Raj B Shetty
ರಾಜ್ ಬಿ. ಶೆಟ್ಟಿ ಅವರು ಕನ್ನಡದ ಖ್ಯಾತ ನಟ, ನಿರ್ಮಾಪಕ, ಸಂಭಾಷಣಾಕಾರ, ಚಿತ್ರಕಥೆ ಬರಹಗಾರ ಹಾಗೂ ನಿರ್ದೇಶಕ. ಹೀರೋ ಎಂದರೆ ಕಟ್ಟುಮಸ್ತಾದ ದೇಹ ಹೊಂದಿರಬೇಕು, ತಲೆಯ ತುಂಬ ಕೇಶ ರಾಶಿ ಇರಬೇಕು ಎಂಬ ಕಲ್ಪನೆಗೆ ಅವರು ವಿರುದ್ಧವಾಗಿದ್ದಾರೆ. ಆದರೂ ಅವರಿಗೆ ಸಿಕ್ಕ ಜನಪ್ರಿಯತೆ ಕಡಿಮೆ ಏನಿಲ್ಲ. ಅವರು ‘ಫೈವ್ ಲೆಟರ್ಸ್’ ಹೆಸರಿನ ಶಾರ್ಟ್ ಫಿಲ್ಮ್ ನಿರ್ದೇಶನ ಮಾಡಿದರು. 2017ರಲ್ಲಿ ‘ಒಂದು ಮೊಟ್ಟೆಯ ಕಥೆ’ ಹೆಸರಿನ ಸಿನಿಮಾ ಮಾಡಿ ಗಮನ ಸೆಳೆದರು. ಈ ಸಿನಿಮಾ ಸೂಪರ್ ಹಿಟ್ ಆಯಿತು. ಆ ಬಳಿಕ ರಾಜ್ ಹಿಂದಿರುಗಿ ನೋಡಲೇ ಇಲ್ಲ. 2018ರ ‘ಅಮ್ಮಚ್ಚಿ ಎಂಬ ನೆನಪು’ ಚಿತ್ರದಲ್ಲಿ ರಾಜ್ ನಟಿಸಿದರು. ‘ಗುಬ್ಬಿ ಮೇಲೆ ಬ್ರಹ್ಮಾಸ್ತ್ರ’, ‘ಮಾಯಾಬಜಾರ್ 2016’ ಮೊದಲಾದ ಚಿತ್ರಗಳಲ್ಲಿ ನಟಿಸಿದರು. ‘ಒಂದು ಮೊಟ್ಟೆಯ ಕಥೆ’ ಜೊತೆಗೆ ‘ಗರುಡ ಗಮನ ವೃಷಭ ವಾಹನ’, ‘ಸ್ವಾತಿ ಮುತ್ತಿನ ಮಳೆಹನಿಯೇ’ ಚಿತ್ರ ನಿರ್ದೇಶನ ಮಾಡಿದ್ದಾರೆ. ಅವರು ಯುವ ಪ್ರತಿಭೆಗಳನ್ನು ಪ್ರೋತ್ಸಾಹಿಸಿ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಅವರ ನಿರ್ಮಾಣದ ‘ಸು ಫ್ರಮ್ ಸೋ’ ಸಿನಿಮಾ ಸೂಪರ್ ಹಿಟ್ ಆಗಿದ್ದು, 100 ಕೋಟಿ ರೂಪಾಯಿ ಕ್ಲಬ್ ಸೇರಿದೆ.
ಇನ್ನೂ ಹೆಚ್ಚು ಓದಿಗಲ್ಫ್ ರಾಷ್ಟ್ರಗಳಿಗೂ ಲಗ್ಗೆ ಇಡಲು ಸಜ್ಜಾದ ‘ಕರಾವಳಿ; ಆರು ದಿನಗಳ ಗಳಿಕೆ ಎಷ್ಟು?
