AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rahul Gandhi

Rahul Gandhi

ನೆಹರು ಕುಟುಂಬದ ನಾಲ್ಕನೇ ತಲೆಮಾರಿನ ಐದನೇ ನಾಯಕ ರಾಹುಲ್‌ ಗಾಂಧಿ. ನೆಹರು ಮರಿ ಮೊಮ್ಮಗ, ಇಂದಿರಾರ ಮೊಮ್ಮಗ ಹಾಗೂ ರಾಜೀವ್‌-ಸೋನಿಯಾ ಮಗ ಎನ್ನುವುದು ರಾಹುಲ್‌ಗೆ ಪ್ಲಸ್‌ ಹಾಗೂ ಮೈನಸ್‌ ಎರಡೂ ಹೌದು. ಕಳೆದ ಎರಡು ದಶಕಗಳಿಂದ ಭಾರತದ ರಾಜಕೀಯದಲ್ಲಿ ಸಕ್ರಿಯರಾಗಿರುವ ರಾಹುಲ್‌, ಪ್ರಧಾನಿಯಾಗುವ ಮಹತ್ವಾಕಾಂಕ್ಷೆ ಹೊಂದಿದ್ದಾರೆ. ಎಐಸಿಸಿ ಅಧ್ಯಕ್ಷರಾಗಿಯೂ ಕೆಲಸ ಮಾಡಿರುವ ರಾಹುಲ್‌, ಸತತ ಐದು ಬಾರಿ ಸಂಸದರಾಗಿ ಕೆಲಸ ಮಾಡಿದ್ದಾರೆ. ಆರಂಭದಲ್ಲಿ ಅಮೇಥಿ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ರಾಹುಲ್‌, ಈಗ ವಯ್ನಾಡು ಕ್ಷೇತ್ರ ಸದಸ್ಯರಾಗಿದ್ದಾರೆ. ವಿವಾದಾತ್ಮಕ ಹೇಳಿಕೆಗಳಿಗೆ ಹೆಸರುವಾಸಿಯಾಗಿರುವ ರಾಹುಲ್ ಗಾಂಧಿ, ಇದೇ ಕಾರಣದಿಂದ ಸಂಸದ ಸ್ಥಾನದಿಂದ ಅನರ್ಹರಾಗಿದ್ದರು. ಸದ್ಯ ಕೋರ್ಟ್‌ನಿಂದ ರಕ್ಷಣೆ ಪಡೆದು, ಮತ್ತೆ ಸದಸ್ಯತ್ವ ಪಡೆದಿದ್ದಾರೆ. ಮನಮೋಹನ್‌ ಸಿಂಗ್‌ ಸರ್ಕಾರದ ಸುಗ್ರೀವಾಜ್ಞೆಯನ್ನು ಹರಿದುಹಾಕಿದ್ದು, ರಫೇಲ್‌ ಹಾಗೂ ಅದಾನಿ ವಿರುದ್ಧ ಪ್ರಕರಣದಲ್ಲಿ ಧ್ವನಿ ಎತ್ತಿದ್ದು, ಎಐಸಿಸಿ ಅಧ್ಯಕ್ಷರಾಗಿ ಲೋಕಸಭೆ ಸೇರಿ ಹಲವು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ಸೋತಿದ್ದು ಹಾಗೂ ಭಾರತ್‌ ಜೋಡೋ ಯಾತ್ರೆಯು ರಾಹುಲ್‌ ಅವರ ರಾಜಕೀಯ ಪಥದಲ್ಲಿನ ಪ್ರಮುಖಾಂಶಗಳು. ರಾಹುಲ್‌ ಗಾಂಧಿ ಎನ್ನುವ ರಾಜಕೀಯ ವ್ಯಕ್ತಿಯು ಕಾಂಗ್ರೆಸ್‌ ಹಾಗೂ ಬಿಜೆಪಿ ಎರಡೂ ಪಕ್ಷಕ್ಕೂ ಪ್ರಮುಖ ದಾಳವಾಗಿದ್ದಾರೆ. ತಮ್ಮ ಪ್ರಚಾರಗಳಿಗೆ ಇವರಿಬ್ಬರೂ ರಾಹುಲ್‌ ಅವರನ್ನು ಬಳಸಿಕೊಳ್ಳುವುದು ವಿಶೇಷ.

