ಪ್ರಮುಖ ದಾಳವಾಗಿದ್ದಾರೆ. ತಮ್ಮ ಪ್ರಚಾರಗಳಿಗೆ ಇವರಿಬ್ಬರೂ ರಾಹುಲ್ ಅವರನ್ನು ಬಳಸಿಕೊಳ್ಳುವುದು ವಿಶೇಷ.
ಫಾಕ್ಸ್ಕಾನ್ ಘಟಕ; ಕರ್ನಾಟಕ ಮಾದರಿ ಎಂದ ರಾಹುಲ್ ಗಾಂಧಿ; ಇದು ಮೇಕ್ ಇನ್ ಇಂಡಿಯಾ ಎಫೆಕ್ಟ್ ಎಂದ ಕೇಂದ್ರ ಸಚಿವ
Union minister Vaishnaw gives cheeky reply to Rahul Gandhi on Foxconn factory: ದೇವನಹಳ್ಳಿಯಲ್ಲಿ ಫಾಕ್ಸ್ಕಾನ್ ಘಟಕ ಸ್ಥಾಪನೆ ಬಗ್ಗೆ ಪ್ರತಿಕ್ರಿಯಿಸಿ ರಾಹುಲ್ ಗಾಂಧಿ ಅವರು ಕರ್ನಾಟಕ ಮಾದರಿಯಾಗಿದೆ ಎಂದಿದ್ದಾರೆ. ಇದಕ್ಕೆ ತಮಾಷೆಯಾಗಿ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಎ ವೈಷ್ಣವ್, ಮೇಕ್ ಇನ್ ಇಂಡಿಯಾವನ್ನು ಗುರುತಿಸಿದ್ದಕ್ಕೆ ಥ್ಯಾಂಕ್ಸ್ ಎಂದಿದ್ದಾರೆ. ಫಾಕ್ಸ್ಕಾನ್ ತನ್ನ ದೇವನಹಳ್ಳಿ ಘಟಕದಲ್ಲಿ 30,000 ಮಂದಿ ಉದ್ಯೋಗಿಗಳನ್ನು ಕೇವಲ 8-9 ತಿಂಗಳಲ್ಲಿ ನೇಮಕ ಮಾಡಿಕೊಂಡಿದೆ.
- Vijaya Sarathy SN
- Updated on: Dec 25, 2025
- 4:24 pm
ಸತ್ತ ಆರ್ಥಿಕತೆಯಷ್ಟೇ ಅಲ್ಲ, ಸತ್ತ ಸಮಾಜವೂ ಆಗುತ್ತಿದ್ದೇವೆ: ಉನ್ನಾವೋ ರೇಪ್ ಸಂತ್ರಸ್ತೆ ಭೇಟಿ ಬಳಿಕ ರಾಹುಲ್ ಗಾಂಧಿ ಆಕ್ರೋಶದ ಹೇಳಿಕೆ
Unnao rape survivor meets Rahul Gandhi: ಉನ್ನಾವೋ ಅತ್ಯಾಚಾರ ಸಂತ್ರಸ್ತೆ ಹಾಗೂ ಆಕೆಯ ತಾಯಿ ಇಂದು ರಾಹುಲ್ ಗಾಂಧಿಯನ್ನು ಭೇಟಿ ಮಾಡಿ ತಮ್ಮ ಅಳಲು ತೋಡಿಕೊಂಡಿದ್ದಾರೆ. ಅತ್ಯಾಚಾರ ಆರೋಪಿ ಶಾಸಕ ಕುಲದೀಪ್ ಸಿಂಗ್ ಸೆಂಗರ್ ಅವರನ್ನು ಜೈಲಿನಿಂದ ಬಿಡುಗಡೆ ಮಾಡಿದ್ದನ್ನು ರೇಪ್ ಸಂತ್ರಸ್ತೆ ವಿರೋಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಮೂರು ನೆರವುಗಳನ್ನು ಕೇಳಿದ್ದಾರೆ. ಪ್ರಧಾನಿಯನ್ನೂ ಭೇಟಿ ಮಾಡಬಯಸಿದ್ದಾರೆ.
