AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Raj B Shetty

Raj B Shetty

ರಾಜ್ ಬಿ. ಶೆಟ್ಟಿ ಅವರು ಕನ್ನಡದ ಖ್ಯಾತ ನಟ, ನಿರ್ಮಾಪಕ, ಸಂಭಾಷಣಾಕಾರ, ಚಿತ್ರಕಥೆ ಬರಹಗಾರ ಹಾಗೂ ನಿರ್ದೇಶಕ. ಹೀರೋ ಎಂದರೆ ಕಟ್ಟುಮಸ್ತಾದ ದೇಹ ಹೊಂದಿರಬೇಕು, ತಲೆಯ ತುಂಬ ಕೇಶ ರಾಶಿ ಇರಬೇಕು ಎಂಬ ಕಲ್ಪನೆಗೆ ಅವರು ವಿರುದ್ಧವಾಗಿದ್ದಾರೆ. ಆದರೂ ಅವರಿಗೆ ಸಿಕ್ಕ ಜನಪ್ರಿಯತೆ ಕಡಿಮೆ ಏನಿಲ್ಲ. ಅವರು ‘ಫೈವ್ ಲೆಟರ್ಸ್​’ ಹೆಸರಿನ ಶಾರ್ಟ್​ ಫಿಲ್ಮ್ ನಿರ್ದೇಶನ ಮಾಡಿದರು. 2017ರಲ್ಲಿ ‘ಒಂದು ಮೊಟ್ಟೆಯ ಕಥೆ’ ಹೆಸರಿನ ಸಿನಿಮಾ ಮಾಡಿ ಗಮನ ಸೆಳೆದರು. ಈ ಸಿನಿಮಾ ಸೂಪರ್ ಹಿಟ್ ಆಯಿತು. ಆ ಬಳಿಕ ರಾಜ್ ಹಿಂದಿರುಗಿ ನೋಡಲೇ ಇಲ್ಲ. 2018ರ ‘ಅಮ್ಮಚ್ಚಿ ಎಂಬ ನೆನಪು’ ಚಿತ್ರದಲ್ಲಿ ರಾಜ್ ನಟಿಸಿದರು. ‘ಗುಬ್ಬಿ ಮೇಲೆ ಬ್ರಹ್ಮಾಸ್ತ್ರ’, ‘ಮಾಯಾಬಜಾರ್ 2016’ ಮೊದಲಾದ ಚಿತ್ರಗಳಲ್ಲಿ ನಟಿಸಿದರು. ‘ಒಂದು ಮೊಟ್ಟೆಯ ಕಥೆ’ ಜೊತೆಗೆ ‘ಗರುಡ ಗಮನ ವೃಷಭ ವಾಹನ’, ‘ಸ್ವಾತಿ ಮುತ್ತಿನ ಮಳೆಹನಿಯೇ’ ಚಿತ್ರ ನಿರ್ದೇಶನ ಮಾಡಿದ್ದಾರೆ. ಅವರು ಯುವ ಪ್ರತಿಭೆಗಳನ್ನು ಪ್ರೋತ್ಸಾಹಿಸಿ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಅವರ ನಿರ್ಮಾಣದ ‘ಸು ಫ್ರಮ್ ಸೋ’ ಸಿನಿಮಾ ಸೂಪರ್ ಹಿಟ್ ಆಗಿದ್ದು, 100 ಕೋಟಿ ರೂಪಾಯಿ ಕ್ಲಬ್ ಸೇರಿದೆ.

ಇನ್ನೂ ಹೆಚ್ಚು ಓದಿ

Rakkasapuradhol Review: ರಾಜ್ ಬಿ. ಶೆಟ್ಟಿ ಅಭಿಮಾನಿಗಳಿಗೆ ‘ರಕ್ಕಸಪುರದೋಳ್’ ಮನರಂಜನೆಯ ಪ್ಯಾಕೇಜ್

ಯಾವ ಪಾತ್ರ ಕೊಟ್ಟರೂ ಅದನ್ನು ಸಮರ್ಥವಾಗಿ ನಿಭಾಯಿಸುವ ನಟ ರಾಜ್ ಬಿ. ಶೆಟ್ಟಿ ಅವರು ಈ ಬಾರಿ ಪೊಲೀಸ್ ಪಾತ್ರದಲ್ಲಿ ಪ್ರೇಕ್ಷಕರ ಎದುರು ಬಂದಿದ್ದಾರೆ. ‘ರಕ್ಕಸಪುರದೋಳ್’ ಸಿನಿಮಾದ ಮೂಲಕ ಅವರು ಭರ್ಜರಿ ಮನರಂಜನೆ ನೀಡಿದ್ದಾರೆ. ರವಿ ಸಾರಂಗ ನಿರ್ದೇಶನದ ಈ ಸಿನಿಮಾ ಹೇಗಿದೆ ತಿಳಿಯಲು ವಿಮರ್ಶೆ ಓದಿ..