ಇನ್ನೂ ಹೆಚ್ಚು ಓದಿ

ಮೂರು ದಿನಗಳಿಂದ ದೆಹಲೀಲಿದ್ದರೂ ಡಿಕೆ ಶಿವಕುಮಾರ್​ಗೆ ಸಿಗುತ್ತಿಲ್ಲ ರಾಹುಲ್ ಗಾಂಧಿ ಭೇಟಿ ಅವಕಾಶ!

ಮೈಸೂರಿನಲ್ಲಿ ರಾಹುಲ್ ಗಾಂಧಿ ದೆಹಲಿಗೆ ಕರೆಸಿ ಮಾತನಾಡುವ ಭರವಸೆ ನೀಡಿದ್ದರೂ, ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ದೆಹಲಿಯಲ್ಲಿ ರಾಹುಲ್ ಗಾಂಧಿ ಭೇಟಿಗೆ ಮತ್ತೆ ಅವಕಾಶ ಸಿಗುತ್ತಿಲ್ಲ. ಶುಕ್ರವಾರ ಒಮ್ಮೆ ಮಾತನಾಡಲು ಸಿಕ್ಕಿದ್ದುಬಿಟ್ಟರೆ ಆ ಬಳಿಕ ರಾಹುಲ್ ಇತರ ಕಾರ್ಯಗಳಲ್ಲಿ ವ್ಯಸ್ತರಾಗಿದ್ದಾರೆ. ದಾವೋಸ್ ಪ್ರವಾಸ ರದ್ದುಗೊಳಿಸಿ ದೆಹಲಿಯಲ್ಲಿ ರಾಹುಲ್​ ಭೇಟಿಗಾಗಿ ಕಾದಿದ್ದ ಡಿಕೆಶಿ ಇಂದು ಸಂಜೆ ಬೆಂಗಳೂರಿಗೆ ಮರಳಲಿದ್ದಾರೆ.

ಕೊನೆಗೂ ಕೂಡಿಬಂತು ಟೈಮ್: ರಾಹುಲ್ ಗಾಂಧಿ ಭೇಟಿ ಮಾಡಿದ್ದಕ್ಕೆ ಡಿಕೆಶಿ ಫುಲ್ ಖುಷ್

ಸಂಕ್ರಾಂತಿಗೆ ಸೂರ್ಯ ಪಥ ಬದಲಾಗಿದೆ. ಹಾಗೆಯೇ ಕರ್ನಾಟಕ ಕಾಂಗ್ರೆಸ್​ನೊಳಗೂ ನಾಯಕತ್ವ ಬದಲಾವಣೆಯ ಚರ್ಚೆ ಗರಿಗೆದರಿದೆ. ಸಂಕ್ರಾಂತಿ ಕಳೆದು ಶಿವರಾತ್ರಿ ಬಂದರೂ ಕುರ್ಚಿ ಕಾಳಗ ಮುಂದುವರೆಯೋ ಎಲ್ಲ ಲಕ್ಷಣಗಳು ಗೋಚರಿಸ್ತಿವೆ. ಯಾಕಂದ್ರೆ ಅಸ್ಸಾಂ ಚುನಾವಣೆ ನೆಪದಲ್ಲಿ ದೆಹಲಿಗೆ ತೆರಳಿರುವ ಡಿಕೆ ಶಿವಕುಮಾರ್ ಅವರಿಗೆ ರಾಹುಲ್ ಗಾಂಧಿ ಭೇಟಿಗೆ ಅವಕಾಶ ಸಿಕ್ಕಿದೆ. ಹೌದು....ಕಳೆದ ಹಲವು ದಿನಗಳಿಂದ ರಾಹುಲ್ ಭೇಟಿಗೆ ಡಿಕೆ ಶಿವಕುಮಾರ್ ಕಸರತ್ತು ನಡೆಸಿದ್ದರು. ಆದ್ರೆ, ಅದು ಸಾಧ್ಯವಾಗದಕ್ಕೆ ದೆಹಲಿಯಿಂದ ಬರಿಗೈನಲ್ಲಿ ವಾಪಸ್ ಆಗುತ್ತಿದ್ದರು. ಆದ್ರೆ, ಇಂದು(ಜನವರಿ 16) ರಾಹುಲ್ ಗಾಂಧಿ ಭೇಟಿಗೆ ಸಮಯ ಕೂಡಿಬಂದಿದೆ. ಅಸ್ಸಾಂ ಚುನಾವಣೆ ಸಭೆ ಬಳಿಕ ಡಿಕೆ ಶಿವಕುಮಾರ್ ಅವರು ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಮಹತ್ವದ ಚರ್ಚೆ ನಡೆಸಿದ್ದು, ಖುಷಿ ಖುಷಿಯಲ್ಲೇ ರಾಹುಲ್ ನಿವಾಸದಿಂದ ವಾಪಸ್ ಆಗಿದ್ದಾರೆ.