ಗುರುದತ್ ಗಾಣಿಗ ನಿರ್ದೇಶನದ, ಪ್ರಜ್ವಲ್ ದೇವರಾಜ್ ಹಾಗೂ ರಾಜ್ ಬಿ ಶೆಟ್ಟಿ ನಟನೆಯ 'ಕರಾವಳಿ' ಸಿನಿಮಾ ವಿಶ್ವಾದ್ಯಂತ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಕಂಬಳದ ಅದ್ಭುತ ಲೋಕಕ್ಕೆ ಮನಸೋತ ಸಿನಿಪ್ರಿಯರು ಚಿತ್ರಕ್ಕೆ ಭರಪೂರ ಪ್ರಶಂಸೆ ವ್ಯಕ್ತಪಡಿಸುತ್ತಿದ್ದು, ಬಿಡುಗಡೆಯಾದ ಒಂದೇ ವಾರದಲ್ಲಿ ಚಿತ್ರ ಗಲ್ಫ್ ರಾಷ್ಟ್ರಗಳಿಗೆ ಲಗ್ಗೆ ಇಡುತ್ತಿದೆ.
- Rajesh Duggumane
- Updated on: Jul 30, 2026
- 9:01 am
ಭಾನುವಾರ ಭರ್ಜರಿ ಗಳಿಕೆ ಮಾಡಿದ ‘ಕರಾವಳಿ’ ಸಿನಿಮಾ; ಒಟ್ಟೂ ಕಲೆಕ್ಷನ್ ಎಷ್ಟು?
Karavali Movie Box Office Collection: ವಿವಾದಗಳ ನಡುವೆಯೂ ತೆರೆಕಂಡ ಪ್ರಜ್ವಲ್ ದೇವರಾಜ್ ಹಾಗೂ ರಾಜ್ ಬಿ. ಶೆಟ್ಟಿ ಅಭಿನಯದ 'ಕರಾವಳಿ' ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಧೂಳೆಬ್ಬಿಸುತ್ತಿದೆ. ಪಾಸಿಟಿವ್ ವಿಮರ್ಶೆಗಳೊಂದಿಗೆ ವೀಕೆಂಡ್ನಲ್ಲಿ ಭರ್ಜರಿ ಕಲೆಕ್ಷನ್ ಮಾಡಿರುವ ಚಿತ್ರದ ಒಟ್ಟು ಗಳಿಕೆ ಈಗ 4 ಕೋಟಿ ರೂಪಾಯಿ ಸಮೀಪಿಸಿದೆ.
- Rajesh Duggumane
- Updated on: Jul 27, 2026
- 7:31 am
ರಾಜ್ ಬಿ. ಶೆಟ್ಟಿ ಹೋದಲ್ಲೆಲ್ಲ ‘ಕರಾವಳಿ’ ಸಿನಿಮಾಗೆ ಭರ್ಜರಿ ಪ್ರತಿಕ್ರಿಯೆ; ವಿಡಿಯೋ ನೋಡಿ
‘ಕರಾವಳಿ’ ಸಿನಿಮಾದಲ್ಲಿ ರಾಜ್ ಬಿ. ಶೆಟ್ಟಿ ಅವರು ಅಭಿನಯಿಸಿದ್ದಾರೆ. ಇತ್ತೀಚೆಗೆ ಬಿಡುಗಡೆ ಆಗಿರುವ ಈ ಸಿನಿಮಾಗೆ ಜನರಿಂದ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಹಲವು ಚಿತ್ರಮಂದಿರಗಳಿಗೆ ಚಿತ್ರತಂಡ ಭೇಟಿ ನೀಡುತ್ತಿದೆ. ರಾಜ್ ಬಿ. ಶೆಟ್ಟಿ ಅವರು ಹೋದಲ್ಲೆಲ್ಲ ಅಭಿಮಾನಿಗಳಿಂದ ಸಖತ್ ರೆಸ್ಪಾನ್ಸ್ ಸಿಗುತ್ತಿದೆ.