- Vijaya Sarathy SN
- Updated on: Dec 24, 2025
- 8:16 pm
Manufacturing sector: ಮತ್ತೆ ವಿದೇಶದಲ್ಲಿ ಭಾರತದ ವಿರುದ್ಧ ರಾಹುಲ್ ಧ್ವನಿ; ಸತ್ಯ ಎಷ್ಟು, ಸುಳ್ಳೆಷ್ಟು?
Is Indian manufacturing declining in India as alleged by Rahul Gandhi: ಭಾರತದಲ್ಲಿ ಉತ್ಪಾದನೆ ಕುಂಠಿತಗೊಂಡಿದೆ ಎಂದು ಜರ್ಮನಿಯ ಮ್ಯೂನಿಕ್ನಲ್ಲಿ ರಾಹುಲ್ ಗಾಂಧಿ ಹೇಳಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಅವರ ಹೇಳಿಕೆಗೆ ಹಲವರು ತಿರುಗೇಟು ನೀಡಿದ್ದಾರೆ. ದತ್ತಾಂಶ ಸಹಿತವಾಗಿ ವಸ್ತುಸ್ಥಿತಿಯನ್ನು ಪ್ರಸ್ತುತಪಡಿಸಿದ್ದಾರೆ. 2014ರಿಂದೀಚೆಗೆ ಭಾರತದಲ್ಲಿ ಉತ್ಪಾದನೆ ಎಷ್ಟು ಹೆಚ್ಚಾಗಿದೆ, ಆಟೊಮೊಬೈಲ್ ಸೆಕ್ಟರ್ ಎಷ್ಟು ಬಲಗೊಂಡಿದೆ ಎಂಬುದನ್ನು ತೋರಿಸಿದ್ದಾರೆ.
- Vijaya Sarathy SN
- Updated on: Dec 18, 2025
- 3:46 pm
ಬಹಿರಂಗವಾಗಿ ಕ್ಷಮೆ ಕೇಳಿ; ರ್ಯಾಲಿಯಲ್ಲಿ ‘ಮೋದಿ ಸಮಾಧಿ’ ಘೋಷಣೆ ಕೂಗಿದ ಕಾಂಗ್ರೆಸ್ ವಿರುದ್ಧ ಕಿರಣ್ ರಿಜಿಜು ಆಕ್ರೋಶ
ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆದ ಕಾಂಗ್ರೆಸ್ ರ್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ವಿವಾದಾತ್ಮಕ ಘೋಷಣೆಗಳನ್ನು ಕೂಗಲಾಗಿತ್ತು. ಮೋದಿ ಸಮಾಧಿ ಅಗೆಯಬೇಕು ಎಂಬೆಲ್ಲ ಘೋಷಣೆಗಳನ್ನು ಕಾಂಗ್ರೆಸ್ ಕಾರ್ಯಕರ್ತರು ಕೂಗಿದ್ದರು. ಹೀಗಾಗಿ, ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಕ್ಷಮೆ ಯಾಚಿಸಬೇಕೆಂದು ಬಿಜೆಪಿ ಆಗ್ರಹಿಸಿದೆ.
- Sushma Chakre
- Updated on: Dec 15, 2025
- 4:45 pm
ವೋಟ್ ಚೋರಿ ವಿರುದ್ಧ ಕಾಂಗ್ರೆಸ್ ಹೋರಾಟ: ದೆಹಲಿಯಲ್ಲಿ ಪ್ರತಿಧ್ವನಿಸಿದ ಆಳಂದ ಕ್ಷೇತ್ರದ ಮತಗಳ್ಳತನ
ಮತಗಳ್ಳತನ ಬಾಂಬ್ ಕರ್ನಾಟಕದಿಂದಲೇ ಸಿಡಿದಿತ್ತು. ಕಲಬುರಗಿಯ ಆಳಂದ, ಬೆಂಗಳೂರಿನ ಮಹದೇವಪುರ ಕ್ಷೇತ್ರದಲ್ಲಿನ ವೋಟ್ ಚೋರಿ ಆರೋಪದ ವಿಚಾರ ಸಾಕಷ್ಟು ಸದ್ದು ಮಾಡಿತ್ತು. ಖುದ್ದು ರಾಹುಲ್ ಗಾಂಧಿ, ಈ ವಿಚಾರವನ್ನ ಕೈಗೆತ್ತಿಕೊಂಡು ಸಮರ ಸಾರಿದ್ದರು. ಈಗ ದೆಹಲಿಯಲ್ಲಿ ಬೃಹತ್ ಪ್ರತಿಭಟನೆ ಮಾಡಿದ್ದು, ಆ ಮೂಲಕ ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗದ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.