ಡಿಕೆ ಶಿವಕುಮಾರ್ ದೆಹಲಿ ಪ್ರವಾಸ: ರಾಹುಲ್ ಗಾಂಧಿ ಭೇಟಿ ಬಗ್ಗೆ ಸ್ಫೋಟಕ ಹೇಳಿಕೆ

ಸಂಕ್ರಮಣದ ದಿನ ಸೂರ್ಯ ತನ್ನ ಪಥ ಬದಲಿಸಿದ್ದಾನೆ. ಆದ್ರೆ ಸಂಕ್ರಾಂತಿಗೆ (Sankranthi) ಕರ್ನಾಟಕ ಕಾಂಗ್ರೆಸ್‌ನಲ್ಲಿ (Karnataka Congress) ಪಥಬದಲಾಗಿ ಕ್ರಾಂತಿಯಾಗುತ್ತೆ ಎನ್ನುವ ಗೊಂದಲಕ್ಕೆ ತೆರೆಬಿದ್ದಿಲ್ಲ. ಅಧಿಕಾರ ಹಂಚಿಕೆಗೆ . ಮೊನ್ನೆ ಮೈಸೂರಿಗೆ (Mysuru) ಬಂದಿದ್ದ ರಾಹುಲ್ ಗಾಂಧಿಯನ್ನು (Rahul Gandhi) ವಿಮಾನ ನಿಲ್ದಾಣದಲ್ಲೇ ಸಿಎಂ, ಡಿಸಿಎಂ ಭೇಟಿ ಮಾಡಿದ್ರು. ಅದರಲ್ಲೂ ಡಿಕೆಶಿ ಪ್ರತ್ಯೇಕವಾಗಿ ನಿಂತು ಅಧಿಕಾರ ಹಂಚಿಕೆ ಗೊಂದಲವನ್ನು ಬಗೆಹರಿಸುವಂತೆ ಒತ್ತಾಯಿಸಿದ್ದರು. ಏರ್‌ಪೋರ್ಟ್‌ ರನ್‌ವೇನಲ್ಲಿ ಇಂತಹ ಚರ್ಚೆ ಬೇಡ. ದೆಹಲಿಗೆ ಬನ್ನಿ ಎಂದು ರಾಹುಲ್ ಗಾಂಧಿ ಹೇಳಿದ್ದರು. ಅದರಂತೆ ಇದೀಗ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿದ್ದಾರೆ.

ಡಿಕೆಶಿ ಬಳಿ ದೆಹಲಿಗೆ ಬನ್ನಿ ಎಂದಿದ್ದರೂ ರಾಹುಲ್ ಗಾಂಧಿ ಸಿಗೋದು ಅನುಮಾನ: ಕಾಂಗ್ರೆಸ್​ನಲ್ಲಿ ಸದ್ಯಕ್ಕಿಲ್ಲ ಕ್ರಾಂತಿ!

ರಾಹುಲ್ ಗಾಂಧಿ ‘ಕಮ್ ಟು ದೆಹಲಿ’ ಎಂದರೂ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಭೇಟಿ ಕಷ್ಟಕರವಾಗಿದೆ. ಮುಖ್ಯಮಂತ್ರಿಗಳು ವಿಶೇಷ ಅಧಿವೇಶನ ಕರೆದಿರುವುದು ಅವರ ದೆಹಲಿ ಭೇಟಿಗೆ ಅಡ್ಡಿಯಾಗಿದೆ. ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಲಿದ್ದು, ಸಮಸ್ಯೆ ಪರಿಹಾರ ಅನಿಶ್ಚಿತವಾಗಿದೆ.

ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಗಾಂಧಿ​ ಮಹತ್ವದ ಸಂದೇಶ

ಸಿಎಂ ಹುದ್ದೆ ಬೇಕೆಂದು ಪಟ್ಟು ಹಿಡಿದಿರುವ ಡಿಸಿಎಂ ಡಿಕೆ ಶಿವಕುಮಾರ್, ಈ ಹಿಂದಿನಿಂದಲೂ ದೆಹಲಿಗೆ ಹೋಗಿ ರಾಹುಲ್ ಭೇಟಿಗೆ ಯತ್ನಿಸಿದ್ದರೂ ಅದು ಸಾಧ್ಯವಾಗಿರಲಿಲ್ಲ. ಆದ್ರೆ, ಇಂದು(ಜನವರಿ 13) ಕೊನೆಗೂ ಮೈಸೂರಿನಲ್ಲಿ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡುವ ಅವಕಾಶ ಸಿಕ್ಕಿದೆ. ಹೌದು...ತಮಿಳುನಾಡಿಗೆ ತೆರಳು ದೆಹಲಿಯಿಂದ ವಿಮಾನದ ಮೂಲಕ ಮೈಸೂರಿಗೆ ಬಂದಿದ್ದ ರಾಹುಲ್ ಗಾಂಧಿಯವರನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಸ್ವಾಗತಿಸಿದರು. ಆದ್ರೆ, ಈ ವೇಳೆ ಡಿಕೆ ಶಿವಕುಮಾರ್ ಅವರು ಸಿಕ್ಕಿದ್ದೇ ಚಾನ್ಸ್ ಎಂದು ರಾಹುಲ್ ಗಾಂಧಿಯವರನ್ನು ಸೈಡಿಗೆ ಕರೆದುಕೊಂಡು ಹೋಗಿ ಮಾತುಕತೆ ನಡೆಸಿದ್ದಾರೆ. ಇದು ಸಿಎಂ ಕುರ್ಚಿಯ ಚರ್ಚೆಯೇ ಎಂಬ ಕುತೂಹಲಕ್ಕೆ ಕಾರಣವಾಗಿದೆ.

ಮೈಸೂರಿನಲ್ಲಿ ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗಿ ರಾಹುಲ್ ರಹಸ್ಯ ಮಾತು!

ತಮಿಳುನಾಡಿಗೆ ತೆರಳಲು ದೆಹಲಿಯಿಂದ ವಿಮಾನದ ಮೂಲಕ ಮೈಸೂರಿಗೆ ಬಂದ ರಾಹುಲ್ ಗಾಂಧಿಯನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸ್ವಾಗತಿಸಿದರು. ಆದ್ರೆ, ಇದೇ ವೇಳೆ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಪ್ರತ್ಯೇಕವಾಗಿ ರಾಹುಲ್ ಗಾಂಧಿ ಜತೆ ಮಾತುಕತೆ ನಡೆಸಿದ್ದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಡಿಕೆ ಶಿವಕುಮಾರ್ ರಾಹುಲ್ ಗಾಂಧಿಯನ್ನು ಸೈಡಿಗೆ ಕರೆದುಕೊಂಡು ಹೋಗಿ ಮಾತನಾಡಿದ್ದಾರೆ. ಬಳಿಕ ರಾಹುಲ್ ಗಾಂಧಿ ಡಿಕೆಶಿಯನ್ನು ಬಿಟ್ಟು ಸಿದ್ದರಾಮಯ್ಯನವರನ್ನು ಪಕ್ಕಕ್ಕೆ ಕರೆದುಕೊಂಡು ಚರ್ಚಿಸಿದ್ದಾರೆ. ಇದು ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಏಯ್ ನೋಡ್ರಪ್ಪ ಅದೇ ಫೈನಲ್: ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?

ಕರ್ನಾಟಕ ಕಾಂಗ್ರೆಸ್‌ನಲ್ಲಿ‌ (Congress) ನವೆಂಬರ​​ನಿಂದಲೇ ಕುರ್ಚಿ ಕಾಳಗ ಜೋರಾಗಿಯೇ ನಡೆದಿದೆ. ಒಂದು ಕಡೆ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಕೊಟ್ಟ ಮಾತು ನೆನಪಿಸುತ್ತಿದ್ದರೆ ಮತ್ತೊಂದು ಕಡೆ ಸಿಎಂ ಸಿದ್ದರಾಮಯ್ಯ (Siddaramaiah) ಹೈಕಮಾಂಡ್ ನಾಯಕರ ಮಾತೇ ನನಗೆ ಶಾಸನ ಎನ್ನುತ್ತಿದ್ದಾರೆ. ಈ ಕಾಳಗದ ನಡುವೆಯೇ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ರಾಹುಲ್ ಗಾಂಧಿಯನ್ನ (Rahul Gandhi) ಭೇಟಿ ಮಾಡಿದ್ದು ಕುತೂಹಲಕ್ಕೆ ಕಾರಣವಾಗಿದೆ. ತಮಿಳುನಾಡಿಗೆ ತೆರಳಳು ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಮೈಸೂರಿಗೆ ಬಂದಿಳಿದ ರಾಹುಲ್ ಗಾಂಧಿ ಅವರನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆಶಿ ಸ್ವಾಗತಿಸಿದರು. ಈ ವೇಳೆ ಕೆಲ ನಿಮಿಷಗಳ ಕಾಲ ರಾಹುಲ್ ಗಾಂಧಿ ಜತೆ ಮಹತ್ವದ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