- Madan Kumar
- Updated on: Jul 26, 2026
- 2:09 pm
‘ಕರಾವಳಿ’ ಸಿನಿಮಾ ನೋಡಿ ಎಮೋಷನಲ್ ಪ್ರತಿಕ್ರಿಯೆ ನೀಡಿದ ಪ್ರೇಕ್ಷಕರು
ಪ್ರಜ್ವಲ್ ದೇವರಾಜ್, ರಾಜ್ ಬಿ. ಶೆಟ್ಟಿ, ಮಿತ್ರ ಮುಂತಾದವರು ನಟಿಸಿರುವ ‘ಕರಾವಳಿ’ ಸಿನಿಮಾ ಬಿಡುಗಡೆ ಆಗಿದೆ. ಈ ಸಿನಿಮಾಗೆ ಗುರುದತ್ ಗಾಣಿಗ ಅವರು ನಿರ್ದೇಶನ ಮಾಡಿದ್ದಾರೆ. ಕಂಬಳ ಕುರಿತಾದ ಕಥೆ ಈ ಸಿನಿಮಾದಲ್ಲಿ ಇದೆ. ಚಿತ್ರವನ್ನು ನೋಡಿದ ಪ್ರೇಕ್ಷಕರು ಎಮೋಷನಲ್ ಆಗಿ ಪ್ರತಿಕ್ರಿಯೆ ನೀಡಿದ್ದಾರೆ.
- Madan Kumar
- Updated on: Jul 24, 2026
- 10:35 pm
Karavali Movie Review: ಕಂಬಳದ ಓಟದ ಮಧ್ಯೆ ಸೇಡಿನ ಸುಳಿ; ಹೀಗಿದೆ ‘ಕರಾವಳಿ’
ರಿಲೀಸ್ಗೂ ಮೊದಲೇ ಸಾಕಷ್ಟು ವಿವಾದಗಳೊಂದಿಗೆ ‘ಕರಾವಳಿ’ ಸುದ್ದಿ ಆಯಿತು. ಇದು ಸಿನಿಮಾಗೆ ಸಹಕಾರಿ ಆಗಲಿದೆ ಎಂಬುದು ಕೆಲವರ ವಾದ. ಇಷ್ಟೆಲ್ಲ ಸುದ್ದಿ ಆದ ‘ಕರಾವಳಿ’ ಸಿನಿಮಾ ಹೇಗಿದೆ? ಈ ಚಿತ್ರದಲ್ಲಿ ಪ್ರಜ್ವಲ್ ಪಾಲೆಷ್ಟು? ರಾಜ್ ಬಿ ಶೆಟ್ಟಿಯ ಪಾಲೆಷ್ಟು? ಆ ಬಗ್ಗೆ ಇಲ್ಲಿದೆ ವಿವರ.
- Rajesh Duggumane
- Updated on: Jul 24, 2026
- 10:55 am
ಪ್ರಜ್ವಲ್ ದೇವರಾಜ್ ವಾಯ್ಸ್ ಇಲ್ಲದೇ ಬಿಡುಗಡೆ ಆದ ‘ಕರಾವಳಿ’ ಟ್ರೇಲರ್ ಹೇಗಿದೆ ನೋಡಿ..
ಪ್ರಜ್ವಲ್ ದೇವರಾಜ್ ನಟನೆಯ ‘ಕರಾವಳಿ’ ಚಿತ್ರವು ವಿವಾದದ ಮೂಲಕ ಸದ್ದು ಮಾಡುತ್ತಿದೆ. ಟ್ರೇಲರ್ ಬಿಡುಗಡೆ ಆದ ಬೆನ್ನಲ್ಲೇ ಅಭಿಮಾನಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಟ್ರೇಲರ್ನಲ್ಲಿ ಪ್ರಜ್ವಲ್ ದೇವರಾಜ್ ಅವರ ಧ್ವನಿ ಇಲ್ಲ ಎಂಬುದು ಅಭಿಮಾನಿಗಳಿಗೆ ಬೇಸರ ತರಿಸಿದೆ. ಜುಲೈ 24ರಂದು ಬಿಡುಗಡೆ ಆಗಲಿರುವ ಈ ಸಿನಿಮಾಗೆ ಗುರುದತ್ ಗಾಣಿಗ ನಿರ್ದೇಶನ ಮಾಡಿದ್ದಾರೆ.