- Mahesha E
- Updated on: Dec 14, 2025
- 5:34 pm
ನೆಹರು, ಇಂದಿರಾ ಗಾಂಧಿ, ಸೋನಿಯಾ ಗಾಂಧಿಯಿಂದಲೂ ಮತಗಳ್ಳತನ; ಅಮಿತ್ ಶಾ ವಾಗ್ದಾಳಿ
ಲೋಕಸಭಾ ಅಧಿವೇಶನದಲ್ಲಿ ಮತ್ತೊಮ್ಮೆ ಎಸ್ಐಆರ್ ಕುರಿತು ಚರ್ಚೆ ಭುಗಿಲೆದ್ದಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಗೃಹ ಸಚಿವ ಅಮಿತ್ ಶಾ ನಡುವೆ ಈ ಚರ್ಚೆ ಕಾವೇರಿದ್ದು, ಈ ವೇಳೆ ಅಮಿತ್ ಶಾ ಕಾಂಗ್ರೆಸ್ ನಾಯಕರ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದಾರೆ. ನೆಹರು, ಇಂದಿರಾ ಗಾಂಧಿ, ಸೋನಿಯಾ ಗಾಂಧಿಗೂ ಮತಗಳ್ಳತನಕ್ಕೂ ನಂಟಿದೆ ಎಂದು ಅವರು ಹೇಳಿದ್ದಾರೆ. ಇದರಿಂದ ಇಬ್ಬರೂ ನಾಯಕರ ನಡುವೆ ತೀವ್ರ ಚರ್ಚೆ ಏರ್ಪಟ್ಟಿತು.
- Sushma Chakre
- Updated on: Dec 10, 2025
- 7:16 pm
ಪ್ರಧಾನಿ ಮೋದಿ ಕೂಡ ವಿದೇಶ ಪ್ರವಾಸದಲ್ಲೇ ಇರುತ್ತಾರಲ್ಲ; ರಾಹುಲ್ ಕುರಿತ ಬಿಜೆಪಿ ಟೀಕೆಗೆ ಪ್ರಿಯಾಂಕಾ ಗಾಂಧಿ ತಿರುಗೇಟು
ಬಿಜೆಪಿ ಇಂದು ಕಾಂಗ್ರೆಸ್ ಸಂಸದ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಮುಂಬರುವ ಜರ್ಮನಿ ಪ್ರವಾಸದ ಬಗ್ಗೆ ಟೀಕಾಪ್ರಹಾರ ನಡೆಸಿದ್ದಾರೆ. ಲೋಕಸಭಾ ಅಧಿವೇಶನದ ವೇಳೆ ವಿದೇಶಕ್ಕೆ ಹೋಗುತ್ತಾರೆ, ಆಮೇಲೆ ಬಂದು ನನಗೆ ಮಾತನಾಡಲು ಅವಕಾಶವೇ ಸಿಗಲಿಲ್ಲ ಎನ್ನುತ್ತಾರೆ ಎಂದು ಬಿಜೆಪಿ ನಾಯಕರು ಟೀಕಿಸಿದ್ದಾರೆ. ಈ ಹೇಳಿಕೆಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕೂಡ ವಿದೇಶ ಪ್ರವಾಸದಲ್ಲೇ ಇರುತ್ತಾರೆ ಎನ್ನುವ ಮೂಲಕ ಅವರು ಬಿಜೆಪಿಗೆ ತಿರುಗೇಟು ನೀಡಿದ್ದಾರೆ.