Rakkasapuradhol First Half Review: ರಾಜ್ ಬಿ. ಶೆಟ್ಟಿ ನಟನೆಯ ‘ರಕ್ಕಸಪುರದೋಳ್’ ಫಸ್ಟ್ ಹಾಫ್ ಹೇಗಿದೆ?

ಟ್ರೇಲರ್ ಮೂಲಕ ಗಮನ ಸೆಳೆದ ‘ರಕ್ಕಸಪುರದೋಳ್’ ಸಿನಿಮಾ ಈಗ ತೆರೆಕಂಡಿದೆ. ಕೌತುಕಭರಿತ ಕಥೆ ಈ ಸಿನಿಮಾದಲ್ಲಿ ಇದೆ. ಈ ಚಿತ್ರದ ಶೀರ್ಷಿಕೆಯೇ ಬಹಳ ಇಂಟರೆಸ್ಟಿಂಗ್ ಆಗಿದೆ. ರಾಜ್ ಬಿ. ಶೆಟ್ಟಿ ಅವರ ಅಭಿಮಾನಿಗಳು ಈ ಸಿನಿಮಾ ಮೇಲೆ ಬಹಳ ನಿರೀಕ್ಷೆ ಇಟ್ಟುಕೊಂಡಿದ್ದರು. ಚಿತ್ರದ ಫಸ್ಟ್ ಹಾಫ್ ವಿಮರ್ಶೆ ಇಲ್ಲಿದೆ.

‘ರಕ್ಕಸಪುರದೋಳ್’, ‘ಜೆಸಿ’ ಜೊತೆ ಹಲವು ಸಿನಿಮಾಗಳು ಈ ವಾರ ರಿಲೀಸ್

ರಾಜ್ ಬಿ. ಶೆಟ್ಟಿ ನಟನೆಯ ‘ರಕ್ಕಸಪುರದೋಳ್’ ಸಿನಿಮಾ ಈಗಾಗಲೇ ಪ್ರೀಮಿಯರ್ ಶೋ ಮೂಲಕ ಸದ್ದು ಮಾಡಿದೆ. ಪ್ರಖ್ಯಾತ್ ಅಭಿನಯದ ‘ಜೆಸಿ ದಿ ಯೂನಿವರ್ಸಿಟಿ’ ಸಿನಿಮಾ ಕೂಡ ಟ್ರೇಲರ್ ಮೂಲಕ ಪ್ರೇಕ್ಷಕರ ಗಮನ ಸೆಳೆದಿದೆ. ಇವುಗಳ ಜೊತೆಯಲ್ಲಿ ಇನ್ನೂ ಹಲವು ಸಿನಿಮಾಗಳು ಫೆಬ್ರವರಿ 6ರಂದು ಬಿಡುಗಡೆ ಆಗುತ್ತಿವೆ. ಆ ಬಗ್ಗೆ ಇಲ್ಲಿದೆ ವಿವರ..

ನಾನು ಇರೋದೇ ಬೋಡ ಕಣೇ: ಬಾಲಕಿ ಜತೆ ರಾಜ್ ಬಿ. ಶೆಟ್ಟಿ ಕ್ಯೂಟ್ ಮಾತುಕಥೆ

ರಾಜ್ ಬಿ. ಶೆಟ್ಟಿ ಅವರು ನಟಿಸಿದ ‘ಲ್ಯಾಂಡ್​ಲಾರ್ಡ್’ ಚಿತ್ರ ಬಿಡುಗಡೆ ಆಗಿದೆ. ಈ ಚಿತ್ರದಲ್ಲಿ ಅವರು ವಿಲನ್ ಪಾತ್ರ ಮಾಡಿದ್ದಾರೆ. ಈ ಸಿನಿಮಾದ ಶೂಟಿಂಗ್ ವೇಳೆ ಬಾಲಕಿ ಜೊತೆ ಮಾತನಾಡಿದ ಒಂದು ವಿಡಿಯೋವನ್ನು ರಾಜ್ ಬಿ. ಶೆಟ್ಟಿ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

Landlord Movie Review: ಅಸಮಾನತೆ, ಅನ್ಯಾಯದ ಇತಿಹಾಸ ಕೆದಕಿದ ‘ಲ್ಯಾಂಡ್​ಲಾರ್ಡ್’