- Madan Kumar
- Updated on: Jul 7, 2026
- 8:07 pm
ಇದೇ ಕಾರಣಕ್ಕೆ ಕನ್ನಡ ಚಿತ್ರರಂಗ ಉದ್ದಾರ ಆಗಲ್ಲ: ‘ಕರಾವಳಿ’ ವಿವಾದಕ್ಕೆ ರಾಜ್ ಬಿ. ಶೆಟ್ಟಿ ಪ್ರತಿಕ್ರಿಯೆ
‘ಕರಾವಳಿ’ ಸಿನಿಮಾದಲ್ಲಿ ಪ್ರಜ್ವಲ್ ದೇವರಾಜ್, ರಾಜ್ ಬಿ. ಶೆಟ್ಟಿ ಮುಂತಾದವರು ನಟಿಸಿದ್ದಾರೆ. ಚಿತ್ರತಂಡದ ಜೊತೆ ಪ್ರಜ್ವಲ್ ಅವರಿಗೆ ಅಸಮಾಧಾನ ಇದೆ ಎಂಬುದು ಗೊತ್ತಾಗಿದೆ. ಟ್ರೇಲರ್ ಪ್ರೀಮಿಯರ್ ವೇಳೆ ಅವರ ಅಭಿಮಾನಿಗಳು ಬಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆ ಬಗ್ಗೆ ರಾಜ್ ಬಿ. ಶೆಟ್ಟಿ ಪ್ರತಿಕ್ರಿಯಿಸಿದ್ದಾರೆ.
- Madan Kumar
- Updated on: Jul 7, 2026
- 5:39 pm
ರಾಜ್ ಬಿ. ಶೆಟ್ಟಿ ನಟನೆಯ ಬಾಲಿವುಡ್ ಸಿನಿಮಾ ಮಹಿಳಾ ವಿರೋಧಿ ಚಿತ್ರ ಅಲ್ಲ; ಸಿಕ್ತು ಸ್ಪಷ್ಟನೆ
ಜೂನ್ 5ರಂದು ವಿಶ್ವದಾದ್ಯಂತ ‘ಬಂದರ್’ ಸಿನಿಮಾ ಬಿಡುಗಡೆ ಆಗಲಿದೆ. ಈ ಸಿನಿಮಾದಲ್ಲಿ ಬಾಬಿ ಡಿಯೋಲ್ ಅವರು ಪ್ರಮುಖ ಪಾತ್ರ ಮಾಡಿದ್ದಾರೆ. ರಾಜ್ ಬಿ. ಶೆಟ್ಟಿ ಕೂಡ ಪಾತ್ರವರ್ಗದಲ್ಲಿ ಇದ್ದಾರೆ. ರಾಜ್ ಬಿ. ಶೆಟ್ಟಿ, ನಟೇಶ್ ಹೆಗಡೆ ಕಾಣಿಸಿಕೊಂಡಿರುವ ಹಾಡು ಈಗಾಗಲೇ ವೈರಲ್ ಆಗಿದೆ.
- Madan Kumar
- Updated on: May 31, 2026
- 9:04 am
ರಾಜ್ ಬಿ. ಶೆಟ್ಟಿ ನಟನೆಯ ಹಿಂದಿ ಸಿನಿಮಾಗೆ ಸಿಕ್ತು ಸಲ್ಮಾನ್ ಖಾನ್ ಬೆಂಬಲ
‘ಬಂದರ್’ ಸಿನಿಮಾದ ಟೀಸರ್ ಬಿಡುಗಡೆ ಆಗಿದ್ದು, ಸಲ್ಮಾನ್ ಖಾನ್ ಅವರು ಶೇರ್ ಮಾಡಿಕೊಂಡಿದ್ದಾರೆ. ಜೂನ್ 5ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಬಾಬಿ ಡಿಯೋಲ್, ರಾಜ್ ಬಿ. ಶೆಟ್ಟಿ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಖ್ಯಾತ ನಿರ್ದೇಶಕ ಅನುರಾಗ್ ಕಶ್ಯಪ್ ಅವರು ಆ್ಯಕ್ಷನ್-ಕಟ್ ಹೇಳಿದ್ದಾರೆ.