- Sushma Chakre
- Updated on: Dec 10, 2025
- 6:13 pm
ಅಧಿವೇಶನ ನಡೆಯುವಾಗಲೇ ರಾಹುಲ್ ಗಾಂಧಿ ವಿದೇಶ ಪ್ರವಾಸ ಮಾಡ್ತಾರೆ; ಪ್ರಲ್ಹಾದ್ ಜೋಶಿ ಟೀಕೆ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಬುಧವಾರ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿದೇಶ ಪ್ರವಾಸಗಳ ಬಗ್ಗೆ ಟೀಕಿಸಿದ್ದಾರೆ. ಸಂಸತ್ತು ಅಧಿವೇಶನ ನಡೆಯುವಾಗಲೆಲ್ಲಾ ಅವರು ಹೆಚ್ಚಾಗಿ ವಿದೇಶದಲ್ಲಿಯೇ ಇರುತ್ತಾರೆ ಎಂದು ಹೇಳಿದ್ದಾರೆ. ರಾಹುಲ್ ಗಾಂಧಿಯವರು ಡಿಸೆಂಬರ್ 15ರಂದು ಜರ್ಮನಿಗೆ ಭೇಟಿ ನೀಡಲಿದ್ದಾರೆ. ಅಲ್ಲಿ ಅವರು ಭಾರತೀಯ ವಲಸಿಗರು ಮತ್ತು ಜರ್ಮನ್ ಸರ್ಕಾರದ ಮಂತ್ರಿಗಳನ್ನು ಭೇಟಿ ಮಾಡಲಿದ್ದಾರೆ. ವಿದೇಶ ಪ್ರವಾಸ ಮಾಡುವ ಅವರ ಈ ನಿರ್ಧಾರವು ಈಗಾಗಲೇ ಆಡಳಿತ ಮತ್ತು ಮಿತ್ರ ಪಕ್ಷಗಳೊಳಗಿನ ವಿಮರ್ಶಕರಿಂದ ತೀವ್ರ ಪ್ರತಿಕ್ರಿಯೆಗಳನ್ನು ಹುಟ್ಟುಹಾಕಿದೆ.
- Sushma Chakre
- Updated on: Dec 10, 2025
- 5:30 pm
ಪ್ರವಾಸದ ನಾಯಕ; ರಾಹುಲ್ ಗಾಂಧಿಯ ಜರ್ಮನಿ ಭೇಟಿಗೆ ಬಿಜೆಪಿ ಲೇವಡಿ
ರಾಹುಲ್ ಗಾಂಧಿ ವಿರುದ್ಧ ಟೀಕಾಪ್ರಹಾರ ನಡೆಸಿರುವ ಬಿಜೆಪಿ ನಾಯಕರು ರಾಹುಲ್ ಗಾಂಧಿಯನ್ನು ಪ್ರವಾಸದ ನಾಯಕ ಎಂದು ಲೇವಡಿ ಮಾಡಿದ್ದಾರೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಇದೀಗ ನಡೆಯುತ್ತಿರುವ ಸಂಸತ್ತಿನ ಚಳಿಗಾಲದ ಅಧಿವೇಶನದ ಸಮಯದಲ್ಲಿಯೇ ಜರ್ಮನಿಗೆ ಪ್ರಯಾಣಿಸಲಿದ್ದಾರೆ. ಆಗಾಗ ವಿದೇಶ ಪ್ರವಾಸ ಮಾಡುವ ಮೂಲಕ ಅವರು ತಮ್ಮ ಕರ್ತವ್ಯಗಳನ್ನು ನಿರ್ಲಕ್ಷಿಸುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.
- Sushma Chakre
- Updated on: Dec 10, 2025
- 4:52 pm
ವೋಟ್ ಚೋರಿ ರಾಷ್ಟ್ರವಿರೋಧಿ ಕೃತ್ಯ; ಎಸ್ಐಆರ್ ಚರ್ಚೆ ವೇಳೆ ರಾಹುಲ್ ಗಾಂಧಿ ಆರೋಪ
'ವೋಟ್ ಚೋರಿ ಅತ್ಯಂತ ದೊಡ್ಡ ರಾಷ್ಟ್ರವಿರೋಧಿ ಕೃತ್ಯ' ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಹೇಳಿದ್ದಾರೆ. "ನೀವು ಮಧ್ಯಪ್ರದೇಶ, ಉತ್ತರ ಪ್ರದೇಶ ಮತ್ತು ಬಿಹಾರದಲ್ಲಿ ಚುನಾವಣೆಗಳನ್ನು ಗೆಲ್ಲುವುದು ಹೀಗೆಯೇ. ಬಿಹಾರದಲ್ಲಿ ಮಾತ್ರ ಎಸ್ಐಆರ್ ನಂತರ 1.2 ಲಕ್ಷ ನಕಲಿ ಫೋಟೋಗಳು ಕಂಡುಬಂದಿವೆ" ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಲೋಕಸಭಾ ಅಧಿವೇಶನದಲ್ಲಿ ಆರೋಪಿಸಿದ್ದಾರೆ. ಇದಕ್ಕೆ ಬಿಜೆಪಿ ನಾಯಕರು ತಿರುಗೇಟು ನೀಡಿದ್ದಾರೆ.