Landlord Kannada Movie: ಕೆ.ವಿ. ಸತ್ಯಪ್ರಕಾಶ್ ಮತ್ತು ಹೇಮಂತ್ ಗೌಡ ಕೆ.ಎಸ್. ನಿರ್ಮಾಣದ ‘ಲ್ಯಾಂಡ್​ಲಾರ್ಡ್’ ಸಿನಿಮಾಗೆ ಜಡೇಶ್ ಕೆ. ಹಂಪಿ ನಿರ್ದೇಶನ ಮಾಡಿದ್ದಾರೆ. ಉಮಾಶ್ರೀ, ವಿಜಯ್ ಕುಮಾರ್, ರಚಿತಾ ರಾಮ್, ರಿತನ್ಯಾ ವಿಜಯ್, ಶಿಶಿರ್ ಬೈಕಾಡಿ, ರಾಜ್ ಬಿ. ಶೆಟ್ಟಿ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಒಟ್ಟಾರೆ ಸಿನಿಮಾ ಹೇಗಿದೆ ತಿಳಿಯಲು ಈ ವಿಮರ್ಶೆ ಓದಿ..

‘45’ ಸಿನಿಮಾ ಒಟಿಟಿ ರಿಲೀಸ್: ಜೀ5 ಮೂಲಕ ಜನವರಿ 23ರಿಂದ ಪ್ರಸಾರ ಶುರು

ಜನವರಿ 23ರಿಂದ ಜೀ5 ಒಟಿಟಿ ಮೂಲಕ ‘45’ ಸಿನಿಮಾ ಪ್ರಸಾರ ಆಗಲಿದೆ. ಶಿವರಾಜ್​​ಕುಮಾರ್, ರಾಜ್ ಬಿ. ಶೆಟ್ಟಿ, ಉಪೇಂದ್ರ ಅವರು ಈ ಚಿತ್ರದಲ್ಲಿ ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ಅರ್ಜುನ್ ಜನ್ಯ ನಿರ್ದೇಶನದ ಈ ಸಿನಿಮಾಗೆ ಎಂ. ರಮೇಶ್ ರೆಡ್ಡಿ ಅವರು ಬಂಡವಾಳ ಹೂಡಿದ್ದಾರೆ.

ರಾಜ್ ಬಿ. ಶೆಟ್ಟಿ ನಟನೆಯ ‘ರಕ್ಕಸಪುರದೋಳ್’ ಟೀಸರ್: ಮತ್ತೊಂದು ಹಿಟ್ ಗ್ಯಾರಂಟಿ

‘ರಕ್ಕಸಪುರದೋಳ್’ ಸಿನಿಮಾಗೆ ರವಿ ಸಾರಂಗ ನಿರ್ದೇಶನ ಮಾಡಿದ್ದು, ರವಿವರ್ಮಾ ಬಂಡವಾಳ ಹೂಡಿದ್ದಾರೆ. ರಾಜ್ ಬಿ. ಶೆಟ್ಟಿ ಅಭಿನಯದ ಈ ಸಿನಿಮಾದಲ್ಲಿ ಸ್ವಾದಿಷ್ಟ ಕೃಷ್ಣ, ಅರ್ಚನಾ ಕೊಟ್ಟಿಗೆ ಕೂಡ ನಟಿಸಿದ್ದಾರೆ. ಫೆಬ್ರವರಿ 6ರಂದು ‘ರಕ್ಕಸಪುರದೋಳ್’ ಸಿನಿಮಾ ರಿಲೀಸ್ ಆಗಲಿದ್ದು, ಈಗ ಟೀಸರ್ ಗಮನ ಸೆಳೆಯುತ್ತಿದೆ.

‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..

ಉಪೇಂದ್ರ, ರಾಜ್​ ಬಿ. ಶೆಟ್ಟಿ, ಶಿವರಾಜ್​​ಕುಮಾರ್ ನಟನೆಯ ‘45’ ಚಿತ್ರ ಬಿಡುಗಡೆ ಆಗಿದೆ. ಈ ಸಿನಿಮಾದ ಬಾಕ್ಸ್ ಆಫೀಸ್​ ಕಲೆಕ್ಷನ್ ಎಷ್ಟು ಎಂಬ ಬಗ್ಗೆ ಎಲ್ಲರಿಗೂ ಕುತೂಹಲ ಇದೆ. ಅಲ್ಲದೇ, ಈ ಚಿತ್ರದ ಪೈರಸಿ ಆಗಿರುವುದು ಬೇಸರದ ಸಂಗತಿ. ಈ ಬಗ್ಗೆ ನಿರ್ಮಾಪಕ ರಮೇಶ್ ರೆಡ್ಡಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

‘ಮಾರ್ಕ್’; ‘45’ ಅಬ್ಬರದಲ್ಲಿ ‘ಡೆವಿಲ್​​’ಗೆ ಸಿಕ್ಕ ಚಿತ್ರಮಂದಿರಗಳು ಇಷ್ಟೇನಾ?