  • Ram
  • Updated on: Jan 13, 2026
  • 4:13 pm

ಇವಿಎಂ ಬಗ್ಗೆ ಕರ್ನಾಟಕದ ಬಹುಪಾಲು ಜನರಿಗಿದೆ ವಿಶ್ವಾಸ: ಸಿಂ ಸಿದ್ದರಾಮಯ್ಯ, ಖರ್ಗೆ ತವರಲ್ಲೇ ಹೆಚ್ಚು!

ಶೇ 83.61 ರಷ್ಟು ಕರ್ನಾಟಕದ ಮತದಾರರು EVM ಬಗ್ಗೆ ವಿಶ್ವಾಸ ಹೊಂದಿದ್ದಾರೆಂದು ಸಮೀಕ್ಷೆಯೊಂದು ಬಹಿರಂಗಪಡಿಸಿದೆ. ಕಲಬುರಗಿಯಲ್ಲಿ ಅತಿ ಹೆಚ್ಚು ಮಂದಿ ಇವಿಎಂ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಈ ವರದಿಯನ್ನು ಕಾಂಗ್ರೆಸ್‌ನ ಇವಿಎಂ ಕುರಿತಾದ ಆರೋಪಗಳಿಗೆ ತಿರುಗೇಟು ನೀಡಲು ಬಳಸಿಕೊಂಡಿದೆ. ಈ ಬಗ್ಗೆ ಪ್ರಿಯಾಂಕ್ ಖರ್ಗೆ ಏನಂತಾರೆ? ತಿಳಿಯಲು ಮುಂದೆ ಓದಿ.

ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ

ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಲಾದ ರಾಮ ಮಂದಿರ ಉದ್ಘಾಟನೆಯಾದಾಗಿನಿಂದ ಇದುವರೆಗೂ ರಾಹುಲ್ ಗಾಂಧಿ ಅಲ್ಲಿಗೆ ಭೇಟಿ ನೀಡದಿರುವ ಬಗ್ಗೆ ಪ್ರಶ್ನೆಗಳಿಗೆ ಉತ್ತರಿಸುವಾಗ ನಾನಾ ಪಟೋಲೆ ಈ ಹೇಳಿಕೆ ನೀಡಿದ್ದಾರೆ. "ರಾಹುಲ್ ಗಾಂಧಿ ರಾಮ ಮಾಡಿದ್ದ ಕೆಲಸವನ್ನು ಮಾಡುತ್ತಿದ್ದಾರೆ. ರಾಮನು ತುಳಿತಕ್ಕೊಳಗಾದ ಜನರ ಮತ್ತು ವಂಚಿತರ ನ್ಯಾಯದ ಪರವಾಗಿ ನಿಂತಿದ್ದ. ಈಗ ರಾಹುಲ್ ಗಾಂಧಿ ರಾಮನ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ" ಎಂದು ಅವರು ಹೇಳಿದ್ದಾರೆ.

ಕಿಡಿಗೇಡಿತನ; ಆರ್‌ಎಸ್‌ಎಸ್-ಬಿಜೆಪಿ ಕುರಿತ ದಿಗ್ವಿಜಯ ಸಿಂಗ್ ಹೊಗಳಿಕೆಗೆ ರಾಹುಲ್ ಗಾಂಧಿ ಅಸಮಾಧಾನ