- Sushma Chakre
- Updated on: Dec 9, 2025
- 7:23 pm
ಡಿ.14ರಂದು ದೆಹಲಿಯಲ್ಲಿ ಮೊಳಗಲಿದೆ ವೋಟ್ ಚೋರಿ ಕೂಗು; ರಾಜ್ಯ ನಾಯಕರಿಗೆ ಡಿಕೆಶಿ ಕೊಟ್ಟ ಕರೆ ಏನು?
ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗದ ವಿರುದ್ಧ'ವೋಟ್ ಚೋರಿ' ಆರೋಪ ಹಿನ್ನೆಲೆಯಲ್ಲಿ ಡಿಸೆಂಬರ್ 14 ರಂದು ದೆಹಲಿಯಲ್ಲಿ ಬೃಹತ್ ಸಮಾವೇಶ ಆಯೋಜಿಸಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಎಲ್ಲಾ ನಾಯಕರಿಗೆ ಭಾಗವಹಿಸಲು ಕರೆ ನೀಡಿದ್ದಾರೆ. ಸಿಎಂ, ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ರಾಜ್ಯದ ಸಚಿವರು ಈ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ. ಸುಮಾರು 15,000 ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿಗೆ ಕರೆದೊಯ್ಯಲು ಡಿ.ಕೆ. ಶಿವಕುಮಾರ್ ಸೂಚನೆ ನೀಡಿದ್ದು, ಇದು ಕರ್ನಾಟಕ ಕಾಂಗ್ರೆಸ್ನ ಶಕ್ತಿ ಪ್ರದರ್ಶನಕ್ಕೆ ವೇದಿಕೆಯಾಗಲಿದೆ. ಪ್ರತಿಭಟನೆಗಾಗಿ ವಿಶೇಷ ರೈಲಿಗೆ ಕಾಂಗ್ರೆಸ್ ನಾಯಕರು ಮನವಿ ಸಲ್ಲಿಸಿದ್ದಾರೆ. ರೈಲ್ವೆ ಇಲಾಖೆ ಇದಕ್ಕೆ ನಿರಾಕರಿಸಿದ್ದು, ಪರ್ಯಾಯ ವ್ಯವಸ್ಥೆಗಳನ್ನು ಮಾಡಿಕೊಳ್ಳಲು ಸೂಚನೆ ನೀಡಿದೆ.
- Bhavana Hegde
- Updated on: Dec 7, 2025
- 2:15 pm
ಡಿಕೆಶಿ ಬುಡಕ್ಕೆ ಮತ್ತೆ ನ್ಯಾಷನಲ್ ಹೆರಾಲ್ಡ್ ಕೇಸ್: ದೆಹಲಿಯಿಂದ ಬಂತು ನೋಟಿಸ್
ನ್ಯಾಷನಲ್ ಹೆರಾಲ್ಡ್ ಪ್ರಕರಣ ಮತ್ತೆ ಮುನ್ನಲೆಗೆ ಬಂದಿದ್ದು, ಈಗಾಗಲೇ ಈ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ಹಿರಿಯ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಹಾಗೂ ಇತರ ಹಲವಾರು ಪ್ರಮುಖ ವ್ಯಕ್ತಿಗಳ ವಿರುದ್ಧ ಹೊಸ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಇದರ ಬೆನ್ನಲ್ಲೇ ಇದೀಗ ಮತ್ತೆ ಕೆಪಿಸಿಸಿ ಅಧ್ಯಕ್ಷ, ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬುಡಕ್ಕೂ ಬಂದಿದೆ.
- Harish GR
- Updated on: Dec 5, 2025
- 9:38 pm