- Madan Kumar
- Updated on: May 10, 2026
- 7:24 am
ರಾಜ್ ಬಿ. ಶೆಟ್ಟಿಗೆ ಕೇಳಿ ರಿಷಬ್ ಶೆಟ್ಟಿ ಫೋನ್ ನಂಬರ್ ತಗೊಂಡೆ: ಟೊವಿನೋ ಥಾಮಸ್
ಮಲಯಾಳಂ ಚಿತ್ರರಂಗದ ಸ್ಟಾರ್ ನಟ ಟೊವಿನೋ ಥಾಮಸ್ ಅವರು ಬೆಂಗಳೂರಿಗೆ ಬಂದಿದ್ದಾರೆ. ತಮ್ಮ ಮುಂದಿನ ಸಿನಿಮಾದ ಪ್ರಚಾರದ ಸಲುವಾಗಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಟಿವಿ9 ಜೊತೆ ಮಾತನಾಡಿದ್ದಾರೆ. ಕನ್ನಡ ಚಿತ್ರರಂಗದ ಜೊತೆ ತಮಗೆ ಇರುವ ನಂಟಿನ ಬಗ್ಗೆ ಅವರು ಮಾತನಾಡಿದ್ದಾರೆ. ವಿಡಿಯೋ ಇಲ್ಲಿದೆ..
- Mangala RR
- Updated on: Apr 7, 2026
- 10:45 pm
25 ದಿನ ಪೂರೈಸಿ ಸೂಪರ್ ಹಿಟ್ ಎನಿಸಿಕೊಂಡ ‘ರಕ್ಕಸಪುರದೋಳ್’ ಸಿನಿಮಾ
ರಾಜ್ ಬಿ. ಶೆಟ್ಟಿ, ಅನಿರುದ್ಧ್ ಭಟ್ ನಟನೆಯ ‘ರಕ್ಕಸಪುರದೋಳ್’ ಸಿನಿಮಾ ಸೂಪರ್ ಹಿಟ್ ಆಗಿದೆ. ಹಲವು ಸಿನಿಮಾಗಳ ಪೈಪೋಟಿಯ ನಡುವೆಯೂ ಕನ್ನಡದ ಈ ಸಿನಿಮಾ 25 ದಿನ ಪೂರೈಸಿದೆ. 50ನೇ ದಿನದತ್ತ ಕಾಲಿಡುತ್ತಿದೆ. ಇದರಿಂದ ಚಿತ್ರತಂಡಕ್ಕೆ ಖುಷಿ ಆಗಿದೆ. ಸದ್ಯದಲ್ಲೇ ಸಕ್ಸಸ್ ಮೀಟ್ ನಡೆಯಲಿದೆ.
- Madan Kumar
- Updated on: Mar 10, 2026
- 4:55 pm
Rakkasapuradhol Review: ರಾಜ್ ಬಿ. ಶೆಟ್ಟಿ ಅಭಿಮಾನಿಗಳಿಗೆ ‘ರಕ್ಕಸಪುರದೋಳ್’ ಮನರಂಜನೆಯ ಪ್ಯಾಕೇಜ್
ಯಾವ ಪಾತ್ರ ಕೊಟ್ಟರೂ ಅದನ್ನು ಸಮರ್ಥವಾಗಿ ನಿಭಾಯಿಸುವ ನಟ ರಾಜ್ ಬಿ. ಶೆಟ್ಟಿ ಅವರು ಈ ಬಾರಿ ಪೊಲೀಸ್ ಪಾತ್ರದಲ್ಲಿ ಪ್ರೇಕ್ಷಕರ ಎದುರು ಬಂದಿದ್ದಾರೆ. ‘ರಕ್ಕಸಪುರದೋಳ್’ ಸಿನಿಮಾದ ಮೂಲಕ ಅವರು ಭರ್ಜರಿ ಮನರಂಜನೆ ನೀಡಿದ್ದಾರೆ. ರವಿ ಸಾರಂಗ ನಿರ್ದೇಶನದ ಈ ಸಿನಿಮಾ ಹೇಗಿದೆ ತಿಳಿಯಲು ವಿಮರ್ಶೆ ಓದಿ..
- Madan Kumar
- Updated on: Feb 6, 2026
- 3:18 pm