ಆರ್‌ಎಸ್‌ಎಸ್-ಬಿಜೆಪಿ ಕುರಿತು ಹೊಗಳಿ ಪೋಸ್ಟ್ ಮಾಡುವ ಮೂಲಕ ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಕಾಂಗ್ರೆಸ್ ಹೈಕಮಾಂಡ್​​ಗೆ ಮುಜುಗರ ಉಂಟುಮಾಡಿದ್ದರು. ಈ ಬಗ್ಗೆ ಕೆಲವು ಕಾಂಗ್ರೆಸ್ ನಾಯಕರು ಬಹಿರಂಗವಾಗಿಯೇ ವಿರೋಧ ವ್ಯಕ್ತಪಡಿಸಿದ್ದರು. ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಗೂ ಮುನ್ನ ಬಿಜೆಪಿ ಮತ್ತು ಆರ್‌ಎಸ್‌ಎಸ್‌ನ ಸಂಘಟನಾತ್ಮಕ ಬಲವನ್ನು ಸಾರ್ವಜನಿಕವಾಗಿ ಹೊಗಳಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ದಿಗ್ವಿಜಯ ಸಿಂಗ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ರಾಹುಲ್ ಗಾಂಧಿ ಬತ್ತಳಿಕೆಯಲ್ಲಿ ಸಿಎಂ ಕುರ್ಚಿ ತೀರ್ಮಾನ: ಸಂಕ್ರಾಂತಿ ಬಳಿಕ ರಾಜಕೀಯ ಕ್ರಾಂತಿ?

ರಾಷ್ಟ್ರ ರಾಜಕಾರಣದ ಹೆಡ್​ ಕ್ವಾಟ್ರಸ್ ದೆಹಲಿ ಇಂದು (ಡಿಸೆಂಬರ್ 27) ರಾಜ್ಯದ ಸಿಎಂ ಕುರ್ಚಿ ಬೆಳವಣಿಗೆಗೆ ಏನಾದ್ರು ಸಾಕ್ಷಿ ಆಗಲಿದ್ಯಾ ಎಂಬ ಕುತೂಹಲ ಮೂಡಿತ್ತು. ಯಾಕಂದ್ರೆ ಸಿಎಂ ಸಿದ್ದರಾಮಯ್ಯ CWC ಸಭೆಯಲ್ಲಿ ಭಾಗವಹಿಸಿದ್ದರು. ಸಭೆ ಬಳಿಕ ರಾಜ್ಯದ ಬಗ್ಗೆ ಏನಾದರೂ ಮಾತನಾಡುತ್ತಾರಾ ಎನ್ನುವುದು ಕೈ ಪಾಳಯದಲ್ಲಿಕುತೂಹಲ ಮೂಡಿಸಿತ್ತು. ಆದ್ರೆ ಇದ್ಯಾವುದು ಆಗದೇ ಸಿಎಂ ಭೇಟಿ ಬರೀ CWC ಸಭೆಗೆ ಸೀಮಿತವಾಗಿದೆ. ಸಿಎಂ ಕಸರತ್ತು ಮಾಡಿದ್ದರಾದರೂ ಅದು ಸಾಧ್ಯವಾಗಿಲ್ಲ. ಅಷ್ಟಕ್ಕೂ ದಿಲ್ಲಿಯಲ್ಲಿ ಆಗಿದ್ದೇನು? ಸಂಕ್ರಾಂತಿ ಬಳಿಕ ರಾಜಕೀಯ ಕ್ರಾಂತಿ ಆಗುತ್ತಾ?

ಭಾರತ ವಿರೋಧಿ ಶಕ್ತಿಗಳೊಂದಿಗೆ ರಾಹುಲ್ ಗಾಂಧಿ? ಜರ್ಮನಿಗೆ ಹೋಗಿದ್ದು ಯಾಕೆ? ಬಿಜೆಪಿ ಟೀಕೆ

BJP MP Sudhanshu Trivedi alleges that congress is part of Global Progressive Alliance that has anti-India narrative: ಜಾರ್ಜ್ ಸೋರೋಸ್ ಬೆಂಬಲಿತ ಗ್ಲೋಬಲ್ ಪ್ರೋಗ್ರೆಸ್ಸಿವ್ ಅಲಾಯನ್ಸ್ ಜೊತೆ ಕಾಂಗ್ರೆಸ್ ಸಂಬಂಧವೇನು ಎಂದು ಬಿಜೆಪಿ ಪ್ರಶ್ನಿಸಿದೆ. ರಾಹುಲ್ ಗಾಂಧಿ ಜರ್ಮನಿಗೆ ಹೋಗಿದ್ದು ಯಾಕೆ? ಈ ಭಾರತ ವಿರೋಧಿ ನಿಲುವಿನ ಸಂಘಟನೆಯ ಸಭೆಯಲ್ಲಿ ಪಾಲ್ಗೊಂಡಿದ್ಯಾಕೆ ಎಂದು ಸುಧಾಂಶು ತ್ರಿವೇದಿ ಕೇಳಿದ್ದಾರೆ.

ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