'ಡೆವಿಲ್‌' ಸಿನಿಮಾಕ್ಕೆ 'ಮಾರ್ಕ್' ಹಾಗೂ '45' ಚಿತ್ರಗಳಿಂದ ದೊಡ್ಡ ಸ್ಪರ್ಧೆ ಎದುರಾಗಿದೆ. ಈ ಹೊಸ ಕನ್ನಡ ಸಿನಿಮಾಗಳ ಆಗಮನದಿಂದ 'ಡೆವಿಲ್‌'ಗೆ ಸಿಕ್ಕಿದ್ದ ಚಿತ್ರಮಂದಿರಗಳು ಮತ್ತು ಶೋಗಳು ಗಣನೀಯವಾಗಿ ಕಡಿಮೆಯಾಗಿವೆ. ಇದರಿಂದ ಚಿತ್ರದ ಗಳಿಕೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರುವ ಸಾಧ್ಯತೆ ಇದೆ. ‘ಡೆವಿಲ್’ ಸಿನಿಮಾ ಗಳಿಕೆ ವಿವರ ಶುಕ್ರವಾರ ಸಿಗಲಿದೆ.

‘45’ ಸಿನಿಮಾ ಪ್ರೀಮಿಯರ್ ಶೋ: ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ಫ್ಯಾನ್ಸ್ ಸಂಭ್ರಮ ನೋಡಿ

ಶಿವರಾಜ್​​ಕುಮಾರ್, ಉಪೇಂದ್ರ, ರಾಜ್ ಬಿ. ಶೆಟ್ಟಿ ಅವರು ‘45’ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಈ ಸ್ಟಾರ್ ಹೀರೋಗಳ ಅಭಿಮಾನಿಗಳು ಚಿತ್ರಮಂದಿರಗಳ ಎದುರು ಜೋರಾಗಿ ಸಂಭ್ರಮಿಸುತ್ತಿದ್ದಾರೆ. ಈಗಾಗಲೇ ‘45’ ಚಿತ್ರ ನೋಡಿದ ಅಭಿಮಾನಿಗಳು ಪಾಸಿಟಿವ್ ಆಗಿ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಫ್ಯಾನ್ಸ್ ಸಂಭ್ರಮದ ವಿಡಿಯೋ ನೋಡಿ..

ಅರ್ಹತೆ ಅಷ್ಟೇ ಮುಖ್ಯವಾಗಬೇಕು, ಬಡತನವಲ್ಲ; ರಾಜ್ ಮಾತಿಗೆ ಫಿದಾ ಆಗಿ ಕೈ ಮುಗಿದ ಉಪ್ಪಿ

ರಾಜ್ ಬಿ ಶೆಟ್ಟಿ ಅವರು ಚಿತ್ರರಂಗದಲ್ಲಿ ಕೇವಲ ಅರ್ಹತೆ ಮತ್ತು ಪ್ರತಿಭೆ ಮಾತ್ರ ಮುಖ್ಯ ಎಂದು ಒತ್ತಿ ಹೇಳಿದ್ದಾರೆ. 'ಬಡವರ ಮಕ್ಕಳು ಬೆಳೆಯಬೇಕು' ಎಂಬ ಮಾತನ್ನು ವಿರೋಧಿಸಿ, ಕಷ್ಟಪಟ್ಟದ್ದನ್ನು ಟ್ರಂಪ್ ಕಾರ್ಡ್ ಆಗಿ ಬಳಸುವುದನ್ನು ಖಂಡಿಸಿದ್ದಾರೆ. ಕಲಿಯುವ ಮನಸ್ಸಿನ ಬಡತನವೇ ಮುಖ್ಯ ಎಂಬ ಅವರ ಮಾತನ್ನು ಉಪೇಂದ್ರ ಕೂಡ ಬೆಂಬಲಿಸಿದ್ದಾರೆ.

ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ

ಬಿಡುಗಡೆಗೆ ಸಜ್ಜಾಗಿರುವ ‘45’ ಚಿತ್ರದ ಕಾರ್ಯಕ್ರಮದಲ್ಲಿ ಪ್ರಮೋದ್ ಶೆಟ್ಟಿ ಅವರು ಶೆಟ್ಟಿ ಗ್ಯಾಂಗ್ ಬಿರುಕಿನ ಬಗ್ಗೆ ಮೌನ ಮುರಿದರು. ‘ಶಿವಣ್ಣ, ಉಪೇಂದ್ರ ಅವರ ಬಗ್ಗೆ ಮಾತನಾಡಿದ ಬಳಿಕ ನಾನು ರಾಜ್ ಬಿ. ಶೆಟ್ಟಿ ಬಗ್ಗೆ ಮಾತನಾಡಲೇಬೇಕು’ ಎನ್ನುವ ಮೂಲಕ ಅವರು ಮಾತು ಶುರು ಮಾಡಿದರು. ವಿಡಿಯೋ ನೋಡಿ..